Author: AIN Author

ವರ್ಷದ ಕೊನೆಯ ದಿನ ಚಿನ್ನ ಖರೀದಿ ಮಾಡೋಣ ಎಂದುಕೊಂಡವರಿಗೆ ಇಂದು ಶುಭಸುದ್ದಿ ಇದೆ. ಅದೇನೆಂದರೆ ಇಂದು ಚಿನ್ನದ ದರದಲ್ಲಿ ಯಾವುದೇ ರೀತಿಯ ವತ್ಯಾಸವಾಗಿಲ್ಲ. 22 ಕ್ಯಾರೆಟ್‌ ಚಿನ್ನದ ದರ ಇಂದು 1 ಗ್ರಾಂ ಚಿನ್ನದ ಬೆಲೆ 5,855 ರೂ. ಇದೆ. 8 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 46,840 ರೂ. ನೀಡಬೇಕು. ಇಂದಿನ 10 ಗ್ರಾಂ ಚಿನ್ನದ ಬೆಲೆ 58,550 ಆಗಿದ್ದರೆ, 100 ಗ್ರಾಂ ಚಿನ್ನದ ಬೆಲೆ 5,85,500 ರೂ. ಇದೆ. 24 ಕ್ಯಾರೆಟ್‌ ಚಿನ್ನದ ದರ 1 ಗ್ರಾಂ 24 ಕ್ಯಾರೆಟ್‌ ಚಿನ್ನಕ್ಕೆ ಇಂದು 6,387 ರೂ ಇದೆ. 8 ಗ್ರಾಂ ಚಿನ್ನಕ್ಕೆ ಇಂದು 51,096 ರೂ ನೀಡಬೇಕು. 10 ಗ್ರಾಂ ಚಿನ್ನ ಖರೀದಿಸುವುದಾದರೆ ಇಂದು 63,870 ರೂ. ಕೊಡಬೇಕು. 100 ಗ್ರಾಂ ಚಿನ್ನದ ದರ 6,38,700 ರೂ ಇದೆ. ಕರ್ನಾಟಕದಲ್ಲಿ ಇಂದಿನ ಚಿನ್ನದ ದರ ಬೆಂಗಳೂರು, ಮಂಗಳೂರು, ಮೈಸೂರು, ದಾವಣಗೆರೆ, ಬಳ್ಳಾರಿ ಸೇರಿದಂತೆ ರಾಜ್ಯದ ಪ್ರಮುಖ ನಗರಗಳಲ್ಲಿ ಇಂದು…

