Author: AIN Author

ಬೆಂಗಳೂರು:- ಕೋವಿಡ್​ ಪಾಸಿಟಿವಿಟಿ ಪ್ರಮಾಣದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದು, ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ಪ್ರತ್ಯೇಕ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ರಾಜ್ಯದಲ್ಲಿ ಈಗಾಗಲೇ 400ಕ್ಕೂ ಅಧಿಕ ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು, 60 ವರ್ಷ ಮೇಲ್ಪಟ್ಟವರು ಹಾಗೂ ವಿವಿಧ ರೋಗಗಳಿಂದ ಬಳಲಲುತ್ತಿರುವವರು ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು ಎಂದು ರಾಜ್ಯ ಸರ್ಕಾರ ಆದೇಶಿಸಿದೆ. ಸೋಂಕು ಹರಡುವಿಕೆ ದಿನದಿಂದ ದಿನಕ್ಕೆ ಜಾಸ್ತಿಯಾಗುತ್ತಿರುವ ಬೆನ್ನಲ್ಲೇ ಸರ್ಕಾರದಿಂದ ಕೋವಿಡ್‌ ಮಾರ್ಗಸೂಚಿ ಹೊರಡಿಸಲಾಗಿದೆ. ಮಾರ್ಗಸೂಚಿಯಲ್ಲೇನಿದೆ? ರಾಜ್ಯದಲ್ಲಿ ಪ್ರತಿದಿನ 5000 ಟೆಸ್ಟಿಂಗ್ ಗುರಿಯನ್ನು ಸಾಧಿಸಲಾಗುವುದು. ಕೋವಿಡ್ ಟೆಸ್ಟಿಂಗ್ ನಲ್ಲಿ ರಾಜ್ಯವು 2ನೇ ಸ್ಥಾನದಲ್ಲಿರುವುದರಿಂದ (ಕೇರಳ ರಾಜ್ಯವು ಮೊದಲನೇ ಸ್ಥಾನದಲ್ಲಿದೆ). ಪಾಸಿಟಿವ್ ಪ್ರಕರಣಗಳ ಸಂಪರ್ಕಿತರು ಸೋಂಕಿನ ಲಕ್ಷಣಗಳನ್ನು ಹೊಂದಿದ್ದಲ್ಲಿ ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ರಾಜ್ಯದ 432 ಸೋಂಕಿತರ ಪೈಕಿ 400 ಪ್ರಕರಣಗಳು ಹೋಂ ಐಸೋಲೇಷನ್ ನಲ್ಲಿದ್ದು, ಉಳಿದ 32 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೋಂ ಐಸೋಲೇಷನ್ ನಲ್ಲಿರುವ ಹಾಗೂ ಆಸ್ಪತ್ರೆಯ ಜನರಲ್ ವಾರ್ಡ್ ನಲ್ಲಿ ಕೋವಿಡ್ ಚಿಕಿತ್ಸೆಗಾಗಿ ದಾಖಲಾಗಿರುವವರನ್ನು ನಗರ ಪ್ರಾಥಮಿಕ…

