ಬೆಂಗಳೂರು:- ರಾಜ್ಯದಲ್ಲಿ ನಿನ್ನೆ 298 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಮೂಲಕ ಕೊರೋನಾ ಅಬ್ಬರ ಮುಂದುವರೆದಿದೆ. ಅಲ್ಲದೆ ನಾಲ್ಕು ಮಂದಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ. ಜ.1ರಂದು 296 ಮಂದಿಗೆ ಸೋಂಕು ದೃಢಪಟ್ಟಿದ್ದು, ಈ ಅಲೆಯ ದಾಖಲೆ. ಇದೀಗ ಗುರುವಾರ 298 ಮಂದಿಗೆ ಸೋಂಕು ದೃಢಪಟ್ಟಿದೆ. ಇನ್ನು ಬರೋಬ್ಬರಿ ನಾಲ್ಕು ಮಂದಿ ಸಾವನ್ನಪ್ಪುವ ಮೂಲಕ ಪ್ರಸಕ್ತ ಅಲೆಯ ಸಾವು 19ಕ್ಕೆ ಏರಿಕೆಯಾಗಿದೆ. ಮೈಸೂರಿನ 60 ವರ್ಷದ ಮಹಿಳೆ ಡಿ.28ರಂದು ಜ್ವರ ಹಾಗೂ ಕೆಮ್ಮು ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದು, ಜ.3ರಂದು ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 82 ವರ್ಷದ ವ್ಯಕ್ತಿ ಐಎಲ್ಐ, ಜ್ವರ, ಕೆಮ್ಮು ಸಮಸ್ಯೆಯಿಂದ ಡಿ.28ರಂದು ದಾಖಲಾಗಿದ್ದು, ಡಿ.30ರಂದು ಸಾವನ್ನಪ್ಪಿದ್ದಾರೆ. ಮತ್ತೊಬ್ಬ ಬೆಂಗಳೂರು ನಿವಾಸಿ 64 ವರ್ಷದ ವ್ಯಕ್ತಿ ಸಾರಿ ಸಮಸ್ಯೆಯಿಂದ ಡಿ.29ರಂದು ದಾಖಲಾಗಿ ಜ.1ರಂದು ಸಾವನ್ನಪ್ಪಿದ್ದು, ಧಾರವಾಡದಲ್ಲಿ 63 ವರ್ಷದ ವ್ಯಕ್ತಿ ಐಎಲ್ಐ ಲಕ್ಷಣಗಳೊಂದಿಗೆ ಡಿ.30ರಂದು ದಾಖಲಾಗಿ ಜ.2ರಂದು ಸಾವನ್ನಪ್ಪಿದ್ದಾರೆ. ಗುರುವಾರದ ವೇಳೆಗೆ ಕಳೆದ 24 ಗಂಟೆಗಳಲ್ಲಿ 7,791 ಮಂದಿಗೆ ಸೋಂಕು ಪರೀಕ್ಷೆ…
Author: AIN Author
ನವದೆಹಲಿ: ಗುರುಗ್ರಾಮ್ನ (Gurugram) ಹೋಟೆಲ್ವೊಂದರಲ್ಲಿ (Hotel) 27 ವರ್ಷದ ಮಾಜಿ ಮಾಡೆಲ್ (Ex Model) ಒಬ್ಬಳನ್ನು ಕೊಲೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಹತ್ಯೆಯಾದಾಕೆಯನ್ನು ದಿವ್ಯಾ ಪಹುಜಾ (Divya Pahuja) ಎಂದು ಗುರುತಿಸಲಾಗಿದ್ದು, ಕೊಲೆ ನಡೆದ ಹೋಟೆಲ್ನ ಮಾಲೀಕ ಅಭಿಜಿತ್ ಸಿಂಗ್ ಎಂಬಾತ ಆಕೆಯನ್ನು ಕೊಲೆಗೈದಿದ್ದಾನೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಶಂಕಿತ ಆರೋಪಿ ಅಭಿಜಿತ್ ಸೇರಿದಂತೆ ಪ್ರಕಾಶ್ ಮತ್ತು ಇಂದ್ರಜ್ ಎಂಬವರನ್ನು ಗುರುಗ್ರಾಮ್ ಕ್ರೈಂ ಬ್ರಾಂಚ್ ಬಂಧಿಸಿದೆ. ಪ್ರಕಾಶ್ ಮತ್ತು ಇಂದ್ರಜ್ ಇಬ್ಬರೂ ಅಭಿಜಿತ್ನ ಹೋಟೆಲ್ನಲ್ಲಿ ಕೆಲಸ ಮಾಡುತ್ತಿದ್ದರು ಎಂದು ವರದಿಗಳು ತಿಳಿಸಿವೆ. ಹೋಟೆಲ್ ಮಾಲೀಕ ಅಭಿಜಿತ್ ತನ್ನ ಸಹಚರರೊಂದಿಗೆ ಸೇರಿ ದಿವ್ಯಾಳನ್ನು ಕೊಲೆ ಮಾಡಿ ನಂತರ ಆಕೆಯ ಶವವನ್ನು ವಿಲೇವಾರಿ ಮಾಡಲು ತನ್ನ ಸಹಚರರಿಗೆ 10 ಲಕ್ಷ ರೂ. ನೀಡಿದ್ದಾನೆ ಎನ್ನಲಾಗಿದೆ. ಘಟನೆ ಕುರಿತಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಅಭಿಜಿತ್ ಸೇರಿದಂತೆ ಕೊಲೆ ಆರೋಪಿಗಳು ನೀಲಿ ಬಣ್ಣದ ಬಿಎಂಡಬ್ಲ್ಯು ಕಾರಿನಲ್ಲಿ ದಿವ್ಯಾಳ ಶವವನ್ನು ತೆಗೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. https://ainlivenews.com/bharjari-samag-release-of-nuru-rupee-mix-bheema/…
ಹಾಸಿಗೆಯಲ್ಲಿ ಲೈಂಗಿಕ ಪರಾಕಾಷ್ಠೆಯ ನಂತರವೂ, ನಿಮ್ಮ ನಿಕಟ ಸಂಬಂಧವು ಆರೋಗ್ಯಕರವಾಗಿರಲು ಕೆಲವು ವಿಷಯಗಳ ಬಗ್ಗೆ ಕಾಳಜಿ ವಹಿಸಬೇಕು ಎಂದು ತಿಳಿದಿದೆಯೇ? ಹೌದು, ಲೈಂಗಿಕ ಕ್ರಿಯೆ ನಡೆಸಿದ ನಂತರ ಕೆಲವೊಂದು ವಿಷಯಗಳ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಇದರಿಂದ ಗುಪ್ತಾಂಗಗಳು ಆರೋಗ್ಯಕರ ಮತ್ತು ಸ್ವಚ್ಛವಾಗಿರುತ್ತದೆ ಮತ್ತು ಯಾವುದೇ ಸೋಂಕು ಇರುವುದಿಲ್ಲ. ಕೈಗಳನ್ನು ತೊಳೆಯಿರಿ: ಲೈಂಗಿಕ ಕ್ರಿಯೆಯ ಸಮಯದಲ್ಲಿ ಸೂಕ್ಷ್ಮ ಭಾಗಗಳನ್ನು ಸಹ ಕೈಯಲ್ಲಿ ಮುಟ್ಟಿರುವ ಸಾಧ್ಯತೆ ಇದೆ. ಆದ್ದರಿಂದ, ಬ್ಯಾಕ್ಟೀರಿಯಾ ಹರಡುವುದನ್ನು ತಡೆಯಲು ಕೈಗಳನ್ನು ಸ್ವಚ್ಛಗೊಳಿಸುವುದು ಮುಖ್ಯ. ಹಾಗೆ ಮಾಡದಿರುವುದು ಅನೇಕ ಬ್ಯಾಕ್ಟೀರಿಯಾದ ಸೋಂಕುಗಳಿಗೆ ಕಾರಣವಾಗಬಹುದು. ಇದು ಒಬ್ಬರಿಂದ ಇನ್ನೊಬ್ಬರಿಗೆ ಹರಡುವ ಸಾಧ್ಯತೆ ಇದೆ. ಮೂತ್ರ ವಿಸರ್ಜನೆ ಮಾಡದೇ ಇರೋದು : ಲೈಂಗಿಕ ಕ್ರಿಯೆ ನಡೆಸಿದ ನಂತರ ಮೂತ್ರ ವಿಸರ್ಜನೆಯನ್ನು ನಿಲ್ಲಿಸುವ ತಪ್ಪು ಮಾಡಬೇಡಿ. ಸಂಬಂಧ ಹೊಂದಿದ್ದ ನಂತರ, ನೀವು ವಿಶೇಷವಾಗಿ ಮೂತ್ರ ವಿಸರ್ಜನೆಗೆ ಹೋಗಬೇಕು. ಇದು ಮೂತ್ರದ ಮೂಲಕ ಬ್ಯಾಕ್ಟೀರಿಯಾ ಮತ್ತು ಕೀಟಾಣುಗಳನ್ನು ಹೊರಹಾಕುತ್ತದೆ ಮತ್ತು ಯುಟಿಐ ಅಪಾಯವನ್ನು ಉಂಟುಮಾಡುವುದಿಲ್ಲ.…
ಬೆಂಗಳೂರು : ಮಕ್ಕಳಿಗೆ ವಿದ್ಯೆ ಕಲಿಯೋಕೆ ಕಷ್ಟ.. ಹೆತ್ತವರಿಗೆ ಮಕ್ಕಳು ಚನ್ನಾಗಿ ಓದಬೇಕು ಅನ್ನೋ ಇಷ್ಟ.. ಮನೆಯಲ್ಲಿ ಚನ್ನಾಗಿ ಓದಿಕೋ ಅಂದಿದ್ದೇ ತಪ್ಪಾಗಿಹೋಗಿತ್ತು.. ಅಮ್ಮಾ ಕರೆ ಮಾಡಿ ಕಾಲೇಜ್ ಗೆ ಹೋಗಲ್ಲ.. ತಪ್ಪು ಮಾಡಲ್ಲ.. ಸಾರಿ ಎಂದು ಹೇಳಿದನು ಆತ್ಮಹತ್ಯೆಯ ದಾರಿ ಹಿಡಿದುಬಿಟ್ಟ.. ಇವನ ಹೆಸರು ವಿಶು ಉತ್ತಪ್ಪ.. ವಯಸ್ಸು ಕೇವಲ 19 ವರ್ಷ.. ಮೂಲತಃ ಕೊಡಗು ಜಿಲ್ಲೆಯವನು.. ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಇ ವ್ಯಾಸಂಗ ಮಾಡ್ತಿದ್ದ.. ಹೆತ್ತವರ ಜೊತೆ ನೆಮ್ಮದಿಯಾಗಿದ್ದವನಿಗೆ ಓದಿನಲ್ಲಿ ಆಸಕ್ತಿ ಕಡಿಮೆಯಾಗಿತ್ತು. ಇದರಿಂದಾಗಿ ತಾಯಿ ಮಗನಿಗೆ ಓದುವಂತೆ ಬುದ್ದಿ ಹೇಳಿದ್ದರು.. ಅಷ್ಟೇ ಆತನ ಮನಸ್ಸಿನಲ್ಲಿ ಅದ್ಯಾವ ವಿಚಾರ ಕಾಡಿತ್ತೋ ನಿನ್ನೆ ಡಬಲ್ ಬ್ಯಾರಲ್ ಗನ್ ನಲ್ಲಿ ಹೃದಯದ ಸ್ವಲ್ಪ ಮೇಲ್ಭಾಗಕ್ಕೆ ಶೂಟ್ ಮಾಡಿಕೊಂಡಿದ್ದಾನೆ.. ವಿಶು ಉತ್ತಪ್ಪ ಮನೆಯಲ್ಲೇ ಮಲಗಿಕೊಂಡಿದ್ದ..ಈತನ ತಂದೆ ರವಿ ತಮ್ಮಯ್ಯ ಮತ್ತು ತಾಯಿ ಹೊರಗೆ ಹೋಗೋಣ ಬಾ ಎಂದು ಕರೆದಿದ್ದಾರೆ. ಆದರೆ ವಿಶು ತಾನು ಬರೋದಿಲ್ಲ ಎಂದು ಹೇಳಿದ್ದಾನೆ. ಆ ಬಳಿಕ…
ಟೆಹ್ರಾನ್: ಇರಾನ್ನಲ್ಲಿ ಅವಳಿ ಬಾಂಬ್ ಸ್ಫೋಟಗೊಂಡು 103 ಮಂದಿ ಸಾವನ್ನಪ್ಪಿ, 141 ಮಂದಿ ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ. ಇರಾನ್ನ ದಕ್ಷಿಣ ನಗರಿ ಕೆರ್ಮಾನ್ನಲ್ಲಿ ಕಮಾಂಡರ್ ಕಾಸ್ಸೇಮ್ ಸೋಲೈಮನಿ (Iranian general Qasem Soleimani) ಅವರ ಸ್ಮರಣೆಯ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ವೇಳೆ ದುರ್ಘಟನೆ ನಡೆದಿದ್ದು, ಭಾರೀ ಆತಂಕವನ್ನೂ ಸೃಷ್ಟಿ ಮಾಡಿದೆ. 