Author: AIN Author

ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸುತ್ತಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರದ ಎರಡು ಹಾಡುಗಳ ಚಿತ್ರೀಕರಣ ಇಟಲಿ ಮತ್ತು ಮಾಲ್ಟಾದಲ್ಲಿ ನಡೆಯಲಿದೆ. ಗೋಲ್ಡನ್ ಸ್ಟಾರ್ ಗಣೇಶ್, ಮಾಳವಿಕ ನಾಯರ್ ಹಾಗೂ ಶರಣ್ಯ ಶೆಟ್ಟಿ ಹಾಡುಗಳ ಚಿತ್ರೀಕರಣದಲ್ಲಿ ಪಾಲ್ಗೊಳಲಿದ್ದಾರೆ. ಹಾಡುಗಳ ಚಿತ್ರೀಕರಣಕ್ಕಾಗಿ ಮೂವತ್ತು ಜನರ ತಂಡ ಇಟಲಿಗೆ ಪ್ರಯಾಣ ಬೆಳಸಲಿದೆ. ಹೊಸವರ್ಷ ಆರಂಭದ ಸಂದರ್ಭದಲ್ಲಿ ಹೊಸ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಎಲ್ಲರಿಗೂ ಚಿತ್ರತಂಡ ಹೊಸವರ್ಷದ ಶುಭಾಶಯ ತಿಳಿಸಿದೆ. ಯಶಸ್ವಿ ಚಿತ್ರಗಳ ನಿರ್ದೇಶಕ ಶ್ರೀನಿವಾಸರಾಜು ನಿರ್ದೇಶನದ ಈ ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಿದೆ. ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡುತ್ತಿದ್ದಾರೆ. https://ainlivenews.com/golden-opportunity-in-the-postal-department-apply-today-salary-20k/ “ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ,…

Read More

ಬಿಗ್ ಬಾಸ್ ಮನೆಗೆ  ಶೃಂಗೇರಿಯ ಶ್ರೀ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಆಗಮಿಸಿದ್ದಾರೆ. ಇವರನ್ನು ಕಂಡ ಸ್ಪರ್ಧಿಗಳು ಸಂತಸದಿಂದ ಗುರೂಜಿಗೆ ಆಶೀರ್ವಾದ ಪಡೆಯತ್ತಾರೆ. ಆದರೆ ಇವರು ನುಡಿದ ಭವಿಷ್ಯ ವಾಣಿಯಿಂದ ಸ್ಪರ್ಧಿಗಳು ಅಚ್ಚರಿಗೊಂಡಿದ್ದಾರೆ. ಶೃಂಗೇರಿಯ ಶ್ರೀ ವಿದ್ಯಾಶಂಕರಾನಂದ ಸರಸ್ವತಿ ಗುರೂಜಿ ಸ್ಪರ್ಧಿಗಳ ಎದುರು ಕುಳಿತು ಭವಿಷ್ಯ ಹೇಳಿದ್ದಾರೆ.  ವರ್ತೂರು ಸಂತೋಷ್​ ಅವರನ್ನು ಕರೆಸಿಕೊಂಡ ಗುರೂಜಿ, ಕಾಲಿನ ಮೇಲೆ ಹಾಕಿಸಿಕೊಳ್ಳಬಾರದ ಜಾಗದಲ್ಲಿ ಟ್ಯಾಟೂವೊಂದಿದೆ. ಆ ಟ್ಯಾಟೂ ಹಾಕಿಸಿದ ಬಳಿಕ ಮನಸ್ಸಿನಲ್ಲಿದ್ದ ನೆಮ್ಮದಿ ಹೋಯ್ತು ಎಂದಿದ್ದಾರೆ. ಅದಕ್ಕೆ ವರ್ತೂರು ಹೌದು ಎಂದಿದ್ದಾರೆ. ನಮ್ರತಾ ಅವರನ್ನು ಕರೆಸಿಕೊಂಡ ಗುರೂಜಿ, ನಿಮ್ಮ ಜೀವನದಲ್ಲಿ ಹೊಸ ಬೆಳಕು ಮತ್ತು ಹೊಸ ವ್ಯಕ್ತಿಯ ಆಗಮನವಾಗಿದೆ ಎಂದು ಗುರೂಜಿ ಹೇಳಿದ್ದಾರೆ. https://twitter.com/ColorsKannada/status/1742010480271470773?ref_src=twsrc%5Etfw%7Ctwcamp%5Etweetembed%7Ctwterm%5E1742010480271470773%7Ctwgr%5E36d230f062d86659a309ea3cc5fd37648c4b48a2%7Ctwcon%5Es1_&ref_url=https%3A%2F%2Fnammakudlanews.com%2Fguruji-of-sringeri-arrives-in-the-bigg-boss-house-the-fate-of-the-contestants-is-revealed%2F ಡ್ರೋನ್​ ಪ್ರತಾಪ್​ ಅವರನ್ನು ಕರೆಸಿಕೊಂಡ ಗುರೂಜಿ, ಈ ವಿಚಾರವನ್ನು ಹೇಳಲು ಸಂಕಟವಾಗುತ್ತೆ. ನೀನು ಕುಟುಂಬದಿಂದ ದೂರ ಇರಬೇಕಾಗುತ್ತೆ. ಕುಟುಂಬದ ಜೀವನ ಯಾಕೋ ಅಷ್ಟು ಸರಿಯಿಲ್ಲ. ದೂರವಿದ್ದು ಧೂಪವಾಗುತ್ತಿಯೋ? ಹತ್ತಿರವಿದ್ದು ಹೇಸಿಗೆ ಆಗ್ತೀಯೋ? ನಿನಗೆ ಬಿಟ್ಟದ್ದು ಎಂದು ಶ್ರೀ ವಿದ್ಯಾಶಂಕರಾನಂದ ಸರಸ್ವತಿ…

