Author: AIN Author

ಶ್ರೀಹರಿಕೋಟ: ಕಪ್ಪು ಕುಳಿಗಳ ಅಧ್ಯಯನಕ್ಕೆ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO)ದ ಎಕ್ಸ್‌ಪೋಸ್ಯಾಟ್ ಉಪಗ್ರಹ ಉಡಾವಣೆ (XPoSat Launch) ಯಶಸ್ವಿಯಾಗಿದೆ. ಆಂಧ್ರಪ್ರದೇಶದ ಶ್ರೀಹರಿಕೋಟದಿಂದ ಪಿಎಸ್‍ಎಲ್‍ವಿ ಮೂಲಕ ಈ ಉಪಗ್ರಹ ಉಡಾವಣೆ ಮಾಡಲಾಗಿದೆ. ಈ ಮೂಲಕ ದೇಶದ ಮೊದಲ ಎಕ್ಸ್-ರೇ ಪೋಲರಿಮೀಟರ್ ಉಪಗ್ರಹ ಎಕ್ಸ್‌ಪೋಸ್ಯಾಟ್  ಉಡಾವಣೆ ಯಶಸ್ವಿಯಾಗಿದ್ದು, ಹೊಸ ವರ್ಷದ ದಿನವೇ ಇಸ್ರೋ ಇತಿಹಾಸ ನಿರ್ಮಿಸಿದೆ. ಇದರೊಂದಿಗೆ ಪಿಎಸ್‍ಎಲ್‍ವಿ ಇತರ ಹತ್ತು ಉಪಗ್ರಹಗಳನ್ನು ಹೊತ್ತೊಯ್ದಿದೆ. https://twitter.com/isro/status/1741671127737577505?ref_src=twsrc%5Etfw%7Ctwcamp%5Etweetembed%7Ctwterm%5E1741671127737577505%7Ctwgr%5Ebabd2bfac0586ae9eceb30a91b76127cd7f71c1b%7Ctwcon%5Es1_&ref_url=https%3A%2F%2Fpublictv.in%2Flaunch-of-pslv-c58-xposat-mission-from-satish-dhawan-space-centre-sriharikota%2F ಈ ಉಪಗ್ರಹಗಳನ್ನು ಸ್ಟಾರ್ಟ್‍ಅಪ್ಸ್, ಶೈಕ್ಷಣಿಕ ಸಂಸ್ಥೆಗಳು ಮತ್ತು ಇಸ್ರೋ ಕೇಂದ್ರಗಳು ನಿರ್ಮಾಣ ಮಾಡಿದ್ದು, ಪಲ್ಸಾರ, ಕಪ್ಪು ಕುಳಿ ,ಎಕ್ಸ್-ರೇ ಬೈನರಿಗಳು, ಸಕ್ರಿಯ ಗ್ಯಾಲಕ್ಸಿಯ ನ್ಯೂಕ್ಲಿಯಸ್‍ಗಳು, ನ್ಯೂಟ್ರಾನ್ ನಕ್ಷತ್ರಗಳು ಮತ್ತು ಸೂಪರ್‍ನೋವಾ ಅವಶೇಷಗಳ ಅಧ್ಯಯನ ನಡೆಸಲಿದೆ. ಈ ಮಿಷನ್ ಕನಿಷ್ಠ ಐದು ವರ್ಷಗಳ ಕಾಲ ಸಕ್ರಿಯವಾಗಿ ಕಾರ್ಯನಿರ್ವಹಿಸಲಿದೆ. POLIX (ಎಕ್ಸ್-ರೇಗಳಲ್ಲಿ ಪೋಲಾರಿಮೀಟರ್ ಉಪಕರಣ) ಮತ್ತು XSPECT (ಎಕ್ಸ್-ರೇ ಸ್ಪೆಕ್ಟ್ರೋಸ್ಕೋಪಿ ಮತ್ತು ಟೈಮಿಂಗ್) ಪೇಲೋಡ್‌ಗಳಾಗಿವೆ. POLIX ಅನ್ನು ರಾಮನ್ ರಿಸರ್ಚ್ ಇನ್‌ಸ್ಟಿಟ್ಯೂಟ್ ಅಭಿವೃದ್ಧಿಪಡಿಸಿದೆ. ಎಕ್ಸ್‌ಸ್ಪೆಕ್ಟ್ ಅನ್ನು ಬೆಂಗಳೂರಿನ ಯುಆರ್‌ಎಸ್‌ಸಿಯ ಬಾಹ್ಯಾಕಾಶ…

