Author: AIN Author

ಬೆಂಗಳೂರು:- ಕಾಂಗ್ರೆಸ್ ಮತ್ತೆ ದ್ವೇಷದ ರಾಜಕಾರಣ ಆರಂಭಿಸಿದೆ ಎಂದು ಮಾಜಿ ಸಚಿವ ಆರ್ ಅಶೋಕ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಮತ್ತೆ ದ್ವೇಷದ ರಾಜಕಾರಣ ಆರಂಭಿಸಿದೆ. ಹಿಂದೆ ಸಿದ್ದರಾಮಯ್ಯ ಅವರ ಸರ್ಕಾರದಿಂದ ಹಿಂದೂ ಸಂಘಟನೆಗಳ ಕಾರ್ಯಕರ್ತರ ಕಗ್ಗೊಲೆಯಾಗಿತ್ತು. ಅಯೋಧ್ಯೆಯ ಶ್ರೀರಾಮಮಂದಿರ ಉದ್ಘಾಟನೆಯಾಗಲು ದಿನಗಣನೆ ಶುರುವಾಗಿದೆ. ಈ ಐತಿಹಾಸಿಕ ಕ್ಷಣಕ್ಕೆ ದೇಶಾದ್ಯಂತ ಜನರು ಕಾತರದಿಂದ ಕಾಯುತ್ತಿದ್ದಾರೆ. ಕಾಂಗ್ರೆಸ್ ಮಾತ್ರ ಇದನ್ನು ಭಯವೆಂಬಂತೆ ಬಿಂಬಿಸುತ್ತಿದೆ. 3 ದಶಕದ ಹಿಂದಿನ ಕೇಸ್‌: ಜೈಲು ಶಿಕ್ಷೆ ಇದೇ ವೇಳೆ ಹುಬ್ಬಳ್ಳಿಯಿಂದ ರಾಮಜನ್ಮಭೂಮಿ ಹೋರಾಟದಲ್ಲಿ ಪಾಲ್ಗೊಂಡ ಇಬ್ಬರನ್ನು 30 ವರ್ಷಗಳ ಹಿಂದಿನ ಪ್ರಕರಣ ಸಂಬಂಧ ಜೈಲಿಗೆ ಕಳುಹಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿಯವರು ರಾಮಮಂದಿರ ಉದ್ಘಾಟನೆಯ ಆಚರಣೆಯಲ್ಲಿ ಪಾಲ್ಗೊಳ್ಳಲು ಕರೆ ನೀಡಿರುವ ಸಂದರ್ಭದಲ್ಲಿ ಇಂತಹ ಕ್ರಮವನ್ನು ಸರ್ಕಾರ ಕೈಗೊಂಡಿದೆ. ನಾನು ಕೂಡ ಆಗ ರಾಮಜನ್ಮಭೂಮಿ ಹೋರಾಟದಲ್ಲಿ ಭಾಗವಹಿಸಿದ್ದೆ. ಈಗ ನನ್ನನ್ನೂ ಬಂಧಿಸುತ್ತೀರಾ? ಅಷ್ಟು ಧೈರ್ಯ ಇದೆಯಾ? ಎಂದು ರಾಜ್ಯ ಸರ್ಕಾರಕ್ಕೆ ಆರ್. ಅಶೋಕ್ ಪ್ರಶ್ನಿಸಿದರು. ಕಾರ್ಯಕರ್ತರ ಮೇಲೆ ಹಾಕಿದ…

Read More

ಬೆಂಗಳೂರು:- ಹೊಸವರ್ಷದಂದು 8 ಮೆಟ್ರಿಕ್ ಟನ್ ಕಸವನ್ನು ಬಿಬಿಎಂಪಿ ತೆರವು ಮಾಡಿದೆ. ನಗರದಲ್ಲಿ ಪೂರ್ವ ವಲಯ ವ್ಯಾಪ್ತಿಯಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 8 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ತೆರವುಗೊಳಿಸಲಾಗಿದೆ ಹೊಸ ವರ್ಷಾಚರಣೆಯ ಹಿನ್ನೆಲೆ ನಗರದ ಸಿಬಿಡಿ ರಸ್ತೆಗಳಾದ ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ಟ್ರೀಟ್, ರಿಸಿಡೆನ್ಸಿ ರಸ್ತೆ, ರಿಚ್‍ಮಂಡ್ ರಸ್ತೆ, ಸೇಂಟ್ ಮಾಕ್ಸರ್ ರಸ್ತೆ, ಕಸ್ತೂರ್ ಬಾ ರಸ್ತ್ತೆ ಸೇರಿದಂತೆ ಮುಂತಾದ ರಸ್ತೆಗಳಲ್ಲಿ ಮುಂಜಾನೆ 3.30ರಿಂದ ಸ್ವಚ್ಛತಾ ಕಾರ್ಯ ಆರಂಭಿಸಿ ಬೆಳಗ್ಗೆ 6.30ರ ವೇಳೆಗೆ ಪೂರ್ಣಗೊಳಿಸಿ ಸುಮಾರು 8 ಮೆ. ಟನ್ ತ್ಯಾಜ್ಯವನ್ನು ಬೀದಿಗಳಿಂದ ತೆರವುಗೊಳಿಸಿ ರಸ್ತೆಗಳನ್ನು ಸ್ವಚ್ಛಗೊಳಿಸಿ ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ ಎಂದು ಬಿಬಿಎಂಪಿ ಪ್ರಕಟಣೆಯಲ್ಲಿ ತಿಳಿಸಿದೆ. ಸ್ವಚ್ಛತಾ ಕಾರ್ಯವು ಶಾಂತಿನಗರ ವಿಭಾಗದ ಘನತ್ಯಾಜ್ಯ ವಿಭಾಗದಿಂದ ಮಾಡಲಾಗಿದ್ದು, 3 ಮೇಲ್ವಿಚಾರಕರು, 80ಕ್ಕೂ ಹೆಚ್ಚು ಪೌರಕಾರ್ಮಿಕರು ಸ್ವಚ್ಛತಾ ಕಾರ್ಯವನ್ನು ಮಾಡಿದರು. ಸ್ಥಳದಲ್ಲಿ 1 ಕಾಂಪ್ಯಾಕ್ಟರ್ ಹಾಗೂ 7 ಆಟೋ ಟಿಪ್ಪರ್ ಗಳಿದ್ದವು.…

Read More

ಬಳ್ಳಾರಿ:- ಆ ಸಹೋದರಿಬ್ಬರು ಹೊಸ ವರ್ಷ ಸಂಭ್ರಮಾಚರಣೆ ಮಾಡಬೇಕು ಅಂತಾ ಕೇಕ್ ತರಲು ಬೇಕರಿಗೆ ಹೋಗಿದ್ರು. ಇನ್ನೇನು ಕೇಕ್ ತೆಗೆದುಕೊಂಡು ಮನೆಗೆ ಹೊರಡಬೇಕಿತ್ತು, ಅಷ್ಟ್ರರಲ್ಲಿ ಬೈಕ್ ಪಾರ್ಕಿಂಗ್ ವಿಚಾರಕ್ಕೆ ಎದುರುಗಡೆ ಇದ್ದ ಗುಂಪಿನೊಂದಿಗೆ ಜಗಳ ಪ್ರಾರಂಭವಾಗಿದೆ. ಮಾತಿಗೆ ಮಾತು ಬೆಳೆದು ಜಗಳ ತಾರಕಕ್ಕೇರಿದೆ, ಆಗ ಕುಡಿದ ಮತ್ತಿನಲ್ಲಿದ್ದ ಆ ಯುವಕರು ಕೇಕ್ ತರಲು ಬಂದ ವ್ಯಕ್ತಿಯನ್ನ ಚಾಕುವಿನಿಂದ ಇರಿದು ಭೀಕರವಾಗಿ ಕೊಲೆ ಮಾಡಿದ್ದಾರೆ. ಈ ಕುರಿತು ಒಂದು ವರದಿ ಇಲ್ಲಿದೆ ನೋಡಿ… ಹೌದು, ವರ್ಷದ ಅಂತ್ಯದ ದಿನದಂದೇ ಗಣಿನಾಡು ಬಳ್ಳಾರಿಯಲ್ಲಿ ಕ್ಷುಲ್ಲಕ ಕಾರಣಕ್ಕೆ ಯುವಕರ ಗುಂಪೊಂದು ಸಹೋದರಿಬ್ಬರ ಮೇಲೆ ಭೀಕರವಾಗಿ ಹಲ್ಲೆ ಮಾಡಿ ಓರ್ವನನ್ನ ಕೊಲೆ ಮಾಡಿದ ಘಟನೆ ನಡೆದಿದೆ… ಎಸ್ ಸೈಯದ್ ವಾಲಿ (23) ಮತ್ತು ರಜಾಕ ವಾಲಿ (26) ಈ ಇಬ್ಬರು ಸಹೋದರರು ಹೊಸ ವರ್ಷ ಸಂಭ್ರಮಾಚರಣೆ ಮಾಡಬೇಕು ಅಂತಾ ವಡ್ಡರಬಂಡೆಯಲ್ಲಿರುವ ಎಮ್.ಎಮ್ ಬೇಕರಿಗೆ ಕೇಕ್ ತರಲು ರಾತ್ರಿ 8:30 ಕ್ಕೆ ಬಂದಿದ್ದಾರೆ.. 1.5 kg ಕೇಕ್ ತೆಗೆದುಕೊಂಡು…

