Author: AIN Author

ಮೌತ್ ವಾಶ್ ಬಳಸುವ ಸರಿಯಾದ ವಿಧಾನ ಯಾವುದು? ನಿಮ್ಮ ಬಾಯಿಯ ಆರೋಗ್ಯವನ್ನು ನಿಯಂತ್ರಣದಲ್ಲಿಡುವ ಈ ಹಂತಗಳ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ. ಬಾಯಿಯ ಆರೋಗ್ಯದ ವಿಷಯಕ್ಕೆ ಬಂದಾಗ ಮೌತ್ ವಾಶ್ ಬಾಯಿ ಮುಕ್ಕಳಿಸುವುದು ತುಂಬಾ ಮುಖ್ಯವಾಗುತ್ತದೆ. ನಿಮ್ಮ ಹಲ್ಲುಗಳನ್ನು ಉಜ್ಜುವುದು ಅಥವಾ ಫ್ಲೋಸಿಂಗ್ ಮಾಡುವುದು ಅಥವಾ ಬಾಯಿಯ ನೈರ್ಮಲ್ಯಕ್ಕಾಗಿ ಮೌತ್ ವಾಶ್ ಬಳಸುವುದು ಒಳ್ಳೆಯದು. ಅಲ್ಲದೆ ಇದು ಬಾಯಿಯ ದುರ್ವಾಸನೆಯನ್ನು ಶಮನಗೊಳಿಸಲು ಅಥವಾ ನಿಮ್ಮ ಬಾಯಿಯಲ್ಲಿರುವ ಹಾನಿಕಾರಕ ಬ್ಯಾಕ್ಟೀರಿಯಾಗಳನ್ನು ಕೊಲ್ಲಲು ಪರಿಣಾಮಕಾರಿ ಮಾರ್ಗವಾಗಿದೆ. ಅದನ್ನು ಸರಿಯಾದ ರೀತಿಯಲ್ಲಿ ಹೇಗೆ ಬಳಸಬೇಕೆಂದು ನಿಮಗೆ ತಿಳಿದಿದ್ದರೆ ಮಾತ್ರ ಅದು ಸರಿಯಾಗಿ ಕಾರ್ಯನಿರ್ವಹಿಸುತ್ತದೆ. ಮೌತ್ ವಾಶ್ ಬಳಸುವ ಸರಿಯಾದ ವಿಧಾನ ಯಾವುದು? ನಿಮ್ಮ ಬಾಯಿಯ ಆರೋಗ್ಯವನ್ನು ನಿಯಂತ್ರಣದಲ್ಲಿಡುವ ಈ ಹಂತಗಳ ಬಗೆಗಿನ ಸಂಪೂರ್ಣ ಮಾಹಿತಿ ಇಲ್ಲಿದೆ. ನೀಲಿ, ಹಸಿರು ಮತ್ತು ಗುಲಾಬಿ ಬಣ್ಣಗಳಲ್ಲಿ ಬರುವ ಮೌತ್ ವಾಶ್ ದ್ರವ ರೂಪದಲ್ಲಿರುವ ಉತ್ಪನ್ನವಾಗಿದೆ. ಬಾಯಿಯ ದುರ್ವಾಸನೆ ಹೋಗಲಾಡಿಸುವುದಕ್ಕಾಗಿ ಮತ್ತು ದವಡೆಯ ಆರೋಗ್ಯಕ್ಕಾಗಿ ಇದನ್ನು ಬಳಸಲಾಗುತ್ತದೆ. ಇದು ಸಾಮಾನ್ಯವಾಗಿ…

