Author: AIN Author

ಬೆಂಗಳೂರು:- ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಶಿಕ್ಷಣ ಸಚಿವ ಮಧು ಬಂಗಾರಪ್ಪಗೆ ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ ಶಿಕ್ಷೆ ನೀಡಿದೆ. 6 ಕೋಟಿ 96 ಲಕ್ಷದ 70 ಸಾವಿರ ರೂಪಾಯಿ ದಂಡ‌ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ. ಒಂದು ವೇಳೆ ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ‌ ಅನುಭವಿಸಲು ಆದೇಶಿಸಿದೆ. 6 ಕೋಟಿ 96 ಲಕ್ಷದ 70 ಸಾವಿರ ರೂ. ದಂಡದ ಹಣದಲ್ಲಿ 6,96,60,000 ದೂರುದಾರರಿಗೆ ಪರಿಹಾರವಾಗಿ ನೀಡಬೇಕು. ಇನ್ನುಳಿದ 10 ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಕೋರ್ಟ್ ಆದೇಶಿಸಿದೆ. ಕೋರ್ಟ್​ನಲ್ಲಿ ಕೇವಲ 50 ಲಕ್ಷ ರೂ. ನೀಡಿ ಉಳಿದ ಹಣ ಪಾವತಿಸಿರಲಿಲ್ಲ. ಜನವರಿ 30ರೊಳಗೆ 6.10 ಲಕ್ಷ ಪಾವತಿಸುವುದಾಗಿ ಮಧು ಬಂಗಾರಪ್ಪ ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಆದ್ರೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ , ಮುಚ್ಚಳಿಕೆ ಒಪ್ಪಲು ನಿರಾಕರಿಸಿದೆ. ಈ ಹಿಂದೆಯೂ ಮಧು ಬಂಗಾರಪ್ಪ ನೀಡಿದ್ದ ಮುಚ್ಚಳಿಕೆ ಪಾಲಿಸಿಲ್ಲ. ಹೀಗಾಗಿ ಜಡ್ಜ್ ಜೆ.ಪ್ರೀತ್ ಅವರು ಮಧು…

Read More

ಗೌರಿಬಿದನೂರು : ರಾಜ್ಯದಲ್ಲಿ ಆಡಳಿತ ಚುಕ್ಕಾಣಿ ಹಿಡಿದಿರುವ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿನ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಹಿತ ಕಾಪಾಡುವುದರಲ್ಲಿ ವಿಫಲವಾಗಿದ್ದು, ಶಿಕ್ಷಣ ಕ್ಷೇತ್ರವನ್ನು ಸಂಪೂರ್ಣ ನಿರ್ಲಕ್ಷ್ಯ ಮಾಡಿದೆ ಎಂದು ಆಗ್ನೇಯ ‌ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ತು ಸದಸ್ಯ ವೈ.ಎ.ನಾರಾಯಣಸ್ವಾಮಿ ತಿಳಿಸಿದರು. ನಗರದ ಪ್ರವಾಸಿ ಮಂದಿರದಲ್ಲಿ ಗುರುವಾರ ಶಿಕ್ಷಕರೊಂದಿಗೆ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ‌ಮಾಡಿ, ಅವರ ಸ್ಥಳೀಯ ಸಮಸ್ಯೆಗಳ ಬಗ್ಗೆ ಚರ್ಚಿಸುತ್ತಾ ಅವರು ಮಾತನಾಡಿದರು. ಕಳೆದ 20 ವರ್ಷಗಳಿಂದಲೂ ಈ ಭಾಗದ ಶಿಕ್ಷಕರು, ಉಪನ್ಯಾಸಕರ ಸಮಸ್ಯೆಗಳಿಗೆ ಸ್ಪಂದಿಸುವ ಮೂಲಕ ಅವರೊಂದಿಗೆ ಉತ್ತಮ ಭಾಂದವ್ಯ ಹೊಂದಿದ್ದೇನೆ. ಮುಂಬರುವ 2024 ರ ಆಗ್ನೇಯ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ವತಿಯಿಂದ ಅಭ್ಯರ್ಥಿಯಾಗಿ ಮತ್ತೊಮ್ಮೆ ಶಿಕ್ಷಕರ ಸೇವೆ ಮಾಡಲು ಬಯಸಿದ್ದೇನೆ. ಸತತ ಮೂರು ಬಾರಿ ವಿಧಾನಪರಿಷತ್ತು ಸದಸ್ಯನಾಗಿ ಕಾರ್ಯನಿರ್ವಹಿಸುವ ಮೂಲಕ ಶಿಕ್ಷಣ ಕ್ಷೇತ್ರದ ಒಳಿತಿಗಾಗಿ ಶಿಕ್ಷಕರ ಮತ್ತು ವಿದ್ಯಾರ್ಥಿಗಳ ಹಿತ ಕಾಪಾಡಲು ಪ್ರಾಮಾಣಿಕವಾಗಿ ಕೆಲಸ ಮಾಡಿದ್ದೇನೆ. ಎಲ್ಲ ಶಿಕ್ಷಕರ ಸಂಘದ ಪದಾಧಿಕಾರಿಗಳು ನಮ್ಮೊಂದಿಗೆ ಇದ್ದಾರೆ.…

