Author: AIN Author

ಸಿಂಧನೂರು:- ಬಿಜೆಪಿ ಅವರದ್ದಲ್ಲ, ನಮ್ಮದು ನಿಜವಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಬರ ಪರಿಹಾರ ಬಿಡುಗಡೆ ಗೊಳಿಸುವಂತೆ ಮನವಿ ಮಾಡಿದರು ನಯಾಪೈಸೆ ನೀಡದ ಬಿಜೆಪಿಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಮಾತು ಎತ್ತಿದರೆ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಎಂದು ಹೇಳುವರು ಆದರೆ ನಮಗೆ ಸಾಥ್ ನೀಡುತ್ತಿಲ್ಲ. ಬಡವರ ಬದುಕನ್ನು ಸುಧಾರಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನು ಜಾರಿಗೊಳಿಸಿರುವ ಕಾಂಗ್ರೆಸ್ಸಿನದ್ದು ನಿಜವಾದ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ಆಗಿದೆ ಎಂದರು. ಕೇಂದ್ರ ಸರ್ಕಾರ ನಮ್ಮಿಂದ ತೆರಿಗೆ ಕಟ್ಟಿಸಿಕೊಂಡು ಬರ ಪರಿಹಾರ ನೀಡಲು ಮೀನಮೇಷ ಎಣಿಸುತ್ತಿದೆ. ಬಿಜೆಪಿ ಆಡಳಿತ ಸಮಯದಲ್ಲಿ ಹಣವನ್ನು ತಿಂದು ಹೋಗಿದ್ದಾರೆ. ನೀರಾವರಿ ಇಲಾಖೆಯಲ್ಲಿ 13 ಸಾವಿರ ಕೋಟಿ, ಲೋಕೋಪಯೋಗಿಯಲ್ಲಿ 9 ಸಾವಿರ ಕೋಟಿ, ಸಣ್ಣ ನೀರಾವರಿಯಲ್ಲಿ 4 ಸಾವಿರ ಕೋಟಿ, ಆರ್ಡಿಪಿಎಸ್ನಲ್ಲಿ 3 ಸಾವಿರ ಕೋಟಿಯನ್ನು ಬಾಕಿ ಉಳಿಸಿದ್ದು,…

Read More

ರಷ್ಯಾ: ಮುಂದಿನ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರು ವಿಜಯ ಸಾಧಿಸಲಿ ಎಂದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಹೇಳಿದ್ದಾರೆ. ಮೊದಲ ಬಾರಿ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಭಾರತದ ರಾಜಕೀಯದ ಬಗ್ಗೆ ಮಾತನಾಡಿದ್ದಾರೆ. ಮತ್ತೊಮ್ಮೆ ಪ್ರಧಾನಿ ಮೋದಿ ಅವರು ಅಧಿಕಾರಕ್ಕೆ ಬರುವಂತೆ ಹಾರೈಸಿದ್ದಾರೆ. ನಮ್ಮ ಸ್ನೇಹಿತರ ಪ್ರತಿ ಯಶಸ್ಸನ್ನು ಹಾರೈಸುತ್ತೇನೆ. ಎರಡು ದೇಶಗಳು ಸಾಂಪ್ರದಾಯಿಕ ಸೌಹಾರ್ದ ಸಂಬಂಧಗಳನ್ನು ಹೊಂದಿದೆ ಎಂದು ಹೇಳಿದರು. https://ainlivenews.com/attention-students-mphil-not-recognized-ugc-notice-to-stop-admission/ ದೆಹಲಿ ಮತ್ತು ಮಾಸ್ಕೋ ನಡುವೆ ರಾಜಕೀಯ ಶಕ್ತಿಗಳ ಹೊಂದಾಣಿಕೆ ಏನೇ ಇರಲಿ. ಅದಕ್ಕೂ ಮೇಲಾಗಿ ನನ್ನ ಮತ್ತು ಮೋದಿ ಅವರು ಸ್ನೇಹ ಇದೆ ಎಂದು ಹೇಳಿದರು. ಇದರ ಜತೆಗೆ ಪ್ರಧಾನಿ ಮೋದಿ ಅವರೊಂದಿಗೆ ಉಕ್ರೇನ್‌ ಬೆಳವಣಿಗೆ ಬಗ್ಗೆ ಮಾತನಾಡಿದ್ದಾನೆ. ಹಲವು ಬಾರಿ ಅಲ್ಲಿ ನಡೆಯುವ ವಿಚಾರಗಳ ಬಗ್ಗೆ ನಾವು ವೈಯಕ್ತಿಕವಾಗಿ ಮಾತನಾಡಿದ್ದೇನೆ. ಈ ಬಗ್ಗೆ ಅವರು ಕೂಡ ಸಲಹೆಗಳನ್ನು ಕೂಡ ನೀಡಿದ್ದಾರೆ. ಈ ಸಮಸ್ಯೆಯನ್ನು ಬಗೆಹರಿಸಲು ಭಾರತ ಮತ್ತು ರಷ್ಯಾ ಒಟ್ಟಾಗಿ ಚರ್ಚೆ ನಡೆಸಲಿದೆ. ಹಾಗೂ ಅವರು…