Read More

ಟೀಮ್​ ಇಂಡಿಯಾದ ಸ್ಟಾರ್​ ಕ್ರಿಕೆಟಿಗ ಶುಭಮನ್​ ಗಿಲ್​ ಅವರ 2023ನೇ ವರ್ಷದ ಬಹುತೇಕ ಸಂಕಲ್ಪಗಳು ಈಡೇರಿದ್ದು, ಅದನ್ನು ಇನ್​ಸ್ಟಾಗ್ರಾಂ ಮೂಲಕ ಹಂಚಿಕೊಂಡಿದ್ದಾರೆ. ಗಿಲ್​ ಅವರು 2023ರ ಗುರಿಗಳನ್ನು ಫೋಟೋಗಳೊಂದಿಗೆ ಮೆಲುಕು ಹಾಕಿದ್ದಾರೆ. ಕೇವಲ 24 ವರ್ಷಕ್ಕೆ ಸ್ಟಾರ್​ ಆಟಗಾರನಾಗಿ ಹೊರ ಹೊಮ್ಮಿರುವ ಗಿಲ್​, ಎಲ್ಲ ಮಾದರಿಯ ಪಂದ್ಯಗಳಲ್ಲೂ ತಂಡಕ್ಕೆ ಅನಿವಾರ್ಯ ಆಟಗಾರ ಎನಿಸಿಕೊಂಡಿದ್ದಾರೆ. ಗಿಲ್​, ವೃತ್ತಿ ಜೀವನದ ಪಾಲಿಗೆ 2023 ಮಹತ್ವದ ವರ್ಷವಾಗಿದೆ. ಈ ವರ್ಷದಲ್ಲಿ ಎಲ್ಲ ಮಾದರಿ ಪಂದ್ಯಗಳಿಂದ 7 ಶತಕಗಳೊಂದಿಗೆ 2 ಸಾವಿರಕ್ಕೂ ಅಧಿಕ ರನ್​ ಕಲೆ ಹಾಕುವ ಮೂಲಕ ಅತ್ಯದ್ಭುತ ಪ್ರದರ್ಶನ ನೀಡಿದ್ದಾರೆ. 2023ರಲ್ಲಿ ಗಿಲ್​ ಅವರು ಕೆಲವೊಂದಿಷ್ಟು ಗುರಿಗಳನ್ನು ಹಾಕಿಕೊಂಡಿದ್ದರು. ಅವುಗಳಲ್ಲಿ ಬಹುತೇಕ ಗುರಿಗಳನ್ನು ಸಾಧಿಸಿದ್ದಾರೆ. ಅದರಲ್ಲಿ ಅತಿ ಹೆಚ್ಚು ಅಂತಾರಾಷ್ಟ್ರೀಯ ಶತಕಗಳನ್ನು ಬಾರಿಸಬೇಕೆಂಬುದು ಪ್ರಮುಖ ಗುರಿಯಾಗಿತ್ತು. ಅದು ಕೂಡ ನೆರವೇರಿದೆ. ಅಲ್ಲದೆ, ಗಿಲ್ ಅವರು ವಿಶ್ವಕಪ್ ಮತ್ತು ಐಪಿಎಲ್​ ಟೂರ್ನಿಯಲ್ಲಿ ಆರೆಂಜ್ ಕ್ಯಾಪ್ ಮೇಲೆ ತಮ್ಮ ಕಣ್ಣಿಟ್ಟಿದ್ದರು. ಎರಡೂ ಪಂದ್ಯಾವಳಿಗಳಲ್ಲಿ ಗಮನಾರ್ಹ ಪ್ರಭಾವ ಬೀರಲು…

