Author: AIN Author

ಕನಕಗಿರಿ:- ಅನೈತಿಕ ಚಟುವಟಿಕೆಗಳ ತಾಣವಾಗಿ ಪಟ್ಟಣದ ರಾಜಬೀದಿಯಲ್ಲಿರುವ ಹಳೆಯ ಪೊಲೀಸ್ ಠಾಣೆಯ ಕಟ್ಟಡ ಪಾಳು ಬಿದ್ದಿದೆ. ಪಟ್ಟಣ ಪಂಚಾಯಿತಿ ಮೂಲಗಳ ಪ್ರಕಾರ ಈ ಕಟ್ಟಡ ಮುಜರಾಯಿ ಇಲಾಖೆಗೆ ಸಂಬಂಧಿಸಿದ್ದು ಎನ್ನಲಾಗುತ್ತಿದೆ. ‘ಪೊಲೀಸ್ ಇಲಾಖೆಯವರು ಬಹಳ ವರ್ಷಗಳ ಕಾಲ ಪೊಲೀಸ್ ಠಾಣೆಯನ್ನಾಗಿ ಉಪಯೋಗಿಸಿದ್ದಾರೆ. ದಶಕದ ಹಿಂದೆ ಲಿಂಗಸಗೂರು-ಗಂಗಾವತಿ ರಸ್ತೆಯಲ್ಲಿ ಹೊಸ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣಗೊಂಡ ಹಿನ್ನೆಲೆಯಲ್ಲಿ ಪೊಲೀಸ್ ಠಾಣೆ ಕಟ್ಟಡ ಖಾಲಿ ಬಿದ್ದಿತ್ತು. ಕಂದಾಯ ಇಲಾಖೆಯವರು ಉಪ ತಹಶೀಲ್ದಾರ್ ಕಚೇರಿಯನ್ನಾಗಿ ಬಳಸಿಕೊಂಡರು. ಕಟ್ಟಡವು ಪಟ್ಟಣದ ಹೃದಯ ಭಾಗದಲ್ಲಿರುವ ಕಾರಣ ಉಪ ತಹಶೀಲ್ದಾರ್, ಕಂದಾಯ ನಿರೀಕ್ಷಕರು ಹಾಗೂ ವಿವಿಧ ಗ್ರಾಮಗಳ ಗ್ರಾಮ ಆಡಳಿತ ಅಧಿಕಾರಿಗಳು ಇಲ್ಲಿ ಕೆಲಸ ಮಾಡುತ್ತಿದ್ದರು. ಕಳೆದ ವರ್ಷದ ಹಿಂದೆ ಕಲಕೇರಿ ಗ್ರಾಮದ ರಸ್ತೆಯಲ್ಲಿ ಹೊಸ ಉಪ ತಹಶೀಲ್ದಾರ್ ಕಚೇರಿ ಆರಂಭಗೊಂಡ ಪರಿಣಾಮ ಪೊಲೀಸ್ ಠಾಣೆ ಕಟ್ಟಡ ಪಾಳು ಬಿದ್ದಿದ್ದು ಅನೈತಿಕ ಚಟುವಟಿಕೆಗಳ ತಾಣವಾಗಿ ಪರಿವರ್ತನೆಯಾಗಿದೆ’ ಎಂದು ಪ್ರಮುಖರಾದ ದೊಡ್ಡಬಸಪ್ಪ ಭತ್ತದ, ಪಾಮಣ್ಣ ಅರಳಿಗನೂರು, ಕೊಟ್ರೇಶ ಮಡಿವಾಳರ ದೂರಿದರು. ರಾಜಬೀದಿ,…