Read More

ರೆಡ್ ವೈನ್ ಮತ್ತು ವೈಟ್ ವೈನ್ ನಲ್ಲಿ ಯಾವುದು ಆರೋಗ್ಯಕ್ಕೆ ಪ್ರಯೋಜನಕಾರಿ ಇಲ್ಲಿದೆ ನೋಡಿ. ಕೆಲವರು ವೈನ್ ಅನ್ನು ಕುಡಿಯುತ್ತಾರೆ. ಇದನ್ನು ದ್ರಾಕ್ಷಿ ಹಣ್ಣಿನಿಂದ ತಯಾರಿಸಲಾಗುತ್ತದೆ. ಇದು ಆರೋಗ್ಯಕ್ಕೆ ಉತ್ತಮವಾಗಿದೆ. ಆದರೆ ಇದು ರೆಡ್ ಮತ್ತು ವೈಟ್ ಬಣ್ಣಗಳಲ್ಲಿ ಕಂಡುಬರುತ್ತದೆ. ಹಾಗಾಗಿ ಇವೆರಡರಲ್ಲಿ ಯಾವುದು ಆರೋಗ್ಯಕ್ಕೆ ಉತ್ತಮ ಎಂಬುದನ್ನು ತಿಳಿಯಿರಿ. ರೆಡ್ ವೈನ್ ಅನ್ನು ತಯಾರಿಸಲು ದ್ರಾಕ್ಷಿ ಸಿಪ್ಪೆ, ಕೆಂಪು ಮತ್ತು ಕಪ್ಪು ದ್ರಾಕ್ಷಿಯನ್ನು ಬಳಸುತ್ತಾರೆ. ಇದರಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿದೆ. ಇದು ಹೃದಯದ ಆರೋಗ್ಯಕ್ಕೆ ಉತ್ತಮ. ಇದು ಉತ್ತಮ ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಇದು ರಕ್ತ ಹೆಪ್ಪುಗಟ್ಟುವುದುನ್ನು ತಡೆಯುತ್ತದೆ. ಅಲ್ಲದೆ ಇದು ಕ್ಯಾನ್ಸರ್, ಪಿತ್ತಕೋಶದ ಕಲ್ಲಿನ ಸಮಸ್ಯೆಯನ್ನು ನಿವಾರಿಸುತ್ತದೆ. ಆದರೆ ಬಿಳಿ ವೈನ್ ಅನ್ನು ಬಿಳಿ ದ್ರಾಕ್ಷಿಯಿಂದ ತಯಾರಿಸಲಾಗುತ್ತದೆ. ಆದರೆ ಇದರಲ್ಲಿ ಆಯಂಟಿ ಆಕ್ಸಿಡೆಂಟ್ ಗಳ ಕೊರತೆ ಕಂಡುಬರುತ್ತದ. ಇದು ಕಡಿಮೆ ಕ್ಯಾಲೋರಿ ಮತ್ತು ಹೆಚ್ಚು ಕಾರ್ಬೋಹೈಡ್ರೇಟ್ ಗಳು ಮತ್ತು ಕಡಿಮೆ ಆಲ್ಕೋಹಾಲ್ ಅಂಶವನ್ನು ಒಳಗೊಂಡಿದೆ. ಇದು ಕ್ಯಾನ್ಸರ್ ಮತ್ತು…

