Author: AIN Author

ಬೆಂಗಳೂರು:- ಸಂಕ್ರಾಂತಿ ವೇಳೆಗೆ ಸಂಕ್ರಾಂತಿ ಹಬ್ಬದ ವೇಳೆಗೆ ನಿಗಮ ಮಂಡಳಿ ನೇಮಕವಾಗುವ ನಿರೀಕ್ಷೆಯಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಈ ಸಂಬಂಧ ಮಾತನಾಡಿದ ಅವರು,ಪಕ್ಷದ ಕಾರ್ಯಕರ್ತರಿಗೆ ಸೂಕ್ತ ಸ್ಥಾನಮಾನದ ಕುರಿತು ವ್ಯವಸ್ಥೆ ಮಾಡಲಾಗುವುದು. ಕೇಂದ್ರ ನಾಯಕರು ಕೂಡ ಕೆಲವರಿಗೆ ಅಧಿಕಾರ ನೀಡುವ ಮಾತು ನೀಡಿದ್ದು, ಎಲ್ಲರ ಜತೆ ಚರ್ಚೆ ಮಾಡಬೇಕು ಎಂದರು. ಜನವರಿಯಲ್ಲಿ ದಿನಕ್ಕೆ ಎರಡು ಅಥವಾ ಮೂರು ವಿಧಾನಸಭೆ ಕ್ಷೇತ್ರಗಳಂತೆ ಬೆಂಗಳೂರಿನ 28 ಕ್ಷೇತ್ರಗಳ ಜನರ ಅಹವಾಲು ಸ್ವೀಕರಿಸಿ, ಅವರ ಸಮಸ್ಯೆಗೆ ಪರಿಹಾರ ನೀಡುವ ಕಾರ್ಯಕ್ರಮ ಹಮ್ಮಿಕೊಂಡಿದ್ದು, ದೆಹಲಿ ಹಾಗೂ ಬೇರೆ ಕಡೆ ಪ್ರವಾಸ ಸಂದರ್ಭದಲ್ಲಿ ಈ ಕಾರ್ಯಕ್ರಮಕ್ಕೆ ಬಿಡುವು ನೀಡಲಾಗುತ್ತದೆ ಎಂದು ಡಿ.ಕೆ.ಶಿವಕುಮಾರ್ ತಿಳಿಸಿದರು. ಲೋಕಸಭೆ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳಲು ಜ.10ರಂದು ಪಕ್ಷದ ನಾಯಕರು, ಶಾಸಕರು, ಎಐಸಿಸಿ ನಾಯಕರ ಜತೆಗೆ ಸಭೆ ನಡೆಯಲಿದೆ. ಜ.4ರಂದು ದೆಹಲಿಯಲ್ಲಿ ಇದೇ ವಿಷಯವಾಗಿ ಸಭೆ ನಿಗದಿಯಾಗಿದ್ದು, ಕೆಲವು ಸಚಿವರು ವರದಿ ನೀಡಿದ್ದಾರೆ. ಅದರಂತೆಯೇ ಸಮೀಕ್ಷೆ ಮಾಡಬೇಕಿದ್ದು, ದೆಹಲಿ ಸಭೆಯಲ್ಲಿ ಈ ವಿಚಾರ ಚರ್ಚೆಯಾಗಲಿದೆ…

