Author: AIN Author

ಮಹಿಳೆಯರು ಗರ್ಭಧರಿಸಿದಾಗ ದೇಹದಲ್ಲಿ ಪ್ರೊಲ್ಯಾಕ್ಟಿನ್ ಮತ್ತು ಪ್ರೊಜೆಸ್ಟರಾನ್ ಹಾರ್ಮೋನ್ ಹೆಚ್ಚಾಗಿ ಹಾಲನ್ನು ಉತ್ಪಾದಿಸಲು ಸ್ತನಗಳನ್ನು ಪ್ರಚೋದಿಸುತ್ತದೆ. ಇದರಲ್ಲಿ ತಾಯಿಯ ಆಹಾರ ಮತ್ತು ಪೌಷ್ಟಿಕಾಂಶಗಳು ಪ್ರಮುಖ ಪಾತ್ರವಹಿಸುತ್ತವೆ. ಆದರೆ ತಾಯಿಯ ದೇಹ ತಂಪಾಗಿದ್ದರೆ ಅದು ಹಾಲಿನ ಮೂಲಕ ಮಗುವಿನ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲವಂತೆ. ಹಾಗೇ ಹಾಲುಣಿಸುವ ತಾಯಂದಿರು ಯಾವುದೇ ಔಷಧಿಗಳನ್ನು ಸೇವಿಸಿದರೆ ಅದು ಹಾಲಿನ ಮೂಲಕ ಮಗುವಿನ ದೇಹ ಸೇರುವುದಿಲ್ಲ. ಇದರಿಂದ ಮಗುವಿಗೆ ಯಾವುದೇ ಪರಿಣಾಮವಾಗುವುದಿಲ್ಲ. ಆದರೆ ಕ್ಯಾನ್ಸರ್ ನಂತಹ ರೋಗಗಳಿಗೆ ಔಷಧಿ ತೆಗೆದುಕೊಳ್ಳುವವರು ಮಗುವಿಗೆ ಹಾಲುಣಿಸುವ ಹಾಗಿಲ್ಲ ಎನ್ನಲಾಗುತ್ತದೆ.

Read More

ಅಡುಗೆ ಮಾಡುವುದು ಸಹ ಒಂದು ಕಲೆ. ಈ ಕಲೆಯಲ್ಲಿ ಕೆಲವರು ಸಿದ್ಧಹಸ್ತರಾಗಿರುತ್ತಾರೆ. ಹಾಗೆ ಅಕ್ಕಿಯ ಮೂಲಕ ಅನ್ನದ ರೂಪದಲ್ಲಿ ನಾವು ಪಲಾವ್, ಬಿರಿಯಾನಿ, ಚಿತ್ರಾನ್ನ ಹೀಗೆ ಹತ್ತಾರು ಭಕ್ಷ್ಯ ಮಾಡಬಹುದಿದೆ. ಈ ಎಲ್ಲಾ ಭಕ್ಷ್ಯಗಳಿಗೂ ಒಂದೇ ರೀತಿಯ ಅನ್ನ ಸರಿಹೊಂದುವುದಿಲ್ಲ. ಇದಕ್ಕೆ ಅಷ್ಟೇ ಪ್ರಮಾಣದಲ್ಲಿ ಬೇಯಿಸಬೇಕಾಗುತ್ತದೆ. ನೀವು ಅಡುಗೆ ಮಾಡುವಲ್ಲಿ ಹತ್ತಾರು ವರ್ಷದ ಅನುಭವವಿದ್ದರೂ ಅನ್ನ ಮಾಡಬೇಕಾದರೆ ಸರಿಯಾದ ಗಮನವಿಡಬೇಕು. ಹಾಗಾದ್ರೆ ನೀವು ಅನ್ನವನ್ನು ಬೇಯಿಸುವಾಗ ಮಾಡುತ್ತಿರುವ 5 ತಪ್ಪುಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಸಾಮಾನ್ಯವಾಗಿ ನೀವು ಅನ್ನ ಬೇಯಿಸುವಾಗ ಈ ತಪ್ಪುಗಳನ್ನು ಮಾಡಿರುತ್ತೀರಿ. ಹಾಗಾದ್ರೆ ಆ ತಪ್ಪುಗಳೇನು ಎಂಬುದನ್ನು ನೋಡಿ. 1. ಅಕ್ಕಿಯನ್ನು ಚೆನ್ನಾಗಿ ತೊಳೆಯದಿರುವುದು ನೀವು ಅಕ್ಕಿಯನ್ನು ಸರಿಯಾಗಿ ತೊಳೆಯುತ್ತೀರಾ ಅಥವಾ ನೇರವಾಗಿ ಬಳಸುತ್ತೀರಾ? ಅಕ್ಕಿಯನ್ನು ಬೇಯಿಸುವಾಗ ನೀವು ಮಾಡಬಹುದಾದ ಸಾಮಾನ್ಯ ತಪ್ಪುಗಳೆಂದರೆ ಧಾನ್ಯಗಳನ್ನು ಸರಿಯಾಗಿ ತೊಳೆಯದಿರುವುದು. ಅಕ್ಕಿಯನ್ನು ತೊಳೆಯದಿದ್ದಾಗ, ಹೆಚ್ಚುವರಿ ಮೇಲ್ಮೈ ಪಿಷ್ಟವನ್ನು ಉಳಿಸಿಕೊಳ್ಳುತ್ತವೆ, ಅದು ಅಡುಗೆ ಮಾಡುವಾಗ ತುಂಬಾ ಜಿಗುಟಾದಂತಾಗುತ್ತದೆ. ಇದನ್ನು ತಪ್ಪಿಸಲು ಅಕ್ಕಿಯನ್ನು ಕನಿಷ್ಠ…