Read More

ಅಯೋಧ್ಯೆ (ಉತ್ತರ ಪ್ರದೇಶ): ಮುಂಬರುವ ಜನವರಿ 22, ಹಿಂದೂಗಳಿಗೆ ಮತ್ತು ಶ್ರೀರಾಮನ ಭಕ್ತರಿಗೆ ಸ್ಮರಣೀಯ ದಿನ. ಬಾಲ ರಾಮ (ರಾಮಲಲ್ಲಾ) ಅಯೋಧ್ಯೆಯ (Ayodhya Ram Mandir) ತನ್ನ ಅರಮನೆಯಲ್ಲಿ ಮತ್ತೆ ಪಟ್ಟಾಭಿಷಿಕ್ತರಾಗುತ್ತಿದ್ದಾರೆ. ಅಂದು ಪೂಜೆ, ಮಂತ್ರ, ವಿಧಿವಿಧಾನಗಳ ಮೂಲಕ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದೆ. ವಿಶ್ವದಾದ್ಯಂತ ಇರುವ ಸಮಸ್ತ ಹಿಂದೂಗಳ ಗಮನ ಸೆಳೆದಿರುವ ರಾಮಮಂದಿರ ಹಲವು ವಿಶೇಷತೆ ಹೊಂದಿದೆ. ಅಷ್ಟೇ ಅಲ್ಲ, ದೇವಾಲಯದ ಗರ್ಭಗುಡಿಯೂ ಹಲವು ವೈಶಿಷ್ಟ್ಯಗಳನ್ನು ಒಳಗೊಂಡಿದೆ. ಕಳೆದ ವರ್ಷ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ರಾಮಮಂದಿರದ ಪವಿತ್ರ ಗರ್ಭಗುಡಿಯ (Sanctum Sanctorum) ಶಿಲಾನ್ಯಾಸ ನೆರವೇರಿಸಿದ್ದರು. ಮಂತ್ರ ಪಠಣದ ನಡುವೆ ಗರ್ಭಗುಡಿಯ ಶಂಕುಸ್ಥಾಪನೆ ನೆರವೇರಿತ್ತು. ಇದಾದ ಬಳಿಕ ಅದರ ನಿರ್ಮಾಣ ಕಾರ್ಯ ಆರಂಭವಾಯಿತು. ಈಗ ಅದು ಸಿದ್ಧವಾಗಿದೆ. ಅಯೋಧ್ಯೆ ರಾಮಮಂದಿರದ ಗರ್ಭಗುಡಿಯು 20 ಅಡಿ ಉದ್ದ ಮತ್ತು 20 ಅಡಿ ಅಗಲವಿದೆ. ಅದರ ಎತ್ತರವನ್ನು 161 ಅಡಿ. ಹಿಂದೆ ಭಾರತದ ದೇವಾಲಯಗಳಲ್ಲೇ ಅತಿ ದೊಡ್ಡ ಗರ್ಭಗುಡಿಯನ್ನು…

Read More

ಟೋಕಿಯೊ: ಒಂದೇ ದಿನ 155 ಬಾರಿ ಭೂಕಂಪ ಸಂಭವಿಸಿದ ಪರಿಣಾಮ ಜಪಾನ್‌ನಲ್ಲಿ (Japan Earthquakes) 13 ಮಂದಿ ಸಾವಿಗೀಡಾಗಿದ್ದಾರೆ. ಹೊಸ ವರ್ಷದಂದೇ ಭೂಕಂಪ ಸಂಭವಿಸಿ ಅಪಾರ ಸಾವು-ನೋವಿಗೆ ಕಾರಣವಾಗಿದೆ. ಹೊನ್ಶುವಿನ ಮುಖ್ಯ ದ್ವೀಪದಲ್ಲಿರುವ ಇಶಿಕಾವಾ ಪ್ರಾಂತ್ಯದಲ್ಲಿ 7.5 ತೀವ್ರತೆಯ ಭೂಕಂಪವು ಒಂದು ಮೀಟರ್ ಎತ್ತರದ ಸುನಾಮಿ ಅಲೆಗಳನ್ನು ಸೃಷ್ಟಿಸಿತು. ಭೂಕಂಪದ ತೀವ್ರತೆಗೆ ಕಟ್ಟಡಗಳು ನೆಲಕ್ಕುರುಳಿವೆ, ಪ್ರಮುಖ ಬಂದರು ಬೆಂಕಿ ಅವಘಡಕ್ಕೆ ಕಾರಣವಾಯಿತು, ರಸ್ತೆಗಳು ಬಿರುಕು ಬಿಟ್ಟಿವೆ ಜಪಾನ್‌ನಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದಿಂದಾಗಿ ಹಲವಾರು ಸಾವುನೋವುಗಳು, ಕಟ್ಟಡ ಕುಸಿತಗಳು ಮತ್ತು ಬೆಂಕಿ ಸೇರಿದಂತೆ ಬಹಳ ವ್ಯಾಪಕ ಹಾನಿಯಾಗಿದೆ ಎಂದು ವಿಪತ್ತು ನಿರ್ವಹಣಾ ಸಭೆಯ ಬಳಿಕ ಪ್ರಧಾನ ಮಂತ್ರಿ ಫ್ಯೂಮಿಯೊ ಕಿಶಿಡಾ ತಿಳಿಸಿದ್ದಾರೆ. ವಾಜಿಮಾ ಬಂದರಿನಲ್ಲಿ ಏಳು ಮಂದಿ ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ ಎಂದು ಕ್ಯೋಡೋ ಸುದ್ದಿ ಸಂಸ್ಥೆ ವರದಿ ಮಾಡಿದೆ. ಏರಿಯಲ್ ನ್ಯೂಸ್ ಫೂಟೇಜ್ ಬಂದರಿನಲ್ಲಿ ಭೂಕಂಪದಿಂದ ಬೆಂಕಿ ಅವಘಡ ಸಂಭವಿಸಿತು. ಏಳು ಅಂತಸ್ತಿನ ಕಟ್ಟಡವು ಕುಸಿದಿದೆ. ಈ ಪ್ರದೇಶದಲ್ಲಿ ಸುಮಾರು 45,000…