Read More

ಕೊಪ್ಪಳ:- ಅರ್ಹ ಫಲಾನುಭವಿಗಳು ಕೇಂದ್ರ ಸರ್ಕಾರದ ಉಜ್ವಲ ಯೋಜನೆ ಸದುಪಯೋಗಪಡಿಸಿಕೊಂಡು ಸಬಲರಾಗಬೇಕು ಎಂದು ಸಂಸದ ಸಂಗಣ್ಣ ಕರಡಿ ಹೇಳಿದರು. ಚಿಕ್ಕಮ್ಯಾಗೇರಿ ಗ್ರಾಮದಲ್ಲಿ ಕೇಂದ್ರ ಸರ್ಕಾರದ ಉಜ್ವಲಯೋಜನೆಯಡಿ ಫಲಾನುಭವಿಗಳಿಗೆ ಗ್ಯಾಸ್ ಹಾಗೂ ಸಿಲಿಂಡರ್ ವಿತರಿಸಿ ಮಾತನಾಡಿದರು. ಮುದ್ರಾ, ಜನಧನ್, ಪಿ.ಎಂ.ವಿಶ್ವಕರ್ಮ, ಉಜ್ವಲ ಸೇರಿದಂತೆ ಕೇಂದ್ರ ಸರ್ಕಾರದ ವಿವಿಧ ಯೋಜನೆಗಳ ಮಾಹಿತಿಯನ್ನು ಎಲ್‌ಇಡಿ ವಾಹನಗಳ ಮೂಲಕ ಎಲ್ಲ ಗ್ರಾಪಂ ಹಾಗೂ ನಗರ ಪ್ರದೇಶದ ವಾರ್ಡ್‌ಗಳಲ್ಲಿ ಸಂಚರಿಸಿ ಜನರಿಗೆ ಜಾಗೃತಿ ಮೂಡಿಸುವ ಮೂಲಕ ಯೋಜನೆಗಳ ಲಾಭ ಪಡೆದ ಫಲಾನುಭವಿಗಳನ್ನು ಒಗ್ಗೂಡಿಸಬೇಕು. ಈ ಯೋಜನೆಗಳಿಂದ ವಂಚಿತರಾದ ಫಲಾನುಭವಿಗಳಿಗೆ ಅದರ ಲಾಭ ಸಿಗುವಂತೆ ಮಾಡುವ ಈ ಕಾರ್ಯಕ್ರಮ ಅಧಿಕಾರಿಗಳು ಯಶಸ್ವಿಗೊಳಿಸಬೇಕು ಎಂದರು. ನರೇಂದ್ರ ಮೋದಿ ನೇತೃತ್ವದ ಸರ್ಕಾರ ಹಿಂದುಳಿದ, ದಲಿತ, ಅಲ್ಪಸಂಖ್ಯಾತ ವರ್ಗಗಳ ಅಭಿವೃದ್ಧಿಗೆ ಪೂರಕವಾಗುವ ಯೋಜನೆ ಜಾರಿಗೊಳಿಸಿದೆ. ರಾಜ್ಯ ಕಾಂಗ್ರೆಸ್ ಸರ್ಕಾರದಂತೆ ಒಂದು ವರ್ಗದ ತುಷ್ಠಿಕರಣಕ್ಕೆ ಸೀಮಿತವಾಗಿಲ್ಲ. ಜನರ ಅಭಿವೃದ್ಧಿಯಿಂದ ಮಾತ್ರ ದೇಶ ಅಭಿವೃದ್ಧಿ ಎಂಬ ಸಂಕಲ್ಪದಿಂದ ಪ್ರಧಾನಮಂತ್ರಿ ನರೇಂದ್ರ ಮೋದಿ ಕೆಲಸ ನಿರ್ವಹಿಸುತ್ತಿದ್ದಾರೆ ಎಂದು ತಿಳಿಸಿದರು.

Read More

ಪಾಕಿಸ್ತಾನ: 26/11 ಮುಂಬೈ ಭಯೋತ್ಪಾದಕ ದಾಳಿ ಪ್ರಕರಣದ ಮಾಸ್ಟರ್ ಮೈಂಡ್ ಹಫೀಜ್ ಸಯೀದ್‌ನನ್ನು ಹಸ್ತಾಂತರ ಮಾಡುವಂತೆ ಪಾಕಿಸ್ತಾನ ಸರ್ಕಾರಕ್ಕೆ ಭಾರತ ಸರ್ಕಾರ ಮನವಿ ಮಾಡಿದೆ ಎನ್ನಲಾಗಿದೆ. ಹಫೀಜ್‌ ಸಯೀದ್‌ನನ್ನು ಭಾರತಕ್ಕೆ ಕರೆ ತಂದು ಈ ನೆಲದ ಕಾನೂನಿನ ಅನ್ವಯ ಆತನಿಗೆ ಶಿಕ್ಷೆ ವಿಧಿಸಲು ಭಾರತ ಬಯಸಿದೆ. ಈ ಸಂಬಂಧ ಪಾಕಿಸ್ತಾನಕ್ಕೆ ಹಫೀಜ್ ಸಯೀದ್ ಹಸ್ತಾಂತರ ಮಾಡುವಂತೆ ಭಾರತ ಮನವಿ ಸಲ್ಲಿಸಿದೆ ಎನ್ನಲಾಗಿದೆ. ಪಾಕಿಸ್ತಾನದ ವಿದೇಶಾಂಗ ವ್ಯವಹಾರಗಳ ಸಚಿವಾಲಯವು ತಾವು ಭಾರತ ಸರ್ಕಾರದಿಂದ ಮನವಿ ಪತ್ರ ಸ್ವೀಕರಿಸಿರುವುದಾಗಿ ತಿಳಿಸಿದೆ. ಹಫೀಜ್ ಸಯೀದ್‌ನನ್ನು ಭಾರತಕ್ಕೆ ಗಡಿಪಾರು ಮಾಡಲು ಅಗತ್ಯ ಕಾನೂನು ಕ್ರಮಗಳನ್ನು ಕೈಗೊಳ್ಳುವಂತೆ ಭಾರತ ಮನವಿ ಮಾಡಿದೆ ಎನ್ನಲಾಗಿದೆ. ಈ ಸಂಬಂಧ ಪಾಕಿಸ್ತಾನದ ಹಲವು ಸ್ಥಳೀಯ ಮಾಧ್ಯಮಗಳು ಪಾಕಿಸ್ತಾನದ ವಿದೇಶಾಂಗ ಇಲಾಖೆ ಮೂಲಗಳ ಮಾಹಿತಿ ಎಂದು ವರದಿ ಪ್ರಕಟ ಮಾಡುತ್ತಿವೆ. https://ainlivenews.com/attention-students-mphil-not-recognized-ugc-notice-to-stop-admission/ ಆದರೆ, ಈ ಕುರಿತಾಗಿ ಪಾಕಿಸ್ತಾನ ಸರ್ಕಾರ, ಪಾಕಿಸ್ತಾನದ ವಿದೇಶಾಂಗ ಇಲಾಖೆ ಹಾಗೂ ಭಾರತ ಸರ್ಕಾರ ಯಾವುದೇ ಅಧಿಕೃತ ಪ್ರಕಟಣೆ ಹೊರಡಿಸಿಲ್ಲ. ಜೊತೆಯಲ್ಲೇ…

