Author: AIN Author

ಬೆಂಗಳೂರು ಬುಲ್ಸ್ ತಂಡ ಪ್ರೊ ಕಬಡ್ಡಿ ಲೀಗ್ 10ನೇ ಆವೃತ್ತಿಯಲ್ಲಿ ಯುಪಿ ಯೋಧಾಸ್ ಎದುರು 33-34 ಅಂತರದಿಂದ ವೀರೋಚಿತ ಸೋಲು ಅನುಭವಿಸಿದೆ. ಈ ಮೂಲಕ ಯುಪಿ ಯೋಧಾಸ್ ತವರಿನಲ್ಲಿ ಶುಭಾರಂಭ ಕಂಡಿದೆ. ಮೊದಲಾರ್ಧದ 19 ನಿಮಿಷದವರೆಗೂ ಉಭಯ ತಂಡಗಳು ಸಮಬಲದ ಹೋರಾಟ ಪ್ರದರ್ಶಿಸಿದವು. ಅಂತಿಮ ನಿಮಿಷದಲ್ಲಿ ಪ್ರದೀಪ್ ನರ್ವಾಲ್‌ಗೆ 2 ಅಂಕ ನೀಡಿದ ಬುಲ್ಸ್ ಆಲೌಟ್ ಭೀತಿ ಎದುರಿಸಿತು. ಮೊದಲಾರ್ಧದಲ್ಲಿ ಬುಲ್ಸ್ 13-15ರಿಂದ ಹಿನ್ನಡೆ ಕಂಡಿತು. ದ್ವಿತಿಯಾರ್ಧದಲ್ಲಿ 2 ಬಾರಿ ಆಲೌಟ್ ಆಗುವ ಮೂಲಕ ಬುಲ್ಸ್ ಸೋಲಿನತ್ತ ಸಾಗಿತು. ಅಂತಿಮ ನಿಮಿಷದಲ್ಲಿ ಬುಲ್ಸ್ ತಿರುಗೇಟು ನೀಡಿದರೂ ಸೋಲಿನಿಂದ ಪಾರಾಗಲಿಲ್ಲ. ಬುಲ್ಸ್ ಪರ ಭರತ್, ಸುಶೀಲ್ ತಲಾ 8 ಅಂಕ ಕಲೆಹಾಕಿದರು.

Read More

ಡಿಸೆಂಬರ್ ದೊಡ್ಡ ರಿಯಾಯಿತಿಗಳು ಮತ್ತು ಮಾರಾಟದ ತಿಂಗಳು. ಕಾರಣ ಸಾಕಷ್ಟು ಸರಳವಾಗಿದೆ. ಪ್ರತಿ ವರ್ಷದ ಆರಂಭದಲ್ಲಿ, ಕಾರು ತಯಾರಕರು ಬೆಲೆ ಏರಿಕೆಯನ್ನು ಘೋಷಿಸುತ್ತಾರೆ. ಹೆಚ್ಚಿನ ಇನ್‌ಪುಟ್ ವೆಚ್ಚಗಳು ಮತ್ತು ಕಚ್ಚಾ ವಸ್ತುಗಳು ಹೆಚ್ಚು ದುಬಾರಿಯಾಗುತ್ತಿರುವುದು ಈ ಬೆಲೆ ಏರಿಕೆಗೆ ಕಾರಣ. ಆದ್ದರಿಂದ, ಅದೇ ಮಾದರಿಯಲ್ಲಿ ಹೆಚ್ಚುವರಿ ಮೊತ್ತವನ್ನು ಪಾವತಿಸುವುದನ್ನು ತಡೆಯಲು ಬಹಳಷ್ಟು ಜನರು ಡಿಸೆಂಬರ್‌ನಲ್ಲಿ ಕಾರುಗಳನ್ನು ಖರೀದಿಸುತ್ತಾರೆ. ಈ ತಿಂಗಳು ಎಲೆಕ್ಟ್ರಿಕ್ SUV ಗಳ ಮೇಲಿನ ರಿಯಾಯಿತಿಗಳ ವಿವರಗಳನ್ನು ನಾವು ನೋಡೋಣ. 5 ಎಲೆಕ್ಟ್ರಿಕ್ SUV ಗಳ ಮೇಲೆ ಅತ್ಯಧಿಕ ರಿಯಾಯಿತಿಗಳು ಎಲೆಕ್ಟ್ರಿಕ್ SUV ರಿಯಾಯಿತಿ (ವರೆಗೆ) ಮಹೀಂದ್ರ XUV400 4 ಲಕ್ಷ ರೂ ಹುಂಡೈ ಕೋನಾ ಇವಿ 3 ಲಕ್ಷ ರೂ ಟಾಟಾ ನೆಕ್ಸಾನ್ EV (ಪ್ರಿ-ಫೇಸ್‌ಲಿಫ್ಟ್) 2.7 ಲಕ್ಷ ರೂ MG ZS EV ರೂ 1 ಲಕ್ಷ ಟಾಟಾ ನೆಕ್ಸಾನ್ EV (ಹೊಸ ಮಾದರಿ) 35,000 ರೂ ಮಹೀಂದ್ರ XUV400 ಡಿಸೆಂಬರ್ 2023 ರಲ್ಲಿ ಭಾರತದಲ್ಲಿ ಎಲೆಕ್ಟ್ರಿಕ್…