Read More

ಸೀತಾಫಲದ ಹಣ್ಣಿನಲ್ಲಿ ಹಣ್ಣಿನಲ್ಲಿ ವಿಟಮಿನ್ ಸಿ, ವಿಟಮಿನ್ ಬಿ 6, ಕ್ಯಾಲ್ಸಿಯಂ, ಕಬ್ಬಿಣ ಮತ್ತು ಉತ್ಕರ್ಷಣ ನಿರೋಧಕಗಳಿವೆ. ಇದರಲ್ಲಿ ಫೈಬರ್ ಕೂಡ ಸಮೃದ್ಧವಾಗಿದೆ. ದೀರ್ಘಕಾಲದ ಅಲ್ಸರ್ ಕಾಯಿಲೆಯಿಂದ ಬಳಲುತ್ತಿರುವ ಜನರು ಈ ಹಣ್ಣನ್ನು ಸೇವಿಸಿದರೆ ಬೇಗನೆ ಗುಣಮುಖರಾಗುತ್ತಾರೆ. ಅಂತೆಯೇ, ಆಮ್ಲೀಯತೆ ಸಮಸ್ಯೆ ಇರುವವರು ಸಹ ಈ ಹಣ್ಣನ್ನು ತಿನ್ನಬಹುದು. ನಮ್ಮ ದೇಹದಲ್ಲಿ ಚಯಾಪಚಯ ಚಟುವಟಿಕೆಗಳನ್ನು ಉತ್ತೇಜಿಸುತ್ತದೆ. ಇದು ನಮ್ಮ ಆಹಾರವನ್ನು ಶಕ್ತಿಯನ್ನಾಗಿ ಪರಿವರ್ತಿಸುವ ಸಾಮರ್ಥ್ಯವನ್ನು ಹೊಂದಿದೆ. ಕಣ್ಣು ಮತ್ತು ಹೃದಯದ ಆರೋಗ್ಯಕ್ಕೆ ಒಳ್ಳೆಯದು. ಇದನ್ನು ತಿನ್ನುವುದರಿಂದ ಕಣ್ಣಿನ ದೃಷ್ಟಿ ಸುಧಾರಿಸುತ್ತದೆ. ಇದು ಹೃದಯದ ಆರೋಗ್ಯ ಮತ್ತು ಮೆದುಳಿನ ಆರೋಗ್ಯಕ್ಕೂ ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಈ ಹಣ್ಣಿನಲ್ಲಿ ಸೂಕ್ಷ್ಮ ಪೋಷಕಾಂಶಗಳು ಸಮೃದ್ಧವಾಗಿದ್ದು, ಇದು ಚರ್ಮಕ್ಕೆ ಮೃದುವಾಗುತ್ತದೆ. ಚಿಕ್ಕ ವಯಸ್ಸಿನಲ್ಲಿಯೇ ಕಣ್ಣಿನ ಸಮಸ್ಯೆ ಇರುವ ಮಕ್ಕಳಿಗೆ ಈ ಹಣ್ಣು ಉಪಯುಕ್ತವಾಗಿದೆ. ಇದು ನಮ್ಮ ರಕ್ತದಲ್ಲಿ ಹಿಮೋಗ್ಲೋಬಿನ್ ಪ್ರಮಾಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ರಕ್ತಹೀನತೆ ಇರುವ ಮಹಿಳೆಯರು ಮತ್ತು ಗರ್ಭಾವಸ್ಥೆಯಲ್ಲಿ ಹಿಮೋಗ್ಲೋಬಿನ್ ಕೊರತೆ ಇರುವ ಮಹಿಳೆಯರು ಈ…