Read More

ಬೆಂಗಳೂರು:- ಚೆಕ್‌ ಬೌನ್ಸ್‌ ಕೇಸ್‌ ಗೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಚಿವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕು ಎಂದರು. 2011ರಲ್ಲಿ ದಾಖಲಾಗಿದ್ದ ಪ್ರಕರಣ ಇದಾಗಿದೆ. ಮಧು ಬಂಗಾರಪ್ಪರವರು ತಮ್ಮ ಆಕಾಶ್ ಆಡಿಯೋ ಸಂಸ್ಥೆಯಿಂದ ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆಗೆ 6.96 ಕೋಟಿ ರು. ಸಂದಾಯ ಮಾಡಬೇಕಿತ್ತು. ಹಲವಾರು ದಿನಗಳಿಂದ ಬಾಕಿ ಉಳಿಸಿಕೊಂಡಿದ್ದ ಹಣವನ್ನು ಪಾವತಿಸಲು ಚೆಕ್ ನೀಡಿದ್ದು, ಅದು ಬೌನ್ಸ್ ಆಗಿತ್ತು. ಈಗ ನ್ಯಾಯಾಲಯವು ದಂಡ ಪಾವತಿಸುವಂತೆ ಸೂಚಿಸಿದೆ ಎಂದರು. ಸದ್ಯಕ್ಕೆ 50 ಲಕ್ಷ ರು. ಪಾವತಿಸಿ ಉಳಿದ ಮೊತ್ತವನ್ನು ಜನವರಿ ಅಂತ್ಯದ ವೇಳೆಗೆ ಕೊಡುವುದಾಗಿ ಮಧು ಬಂಗಾರಪ್ಪ ಅವರು ಮುಚ್ಚಳಿಕೆ ಸಲ್ಲಿಸಿದ್ದರು. ಆದರೆ, ಹಿಂದಿನ ಮುಚ್ಚಳಿಕೆಯನ್ನು ಪಾಲಿಸದ ಕಾರಣ ಅವರ ಕೋರಿಕೆಯನ್ನು ನ್ಯಾಯಾಲಯ ಮನ್ನಿಸಿಲ್ಲ. ಚೆಕ್ ಬೌನ್ಸ್ ಮತ್ತು ಮುಚ್ಚಳಿಕೆ ಬರೆದುಕೊಟ್ಟರೂ ಅದನ್ನು ಪಾಲಿಸದ ಹಿನ್ನೆಲೆ ಇರುವ ಮಧು ಬಂಗಾರಪ್ಪ ಅವರ ರಾಜೀನಾಮೆ ಪಡೆಯಬೇಕು. ಶಿಕ್ಷಣ ಕ್ಷೇತ್ರಕ್ಕೆ ಕಳಂಕವಾಗುವಂತೆ ವರ್ತಿಸಿದ ಮಧು ಬಂಗಾರಪ್ಪ ಅವರು ಆ ಹುದ್ದೆಯಲ್ಲಿ ಮುಂದುವರೆಯುವುದು…