Read More

ಟೋಕಿಯೊ: ಹೊಸ ವರ್ಷದ ಆರಂಭದಲ್ಲೇ ಜಪಾನ್‍ಗೆ (Japan) ತೀವ್ರ ಆಘಾತ ಎದುರಾಗಿದೆ. ಈಶಾನ್ಯ ಜಪಾನ್‍ನಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದ್ದು, ಇಶಿಕಾವಾ ಪ್ರಾಂತ್ಯದ ವಾಜಿಮಾ ನಗರಕ್ಕೆ 1.2 ಮೀಟರ್‌ಗಳಷ್ಟು ಎತ್ತರದ ತೆರೆಗಳು ಅಪ್ಪಳಿಸುತ್ತಿದೆ. ಇಶಿಕಾವಾ, ನೈಕತಾ ಮತ್ತು ಟೊಯಾಮಾ ನಗರಗಳ ಕರಾವಳಿ ತೀರಗಳಲ್ಲಿ ಸುನಾಮಿ (Tsunami) ಎಚ್ಚರಿಕೆ ನೀಡಲಾಗಿದೆ. ಇಶಿಕಾವಾ ಜಿಲ್ಲೆಯ ಕರಾವಳಿ ನೋಟೋಗೆ 5 ಮೀಟರ್ ಎತ್ತರದವರೆಗಿನ ಬೃಹತ್ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ. ನೈಗತ ಮತ್ತು ಟೊಯಾಮಾ ಸೇರಿದಂತೆ ಉಳಿದ ಕೆಲವು ಕರಾವಳಿ ತೀರಗಳಲ್ಲಿ 3 ಮೀಟರ್‍ವರೆಗೂ ಅಲೆಗಳು ಏಳಬಹುದು ಎಂದು ಜಪಾನ್ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ ಸ್ಥಳೀಯ ಕಾಲಮಾನ ಸಂಜೆ 4:10 ಸುಮಾರಿಗೆ ಇಶಿಕಾವಾ ಪ್ರಾಂತ್ಯದ ನೋಟೊ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನದ ತೀವ್ರತೆ ದಾಖಲಾಗಿದೆ. ಜಪಾನ್‍ನ ಈಶಾನ್ಯ ಭಾಗದ ನನಾವೋ ಭೂ ಕಂಪನದ ಕೇಂದ್ರ ಬಿಂದು ಎಂದು ವರದಿಯಾಗಿದೆ.