Read More

ಕಡಲೆಹಿಟ್ಟು ಅಡುಗೆಗೆ ಮಾತ್ರವಲ್ಲದೆ, ಸೌಂದರ್ಯ ವೃದ್ಧಿಸಲೂ ಕೂಡಾ ಉಪಯೋಗಿಸಲಾಗುತ್ತದೆ. ಹಿಂದಿನ ಕಾಲದಿಂದಲೂ ಕಡಲೆಹಿಟ್ಟನ್ನು ಸೌಂದರ್ಯ ವರ್ಧಕವಾಗಿ ಬಳಸಲಾಗುತ್ತಿತ್ತು. ಸೋಪ್‌ ಕಂಡುಹಿಡಿಯುವ ಮೊದಲು ಕಡಲೆಹಿಟ್ಟನ್ನು ಸೋಪ್‌ ನಂತೆ ಉಪಯೋಗಿಸುತ್ತಿದ್ದರು. ಕಡಲೆ ಹಿಟ್ಟಿನಲ್ಲಿರುವ ಕೆಲವೊಂದು ಗುಣಗಳಿಂದಾಗಿ ಇಂದಿನ ದಿನಗಳಲ್ಲೂ ಕಡಲೆಹಿಟ್ಟಿನಿಂದ ತಯಾರಿಸಿದ ಸೋಪ್ ಗಳು ಮಾರುಕಟ್ಟೆಯಲ್ಲಿವೆ. ಚರ್ಮದಲ್ಲಿ ಉಂಟಾಗುವ ಅಲರ್ಜಿ, ತುರಿಕೆ, ಉರಿಗಳಿಂದ ದೂರವಿಡಲು ಕಡಲೆ ಹಿಟ್ಟು ಉತ್ತಮ ಪರಿಹಾರ. ಕಡಲೆ ಹಿಟ್ಟನ್ನು ಮುಖಕ್ಕೆ ಹಚ್ಚಿಕೊಳ್ಳುವುದರಿಂದ ಚರ್ಮದ ಕಾಂತಿ ಹೆಚ್ಚಿಸುತ್ತದೆ. ಚರ್ಮ ಸುಕ್ಕುಗಟ್ಟದಂತೆ ತಡೆದು, ಯಾವುದೇ ರೀತಿಯ ಚರ್ಮದ ಕಾಯಿಲೆ ಬರದಂತೆ ತಡೆಯುತ್ತದೆ. ಸೌಂದರ್ಯದ ದೃಷ್ಟಿಯಿಂದ ನೋಡಿದಾಗಲೂ ಕಡಲೆ ಹಿಟ್ಟು ಹಲವು ವಿಧದಲ್ಲಿ ತ್ವಚೆಗೆ ಉಪಯೋಗಕಾರಿಯಾಗಿದೆ. ಸತತವಾಗಿ ಕಡ್ಲೆ ಹಿಟ್ಟಿನಿಂದ ಮುಖ ತೊಳೆಯುವುದರಿಂದ ಚರ್ಮ ನಯವಾಗಿ ಕಾಣಿಸುತ್ತದೆ. ಕಡಲೆ ಹಿಟ್ಟಿನಿಂದ ಮುಖದ ಕಲೆ ದೂರವಾಗುತ್ತದೆ. ಬಿಸಿಲಿನಿಂದ ತ್ವಚೆ ಕಪ್ಪಗಾಗಿದ್ದರೆ ಅದನ್ನು ಹೋಗಲಾಡಿಸುತ್ತದೆ. ಯಾವುದೇ ಅಡ್ಡಪರಿಣಾಮವಿಲ್ಲದೇ ಕಡಲೆ ಹಿಟ್ಟು ಉಪಯೋಗಿಸಿ ಸೌಂದರ್ಯ ವೃದ್ಧಿಸಿಕೊಳ್ಳುವುದು ಹೇಗೆ ಎಂದು ತಿಳಿದುಕೊಳ್ಳೋಣ. ಹೊಳಪಿನ ತ್ವಚೆಗೆ ಮೊದಲು ಕಡಲೆಹಿಟ್ಟಿಗೆ ಸ್ವಲ್ಪ ಹಾಲು…