Read More

ಇರುವುದೆಲ್ಲವ ಬಿಟ್ಟು ಕಥೆ ಹೇಳಿ ಗೆದ್ದಿದ್ದ ಕಾಂತ ಕನ್ನಲ್ಲಿ ಈಗ ಮತ್ತೊಂದು ಫ್ರೆಶ್ ಕಂಟೆಂಟ್ ಮೂಲಕ ಪ್ರೇಕ್ಷಕ ಎದುರು ಬರಲು ತಯಾರಿ ನಡೆಸುತ್ತಿದ್ದಾರೆ. ಅದರ ಮೊದಲ ಭಾಗವೆಂಬಂತೆ ಬೆಂಗಳೂರಿನ ಬಂಡೆ ಮಹಾಕಾಳಿ ದೇಗುಲದಲ್ಲಿಂದು ’ಲೈಫ್ Today’ ಮುಹೂರ್ತ ನೆರವೇರಿದೆ. ನಿರ್ದೇಶಕ ಮಹೇಂದರ್ ಕ್ಲ್ಯಾಪ್ ಮಾಡಿ ಶುಭ ಹಾರೈಸಿದ್ರೆ, ಆಕ್ಷನ್ ಪ್ರಿನ್ಸ್ ಧ್ರುವ ಸರ್ಜಾ ಟೈಟಲ್ ಹಾಗೂ ಫಸ್ಟ್ ಲುಕ್ ರಿವೀಲ್ ಮಾಡಿ ಚಿತ್ರತಂಡಕ್ಕೆ ಬೆಸ್ಟ್ ವಿಶಸ್ ತಿಳಿಸಿದರು.  ಬಳಿಕ ಮಾಧ್ಯಮದವರೊಂದಿಗೆ ಧ್ರುವ ಸರ್ಜಾ ಮಾತನಾಡಿ, ಟೈಟಲ್ ಸಿನಿಮಾ ನೋಡಬೇಕು ಎಂಬ ನಿರೀಕ್ಷೆ ಹುಟ್ಟಿಸುತ್ತದೆ. ನಿರ್ದೇಶಕರು ಅತ್ತಿಯವರ ಇರುವುದೆಲ್ಲವನ್ನು ಬಿಟ್ಟು ಸಿನಿಮಾವನ್ನು ನಿರ್ದೇಶನ ಮಾಡಿದ್ದರು. ಆ ಚಿತ್ರ ಚೆನ್ನಾಗಿತ್ತು. ಈಗ ಲೈಫ್ Today ಮಾಡ್ತಿದ್ದಾರೆ. ಸಿನಿಮಾದಲ್ಲಿ ಹೊಸಬರು ಇದ್ದಾರೆ. ಹಳೆಬರು ಇದ್ದಾರೆ. ಇಡೀ ತಂಡಕ್ಕೆ ಒಳ್ಳೆದಾಗಲಿ ಎಂದರು.  ನಿರ್ದೇಶಕ ಕಾಂತ ಕನ್ನಲ್ಲಿ ಮಾತನಾಡಿ,  ಇರುವುದೆಲ್ಲವ ಬಿಟ್ಟು ಸಿನಿಮಾಗೆ ನೀವು ತೋರಿಸಿದ ಪ್ರೀತಿ, ಪ್ರೋತ್ಸಾಹ ಹಾಗೂ ಸಹಕಾರವನ್ನು ಎಂದು ಮರೆಯಲಾಗುವುದಿಲ್ಲ. ಆ ಸಹಕಾರವೇ ನನ್ನ…