Read More

ಹುಬ್ಬಳ್ಳಿ: 1992ರ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ಶ್ರೀಕಾಂತ ಪೂಜಾರಿ ಅವರ ಬಂಧನ ಖಂಡಿಸಿ ನಗರದ ಶಹರ ಪೊಲೀಸ್‌ ಠಾಣೆ ಎದುರು ಧರಣಿ ನಡೆಸಿದ್ದ ವಿಶ್ವ ಹಿಂದೂ ಪರಿಷತ್‌ ಕಾರ್ಯಕರ್ತರು, ಡಿಸಿಪಿ ರಾಜೀವ್‌ ಎಂ. ಅವರು ಭರವಸೆ ನೀಡಿದ ಬಳಿಕ ಧರಣಿ ವಾಪಸ್‌ ಪಡೆದರು. ಡಿಸಿಪಿ ರಾಜೀವ್‌ ಎಂ. ಅವರು ಪೊಲೀಸ್‌ ಅಧಿಕಾರಿಗಳ ಜೊತೆ ಸೇರಿ ಪ್ರತಿಭಟನಕಾರರ ಮನವೊಲಿಸಿದರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘1992ರ ಗಲಭೆ ಪ್ರಕರಣದಲ್ಲಿ ಭಾಗಿಯಾದವರ ಸತ್ಯಾಸತ್ಯತೆ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ’ ಎಂದರು. ‘ಪ್ರಕರಣಕ್ಕೆ ಸಂಬಂಧಿಸಿ ಇನ್‌ಸ್ಪೆಕ್ಟರ್‌ ಅವರು ಆರೋಪಿ ಬಂಧನಕ್ಕೆ ಮೊದಲು ವಾರಂಟ್ ನೀಡದ ಹಾಗೂ ತೆಗೆದುಕೊಂಡ ಕ್ರಮಗಳ ಕುರಿತು ಆಂತರಿಕ ತನಿಖೆ ನಡೆಸುತ್ತೇವೆ. ಕ್ರಮ ತಪ್ಪಾಗಿದ್ದರೆ ಮೇಲಧಿಕಾರಿಗಳಿಗೆ ವರದಿ ಸಲ್ಲಿಸುತ್ತೇವೆ. ಕೆಲವು ಪ್ರಕರಣದಲ್ಲಿ ಅಧಿಕಾರಿಗಳು ವಿವೇಚನೆಯಿಂದ ಕಾರ್ಯ ನಿರ್ವಹಿಸಬೇಕಾಗುತ್ತದೆ. ಇನ್ನು ಮುಂದೆ ಈ ರೀತಿ ಆಗದಂತೆ ಎಚ್ಚರಿಕೆ ಹೆಜ್ಜೆ ಇಡುತ್ತೇವೆ’ ಎಂದು ತಿಳಿಸಿದರು. ‘ಆರೋಪಿಯನ್ನು ಬಂಧಿಸಿರುವ ಸಂದರ್ಭ ತಪ್ಪಾಗಿತ್ತು ಎಂದು ಇನ್‌ಸ್ಪೆಕ್ಟರ್ ಹೇಳಿರುವುದಾಗಿ ಡಿಸಿಪಿ…

Read More

ಬೆಂಗಳೂರು: 2023ರಲ್ಲಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ರೋಹಿತ್ ಹಾಗೂ ವಿರಾಟ್ ಅತಿ ಹೆಚ್ಚು ರನ್ ಸಿಡಿಸಿದ ಟಾಪ್ 2 ಆಟಗಾರರಾಗಿ ವಿಶ್ವ ಕ್ರಿಕೆಟ್ ನ ಗಮನ ಸೆಳೆದಿದ್ದಾರೆ. ಗಾಯದ ಸಮಸ್ಯೆಯಿಂದ ಹೊರಬಂದ ನಂತರ ಕನ್ನಡಿಗ ಕೆ.ಎಲ್.ರಾಹುಲ್ ಅತ್ಯುತ್ತಮ ಫಾರ್ಮ್ ನಲ್ಲಿದ್ದಾರೆ. ಇನ್ನು ಕೆಲವು ಆಟಗಾರರು ಐಪಿಎಲ್ ಹಾಗೂ ಸ್ಥಳೀಯ ಕ್ರಿಕೆಟ್ ನಲ್ಲಿ ಮಿಂಚು ಹರಿಸುವಲ್ಲಿ ಎಡವಿದ್ದರಿಂದ ಟೀಮ್ ಇಂಡಿಯಾದಲ್ಲಿ ಸ್ಥಾನ ಪಡೆಯುವಲ್ಲಿ ಮುಗ್ಗರಿಸಿದ್ದರೆ, ಇನ್ನೂ ಕೆಲವರು ಸಿಕ್ಕ ಅವಕಾಶವನ್ನು ಕೈಚೆಲ್ಲಿದ್ದಾರೆ‌. ಈ ವರ್ಷ ಟೀಮ್ ಇಂಡಿಯಾ ಪರ ಆಡಿ ಕಳಪೆ ಪ್ರದರ್ಶನ ತೋರಿದ ಟಾಪ್ 5 ಆಟಗಾರರ ವಿವರ ಇಲ್ಲಿದೆ. ರಾಹುಲ್ ತ್ರಿಪಾಠಿ ಟೀಮ್ ಇಂಡಿಯಾದ ಭವಿಷ್ಯದ ಫಿನಿಶರ್ ಎಂದೇ ಬಿಂಬಿಸಲಾಗಿದ್ದ ರಾಹುಲ್ ತ್ರಿಪಾಠಿ ಕೂಡ 2023ರಲ್ಲಿ ಸಿಡಿಲಬ್ಬರದ ಬ್ಯಾಟಿಂಗ್ ನಡೆಸುವಲ್ಲಿ ವಿಫಲರಾಗಿದ್ದಾರೆ. ಭಾರತ ತಂಡದ ಪರ ಆಡಿದ 5 ಟಿ20-ಐ ಪಂದ್ಯಗಳಲ್ಲಿ 19.40 ಸರಾಸರಿಯಲ್ಲಿ 97 ರನ್ ಗಳಿಸಿ ನಿರಾಸೆ ಮೂಡಿಸಿದ್ದರೆ ಪೃಥ್ವಿ ಶಾ 2018ರಲ್ಲಿ ತಮ್ಮ ನಾಯಕತ್ವದಲ್ಲಿ ಅಂಡರ್…