2020ರಲ್ಲಿ ಅಮೆರಿಕಾವು ಬಾಗ್ದಾದ್ದ ವಿಮಾನ ನಿಲ್ದಾಣದ ಮೇಲೆ ಡ್ರೋಣ್ ದಾಳಿ (US drone strike in Iraq) ನಡೆಸಿತ್ತು. ಈ ದಾಳಿಯಲ್ಲಿ ಕಮಾಂಡರ್ ಕಾಸ್ಸೇಮ್ ಸೋಲೈಮನಿ ಹತರಾಗಿದ್ದರು. ಇವರ ಸ್ಮರಣಾರ್ಥ ಕಾರ್ಯಕ್ರಮವನ್ನು ಪ್ರತಿ ವರ್ಷ ಇರಾನ್ನಲ್ಲಿ ಆಯೋಜಿಸಲಾಗುತ್ತಿದೆ. ಕೆರ್ಮಾನ್ನಲ್ಲಿರುವ ಕಾಸ್ಸೇಮ್ ಸೋಲೈಮನಿ ಅವರ ಸ್ಮಾರಕದ ಬಳಿಯೇ ಈ ಕಾರ್ಯಕ್ರಮವನ್ನು ನಡೆಸಿಕೊಂಡು ಬರಲಾಗುತ್ತಿದೆ. https://ainlivenews.com/stomach-ache-immediately-after-eating-so-try-this-home-remedy/ ಈ ವರ್ಷದ ಕಾರ್ಯಕ್ರಮವನ್ನು ಇಆಯೋಜನೆ ಮಾಡಲಾಗಿದ್ದು, ಇದೇ ಸಂದರ್ಭ ಅವಳಿ ಬಾಂಬ್ ಸ್ಫೋಟ (Bomb Blast) ನಡೆದಿದೆ. ಘಟನೆಯ ಸಂದರ್ಭದಲ್ಲಿ ಅಪಾರ ಸಂಖ್ಯೆಯಲ್ಲಿ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ್ದರು. ಈ ವೇಳೆ ಮೊದಲು ಅನಿಲ ತುಂಬಿದ…
ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ IOCL ಅಧಿಕೃತ ಅಧಿಸೂಚನೆಯ ಮೂಲಕ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಭಾರತ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿ ಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 05-Jan-2024 ರಂದು ಅಥವಾ ಮೊದಲು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. IOCL ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (IOCL) ಹುದ್ದೆಗಳ ಸಂಖ್ಯೆ: 1603 ಉದ್ಯೋಗ ಸ್ಥಳ: ಭಾರತ ಹುದ್ದೆಯ ಹೆಸರು: ಅಪ್ರೆಂಟಿಸ್ ಸ್ಟೈಪೆಂಡ್: IOCL ಮಾನದಂಡಗಳ ಪ್ರಕಾರ ಕರ್ನಾಟಕದಲ್ಲಿ ಹುದ್ದೆಗಳು: 20 IOCL ನೇಮಕಾತಿ 2024 ಅರ್ಹತಾ ವಿವರಗಳು