Read More

ಪ್ರತಿಯೊಬ್ಬರೂ ತಮ್ಮ ದೈನಂದಿನ ಚಟುವಟಿಕೆಯಲ್ಲಿ ತೊಡಗಿಸಿಕೊಳ್ಳಲೇ ಬೇಕಾಗಿರುವ ಕಾರಣ ಈ ಸಮಯದಲ್ಲಿ ಅಸ್ತಮಾದಿಂದಾಗಿ ಉಸಿರಾಟದ ಸಮಸ್ಯೆಗಳು ಕಾಣಿಸಿಕೊಳ್ಳಬಹುದು. ಮೊದಲೇ ಕೊರೋನಾದ ಭಯವೂ ಜನರನ್ನು ಕಾಡುತ್ತಿದೆ. ಹೀಗಿರುವಾಗ ಅಸ್ತಮಾ ಕಾಣಿಸಿಕೊಂಡರೆ ಇನ್ನಷ್ಟು ಭಯಭೀತರಾಗುವುದು ಸಹಜ ಹೀಗಾಗಿ ಮೊದಲೇ ಅಸ್ತಮಾದಿಂದ ಬಳಲುತ್ತಿರುವವರು ಈ ಸಮಯದಲ್ಲಿ ಸ್ವಲ್ಪ ಎಚ್ಚರಿಕೆ ವಹಿಸುವುದು ಬಲು ಅಗತ್ಯವಾಗಿದೆ. ಇನ್ನು ಅಸ್ತಮಾ ಎನ್ನುವುದು ಚಿಕ್ಕವರಿಂದ ಹಿಡಿದು ವೃದ್ಧರವರೆಗೆ ಎಲ್ಲರನ್ನು ಕಾಡುವ ರೋಗ. ಹೀಗಾಗಿ ನಾವೆಷ್ಟು ಎಚ್ಚರಿಕೆಯಿಂದ ಇರುತ್ತೇವೆಯೋ ಅಷ್ಟೇ ಒಳ್ಳೆಯದು. ಅಸ್ತಮಾ ಕುರಿತಂತೆ ವೈದ್ಯರು ನೀಡುವ ಸಲಹೆ ಪಾಲಿಸುವುದು ಅಗತ್ಯ. ಯಾವ ಸಂದರ್ಭದಲ್ಲಿ ಮತ್ತು ಯಾವುದರಿಂದ ಅಸ್ತಮಾ ಉಲ್ಭಣಗೊಳ್ಳುತ್ತದೆ ಎಂಬುದನ್ನು ಮನದಟ್ಟು ಮಾಡಿಕೊಂಡು ಅದರಿಂದ ದೂರವಿರುವಂತೆ ನೋಡಿಕೊಳ್ಳಬೇಕು. ಮನೆಯಿಂದ ಹೊರಗೆ ಹೋಗುವಾಗ ವೈದ್ಯರು ನೀಡುವ ತ್ವರಿತ ಶಮನ ನೀಡುವ ಔಷಧಿ ಮತ್ತು ಇನ್ನೇಲರ್‌ ಗಳನ್ನು ತೆಗೆದುಕೊಂಡು ಹೋಗುವುದು ಒಳ್ಳೆಯದು. ಹೊಗೆ, ಧೂಳಿನಿಂದ ಆದಷ್ಟು ದೂರ ಇರುವಂತೆ ನೋಡಿಕೊಳ್ಳಬೇಕು. ಮಲಗುವ ಕೋಣೆಯಲ್ಲಿ ಶುಚಿತ್ವ ಕಾಪಾಡಿಕೊಳ್ಳಬೇಕು. ಜತೆಗೆ ಒಂದಷ್ಟು ಕ್ರಮಗಳನ್ನು ಅಳವಡಿಸಿಕೊಳ್ಳಬೇಕು. ಬೂಷ್ಟ್ ಮತ್ತು…