Read More

ಕವರಟ್ಟಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತದ ಕೇಂದ್ರಾಡಳಿತ ಪ್ರದೇಶವಾದ ಲಕ್ಷದ್ವೀಪದಲ್ಲಿ (Lakshadweep) ವಾಸ್ತವ್ಯ ಹೂಡಿದ್ದಾಗ ತೆಗೆಸಿದ ಫೋಟೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು, ಭಾರೀ ಸದ್ದು ಮಾಡುತ್ತಿದೆ. ಎರಡು ದಿನಗಳ ಕಾಲ ತಮಿಳುನಾಡು, ಕೇರಳ ಮತ್ತು ಲಕ್ಷದ್ವೀಪ ಪ್ರವಾಸದಲ್ಲಿದ್ದ ಮೋದಿ ಅವರು ಹಲವು ಮನಮೋಹಕ ಫೋಟೋಗಳನ್ನು ಹಂಚಿಕೊಂಡಿದ್ದಾರೆ.  ಲಕ್ಷದ್ವೀಪದಲ್ಲಿ ಸ್ನಾರ್ಕ್ಲಿಂಗ್ (Snorkeling) ಮಾಡುತ್ತಿರುವ ಫೋಟೋಗಳು ಹಾಗೂ ಕಡಲತೀರಗಳಲ್ಲಿ ಮಾರ್ನಿಂಗ್ ವಾಕ್‌ ಮಾಡುತ್ತಾ ಅನುಭವಿಸಿದ ಸುಂದರ ಕ್ಷಣಗಳ ಫೋಟೋಗಳನ್ನು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಪ್ರಧಾನಿ ಹಂಚಿಕೊಂಡ ಚಿತ್ರದಲ್ಲಿ, ಅವರು ಸಮುದ್ರತೀರದಲ್ಲಿ ಕುರ್ಚಿಯ ಮೇಲೆ ಕುಳಿತು ಕಾಲ ಕಳೆಯುತ್ತಿರುವುದು, ಈ ವೇಳೆ ಅವರು ಲಕ್ಷದ್ವೀಪದ ಪ್ರಕೃತಿ ಸೌಂದರ್ಯವನ್ನು ಸವಿದಿದ್ದಾರೆ.  ಮತ್ತೊಂದು ಚಿತ್ರದಲ್ಲಿ, ಕಪ್ಪು ಕುರ್ತಾ ಪೈಜಾಮಾ ಧರಿಸಿ ಬೀಚ್‌ನಲ್ಲಿ ದಡದಲ್ಲೇ ನಡೆದಾಡುತ್ತಾ ಕಡಲ ತೀರದ ಸೌಂದರ್ಯ ಸವಿದಿದ್ದಾರೆ. ಮತ್ತೊಂದು ಚಿತ್ರದಲ್ಲಿ ಸಮುದ್ರತೀರದಲ್ಲಿ ಶಾಲು ಹೊದ್ದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಪ್ರವಾಸವನ್ನು ಇಷ್ಟಪಡುವ ಜನರು ಖಂಡಿತವಾಗಿಯೂ ಈ ಸ್ಥಳಕ್ಕೆ ಭೇಟಿ ನೀಡಬೇಕು ಎಂದು ಎಕ್ಸ್‌…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಭಾಷೆ ಬಳಸದಿದ್ದರೆ ತಿಳುವಳಿಕೆ ಪತ್ರ ನೀಡಲು ಮುಖ್ಯ ಆಯುಕ್ತರ ಸೂಚನೆ ನೀಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಬಳಸದೇ ಇರುವವರಿಗೆ ತಿಳುವಳಿಕೆ ಪತ್ರ ನೀಡಿ ಕೂಡಲೆ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರರಾದ ತುಷಾರ್ ಗಿರಿ ನಾಥ್ ರವರು ವಲಯ ಆಯುಕ್ತರಿಗೆ ಸೂಚನೆ ನೀಡಿದರು. ನಗರದ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆ ಅಳವಡಿಸುವ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ನಗರದಲ್ಲಿರುವ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳು, ಅಂಗಡಿ ಮುಂಗಟ್ಟುಗಳು ಹಾಗೂ ಎಲ್ಲಾ ವಲಯದ ಉದ್ದಿಮೆಗಳನ್ನು ಜನವರಿ 15ರ…