Read More

ಮಂಡ್ಯ: ಆರ್‌ಎಸ್‌ಎಸ್‌ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ ಅವರಿಗೆ ಬಿಗ್‌ ರಿಲೀಫ್‌ ಸಿಕ್ಕಿದ್ದು, ಶ್ರೀರಂಗ ಪಟ್ಟಣ ನ್ಯಾಯಾಲಯ ಜಮೀನು ಮಂಜೂರು ಮಾಡಿದೆ. ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ನೀಡಿದ ದೂರಿನ ಅನ್ವಯ ಶ್ರೀರಂಗಪಟ್ಟಣ ಟೌನ್ ಪೊಲೀಸ್ ಠಾಣೆಯಲ್ಲಿ ಜಾಮೀನು ರಹಿತ ಸೆಕ್ಷನ್‌ ಅಡಿ ಪ್ರಕರಣ ದಾಖಲಾಗಿತ್ತು. ಡಿಸೆಂಬರ್ 24 ರಂದು ಶ್ರೀರಂಗಪಟ್ಟಣ ಸಂಕೀರ್ತನಾ ಯಾತ್ರೆಯಲ್ಲಿ ಹನುಮ ಮಾಲಾಧಿಕಾರಿಗಳನ್ನು ಉದ್ದೇಶಿಸಿ ಮುಸ್ಲಿಮರ ವಿರುದ್ಧ ಅಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ. ಮಹಿಳೆಯರನ್ನು ಚುಡಾಯಿಸಿ, ಲೈಂಗಿಕವಾಗಿ ಅವಮಾನಿಸಿ, ಲೈಂಗಿಕ ದೌರ್ಜನ್ಯಕ್ಕೆ ಪ್ರಚೋದಿಸಿ, ಸಾರ್ವಜನಿಕವಾಗಿ ಬೆದರಿಕೆಯೊಡ್ಡಿ, ಧರ್ಮವನ್ನ ಅವಮಾನಿಸಿ, ಧರ್ಮಗಳ ಮಧ್ಯೆ ಎತ್ತಿಕಟ್ಟಿ ಗಲಭೆ ನಡೆಸಿರುವ ಕಲ್ಲಡ್ಕ ಪ್ರಭಾಕರ ಭಟ್ ಹಾಗೂ ಇತರರ ವಿರುದ್ಧ ಪ್ರಕರಣ ದಾಖಲಿಸಿ ರೌಡಿಶೀಟರ್ ತೆರೆದು ಕಾನೂನು ಕ್ರಮ ತೆಗೆದುಕೊಳ್ಳುವಂತೆ ನಜ್ಮಾ ನಝೀರ್ ದೂರು ನೀಡಿದ್ದರು. ಪ್ರಭಾಕರ ಭಟ್‌ ಹೇಳಿದ್ದೇನು? ಹಿಂದೆ ತಲಾಖ್‌ ತಲಾಖ್‌ ಎಂದು ಹೇಳಿ ಮುಸ್ಲಿಂ ಗಂಡಂದಿರು ಕೈತೊಳೆದುಕೊಳ್ಳುತ್ತಿದ್ದರು. ದಿನಕ್ಕೊಬ್ಬ ಗಂಡ ಬದಲಾಗುತ್ತಿದ್ದ. ಮುಸ್ಲಿಂ ಹೆಣ್ಣು ಮಕ್ಕಳಿಗೆ ಪರ್ಮನೆಂಟ್ ಗಂಡನನ್ನ ಕೊಟ್ಟಿದ್ದು…