Read More

ಕೃಷಿಕರ ಬೇಸಾಯಕ್ಕೆ ಧನಸಹಾಯವಾಗಿ ಸರ್ಕಾರ ಆರಂಭಿಸಿರುವ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಲ್ಲಿ (PM Kisan Samman Nidhi Yojana) 15ನೇ ಕಂತಿನ ಹಣ ನವೆಂಬರ್ 15ರಂದು ಬಿಡುಗಡೆ ಆಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ಝಾರ್ಖಂಡ್ನ ಖೂಂಟಿಯಲ್ಲಿ (Khunti, Jharkhand) ಹೊಸ ಕಂತಿನ ಹಣ ಬಿಡುಗಡೆಯಾಗಿರುವುದನ್ನು ಪ್ರಕಟಿಸಿದರು. ಎಂಟು ಕೋಟಿಗೂ ಹೆಚ್ಚು ರೈತರ ಖಾತೆಗಳಿಗೆ 2,000 ರೂ ಹಣ ವರ್ಗಾವಣೆ ಆಗಿದೆ. ಬಹುತೇಕ ಮಂದಿಯ ಖಾತೆಗೆ ಹಣ ಬಂದಿದೆ. ಸರ್ಕಾರ 15ನೇ ಕಂತಿಗೆ ಒಟ್ಟು 18,000 ಕೋಟಿ ರೂ ಹಣ ವೆಚ್ಚ ಮಾಡಿದೆ. ಇಲ್ಲಿಯವರೆಗೆ ಎಲ್ಲಾ 15 ಕಂತುಗಳಿಂದ ಒಟ್ಟು ಹಣ 2.75 ಲಕ್ಷ ಕೋಟಿ ರೂ ಆಗಿದೆ. ಪಿಎಂ ಕಿಸಾನ್ ಸ್ಕೀಮ್ನಲ್ಲಿ 15ನೇ ಕಂತಿನ ಹಣ ಬಂದಿಲ್ಲದಿದ್ದರೆ ಅದಕ್ಕೆ ಕಾರಣಗಳಿವು… • ಯೋಜನೆಗೆ ಇನ್ನೂ ನೊಂದಾವಣಿ ಆಗಿಲ್ಲದೇ ಇರಬಹುದು. • ಇಕೆವೈಸಿ ಆಗಿಲ್ಲದೇ ಇರಬಹುದು, ಅಥವಾ ಸರಿಯಾಗಿ ಮಾಡಿಲ್ಲದೇ ಇರಬಹುದು. • ಯೋಜನೆಯ ಅರ್ಹತಾ ಮಾನದಂಡ ಒದಗಿಸಲು ವಿಫಲವಾಗಿರಬಹುದು…