Read More

ಹುಬ್ಬಳ್ಳಿ: ಕಾಂಗ್ರೆಸ್ ನಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವ ಯತ್ನ ನಡೆಸಲಾಗುತಿದ್ದು, ಇದೊಂದು ಮೋಸದಾಟ ಅಷ್ಟೇ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಹಿರಿಯ ಭಾರತೀಯ ಜನತಾ ಪಕ್ಷದ ನಾಯಕ ಗೋವಿಂದ ಕಾರಜೋಳ ಗಂಭೀರ ಆರೋಪ ಮಾಡಿದರು. ನಗರದಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು. ಮಲ್ಲಿಕಾರ್ಜುನ ಖರ್ಗೆ ಯಾವುದೇ ಕಾರಣಕ್ಕೂ ಕಾಂಗ್ರೆಸ್ ನಲ್ಲಿ ಪ್ರಧಾನಿ ಆಗಲ್ಲ. ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬರಲ್ಲ. ಪ್ರಧಾನಿ ನರೇಂದ್ರ ಮೋದಿ ಅವರು ಇರುವವರಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲ್ಲ. ಉದ್ದೇಶ ಪೂರ್ವಕವಾಗಿಯೇ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರು ಮುನ್ನಲೇ ತರಲಾಗುತ್ತದೆ. https://ainlivenews.com/this-time-new-year-celebration-channels-in-pakistan-do-you-know-why/ ದಲಿತರನ್ನ ಪ್ರಧಾನಿ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆವು. ಆದರೂ ಅಧಿಕಾರಕ್ಕೆ ಬರಲಿಲ್ಲ ಅಂತ ಕಾಂಗ್ರೆಸ್ ನವರು ಗೊಬೆ ಕುರಿಸುವ ಹುನ್ನಾರ ಇದಷ್ಟೇ ಎಂದು ಹೇಳಿದರು. ಕಾಂಗ್ರೆಸ್ಸಿಗೆ ದಲಿತರ ಮೇಲೆ ಕಾಂಗ್ರೆಸ್ ಗೆ ಪ್ರೀತಿ ಇದ್ದರೆ 2013ರಲ್ಲಿಯೇ ಖರ್ಗೆಯವರನ್ನು ಸಿಎಂ ಮಾಡಬೇಕಿತ್ತು.  ಕಾಂಗ್ರೆಸ್ ಗೆ ಆಗ ಸ್ಪಷ್ಟವಾದ ಬಹುಮತ ಬಂದಿತ್ತು. ಕೆಪಿಸಿಸಿ ಅಧ್ಯಕ್ಷರಾಗಿ ಜಿ ಪರಮೇಶ್ವರ…

Read More

ಬೆಂಗಳೂರು:- ಹೊಸವರ್ಷ ಆಚರಣೆಗೆ ಕೌಂಟ್ ಡೌನ್ ಶುರುವಾಗಿದೆ. ಹೊಸ ವರ್ಷಾಚರಣೆಗೆ ಡಿ.31ರ ರಾತ್ರಿ 1 ಗಂಟೆವರೆಗೆ ಕಾಲಾವಕಾಶ ನೀಡಿರುವ ಪೊಲೀಸರು, ರಾತ್ರಿ ಮದ್ಯ ಸೇವಿಸಿ ವಾಹನ ಚಲಾಯಿಸಿದರೆ ಬಿಸಿ ಮುಟ್ಟಿಸಲು ಚೆಕ್ ಪೋಸ್ಟ್‌ಗಳು ಹಾಗೂ ಠಾಣಾ ಮಟ್ಟದಲ್ಲಿ ವಿಶೇಷ ತಂಡಗಳನ್ನು ರಚಿಸಿದ್ದಾರೆ. ನಗರದಲ್ಲಿ ಹೊಸ ವರ್ಷಾಚರಣೆಯ ಕೇಂದ್ರ ಬಿಂದು ಎಂ.ಜಿ.ರಸ್ತೆ ಹಾಗೂ ಬ್ರಿಗೇಡ್ ರಸ್ತೆಯ ಬಂದೋಬಸ್ತ್ ಬಗ್ಗೆ ಶನಿವಾರ ರಾತ್ರಿ ಪೊಲೀಸ್ ಆಯುಕ್ತ ಬಿ.ದಯಾನಂದ್ ಸೇರಿದಂತೆ ಹಿರಿಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು. ನಗರ ವ್ಯಾಪ್ತಿ ಇಬ್ಬರು ಹೆಚ್ಚುವರಿ ಆಯುಕ್ತರು, ಜಂಟಿ ಆಯುಕ್ತ, 15 ಡಿಸಿಪಿ, 45 ಎಸಿಪಿ, 160 ಇನ್‌ಸ್ಪೆಕ್ಟರ್‌, 600 ಪಿಎಸ್‌ಐ, 600 ಎಎಸ್‌ಐ, 1800 ಎಚ್‌ಸಿ, 5200 ಕಾನ್‌ಸ್ಟೇಬಲ್‌ಗಳು ಸೇರಿ ಒಟ್ಟು 8500 ಪೊಲೀಸರು ನಿಯೋಜಿತರಾಗಿದ್ದಾರೆ. ಇವರಲ್ಲದೆ ನಗರ ಸಶಸ್ತ್ರ ಹಾಗೂ ರಾಜ್ಯ ಸಶಸ್ತ್ರ ಮೀಸಲು ಪಡೆಗಳು ಹಾಗೂ ಸಂಚಾರ ವಿಭಾಗದ ಪೊಲೀಸರು ಸಹ ಪಾಲ್ಗೊಳ್ಳಲಿದ್ದಾರೆ. ರಾತ್ರಿ 1 ಗಂಟೆ ಬಳಿಕ ಸಂಭ್ರಮಾಚರಣೆ ನಡೆಯುವ ಎಲ್ಲ ಹೋಟೆಲ್,…