Read More

ತಮಿಳು ನಟ ವಿಶಾಲ್ ಯಾರಿಗೆ ಗೊತ್ತಿಲ್ಲ ಹೇಳಿ.. ಸದಾ ಒಂದಲ್ಲ ಒಂದು ಸುದ್ದಿಯಲ್ಲಿ ಇರುತ್ತಾರೆ. ಕನ್ನಡ ಸಿನಿರಸಿಕರಿಗೂ ಚಿರಪರಿತರು. ಈಗ ಸದ್ಯ ವಿಶಾಲ್‌ ಬಗ್ಗೆ ಒಂದು ಸುದ್ದಿ ಹರಿದಾಡುತ್ತಿದೆ. ಹೌದು  ವಿಶಾಲ್ ನ್ಯೂಯಾರ್ಕ್‌ʼನಲ್ಲಿನ ಮಾಲ್‌ವೊಂದರ ಒಳಗಿಂದ ಹುಡುಗಿಯ ಜೊತೆ ಹೊರಗೆ ಬರುವುದು. ನೀವು ವಿಶಾಲ್ ಅಲ್ವಾ? ಎನ್ನುತ್ತಿದ್ದಂತೆ ಮುಖ ಮುಚ್ಚಿಕೊಂಡು ಓಡಿ ಹೋಗುವಂತಹ ವಿಡಿಯೋ ವೈರಲ್ ಆಗುತ್ತಿದೆ. ವಿಶಾಲ್ ಜೊತೆ ಕಾಣಿಸಿಕೊಂಡ ಆ ಯುವತಿ ಯಾರು? ಏನ್ ಕಥೆ? ಎಂದು ಕೆಲವರು ಕೇಳುತ್ತಿದ್ದಾರೆ. ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ವೈರಲ್ ಆಗುತ್ತಿದೆ. ವಿಡಿಯೋದಲ್ಲಿರೋದು ವಿಶಾಲ್ ಹೌದೋ ಅಲ್ವೋ ಎಂದು ಚರ್ಚಿಸುವವರು ಇದ್ದಾರೆ. ಕೆಲವರು ಇದು ಫೇಕ್ ವಿಡಿಯೋ ಎನ್ನುತ್ತಿದ್ದಾರೆ. ಸಿನಿಮಾ ಪಬ್ಲಿಸಿಟಿಗಾಗಿ ಈ ರೀತಿಯ ವಿಡಿಯೋ ವೈರಲ್ ಮಾಡಿದ್ದಾರೆ ಎನ್ನುವ ಮಾತುಗಳು ಕೇಳಿಬರ್ತಿದೆ. https://twitter.com/rameshlaus/status/1739523045403037980?ref_src=twsrc%5Etfw%7Ctwcamp%5Etweetembed%7Ctwterm%5E1739523045403037980%7Ctwgr%5E7134fe7d15a7e97bf95902cc10c27849c2c3a1b8%7Ctwcon%5Es1_&ref_url=https%3A%2F%2Fwww.manoramaonline.com%2Fmovies%2Fmovie-news%2F2023%2F12%2F28%2Fvishal-reveals-his-mystery-woman-in-new-york-is-a-prank.html ಇದು ಸಿನಿಮಾ ಚಿತ್ರೀಕರಣದ ವಿಡಿಯೋ? ಎಂದು ಕೆಲವರು ಅನುಮಾನಿಸುತ್ತಿದ್ದಾರೆ. ಸರಿಯಾಗಿ ಗಮನಿಸಿದರೆ ಇದು ಫೇಕ್, ಪಬ್ಲಿಸಿಟಿ ಗಿಮಿಕ್ ಎನ್ನುವುದು ಅರ್ಥವಾಗುತ್ತದೆ ಎಂದು ಕೆಲವರು ವಾದಿಸುತ್ತಿದ್ದಾರೆ. ಆದರೆ ಈ…