Read More

ಚಳಿಗಾಲದಲ್ಲಿ ಎಳ್ಳು, ಬೆಲ್ಲ ತಿನ್ನೋದ್ರಿಂದ ಹಲವು ಲಾಭಗಳಿವೆ. ಬೆಲ್ಲವು ಕಾರ್ಬೊಹೈಡ್ರೇಟ್‌ ಕೇಂದ್ರಿತ ಮೂಲವಾಗಿದೆ. ಇದು ದೇಹಕ್ಕೆ ತ್ವರಿತವಾಗಿ ಚೈತನ್ಯ ಒದಗಿಸುವಂತೆ ಮಾಡುತ್ತದೆ. ಎಳ್ಳಿನಲ್ಲಿ ಕೊಬ್ಬಿನಾಂಶ ಹಾಗೂ ಪ್ರೊಟೀನ್‌ ಸಮೃದ್ಧವಾಗಿದ್ದು, ಇದು ನಮ್ಮ ಶಕ್ತಿಯ ಮಟ್ಟ ಹೆಚ್ಚಿಸುತ್ತದೆ. ಪ್ರೊಟೀನ್‌ ಸಮೃದ್ಧ ಎಳ್ಳಿನಲ್ಲಿ ಕ್ಯಾಲ್ಸಿಯಂ, ಕಬ್ಬಿಣಾಂಶ, ಮಗ್ನೇಶಿಯಂ, ಫಾಸ್ಪರಸ್‌ ಹಾಗೂ ಜಿಂಕ್‌ನಂತಹ ಪ್ರೊಟೀನ್‌ ಅಂಶಗಳಿಂದ ಸಮೃದ್ಧವಾಗಿದೆ. ಬೆಲ್ಲವು ಕಬ್ಬಿನಿಂದ ತಯಾರಾಗುವ ಕಾರಣ ಇದರಲ್ಲಿ ಕಬ್ಬಿಣಾಂಶ, ಮಗ್ನೇಶಿಯಂ ಅಂಶ, ಪೊಟ್ಯಾಶಿಯಂ ಹಾಗೂ ವಿಟಮಿನ್‌ ಅಂಶಗಳು ಸಮೃದ್ಧವಾಗಿದೆ. ದೇಹವನ್ನು ಬೆಚ್ಚಗಿರಿಸುತ್ತದೆ ಎಳ್ಳು ಹಾಗೂ ಬೆಲ್ಲ ಎರಡಲ್ಲೂ ದೇಹವನ್ನು ಬೆಚ್ಚಗಿರಿಸುವ ಶಕ್ತಿ ಇದೆ. ಆ ಕಾರಣಕ್ಕೆ ಚಳಿಗಾಲದಲ್ಲಿ ಎಳ್ಳು ಬೆಲ್ಲವನ್ನು ತಿನ್ನುವುದರಿಂದ ದೇಹ ಬೆಚ್ಚಗಿದ್ದು, ಎದುರಾಗುವ ಸಮಸ್ಯೆಗಳು ದೂರಾಗುತ್ತವೆ. ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ ಬೆಲ್ಲವು ಜೀರ್ಣಶಕ್ತಿ ಹೆಚ್ಚಿಸುವ ಗುಣಗಳಿಂದ ಪ್ರಸಿದ್ಧಿ ಪಡೆದಿದೆ. ಇದು ಮಲಬದ್ಧತೆಯನ್ನು ತಡೆಯುತ್ತದೆ. ಎಳ್ಳಿನಲ್ಲಿ ನಾರಿನಾಂಶ ಸಮೃದ್ಧವಾಗಿದ್ದು, ಇದು ಜೀರ್ಣಶಕ್ತಿಯನ್ನು ಹೆಚ್ಚಿಸುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟದ ನಿಯಂತ್ರಣ ಸಕ್ಕರೆಗೆ ಹೋಲಿಸಿದರೆ ಬೆಲ್ಲದಲ್ಲಿ ಗ್ಲೈಸೆಮಿಕ್‌ ಇಂಡೆಕ್ಸ್‌ ಪ್ರಮಾಣ ಕಡಿಮೆ…