Read More

ಭಾರತದ ನಂ.1 ಟೆನಿಸ್‌ ಆಟಗಾರ್ತಿ ಅಂಕಿತಾ ರೈನಾ ಗುರುವಾರ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ದೀರ್ಘ ಕಾಲದ ಗೆಳೆಯ ಮಿಲಿಂದ್‌ ಶರ್ಮಾ ಅವರನ್ನು ಸರಳ ಸಮಾರಂಭದಲ್ಲಿ ಅಂಕಿತಾ ರೈನಾ ವರಿಸಿದ್ದಾರೆ.  ಅಂಕಿತಾ ಮತ್ತು ಮಿಲಿಂದ್ ವಿವಾಹವನ್ನು ಕುಟುಂಬ ಸದಸ್ಯರು, ಸಂಬಂಧಿಕರು ಮತ್ತು ಸ್ನೇಹಿತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಸಲಾಯಿತು. ತಮ್ಮ ಮದುವೆ ಸಮಾರಂಭದ ಫೋಟೋಗಳನ್ನು 30 ವರ್ಷದ ಅಂಕಿತಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. https://ainlivenews.com/krishna-stone-from-mysore-is-used-to-carve-sri-rama-idol/  ‘ಪರಸ್ಪರ ಪ್ರೀತಿ ಮತ್ತು ವಾತ್ಸಲ್ಯ ನಮ್ಮಿಬ್ಬರನ್ನೂ ಇಲ್ಲಿಗೆ ಕರೆತಂದಿದೆ. ಜೋಡಿಯಾಗಿ ಹೊಸ ಪಯಣ ಆರಂಭಿಸುತ್ತಿರುವ ಈ ಸಂದರ್ಭದಲ್ಲಿ ನಿಮ್ಮೆಲ್ಲರ ಆಶೀರ್ವಾದ ಬೇಕು’ ಎಂದು ಅಂಕಿತಾ ಬರೆದುಕೊಂಡಿದ್ದಾರೆ. ಮದುವೆ ಸಮಾರಂಭದಲ್ಲಿ ಸಾಂಪ್ರದಾಯಿಕ ಉಡುಗೆಯಲ್ಲಿ ಮಿಂಚುತ್ತಿರುವ ಅಂಕಿತಾ ಮತ್ತು ಮಿಲಿಂದ್ ಅವರನ್ನು ಶ್ಲಾಘಿಸಿ ಹಲವು ಕಾಮೆಂಟ್‌ಗಳು ಬಂದಿವೆ. ಹೊಸ ಪಯಣ ಅದ್ಭುತವಾಗಿರಲಿ ಎಂದು ಹಾರೈಸಿ ಪೋಸ್ಟ್ ಗಳನ್ನು ಹಾಕಲಾಗುತ್ತಿದೆ. ಅಂಕಿತಾ ರೈನಾ 2018 ರಿಂದ ಟೆನಿಸ್ ಆಡುತ್ತಿದ್ದಾರೆ. ಅವರು ಕೆಲವು ಸಮಯದಿಂದ ಮಹಿಳೆಯರ ಸಿಂಗಲ್ಸ್ ಮತ್ತು ಡಬಲ್ಸ್‌ನಲ್ಲಿ ಸ್ಥಿರ ಪ್ರದರ್ಶನ…