Read More

ಬೆಂಗಳೂರು: ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ ಎಂದು ಬಿ.ವೈ ವಿಜಯೇಂದ್ರ ಹೇಳಿದರು. “ಜಗನ್ನಾಥ ಭವನ”ದಲ್ಲಿ ಮಾತನಾಡಿದ ಅವರು, ತಾನು ಹಿಂದೂ ವಿರೋಧಿ ಎಂಬುದನ್ನು ಈ ಸರಕಾರವು ರಾಜ್ಯ ಮತ್ತು ದೇಶದ ಜನತೆಗೆ ಪದೇಪದೇ ನೆನಪು ಮಾಡುವ ಕೆಲಸ ಮಾಡುತ್ತಿದೆ.  ನಿನ್ನೆ ಹುಬ್ಬಳ್ಳಿಯಲ್ಲಿ 31 ವರ್ಷದ ಹಳೆಯ ಕೇಸನ್ನು ರೀ ಓಪನ್ ಮಾಡಿ ಹಿಂದೂ ಕಾರ್ಯಕರ್ತ ಶ್ರೀಕಾಂತ ಪೂಜಾರಿಯವರನ್ನು ಬಂಧಿಸಿದ್ದನ್ನು ಬಿಜೆಪಿ ಬಲವಾಗಿ ಖಂಡಿಸುತ್ತದೆ ಎಂದು ತಿಳಿಸಿದರು. ಇನ್ನೂ ಇದರ ವಿರುದ್ಧವಾಗಿ ಹುಬ್ಬಳ್ಳಿಯಲ್ಲಿ ಕರಸೇವಕನ ಬಂಧನಕ್ಕೆ ಖಂಡನೆ ವ್ಯಕ್ತಪಡಿಸಿ ಬುಧವಾರ ರಾಜ್ಯ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಪ್ರತಿಭಟನೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಕರೆ ಕೊಟ್ಟಿದ್ದಾರೆ.   https://ainlivenews.com/golden-opportunity-in-the-postal-department-apply-today-salary-20k/ ಜನವರಿ 22ರಂದು ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಪ್ರತಿಷ್ಠಾಪನೆ ಆಗುವ ಶುಭ ಸಂದರ್ಭದಲ್ಲಿ ಇಡೀ ರಾಜ್ಯ ಮಾತ್ರವಲ್ಲದೆ ದೇಶದಾದ್ಯಂತ ಕೋಟ್ಯಂತರ ಹಿಂದೂ ಕಾರ್ಯಕರ್ತರು ಸಂತಸದಲ್ಲಿದ್ದಾರೆ; ದೇಶದೆಲ್ಲೆಡೆ ಸಂಭ್ರಮದ ವಾತಾವರಣ ಇದೆ.…