Read More

ಸ್ತನ ಕ್ಯಾನ್ಸರ್ ಬೆಳವಣಿಗೆಯನ್ನು ತಡೆಯಲು ಸಹಾಯ ಮಾಡುವ ಆಹಾರಗಳ ಪ್ರಾಮುಖ್ಯತೆಯನ್ನು ಎತ್ತಿ ತೋರಿಸುವ ಹಲವಾರು ಸಂಶೋಧನೆಗಳು ನಡೆದಿವೆ. ಆದ್ದರಿಂದ ಮಹಿಳೆಯ ಆಹಾರಕ್ರಮವು ಸ್ತನ ಕ್ಯಾನ್ಸರ್​ ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಹೀಗಾಗಿ, ನಾವು ಯಾವ ರೀತಿಯ ಆಹಾರಕ್ರಮವನ್ನು ಅನುಸರಿಸುತ್ತೇವೆ, ನಮ್ಮ ಡಯೆಟ್​ನಲ್ಲಿ ಯಾವೆಲ್ಲ ಆಹಾರಗಳನ್ನು ಸೇರಿಸಿಕೊಳ್ಳುತ್ತೇವೆ ಎಂಬುದು ಕೂಡ ಬಹಳ ಮುಖ್ಯ. ಆರ್ಗಾನಿಕ್ ಆಹಾರಗಳು, ಕಡಿಮೆ ಕೀಟನಾಶಕಗಳ ಬಳಕೆಯ ಆಹಾರಗಳು ಸ್ತನ ಕ್ಯಾನ್ಸರ್ ಅಪಾಯವನ್ನು ಕಡಿಮೆ ಮಾಡುವಲ್ಲಿ ಮುಖ್ಯ ಪಾತ್ರ ವಹಿಸುತ್ತವೆ. ನಾವು ಸೇವಿಸುವ ಪ್ರತಿಯೊಂದು ತುತ್ತು ಕೂಡ ನಮ್ಮ ಆಯ್ಕೆಯೇ ಆಗಿರಬೇಕು. ಒಂದೊಂದು ತುತ್ತಿನಲ್ಲೂ ಪೌಷ್ಟಿಕಾಂಶಗಳು ಇರುತ್ತವೆ. ನಮ್ಮ ದೇಹಕ್ಕೆ ಯಾವ ರೀತಿಯ ಆಹಾರ ಬೇಕೆನ್ನುವುದು ನಮ್ಮ ಆಯ್ಕೆಯಾಗಿರಬೇಕು. ಆದಷ್ಟೂ ಆರ್ಗಾನಿಕ್ ಆಹಾರವನ್ನೇ ಆಯ್ಕೆ ಮಾಡಿಕೊಳ್ಳಬೇಕು. ಸ್ತನ ಕ್ಯಾನ್ಸರ್‌ನಂತಹ ಕಾಯಿಲೆಗಳ ವಿರುದ್ಧ ನಮ್ಮನ್ನು ರಕ್ಷಿಸಿಕೊಳ್ಳಲು ಇದು ಉತ್ತಮ ನಿರ್ಧಾರವಾಗಿದೆ. ನಾವು ತಿನ್ನುವ ಆಹಾರ ಕೂಡ ಆರೋಗ್ಯದ ಅಪಾಯಗಳ ಜೊತೆ ನಿಕಟ ಸಂಬಂಧ ಹೊಂದಿದೆ. ಹೀಗಾಗಿ ಹಾನಿಕಾರಕ ರಾಸಾಯನಿಕಗಳಿಲ್ಲದ ಆಹಾರವನ್ನು ಸೇವಿಸುವುದು…

Read More

ಧಾರವಾಡ: ನಿಗದಿತ ಸಮಯಕ್ಕೆ ಬಸ್ ಬಾರದೇ ಇರುವುದರಿಂದ ಕಂಗಾಲಾದ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಏಕಾಏಕಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿದ ಘಟನೆ ಧಾರವಾಡ ತಾಲೂಕಿನ ಉಪ್ಪಿನ ಬೆಟಗೇರಿ ಗ್ರಾಮದಲ್ಲಿ ನಡೆದಿದೆ. ಈ ಮೊದಲು ಉಪ್ಪಿನ ಬೆಟಗೇರಿ ಗ್ರಾಮಕ್ಕೆ ಮೂರ್ನಾಲ್ಕು ಬಸ್‌ಗಳು ನಿರಂತರವಾಗಿ ಸಂಚರಿಸುತ್ತಿದ್ದವು. ಆದರೆ, ಈಗ ಬೆಳಿಗ್ಗೆ 8 ಗಂಟೆಯ ಬಸ್ ಧಾರವಾಡದತ್ತ ಹೊರಟು ಹೋದರೆ ಮುಂದೆ 10 ಗಂಟೆಯವರೆಗೂ ಯಾವುದೇ ಬಸ್ಸಿನ ಸೌಕರ್ಯವಿಲ್ಲ. ಹೀಗಾಗಿ ವಿದ್ಯಾರ್ಥಿ, ವಿದ್ಯಾರ್ಥಿನಿಯರು ನಿಗದಿತ ಸಮಯಕ್ಕೆ ಕಾಲೇಜಿಗೆ ಹೋಗಲು ಆಗುತ್ತಿಲ್ಲ ಎಂದು ವಿದ್ಯಾರ್ಥಿ, ವಿದ್ಯಾರ್ಥಿನಿಯರು ಇಂದು ಏಕಾಏಕಿ ಬಸ್ ತಡೆದು ಪ್ರತಿಭಟನೆ ನಡೆಸಿದರು. https://ainlivenews.com/eat-these-foods-if-you-are-deficient-in-vitamin-d-in-winter/ ಬೆಳಿಗ್ಗೆ 9 ಗಂಟೆ ಹಾಗೂ 10 ಗಂಟೆಗೆ ಎರಡು ಬಸ್ಸಿನ ಅವಶ್ಯಕತೆ ಇದೆ. ಈ ಎರಡು ಬಸ್ಸುಗಳು ಬಂದರೆ ವಿದ್ಯಾರ್ಥಿಗಳು ನಿಗದಿತ ಸಮಯಕ್ಕೆ ಕಾಲೇಜಿಗೆ ಹೋಗಲು ಅನುಕೂಲವಾಗುತ್ತದೆ. ಈ ಸಂಬಂಧ ಡಿಪೊ ಮ್ಯಾನೇಜರ್‌ಗೆ ಸಾಕಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಸ್ಥಳಕ್ಕೆ ಪೊಲೀಸರು ಕೂಡ…