Read More

ಇಸ್ಲಾಮಾಬಾದ್‌: ವಿಶ್ವದ ಶ್ರೀಮಂತ ಕ್ರಿಕೆಟ್‌ ಲೀಗ್‌ ಎಂದೇ ಗುರುತಿಸಿಕೊಂಡಿರುವ ಇಂಡಿಯನ್‌ ಪ್ರೀಮಿಯರ್‌ ಲೀಗ್‌ (IPL) ವಿದೇಶಗಳಲ್ಲೂ ಭಾರೀ ಸದ್ದು ಮಾಡುತ್ತಿದೆ. ಐಪಿಎಲ್‌ನಿಂದಾಗಿ ಪ್ರೇರಿತಗೊಂಡ ವಿದೇಶಿ ಕ್ರಿಕೆಟ್‌ ಮಂಡಳಿಗಳು ತಮ್ಮ ದೇಶಗಳಲ್ಲೂ ಟಿ20 ಲೀಗ್‌ಗಳನ್ನ ಆಯೋಜಿಸಲು ಪ್ರಾರಂಭಿಸಿವೆ. ಆದ್ರೆ ಪಾಕಿಸ್ತಾನದ ಮಾಜಿ ಕ್ರಿಕೆಟಿಗ ವಾಸಿಂ ಅಕ್ರಮ್‌ (Wasim Akram) ತನ್ನ ದೇಶದ ಸೂಪರ್‌ ಲೀಗ್‌ಗಿಂತಲೂ ಭಾರತದ ಐಪಿಎಲ್‌ ದೊಡ್ಡದು ಎಂದು ಬಣ್ಣಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ವಾಸಿಂ ಅಕ್ರಮ್‌, ಪಾಕಿಸ್ತಾನದ ಸೂಪರ್‌ ಲೀಗ್‌ (Pakistan Super League) ಗಿಂತ ಐಪಿಎಲ್‌ ದೊಡ್ಡದು. ನಾನು ಐಪಿಎಲ್‌ ಹಾಗೂ ಪಿಎಸ್‌ಎಲ್‌ನಲ್ಲಿ ಕೆಲಸ ಮಾಡಿದ್ದೇನೆ. ಎರಡನ್ನ ಹೋಲಿಸೋದಕ್ಕೇ ಸಾಧ್ಯವಿಲ್ಲ, ಏಕೆಂದರೆ ಐಪಿಎಲ್‌ ತುಂಬಾ ದೊಡ್ಡ ಕ್ರೀಡೆ. ಆದ್ರೆ ಪಾಕಿಸ್ತಾನದ ಸೂಪರ್‌ ಲೀಗ್‌ ಅನ್ನು ಮಿನಿ ಐಪಿಎಲ್‌ ಎಂದು ಕರೆಯಬಹುದು, ಪಾಕ್‌ಗೆ ಅದೇ ದೊಡ್ಡದು ಎಂದಿದ್ದಾರೆ. ವಿಶ್ವದ ದುಬಾರಿ ಕ್ರೀಡೆ: 2008ರಲ್ಲಿ ಆರಂಭಗೊಂಡ ಇಂಡಿಯನ್ ಪ್ರೀಮಿಯರ್ ಲೀಗ್ (IPL)ಗೆ ವಿಶ್ವದ ದುಬಾರಿ ಕ್ರೀಡೆ ಎಂದೇ ಖ್ಯಾತಿ ಪಡೆದುಕೊಂಡಿದೆ. ದೇಶ-ವಿದೇಶದ…