Read More

ಮುಂಬೈ:- ಮಹಾರಾಷ್ಟ್ರದ ಸಂಭಾಜಿ ನಗರದಲ್ಲಿ ಹ್ಯಾಂಡ್ ಗ್ಲೌಸ್ ತಯಾರಿಕಾ ಕಾರ್ಖಾನೆಯಲ್ಲಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಆರು ಮಂದಿ ಕಾರ್ಮಿಕರು ಮೃತಪಟ್ಟಿರುವ ಘಟನೆ ಜರುಗಿದೆ. ಇಂದು ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. https://twitter.com/ANI/status/1741220066883227919?ref_src=twsrc%5Etfw%7Ctwcamp%5Etweetembed%7Ctwterm%5E1741220066883227919%7Ctwgr%5E6b1d7b98faa09eb092e04bae4dfacfb9752cea93%7Ctwcon%5Es1_c10&ref_url=http%3A%2F%2Fapi-news.dailyhunt.in%2F ಈ ಬಗ್ಗೆ ಮಾತನಾಡಿದ ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು, ಭಾನುವಾರ ನಸುಕಿನ ಜಾವ ಈ ದುರ್ಘಟನೆ ಸಂಭವಿಸಿದ್ದು, ಕಾರ್ಖಾನೆಯಲ್ಲಿದ್ದ ಆರು ಮಂದಿ ಕಾರ್ಮಿಕರು ಸಜೀವ ದಹನವಾಗಿದ್ದಾರೆ. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರ್ಖಾನೆ ಒಳಗೆ ಇನ್ನಷ್ಟು ಮಂದಿ ಸಿಲುಕಿದ್ದು, ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಘಟನೆ ನಡೆದ ವೇಳೆ ಕಾರ್ಖಾನೆ ಒಳಗೆ 10-15 ಮಂದಿ ಕಾರ್ಮಿಕರಿದ್ದರು ಎಂದು ತಿಳಿದು ಬಂದಿದೆ. ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ದೌಡಾಯಿಸಿದ್ದು, ಬೆಂಕಿಯನ್ನು ನಂದಿಸುತ್ತಿವೆ. ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಆದೇಶಿಸಲಾಗಿದ್ದು, ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

Read More

ಬೆಂಗಳೂರು : ಹೊಸ ವರ್ಷಾಚರಣೆ ಹಿನ್ನಲೆಯಲ್ಲಿ ನಗರದ ಹಲವೆಡೆ ಸಂಚಾರವನ್ನು ನಿರ್ಬಂಧಿಸಲಾಗಿದ್ದು, ವಾಹನ ಸವಾರರು, ಪಾದಚಾರಿಗಳು ಸೇರುವ ರಸ್ತೆ ಮಾರ್ಗಗಳನ್ನು ಬದಲಾವಣೆ ಮಾಡಲಾಗಿದೆ. ಸಾರ್ವಜನಿಕರ ಸುರಕ್ಷತೆ ಹಾಗೂ ಹಿತದೃಷ್ಟಿಯಿಂದ ಪೊಲೀಸರು ವಾಹನಗಳ ಸಂಚಾರ ಮಾರ್ಪಾಡು ಮಾಡಲಾಗಿದೆ. ಪೊಲೀಸ್ ವಾಹನಗಳು ಹಾಗೂ ಕರ್ತವ್ಯ ನಿರತ ತುರ್ತು ಸೇವಾ ವಾಹನಗಳನ್ನು ಹೊರತುಪಡಿಸಿ ಉಳಿದ ವಾಹನಗಳ ಪ್ರವೇಶ ನಿಷೇಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಂ.ಜಿ ರಸ್ತೆ, ಬ್ರಿಗೇಡ್ ರಸ್ತೆ, ರೆಸಿಡೆನ್ಸಿ ರಸ್ತೆ, ಚರ್ಚ್‌ ಸ್ಟ್ರೀಟ್‌, ಕೋರಮಂಗಲದಲ್ಲಿ ಹೊಸ ವರ್ಷಾಚರಣೆಗೆ ಹೆಚ್ಚಿನ ಜನರು ಸೇರುವ ನಿರೀಕ್ಷೆಯಿದ್ದು, ಪೊಲೀಸರು ಈ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ಮಾರ್ಪಾಡು ಮಾಡಿದ್ದಾರೆ. ಎಂಜಿ ರೋಡ್, ರೆಸಿಡೆನ್ಸಿ ರಸ್ತೆ, ಸೇಂಟ್‌ ಮಾರ್ಕ್ಸ್‌ ರೋಡ್ ಹಾಗೂ ಚರ್ಚ್‌ ಸ್ಟ್ರೀಟ್​ನಲ್ಲಿ ವಾಹನ ನಿಲುಗಡೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಎಂ.ಜಿ ರಸ್ತೆಯ ಅನಿಲ್‌ ಕುಂಬ್ಳೆ ವೃತ್ತದಿಂದ ಮೆಯೊ ಹಾಲ್‌ ಜಂಕ್ಷನ್‌ ವರೆಗೆ ಬ್ರಿಗೇಡ್‌ ರಸ್ತೆಯಲ್ಲಿ ಕಾವೇರಿ ಎಂಪೋರಿಯಂನ ಜಂಕ್ಷನ್‌ನಿಂದ ಅಪೇರಾ ಜಂಕ್ಷನ್‌ ವರೆಗೆ ಚರ್ಚ್‌ ಸ್ಟ್ರೀಟ್‌ನಲ್ಲಿ ಬ್ರಿಗೇಡ್‌ ರಸ್ತೆಯ ಜಂಕ್ಷನ್‌ನಿಂದ…