Read More

ಬೆಂಗಳೂರು:- ಹೊಸ ವರ್ಷಕ್ಕೆ ಕೌಂಟ್ ಡೌನ್ ಶುರುವಾಗಿದ್ದು, ಹೀಗಾಗಲೇ ಹೊಸ ಕ್ಯಾಲೆಂಡರ್ ಕೂಡ ಎಲ್ಲರಿಗೂ ತಲುಪಿದೆ. ಈ ವರ್ಷದಲ್ಲಿ ಎಷ್ಟು ರಜೆಗಳಿವೆ ಎಂಬುದರ ಮೇಲೆ. 2024ರಲ್ಲಿ ವಿವಿಧ ವಿಭಾಗಗಳ ನೌಕರರಿಗೆ ಲಭ್ಯವಿರುವ ಕೆಲಸದ ದಿನಗಳು, ರಜಾ ದಿನಗಳು ಎಷ್ಟು ಎಂಬುದನ್ನು ಇಲ್ಲಿ ತಿಳಿಯೋಣ ಶಾಲೆಯಲ್ಲಿ ಕೆಲಸ ನಿರ್ವಹಿಸುವವರಿಗೆ: 52 ಭಾನುವಾರ, 21 ಸಾರ್ವತ್ರಿಕ ರಜೆಗಳು, 15 ಸಾಂರ್ದಭಿಕ ರಜೆಗಳು ಹಾಗೂ 2 ಪರಿಮಿತ ರಜೆಗಳು, 5 ಸ್ಥಳೀಯ ರಜೆಗಳು ಸೇರಿದರೆ 95 ರಜೆಗಳಿದ್ದು ಕೆಲಸ ದಿನಗಳು 271 ಇರುತ್ತವೆ. ಬ್ಯಾಂಕ್ ನೌಕರರ ರಜೆಗಳು: 2024 ಅಧಿಕ ವರ್ಷವಾದ್ದರಿಂದ 366 ದಿನಗಳಿವೆ. 52 ಭಾನುವಾರ, 24 ಎರಡನೇ ಮತ್ತು ನಾಲ್ಕನೇ ಶನಿವಾರ, 21 ಸಾರ್ವತ್ರಿಕ ರಜಾದಿನಗಳು, ನೌಕರರಿಗಿರುವ 12 ವೈಯಕ್ತಿಕ ರಜೆಗಳು ಸೇರಿ ಒಟ್ಟು 109 ರಜಾದಿನಗಳಿವೆ. ಕೆಲಸದ ದಿನಗಳು 257 ಮಾತ್ರ. ಜನವರಿಯಲ್ಲಿ 13, 14 ಮತ್ತು 15 ಮೂರು ದಿನಗಳ ಹ್ಯಾಟ್ರಿಕ್ ರಜೆ ಬ್ಯಾಂಕ್ ನೌಕರರಿಗೆ ಲಭ್ಯ. ಫೆಬ್ರವರಿಯಲ್ಲಿ 29…

Read More

ಸೆಂಚೂರಿಯನ್‌: ಟೀಂ ಇಂಡಿಯಾ (Team India) ಟಾಪ್‌ ಕ್ಲಾಸ್‌ ಕ್ರಿಕೆಟಿಗ ವಿರಾಟ್ ಕೊಹ್ಲಿ (Virat Kohli) ಅತ್ಯುತ್ತಮ ಬ್ಯಾಟಿಂಗ್‌ ಫಾರ್ಮ್‌ನೊಂದಿಗೆ ದಾಖಲೆ ಮೇಲೆ ದಾಖಲೆಗಳನ್ನ ಬರೆಯುತ್ತಿದ್ದಾರೆ. ಇದೀಗ ದಕ್ಷಿಣ ಆಫ್ರಿಕಾ ವಿರುದ್ಧದ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದಲ್ಲಿ ಒಟ್ಟು 114 ರನ್ ಕಲೆಹಾಕುವ ಮೂಲಕ ಪ್ರಸಕ್ತ ವರ್ಷದ ಎಲ್ಲಾ ಸ್ವರೂಪದಲ್ಲೂ 2 ಸಾವಿರ ರನ್‌ ಪೂರ್ಣಗೊಳಿಸಿದ ಸಾಧನೆ ಮಾಡಿದ್ದಾರೆ. ಭಾರತದ ಆತಿಥ್ಯದಲ್ಲಿ ನಡೆದಿದ್ದ ವಿಶ್ವಕಪ್‌ ಟೂರ್ನಿಯ ಮೊದಲ ಸೆಮಿಫೈನಲ್‌ ಪಂದ್ಯದಲ್ಲಿ ಕೊಹ್ಲಿ 50ನೇ ಶತಕ ಸಿಡಿಸುವ ಮೂಲಕ ಕ್ರಿಕೆಟ್‌ ದೇವರು ಸಚಿನ್‌ ತೆಂಡೂಲ್ಕರ್‌ ಅವರ ಸಾರ್ವಕಾಲಿಕ ದಾಖಲೆಯನ್ನ ನುಚ್ಚುನೂರು ಮಾಡಿದ್ದರು. ಇದೀಗ ದಕ್ಷಿಣ ಆಫ್ರಿಕಾ (South Africa) ವಿರುದ್ಧ ಅರ್ಧಶತಕ ಸಿಡಿಸುವ ಮೂಲಕ 146 ವರ್ಷಗಳ ಟೆಸ್ಟ್‌ ಕ್ರಿಕೆಟ್‌ (Test Cricket) ಇತಿಹಾಸದಲ್ಲೇ ಮಹತ್ವದ ಮೈಲುಗಲ್ಲು ತಲುಪಿದ್ದಾರೆ. ಕೊಹ್ಲಿ ಸಪ್ತ ಸಾಧನೆ: ವಿರಾಟ್ ಕೊಹ್ಲಿ ತಮ್ಮ ಅಂತಾರಾಷ್ಟ್ರೀಯ ಕ್ರಿಕೆಟ್ ವೃತ್ತಿ ಜೀವನ ಆರಂಭಿಸಿದಾಗಿನಿಂದಲೂ ಉತ್ತಮ ಫಾರ್ಮ್‌ನಲ್ಲಿದ್ದು, ಒಂದೇ ಕ್ಯಾಲೆಂಡರ್ ವರ್ಷದಲ್ಲಿ 7 ಬಾರಿ…