Read More

ದಾಸವಾಳ ಟೀ ಮಾಡಲು ಕೇವಲ 3 ಪದಾರ್ಥಗಳು ಸಾಕು. ಈ ಟೀ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ರಕ್ತ ಪರಿಚಲನೆಯನ್ನು ಉತ್ತೇಜಿಸುತ್ತದೆ, ಮಲಬದ್ಧತೆಯನ್ನು ನಿವಾರಿಸುತ್ತದೆ, ಉತ್ತಮ ನಿದ್ರೆಗೂ ಸಹಕಾರಿಯಾಗಿದೆ. ಬೇಕಾಗುವ ಪದಾರ್ಥಗಳು: ಒಣ ದಾಸವಾಳ ದಳ – 1 ಕಪ್ ನೀರು – 2 ಕಪ್, 1 ಲೀಟರ್ ಸಕ್ಕರೆ ಪುಡಿ – 1 ಕಪ್ ತಂಪಾದ ನೀರು – 1 ಲೀಟರ್ ಐಸ್ ಕ್ಯೂಬ್ಸ್ – ಅಗತ್ಯಕ್ಕೆ ತಕ್ಕಂತೆ ಮಾಡುವ ವಿಧಾನ: ಮೊದಲಿಗೆ ಒಂದು ಪಾತ್ರೆಯಲ್ಲಿ 2 ಕಪ್ ನೀರು ಹಾಕಿ, ಅದರಲ್ಲಿ ಒಣಗಿದ ದಾಸವಾಳ ದಳಗಳನ್ನು ಸೇರಿಸಿ, ಬಿಸಿ ಮಾಡಿ. ನಂತರ ಕುದಿ ಬಂದ ತಕ್ಷಣ ಉರಿಯನ್ನು ಕಡಿಮೆ ಮಾಡಿ, ಸುಮಾರು 15 ನಿಮಿಷಗಳ ಕಾಲ ಕುದಿಸಿಕೊಳ್ಳಬೇಕು. ಮತ್ತೊಂದು ಪಾತ್ರೆಯಲ್ಲಿ 1 ಲೀಟರ್ ತಂಪಾದ ನೀರಿಗೆ ಸಕ್ಕರೆ ಪುಡಿ ಹಾಕಿ ಅದು ಕರಗುವತನಕ ಮಿಶ್ರಣ ಮಾಡಿ. ದಾಸವಾಳ ಹಾಗೂ ನೀರಿನ ಮಿಶ್ರಣವನ್ನು ಶಾಖದಿಂದ ತೆಗೆದುಹಾಕಿ ಸುಮಾರು 30 ನಿಮಿಷ…