Read More

ಕೆಲವರಿಗೆ ಹಸಿ ಈರುಳ್ಳಿ ತಿನ್ನೋ ಅಭ್ಯಾಸ ಇರುತ್ತದೆ. ಆದರೆ ಹಸಿ ಈರುಳ್ಳಿ ತಿನ್ನುವುದು ಆರೋಗ್ಯಕ್ಕೆ ಒಳ್ಳೆಯದಲ್ಲ. ಇದರಿಂದ ಹಲವಾರು ಸಮಸ್ಯೆಗಳು ಕಾಡುತ್ತದೆಯಂತೆ. ಇದು ಕೆಲವು ಜೀರ್ಣಕಾರಿ ಸಮಸ್ಯೆಯನ್ನು ಉಂಟುಮಾಡುತ್ತದೆಯಂತೆ. ಇದರಿಂದ ಗ್ಯಾಸ್, ಹೊಟ್ಟೆಯುಬ್ಬರ ಸಮಸ್ಯೆ ಕಾಡುತ್ತದೆಯಂತೆ. ಹಸಿ ಈರುಳ್ಳಿ ತಿನ್ನುವುದರಿಂದ ಅಲರ್ಜಿ ಸಮಸ್ಯೆ ಕಾಡಬಹುದು. ಇದರಿಂದ ಚರ್ಮದಲ್ಲಿ ತುರಿಕೆ ಮತ್ತು ಉಸಿರಾಟದ ಸಮಸ್ಯೆಗಳು ಕಾಡುತ್ತದೆಯಂತೆ. ಹಸಿ ಈರುಳ್ಳಿ ತಿನ್ನುವುದರಿಂದ ಎದೆಯುರಿ ಸಮಸ್ಯೆ ಕಾಡುತ್ತದೆ. ಹಾಗಾಗಿ ಈಗಾಗಲೇ ಎದೆಯುರಿ ಸಮಸ್ಯೆಯಿಂದ ಬಳಲುತ್ತಿರುವವರು ಹಸಿ ಈರುಳ್ಳಿ ತಿನ್ನಬೇಡಿ. ಹಸಿ ಈರುಳ್ಳಿಯಲ್ಲಿ ಟೈರಮೈನ್ ಇದ್ದು, ಇದು ತಲೆನೋವನ್ನು ಉಂಟುಮಾಡುತ್ತದೆ. ಹಾಗಾಗಿ ಮೈಗ್ರೇನ್ ಸಮಸ್ಯೆ ಇರುವವರು ಇದನ್ನು ತಿನ್ನಬೇಡಿ.

Read More

ಹಾನಗಲ್:- ಹೌದು ಕರ್ನಾಟಕ ರಾಜ್ಯ ಸರ್ಕಾರದ ಶಿಕ್ಷಣ ಇಲಾಖೆ ಸಚಿವರು ಹಾಗೂ ಅಧಿಕಾರಿಗಳು ಬಹುಶಃ ಮತ್ತು ಭಾಗಶಃ ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ವ್ಯಾಪ್ತಿಗೆ ಬರುವ ಕತ್ರಿಕೊಪ್ಪ ಗ್ರಾಮದ ಸರ್ಕಾರಿ ಶಾಲೆ ದುಸ್ಥಿತಿ ನೋಡಿದ್ರೆ ಎಷ್ಟು ಕಾರ್ಯ ಪ್ರವೃತ್ತ ವಾಗಿದೆ ಎಂಬುದು ಸ್ಪಷ್ಟವಾಗುತ್ತದೆ. ಹೌದು ಅದ್ಯಾಕೋ ಏನೋ ಗೊತ್ತಿಲ್ಲಾ ಈ ಒಟ್ಟು 15 ಶಾಲಾ ವಿದ್ಯಾರ್ಥಿಗಳು ಇರುವ ಕತ್ರಿಕೊಪ್ಪ ಗ್ರಾಮದ ಸರ್ಕಾರಿ ಶಾಲೆಗೆ ಎರಡು ಸಮಸ್ಯೆಗಳು ಜ್ವಲಂತ ಸಮಸ್ಯೆಗಳಾಗಿ ಮಾರ್ಪಟ್ಟಿವೆ. ರಾಷ್ಟ್ರೀಯ ಹೆದ್ದಾರಿ ನಿರ್ಮಾಣದ ಕಾಮಗಾರಿ ಇರೋದ್ರಿಂದ ಕಳೆದ 1 ವರ್ಷದಿಂದ ಬರೀ ಧೂಳಿನಿಂದ ಮುಚ್ಚಿ ಹೋಗುವ ಪರಿಸ್ಥಿತಿ ನಿರ್ಮಾಣವಾಗಿ, ಮಕ್ಕಳ ಆರೋಗ್ಯದ ಮೇಲೂ ಪರಿಣಾಮ ಬೀರಿವೆ, ಇನ್ನೊಂದು ಕಡೆ ತುಂಬಾ ಶಿಥಿಲಗೊಂಡ ಕಟ್ಟಡದಲ್ಲೇ ಮಕ್ಕಳು ಅಭ್ಯಾಸ ಮಾಡುತ್ತಿರುವುದರಿಂದ ದಿನ ನಿತ್ಯ ಜೀವ ಭಯದಲ್ಲೇ ಪಾಠ ಕೇಳುವ ಪರಿಸ್ಥಿತಿ ಬಂದೊದಗಿದೆ. ಇನ್ನೂ ಶಾಲಾ ಆವರಣದ ತುಂಬಾ ಬರೀ ಮಣ್ಣಿನ ಧೂಳೇ ಇರುವ ಕಾರಣ ಮಕ್ಕಳಿಗೆ ಉಸಿರಾಟದ ಸಮಸ್ಯೆಯು ಸಹ ಎದುರಾಗುವ…