Read More

ತುಮಕೂರು: ಅಯ್ಯೋಧ್ಯೆಯ ಶ್ರೀ ರಾಮ ಮಂದಿರ ಉದ್ಘಾಟನೆಗೆ ನನಗೂ ಕೂಡ ಆಹ್ವಾನ ಬಂದಿದೆ. ಆದರೆ ನಾನು ಹೋಗಲು ಆಗುವುದಿಲ್ಲ.‌ ಕಾರಣ ಅದೇ ದಿನದಂದು ಲಿಂಗೈಕ್ಯ, ಪರಮ ಪೂಜ್ಯ ಡಾ. ಶ್ರೀ ಶಿವಕುಮಾರ ಸ್ವಾಮೀಜಿಯವರ (Dr. Shivakumara Swamiji) 5ನೇ ವರ್ಷದ ಪುಣ್ಯ ಸ್ಮರಣೆ ಇರುವ ಕಾರಣ ಅಯೋಧ್ಯೆಯ ರಾಮಮಂದಿರ ಉದ್ಘಾಟನೆಗೆ ನಾನು ಹೋಗಲು ಆಗುವುದಿಲ್ಲ ಎಂದು ಸಿದ್ದಗಂಗಾ ಮಠದ ಮಠಾಧ್ಯಕ್ಷರಾದ ಶ್ರೀ ಸಿದ್ದಲಿಂಗ ಸ್ವಾಮೀಜಿ (Siddalinga Swamiji) ಅವರು ಸ್ಪಷ್ಟಪಡಿಸಿದರು. ತುಮಕೂರಿನ ಸಿದ್ದಗಂಗಾ ಮಠದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶ್ರೀ ಸಿದ್ದಲಿಂಗ ಸ್ವಾಮೀಜಿ, ಉದ್ಘಾಟನೆಯ ಮುನ್ನ ದಿನವೇ ಅಂದರೆ ಜನವರಿ 20ರಂದು ಬಂದು ಅಯೋಧ್ಯೆಯಲ್ಲಿ ತಂಗುವಂತೆ ಮನವಿ ಮಾಡಿದ್ದಾರೆ. ಭದ್ರತಾ ದೃಷ್ಟಿಯಿಂದ ಜನವರಿ 23 ರಂದೇ ಹಿಂದಿರುಗಲು ಹೇಳಿದ್ದಾರೆ. ಆದರೆ ನಾನು ಹೋಗಲು ಆಗುತ್ತಿಲ್ಲ. https://ainlivenews.com/stomach-ache-immediately-after-eating-so-try-this-home-remedy/ ಕಾರಣ, ಜನವರಿ 21ರಂದು ಡಾ. ಶಿವಕುಮಾರ ಸ್ವಾಮೀಜಿಯವರ ಪುಣ್ಯ ಸ್ಮರಣೆ ಇದೆ. ಈ ಕಾರಣದಿಂದಾಗಿ ಕಾರ್ಯಕ್ರಮಕ್ಕೆ ಹೋಗಲು ಆಗುತ್ತಿಲ್ಲ. ಆದರೆ ಶ್ರೀ ಸಿದ್ದಗಂಗಾ ಮಠದಿಂದ ರಾಮ ಮಂದಿರ…