Read More

ತಮನ್ನಾ ಲಂಡನ್ ಗೆ ಹಾರಿದ್ದಾರೆ. ಹೊಸ ವರ್ಷವನ್ನು ಬರಮಾಡಿಕೊಳ್ಳಲು ಅವರು ಬಾಯ್ ಫ್ರೆಂಡ್ ಜೊತೆ ವಿಮಾನ ಏರಿದ್ದಾರೆ. ಲಂಡನ್ (London) ನಲ್ಲಿ ಸುತ್ತಾಡುವ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಜೊತೆಗೆ ಇತ್ತೀಚಿನ ದಿನಗಳಲ್ಲಿ ಈ ಜೋಡಿಯ ಸುತ್ತಾಟವೂ ಹೆಚ್ಚಾಗಿದೆ. ತಮನ್ನಾ (Tamannaah) ಮತ್ತು ಬಾಲಿವುಡ್ ನಟ ವಿಜಯ್ ವರ್ಮಾ (Vijay Varma) ಲವ್ವಿಡವ್ವಿ ವಿಚಾರ ಗುಟ್ಟಿನ ಸಂಗತಿಯೇನೂ ಅಲ್ಲ. ಇಬ್ಬರೂ ಒಟ್ಟೊಟ್ಟಿಗೆ ಪ್ರವಾಸ ಮಾಡುತ್ತಿದ್ದಾರೆ,  ಹಲವಾರು ಪ್ರಾಜೆಕ್ಟ್ ಗಳಲ್ಲಿ ಒಟ್ಟಿಗೆ ನಟಿಸುತ್ತಿದ್ದಾರೆ. ಇದೀಗ ಈ ಜೋಡಿ ಹೊಸ ಜೀವನಕ್ಕೆ ಕಾಲಿಡಲು ನಿರ್ಧರಿಸಿದೆ ಎನ್ನುವ ಮಾಹಿತಿ ಹರಿದಾಡುತ್ತಿದೆ. 2024 ಫೆಬ್ರವರಿಯಲ್ಲಿ ಅವರು ಮದುವೆ (Marriage) ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಮದುವೆ ವಿಚಾರವನ್ನು ಈ ಜೋಡಿ ಅಧಿಕೃತವಾಗಿ ಹೇಳದೇ ಇದ್ದರೂ, ಮಾಧ್ಯಮಗಳ ಜೊತೆ ಮಾತನಾಡಿರುವ ವಿಜಯ್ ವರ್ಮಾ, ‘ನನಗೆ ತಮನ್ನಾ ಮೇಲೆ ಮತ್ತಷ್ಟು ಪ್ರೀತಿಯಾಗಿದೆ (Love). ಹೆಚ್ಚೆಚ್ಚು ಪ್ರೀತಿ  ಮೂಡುತ್ತಿದೆ’ ಎಂದು ಹೇಳುವ ಮೂಲಕ ತಮ್ಮಿಬ್ಬರ ನಡುವಿನ ಡೇಟಿಂಗ್ ಅನ್ನು ಖಚಿತ ಪಡಿಸಿದ್ದಾರೆ.