Read More

ಉಜ್ವಲ ಯೋಜನೆಯ ಅಡಿಯಲ್ಲಿ ಮನೆ ಮನೆಯಲ್ಲಿಯೂ ಇಂದು ಗ್ಯಾಸ್ ಸಿಲಿಂಡರ್ ಬಳಕೆ ಕಾಣಬಹುದು. ಗ್ಯಾಸ್ ಸಿಲೆಂಡರ್ ಬಳಕೆ ಮಾಡುವಾಗ ಸಾಕಷ್ಟು ಮುತುವರ್ಜಿ ವಹಿಸುವುದು ಅತ್ಯಗತ್ಯ. ಇಲ್ಲವಾದರೆ ದೊಡ್ಡ ಅನಾಹುತವನ್ನೇ ಎದುರಿಸಬೇಕಾಗುತ್ತದೆ. ಗ್ಯಾಸ್ ಬಳಕೆ ಮಾಡುವ ಸಂದರ್ಭದಲ್ಲಿ ಯಾವುದೇ ರೀತಿಯ ಅವಘಡಗಳು ಸಂಭವಿಸದ ಹಾಗೇ ಮುನ್ನೆಚ್ಚರಿಕೆಯನ್ನು ವಹಿಸಲು ಪ್ರತಿಯೊಬ್ಬರಿಗೂ ಸರ್ಕಾರವು ಸೂಚನೆಯನ್ನು ನೀಡಿದೆ. ಇದಕ್ಕಾಗಿಯೇ ಎಲ್ ಪಿಜಿ ಗ್ಯಾಸ್ ಸಿಲಿಂಡರ್ ಬಳಕೆ ಮಾಡುವ ಪ್ರತಿಯೊಬ್ಬರಿಗೂ ಹೊಸ ರೂಲ್ಸ್ ಅನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಸಿಲಿಂಡರ್ ಸುರಕ್ಷತೆಗಾಗಿ ಸರ್ಕಾರ ಈ ಹೊಸ ನಿಯಮವನ್ನು ಮಾಡಿದೆ, ಗ್ಯಾಸ್ ಸಿಲಿಂಡರ್ ಬಳಸುವವರು ‘ಪಂಚವಾರ್ಷಿಕ ಅನಿಲ ತಪಾಸಣೆ’ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ ತಿಳಿಸಿದೆ. ಇನ್ನು ಮುಂದೆ ಭಾರತ ಗ್ಯಾಸ್ ನಂತಹ ಕಂಪನಿಗಳು ಸುರಕ್ಷತೆ ಹೊಂದಿರುವ ಎಲ್‌ಪಿಜಿ ಕನೆಕ್ಷನ್ ಕುಟುಂಬಗಳಿಗೆ ಮಾತ್ರ ಸಿಲಿಂಡರ್ ವಿತರಣೆ ಮಾಡಲು ನಿರ್ಧರಿಸಿದ್ದಾರೆ ಎನ್ನಲಾಗಿದೆ. ಗ್ಯಾಸ್ ಸಿಲೆಂಡರ್ ಸುರಕ್ಷತೆ ಇಲ್ಲದೆ ಇರುವ ಕುಟುಂಬಗಳಿಗೆ ಇನ್ನು ಮುಂದೆ ಗ್ಯಾಸ್ ವಿತರಣೆಯನ್ನು ಸ್ಥಗಿತಗೊಳಿಸಲಾಗುವುದು. ಅನಿಲ ಸುರಕ್ಷತೆಯ ಬಗ್ಗೆ ಜನರಲ್ಲಿ ಜಾಗೃತಿ…