Read More

ಬೆಂಗಳೂರು:- ಕನ್ನಡಕ್ಕಾಗಿ ಹೋರಾಟ ಮಾಡಿದವರ ಬಂಧನ ಖಂಡನೀಯ ಎಂದು ವಾಟಾಳ್ ನಾಗರಾಜ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕನ್ನಡ ನಾಮಫಲಕ ಕಡ್ಡಾಯ ಮಾಡಬೇಕು. ಕನ್ನಡ ಹೋರಾಟಗಾರರನ್ನು ಬಂಧನದಿಂದ ಬಿಡುಗಡೆ ಮಾಡಬೇಕು. ನಮ್ಮ ಬೇಡಿಕೆಯ ಮನವಿಯನ್ನು ಮುಖ್ಯಮಂತ್ರಿ ಅವರಿಗೆ ನೀಡುತ್ತೇವೆ. ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ಬಂದ್ ಮಾಡುತ್ತೇವೆ. ಫೆಬ್ರುವರಿ ಎರಡನೇ ವಾರ ಬಂದ್ ಮಾಡುತ್ತೇವೆ. ಅನ್ಯಭಾಷೆ ಸಿನಿಮಾ ಪ್ರದರ್ಶನ ಬಂದ್ ಮಾಡುತ್ತೇವೆ ಎಂದು ವಾಟಾಳ್ ನಾಗರಾಜ್ ಎಚ್ಚರಿಕೆ ನೀಡಿದ್ದಾರೆ. ಹಾಗೂ ರಾಜ್ಯದಲ್ಲಿ ಕನ್ನಡ ನಾಮಫಲಕ ಕಡ್ಡಾಯ ವಿಚಾರವಾಗಿ ಹೋರಾಟ ನಡೆಸಿದ್ದ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ನಾರಾಯಣಗೌಡ ಹಾಗೂ ಕನ್ನಡಪರ ಹೋರಾಟಗಾರರನ್ನು ಬಂಧಿಸಿರುವುದನ್ನು ಇದೇ ವೇಳೆ ಖಂಡಿಸಿದರು.