Read More

ಮಕ್ಕಳಿಂದ ಹಿಡಿದು ಅನೇಕ ವೃದ್ಧರವರೆಗೆ ಬಹುತೇಕರಿಗೆ ಟೈಂ ಪಾಸ್ ಅಂದ್ರೆ ಅದು ಮೊಬೈಲ್. ಅಕ್ಕಪಕ್ಕದಲ್ಲಿ ಯಾರೇ ಇರಲಿ, ಏನೇ ಇರಲಿ, ಜನರು ಅದಕ್ಕೆ ಮಹತ್ವ ನೀಡೋದಿಲ್ಲ. ಮನೆಯಲ್ಲಿರುವ ವ್ಯಕ್ತಿಗಳು ಅಕ್ಕಪಕ್ಕದಲ್ಲೇ ಕುಳಿತು ಚಾಟ್ ಮಾಡುವ ಸ್ಥಿತಿ ಈಗ ನಿರ್ಮಾಣವಾಗಿದೆ. ಮೊಬೈಲ್ ನಲ್ಲಿ ಬರಿ ಚಾಟಿಂಗ್ ಮಾತ್ರವಲ್ಲ ಗೇಮ್ ಸೇರಿದಂತೆ ಅನೇಕಾನೇಕ ಕೆಲಸಗಳನ್ನು ಮಾಡ್ತಾರೆ ಜನರು. ಸಾಮಾಜಿಕ ಜಾಲತಾಣಗಳನ್ನು ಸ್ಕ್ರೋಲ್ ಮಾಡ್ತಾ ಹೋದಂತೆ ಸಮಯ ಸರಿದಿದ್ದು ಜನರಿಗೆ ತಿಳಿಯೋದಿಲ್ಲ. ಈ ಮೊಬೈಲ್ ಗೇಮಿಂಗ್ , ಸಾಮಾಜಿಕ ಜಾಲತಾಣ ವೀಕ್ಷಣೆ ಈಗಿನ ದಿನಗಳಲ್ಲಿ ಹೊಸ ಹೊಸ ರೋಗಕ್ಕೆ ಕಾರಣವಾಗ್ತಿದೆ. ನೀವೂ ಮೊಬೈಲ್ ವೀಕ್ಷಣೆ ಮಾಡ್ತಿದ್ದರೆ ಯಾವೆಲ್ಲ ಸಮಸ್ಯೆ ನಿಮ್ಮನ್ನು ಕಾಡುತ್ತೆ ಎಂಬುದನ್ನು ತಿಳಿದುಕೊಳ್ಳಿ. ನಿರಂತರ ಮೊಬೈಲ್ ವೀಕ್ಷಣೆಯಿಂದ ನಿಮ್ಮನ್ನು ಕಾಡುತ್ತೆ ಈ ಸಮಸ್ಯೆ : ಕುತ್ತಿಗೆ ನೋವು : ಬೆನ್ನುಮೂಳೆಯ ಶಸ್ತ್ರಚಿಕಿತ್ಸಕರ ಪ್ರಕಾರ, ಸ್ಮಾರ್ಟ್‌ಫೋನ್‌ನಲ್ಲಿ ಪೋಸ್ಟ್‌ಗಳನ್ನು ನೋಡುವಾಗ ಅಥವಾ ಸ್ಕ್ರೋಲಿಂಗ್ ಮಾಡುವಾಗ ತಲೆ ಮತ್ತು ಕುತ್ತಿಗೆ ಬಾಗಿರುತ್ತದೆ. ಕುತ್ತಿಗೆಯ ಮೇಲೆ ಹೆಚ್ಚಿನ ಒತ್ತಡ ಬೀಳುತ್ತದೆ.…