Read More

ರಾಯಚೂರು: ರಾಮ ಮಂದಿರ ಉದ್ಘಾಟನೆ ಕಾರ್ಯಕ್ರಮಕ್ಕೆ ನಮ್ಮ ಪಕ್ಷದ ಕೆಲವರು ಹೋಗುವವರು ಹೋಗುತ್ತಾರೆ ನಾವು ಇಲ್ಲೇ ಇರುವ ರಾಮಮಂದಿರಕ್ಕೆ ಹೋಗುತ್ತೇವೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. ಜಿಲ್ಲೆಯ ಲಿಂಗಸುಗೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದವರು, ” ಅಯೋಧ್ಯ ರಾಮಮಂದಿರಕ್ಕೆ ಕಾಂಗ್ರೆಸ್ ಕೆಲ ನಾಯಕರಿಗೆ ಆಹ್ವಾನ ಇಲ್ಲದಿರುವ ವಿಚಾರ ಹೋಗುವವರು ಅಲ್ಲಿ ಹೋಗ್ತಾರೆ ,ಇಲ್ಲಾ ಇಲ್ಲೇ ಊರಲ್ಲಿ ರಾಮಮಂದಿರಕ್ಕೆ ಹೋಗ್ತಾರೆ ಎರಡೂ ಕಡೆ ಆಚರಣೆ ಮಾಡಲಾಗುತ್ತದೆ. ನಾವು ಊರಲ್ಲೇ ರಾಮಮಂದಿರಕ್ಕೆ ಹೋಗುತ್ತೇವೆ ” ಎಂದರು. ವಿಜ್ಞಾನ ಸರ್ವಶ್ರೇಷ್ಠ ವಿಜ್ಞಾನ ಎಲ್ಲರ ಮನೆ ಮಾತಾಗಬೇಕು. ವಿಜ್ಞಾನಕ್ಕೆ ನಾವು ಹೆಚ್ಚು ಮಹತ್ವ ಕೊಡಬೇಕು, ವಿಜ್ಞಾನದ ಕಡೆಗೆ ಎಲ್ಲರೂ ಬರಬೇಕು ಅನ್ನೋದು ನಮ್ಮ ಉದ್ದೇಶವಾಗಿದೆ.ನಮ್ಮ ನಿರಂತರ ಹೋರಾಟ ಪರಿಷತ್ತಿನ ಹೋರಾಟವು ಅದೇ ಆಗಿದೆ.ನಾವು ಇದರ ಭಾಗವಾಗಿ ಮುಂಚೆ ಕೆಲಸ ಮಾಡಿದ್ದೇವೆ ಅದರಿಂದ ನನಗೆ ವೈಜ್ಞಾನಿಕವಾಗಿ 3ನೇ ರಾಜ್ಯ ಮಟ್ಟದ ಸಮ್ಮೇಳನದ ಅಧ್ಯಕ್ಷನಾಗಿ ನೇಮಕ ಮಾಡಿದ್ದಾರೆ. https://ainlivenews.com/this-time-new-year-celebration-channels-in-pakistan-do-you-know-why/ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಡಿಜೆಹಳ್ಳಿ ಕೆಜಿಹಳ್ಳಿ ಗಲಭೆಕೋರರ ಕೇಸ್…