Read More

ದೊಡ್ಡಬಳ್ಳಾಪುರ:- ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿಗೆ ಸರ್ಕಾರದಿಂದ ನೆರವು ನೀಡಲಾಗುತ್ತದೆ ಎಂದು ಸಚಿವ ಮುನಿಯಪ್ಪ ಹೇಳಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಎಸ್.ಎಸ್ ಘಾಟಿ ಕ್ಷೇತ್ರದಲ್ಲಿ ವಾಹನಗಳಿಗೆ ಪಾರ್ಕಿಂಗ್ ವ್ಯವಸ್ಥೆ, ಅನ್ನದಾಸೋಹಕ್ಕೆ ಸ್ಥಳ ನಿಗದಿ, ಪಶು ಆಸ್ಪತ್ರೆ ನಿರ್ಮಾಣಕ್ಕೆ ಸಂಬಂಧಿಸಿದಂತೆ ಶೀಘ್ರ ಕ್ರಮ ಕೈಗೊಳ್ಳಲಾಗುವುದು. ತೂಬಗೆರೆ ಹೋಬಳಿಯಲ್ಲಿನ ರಸ್ತೆ ವ್ಯವಸ್ಥೆ, ಕುಡಿಯುವ ನೀರು, ಬಸ್ ವ್ಯವಸ್ಥೆ, ಹಕ್ಕು ಪತ್ರ ವಿತರಣೆ, ಸೇರಿದಂತೆ ಹಲವು ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಸಚಿವರು ಹೇಳಿದರು. ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಬಹಳಷ್ಟು ಪ್ರಸಿದ್ದಿ ಪಡೆದಿದೆ. ಈ ಕ್ಷೇತ್ರವನ್ನು ಅಭಿವೃದ್ಧಿ ಪಡಿಸಲು ಎಲ್ಲಾ ರೀತಿಯ ನೆರವು ನೀಡಲಾಗುವುದು. ತೂಬಗೆರೆ ಹೋಬಳಿಯು ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ಬರುತ್ತದೆ. ಈ ಹೋಬಳಿಯನ್ನು ಕಡೆಗಣಿಸದೇ ಎಲ್ಲಾ ರೀತಿಯ ಸೌಲಭ್ಯಗಳೊಂದಿಗೆ ಅಭಿವೃದ್ಧಿ ಪಡಿಸಲಾಗುವುದು ಎಂದು ಹೇಳಿದರು. ಕುಂದು ಕೊರತೆ ಸಭೆ ನಂತರ ಅಧಿಕಾರಿಗಳ ಸಭೆ ನಡೆಸಿ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ವಿತರಣೆ, ಬಡವರಿಗೆ ನಿವೇಶನ ಹಂಚಿಕೆ, ಹಳ್ಳಿಗಳಲ್ಲಿ ರಸ್ತೆ ದುರಸ್ತಿ, ಸ್ಮಶಾನ ಭೂಮಿ…