Read More

ಮಂಡ್ಯ:- ಕೋಳಿಫಾರಂನಲ್ಲಿ ಮಾಂಸದ ಕೋಳಿ ತುಂಬುವಾಗ ತೂಕದಲ್ಲಿ ಮೋಸ ಮಾಡಿದವನಿಗೆ ರೈತ ಮರಕ್ಕೆ ಕಟ್ಟಿ ಹಾಕಿ ಶಿಕ್ಷೆ ವಿಧಿಸಿರುವ ಘಟನೆ ಜರುಗಿದೆ. ಪಾಂಡವಪುರ ತಾಲೂಕಿನ ಚಿಕ್ಕ ಬ್ಯಾಡಹಳ್ಳಿ ಗ್ರಾಮದಲ್ಲಿ ಘಟನೆ‌ ಜರುಗಿದೆ. ಬ್ಯಾಡರಹಳ್ಳಿ ಗ್ರಾಮದ ರೈತ ಹನುಮಂತೇಗೌಡ ಕೋಳಿಫಾರಂ ನಡೆದಿರೋ ವಂಚನೆ.. ಈ ರೈತ ತಮ್ಮ ಕೋಳಿ ಫಾರಂ ನಲ್ಲಿ ಸಾಕಿ ಕೋಳಿಗಳನ್ನು ಖಾಸಗಿ ಯವರಿಗೆ ಮಾರಾಟ ಮಾಡುತ್ತಿದ್ರು… ಮೈಸೂರು ಮೂಲದ NR ಚಿಕನ್ ಕಂಪನಿಯವರು ಈ ರೈತನ ಬಳಿ ಕೋಳಿಯನ್ನು ಕೊಂಡು ಕೊಳ್ಳುತ್ತಿದ್ರು..ಕಳೆದ ಮೂರ್ನಾಲ್ಕು ತಿಂಗಳಿಂದ ಈ ರೈತನಿಗೆ ಕೋಳಿ ತುಂಬುವಾಗ ವಂಚಕರು ತೂಕದಲ್ಲಿ ಮೋಸ ಮಾಡ್ತಿದ್ದರು. ಇಂದು ಅನುಮಾನಗೊಂಡ ರೈತ ಕೋಳಿ ತುಂಬುವಾಗ ರೈತ ಬೇರೆ ತೂಕದ ಯಂತ್ರ ತರಿಸಿ ತೂಕ ಹಾಕಿಸಿದಾಗ ವಂಚನೆ ಬೆಳಕಿಗೆ ಬಂದಿದೆ. ಈ ವೇಳೆ ಒಂದು ತೂಕದಲ್ಲಿ ರೈತನಿಗೆ ಸುಮಾರು 30 KG ತೂಕದಲ್ಲಿ ವ್ಯತ್ಯಾಸ ಕಂಡು ಬಂದಿದೆ. ಇದರಿಂದ ರೊಚ್ಚಿಗೆದ್ದ ರೈತ ಹನುಮಂತೇಗೌಡ ಕೋಳಿ ತುಂಬಲು ಬಂದಿದ್ದ ನಾಲ್ವರಲ್ಲಿ ಇಬ್ಬರನ್ನು ಹಿಡಿದು…