Read More

ಕೊಲೆಸ್ಟ್ರಾಲ್ ಮತ್ತು ಮಧುಮೇಹ ಸಮಸ್ಯೆ ಹಲವು ಜನರನ್ನು ಕಾಡುತ್ತಿದೆ. ಹಾಗಾಗಿ ಈ ಸಮಸ್ಯೆಗಳನ್ನು ನಿಯಂತ್ರಿಸಲು ಈ ಎಲೆಗಳನ್ನು ಸೇವಿಸಿ. ಪುದೀನಾ ಎಲೆಗಳು : ಇದು ಮಧುಮೇಹ ಮತ್ತು ಕೊಲೆಸ್ಟ್ರಾಲ್ ಅನ್ನು ನಿಯಂತ್ರಿಸಲು ಸಹಕಾರಿಯಾಗಿದೆ. ಇದನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ. ಇದು ದೇಹವನ್ನು ನಿರ್ವಿಷಗೊಳಿಸುತ್ತದೆ. ಬೇವಿನ ಎಲೆಗಳು : ಇದು ಹಲವು ರೋಗಗಳನ್ನು ಗುಣಪಡಿಸುವಂತಹ ಸಾಮರ್ಥ್ಯವನ್ನು ಹೊಂದಿದೆ. ಇದರಲ್ಲಿ ಆಯಂಟಿ ಆಕ್ಸಿಡೆಂಟ್ ಗಳು ಸಮೃದ್ಧವಾಗಿದೆ. ಇದು ಕೊಲೆಸ್ಟ್ರಾಲ್ ಮತ್ತು ಮಧುಮೇಹವನ್ನು ನಿಯಂತ್ರಣದಲ್ಲಿರಿಸುತ್ತದೆ. ತುಳಸಿ ಎಲೆಗಳು : ಇದು ಆರೋಗ್ಯಕ್ಕೆ ಒರಯೋಜನಕಾರಿಯಾಗಿದೆ. ಇದು ಔಷಧೀಯ ಗುಣಗಳನ್ನು ಹೊಂದಿದೆ. ಹಾಗಾಗಿ ಇದನ್ನು ಸೇವಿಸಿದರೆ ಕೊಲೆಸ್ಟ್ರಾಲ್ ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣದಲ್ಲಿರುತ್ತದೆ ಎಂದು ಹೇಳಲಾಗಿದೆ.