Read More

ಈ ಪ್ರಸಿದ್ಧ ಪಾಕಪದ್ಧತಿ ಅನೇಕ ಬ್ರೆಡ್‌ಗಳೊಂದಿಗೆ ಸವಿಯಬಹುದು. ಅದರಲ್ಲಿ ಒಂದು ಮುಖ್ಯ ರೆಸಿಪಿ ಇರಾನಿ ಚಿಕನ್ ಕಡೈ. ಇದು ಬೇಯಿಸಿದ ಭಾರತೀಯ ಫ್ಲ್ಯಾಟ್ ಬ್ರೆಡ್‌ನೊಂದಿಗೆ ಸವಿಯಲು ಅದ್ಭುತ ಎನಿಸುತ್ತದೆ. ನಾವಿಂದು ಇರಾನಿ ಚಿಕನ್ ಕಡೈ ಮಾಡೋದು ಹೇಗೆಂದು ನೋಡೋಣ. ಬೇಕಾಗುವ ಪದಾರ್ಥಗಳು: ಚಿಕನ್ ತುಂಡುಗಳು – 500 ಗ್ರಾಂ ಎಣ್ಣೆ – ಕಾಲು ಕಪ್ ಬೆಣ್ಣೆ/ತುಪ್ಪ – 4 ಟೀಸ್ಪೂನ್ ತೆಳ್ಳಗೆ ಹೆಚ್ಚಿದ ಈರುಳ್ಳಿ – 2 ತೆಳ್ಳಗೆ ಹೆಚ್ಚಿದ ಹಸಿರು ಮೆಣಸಿನಕಾಯಿ – 3 ಹೆಚ್ಚಿದ ಟೊಮೆಟೋ – 2 ಚಿಲ್ಲಿ ಫ್ಲೇಕ್ಸ್ – 2 ಟೀಸ್ಪೂನ್ ಶುಂಠಿ ಪೇಸ್ಟ್ – 1 ಟೀಸ್ಪೂನ್ ಕೊತ್ತಂಬರಿ ಬೀಜ – 1 ಟೀಸ್ಪೂನ್ ಕಾಳು ಮೆಣಸು – 1 ಟೀಸ್ಪೂನ್ ಜೀರಿಗೆ – 1 ಟೀಸ್ಪೂನ್ ಫ್ರೆಶ್ ಕ್ರೀಂ – 2 ಟೀಸ್ಪೂನ್ ಹೆಚ್ಚಿದ ಕೊತ್ತಂಬರಿ ಸೊಪ್ಪು – 2 ಟೀಸ್ಪೂನ್ ಉಪ್ಪು – ರುಚಿಗೆ ತಕ್ಕಷ್ಟು ಮಾಡುವ ವಿಧಾನ: *…