Read More

ಬೆಂಗಳೂರು:- ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗುತ್ತಿಲ್ಲ ಎಂದು ಆರೋಪಿಸಿ ನಿಮ್ಹಾನ್ಸ್ ವಿರುದ್ದ ರೋಗಿಯ ಸಂಭಂದಿಕರು ಕಿಡಿಕಾರಿದ್ದಾರೆ. ನಿಮ್ಹಾನ್ಸ್ ನಲ್ಲಿ ರೋಗಿಗಳಿಗೆ ಸರಿಯಾಗಿ ಚಿಕಿತ್ಸೆ ಸಿಗ್ತಿಲ್ಲ. ಎಮರ್ಜೆನ್ಸಿ ವಾರ್ಡ್ ಅವ್ಯವಸ್ತೆಯ ಆಗರ ವಾಗಿದೆ. ಎಲ್ಲಾ ರೋಗಿಗಳನ್ನ ಸಾಲಾಗಿ ಮಲಗಿಸಿಡ್ತಾರೆ. ಸರಿಯಾದ ಸಮಯಕ್ಕೆ ಟ್ರೀಟ್ಮೆಂಟ್ ಸಿಗ್ತಿಲ್ಲ. ಶುಗರ್ -ಬಿಪಿ ಚೆಕ್ ಮಾಡೋಕೆ ವೈದ್ಯರೇ ಇಲ್ಲ ಎಂದು ಹೆಳ್ತಾರೆ. ನಿಮ್ಹಾನ್ಸ್ ನಲ್ಕಿ ಕೊಟ್ಟ ಔಷದದಿಂದ ರೋಗಿ ಪ್ರಜ್ಞೆತಪ್ಪಿದ್ದಾರೆ. ಖಾಸಗಿ ಆಸ್ಪತ್ರೆಗೆ ಸೇರಿಸಿದ್ದೇವೆ. ಜೀವಕ್ಕೆ ಎನಾದರೂ ಹೆಚ್ಚು ಕಡಿಮೆ ಆದರೆ ನಿಮ್ಹಾನ್ಸ್ ಮೇಲೆ ಕಂಪ್ಲೆಂಟ್ ಕೊಡ್ತೇವೆ ಎಂದು ರೋಗಿ ಸಂಬಂಧಿ ಹೇಳಿಕೆ ನೀಡಿದ್ದಾರೆ.

Read More

ಬೆಂಗಳೂರು: ವಿಶ್ವಕರ್ಮ ಸಮುದಾಯದ ಮೂಲಪುರುಷ ವಿಶ್ವಕರ್ಮ ಅವರ ಅಧ್ಯಯನ ಪೀಠ ಸ್ಥಾಪಿಸಲಾಗುವುದು. ಸಂವಿಧಾನಕ್ಕೆ ಧಕ್ಕೆ ತರುವವರನ್ನು ನಿರ್ದಾಕ್ಷಿಣ್ಯವಾಗಿ ವಿರೋಧಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆಯು ರವೀಂದ್ರ ಕಲಾಕ್ಷೇತ್ರದಲ್ಲಿ ಆಯೋಜಿಸಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣ ದಿನಾಚರಣೆ ಹಾಗೂ ಜಕಣಾಚಾರಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು. ಇತಿಹಾಸ ಎಲ್ಲರಿಗೂ ತಿಳಿಯಬೇಕು. ಇತಿಹಾಸ ತಿಳಿಯದವರು ಇತಿಹಾಸ ರಚಿಸಲು ಸಾಧ್ಯವಿಲ್ಲ. ಅದಕ್ಕಾಗಿ ಪ್ರತಿಯೊಬ್ಬ ಚರಿತ್ರಾರ್ಹ ವ್ಯಕ್ತಿಗಳ ಅಧ್ಯಯನ ವಾಗಬೇಕು ಎಂದರು. ರಾಜ್ಯಮಟ್ಟದ ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕು ಅಮರಾಶಿಲ್ಪಿ ಜಕಣಾಚಾರಿ ಸಂಸ್ಮರಣೆ 2019 ರಲ್ಲಿ ಪ್ರಾರಂಭವಾದರೂ ಕೋವಿಡ್ ಇದ್ದುದರಿಂದ ಆಚರಿಸಲಾಗಲಿಲ್ಲ. ಕಳೆದ ವರ್ಷ ವಿಜಯನಗರ ಜಿಲ್ಲೆಯಲ್ಲಿ ಆಚರಿಸಲಾಗಿತ್ತು ಎಂದರು. ರಾಜ್ಯಮಟ್ಟದ ಜಯಂತಿಗಳನ್ನು ಬೆಂಗಳೂರಿನಲ್ಲಿಯೇ ಆಚರಿಸಬೇಕೆಂದು ಸೂಚಿಸಲಾಗಿದೆ. ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಆಚರಿಸಲಾಗುತ್ತದೆ ಎಂದರು. ಕಾಲ್ಪನಿಕ ವ್ಯಕ್ತಿ ಎನ್ನುವುದು ಸುಳ್ಳು ಜಕಣಾಚಾರಿ ಇಡೀ ರಾಜ್ಯಕ್ಕೆ ಗೊತ್ತಿರುವವರು. ಅವರ ಕಾಲ್ಪನಿಕ ವ್ಯಕ್ತಿ ಎನ್ನುವುದು ಸುಳ್ಳು. ಜಕಣಾಚಾರಿ ವಿಶ್ವಕರ್ಮ…