Read More

ಸಿಡ್ನಿ: ಹೊಸ ವರ್ಷದ (New Year) ಸಂಭ್ರಮ ಶುರುವಾಗಿವೆ. ಎಲ್ಲರಿಗಿಂತಲೂ ಮೊದಲು 2024ಕ್ಕೆ ವೆಲ್‌ಕಮ್ ಹೇಳಿದ್ದು ಕಿರಿಬಾಟಿ, ಸಮೋವಾ, ಟೊಂಗಾ ದೇಶಗಳು. ನಂತರ ನ್ಯೂಜಿಲೆಂಡ್‌ನ (New Zealand) ಆಕ್ಲೆಂಡ್ ನಗರದ ಜನ ಸಡಗರ, ಸಂಭ್ರಮದ ಮಧ್ಯೆ ಹ್ಯಾಪಿ ನ್ಯೂ ಇಯರ್ ಎಂದು ಹೇಳಿದರು. ಆಸ್ಟ್ರೇಲಿಯಾದ (Australia) ಸಿಡ್ನಿ ನಗರದಲ್ಲಿ ಲೇಸರ್ ಶೋ ಗಮನ ಸೆಳೆಯಿತು. https://ainlivenews.com/curry-leaves-are-good-for-cooking-and-good-for-health-this-has-many-benefits/ ಜಪಾನ್, ಉತ್ತರ ಕೊರಿಯಾ, ದಕ್ಷಿಣ ಕೊರಿಯಾಗಳು ಹೊಸ ವರ್ಷಕ್ಕೆ ವೆಲ್‌ಕಮ್ ಹೇಳಿತು. ಸಮೋವಾದಲ್ಲಿ ಹೊಸ ವರ್ಷದ ಸಂಭ್ರಮಾಚರಣೆ ಶುರುವಾದ ಎಂಟೂವರೆ ಗಂಟೆ ನಂತರ ಭಾರತ-ಶ್ರೀಲಂಕಾಗೆ 2024 ಕಾಲಿಡಲಿದೆ. ನಮ್ಮ ದೇಶದ ಬಳಿಕ ಸುಮಾರು ನಾಲ್ಕೂವರೆ ಗಂಟೆಯ ಬಳಿಕ 43 ದೇಶಗಳು ಏಕಕಾಲದಲ್ಲಿ ಹೊಸ ವರ್ಷವನ್ನು ಸ್ವಾಗತಿಸಲಿದೆ. 

Read More

ಒಂದು ಸರಳ ಪ್ರೇಮಕಥೆಯ ರೂವಾರಿ ಸಿಂಪಲ್ ಸುನಿ ಹೊಸ ವರ್ಷಕ್ಕೆ ಸಂಗೀತ ಪ್ರಿಯರಿಗೆ ಚೆಂದದ ಹಾಡನ್ನು ಉಡುಗೊರೆಯಾಗಿ ನೀಡಿದ್ದಾರೆ. ನೀನ್ಯಾರೆಲೆ.. ನಿನಗಾಗಿಯೇ..ಈ ಜೀವ ಭಾವ ಸೋಜಿಗ ಎಂಬ ಕ್ಯಾಚಿ ಮ್ಯಾಚಿ ಸಾಹಿತ್ಯದ ಮೆಲೋಡಿ ಮಸ್ತಿಯನ್ನು ರಿಲೀಸ್ ಮಾಡಿದ್ದಾರೆ. ಸಿದ್ದು ಕೋಡಿಪುರ ಹಾಗೂ ಸುನಿ ಸಾಹಿತ್ಯದ ಈ ಹಾಡಿಗೆ ಅರ್ಮಾನ್‌ ಮಲಿಕ್‌ ಧ್ವನಿಯಾಗಿದ್ದಾರೆ. ಇದೇ ಮೊದಲ ಬಾರಿಗೆ ದೊಡ್ಮನೆಯ ಹೀರೋ ವಿನಯ್ ರಾಜ್ ಕುಮಾರ್ ಗೆ ಸಿಂಪಲ್ ಸುನಿ ನಿರ್ದೇಶನ ಮಾಡಿದ್ದಾರೆ. ವಿನಯ್‌ ನಾಯಕನಾಗಿ ನಟಿಸಿರುವ ಚಿತ್ರಕ್ಕೆ ಸ್ವಾತಿಷ್ಠ ಕೃಷ್ಣನ್, ರಾಧಾ ಕೃಷ್ಣ ಧಾರಾವಾಹಿ ಖ್ಯಾತಿಯ ಮಲ್ಲಿಕಾ ಸಿಂಗ್ ಎಂಬ ಇಬ್ಬರು ಚೆಲುವೆಯರ ನಾಯಕಿಯಾರಾಗಿ ನಟಿಸಿದ್ದಾರೆ.. ರಾಘವೇಂದ್ರ ರಾಜ್ ಕುಮಾರ್ ಸ್ಪೆಷಲ್ ರೋಲ್ ನಲ್ಲಿ ನಟಿಸಿದ್ದಾರೆ. ರಾಜೇಶ್ ನಟರಂಗ, ಅರುಣಾ ಬಾಲರಾಜ್, ಸಾಧುಕೋಕಿಲ ಮುಂತಾದವರು ತಾರಾಬಳಗದಲ್ಲಿದ್ದಾರೆ. ಆದಿ ಸಂಕಲನವಿದ್ದು, ಹಾಡುಗಳಿಗೆ ವೀರ್ ಸಮರ್ಥ್ ಸಂಗೀತ ನೀಡುತ್ತಿದ್ದು, ಕಾರ್ತಿಕ್ ಕ್ಯಾಮೆರಾ ಹಿಡಿದಿದ್ದಾರೆ. ತಮ್ಮ ವಿಭಿನ್ನ ಸಿನಿಮಾಗಳಿಂದ ನಿರ್ದೇಶಕ ಸಿಂಪಲ್ ಸುನಿ ಗಮನ ಸೆಳೆಯುತ್ತಾ ಬರ್ತಿದ್ದಾರೆ.…