Read More

ಚಿಕ್ಕಬಳ್ಳಾಪುರ: ಸಿದ್ದರಾಮಯ್ಯ (Siddaramaiah) ಹಾಗೂ ಕಾಂಗ್ರೆಸ್‌ನವರ (Congress) ರಕ್ತದ ಕಣ ಕಣದಲ್ಲೂ ಹಿಂದೂ ವಿರೋಧಿ ಭಾವನೆ ಇದೆ ಎಂದು ಚಿಕ್ಕಬಳ್ಳಾಪುರದಲ್ಲಿ (Chikkaballapura) ವಿರೋಧ ಪಕ್ಷದ ನಾಯಕ ಆರ್ ಅಶೋಕ್ (R Ashok) ಹೇಳಿದರು. ವೀರಾಂಜನೇಯ ಸ್ವಾಮಿ ಕಡಲೆಕಾಯಿ ಪರಿಷೆ ಜಾತ್ರೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ರಾಮ ಈ ದೇಶದ ಆದರ್ಶ ಪುರುಷ. ರಾಮಮಂದಿರ ಆಗಬೇಕು,  ರಾಮರಾಜ್ಯ ಆಗಬೇಕು ಎಂಬುದು ನಮ್ಮ ಗುರಿ. ಆದರೆ ಸಿದ್ದರಾಮಯ್ಯ ಮುಸ್ಲಿಮರಿಗೆ 11 ಸಾವಿರ ಕೋಟಿ ಖರ್ಚು ಮಾಡುತ್ತಿದ್ದಾರೆ. ಟಿಪ್ಪು ಜಯಂತಿ ಮಾಡಿದ್ರೂ, ಶಾದಿ ಭಾಗ್ಯ ತಂದರು. ಸಿದ್ದರಾಮಯ್ಯ ಹಿಂದೂ ವಿರೋಧಿ. ಅದಕ್ಕಾಗಿಯೇ ಇದೆಲ್ಲಾ ಮಾಡಿದ್ದಾರೆ. ಹಿಂದೂ ವಿರೋಧಿ ಭಾವನೆ ಕಾಂಗ್ರೆಸ್‌ನ ರಕ್ತದಲ್ಲಿದೆ. ರಕ್ತದ ಕಣಕಣದಲ್ಲೂ ಹಿಂದೂ ವಿರೋಧಿ ಭಾವನೆ ಇದೆ ಎಂದು ಹರಿಹಾಯ್ದರು. https://ainlivenews.com/reliance-jio-has-announced-a-bumper-recharge-for-the-new-year-you-will-be-surprised-if-you-ask-for-an-offer/ ಕಾಂಗ್ರೆಸ್‌ನವರಿಂದ ಹೆಚ್ಚಿಗೆ ಏನೂ ಬಯಸಲ್ಲ. ಹೆಸರಿಗೆ ರಾಮ ಎನ್ನುತ್ತಾರೆ. ಆದರೆ ಒಳಗೆ ಒಂದು ಹೊರಗೆ ಒಂದು ಮಾಡುತ್ತಾರೆ. ರಾಮ ಅನ್ನೋದು ಅವರ ಜನ್ಮದಲ್ಲೇ ಬರಲ್ಲ. ಅವರು ಟಿಪ್ಪು ಸಂಸ್ಕೃತಿಯವರು. ರಾಮಜಪ…

Read More

ನಟಿ ಜಾನ್ವಿ ಕಪೂರ್ (Janhvi Kapoor) ಅವರು ಹೊಸ ಫೋಟೋಶೂಟ್ ಮಾಡಿಸಿದ್ದಾರೆ. ಕೆಂಪು ಬಣ್ಣದ ಡ್ರೆಸ್‌ನಲ್ಲಿ ನಟಿ ಬೋಲ್ಡ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ.  ಶ್ರೀದೇವಿ (Sridevi) ಪುತ್ರಿಯ ನಯಾ ಲುಕ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ನಟಿ ಜಾನ್ವಿ, ಆಗಾಗ ಗಮನ ಸೆಳೆಯುತ್ತಲೇ ಇರುತ್ತಾರೆ. ಇದರ ನಡುವೆ ಈಗೀನ ಹೊಸ ಅವತಾರ ಪಡ್ಡೆಹುಡುಗರ ನಿದ್ದೆ ಕೆಡಿಸುತ್ತಿದೆ.  ಕೆಂಪು ಬಣ್ಣದ ಡ್ರೆಸ್‌ನಲ್ಲಿ ಸಖತ್ ಹಾಟ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಟೈಟ್ ಆಗಿರೋ ಟಾಪ್ ಧರಿಸಿ ಮಸ್ತ್ ಆಗಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ನಟಿಯ ಗ್ಲ್ಯಾಮರಸ್‌ ಅವತಾರಕ್ಕೆ ಅಭಿಮಾನಿಗಳು ಫಿದಾ ಆಗಿದ್ದಾರೆ. 2018ರಲ್ಲಿ ‘ಧಡಕ್’ ಸಿನಿಮಾ ಮೂಲಕ ನಾಯಕಿಯಾಗಿ ಶ್ರೀದೇವಿ ಪುತ್ರಿ ಜಾನ್ವಿ ಕಪೂರ್ ಎಂಟ್ರಿ ಕೊಟ್ಟರು.