Read More

ರಾಮನಗರ: ಮಾಗಡಿ ತಾಲೂಕಿನ ಸಾವನದುರ್ಗ ಏಕಶಿಲಾ ಬೆಟ್ಟಕ್ಕೆ  ಸ್ನೇಹಿತನ ಜೊತೆ ಚಾರಣಕ್ಕೆ ಬಂದ ಯುವಕ ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ಕು ದಿನಗಳ ಕಾರ್ಯಾಚರಣೆ ಬಳಿಕ ಶವವಾಗಿ ಪತ್ತೆಯಾದ ಘಟನೆ ರಾಮನಗರದಲ್ಲಿ ನಡೆದಿದೆ. ಚಾರಣದ ವೇಳೆ ಕಾಲುಜಾರಿ ಕಂದಕಕ್ಕೆ ಜಾರಿ ಬಿದ್ದು ಯುವಕ ಸಾವನ್ನಪ್ಪಿದ್ದಾನೆ. ಕಳೆದ ಭಾನುವಾರ ಉತ್ತರ ಪ್ರದೇಶ ಮೂಲದ ಯುವಕ ಗಗನ್‌ದೀಪ್ ಸಿಂಗ್ ಸ್ನೇಹಿತನ ಜೊತೆ ಮಾಗಡಿ ತಾಲೂಕಿನ ಸಾವನದುರ್ಗ ಏಕಶಿಲಾ ಬೆಟ್ಟಕ್ಕೆ ಚಾರಣ ಬಂದಿದ್ದ. ಈ ವೇಳೆ ಅರಣ್ಯ ಪ್ರದೇಶದಲ್ಲಿ ದಾರಿ ತಪ್ಪಿದ ಗಗನ್ ಯಾರ ಸಂಪರ್ಕಕ್ಕೂ ಸಿಕ್ಕಿರಲಿಲ್ಲ. ಮೊಬೈಲ್ ಕೂಡಾ ಸ್ವಿಚ್‌ಆಫ್ ಆಗಿತ್ತು.  ಬಳಿಕ ಗಗನ್ ಸ್ನೇಹಿತ ಈ ಸಂಬಂಧ ಮಾಗಡಿ ಪೊಲೀಸರ ಸಹಾಯ ಕೋರಿದ್ದರು. https://ainlivenews.com/end-countdown-to-new-year-begins-increased-police-security-in-the-city/ ಈ ಹಿನ್ನೆಲೆ ಕಳೆದ ನಾಲ್ಕು ದಿನಗಳಿಂದ ನಿರಂತರ ಹುಡುಕಾಟ ನಡೆಸಿದ್ದ ಅರಣ್ಯ ಸಿಬ್ಬಂದಿ ಹಾಗೂ ಪೊಲೀಸ್ ಸಿಬ್ಬಂದಿ, ಥರ್ಮಲ್ ಡ್ರೋನ್, ಶ್ವಾನದಳ ಸೇರಿ ಎಸ್‌ಡಿಆರ್‌ಎಫ್ ತಂಡದಿಂದಲೂ ಶೋಧ ನಡೆಸಿ ಸತತ 100 ಗಂಟೆಗಳ ಕಾರ್ಯಾಚರಣೆ ಬಳಿಕ ಇದೀಗ ಗಗನ್‌ದೀಪ್…

Read More

ಬೆಂಗಳೂರು, ಡಿ, 28; ಬೆಳಗಾವಿ ಮೂಲದ ದಕ್ಷಿಣ ಭಾರತದ ಪ್ರಮುಖ ಸಹಕಾರಿ ಸಂಸ್ಥೆ ಬೀರೇಶ್ವರ ಕೋ ಅಪರೇಟಿವ್ ಬ್ಯಾಂಕ್ (ಮಲ್ಟಿ ಸ್ಟೇಟ್) ತನ್ನ ವ್ಯಾಪ್ತಿಯನ್ನು ವಿಸ್ತರಿಸಿಕೊಳ್ಳುತ್ತಿದ್ದು, ಇಂದು ಉತ್ತರಹಳ್ಳಿಯ ಕೆಂಗೇರಿ ಮುಖ್ಯ ರಸ್ತೆಯ ಪೂರ್ಣ ಪ್ರಜ್ಞ ನಗರದಲ್ಲಿ 197 ನೇ ನೂತನ ಶಾಖೆ ಹಾಗೂ ಬನಶಂಕರಿ ಮೂರನೇ ಹಂತದಲ್ಲಿ 196 ನೇ ಶಾಖೆಗಳಿಗೆ ಚಾಲನೆ ನೀಡಲಾಯಿತು. ಬೀರೇಶ್ವರ ಕೋ ಅಪರೇಟಿವ್ ಬ್ಯಾಂಕ್ (ಮಲ್ಟಿ ಸ್ಟೇಟ್) ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾದಲ್ಲಿ ಬ್ಯಾಂಕ್ ತನ್ನ ಜಾಲವನ್ನು ಹೊಂದಿದೆ. ಬ್ಯಾಂಕ್ ಒಟ್ಟು 3.54 ಲಕ್ಷ ಸದಸ್ಯರು ಮತ್ತು 3438 ಕೋಟಿ ರೂಪಾಯಿ ಠೇವಣಿ ಹೊಂದಿದೆ. 2731 ಕೋಟಿ ರೂಪಾಯಿ ಸಾಲ ಸೌಲಭ್ಯ ಒದಗಿಸಿ, 35.01 ಕೋಟಿ ರೂಪಾಯಿ ಲಾಭ ಗಳಿಸಿದೆ. ಶಾಸಕ ಎಂ. ಕೃಷ್ಣಪ್ಪ ಅವರು ಪೂರ್ಣ ಪ್ರಜ್ಞ ನಗರದಲ್ಲಿ 197 ನೇ ನೂತನ ಶಾಖೆಗೆ ಚಾಲನೆ ನೀಡಿ ಶುಭ ಕೋರಿದರು. ನಮ್ಮ ಕ್ಷೇತ್ರದಲ್ಲಿ ಬ್ಯಾಂಕ್ ನ ಹೊಸ ಶಾಖೆ ಆರಂಭಿಸಿರುವುದು ಉತ್ತಮ ಬೆಳವಣಿಗೆ.…