Read More

ಬೆಂಗಳೂರು :- ರಾಜಧಾನಿ ಬೆಂಗಳೂರು ಸೇರಿ ರಾಜ್ಯದಾದ್ಯಂತ ಚಳಿಗಾಲ ಆರಂಭವಾಗಿದ್ದು ನಗರದಲ್ಲಿ ಹಾವುಗಳ ಕಾಟ ಜೋರಾಗಿದೆ. ಇತ್ತೀಚೆಗೆ ಮನೆಯ ಸಂಧಿ ಗೊಂದಿಗಳಲ್ಲಿ ಹಾವುಗಳು ಕಾಣಿಸಿಕೊಳ್ಳುತ್ತಿದ್ದು, ಹಾವುಗಳನ್ನ ಹಿಡಿಯೋದಕ್ಕೆ ವನ್ಯ ಸಂರಕ್ಷಣಾ ತಂಡಕ್ಕೆ ಪ್ರತಿದಿನ 50ಕ್ಕೂ ಹೆಚ್ಚು ಕರೆಗಳು ಬರುತ್ತಿವೆ. ಹೆಲ್ಮೆಟ್, ಕಾಂಪೌಂಡ್, ಶೂಸ್, ವಾಟಾರ್ ಟ್ಯಾಂಕರ್, ಫುಟ್ ಪಾತ್, ಕಾರಿನ ಸಂಧಿಗೊಂದಿಗಳಲ್ಲಿ ಹಾವುಗಳು ಕಾಣಿಸಿಕೊಳ್ಳುತ್ತಿದ್ದು, ಮನೆಯಿಂದ ಹೊರಗೆ ಹೋಗುವ ಜನರು ಒಮ್ಮೆ ಹುಷಾರಾಗಿ ಎಲ್ಲಾವನ್ನ ಚೆಕ್ ಮಾಡಿ ಮನೆಯಿಂದ ಹೊರಹೋಗುವ ಪರಿಸ್ಥಿತಿ ಎದುರಾಗಿದೆ. ಇನ್ನು ನಗರದ ಯಲಹಂಕ, ಆರ್​ಆರ್ ನಗರ, ಆರ್​ಟಿ ನಗರ, ನಾಗರಭಾವಿ, ಮಹದೇವಪುರ ಭಾಗದಲ್ಲಿ ಪ್ರತಿನಿತ್ಯ ಹಾವಿನ ದರ್ಶನವಾಗುತ್ತಿದ್ದು, ಹಾವುಗಳಿಂದಾಗಿ ಜನರು‌ ಪ್ರತಿದಿನ ರೋಸಿ ಹೋಗುತ್ತಿದ್ದಾರೆ. ಇನ್ನು ಹಾವುಗಳು ಬಂದಾಗ ಬಿಬಿಎಂಪಿ ವನ್ಯಸಂಸಕ್ಷಕರು ಸಹ ಸರಿಯಾದ ಸಮಯಕ್ಕೆ ಸಿಗದೇ ಇರುವುದು ಹಾಗೂ ಕರೆಗಳನ್ನ ಸ್ವೀಕರಿಸದೇ ಇರೋದ್ರಿಂದ ಜನರು ಬಿಬಿಎಂಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತಾಗಿ ವನ್ಯ ಸಂರಕ್ಷಕರನ್ನ ಪ್ರಶ್ನಿಸಿದ್ದಕ್ಕೆ ಜನರ ಬೇಡಿಕೆಗೆ ತಕ್ಕಷ್ಟು ವನ್ಯ ಸಂರಕ್ಷಕರಿಲ್ಲ. ಸಧ್ಯ…

Read More

ಬೆಂಗಳೂರು:- ಐಟಿ ಇಲಾಖೆಗೆ ಗುತ್ತಿಗೆದಾರರ ಮಾಹಿತಿ ನೀಡಲು ಅಡ್ಡಿಯಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಗುತ್ತಿಗೆದಾರರ ಮಾಹಿತಿಯನ್ನು ಆದಾಯ ತೆರಿಗೆ ಇಲಾಖೆ ಕೇಳಿದರೆ ಅದನ್ನು ಒದಗಿಸಲು ಯಾವುದೇ ಅಡಚಣೆ ಇಲ್ಲ ಎಂದರು. ಮುಚ್ಚಿಡುವ ಅಗತ್ಯವಿಲ್ಲ. 10 ರೂ. ಪಾವತಿಸಿ ಆರ್‍ಟಿಐ ಅರ್ಜಿ ಹಾಕಿದರೆ ದಾಖಲೆ ಕೊಡುತ್ತೇವೆ. ಇನ್ನು ಆದಾಯ ತೆರಿಗೆ ಸರ್ಕಾರಿ ಸಂಸ್ಥೆ ಕೇಳಿದರೆ ಕೊಡಲ್ಲ ಎಂದು ಹೇಳಲು ಸಾಧ್ಯವೇ ಎಂದು ಪ್ರಶ್ನಿಸಿದರು. ಆದಾಯ ತೆರಿಗೆ ಇಲಾಖೆ 6 ಬಾರಿ ಪತ್ರ ಬರೆದಿರುವುದು ನನ್ನ ಗಮನಕ್ಕೆ ಬಂದಿಲ್ಲ. ಇದು ಸಚಿವರ ಅಥವಾ ಸರ್ಕಾರದವರೆಗೂ ಬರುವ ವಿಚಾರವಲ್ಲ. ಅಧಿಕಾರಿಗಳು ನಿರ್ಧಾರ ತೆಗೆದುಕೊಂಡು ಮಾಹಿತಿ ಒದಗಿಸುತ್ತಾರೆ ಎಂದರು. ಇತ್ತೀಚೆಗೆ ತಾವು ಕೇಂದ್ರ ಹೆದ್ದಾರಿ ಸಚಿವ ನಿತಿನ್ ಗಟ್ಕರಿ ಅವರನ್ನು ಭೇಟಿ ಮಾಡಿದ್ದು, ರಾಜ್ಯದಲ್ಲಿ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ 20 ರಸ್ತೆಗಳನ್ನು ರಾಷ್ಟ್ರೀಯ ಹೆದ್ದಾರಿಗಳನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಪಟ್ಟಂತೆ ಚರ್ಚೆ ನಡೆಸಿದ್ದೇವೆ. ಭೂ ಸ್ವಾೀಧಿನ, ಅರಣ್ಯ ಪ್ರದೇಶದ…