Read More

ಬೆಂಗಳೂರು:- ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರರಾಗಿ ತಮ್ಮ ನೇಮಕವನ್ನು ಟೀಕಿಸಿರುವ ಕುಮಾರಸ್ವಾಮಿಗೆ ಬಸವರಾಜ್ ರಾಯರೆಡ್ಡಿ ತೀಕ್ಷ್ಣವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ವಿಶ್ವದ ದೊಡ್ಡ ಅರ್ಥಿಕ ತಜ್ಞನೋ, ಗ್ರಾಮದ ಆರ್ಥಿಕ ತಜ್ಞನೋ ಕುಮಾರಸ್ವಾಮಿ ಅವರಿಗೆ ಯಾಕೆ ಬೇಕು. ನನ್ನ ಜತೆಗೆ ಚರ್ಚೆಗೆ ಕುಳಿತುಕೊಳ್ಳಲಿ, ನನಗೆ ಗೊತ್ತಿದೆಯೋ? ಅವರಿಗೆ ಗೊತ್ತಿದೆಯೋ? ಸಾಬೀತಾಗಲಿ’ ಎಂದರು. ನನ್ನ ಜೊತೆ ಚರ್ಚೆಗೆ ಕುಳಿತುಕೊಳ್ಳಲಿ. ನನಗೆ ಏನು ಗೊತ್ತಿದೆಯೋ ಮಾತನಾಡುತ್ತೇನೆ, ಅವರಿಗೆ ಏನು ಗೊತ್ತಿದೆಯೋ ಮಾತನಾಡಲಿ, ನನ್ನ ಬಗ್ಗೆ ಮಾತನಾಡುವ ಇವರು ದೊಡ್ಡ ಆರ್ಥಿಕ ತಜ್ಞರಾ? ಪ್ರತಿಯೊಬ್ಬರಿಗೂ ಅವರದೇ ಆದ ನೈಪುಣ್ಯತೆ ಇರುತ್ತೆ. ಹಾಗೆಲ್ಲಾ ಹಗುರವಾಗಿ ಮಾತಾಡಬಾರದು ಎಂದರು. ಸಲಹೆಗಾರ ಸ್ಥಾನ ಕೊಡಿ ಎಂದು ನಾನು ಕೇಳಿಲ್ಲ. ಕರ್ನಾಟಕದಲ್ಲಿ ಮೊದಲ ಬಾರಿಗೆ ಆರ್ಥಿಕ ಸಲಹೆಗಾರ ಸ್ಥಾನ ಕೊಟ್ಟಿದ್ದಾರೆ. ಬಹಳ ದೊಡ್ಡ ಸವಾಲಿನ ಜವಾಬ್ದಾರಿ ಇದೆ. ಇದು. ಸುಮ್ಮನೆ ಕಾರು, ಬೇರೆ ಸೌಲಭ್ಯಕ್ಕಾಗಿ ತಗೊಂಡಿಲ್ಲ. ನನ್ನದೇ ಆದ ಆಲೋಚನೆಗಳಿವೆ. ಮುಖ್ಯಮಂತ್ರಿಗಳೂ ತಜ್ಞರಿದ್ದು ಅವರೊಂದಿಗೆ ಕೂಡಿ ಕೆಲಸ ಮಾಡುತ್ತೇನೆ ಎಂದರು.