Read More

ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ (Arabian Sea) ವಾಯುಭಾರ ಕುಸಿತ ಕಾಣಿಸಿಕೊಂಡಿರುವ ಹಿನ್ನೆಲೆ ಮುಂದಿನ ನಾಲ್ಕು ದಿನಗಳ ಕಾಲ ಮಳೆಯಾಗುವ (Rain) ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ರಾಜ್ಯದಲ್ಲಿ ಕೆಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲೂ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದೆ. ವಾಯುಭಾರ ಕುಸಿತದಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. https://ainlivenews.com/k-set-exam-on-january-13-notice-to-download-to-get-admit-card/ ಉತ್ತರ ಕನ್ನಡ (Uttara Kannada) ಕರಾವಳಿಯಲ್ಲಿ ದಿಢೀರ್ ವರುಣನ ಆಗಮನವಾಗಿದ್ದು, ಕಾರವಾರದಲ್ಲಿ ಬೆಳಗ್ಗೆಯಿಂದ ಧಾರಾಕಾರವಾಗಿ ಮಳೆ ಸುರಿಯುತ್ತಿದೆ. ಕಳೆದ ಒಂದು ಗಂಟೆಯಿಂದ ಮಳೆ ಅಬ್ಬರಿಸಿದ್ದು, ಏಕಾಏಕಿ ಮಳೆ ಸುರಿಯುತ್ತಿರುವುದರಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ಮಳೆ ಸುರಿಯುತ್ತಿರುವ ಹಿನ್ನೆಲೆ ನಗರದ ರಸ್ತೆಗಳು ಖಾಲಿಖಾಲಿಯಾಗಿವೆ. ಬಿಸಿಲಿಗೆ ಕಾದಿದ್ದ ಇಳೆಗೆ ವರುಣ ತಂಪೆರೆದಿದ್ದು, ಶಾಲೆ, ಕೆಲಸಕ್ಕೆ ತೆರಳುವವರಿಗೆ ಮಳೆರಾಯ ಅಡಿಪಡಿಸಿದ್ದಾನೆ. ಕಾರವಾರ, ಅಂಕೋಲ, ಕುಮಟಾ ಸೇರಿ…