Read More

ನಿಂಬೆಹಣ್ಣು ಆರೋಗ್ಯಕ್ಕೆ ಒಳ್ಳೆದು ಎನ್ನುವ ವಿಚಾರ ಸಾಮಾನ್ಯವಾಗಿ ಎಲ್ಲರಿಗು ತಿಳಿದಿದೆ. ಆದ್ರೆ ಅತಿಯಾದರೆ ಅಮೃತವೂ ವಿಷ ಎನ್ನುವ ಹಾಗೆ ಒಳ್ಳೆದು ಎಂದು ಹೆಚ್ಚು ನಿಂಬೆರಸ ಸೇವಿಸಿದರೆ ಆರೋಗ್ಯ ಹಾನಿಕರ ಎನ್ನುವ ಬಗ್ಗೆ ಹಲವರಿಗೆ ತಿಳಿದಿಲ್ಲ. ಹೌದು. ಅನೇಕ ಮನೆಮದ್ದುಗಳಲ್ಲಿ ನಿಂಬೆರಸ ಬಳಸಲಾಗುತ್ತದೆ. ಬೆಳಗ್ಗೆ ಬಿಸಿ ನೀರಿಗೆ ಸ್ವಲ್ಪ ನಿಂಬೆರಸ ಹಾಕಿ ಕುಡಿದರೆ ದೇಹದ ಕೊಬ್ಬು ಕರಗುವುದರ ಜೊತೆಗೆ ಕ್ಯಾನ್ಸರ್ ತಡೆಗಟ್ಟಬಹುದೆಂದು ಅಧ್ಯಯನಗಳು ಹೇಳಿವೆ. ಇದರ ಜೊತೆಗೆ ಅತಿಯಾಗಿ ನಿಂಬೆರಸ ಸೇವಿಸಿದರೆ ಎಷ್ಟು ಅಪಾಯಕಾರಿ ಎನ್ನುವುದನ್ನ ಕೂಡ ಅಧ್ಯಯನಗಳೇ ತಿಳಿಸಿವೆ. ಆರೋಗ್ಯಕರ ಗುಣವಿರುವ ನಿಂಬೆಹಣ್ಣಿನ ರಸವನ್ನು ಎಷ್ಟು ಪ್ರಮಾಣದಲ್ಲಿ ಸೇವಿಸಬೇಕು ಎಂಬುದು ತಿಳಿಯದಿದ್ದರೆ ಅಪಾಯ ತಪ್ಪಿದ್ದಲ್ಲ. ನಿಂಬೆ ಹಣ್ಣಿನಲ್ಲಿರುವ ಆಮ್ಲೀಯ ಗುಣ ಹೆಚ್ಚಾಗಿ ದೇಹ ಸೇರಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ. ಎಷ್ಟು ಪ್ರಮಾಣದಲ್ಲಿ ನಿಂಬೆರಸ ಸೇವನೆ ಮಾಡಬೇಕು? ನಿಂಬೆರಸ ಎಷ್ಟು ಸೇವಿಸಬೇಕು ಎಂಬುದು ವ್ಯಕ್ತಿಯ ವಯಸ್ಸು, ಆರೋಗ್ಯ ಮುಂತಾದವುಗಳ ಮೇಲೆ ಅವಲಂಬಿತವಾಗಿರುತ್ತೆ. ನಿಂಬೆರಸವನ್ನು ಇಷ್ಟೇ ಪ್ರಮಾಣದಲ್ಲಿ ಸೇವಿಸಬೇಕು ಎಂದು ನಿರ್ಧರಿಸಲು ಸಾಕಷ್ಟು…