Read More

ಮಧುಮೇಹದ ವಿಷಯಕ್ಕೆ ಬಂದಾಗ ಶಿಸ್ತುಬದ್ಧ ಆಹಾರವು ಆರೋಗ್ಯಕರ ಜೀವನಶೈಲಿಗೆ ಪ್ರಮುಖವಾಗಿದೆ. ಮಧುಮೇಹದ ನಂತರದಲ್ಲಿ ಅನುಭವಿಸುವ ಸಾಮಾನ್ಯ ಪರಿಣಾಮವೆಂದರೆ ತೂಕನಷ್ಟ.ಆದರ್ಶ ದೇಹದ ತೂಕವನ್ನು ಸಾಧಿಸುವ ಉದ್ದೇಶವು ಸಾಮಾನ್ಯ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪುನಃ ಸ್ಥಾಪಿಸುವುದರೊಂದಿಗೆ ಸಂಬಂಧವನ್ನು ಹೊಂದಿದೆ. ಆದ್ದರಿಂದ ಮಧುಮೇಹಿಗಳು ಅಗತ್ಯವಾದ ಆಹಾರ ಮಾರ್ಪಾಡುಗಳನ್ನು ಮಾಡುವುದು ಬಹಳ ಮುಖ್ಯವಾಗಿರುತ್ತದೆ. ಅದರಲ್ಲೂ ನೈಸರ್ಗಿಕ ಮತ್ತು ತಾಜಾ ಆಹಾರ ಪದಾರ್ಥಗಳು ಇದರಲ್ಲಿ ಪ್ರಮುಖವಾದ ಪಾತ್ರವನ್ನು ವಹಿಸುತ್ತವೆ. ಧಾನ್ಯಗಳು: ಓಟ್ಸ್, ಬಾರ್ಲಿ, ಕ್ವಿನೋವಾ ಮುಂತಾದ ಧಾನ್ಯಗಳು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಮರ್ಪಕವಾಗಿ ನಿಯಂತ್ರಿಸಲು ಸಹಾಯ ಮಾಡುತ್ತದೆ. ಚಿಯಾ ಬೀಜಗಳು: ಚಿಯಾ ಬೀಜಗಳಲ್ಲಿ ಫೈಬರ್ ಅಧಿಕವಾಗಿರುತ್ತದೆ. ಇದು ಜೀರ್ಣವಾಗುವ ಕಾರ್ಬೋಹೈಡ್ರೇಟ್‌ಗಳಲ್ಲಿ ಕಡಿಮೆಯಾಗಿದೆ. ಚಿಯಾ ಬೀಜಗಳ ಸೇವನೆಯು ಕರುಳಿನ ಕಾರ್ಯವನ್ನು ಸುಧಾರಿಸುತ್ತದೆ. ಅವರು ಆಹಾರದ ಹೀರಿಕೊಳ್ಳುವಿಕೆಯ ಪ್ರಮಾಣವನ್ನು ನಿಧಾನಗೊಳಿಸುತ್ತಾರೆ. ಇದು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡುತ್ತದೆ. ಹಣ್ಣುಗಳು: ಹೆಚ್ಚು ಹಣ್ಣುಗಳನ್ನು, ವಿಶೇಷವಾಗಿ ಸ್ಟ್ರಾಬೆರಿ, ದ್ರಾಕ್ಷಿ ಮತ್ತು ಸೇಬುಗಳನ್ನು ಸೇವಿಸುವುದರಿಂದ ಟೈಪ್ 2 ಮಧುಮೇಹದ ಅಪಾಯವನ್ನು ಗಮನಾರ್ಹವಾಗಿ ಕಡಿಮೆ…

Read More

ಮೊದಲೆಲ್ಲ ಪೋಸ್ಟ್‌ ಆಫೀಸ್‌ ಎಂದರೆ ಪತ್ರ ವ್ಯವಹಾರ ಮಾತ್ರ ಇತ್ತು. ಆದರೀಗ, ಅಂಚೆ ಕಚೇರಿಗಳು ಬ್ಯಾಂಕ್‌ಗಳಾಗಿಯೂ ಮಾರ್ಪಾಡಾಗಿರುವುದರಿಂದ ಪೋಸ್ಟ್‌ ಆಫೀಸ್‌ಗಳಿಗೆ ಹೆಚ್ಚಿನ ಜನ ತೆರಳುವ, ವಹಿವಾಟು ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಅಲ್ಲದೆ, ಪೋಸ್ಟ್‌ ಆಫೀಸ್‌ ಬ್ಯಾಂಕ್‌ಗಳಲ್ಲಿ (Post Office Schemes) ಉಳಿತಾಯ ಯೋಜನೆಗಳಿಗೆ ಆಕರ್ಷಕ ಬಡ್ಡಿಯೂ (Interest) ಸಿಗುವುದರಿಂದ ಹೆಚ್ಚಿನ ಜನ ಪೋಸ್ಟ್‌ ಆಫೀಸ್‌ ಉಳಿತಾಯ ಯೋಜನೆಗಳ (Saving Schemes) ಮೂಲಕ ಲಾಭ ಗಳಿಸುತ್ತಿದ್ದಾರೆ. ಹಾಗಾದರೆ,  ಭಾರತೀಯ ಅಂಚೆ ಇಲಾಖೆ ಗ್ರಾಹಕರಿಗೆ ಹೊಸ ಯೋಜನೆಯೊಂದನ್ನು ಪರಿಚಯಿಸಿದೆ. ಹೂಡಿಕೆ ಮಾಡಲು ಯೋಚಿಸುತ್ತಿದ್ದರೆ ನೀವು ಪೋಸ್ಟ್ ಆಫೀಸ್ ಜಾರಿಗೊಳಿಸಿರುವ ಈ ಹೊಸ ಹೂಡಿಕೆ ಯೋಜನೆಯ ಲಾಭವನ್ನು ಬಳಸಿಕೊಳ್ಳಬಹುದು. ತಿಂಗಳಿಗೆ ಕೇವಲ 1500 ರೂಪಾಯಿಗಳ ಹೂಡಿಕೆಯಲ್ಲಿ ನೀವು 35 ಲಕ್ಷ ರೂಪಾಯಿಗಳನ್ನು ಗಳಿಸಬಹುದಾಗಿದೆ. ಹಾಗಾದ್ರೆ ಈ ಯೋಜನೆಯಿಂದ ಸಿಗುವ ಲಾಭವೇನು ಎಂದು ತಿಳಿಯುವುದಾದ್ರೆ. ಭಾರತೀಯ ಅಂಚೆ ಹಲವು ರೀತಿಯ ಹೂಡಿಕೆ ಅವಕಾಶಗಳನ್ನು ನೀಡುತ್ತದೆ. ಹೂಡಿಕೆದಾರರು ಕೇವಲ 1500 ರೂಗಳನ್ನು ಠೇವಣಿ ಮಾಡಬಹುದು ಮತ್ತು ರೂ 35 ಲಕ್ಷದವರೆಗೆ ಗಳಿಸಬಹುದು. ಈ…