Read More

ಬೆಂಗಳೂರು: ಕೇವಲ ಇದೊಂದೇ ಪ್ರಕರಣ ಅಲ್ಲ, ಎಲ್ಲ ಕೇಸ್ ಗಳನ್ನೂ ರಿವ್ಯೂ ಮಾಡುವ ಸಂದರ್ಭದಲ್ಲಿ ಈ ಪ್ರಕರಣದ ಬಗ್ಗೆಯೂ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಡಾ.ಜಿ ಪರಮೇಶ್ವರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗಿಯಾಗಿದ್ದ ಹುಬ್ಬಳ್ಳಿಯ ಕಾರ್ಯಕರ್ತರ ಬಂಧನ ವಿಚಾರವಾಗಿ ಮಾತನಾಡಿದರು. ಬಿಜೆಪಿಯವರು ಸರ್ಕಾರ ನಡೆಸಿದ್ದಾರೆ ಹಾಗೂ ಬಿಎಸ್ ಯಡಿಯೂರಪ್ಪ ನವರೂ ಸರ್ಕಾರ ನಡೆಸಿದ್ದಾರೆ. ಕೇವಲ ಇದೊಂದೇ ಪ್ರಕರಣ ಅಲ್ಲ, ಎಲ್ಲ ಕೇಸ್ ಗಳನ್ನೂ ರಿವ್ಯೂ ಮಾಡುವ ಸಂದರ್ಭದಲ್ಲಿ ಈ ಪ್ರಕರಣದ ಬಗ್ಗೆಯೂ ಕ್ರಮ ಕೈಗೊಳ್ಳಲಾಗಿದೆ ಎಂದರು.  ಬಿಜೆಪಿ ನಾಯಕರು ವಿನಾ ಕಾರಣ ರಾಜಕೀಯ ಉದ್ದೇಶದಿಂದ ಟೀಕೆ ಮಾಡಬಾರದು. ಪೊಲೀಸರು ಈ ನೆಲದ ಕಾನೂನಿನ ಪ್ರಕಾರ ನಡೆದುಕೊಂಡಿದ್ದಾರೆ. ಹಾಗಾದರೆ, ಬಾಕಿ ಉಳಿದ ಪ್ರಕರಣಗಳಲ್ಲಿ ಅರೆಸ್ಟ್ ಆದವರು ಹಿಂದೂಗಳಲ್ವಾ? ಅವರಿಗೊಂದು ನ್ಯಾಯ ಇವರಿಗೊಂದು ನ್ಯಾಯವಾ? ಎಂದು ಪರಮೇಶ್ವರ್ ಪ್ರಶ್ನಿಸಿದರು. https://ainlivenews.com/golden-opportunity-in-the-postal-department-apply-today-salary-20k/ ಕಾನೂನು ಪ್ರಕಾರ ಏನು ಆಗುತ್ತದೆಯೋ ಆಗುತ್ತದೆ. ಇದು ಕೇವಲ ಹುಬ್ಬಳ್ಳಿಯಲ್ಲಿ ಮಾತ್ರವಲ್ಲ, ಎಲ್ಲ ಕಡೆಯೂ ಹಳೆಯ ಕೇಸ್ ರಿವ್ಯೂ ಮಾಡ್ತಿದ್ದೇವೆ. ಈ ಕಡೆಯಾದರೂ…