ಟ್ರೇಡ್ ಅಪ್ರೆಂಟಿಸ್ಗಳು: 10ನೇ ತರಗತಿ, 12ನೇ ತರಗತಿ, ಐಟಿಐ ತಂತ್ರಜ್ಞ ಅಪ್ರೆಂಟಿಸ್: ಡಿಪ್ಲೊಮಾ ಗ್ರಾಜುಯೇಟ್ ಅಪ್ರೆಂಟಿಸ್ಗಳು: B.A, B.Com, B.Sc, BBA ವಯಸ್ಸಿನ ಮಿತಿ: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು 30-ನವೆಂಬರ್-2023 ರಂತೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ…
ದಿಢೀರ್ ಎಂದು ಬದಲಾಗುತ್ತಿರುವ ವಾತಾವರಣದಿಂದ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಅದಕ್ಕೆ ನೀವು ಆರೋಗ್ಯ ಕೆಟ್ಟ ಮೇಲೆ ಚಿಕಿತ್ಸೆ ಪಡೆಯುವುದಕ್ಕಿಂತ, ಆರೋಗ್ಯ ಕೆಡದಂತೆ ನೋಡಿಕೊಳ್ಳುವುದು ತುಂಬಾ ಮುಖ್ಯ. ಅದಕ್ಕಾಗಿ ಇಂದು ನಿಮಗೆ ದೇಹವನ್ನು ಒಳಗಿನಿಂದ ಹೈಡ್ರೇಟ್ ಮಾಡುವ ಸೂಪರ್ ರೆಸಿಪಿಯನ್ನು ಹೇಳಿಕೊಡುತ್ತಿದ್ದೇವೆ. ಬೆಳಗ್ಗೆಯೇ ‘ತುಳಸಿ ಕಷಾಯ’ವನ್ನು ಮಾಡಿ ಕುಡಿದ್ರೆ ಇಡೀ ದಿನ ಎನರ್ಜಿಯಿಂದ ಇರಬಹುದು. ಬೇಕಾಗಿರುವ ಪದಾರ್ಥಗಳು: * ನೀರು – 2 ಕಪ್ * ತುಳಸಿ – 5 ರಿಂದ 4 ಎಲೆ * ಕರಿಮೆಣಸಿನ ಪುಡಿ – 1/2 ಟೀಸ್ಪೂನ್ * ಒಣ ಶುಂಠಿ ಪುಡಿ – 1/2 ಟೀಸ್ಪೂನ್ * ಸಕ್ಕರೆ – 1 ಟೀಸ್ಪೂನ್ ಮಾಡುವ ವಿಧಾನ: * ಮೊದಲು ಎಲ್ಲ ಪದಾರ್ಥಗಳನ್ನು ಸರಿಯಾಗಿ ತೆಗೆದುಕೊಳ್ಳಿ. * ಒಂದು ಪ್ಯಾನ್ಗೆ ನೀರು ಸೇರಿಸಿ, ತುಳಸಿ ಎಲೆಗಳನ್ನು ಹರಿದು ಹಾಕಿ ಕುದಿಸಿ. * ನೀರಿನ ಬಣ್ಣ ಬದಲಾದ ನಂತರ, ಕರಿಮೆಣಸಿನ ಪುಡಿ, ಶುಂಠಿ, ಸಕ್ಕರೆ ಸೇರಿಸಿ ಕೆಲವು ನಿಮಿಷ…
ಸೂರ್ಯೋದಯ: 06:51, ಸೂರ್ಯಾಸ್ತ : 05:51 ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾಸ ಮಾರ್ಗಶಿರ , ಕೃಷ್ಣ ಪಕ್ಷ, ದಕ್ಷಿಣಾಯನಮ್, ಹೇಮಂತ ಋತು, ರಾಹು ಕಾಲ: 10:30 ನಿಂದ 12:00 ತನಕ ಯಮಗಂಡ: 03:00 ನಿಂದ 04:30 ತನಕ ಗುಳಿಕ ಕಾಲ: 07:30 ನಿಂದ 09:00 ತನಕ ಅಮೃತಕಾಲ: ಮ.12:49 ನಿಂದ ಮ.2:34 ತನಕ ಅಭಿಜಿತ್ ಮುಹುರ್ತ: ಬೆ.11:59 ನಿಂದ ಮ.12:43 ತನಕ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು. Mob. 93534 88403 ಮೇಷ ರಾಶಿ: ಹೊಸ ಒಪ್ಪಂಧಿಗಳಿಗೆ ಅಂಗೀಕಾರ ಸಮಯ ಬಂದಿದೆ, ಉದ್ಯೋಗಿಗಳಿಗೆ ಸಂಬಳ ಅಧಿಕವಾಗುವ ಅಮೃತಗಳಿಗೆ ಬಂದಿದೆ, ಹಳೆ ಮನೆಯನ್ನು ಪುನರ್ಜೀವನಗೊಳಿಸುವ ಚಿಂತನೆ, ಹಣಕಾಸು ಸಂಸ್ಥೆಯಲ್ಲಿ ಅವ್ಯವಹಾರದ ಭೀತಿ, ಹೊಸ ವ್ಯಾಪಾರ ಪ್ರಾರಂಭ,ಟ್ರಾವೆಲ್ ಏಜೆನ್ಸಿ ಅವರಿಗೆ ಆದಾಯ ಹೆಚ್ಚಾಗಲಿದೆ, ಉದ್ಯೋಗದಲ್ಲಿ ಪ್ರೊಮೋಷನ್ ಜೊತೆ ವರ್ಗಾವಣೆ,…
ನೆಲಮಂಗಲ:- ಪತ್ರಕರ್ತನ ಮೇಲೆ ಹಲ್ಲೆ ನಡೆಸಿ ಪುಂಡ ಪೋಕರಿಗಳನ್ನು ಕೂಡಲೇ ಬಂಧಿಸುವಂತೆ ಆಗ್ರಹಿಸಿ ನೆಲಮಂಗಲದ ತಹಶೀಲ್ದಾರ್ ಗೆ ಮನವಿ ಸಲ್ಲಿಸಲಾಗಿದೆ. ಹೌದು,ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಸೋಲದೇವನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ಸೀಕ್ರೆಟ್ ಆಫ್ ಓಷನ್ ಹೋಟೆಲ್ ಬಳಿ ಹೊಸ ವರ್ಷಾಚರಣೆ ಸಂದರ್ಭದಲ್ಲಿ ಕೆಲವು ಪುಂಡು ಪೋಕರಿಗಳು ಮಧ್ಯದ ಅಮಲಿನಲ್ಲಿ ಗಲಾಟೆ ಮಾಡುತ್ತಿದ್ದರು. ಗಲಾಟೆಯ ಸುದ್ದಿ ತಿಳಿದು ವರದಿ ಮಾಡಲು ತೆರಳಿದ್ದ ಖಾಸಗಿ ವಾಹಿನಿಯ ವರದಿಗಾರನ ಮೇಲೆ ಹಲ್ಲೆ ಹಾಗೂ ಅವಾಚ್ಯ ಶಬ್ದಗಳಿಂದ ನಿಂದಿಸಿ ಕ್ಯಾಮರಾ ಕಸಿಯಲು ಮುಂದಾಗಿರುತ್ತಾರೆ. ಸ್ಥಳದಲ್ಲಿದ್ದ ಪೊಲೀಸರು ಯಾವುದೆ ರೀತಿಯ ಕ್ರಮವನ್ನು ಕೈಗೊಳ್ಳುವುದಿಲ್ಲ. ಪೋಲಿಸ್ ಠಾಣೆಗೆ ದೂರು ನೀಡಿ 3 ದಿನ ಆದರೂ ಇದುವರೆಗೂ ಪೊಲೀಸರು ಪುಂಡು ಪೋಕರಿಗಳ ವಿರುದ್ಧ ಯಾವುದೇ ರೀತಿಯ ಕ್ರಮವನ್ನು ಜರುಗಿಸಿರುವುದಿಲ್ಲ. ಇದನ್ನು ಖಂಡಿಸಿ, ಕೂಡಲೆ ಆರೋಪಿಗಳನ್ನು ಬಂಧಿಸಬೇಕೆಂದು ಆಗ್ರಹಿಸಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ನೆಲಮಂಗಲ ತಾಲೂಕು ಘಟಕದ ಅಧ್ಯಕ್ಷ ಗುರುಪ್ರಸಾದ್ ನೇತೃತ್ವದಲ್ಲಿ ಮುಖ್ಯಮಂತ್ರಿಗಳಿಗೆ ತಹಸೀಲ್ದಾರ್ ಮುಖಾಂತರ ಮನವಿ ಸಲ್ಲಿಸಲಾಗಿದೆ.