Read More

ಬೀದರ್: ಡಿ. 22ರಂದು ವಿವಿಧ ಸಾಂಸ್ಕೃತಿಕ, ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಅದ್ದೂರಿಯಾಗಿ ಆರಂಭವಾಗಿದ್ದ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಖಾಶೆಂಪುರ್ (ಪಾನ್) ಗ್ರಾಮದ ದತ್ತ ಮಹಾರಾಜರ ಅವತಾರ ಪುರುಷ ಶ್ರೀ ಸದ್ಗುರು ಸಚ್ಚಿದಾನಂದ ಸ್ವಾಮೀಜಿರವರ 7ನೇ ಜಾತ್ರಾ ಮಹೋತ್ಸವ ಕಾರ್ಯಕ್ರಮವು  ಸಂಜೆ ರಥೋತ್ಸವದೊಂದಿಗೆ ಸಂಪನ್ನವಾಯಿತು.ಡಿ. 22ರಂದು ಖಾಶೆಂಪುರ್ ಪಿ ಗ್ರಾಮದಲ್ಲಿರುವ ವಿವಿಧ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸುವ ಮೂಲಕ ಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಗ್ರಾಮಸ್ಥರು ಆರಂಭಿಸಿದರು. 23 ಮತ್ತು 24ರಂದು ಎರಡು ದಿನ ಸಂಗೀತ ಹಾಗೂ ಭಜನೆ ಕಾರ್ಯಕ್ರಮಗಳು ಜರುಗಿದವು. 25ರಂದು ಕಲಮೂಡದ ಸುಕ್ಷೇತ್ರ ಸೊಂತ್ ಮಠದ ಶ್ರೀ ಶ್ರೀ ಶ್ರೀ ಅಭಿನವ್ ಬಾಲಯೋಗಿ ಶರಣ ಶಂಕರಲಿಂಗ ಮಹಾರಾಜರು, ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಇಟಗಾದ ಶ್ರೀ ಸದ್ಗುರು ಸಚ್ಚಿದಾನಂದ ಸ್ವಾಮೀಜಿ ಮಠದ ಶ್ರೀ ಶರಣಯ್ಯಾ ಸ್ವಾಮೀಜಿ, ಬೀದರ್ ತಾಲೂಕಿನ ಕಮಠಾಣಾದ ಗವಿಮಠದ ಶ್ರೀ ಶ್ರೀ ಷ.ಬ್ರ 108 ಸದ್ಗುರು ರಾಚೋಟೇಶ್ವರ ಶಿವಚಾರ್ಯ ಮಹಾರಾಜರು, ಶ್ರೀ ಅರ್ಜುನಗಿರಿ ಮಹಾರಾಜರು ಸೇರಿದಂತೆ ಅನೇಕ ಶರಣರು, ಮಠಾದೀಶರು…