Read More

ಸೂರ್ಯೋದಯ: 06.41 AM, ಸೂರ್ಯಾಸ್ತ : 06.04 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಹೇಮಂತ ಋತು, ತಿಥಿ: ಇವತ್ತು ಚೌತಿ 11:55 AM ತನಕ ನಂತರ ಪಂಚಮಿ ನಕ್ಷತ್ರ: ಇವತ್ತು ಆಶ್ಲೇಷ 05:42 AM ತನಕ ನಂತರ ಮಖ ಯೋಗ: ಇವತ್ತು ವಿಷ್ಕುಂಭ02:56 AM ತನಕ ನಂತರ ಪ್ರೀತಿ ಕರಣ: ಇವತ್ತು ಬಾಲವ 11:55 AM ತನಕ ನಂತರ ಕೌಲವ ರಾಹು ಕಾಲ: 04:30 ನಿಂದ 06:00 ವರೆಗೂ ಯಮಗಂಡ12:00: ನಿಂದ 01:30 ವರೆಗೂ ಗುಳಿಕ ಕಾಲ:03:00 ನಿಂದ 04:30 ವರೆಗೂ ಅಮೃತಕಾಲ: 03.56 AM to 05.42 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:56 ನಿಂದ ಮ.12:40 ವರೆಗೂ ಮೇಷ ರಾಶಿ: ಹೋಟೆಲ್ ಉದ್ಯಮದಾರರಿಗೆ ಧನ ಲಾಭ ತಡೆಹಿಡಿದ ಎಲ್ಲಾ ಕೆಲಸ ಕಾರ್ಯಗಳು ಸುಗಮ ರೀತಿಯಲ್ಲಿ ಯಶಸ್ವಿ ಕಾಣುವ ಸೌಭಾಗ್ಯ ಕೂಡಿಬಂದಿದೆ,ಎಲ್ಲಾ ಕೆಲಸ ಕಾರ್ಯಗಳಲ್ಲಿ ಶುಭಫಲವನ್ನು ಖಚಿತವಾಗಿ ಪಡೆದುಕೊಳ್ಳುವಿರಿ. ವ್ಯಾಪಾರ…