Read More

ಟೋಕಿಯೊ: ಹೊಸ ವರ್ಷದ ಆರಂಭದಲ್ಲೇ ಜಪಾನ್‍ಗೆ (Japan) ತೀವ್ರ ಆಘಾತ ಎದುರಾಗಿದೆ. ಈಶಾನ್ಯ ಜಪಾನ್‍ನಲ್ಲಿ 7.6 ತೀವ್ರತೆಯ ಪ್ರಬಲ ಭೂಕಂಪ (Earthquake) ಸಂಭವಿಸಿದ್ದು, ಇಶಿಕಾವಾ ಪ್ರಾಂತ್ಯದ ವಾಜಿಮಾ ನಗರಕ್ಕೆ 1.2 ಮೀಟರ್‌ಗಳಷ್ಟು ಎತ್ತರದ ತೆರೆಗಳು ಅಪ್ಪಳಿಸುತ್ತಿದೆ. ಇಶಿಕಾವಾ, ನೈಕತಾ ಮತ್ತು ಟೊಯಾಮಾ ನಗರಗಳ ಕರಾವಳಿ ತೀರಗಳಲ್ಲಿ ಸುನಾಮಿ (Tsunami) ಎಚ್ಚರಿಕೆ ನೀಡಲಾಗಿದೆ. ಇಶಿಕಾವಾ ಜಿಲ್ಲೆಯ ಕರಾವಳಿ ನೋಟೋಗೆ 5 ಮೀಟರ್ ಎತ್ತರದವರೆಗಿನ ಬೃಹತ್ ಅಲೆಗಳು ಅಪ್ಪಳಿಸುವ ಸಾಧ್ಯತೆ ಇದೆ. ನೈಗತ ಮತ್ತು ಟೊಯಾಮಾ ಸೇರಿದಂತೆ ಉಳಿದ ಕೆಲವು ಕರಾವಳಿ ತೀರಗಳಲ್ಲಿ 3 ಮೀಟರ್‍ವರೆಗೂ ಅಲೆಗಳು ಏಳಬಹುದು ಎಂದು ಜಪಾನ್ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಸ್ಥಳೀಯ ಕಾಲಮಾನ ಸಂಜೆ 4:10 ಸುಮಾರಿಗೆ ಇಶಿಕಾವಾ ಪ್ರಾಂತ್ಯದ ನೋಟೊ ಪ್ರದೇಶದಲ್ಲಿ ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ 7.4ರಿಂದ 7.6 ರವರೆಗೂ ಭೂಕಂಪನದ ತೀವ್ರತೆ ದಾಖಲಾಗಿದೆ. ಜಪಾನ್‍ನ ಈಶಾನ್ಯ ಭಾಗದ ನನಾವೋ ಭೂ ಕಂಪನದ ಕೇಂದ್ರ ಬಿಂದು ಎಂದು ವರದಿಯಾಗಿದೆ.

Read More