Read More

ಧಾರವಾಡ : ಇಷ್ಟು ದಿನ ಮನೆ, ಬ್ಯಾಂಕ್, ಎಟಿಎಂ, ದೇವಸ್ಥಾನಗಳ ಹುಂಡಿಗಳಿಗೆ ಕನ್ನ ಹಾಕುತ್ತಿದ್ದ ಕಳ್ಳರು ಈಗ ರೈತರ ಫಸಲಿನ ಮೇಲೆ ಕಣ್ಣು ಹಾಕಿದ್ದಾರೆ. ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗ್ರಾಮದ ಮೈಲಾರಪ್ಪ ಕುರಗುಂದ ಅವರ ಜಮೀನಿನಲ್ಲಿ ಒಂದೂವರೆ ಎಕರೆಯಲ್ಲಿ ಬೆಳೆದಿದ್ದ ಹತ್ತಿಯನ್ನು ಕಳ್ಳರ ಗ್ಯಾಂಗ್ ಬಿಡಿಸಿಕೊಂಡು ಪರಾರಿಯಾಗಿದೆ. ನವಲಗುಂದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಹತ್ತಿ ಬಿಡಿಸುವ ಯೋಚನೆ ಮಾಡಿಕೊಂಡು ಜಮೀನಿಗೆ ಬಂದ ರೈತ ಮಲ್ಲಪ್ಪನಿಗೆ ಹೊಲದಲ್ಲಿನ ಹತ್ತಿ ಇಲ್ಲದನ್ನು ನೋಡಿ ಶಾಕ್ ಆಗಿದೆ. ಹತ್ತಿ ಬೆಳೆ ಫಸಲು ನೀಡಲು ಆರಂಭದಿಂದ ಒಂದು ಬಾರಿ ಹತ್ತಿ ಬೀಡಿಸಿ ಮಾರಾಟ ಮಾಡಿದ್ದು, ಎರಡನೇ ಬಾರಿ ಬೀಡಿಬೇಕಾಗಿತ್ತು. ಮನೆಯಲ್ಲಿ ಕೆಲಸ ಕಾರ್ಯಗಳಿಂದ ಹಾಗೂ ಆಳಿನ ಸಮಸ್ಯೆಯಿಂದ ಹಾಗೆ ಬಿಟ್ಟಿದ ಹತ್ತಿ ಬೆಳೆ ಈಗ ರೈತನ ಕೈತಪ್ಪಿ ಕಳ್ಳರ ಪಾಲಾಗಿದೆ‌. 4 ರಿಂದ 5 ಕ್ವಿಂಟಲ್ ಹತ್ತಿ ಕಳ್ಳತನ 4 ರಿಂದ 5 ಕ್ವಿಂಟಲ್ ಹತ್ತಿ ಕಳ್ಳತನವಾಗಿದೆ. ಖದೀಮ ಕಳ್ಳರ ಈ…