Read More

ಬೆಂಗಳೂರು: ಚೆಕ್ ಬೌನ್ಸ್ ಪ್ರಕರಣದಲ್ಲಿ ಸಚಿವ ಮಧು ಬಂಗಾರಪ್ಪಗೆ ಶಿಕ್ಷೆ ಪ್ರಕಟವಾಗಿದ್ದು  6 ಕೋಟಿ 96 ಲಕ್ಷದ 70 ಸಾವಿರ ದಂಡ‌ ವಿಧಿಸಿದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಹಾಗೆ  ದಂಡ ಪಾವತಿಸದಿದ್ದರೆ 6 ತಿಂಗಳು ಸೆರೆವಾಸ‌ ಅನುಭವಿಸಲು ಆದೇಶ ಕೂಡ ನೀಡಲಾಗಿದೆ. ದಂಡದ ಹಣದಲ್ಲಿ 6.96,60,000 ರೂಪಾಯಿ ದೂರುದಾರರಿಗೆ ಪರಿಹಾರವಾಗಿ ನೀಡಲು ಆದೇಶ ಹೊರಡಿಸಿದ್ದು ಉಳಿದ 10 ಸಾವಿರ ರೂಪಾಯಿ ಸರ್ಕಾರಕ್ಕೆ ದಂಡವಾಗಿ ನೀಡಲು ಆದೇಶ ಕೊಟ್ಟಿದೆ. ಆಕಾಶ್ ಆಡಿಯೋ ಕಂಪನಿಯ ಎಂಡಿ ಆಗಿದ್ದ ಮಧು ಬಂಗಾರಪ್ಪ ಅವರು 2011ರಲ್ಲಿ ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆಗೆ 6.6 ಕೋಟಿ ರೂಪಾಯಿ ಚೆಕ್ ನೀಡಿದ್ದರು. ಆದ್ರೆ, ಆ ಚೆಕ್ ಬೌನ್ಸ್ ಆಗಿತ್ತು. ಈ ಹಿನ್ನೆಲೆಯಲ್ಲಿ ಮಧು ಬಂಗಾರಪ್ಪ ವಿರುದ್ಧ ರಾಜೇಶ್ ಎಕ್ಸ್‌ಪೋರ್ಟ್ ಸಂಸ್ಥೆ ದೂರು ದಾಖಲಿಸಿತ್ತು. ಈ ವೇಳೆ ದೂರುದಾರ ಕಂಪೆನಿಗೆ 6.60 ಕೋಟಿ ಬಾಕಿ ಪಾವತಿಗೆ ಚೆಕ್ ನೀಡಿದ್ದರು 2011 ರಲ್ಲಿ ಮಧು ಬಂಗಾರಪ್ಪ ನೀಡಿದ್ದ ಚೆಕ್ ಬೌನ್ಸ್ ಆಗಿತ್ತು ಹಾಗೆ ಖಾತೆಯಲ್ಲಿ…