Read More

ಬೆಂಗಳೂರು:- ಕರ್ನಾಟಕದಲ್ಲಿ ಇಂದು 298 ಹೊಸ ಕೊವಿಡ್​ ಕೇಸ್ ಪತ್ತೆ ಆಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ನಗರದಲ್ಲಿ ಇಂದು ಒಂದು ದಿನೇ 172 ಕೊವಿಡ್​ ಕೇಸ್ ಪತ್ತೆ ಹಚ್ಚಲಾಗಿದೆ. ರಾಜ್ಯದಲ್ಲಿ ಕೊರೊನಾ ಪಾಸಿಟಿವಿಟಿ ರೇಟ್ ಶೇಕಡಾ 3.82ರಷ್ಟಿದೆ. 229 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಾಹಿತಿ ನೀಡಿದೆ. ರಾಜ್ಯದಲ್ಲಿ 24 ಗಂಟೆಯಲ್ಲಿ 7,791 ಜನರಿಗೆ ಕೊವಿಡ್ ಟೆಸ್ಟ್ ಮಾಡಲಾಗಿದ್ದು, 1240 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿವೆ. ಬಾಗಲಕೋಟೆ 4, ಬಳ್ಳಾರಿ 6, ಬೆಳಗಾವಿ 2, ಬೆಂಗಳೂರು ಗ್ರಾಮಾಂತರ 1, ಚಾಮರಾಜನಗರ 8, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 5, ಚಿತ್ರದುರ್ಗ 1, ದಕ್ಷಿಣ ಕನ್ನಡ 11, ದಾವಣಗೆರೆ 1, ಧಾರವಾಡ 3, ಗದಗ 1, ಹಾಸನ 19, ಕಲಬುರಗಿ 3, ಕೊಡಗು 2, ಕೋಲಾರ 1, ಕೊಪ್ಪಳ 6, ಮಂಡ್ಯ 11, ಮೈಸೂರು 18, ರಾಯಚೂರು 1, ರಾಮನಗರ 2, ಶಿವಮೊಗ್ಗ 3,…