Read More

ನವದೆಹಲಿ: ಜ.22 ರಂದು ಅಯೋಧ್ಯೆ (Ayodhya) ರಾಮಮಂದಿರದಲ್ಲಿ (Ram Mandir) ನಡೆಯಲಿರುವ ಪ್ರಾಣ ಪ್ರತಿಷ್ಠಾಪನೆಗೆ ಮೈಸೂರಿನ ಶಿಲ್ಪಿ ಯೋಗಿರಾಜ್‌ ಅರುಣ್‌ ಕೆತ್ತನೆ ಮಾಡಿರುವ ಮೂರ್ತಿ ಆಯ್ಕೆ ಯಾಗಿದೆ. ಇದಕ್ಕೆ ಯೋಗಿರಾಜ್‌ ತಾಯಿ ಸಂತಸ ವ್ಯಕ್ತಪಡಿಸಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಎಕ್ಸ್‌ ಖಾತೆಯಲ್ಲಿ ಈ ವಿಚಾರವನ್ನು ದೃಢಪಡಿಸಿದ್ದಾರೆ. “ಎಲ್ಲಿ ರಾಮನೋ ಅಲ್ಲಿ ಹನುಮನು”. ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ಕೆ ವಿಗ್ರಹ ಆಯ್ಕೆ ಅಂತಿಮಗೊಂಡಿದೆ. ನಮ್ಮ ನಾಡಿನ ಹೆಸರಾಂತ ಶಿಲ್ಪಿ ನಮ್ಮ ಹೆಮ್ಮೆಯ ಯೋಗಿರಾಜ್‌ ಅರಣ್‌ (Yogiraj Arun) ಅವರು ಕೆತ್ತಿರುವ ಶ್ರೀರಾಮನ ವಿಗ್ರಹ ಪುಣ್ಯಭೂಮಿ ಅಯೋಧ್ಯೆಯಲ್ಲಿ ಪ್ರತಿಷ್ಠಾಪನೆಗೊಳ್ಳಲಿದೆ. ರಾಮ ಹನುಮರ ಅವಿನಾಭಾವ ಸಂಬಂಧಕ್ಕೆ ಇದು ಮತ್ತೊಂದು ನಿದರ್ಶನ. ಹನುಮನ ನಾಡು ಕರ್ನಾಟಕದಿಂದ ರಾಮಲಲ್ಲಾನಿಗೆ ಇದೊಂದು ಮಹತ್ವಪೂರ್ಣ ಸೇವೆ ಎಂದರೆ ತಪ್ಪಾಗಲಾರದು ಎಂದು ಜೋಶಿ ಟ್ವೀಟ್‌ ಮಾಡಿದ್ದರು. https://ainlivenews.com/golden-opportunity-in-the-postal-department-apply-today-salary-20k/ ಯೋಗಿರಾಜ್ ಅವರ ತಾಯಿ ಸರಸ್ವತಿ, ನನ್ನ ಮಗ 6 ತಿಂಗಳ ಹಿಂದೆಯೇ ಅಯೋಧ್ಯೆಗೆ ಹೋಗಿದ್ದಾನೆ. ಅವನ ಬೆಳವಣಿಗೆ ಕಂಡು…

Read More

ನವದೆಹಲಿ: ಅಯೋಧ್ಯೆಯಲ್ಲಿ (Ayodhya) ರಾಮಮಂದಿರ (Ram Mandir) ಉದ್ಘಾಟನೆ ಕಾರ್ಯಕ್ರಮ ಸಮೀಪಿಸುತ್ತಿದ್ದಂತೆ ದೇವಾಲಯದ ಹೆಸರಿನಲ್ಲಿ ಭಕ್ತರನ್ನು ಲೂಟಿ ಮಾಡುವ ಆಘಾತಕಾರಿ ದಂಧೆ ಬೆಳಕಿಗೆ ಬಂದಿದೆ. ಸೈಬರ್ ಕ್ರಿಮಿನಲ್‌ಗಳು ದೇವಸ್ಥಾನದ ಹೆಸರಿನಲ್ಲಿ ದೇಣಿಗೆ ಪಡೆಯಲು ಸಾಮಾಜಿಕ ಜಾಲತಾಣಗಳಲ್ಲಿ ಸಂದೇಶಗಳನ್ನು ಹಾಕಿದ್ದಾರೆ ಎಂದು ವಿಶ್ವ ಹಿಂದೂ ಪರಿಷತ್ (ವಿಹೆಚ್‌ಪಿ) ಎಚ್ಚರಿಸಿದೆ. QR ಕೋಡ್ ಅನ್ನು ಸ್ಕ್ಯಾನ್ ಮಾಡಿ, ರಾಮಮಂದಿರ ದೇವಾಲಯಕ್ಕಾಗಿ ದೇಣಿಗೆ ನೀಡುವಂತೆ ಸಂದೇಶ ಕಳುಹಿಸಲಾಗಿದೆ.  https://twitter.com/vinod_bansal/status/1741334321120854430?ref_src=twsrc%5Etfw%7Ctwcamp%5Etweetembed%7Ctwterm%5E1741334321120854430%7Ctwgr%5E5d2ffc545686c3435927dd62babc4a2377d27e8f%7Ctwcon%5Es1_&ref_url=https%3A%2F%2Fpublictv.in%2Fahead-of-ram-temple-event-big-warning-on-qr-code-fraud-to-loot-devotees%2F ವಿಹೆಚ್‌ಪಿ ವಕ್ತಾರ ವಿನೋದ್ ಬನ್ಸಾಲ್ ಮಾತನಾಡಿ, ಈ ವಿಷಯವನ್ನು ದೆಹಲಿ ಮತ್ತು ಉತ್ತರ ಪ್ರದೇಶದ ಗೃಹ ಸಚಿವಾಲಯ ಮತ್ತು ಪೊಲೀಸ್ ಆಯುಕ್ತರಿಗೆ ತಿಳಿಸಲಾಗಿದೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ, ಮಂದಿರದ ನಿರ್ಮಾಣದ ಉಸ್ತುವಾರಿ ವಹಿಸಿರುವ ಟ್ರಸ್ಟ್ ಹಣವನ್ನು ಸಂಗ್ರಹಿಸಲು ಯಾರಿಗೂ ಅಧಿಕಾರ ನೀಡಿಲ್ಲ ಎಂದು ಒತ್ತಿ ಹೇಳಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ನ್ಯಾಸ್ ನಿಧಿ ಸಂಗ್ರಹಿಸಲು ಯಾರಿಗೂ ಅಧಿಕಾರ ನೀಡಿಲ್ಲ. ನಾನು ಗೃಹ ಸಚಿವಾಲಯ, ಉತ್ತರ ಪ್ರದೇಶ ಡಿಜಿಪಿ ಮತ್ತು ದೆಹಲಿಯ ಪೊಲೀಸ್ ಆಯುಕ್ತರಿಗೆ ಪತ್ರ…