Read More

ಟೆಸ್ಟ್ ಕ್ರಿಕೆಟ್‌ನಲ್ಲಿ ತಂಡವನ್ನು ಮುನ್ನಡೆಸುವುದು ಅತ್ಯಂತ ಸವಾಲಿನ ಕೆಲಸವಾಗಿದೆ. ಪಂದ್ಯದ 5 ದಿನಗಳ ಆಟದಲ್ಲಿ ತನ್ನೊಂದಿಗೆ ಇತರ ಆಟಗಾರರ ಸಾಮರ್ಥ್ಯವನ್ನು ಸರಿದೂಗಿಸಿಕೊಂಡು ಹೋಗುವ ಜವಾಬ್ದಾರಿ ತಂಡದ ನಾಯಕರ ಮೇಲೆ ಇರುತ್ತದೆ. ಪ್ರಸ್ತುತ ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡ ಎರಡು ಪಂದ್ಯಗಳ ಟೆಸ್ಟ್‌ ಸರಣಿ ಆಡುತ್ತಿದೆ. ಆದರೆ, ಮೊದಲನೇ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದೆ. ಅಂದ ಹಾಗೆ ಪ್ರಸಕ್ತ ವರ್ಷದಲ್ಲಿ ಅತಿ ಹೆಚ್ಚು ಟೆಸ್ಟ್ ಪಂದ್ಯಗಳನ್ನು ಸೋತ ನಾಯಕರ ವಿವರ ಇಲ್ಲಿದೆ. 1. ಆಂಡ್ರ್ಯೂ ಬಾಲ್ಬಿರ್ನಿ (ಐರ್ಲೆಂಡ್) ಕ್ರಿಕೆಟ್ ಶಿಶು ಐರ್ಲೆಂಡ್ ತಂಡದ ನಾಯಕ ಆಂಡ್ರ್ಯೂ ಬಾಲ್ಬಿರ್ನಿ 2023ರಲ್ಲಿ 4 ಪಂದ್ಯಗಳಲ್ಲಿ ತಂಡದ ಸಾರಥ್ಯ ವಹಿಸಿದರೂ ಒಂದೇ ಒಂದು ಪಂದ್ಯದಲ್ಲಿ ಗೆಲುವು ಅಥವಾ ಡ್ರಾ ಸಾಧಿಸುವಲ್ಲಿ ಎಡವಿದ್ದಾರೆ. ಬಾಂಗ್ಲಾದೇಶ ವಿರುದ್ಧ (1-0), ಇಂಗ್ಲೆಂಡ್ (1-0), ಶ್ರೀಲಂಕಾ (2-0) ವಿರುದ್ಧ ಸರಣಿಗಳಲ್ಲಿ ಸೋಲು ಕಂಡಿದ್ದಾರೆ. 2. ದಿಮುತ್ ಕರುಣಾರತ್ನೆ (ಶ್ರೀಲಂಕಾ) ದ್ವೀಪ ರಾಷ್ಟ್ರ ಶ್ರೀಲಂಕಾ ತಂಡವನ್ನು ಟೆಸ್ಟ್ ಸ್ವರೂಪದಲ್ಲಿ ಮುನ್ನಡೆಸುತ್ತಿರುವ ದಿಮುತ್‌ ಕರುಣಾರತ್ನೆ…