Read More

ಬೆಂಗಳೂರು: ಲೋಕ ಸಮರದ ವೇಳೆ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ ಗೆ ಮತ್ತೆ ಟ್ರಬಲ್ ಶುರುವಾಗುವ ಸಾಧ್ಯತೆ ಇದೆ.ಅಕ್ರಮ ಅಸ್ತಿ ಪ್ರಕರಣದಲ್ಲಿ ವಿಚಾರಣೆ ನಡೆಸುತ್ತಿರುವ ಕನಕಪುರ ಬಂಡೆಗೆ ಸಿಬಿಐ ಮತ್ತೆ ನೋಟಿಸ್ ನೀಡಿದೆ.ಬಿಜೆಪಿಯವರು ನನ್ನನ್ನ ರಾಜಕೀಯವಾಗಿ ಮುಗಿಸಲು ಪ್ರಯತ್ನ ನಡೆಸುತ್ತಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಗುಡುಗಿದ್ದಾರೆ. ಯೆಸ್,ಅಕ್ರಮ ಅಸ್ತಿ ಪ್ರಕರಣ ಎದುರಿಸುತ್ತಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸಿಬಿಐ ಮತ್ತೆ ಶಾಕ್ ನೀಡಿದೆ.ಕೇರಳ ಮೂಲದ ಖಾಸಗಿ ವಾಹಿನಿಯಲ್ಲಿ ಹೂಡಿಕೆ ಮಾಡಿರುವ ವಿವರಗಳನ್ನು ನೀಡುವಂತೆ ಡಿಸಿಎಂ ಡಿಕೆಶಿಗೆ ಸಿಬಿಐ ನೋಟಿಸ್ ಜಾರಿ ಮಾಡಿದೆ.ಖಾಸಗಿ ಚಾನೆಲ್ ಎಂಡಿ ಬಿ.ಎಸ್. ಶಿಜು ಅವರಿಗೆ ಸಿಬಿಐ ಡಿ.ಕೆ.ಶಿವಕುಮಾರ್ ಹಾಗೂ ಅವರ ಪತ್ನಿ ಉಷಾ ಶಿವಕುಮಾರ್ ಸೇರಿದಂತೆ ಅವರ ಜೊತೆ ವ್ಯವಹಾರಿಕ ಪಾಲು ಹೊಂದಿರುವ 32ಕ್ಕೂ ಹೆಚ್ಚು ಮಂದಿಗೆ ಜನವರಿ 11ರಂದು ಎಲ್ಲಾ ಅಗತ್ಯ ದಾಖಲೆಗಳೊಂದಿಗೆ ತನ್ನ ಮುಂದೆ ಹಾಜರಾಗುವಂತೆ ಸಿಬಿಐ ಸೂಚಿಸಿದೆ.ಸಿಬಿಐ ಮತ್ತೆ ನೋಟಿಸ್ ನೀಡಿರೋದ್ರಿಂದ ಡಿಕೆಶಿಗೆ ಮತ್ತೆ ಸಂಕಷ್ಟ ಎದುರಾಗುತ್ತೆ ಎನ್ನಲಾಗಿದೆ. 2018ರಲ್ಲಿ ಡಿ.ಕೆ.ಶಿವಕುಮಾರ್ ಸಲ್ಲಿಸಿದ್ದ ಅಫಿಡೆವಿಟ್…

Read More