Read More

2023 ಟೆಸ್ಟ್ ಕ್ರಿಕೆಟ್‌ಗೆ ನಿರ್ಣಾಯಕ ವರ್ಷವಾಗಿದೆ ಏಕೆಂದರೆ ನಾವು ಹೊಸ ವಿಶ್ವ ಟೆಸ್ಟ್ ಚಾಂಪಿಯನ್ ಅನ್ನು ನೋಡಿದ್ದೇವೆ. ಓವಲ್‌ನಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್‌ನಲ್ಲಿ ಭಾರತವನ್ನು ಸೋಲಿಸಿದಾಗ ಆಸ್ಟ್ರೇಲಿಯನ್ನರು ತಮ್ಮ ಕ್ಯಾಬಿನೆಟ್‌ಗೆ ಮತ್ತೊಂದು ಟ್ರೋಫಿಯನ್ನು ಸೇರಿಸಿದರು. ಈ ಲೇಖನದಲ್ಲಿ, 2023 ರಲ್ಲಿ ಅಸಾಧಾರಣ ಪ್ರದರ್ಶನಗಳೊಂದಿಗೆ ಟೆಸ್ಟ್ ಕ್ರಿಕೆಟ್‌ನ ಅಭಿಮಾನಿಗಳಿಗೆ ಸೇವೆ ಸಲ್ಲಿಸಿದ ಆಟಗಾರರನ್ನು ನಾವು ನೋಡೋಣ ಮತ್ತು ವರ್ಷದ ಟೆಸ್ಟ್ ಕ್ರಿಕೆಟಿಗ ಪ್ರಶಸ್ತಿಯನ್ನು ಗೆಲ್ಲಬಹುದು. ಉಸ್ಮಾನ್ ಖ್ವಾಜಾ ಅವರು 2023 ರಲ್ಲಿ ಆಸ್ಟ್ರೇಲಿಯಾದ ಟೆಸ್ಟ್ ಕ್ರಿಕೆಟ್‌ನಲ್ಲಿ ಸಂಪೂರ್ಣ ಮ್ಯಾಚ್-ವಿನ್ನರ್ ಆಗಿದ್ದಾರೆ. ಆಸ್ಟ್ರೇಲಿಯಾವನ್ನು ಮೊದಲ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್ ಮಾಡುವಲ್ಲಿ ಅವರ ಕೊಡುಗೆ ಗಮನಾರ್ಹವಾಗಿದೆ. ಆಸ್ಟ್ರೇಲಿಯಾಕ್ಕೆ ಇದು ಸವಾಲಿನ ವರ್ಷವಾಗಿತ್ತು ಏಕೆಂದರೆ ಅವರು ಇಂಗ್ಲೆಂಡ್‌ನ ಸುದೀರ್ಘ ಪ್ರವಾಸದ ಮೂಲಕ ಹೋಗಬೇಕಾಗಿತ್ತು, ಅಲ್ಲಿ ಅವರು ಮೊದಲು WTC ಫೈನಲ್ ಮತ್ತು ನಂತರ ಇಂಗ್ಲೆಂಡ್ ವಿರುದ್ಧ ಆಶಸ್ ಆಡಿದರು. ಖ್ವಾಜಾ ಅವರು 13 ಟೆಸ್ಟ್ ಪಂದ್ಯಗಳಿಂದ 1210 ರನ್‌ಗಳೊಂದಿಗೆ ತಮ್ಮ ಖಾತೆಯಲ್ಲಿ ಅಗ್ರ…

Read More

ನವದೆಹಲಿ: ದೇಶದಲ್ಲಿ ಎಲ್ಲೆಲ್ಲೂ ರಾಮ ನಾಮ ಸ್ಮರಣೆ. ಅಯೋಧ್ಯೆ ರಾಮಮಂದಿರದ (Ram Mandir) ಮೇಲಿನ ಭಕ್ತಿ, ಪ್ರೀತಿ ಹಿಂದೂಗಳಿಗಷ್ಟೇ ಸೀಮಿತವಾಗಿಲ್ಲ. ಅದಕ್ಕೆ ಸಾಕ್ಷಿ ಎಂಬಂತೆ ಮುಸ್ಲಿಂ ಮಹಿಳೆಯೊಬ್ಬರು (Muslim Women) ಸರ್ವಧರ್ಮ ಸಮನ್ವಯದ ದೃಷ್ಟಿಯಿಂದ ರಾಮಮಂದಿರಕ್ಕೆ ಪಾದಯಾತ್ರೆ ಬೆಳೆಸಿದ್ದಾರೆ. ಮುಸ್ಲಿಂ ಯುವತಿ ಶಬನಮ್ ಮುಂಬೈನಿಂದ ಅಯೋಧ್ಯೆಗೆ ಪ್ರಯಾಣ ಬೆಳೆಸಿದ್ದಾರೆ. ತನ್ನ ಸಹಚರರಾದ ರಮಣ್ ರಾಜ್ ಶರ್ಮಾ ಮತ್ತು ವಿನೀತ್ ಪಾಂಡೆ ಜೊತೆಯಲ್ಲಿ ಶಬನಮ್ 1,425 ಕಿಲೋಮೀಟರ್‌ ಕಾಲ್ನಡಿಗೆ ಮೂಲಕವೇ ಅಯೋಧ್ಯೆ ತಲುಪಲು ಹೊರಟಿದ್ದಾರೆ. https://ainlivenews.com/eat-these-foods-if-you-are-deficient-in-vitamin-d-in-winter/ ಶಬನಮ್ ಮುಸ್ಲಿಂ ಧರ್ಮೀಯರಾಗಿದ್ದರೂ, ಭಗವಾನ್ ರಾಮನ ಮೇಲೆ ಅಚಲ ಭಕ್ತಿ ಹೊಂದಿದ್ದಾರೆ. ರಾಮನನ್ನು ಪೂಜಿಸಲು ಒಬ್ಬ ಹಿಂದೂ ಆಗುವ ಅಗತ್ಯವಿಲ್ಲ ಎಂಬ ಸಂದೇಶವನ್ನು ಶಬನಮ್ ಸಾರಿದ್ದಾರೆ. ಉತ್ತಮ ಮಾನವನಾಗಿರುವುದು ಮುಖ್ಯ. ಈಗ ಶಬನಮ್ ಮಧ್ಯಪ್ರದೇಶದ ಸಿಂಧವಾವನ್ನು ತಲುಪಿದ್ದಾರೆ. ಪ್ರತಿದಿನ 25-30 ಕಿಲೋಮೀಟರ್ ಪಾದಯಾತ್ರೆ ಮಾಡುತ್ತಿದ್ದಾರೆ. ಸುದೀರ್ಘ ಯಾತ್ರೆಯಿಂದ ಬರುವ ಆಯಾಸದ ಹೊರತಾಗಿಯೂ, ಮೂವರು ಯುವಜನರು ರಾಮನ ಮೇಲಿನ ಭಕ್ತಿ ತಮ್ಮನ್ನು ಮುಂದುವರಿಸುತ್ತಿದೆ ಎಂದು ಹೇಳುತ್ತಾರೆ. ಈ ಮೂವರು…