Read More

ಹೊಸದಿಲ್ಲಿ: ಟೀಮ್ ಇಂಡಿಯಾದ ಫಾಸ್ಟ್ ಬೌಲಿಂಗ್ ಆಲ್ ರೌಂಡರ್ ಶಾರ್ದುಲ್ ಠಾಕೂರ್ ಅವರು ಸೆಂಚೂರಿಯನ್ ನಲ್ಲಿ ಅಭ್ಯಾಸ ನಡೆಸುವ ವೇಳೆ ಗಾಯದ ಸಮಸ್ಯೆಗೆ ಒಳಗಾಗಿದ್ದಾರೆ. ಬ್ಯಾಟಿಂಗ್ ಕೋಚ್ ವಿಕ್ರಮ್ ರಾಠೋಡ್ ರಿಂದ ಥ್ರೋಡೌನ್ ಗಳನ್ನು ಎದುರಿಸುವಾಗ ಶಾರ್ದುಲ್ ಠಾಕೂರ್ ತಮ್ಮ ಎಡಭುಜಕ್ಕೆ ಚೆಂಡನ್ನು ತಗುಲಿಸಿಕೊಂಡು ಗಾಯದ ಸಮಸ್ಯೆಗೆ ಸಿಲುಕಿದ್ದಾರೆ. ಸೆಂಚೂರಿಯನ್ ನ ಸೂಪರ್ ಸ್ಪೋರ್ಟ್ಸ್ ಪಾರ್ಕ್ ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಇನಿಂಗ್ಸ್ ಹಾಗೂ 32 ರನ್ ಗಳ ಸೋಲು ಕಂಡಿರುವ ರೋಹಿತ್ ಶರ್ಮಾ ಪಡೆ, ಸರಣಿಯನ್ನು 1-1 ಸಮಬಲಗೊಳಿಸಲು ಜನವರಿ 3ರಿಂದ ಕೇಪ್‌ಟೌನ್‌ನ ನ್ಯೂಲೆಂಡ್ಸ್‌ ಕ್ರೀಡಾಂಗಣದಲ್ಲಿ ನಡೆಯುವ ಎರಡನೇ ಟೆಸ್ಟ್‌ ಪಂದ್ಯವನ್ನು ಗೆಲ್ಲಲೇಬೇಕಾದ ಒತ್ತಡಕ್ಕೆ ಸಿಲುಕಿದ್ದಾರೆ. ಈ ನಡುವೆ ಶಾರ್ದೂಲ್ ಠಾಕೂರ್ ಅವರ ಗಾಯದ ಸಮಸ್ಯೆಯು ತಂಡದ ಮೇಲೆ ವ್ಯತಿರಿಕ್ತ ಪರಿಣಾಮ ಬೀಳುವ ಸಾಧ್ಯತೆಗಳಿವೆ. ಸದ್ಯ ಶಾರ್ದುಲ್ ಠಾಕೂರ್ ಅವರ ಗಾಯದ ಪ್ರಮಾಣದ ಬಗ್ಗೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ನೋವು ಹೆಚ್ಚಾದರೆ ಸ್ಕ್ಯಾನಿಂಗ್ ಗೆ‌ ಒಳಪಡಿಸಲಾಗುವುದು ಎಂದು ಬಿಸಿಸಿಐ…

Read More

ಕಲಬುರಗಿ:- ಜಿಲ್ಲೆಯ ಜನತೆ ಹೊಸ ವರ್ಷವನ್ನು ಭರ್ಜರಿ ವೆಲ್ ಕಮ್ ಮಾಡಿದ್ದಾರೆ. ಕುಣಿದು ಕುಪ್ಪಳಿಸಿ 2024 ಕ್ಕೆ ಬಿಸಿಲೂರ ಜನ ಸ್ವಾಗತ ಮಾಡಿದ್ದಾರೆ. ರಂಗುರಂಗಿನ ಬೆಳಕಲ್ಲಿ ಎಂಜಾಯ್ ಮಾಡಿ ಸೌಂಡ್ ಜೊತೆ ಸ್ಟೆಪ್ಸ್ ಹಾಕಿದ್ದಾರೆ. ನಗರದ ಹೋಟಲ್ ಗಳಲ್ಲಿ ಸೇರಿ ಎಲ್ಲೆಡೆ ನೂತನ ವರ್ಷದ ಕಲರವ ರಂಗೇರಿತ್ತು.