Read More

ಬೆಂಗಳೂರು: ಈ ದುನಿಯಾ ದಿನೇದಿನೆ ಕಾಸ್ಟ್ಲಿ ಆಗ್ತಿದೆ. ಜನ ಸಾಮಾನ್ಯರಂತೂ ಬದುಕೋಕೆ ಆಗ್ತಿಲ್ಲ. ಏಪ್ರಿಲ್, ಮೇ ತಿಂಗಳು ಬಂದ್ರೆ ಸಾಕು ಟಣ್ ಅಂತ ಕರೆಂಟ್ ಬಿಲ್ ಏರಿಕೆ ಆಗೇ ಬಿಡುತ್ತೆ.ಕಳೆದ ವರ್ಷ ಮೂರು ಬಾರಿ ವಿದ್ಯುತ್ ದರ ಏರಿಕೆ ಮಾಡಿದ್ದ ಎಸ್ಕಾಂಗಳು ಈ ಬಾರಿಯೂ ವಿದ್ಯುತ್ ದರ ಪರಿಷ್ಕರಣೆ ಮಾಡೋಕೆ ಸಿದ್ದತೆ ನಡೆಸಿದೆ.ಈ ಸಂಬಂಧ ಬೆಸ್ಕಾಂ ಸೇರಿ ಇತರೆ ಕಂಪನನಿಗಳು ವಿದ್ಯುತ್ ದರ ಏರಿಸುವಂತೆ ಕೆಇಆರ್ಸಿ ಮುಂದೆ ಪ್ರಸ್ತಾಪ ಇಟ್ಟಿವೆ ಗ್ಯಾರಂಟಿ ಭಾಗ್ಯಗಳನ್ನ ಕೊಟ್ಟ ಕಾಂಗ್ರೆಸ್ ಸರ್ಕಾರ ಜನರಿಗೆ ತೆರಿಗೆ ಹೊರೆ ಹಾಕಲು ಸಿದ್ದತೆ ಮಾಡಿಕೊಳ್ತಿದೆ. ಗ್ಯಾರಂಟಿ ಭಾಗ್ಯಗಳಿಗೆ ಆಗುವ ವೆಚ್ಚ ಸರಿದೂಗಿಸಲು ಬೆಲೆ ಏರಿಕೆ ಮಾಡೋಕೆ ಹೊರಟಿದೆ. ಪರಿಣಾಮ ಎನ್ನುವಂತೆ ವಿದ್ಯುತ್ ದರ ಏರಿಕೆಗೆ ಸನ್ನದ್ದವಾಗ್ತಿದೆ.. https://ainlivenews.com/it-is-false-news-that-the-case-of-grave-destruction-in-bababudangiri-has-been-reopened-cm/ ಹೌದು..ಈಗಾಗ್ಲೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ.ದಿನ ನಿತ್ಯ ಉಪಯೋಗಿಸುವ ದವಸ ಧಾನ್ಯ ,ಪೆಟ್ರೋಲ್, ಡಿಸೇಲ್ ಗ್ಯಾಸ್ ,ಹಾಲು ಮೊಸರು ಗಗನಕ್ಕೇರಿದೆ‌.ಇದರ ನಡುವ ರಾಜ್ಯದ ಜನತೆಗೆ ಮತ್ತೆ ಕರೆಂಟ್…

Read More

ಬೆಂಗಳೂರು: ದೇಶದಲ್ಲಿ ಇದ್ದಕಿದ್ದ ಹಾಗೇ ರಾಮ ಮಯ ಮಾಡಲಿಕ್ಕೆ ಹೊರಟಿದ್ದಾರೆ ಎಂದು ಮಾಜಿ ಸಂಸದ ಉಗ್ರಪ್ಪ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಲಲ್ಲಾನ ಪೂಜೆಗೆ ಪ್ರಪ್ರಥಮವಾಗಿ ಅವಕಾಶ ಕಲ್ಪಿಸಿದ್ದು ಕಾಂಗ್ರೆಸ್​, ರಾಜೀವ್ ಗಾಂಧಿ ಪ್ರಧಾನಿಯಾಗಿದ್ದ ವೇಳೆ ಕಾಂಗ್ರೆಸ್​ ನವರು ಅವಕಾಶ ಕಲ್ಪಿಸಿದ್ದಾರೆ. ರಾಮ ದೇವರಾಗಿ ಎಲ್ಲಿಯು ಬಿಂಬಿಸಿಕೊಂಡಿಲ್ಲ. ನಾನು ಪ್ರತಿ ನಿತ್ಯ ರಾಮಯಾಣ ಓದುವವನು. ರಾಮ ಎಲ್ಲಿಯು ದೇವಸ್ಥಾನ ಬಯಸಿದ್ದವನಲ್ಲ. ಆದರೂ ಬಿಜೆಪಿಯವರು ದೇವಸ್ಥಾನ ಕಟ್ಟುಬೇಕು ಎಂದು ಆಂದೋಲನಗಳ ಮಾಡಿದರು. https://ainlivenews.com/it-is-false-news-that-the-case-of-grave-destruction-in-bababudangiri-has-been-reopened-cm/ ಅಯೋಧ್ಯೆ ಕುರಿತು ಸುಪ್ರೀಂ ಕೋರ್ಟ್​​ನಿಂದ ಆದೇಶ ಬಂದ ಸಂದರ್ಭದಲ್ಲಿ ನಮ್ಮ ಸರ್ಕಾರ ಇದ್ದಿದ್ದರೇ ನಾವೇ ದೇವಾಲಯ ಕಟ್ಟುತ್ತಿದ್ದೆವು. ಇದಕ್ಕೆ ಸಂಬಂಧಿಸಿ ಅಯೋಧ್ಯೆಯಲ್ಲಿ ಟ್ರಸ್ಟ್ ಇದೆ ಅದನ್ನ ಬಿಜೆಪಿ ಮೋದಿ ಮತ್ತು ತಂಡ ಹೈಜಾಕ್ ಮಾಡಿದ್ದಾರೆ. ರಾಮನ ಆದರ್ಶಗಳನ್ನ ಪ್ರಧಾನಿ ಮೋದಿಯಾಗಲಿ ಅಥವಾ ಬಿಜೆಪಿ ಅವರು ಪಾಲಿಸಿದ್ದಾರಾ. ರಾಮನ ಹೆಸರು ಹೇಳಲಿಕ್ಕೆ ಬಿಜೆಪಿಯವರಿಗೆ ನೈತಿಕತೆ ಇದೆಯಾ ಎಂದು ಕಿಡಿಕಾರಿದರು.