Read More

ನವದೆಹಲಿ: ಬೆಂಗಳೂರಿನಿಂದ (Bengaluru) ಅಯೋಧ್ಯೆಗೆ (Ayodhya) ತೆರಳುವ ಮಂದಿಗೆ ಸಿಹಿ ಸುದ್ದಿ. ಬೆಂಗಳೂರಿನಿಂದ ಅಯೋಧ್ಯೆ ನೇರ ವಿಮಾನ ಸೇವೆ ನೀಡುವುದಾಗಿ ಏರ್‌ ಇಂಡಿಯಾ ಎಕ್ಸ್‌ಪ್ರೆಸ್‌ (Air India Express) ಪ್ರಕಟಿಸಿದೆ. ದೇಶದ ಮೂರು ಮಹಾನಗರಗಳಿಂದ ಅಯೋಧ್ಯೆಯಲ್ಲಿರುವ ಮಹರ್ಷಿ ವಾಲ್ಮಿಕಿ ಇಂಟರ್‌ನ್ಯಾಷನಲ್‌ ವಿಮಾನ ನಿಲ್ದಾಣಕ್ಕೆ (Maharishi Valmiki International Airport) ವಿಮಾನ ಸಂಪರ್ಕ ಕಲ್ಪಿಸುವುದಾಗಿ ಏರ್‌ ಇಂಡಿಯಾ ಹೇಳಿದೆ. ಮೊದಲ ವಿಮಾನ ಜ.17 ರಿಂದ ಬೆಂಗಳೂರು- ಅಯೋಧ್ಯೆ, ಕೋಲ್ಕತ್ತಾ – ಅಯೋಧ್ಯೆ ಮಧ್ಯೆ ಹಾರಾಟ ನಡೆಸಲಿದೆ. ಬೆಂಗಳೂರಿನಿಂದ ಬೆಳಗ್ಗೆ 8:05ಕ್ಕೆ ಟೇಕಾಫ್‌ ಆದರೆ ಅಯೋಧ್ಯೆಯಲ್ಲಿ ಬೆಳಗ್ಗೆ 10:35ಕ್ಕೆ ಲ್ಯಾಂಡ್‌ ಆಗಲಿದೆ. ಮಧ್ಯಾಹ್ನ 03:40ಕ್ಕೆ ಅಯೋಧ್ಯೆಯಿಂದ ಟೇಕಾಫ್‌ ಆಗುವ ವಿಮಾನ ಸಂಜೆ 06:10ಕ್ಕೆ ಬೆಂಗಳೂರಿನಲ್ಲಿ ಲ್ಯಾಂಡ್‌ ಆಗಲಿದೆ. ಅಯೋಧ್ಯೆಯಿಂದ ಬೆಳಗ್ಗೆ 11:05ಕ್ಕೆ ಟೇಕಾಫ್‌ ಆಗುವ ವಿಮಾನ ಮಧ್ಯಾಹ್ನ 12:50ಕ್ಕೆ ಕೋಲ್ಕತ್ತಾದಲ್ಲಿ ಲ್ಯಾಂಡ್‌ ಆಗಲಿದೆ. ಮಧ್ಯಾಹ್ನ 01:25ಕ್ಕೆ ಟೇಕಾಫ್‌ ಆಗುವ ವಿಮಾನ ಮಧ್ಯಾಹ್ನ 03:10ಕ್ಕೆ ಅಯೋಧ್ಯೆ ತಲುಪಲಿದೆ. ನಮ್ಮ ನೆಟ್‌ವರ್ಕ್‌ನ ಪ್ರಮುಖ ಕೇಂದ್ರಗಳಾಗಿರುವ ಬೆಂಗಳೂರು ಮತ್ತು ಕೋಲ್ಕತ್ತಾಗಳು…

Read More

2023 ಬಾಲಿವುಡ್‌ಗೆ ಪುನರುಜ್ಜೀವನದ ವರ್ಷವಾಗಿತ್ತು, ಚಿತ್ರಗಳು ಎರಡೂ ಚಿತ್ರಮಂದಿರಗಳಲ್ಲಿ ಮತ್ತು OTT ಜಾಗದಲ್ಲಿ ಆಯ್ಕೆಯಾಗಲು ಪ್ರಾರಂಭಿಸಿದವು. ಹಲವಾರು ಹಾಡುಗಳು ಪ್ರೇಕ್ಷಕರಲ್ಲಿ ಜನಪ್ರಿಯ ಹಿಟ್ ಆಗಿದ್ದು, ದಾರಿಯುದ್ದಕ್ಕೂ ಕೊಕ್ಕೆ ಹೆಜ್ಜೆಗಳಿಗೆ ಮಣಿಯುವಂತೆ ಮಾಡಿತು. 2023 ಕೊನೆಗೊಳ್ಳುತ್ತಿದ್ದಂತೆ, ಅಭಿಮಾನಿಗಳಲ್ಲಿ ಹಿಟ್ ಆಗಿರುವ ಕಳೆದ ವರ್ಷದ ಕೆಲವು ಜನಪ್ರಿಯ ಹಾಡುಗಳು ಮತ್ತು ಅವುಗಳ ಹುಕ್-ಸ್ಟೆಪ್‌ಗಳ ನೋಟ ಇಲ್ಲಿದೆ. ಜೂಮ್ ಜೋ ಪಠಾನ್ 2023 ರ ಅತ್ಯುತ್ತಮ ಚಲನಚಿತ್ರಗಳಲ್ಲಿ ಒಂದಾದ ಪಠಾನ್, ನಮಗೆ ಕೆಲವು ಸಾಂಪ್ರದಾಯಿಕ ಹಾಡುಗಳನ್ನು ಸಹ ನೀಡಿದೆ. ‘ಜೂಮೇ ಜೋ ಪಠಾನ್’ ಎಂಬ ಶೀರ್ಷಿಕೆಯ ಹಾಡು, ನಮಗೆ ವರ್ಷದ ಅತ್ಯಂತ ಸಾಂಪ್ರದಾಯಿಕ ಹೆಜ್ಜೆಗಳಲ್ಲಿ ಒಂದನ್ನು ನೀಡಿದೆ. ಎಸ್‌ಆರ್‌ಕೆ ಅವರ ಮೋಡಿ ಮತ್ತು ಪರದೆಯ ಉಪಸ್ಥಿತಿಯೊಂದಿಗೆ ಜೋಡಿಯಾದಾಗ, ಈ ಹಾಡು ದೇಶವನ್ನು ಬಿರುಗಾಳಿಯಿಂದ ತೆಗೆದುಕೊಂಡಿತು, ಏಕೆಂದರೆ ಅಭಿಮಾನಿಗಳು ಮತ್ತು ನಟರು ಪಠಾಣ್ ಕ್ರೇಜ್‌ನಲ್ಲಿ ಸೇರಿಕೊಂಡರು. ಏನು ಜುಮ್ಕಾ ರಾಕಿ ಔರ್ ರಾಣಿ ಕಿ ಪ್ರೇಮ್ ಕಹಾನಿ ಹಳೆಯ ಬಾಲಿವುಡ್ ಪ್ರಣಯದ ಅರ್ಥವನ್ನು ಮತ್ತೆ ದೊಡ್ಡ ಪರದೆಯ…