Read More

ನವದೆಹಲಿ: ಭಾರತೀಯ ಕುಸ್ತಿ ಫೆಡರೇಷನ್‍ನ (Wrestling Federation of India) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಅವರ ನಿವಾಸದಲ್ಲಿದ್ದ ಕಚೇರಿಯನ್ನು ನವದೆಹಲಿಯ ಹರಿ ನಗರಕ್ಕೆ ಸ್ಥಳಾಂತರಿಸಲಾಗಿದೆ. ಸಂಜಯ್ ಸಿಂಗ್ ಮುಖ್ಯಸ್ಥರಾಗಿ ಆಯ್ಕೆಯಾದ ಮೂರು ದಿನಗಳ ನಂತರವೂ ಬ್ರಿಜ್ ಭೂಷಣ್ ಅವರ ನಿವಾಸದಿಂದ ಕಚೇರಿ ನಡೆಯುತ್ತಿರುವುದಕ್ಕೆ ಕ್ರೀಡಾ ಸಚಿವಾಲಯವು ಇತ್ತೀಚೆಗೆ ಆಕ್ಷೇಪ ವ್ಯಕ್ತಪಡಿಸಿತ್ತು. ಅಲ್ಲದೇ ಹೊಸದಾಗಿ ರಚಿಸಲಾದ ಡಬ್ಲ್ಯುಎಫ್‍ಐ ಸಮಿತಿಯನ್ನು ಡಿ.24 ರಂದು ಅಮಾನತುಗೊಳಿಸಲು ಇದು ಒಂದು ಕಾರಣ ಎಂದು ಉಲ್ಲೇಖಿಸಲಾಗಿದೆ ಫೆಡರೇಶನ್‍ನ ವ್ಯವಹಾರವನ್ನು ಮಾಜಿ ಪದಾಧಿಕಾರಿಗಳ (ಬ್ರಿಜ್ ಭೂಷಣ್) ನಿಯಂತ್ರಣದ ಸ್ಥಳದಿಂದ ನಡೆಸಲಾಗುತ್ತಿದೆ. ಆಟಗಾರರ ಮೇಲೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಹೊತ್ತಿನಲ್ಲಿ ಹಾಗೂ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದಾಗ ಇದು ಸರಿಯಾದ ನಡೆಯಲ್ಲ. ಮಾಜಿ ಪದಾಧಿಕಾರಿಗಳ ಸಂಪೂರ್ಣ ನಿಯಂತ್ರಣದಲ್ಲಿದೆ. ಇದು ಕ್ರೀಡಾ ಸಂಹಿತೆಗೆ ಅನುಗುಣವಾಗಿಲ್ಲ ಎಂದು ಸಚಿವಾಲಯದ ಪತ್ರದಲ್ಲಿ ತಿಳಿಸಿದೆ. ಬ್ರಿಜ್ ಭೂಷಣ್ ಅವರ ಆಪ್ತ ಸಹಾಯಕ ಸಂಜಯ್…