Read More

ನೆಲಮಂಗಲ:- ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲೂಕು ಸೋಂಪುರ ಹೋಬಳಿ ನರಸೀಪುರ ಗ್ರಾಮ ಪಂಚಾಯತಿ ವ್ಯಾಪ್ತಿಯ ದಾಸಣ್ಣನ ಪಾಳ್ಯದಲ್ಲಿರುವ ಅಂಗನವಾಡಿ ಕೇಂದ್ರದಲ್ಲಿ ಸುಮಾರು ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆ ಅನಿತಾ ರವರು ಮಕ್ಕಳ ಜೊತೆ ಬೇಜವಾಬ್ದಾರಿತನದಿಂದ ವರ್ತಿಸುತ್ತಾರೆ ಮತ್ತು ಮಕ್ಕಳನ್ನ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಎಂದು ಮಕ್ಕಳ ತಾಯಂದಿರು ಆರೋಪಿಸಿ ಕೂಡಲೇ ಅನಿತಾ ರವರನ್ನು ಅಮಾನತು ಮಾಡಿ ಬೇರೆ ಕಾರ್ಯಕರ್ತೆಯನ್ನು ನೇಮಿಸಬೇಕೆಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಗ್ರಾಮಸ್ಥರು ಮನವಿ ಸಲ್ಲಿಸಿದರು ಅಂಗನವಾಡಿ ಕಾರ್ಯಕರ್ತೆಯನ್ನು ಕೂಡಲೇ ಅಮಾನತು ಮಾಡಿ ಕಾನೂನು ಕ್ರಮ ಜರಗಿಸಬೇಕೆ ಬೇರೆ ಕಾರ್ಯಕರ್ತೆಯನ್ನು ನೇಮಿಸಬೇಕು ಇಲ್ಲದಿದ್ದರೆ ನಮ್ಮ ಮಕ್ಕಳನ್ನು ಅಂಗನವಾಡಿಗೆ ಕಳಿಸುವುದಿಲ್ಲ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ ಮುಂದೆ ಉಪವಾಸ ಸತ್ಯಾಗ್ರಹ ಮಾಡಲಾಗುವುದು ಎಂದು ಗ್ರಾಮಸ್ಥರು ತಿಳಿಸಿದರು.

Read More

ಬೆಂಗಳೂರು:- ದಿನದ 24 ಗಂಟೆಯೂ ಸೇವೆ ಸಲ್ಲಿಸುವವರ ಸಾಲಿಗೆ ಈ ಬಿಎಂಟಿಸಿ ಚಾಲಕ ಮತ್ತು ನಿರ್ವಾಹಕರೂ ಸೇರಲಿದ್ದು, ಇಂತಹ ಸೇವೆ ಸಲ್ಲಿಸಿದ ಚಾಲಕರಿಗೆ ನಿಗಮ‌ ಗುಡ್‌ ನ್ಯೂಸ್‌ವೊಂದನ್ನು ನೀಡಿದೆ. ಆ ಶುಭಸುದ್ದಿ ಏನು ಅಂತೀರಾ ಇಲ್ಲಿದೆ ನೋಡಿ ಮಾಹಿತಿ. ರಾಜ್ಯದ ರಾಜಧಾನಿ ಬೆಂಗಳೂರಿನ ಎಲ್ಲಾ ಕಡೆಗಳಿಗೂ ಸಂಚಾರ ಮಾಡುತ್ತಿರುವ ಬಿಎಂಟಿಸಿ ನಿಗಮ ಇಡೀ ದೇಶದಲ್ಲೇ ಒಂದೊಳ್ಳೆ ಸಾರಿಗೆ ಸೇವೆ ಎನ್ನುವ ಪ್ರಖ್ಯಾತಿ ಹೊಂದಿದೆ. ಈ ಪ್ರಖ್ಯಾತಿ ಗಳಿಸಲು ಪ್ರಮುಖ ಕಾರಣರಾದವರು ಬಸ್‌ನಲ್ಲಿ ಕಾರ್ಯ ನಿರ್ವಹಿಸುವ ಚಾಲಕರು ಹಾಗೂ ಕಾರ್ಯ ನಿರ್ವಾಹಕರು ಆಗಿದ್ದಾರೆ. ಬೆಂಗಳೂರಿನಂಹತ ಮಹನಗರದಲ್ಲಿನ ಟ್ರಾಫಿಕ್ ಜಂಜಾಟದಲ್ಲಿ ಬಸ್ ಈ ಬಸ್‌ಗಳನ್ನು ಓಡಿಸುವುದು ಸುಲಭದ ಮಾತಲ್ಲ ತೀವ್ರ ಗತಿಯ ಟ್ರಾಫಿಕ್ ನಡುವೆಯೂ ಪ್ರಯಾಣಿಕರನ್ನು ಯಾವುದೇ ತೊಂದರೆ ಇಲ್ಲಿದ ತಮ್ಮ ಸ್ಥಳಗಳಿಗೆ ತಲುಪಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಆದ್ದರಿಂದ ಇಂತಹ ಚಾಲಕರನ್ನ ಗುರುತಿಸಿರುವ ಬಿಎಂಟಿಸಿ ಪ್ರಮೋಷನ್ ಭಾಗ್ಯವನ್ನು ಕಲ್ಪಿಸಿದೆ. 25 ವರ್ಷಗಳ ಕಾಲ ಸೇವೆ ಸಲ್ಲಿಸಿ ಮುಂದುವರೆದಿರುವ 1,000 ಹೆಚ್ಚು ಚಾಲಕರಿಗೆ ಕೂಡಲೇ ಜಾರಿಯಾಗುವಂತೆ…