Read More

ತುಮಕೂರು:- ಕುಣಿಗಲ್‌ ತಾಲೂಕಿನ ಹುಲಿಯೂರುದುರ್ಗ ಬಳಿಯ ಕುಣಿಗಲ್‌- ಮದ್ದೂರು ಬೈ ಪಾಸ್‌ನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ರೌಡಿಶೀಟರ್‌ನ ಬರ್ಬರ ಕೊಲೆ ಮಾಡಿರುವ ಘಟನೆ ಜರುಗಿದೆ. ಸುರೇಶ್ @ ಕ್ಯಾಪ್ಟನ್ ಸೂರಿ (40) ಕೊಲೆಯಾದ ರೌಡಿಶೀಟರ್. ಹುಲಿಯೂರುದುರ್ಗ ಬಳಿಯ ಕಂಪ್ಲಾಪುರದಲ್ಲಿ ವಾಸವಿದ್ದ ಸುರೇಶ್, ಬೆಂಗಳೂರಿನ ಹನುಮಂತನಗರ ಪೊಲೀಸ್ ಠಾಣೆಯ ರೌಡಿಶೀಟರ್ ಆಗಿದ್ದ ಎನ್ನಲಾಗಿದೆ. ಈತ ಕೇವಲ ಮೂರು ತಿಂಗಳ ಹಿಂದಷ್ಟೇ ಜೈಲಿನಿಂದ ಬಿಡುಗಡೆಯಾಗಿ ಬಂದಿದ್ದ. ಶನಿವಾರ ರಾತ್ರಿ 8 ಗಂಟೆ ಸುಮಾರಿಗೆ ಹುಲಿಯೂರುದುರ್ಗ ಬೈಪಾಸ್ ಬಳಿ ಕಾರಿನಲ್ಲಿ ತೆರಳುತ್ತಿದ್ದಾಗ, ದುಷ್ಕರ್ಮಿಗಳು ಕಾರಿನ ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದ್ದಾರೆ. ಈ ವೇಳೆ ಸೂರಿ ಕಾರಿನಿಂದ ಕೆಳಗೆ ಇಳಿಯುತ್ತಿದ್ದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಹಾಗೂ ಎಸ್.ಪಿ ಅಶೋಕ್, ಎಎಸ್‌ಪಿ ಮರಿಯಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ನಾಪತ್ತೆಯಾದ ಆರೋಪಿಗಳಿಗೆ ಹುಡುಕಾಟ ಆರಂಭಿಸಿದ್ದಾರೆ. ಮೃತದೇಹವನ್ನು ಕುಣಿಗಲ್ ಸಾರ್ವಜನಿಕ ಆಸ್ಪತ್ರೆಯ ಶವಗಾರಕ್ಕೆ ರವಾನೆ ಮಾಡಲಾಗಿದೆ.

Read More