Read More

ವಿಜಯಪುರ: ಕರವೇ ನಾರಾಯಣಗೌಡ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕರವೇ ಕಾರ್ಯಕರ್ತರಿಂದ ರಾಜ್ಯ ಬಿಜ್ಜಳ ಹೆದ್ದಾರಿ ಬಂದ್ ಮಾಡಿ ಪ್ರತಿಭಟನೆ ನಡೆಸಿದರು. ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ತಾಲೂಕಿನ ಹೂವಿನ ಹಿಪ್ಪರಗಿಯಲ್ಲಿ ಪ್ರತಿಭಟನೆ ನಡೆಸಿದ್ದು,  ರಾಜ್ಯ ಬಿಜ್ಜಳ ಹೆದ್ದಾರಿಯನ್ನು ಬಂದ್ ಮಾಡಿ ಆಕ್ರೋಶ ವ್ಯಕ್ತಪಡಿಸಿದರು. ತಕ್ಷಣ ಬಿಡುಗಡೆಗೊಳಿಸಬೇಕು ಎಂದು ಆಗ್ರಹಿಸಿದರು.  ಕರವೇ ಮುಖಂಡ ಅಶೋಕ ಹಾರಿವಾಳ ನೇತ್ರತ್ವದಲ್ಲಿರಾಜ್ಯ ಸರ್ಕಾರದ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು.    

Read More

ದಾವಣಗೆರೆ: ದಾವಣಗೆರೆ ನಗರದಲ್ಲಿ ಆಗಿರುವ ಫುಟ್ ಪಾತ್ ಒತ್ತುವರಿ ತೆರವಿಗೆ ಕನ್ನಡ ಪರ ಸಂಘಟನೆಯ ಪದಾಧಿಕಾರಿಗಳು ಮಹಾ ನಗರ ಪಾಲಿಕೆ ಮತ್ತು ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಒತ್ತಾಯ ಮಾಡಿದ್ದಾರೆ. ಪ್ರಮುಖವಾಗಿ ದಾವಣಗೆರೆ ನಗರದ ಎವಿಕೆ ಕಾಲೇಜು ರಸ್ತೆ, ಕೆಎಸ್ ಆರ್ ಟಿಸಿ ಬಸ್ ನಿಲ್ದಾಣ ಬಳಿ ರಸ್ತೆಯಲ್ಲಿ ಅಂಗಡಿಗಳು ರಸ್ತೆಗಳನ್ನ ಒತ್ತುವರಿ ಮಾಡಿಕೊಂಡು ವ್ಯಾಪಾರ ವಹಿವಾಟು ನಡೆಸುತ್ತಿದ್ದಾರೆ. ಸಾಕಷ್ಟು ಪ್ರಮಾಣದಲ್ಲಿ ವಾಹನಗಳು ಹಾಗೂ ಜನರು ಓಡಾಡುವ ರಸ್ತೆಗಳಲ್ಲಿ ಈ ರೀತಿಯಾಗಿ ಫುಟ್ ಪಾತ್ ಒತ್ತುವರಿ ಆಗಿರುವುದರಿಂದ ಸಾರ್ವಜನಿಕರು ಓಡಾಡಲು ಆಗುತ್ತಿಲ್ಲ. ವಾಹನಗಳಿಂದ ಅಪಘಾತಗಳು ಸಂಭವಿಸುತ್ತಿವೆ. ಕಾಲೇಜು ವಿದ್ಯಾರ್ಥಿಗಳು ಓಡಾಡುವುದು ಕಷ್ಟವಾಗಿದೆ. ಈ ಹಿನ್ನಲೆಯಲ್ಲಿ ಈ ರಸ್ತೆಯಲ್ಲಿ ಒತ್ತು ಮಾಡಿ ಅಂಗಡಿ ನಿರ್ಮಿಸಿಕೊಂಡಿರುವ ಹಣ್ಣಿನ ಅಂಗಡಿಗಳು, ರಸ್ತೆ ಬದಿಯ ಬಟ್ಟೆ ಅಂಗಡಿಗಳು, ಮೊಬೈಲ್ ಶಾಪ್ ಸೇರಿದಂತೆ ಇತರೆ ಅಂಗಡಿಗಳನ್ನ ತೆರವುಗೊಳಿಸಿ ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡುವಂತೆ ಕರ್ನಾಟಕ ನವ ನಿರ್ಮಾಣ ಸೇನೆಯ ಉಪಾಧ್ಯಕ್ಷ ಶೇರ್ ಅಲಿ ಹಾಗೂ ದಾವಣಗೆರೆ ನಗರ…

Read More