Read More

ಬೆಂಗಳೂರು: ಅವನು ವ್ಯಾಸಂಗ ಮಾಡಿದ್ದು ಕೇವಲ 10ನೇ ತರಗತಿ.. ಆಗಿದ್ದು ಲೋಕಾಯುಕ್ತ ಅಧಿಕಾರಿ.. ಆಫೀಸರ್ ಆಗಲುಕಾರಣವಾಗಿದ್ದು ಸಿನಿಮಾ.. ಸಿನಿಮಾ ನೋಡಿ ಮಾಸ್ಟರ್ ಪ್ಲಾನ್ ಮಾಡಿದವನೇ ಹಣ ಮಾಡೋಕೆ ಶುರುವಿಟ್ಟುಕೊಂಡಿದ್ದ.. ಹಣ ಮಾಡು.. ಮಜಾ ಮಾಡು ಎನ್ನುತ್ತಿದ್ದವನ ಐನಾತಿ ಸ್ಟೋರಿ ಇಲ್ಲಿದೆ.. ಸಿನಿಮಾ ಸ್ಟೈಲ್ ನಲ್ಲಿ ಸರ್ಕಾರಿ ಅಧಿಕಾರಿಗಳಿಗೆ ವಂಚನೆ ಮಾಡ್ತಿದ್ದ ಖತರ್ನಾಕ್ ಆರೋಪಿಯೊಬ್ಬನನ್ನ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.. ಈ ಫೋಟೋದಲ್ಲಿದಾನಲ್ಲ ಇವ್ನೇ ನೋಡಿ ಆ ಖತರ್ನಾಕ್.. ಹೆಸ್ರು ಶ್ರೀನಾಥ್ ರೆಡ್ಡಿ.. ನೋಡೋಕೆ ಕಳ್ಳನ್ ತರ ಇದಾನೆ.. ಆದ್ರೆ ಹೇಳ್ತಿದ್ದು ಮಾತ್ರ ಲೋಕಾಯಕ್ತ ಅಧಿಕಾರಿ ಅಂತಾ.. ಸರ್ಕಾರಿ ಅಧಿಕಾರಿಗಳನ್ನೇ ಟಾರ್ಗೆಟ್ ಮಾಡ್ತಿದ್ದ ಇವ ಸ್ಟೈಲಾಗಿ ಬೆದರಿಸಿ ಅವ್ರಿಂದ ಲಕ್ಷ ಲಕ್ಷ ಸುಲಿಗೆ ಮಾಡ್ತಿದ್ದ.. ಲೋಕಾಯಕ್ತ ಅಧಿಕಾರಿ ಅಂತಾ ಲಕ್ಷ ಲಕ್ಷ ಪೀಕ್ತಿದ್ದವನನ್ನ ಸಿಸಿಬಿ ಪೊಲೀಸರು ಲಾಕ್ ಅಪ್ ನಲ್ಲಿ ಹಾಕಿದ್ದಾರೆ. https://ainlivenews.com/21st-chitrasanthe-project-in-bangalore-do-you-know-what-is-happening-this-time/ ಶ್ರೀನಾಥ್ ರೆಡ್ಡಿ ಮೂಲತಃ ಆಂಧ್ರದವ್ನಾಗಿದ್ದ ಈತ ಓದಿದ್ದು 10ನೇ ತರಗತಿ.. ಈತನ ಸ್ಟೋರಿ ಮಾತ್ರ ಯಾವ ಸಿನಿಮಾಗೂ ಕಮ್ಮಿ ಇಲ್ಲ..…