Read More

ಲಿಚ್ಚಿ ಹಣ್ಣಿನಲ್ಲಿ ವಿಟಮಿನ್ ಸಿ ಹೆಚ್ಚಿದೆ, ಇದು ನಿಮ್ಮ ರೋಗ ನಿರೋಧಕ ಶಕ್ತಿಯನ್ನು ಪುನಃಸ್ಥಾಪಿಸಲು ಸಹಾಯ ಮಾಡುತ್ತದೆ ಮತ್ತು ನಿಮ್ಮ ಚರ್ಮವನ್ನು ಆರೋಗ್ಯವಾಗಿರಿಸುತ್ತದೆ. ಲಿಚ್ಚಿ ಹಣ್ಣಿನಲ್ಲಿ ವಿಟಮಿನ್ ಡಿ ಕೂಡ ಸಮೃದ್ಧವಾಗಿದ್ದು, ಹೆಚ್ಚಿನ ನೀರಿನ ಅಂಶವನ್ನು ಹೊಂದಿರುವ ಈ ಹಣ್ಣು ಬಿಸಿ ವಾತಾವರಣದಲ್ಲಿ ನಿಮ್ಮನ್ನು ಹೈಡ್ರೀಕರಿಸುತ್ತದೆ. ಲಿಚಿಯಲ್ಲಿ ವಿಟಮಿನ್ ಸಿ ಸಮೃದ್ಧವಾಗಿದೆ. ಇದು ಚರ್ಮ ಸ್ನೇಹಿ ಪೋಷಕಾಂಶವಾಗಿದೆ. ವಿಟಮಿನ್ ಸಿ ನಿಮಗೆ ಮೃದುವಾದ ವಿನ್ಯಾಸ ಮತ್ತು ಉತ್ತಮ ಚರ್ಮವನ್ನು ನೀಡುತ್ತದೆ. ಇದು ಸೂರ್ಯನ ಹಾನಿಕಾರಕ ಪರಿಣಾಮಗಳಿಂದ ತ್ವಚೆಯನ್ನು ರಕ್ಷಿಸುತ್ತದೆ ಪ್ರತಿ ರಕ್ಷಣಾ ವ್ಯವಸ್ಥೆ ಬಲಪಡಿಸುತ್ತದೆ ಸ್ವಲ್ಪ ಹವಾಮಾನ ಬದಲಾವಣೆಯಾದರೂ ಶೀತ ಮತ್ತು ಕೆಮ್ಮಿಗೆ ಗುರಿಯಾಗುವುದು ಸಹಜ. ಇಂತಹ ಸಮಯದಲ್ಲಿ ನಿಮ್ಮ ರೋಗ ನಿರೋಧಕ ಶಕ್ತಿ ದುರ್ಬಲವಾಗುವ ಸಾಧ್ಯತೆಯಿದೆ. ಆದ್ದರಿಂದ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಲಿಚ್ಚಿ ಸೇವಿಸಿ. ಲಿಚ್ಚಿಯಲ್ಲಿರುವ ವಿಟಮಿನ್ ಸಿ ನಮ್ಮ ರೋಗನಿರೋಧಕ ಶಕ್ತಿಯನ್ನು ಬಲಪಡಿಸುವಲ್ಲಿ ಬಹಳ ಪರಿಣಾಮಕಾರಿಯಾಗಿದೆ. ನೀರಿನಲ್ಲಿ ಕರಗುವ ಈ ವಿಟಮಿನ್ ಆಂಟಿ ಆಕ್ಸಿಡೆಂಟ್‌ಗಳಿಂದ ತುಂಬಿದ್ದು, ಇದು…