Read More

ಪೋರ್ಟ್ ಲೂಯಿಸ್: ಪ್ರಧಾನಿ ನರೇಂದ್ರ ಮೋದಿಯವರಿಂದ ಮಾತ್ರ ಅಯೋಧ್ಯೆಯನ್ನು ಮತ್ತೆ ಬೆಳಕಿಗೆ ತರುವಲ್ಲಿ ಸಾಧ್ಯವಾಯಿತು. ಹೀಗಾಗಿ ಮೋದಿಯವರ ಮೇಲೆ ನಮಗೆ ವಿಶೇಷ ಗೌರವ ಇದ್ದು, ನಿಜಕ್ಕೂ ನಾವು ಹೆಮ್ಮೆಪಡುತ್ತೇವೆ ಎಂದು ಮಾರಿಷಸ್‌ ಸಂಸದ (Mauritius MP) ಮಹೇಂದ್ ಗಂಗಾಪ್ರಸಾದ್‌ (Mahend Gungapersad) ಹೇಳಿದ್ದಾರೆ. 2024ರ ಜನವರಿ 22 ರಂದು ನಾವು ಅಯೋಧ್ಯೆಯಲ್ಲಿ ರಾಮಮಂದಿರವನ್ನು (Ayodhya Ram Mandir) ಉದ್ಘಾಟಿಸಲಿದ್ದೇವೆ. ಇಂದು ಭಗವಾನ್ ರಾಮನು ಜನಿಸಿದ ಸ್ಥಳದಲ್ಲಿ ತನ್ನ ದೇವಾಲಯವನ್ನು ಹೊಂದಿ ದ್ದಾನೆ. ಈ ಸಮಯದಲ್ಲಿ ಭಾರತದಲ್ಲಿರಲು ನನಗೆ ತುಂಬಾ ಸಂತೋಷವಾಗಿದೆ. ನಿಮ್ಮಲ್ಲಿ ಹೆಚ್ಚಿನ ವರಿಗೆ ಊಹಿಸಲೂ ಸಾಧ್ಯವಿಲ್ಲ ಅಷ್ಟೊಂದು ಭಾರತದ ಬಗ್ಗೆ ನಾನು ಹೆಮ್ಮೆಪಡುತ್ತೇನೆ ಎಂದಿದ್ದಾರೆ. https://ainlivenews.com/16-days-bank-holiday-in-january-2024/ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ಭಾರತದ ಚಿತ್ರಣವನ್ನು ಪರಿವರ್ತಿಸಿದ್ದಾರೆ. ಈ ಮೂಲಕ ಇಂದು ಇಡೀ ವಿಶ್ವದ ಜನ ಭಾರತದತ್ತ ತಿರುಗಿ ನೋಡುತ್ತಿದ್ದಾರೆ. ಮೋದಿಯವರ ದೂರದೃಷ್ಟಿ ಮತ್ತು ನಾಯಕತ್ವದಿಂದಾಗಿ ಈ ನವ ಭಾರತ ಸಾಧ್ಯವಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ. ಅವರ ಅಧಿಕಾರಾವಧಿಯಲ್ಲಿ ಭಾರತವು…

Read More

ಬೆಂಗಳೂರು:- ನಗರದ ಹನುಮಂತ ನಗರ ಪೊಲೀಸ್‌ ಠಾಣೆ ವ್ಯಾಪ್ತಿಯ ಶ್ರೀನಿವಾಸ ನಗರದಲ್ಲಿ ಭಾನುವಾರ ರಾತ್ರಿ ಯುವಕನ ಕೊಲೆಯಾಗಿದೆ. ಬನಶಂಕರಿ ಮೂಲದ ವಿಜಯ(21)ಹತ್ಯೆಯಾದ ಯುವಕ. ಆತನನ್ನು ಮಾರಕಾಸ್ತ್ರಗಳಿಂದ ಇರಿದು ಕೊಲೆ ಮಾಡಿದ ದುಷ್ಕರ್ಮಿಗಳು ರಸ್ತೆ ಬದಿ ಎಸೆದು ಪರಾರಿಯಾಗಿದ್ದಾರೆ. ಭಾನುವಾರ ರಾತ್ರಿ 1 ಗಂಟೆ ಸುಮಾರಿಗೆ ಈ ಕೊಲೆ ನಡೆದಿದೆ. ವಿಜಯ್‌ ಅವರನ್ನು ಸ್ನೇಹಿತರೇ ಹತ್ಯೆಯಾಗಿರುವ ಶಂಕೆ ಇದೆ. ಅವರೆಲ್ಲ ಸೇರಿ ವಿಜಯ್‌ನನ್ನು ಕೊಂದು ಶ್ರೀನಿವಾಸ್ ನಗರ ಬಸ್ ನಿಲ್ದಾಣದ ಮುಂದೆ ಬಿಸಾಕಿ ಎಸ್ಕೇಪ್ ಆಗಿದ್ದಾರೆ. ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುವ ಪೊಲೀಸರು ಆರೋಪಿಗಳಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

Read More