Read More

ಭೋಪಾಲ್: ಬಸ್ಸೊಂದು ಟ್ರಕ್‍ʼಗೆ ಡಿಕ್ಕಿಯಾಗಿ (Accident) ಹೊತ್ತಿ ಉರಿದ ಪರಿಣಾಮ 12 ಜನ ಸಾವಿಗೀಡಾದ ಘಟನೆ ಮಧ್ಯಪ್ರದೇಶದ (Madhya Pradesh) ಗುನ ಹಾಗೂ ಅರೋನ್ ನಡುವಿನ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ 14 ಮಂದಿ ಗಾಯಗೊಂಡಿದ್ದು, ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಅದರಲ್ಲಿ 5 ಜನರ ಪರಿಸ್ಥಿತಿ ಚಿಂತಾಜನಕವಾಗಿದೆ. ಬಸ್ ಗುನಾದಿಂದ ಸುಮಾರು 40 ಕಿ.ಮೀ ದೂರದಲ್ಲಿರುವ ಅರೋನ್‍ಗೆ ತೆರಳುತ್ತಿತ್ತು ಈ ವೇಳೆ ಅಪಘಾತ ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಪಘಾತ ಕ್ಕೊಳಗಾದ ಬಸ್ ಬಿಜೆಪಿ (BJP) ಮುಖಂಡ ಧರ್ಮೇಂದ್ರ ಸಿಕರ್ವಾರ್ ಅವರ ಒಡೆತನದ್ದು ಎಂದು ತಿಳಿದು ಬಂದಿದೆ. ಬಸ್‍ನ ವಿಮೆ ಪ್ರಮಾಣಪತ್ರಗಳ ಅವಧಿ ಮುಗಿದಿದ್ದು, https://ainlivenews.com/sabarimala-ayyappa-swami-temple-earned-204-crore-rupees-in-39-days/ 2021 ರಿಂದ ರಸ್ತೆ ತೆರಿಗೆ ಸಹ ಪಾವತಿಸಿಲ್ಲ. ಬಸ್‍ನ ಸುರಕ್ಷತಾ ಪ್ರಮಾಣ ಪತ್ರದ ಅವಧಿ ಸಹ ಮುಗಿದಿತ್ತು ಎಂದು ವರದಿಯಾಗಿದೆ. ಮೃತರ ಕುಟುಂಬಕ್ಕೆ ತಲಾ 4 ಲಕ್ಷ ರೂ. ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ. ನೆರವು ಘೋಷಣೆ ಮಾಡಲಾಗಿದೆ. ಅಪಘಾತಕ್ಕೆ ಕಾರಣ ಹಾಗೂ…

Read More

ದಾವಣಗೆರೆ: ಮಹಿಳೆಯರ ಬಗ್ಗೆ ಅವಹೇಳನಕಾರಿ ಮಾತನಾಡಿರುವ ಆರ್.ಎಸ್.ಎಸ್. ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ದಾವಣಗೆರೆ ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ವಿಭಾಗ ಮತ್ತು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಜಾಗೃತಿ ವೇದಿಕೆ ಪ್ರತಿಭಟನೆ ನಡೆಸಲಾಗಿದೆ. ದಾಣಗೆರೆಯ ಮಹಾನಗರ ಪಾಲಿಕೆ ಮುಂದೆ ಕಲ್ಲಡ್ಕ್ ಪ್ರಭಾಕರ್ ಭಟ್ ವಿರುದ್ಧ ಪ್ರತಿಭಟನೆ ನಡೆಸಿದ ಸದಸ್ಯರು ಬಳಿಕ ಉಪವಿಭಾಗಾಧಿಕಾರಿ ಕಚೇರಿಗೆ ತೆರಳಿ ಮನವಿಯನ್ನ ಸಲ್ಲಿಸಿದ್ದಾರೆ. ಆರ್. ಎಸ್.ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಮುಸ್ಲಿಂ ಮತ್ತು ಮಹಿಳೆಯರ ವಿರುದ್ಧ ಕಳೆದ ಡಿ. 24 ರಂದು ಮಂಡ್ಯದಲ್ಲಿ ಅತ್ಯಂತ ಅವಹೇಳನಕಾರಿ ಹೇಳಿಕೆಯನ್ನು ನೀಡಿದ್ದಾರೆ ಇದು ಖಂಡನೀಯ. ಈ ಹಿಂದೆಯೂ ಸಹ ಕಲ್ಲಡ್ಕ ಪ್ರಭಾಕರ್ ‘ಭಟ್ ರಾಜ್ಯದ ಅನೇಕ ನಗರಗಳಲ್ಲಿ ಧರ್ಮ ಧರ್ಮಗಳನ್ನ ಎತ್ತಿ ಕಟ್ಟಿ ಗಲಭೆ ನೆಡೆಸುವ ಪ್ರಯತ್ನ. ಹಾಗೂ ಪ್ರಚೋದಿಸುವ ರೀತಿಯಲಿ ವರ್ತಿಸಿದ್ದಾರೆ. ಮಂಡ್ಯದಲ್ಲಿ ನಡೆದ ಘಟನೆಯಲ್ಲಿ ಮುಸ್ಲಿಂ ಮಹಿಳೆಯರನ್ನು ಅವಮಾನಿಸಿ, ಪ್ರಚೋದಿಸಿದ್ದಾರೆ ಆದ್ದರಿಂದ ಕೂಡಲೇ ಅವರನ್ನು ಬಂಧಿಸಿ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.