Read More

ಡ್ರೋನ್ ಪ್ರತಾಪ್ (Drone Pratap) ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನುವ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಪೊಲೀಸರು ಕೂಡ ವಿಚಾರಣೆಗೆ ಮುಂದಾಗಿದ್ದಾರೆ. ಆಹಾರದಲ್ಲಿ ವ್ಯತ್ಯಾಸವಾದ ಪರಿಣಾಮ ಪ್ರದೀಪ್ ಸಂಜೀವಿನಿ ಆಸ್ಪತ್ರೆಗೆ (Police) ದಾಖಲಾಗಿದ್ದರು. ಈ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿದ್ದಂತೆಯೇ ಕುಂಬಳಗೋಡು ಪೊಲೀಸ್ ಠಾಣಾ ಅಧಿಕಾರಿ ಶಿವಾರೆಡ್ಡಿ ಆಸ್ಪತ್ರೆಗೆ ಭೇಟಿ ನೀಡಿದ್ದಾರೆ. ಪ್ರತಾಪ್ ಗೆ ಚಿಕಿತ್ಸೆ ಕೊಟ್ಟ ವೈದ್ಯರ ಜೊತೆ ಚರ್ಚೆ ಮಾಡಿ, ಆರೋಗ್ಯದ ಬಗ್ಗೆ ಮಾಹಿತಿ ತಗೆದುಕೊಂಡಿದ್ದಾರೆ ಆಸ್ಪತ್ರೆಗೆ ಭೇಟಿ ನೀಡಿದ ನಂತರ ಸೀದಾ ಬಿಗ್ ಬಾಸ್ ಮನೆಯತ್ತ ತೆರಳಿರುವ ಪೊಲೀಸ್ ಅಧಿಕಾರಿಗಳು ಅಲ್ಲಿಯೂ ಡ್ರೋನ್ ಪ್ರತಾಪ್ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಳ್ಳಲಿದ್ದಾರಂತೆ. ಪೊಲೀಸರು ಈ ಪ್ರಕರಣದಲ್ಲಿ ಪ್ರವೇಶ ಮಾಡಿರುವುದು ನಾನಾ ರೀತಿಯ ಅನುಮಾನಗಳಿಗೂ ಎಡೆಮಾಡಿಕೊಟ್ಟಿದೆ. ಆದರೆ, ಪ್ರತಾಪ್ ಅವರ ಆರೋಗ್ಯ ಸುಧಾರಿಸಿದ್ದು, ಮತ್ತೆ ಅವರು ಬಿಗ್ ಬಾಸ್ ಮನೆಯೊಳಗೆ ಮರು ಪ್ರವೇಶ ಮಾಡಿದ್ದಾರೆ ಎನ್ನುವ ಮಾಹಿತಿಯೂ ಇದೆ. ಬಿಗ್ ಬಾಸ್ (Bigg Boss Kannada) ಮನೆಯ ಸ್ಟ್ರಾಂಗ್ ಕಂಟೆಸ್ಟೆಂಟ್ ಡ್ರೋನ್ ಪ್ರತಾಪ್…

Read More