Read More

ಬೆಂಗಳೂರು:- 37 ಐಪಿಎಸ್ ಅಧಿಕಾರಿಗಳ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದ್ದಾರೆ. ಕಮಲ್ ಪಂತ್, ಅಲೋಕ್ ಕುಮಾರ್ ಸಹಿತ 37 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಸರಕಾರ ಆದೇಶ ಹೊರಡಿಸಿದೆ. ಕೆಲವು ಐಪಿಎಸ್ ಅಧಿಕಾರಿಗಳಿಗೆ ಮುಂಬಡ್ತಿ ನೀಡಲಾಗಿದೆ. ► ಕಮಲ್ ಪಂತ್ – ಡಿಜಿಪಿ, ನೇಮಕಾತಿ ವಿಭಾಗ ► ಅಲೋಕ್ ಕುಮಾರ್ – ವಿಶೇಷ ಆಯುಕ್ತ, ರಸ್ತೆ ಸುರಕ್ಷತಾ ವಿಭಾಗ ► ಸೀಮಂತ್ ಕುಮಾರ್ ಸಿಂಗ್ – ಎಡಿಜಿಪಿ, ಬಿಎಂಟಿಎಫ್ ► ಹರಿಶೇಖರನ್ -ಎಡಿಜಿಪಿ, ಹೋಂ ಗಾರ್ಡ್ಸ್ ಮತ್ತು ಸಿವಿಲ್ ಡಿಫೆನ್ಸ್ ► ನಂಜುಂಡಸ್ವಾಮಿ – ಎಡಿಜಿಪಿ, ಅಗ್ನಿಶಾಮಕ ಮತ್ತು ತುರ್ತು ಸೇವೆ ► ಚಂದ್ರಗುಪ್ತ – ಹೆಚ್ಚುವರಿ ಪೊಲೀಸ್ ಆಯುಕ್ತ, ಬೆಂಗಳೂರು ಸಿಸಿಬಿ ► ತ್ಯಾಗರಾಜನ್ – ಐಜಿಪಿ, ಪೂರ್ವ ವಲಯ ► ಅಮಿತ್ ಸಿಂಗ್ – ಐಜಿಪಿ, ಪಶ್ಚಿಮ ವಲಯ

Read More

ವಿಜಯಪುರ:- ಕೋವಿಡ್‌ ಅವ್ಯವಹಾರ ಪ್ರಕರಣ ತನಿಖೆಯಾಗಲಿ ಎಂದು ಬಿವೈ ವಿಜಯೇಂದ್ರ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕೋವಿಡ್‌ ಹೆಸರಲ್ಲಿ ಬಿಜೆಪಿ ಸರ್ಕಾರದ ಅವಧಿಯಲ್ಲಿ ಅವ್ಯವಹಾರ ನಡೆದಿದೆಯೆಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಆರೋಪಿಸಿದ್ದು, ರಾಜ್ಯ ಸರ್ಕಾರ ತನಿಖೆ ನಡೆಸಲಿ’ ಎಂದರು. ‘ಬಿ.ಎಸ್.ಯಡಿಯೂರಪ್ಪ ಅವರ ವಿರುದ್ಧವೂ ಆರೋಪವಿದ್ದರೆ, ರಾಜ್ಯ ಸರ್ಕಾರ ಅನುಕಂಪ ತೋರಿಸುವುದು ಅಗತ್ಯವಿಲ್ಲ. ಸಂಬಂಧಪಟ್ಟವರಿಂದ ದಾಖಲೆ ಪಡೆದು ತನಿಖೆ ನಡೆಸಲಿ. ನಾವು ಯಾವುದೇ ಕಾರಣಕ್ಕೂ ಭಯಪಡುವುದಿಲ್ಲ’ ಎಂದು ಅವರು ಸುದ್ದಿಗಾರರಿಗೆ ಶನಿವಾರ ತಿಳಿಸಿದರು. ಬಿ.ವೈ.ವಿಜಯೇಂದ್ರ, ಅಧ್ಯಕ್ಷ, ಬಿಜೆಪಿ ರಾಜ್ಯ ಘಟಕಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಚೆಕ್‌ ಬೌನ್ಸ್ ಆಗಿದೆ. ಹಣ ಜಮೆ ಮಾಡದಿದ್ದರೆ ಆರು ತಿಂಗಳು ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಇದು ರಾಜ್ಯದ ಸಚಿವರ ಸ್ಥಿತಿ. ‘ಕೇಂದ್ರ ಸರ್ಕಾರದ ಬಳಿ ನಾನು ಅಥವಾ ಪಕ್ಷದ ಮುಖಂಡರು ಚಾಡಿ, ದೂರುಗಳನ್ನು ಹೇಳಿಲ್ಲ. ಅದರ ಅವಶ್ಯಕತೆಯೂ ನಮಗಿಲ್ಲ. ಭವಿಷ್ಯದಲ್ಲಿ ಪರಿಸ್ಥಿತಿ ಬಂದಂತೆ ಕೇಂದ್ರದಲ್ಲಿ ವರಿಷ್ಠರು ತೀರ್ಮಾನಿಸಿ, ಅಗತ್ಯ ಕ್ರಮ ತೆಗೆದುಕೊಳ್ಳುತ್ತಾರೆ’ ಎಂದು ಅವರು…

Read More