Read More

ಬೆಂಗಳೂರು: ಅಂಗಡಿ, ಮಾಲ್‌ಗಳ ನಾಮಫಲಕಗಳು ಶೇ.60ರಷ್ಟು ಕನ್ನಡ ಭಾಷೆಯಲ್ಲೇ ಇರಲು ಸರ್ಕಾರ ಸುಗ್ರೀವಾಜ್ಞೆ ಹೊರಡಿಸಲು ಮುಂದಾಗಿದೆ. ಅಂಗಡಿ ಮುಗ್ಗಟ್ಟುಗಳ ಮುಂಭಾಗದಲ್ಲಿ ಕನ್ನಡ ನಾಮಫಲಕ ಅಳವಡಿಸುವ ಸಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಉನ್ನತ ಮಟ್ಟದ ಸಭೆ ನಡೆಸಿದರು. ಗೃಹ ಸಚಿವ ಪರಮೇಶ್ವರ್, ಬಿಬಿಎಂಪಿ, ಗೃಹ ಇಲಾಖೆ ಅಧಿಕಾರಿಗಳು, ಕನ್ನಡ ಮತ್ತು ಸಂಸ್ಕೃತ ಇಲಾಖೆ ಅಧಿಕಾರಿಗಳು ಸಭೆಯಲ್ಲಿ ಭಾಗಿಯಾಗಿದ್ದರು. ಬಿಜೆಪಿ ಅವಧಿಯಲ್ಲಿ 2022 ರಲ್ಲಿ ಪಾಸ್ ಆಗಿದ್ದ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಸೆಕ್ಷನ್ 17(6) ರಲ್ಲಿ ನಾಮಫಲಕಗಳು ಅರ್ಧದಷ್ಟು ಕನ್ನಡ ಭಾಷೆ ಕೆಳಭಾಗದ ಅರ್ಧ ಬೇರೆ ಭಾಷೆಯಲ್ಲಿ ಇರಬೇಕು ಅಂತ ಎರಡು ಸದನದಲ್ಲಿ ಕಾಯ್ದೆ ಪಾಸ್ ಆಗಿ ರಾಜ್ಯಪಾಲರ ಅಂಕಿತ ಕೂಡಾ ಆಗಿತ್ತು. ಆದರೆ ಅರ್ಧ ಭಾಗ ಮಾತ್ರ ಕನ್ನಡ ಇರಬೇಕು ಎಂಬ ನಿಯಮದ ಬದಲಾಗಿ,ಸಿದ್ದರಾಮಯ್ಯ ಸರ್ಕಾರ 2018 ರಲ್ಲಿ ಹೊರಡಿಸಿದ್ದ ಸುತ್ತೋಲೆ ಅನ್ವಯ 60%ಕನ್ನಡ ನಾಮ ಫಲಕ, 40% ಇತರೇ ಭಾಷೆ ಬಳಕೆ ನಿಯಮವನ್ನೇ…

Read More