ದಕ್ಷಿಣ ಆಫ್ರಿಕಾ ವಿರುದ್ಧದ ಟೆಸ್ಟ್ ಸರಣಿಯ ಮೊದಲ ಪಂದ್ಯವನ್ನು ಭಾರತ ಸೋತಿತ್ತು. ಆಗ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಿಂದ 6ನೇ ಸ್ಥಾನಕ್ಕೆ ಕುಸಿದ್ದ ಭಾರತ, ಇದೀಗ ಅಗ್ರಸ್ಥಾನಕ್ಕೇರಿದೆ. ಭಾರತ ತಂಡ ಸದ್ಯ ಈ ಗೆಲುವಿನಿಂದಾಗಿ ಆಡಿದ ಮೂರು ಟೆಸ್ಟ್ಗಳಲ್ಲಿ ಒಂದು ಸೋಲು 2 ಗೆಲುವು ಮತ್ತು 1 ಡ್ರಾ ಸಾಧಿಸಿ ಶೇ. 54.16 ಗೆಲುವಿನ ಪ್ರತಿಶತದೊಂದಿಗ ಅಗ್ರಸ್ಥಾನ ಪಡೆದಿದೆ. ಶೇ. 50 ಗೆಲುವಿನ ಪ್ರತಿಶತ ಸಾಧಿಸಿರುವ ದಕ್ಷಿಣ ಆಫ್ರಿಕಾ ದ್ವಿತೀಯ ಸ್ಥಾನದಲ್ಲಿದೆ. ಮೊದಲ ಪಂದ್ಯದಲ್ಲಿ ನಿಗದಿತ ಅವಧಿಯೊಳಗೆ ಓವರ್ ಪೂರ್ಣಗೊಳಿಸಿದ ಕಾರಣಕ್ಕೆ ಭಾರತ ತಂಡಕ್ಕೆ ಐಸಿಸಿ ದಂಡ ವಿಧಿಸಿತ್ತು. ಈ ಪರಿಣಾಮ -2 ಫೆನಾಲ್ಟಿ ಅಂಕವೂ ಕೂಡ ಭಾರತಕ್ಕೆ ಸಿಕ್ಕಿದೆ. ನ್ಯೂಜಿಲ್ಯಾಂಡ್ ತಂಡ ಗೆಲುವಿನ ಶೇಕಡಾವಾರು 50 ರೊಂದಿಗೆ ಮೂರನೇ ಸ್ಥಾನಕ್ಕೇರಿದೆ. ಈ ಹಿಂದೆ ಮೂರನೇ ಸ್ಥಾನದಲ್ಲಿದ್ದ ಆಸ್ಟ್ರೇಲಿಯಾ ಶೇಕಡಾ 50 ರೊಂದಿಗೆ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ. ಪಾಕಿಸ್ತಾನ ವಿರುದ್ಧ ನಡೆಯುತ್ತಿರುವ ಅಂತಿಮ ಟೆಸ್ಟ್ ಪಂದ್ಯದಲ್ಲಿ ಗೆದ್ದರೆ ಮತ್ತೆ ಮೇಲೇರುವ…