Read More

ಹುಬ್ಬಳ್ಳಿ: ಭಾರತೀಯ ಜನತಾ ಪಕ್ಷದ ನಾಯಕರು ಸರ್ಕಾರಿ ಅಧಿಕಾರಿಗಳ ಕರ್ತವ್ಯ ಪ್ರಶ್ನೆ ಮಾಡುವುದರ ಜೊತೆಗೆ ಅನಗತ್ಯವಾಗಿ ಸರ್ಕಾರದ ವಿರುದ್ಧ ಹೇಳಿಕೆ ಕೊಡುತ್ತಾ ಶಾಂತಿ ಸುವ್ಯವಸ್ಥಿತಗೆ ಧಕ್ಕೆ ತರುತಿದ್ದು ಅಂತವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಒತ್ತಾಯಿಸಿ ಎಫ್‌ಐಆರ್‌ ದಾಖಲಿಸುವಂತೆ ಆಗ್ರಹಿಸಿ ಕಾಂಗ್ರೆಸ್‌ ಮುಖಂಡರು ನಗರದ ವಿವಿಧ ಠಾಣೆಗಳಲ್ಲಿ ಗುರುವಾರ ಕಾಂಗ್ರೆಸ್ ನಾಯಕರುಮನವಿ ಸಲ್ಲಿಸಿದರು. ನಗರದಶಹರ ಪೊಲೀಸ್‌ ಠಾಣೆಯಲ್ಲಿ ಮನವಿ ಸ‌ಲ್ಲಿಸಿದ ಬಳಿಕ ಮಾತನಾಡಿದ ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಅಲ್ತಾಫ್‌ ಹಳ್ಳೂರ, ‘1992ರ ಗಲಭೆ ಪ್ರಕರಣ ಆರೋಪಿ ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಬುಧವಾರ ನಡೆಸಿದ ಪ್ರತಿಭಟನೆಯಿಂದ ಜನರಿಗೆ ತೊಂದರೆಯಾಗಿದೆ. ರೌಡಿಶೀಟರ್‌ ಶ್ರೀಕಾಂತ್‌ ಅವರನ್ನು ಕರ ಸೇವಕನೆಂದು ಹೇಳಿದ್ದಲ್ಲದೆ, ಪ್ರತಿಭಟನೆ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯಮ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹಾಗೂ ಅಲ್ಪಸಂಖ್ಯಾತರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ’ ಎಂದು ಆರೋಪಿಸಿದರು. ‘ಅವಳಿ ನಗರದಲ್ಲಿ ಭಯದ ವಾತಾವರಣ ಸೃಷ್ಟಿಸಿ, ಪ್ರಚೋದನಕಾರಿ ಭಾಷಣದಿಂದ ಮಾನಹಾನಿ ಮಾಡಿದ್ದಕ್ಕೆ ವಿಧಾನಸಭೆ ವಿರೋಧಪಕ್ಷದ ನಾಯಕ ಆರ್‌. ಅಶೋಕ್,…

Read More