Read More

ಕುಷ್ಠಗಿ:- ಡಿ.ಕೆ ಶಿವಕುಮಾರ್ ರೊಂದಿಗೆ ಉತ್ತಮ ಸಮನ್ವಯತೆ ಇದೆ ಎಂದು ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ನನ್ನ ಹಾಗೂ ರಾಜ್ಯದ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ ರವರ ನಡುವೆ ಯಾವುದೇ ರೀತಿಯ ಸಮನ್ವಯತೆಯ ಕೊರತೆ ಇರುವುದಿಲ್ಲ. ನಮ್ಮ ಪಕ್ಷದ ಎಲ್ಲಾ ನಾಯಕರುಗಳ ನಡುವೆ ಉತ್ತಮವಾದ ಸಮನ್ವಯತೆ ಇದೆ ಎಂದು ಇತ್ತೀಚಿನ ರಾಜಕೀಯ ಊಹಾಪೋಹಗಳ ಬಗ್ಗೆ ತೆರೆ ಎಳೆದಿದ್ದಾರೆ. ತಮ್ಮ ಹಾಗೂ ಡಿಕೆಶಿ ಮದ್ಯೆ ಗುಸುಗುಸು ರಾಜಕೀಯ ವಿದ್ಯಾಮಾನಕ್ಕೆ ತಾರ್ಕಿಕ ಅಂತ್ಯವಾಡಲು ಯತ್ನಿಸಿ, ನಮ್ಮ ಸರಕಾರದಲ್ಲಿ ಮೂರು ಡಿಸಿಎಂ ಹುದ್ದೆಗಳನ್ನು ನೀಡುವ ಕುರಿತು ನಾನು ಯಾವುದೇ ಬೇಡಿಕೆ ಇಟ್ಟಿಲ್ಲ ಎಂದರು. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಯಾವುದೇ ರೀತಿಯ ಆರ್ಥಿಕ ಹೊರೆಯಾಗಿಲ್ಲ. ಬದಲಾಗಿ ಈ ಹಿಂದಿನ ಬಿಜೆಪಿ ಸರಕಾರವು ತನ್ನ ಅಧಿಕಾರವಧಿಯ ಕೊನೆ ಗಳಿಗೆಯಲ್ಲಿ ಹೆಚ್ಚಿನ ಅನುದಾನ ನೀಡುವ ಮೂಲಕ ಹೆಚ್ಚಿನ ಸಾಲ ಮಾಡಿ ಹೋಗಿರುವುದು ಆರ್ಥಿಕವಾಗಿ ಹೊರೆಯಾಗಿರುತ್ತದೆ ಎಂದರು