Read More

ಮುಖೇಶ್ ಅಂಬಾನಿಯವರ ಸಂಸ್ಥೆಯು ನೀಡುವ ಹೊಸ ವರ್ಷದ 2024 ಯೋಜನೆಯು ವಾಸ್ತವವಾಗಿ ಹಳೆಯ ಯೋಜನೆಯಾಗಿದೆ ಆದರೆ ಹೊಸ ವರ್ಷದ ಸಂದರ್ಭದಲ್ಲಿ, ಕಂಪನಿಯು ಪ್ಲಾನ್ ಜೊತೆಗೆ 24 ದಿನಗಳ ಹೆಚ್ಚುವರಿ ಮಾನ್ಯತೆಯನ್ನು ನೀಡುತ್ತಿದೆ. ಇತರ ಯೋಜನೆಗಳಂತೆ, ರಿಲಯನ್ಸ್ ಜಿಯೋ ಹೊಸ ವರ್ಷದ 2024 ಯೋಜನೆಯು 2.5GB ದೈನಂದಿನ 5G ಡೇಟಾ ಮತ್ತು OTT ಚಂದಾದಾರಿಕೆಯೊಂದಿಗೆ ಅನಿಯಮಿತ ಕರೆಗಳನ್ನು ನೀಡುತ್ತದೆ. ರಿಲಯನ್ಸ್ ಜಿಯೋ ಹೊಸ ವರ್ಷದ 2024  ಈ ಯೋಜನೆಯು ಪ್ರಿಪೇಯ್ಡ್ ಬಳಕೆದಾರರಿಗೆ ಮಾತ್ರ.  ಹೊಸ ವರ್ಷದ 2024 ಯೋಜನೆಯು ರೂ. 2999 ಮತ್ತು ಇದು ಹೆಚ್ಚುವರಿ 24 ದಿನಗಳೊಂದಿಗೆ 389 ದಿನಗಳವರೆಗೆ ಮಾನ್ಯವಾಗಿರುತ್ತದೆ. ಈ ಯೋಜನೆಯು ಬಳಕೆದಾರರಿಗೆ ದಿನಕ್ಕೆ 2.5GB 5G ಡೇಟಾ, ಅನಿಯಮಿತ ಧ್ವನಿ ಕರೆಗಳು ಮತ್ತು ದಿನಕ್ಕೆ 100 SMS ಅನ್ನು ಪ್ರವೇಶಿಸಲು ಅನುಮತಿಸುತ್ತದೆ. ಇದು JioTV, JioCinema ಮತ್ತು JioCloud ಗೆ ಚಂದಾದಾರಿಕೆಗಳನ್ನು ಸಹ ನೀಡುತ್ತದೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಕಂಪನಿಯು ಇದೇ ರೀತಿಯ ಕೊಡುಗೆಯನ್ನು ಘೋಷಿಸಿತ್ತು.  https://ainlivenews.com/krishna-stone-from-mysore-is-used-to-carve-sri-rama-idol/…

Read More

ಕಲಬುರ್ಗಿ:-ಪ್ರಧಾನಿ ನರೇಂದ್ರ ಮೋದಿಯವರ ಸುನಾಮಿ ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ತೇಜಸ್ವಿ ಸೂರ್ಯ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಇಡೀ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಪರ ಸುನಾಮಿ ಅಲೆ ಇದೆ. ದೇಶದ ಜನರು ಮೋದಿ ಅಧಿಕಾರದಲ್ಲಿ ಹೊಸ ಕನಸು ಕಾಣುತ್ತಿದ್ದಾರೆ. ಈ ಬಾರಿ ರಾಜ್ಯದಲ್ಲಿ ಸುಮಾರು 25 ಸ್ಥಾನಗಳನ್ನು ಬಿಜೆಪಿ ಗೆಲ್ಲುತ್ತದೆ. ಇಂತಹ ಗೆಲುವನ್ನು ಯಾರೂ ತಡೆಯಲಾಗದು. ಯಾವುದೇ ಗೋಡೆ, ಅಣೆಕಟ್ಟು ಸಹ ಸುನಾಮಿಯನ್ನು ತಡೆಯಲು ಸಾಧ್ಯವಿಲ್ಲ ಎಂದರು. ಸಂಸತ್ತಿನಲ್ಲಿ ಒಂದು ಸ್ಥಾನ ಕಡಿಮೆ ಆದರೂ ರಾಜಸ್ಥಾನ್‌ ಆಗುವ ಕುರಿತು ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆಗೆ ಪ್ರತಿಕ್ರಿಯಿಸಿದ ತೇಜಸ್ವಿ ಸೂರ್ಯ, ಅದು ಅವರ ವೈಯಕ್ತಿಕ ಹೇಳಿಕೆಯಾಗಿದೆ. ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ 28 ಸ್ಥಾನಗಳು ಬರುವುದಾಗಿ ಹೇಳಿದ್ದಾರೆ ಎಂದು ತಿಳಿಸಿದರು.

Read More