Read More

ಕೊಪ್ಪಳ: ಬರದ ಹಿನ್ನೆಲೆ ತಾತ್ಕಾಲಿಕವಾಗಿ 2 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕೊಪ್ಪಳ ತಾಲೂಕಿನ ಬಸಾಪುರ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರದ ಹಿನ್ನೆಲೆ ತಾತ್ಕಾಲಿಕವಾಗಿ 2 ಸಾವಿರ ಪರಿಹಾರ ಘೋಷಣೆ ಮಾಡಲಾಗಿದೆ. ತಾಂತ್ರಿಕ ಸಮಸ್ಯೆಯಿಂದ ಇನ್ನೂ ಬರ ಪರಿಹಾರ ತಲುಪಿಲ್ಲ. ಕೂಡಲೇ 2 ಸಾವಿರ ರೂ. ಪರಿಹಾರ ನೀಡುತ್ತೇವೆ ಎಂದು ಸ್ಪಷ್ಟಪಡಿಸಿದರು. ರಾಮ ಜನ್ಮಭೂಮಿ ಕರಸೇವೆಗೂ ಮೊದಲು ಹುಬ್ಬಳ್ಳಿಯಲ್ಲಿ ನಡೆದ ಗಲಾಟೆ ಪ್ರಕರಣದಲ್ಲಿ ಪೊಲೀಸರು ಆರೋಪಿಗಳನ್ನು ಬಂಧಿಸಿದ ವಿಚಾರದ ಕುರಿತು ಮಾತನಾಡಿದ ಅವರು, ಹಳೇ ಪ್ರಕರಣಗಳನ್ನೆಲ್ಲಾ ವಿಲೇವಾರಿ ಮಾಡುವಂತೆ ಸೂಚಿಸಿದ್ದೇವೆ. https://ainlivenews.com/how-much-do-you-know-about-eco-friendly-comet-ev-electric-vehicle/ 1992ರಲ್ಲಿ ಹುಬ್ಬಳ್ಳಿಯಲ್ಲಿ ನಡೆದ ಗಲಭೆ ಪ್ರಕರಣದ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ. ತಪ್ಪಿತಸ್ಥರ ವಿರುದ್ಧ ಕ್ರಮ ಆಗುತ್ತಿದೆ. ಅದು ಎಷ್ಟೇ ವರ್ಷ ಆಗಲಿ, ತಪ್ಪಿತಸ್ಥರನ್ನು ಸುಮ್ಮನೆ ಬಿಡಬೇಕಾ? ನಾವು ದ್ವೇಷದ ರಾಜಕಾರಣ ಮಾಡುತ್ತಿಲ್ಲ. ಹೈಕೋರ್ಟ್ ನಿರ್ದೇಶನದಂತೆ ನಾವು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಸಮಜಾಯಿಷಿ ನೀಡಿದರು.

Read More