Read More

ಕುಶಾಲನಗರ:- ಭ್ರಷ್ಟಾಚಾರದ ಬಗ್ಗೆ ಮಾತನಾಡುವ ಹಕ್ಕು ಬಿಜೆಪಿಗೆ ಇಲ್ಲ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಭ್ರಷ್ಟಾಚಾರದ ಬಗ್ಗೆ ಬಿಜೆಪಿಯವರಿಗೆ ಮಾತನಾಡುವ ಯಾವ ನೈತಿಕ ಹಕ್ಕಿಲ್ಲ. ಇದೀಗ ಎಲ್ಲಾ ಹೊರಗೆ ಬರುತ್ತಿದೆ. ಬಿಜೆಪಿಯ ಯತ್ನಾಳ್‌ರಿಂದಲೇ ಮಾಹಿತಿ ಪಡೆದು ತನಿಖೆ ಮಾಡಿದಲ್ಲಿ ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆ ಆಗಲಿದೆ ಎಂದರು. ಈಗಾಗಲೇ ಸಿದ್ದರಾಮಯ್ಯನವರ ಸರ್ಕಾರ ತನಿಖೆ ಸಮಿತಿ ರಚಿಸಿದೆ. ತನಿಖೆಯೂ ನಡೆಯುತ್ತಿದೆ ಎಂದರು. ಇನ್ನು, ಕೋವಿಡ್‌ ಸಂದರ್ಭ ಬಿಜೆಪಿಯ 40 ಪರ್ಸೆಂಟ್ ಸರ್ಕಾರದ ಬಗ್ಗೆ ಕಾಂಗ್ರೆಸ್ ಆರೋಪ ಮಾಡಿತ್ತು ಎಂದು ನೆನಪಿಸಿದರಲ್ಲದೆ, ಇದಕ್ಕೆ ಪೂರಕವಾಗಿ ಬಿಜೆಪಿ ಸರ್ಕಾರದ ವಿರುದ್ಧ ಬಸನಗೌಡ ಪಾಟೀಲ್‌ ಯತ್ನಾಳ್ 40,000 ಕೋಟಿ ರು. ಅಕ್ರಮ ಆರೋಪಿಸಿದ್ದಾರೆ. ಈ ವಿಚಾರದ ಬಗ್ಗೆ ಯತ್ನಾಳ್ ಸರಿಯಾದ ದಾಖಲೆ ಕೊಟ್ಟರೆ ತನಿಖೆಗೆ ಅನುಕೂಲ ಆಗಲಿದೆ ಎಂದವರು ಹೇಳಿದರು.

Read More

ಬೆಂಗಳೂರು:- ಅತಿಥಿ ಉಪನ್ಯಾಸಕರ ವೇತನ 5 ಸಾವಿರ ಏರಿಕೆ ಆಗಿದ್ದು, ಜ. 1ರಿಂದ ಅನ್ವಯವಾಗುವಂತೆ ಜಾರಿಗೆ ತರಲು ನಿರ್ಧರಿಸಲಾಗಿದೆ. ಸೇವೆ ಖಾಯಂ ಗೊಳಿಸುವಂತೆ ರಾಜ್ಯವ್ಯಾಪಿ ಮುಷ್ಕರ ನಡೆಸುತ್ತಿರುವ ಸರಕಾರಿ ಪ್ರಥಮ ದರ್ಜೆ ಕಾಲೇಜುಗಳ ಅತಿಥಿ ಉಪನ್ಯಾಸಕರ ಜತೆಗೆ ರಾಜ್ಯ ಸರಕಾರ ಸಂಧಾನಕ್ಕೆ ಮುಂದಾಗಿದೆ. ಜ. 1ರಿಂದ ಅನ್ವಯವಾಗುವಂತೆ ಹಾಲಿ ಇರುವ ಗೌರವಧನವನ್ನು 5 ಸಾವಿರ ರೂ. ಹೆಚ್ಚಳ ಮಾಡಲು ನಿರ್ಧರಿಸಿದೆ. ವಿದ್ಯಾರ್ಹತೆ, ಅನುಭವದ ಆಧಾರದ ಮೇಲೆ ಅತಿಥಿ ಉಪನ್ಯಾಸಕರ ಗೌರವಧನ 26 ಸಾವಿರ ದಿಂದ 31 ಸಾವಿರ ರೂ.ವರೆಗೆ ಇದೆ. ಪ್ರಸ್ತುತ ಕಾರ್ಯನಿರ್ವಹಿಸುತ್ತಿರುವ 10,600 ಅತಿಥಿ ಉಪನ್ಯಾಸಕರಿಗೂ ವೇತನ ಹೆಚ್ಚಳದ ಪ್ರಯೋ ಜನ ಸಮಾನವಾಗಿ ದೊರಕಲಿದೆ. ರಾಜ್ಯದ ಬೊಕ್ಕಸಕ್ಕೆ ಇದರಿಂದ ವಾರ್ಷಿಕ 55 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ ಎಂದು MC ಸುಧಾಕರ್ ಹೇಳಿದ್ದಾರೆ.

Read More