ಬೆಂಗಳೂರು: “ನಾವೆಲ್ಲರೂ ಕನ್ನಡ ಉಳಿಸಬೇಕು. ಕನ್ನಡಪರ ಹೋರಾಟಗಾರರ ಮೇಲೆ ನಮಗೆ ಗೌರವವಿದೆ. ಹಾಗಂತ ಆಸ್ತಿ-ಪಾಸ್ತಿ ಹಾನಿ ಮಾಡಿದರೆ ಸರ್ಕಾರ ಕಣ್ಣುಮುಚ್ಚಿಕೊಂಡು ಕೂರಲು ಸಾಧ್ಯವಿಲ್ಲ. ಯಾರೊಬ್ಬರೂ ಕಾನೂನನ್ನು ಕೈಗೆತ್ತಿಕೊಳ್ಳಬಾರದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಸದಾಶಿವನಗರ ನಿವಾಸ ಹಾಗೂ ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಪ್ರತಿಕ್ರಿಯಿಸಿದರು. ಕನ್ನಡ ನಾಮಫಲಕ ಕುರಿತ ಹೋರಾಟದ ವಿಚಾರವಾಗಿ ಕೇಳಿದ ಪ್ರಶ್ನೆಗಳಿಗೆ ಅವರು ಉತ್ತರಿಸಿದ್ದು ಹೀಗೆ: “ಕನ್ನಡ ಉಳಿಸಿ, ಬೆಳೆಸುವ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ. ಹೋರಾಟದ ಹೆಸರಿನಲ್ಲಿ ಆಸ್ತಿಪಾಸ್ತಿ ಹಾನಿ ಮಾಡುವುದನ್ನು ನಾವು ಒಪ್ಪುವುದಿಲ್ಲ, ಸಹಿಸುವುದೂ ಇಲ್ಲ. ಇದರಿಂದ ಕರ್ನಾಟಕದ ಗೌರವ, ಘನತೆಗೆ ಧಕ್ಕೆಯಾಗುತ್ತದೆ. ಕಾನೂನು ಪಾಲನೆ ಎಲ್ಲರ ಕರ್ತವ್ಯ. ನೀವು ಹೋರಾಟ ಮಾಡುವುದಾದರೆ ಮಾಡಿ, 60% ನಾಮಫಲಕ ಹಾಕಬೇಕು ಎನ್ನುವುದನ್ನು ಕೇಳಲು ಒಂದು ಇತಿಮಿತಿ ಇದೆ. ಈ ಹಿಂದೆ ಯಾರೋ ಒಬ್ಬರು ದೂರು ನೀಡಿದರು ಎಂದು ನಾರಾಯಣಗೌಡರ ಮೇಲೆ ಕೇಸ್ ದಾಖಲಾದಾಗ, ಅವರ ವಿರುದ್ಧ ಪ್ರಕರಣ ದಾಖಲಿಸುವುದು ಸರಿಯಲ್ಲ…
Author: AIN Author
ಬೆಂಗಳೂರು: ಹಿಂದುತ್ವ ಬೇರೆ, ಹಿಂದೂ ಬೇರೆ, ನಾನೂ ಊರಲ್ಲಿ ಧನುರ್ಮಾಸದ ಸಂದರ್ಭದಲ್ಲಿ ಭಜನೆಗೆ ಹೋಗ್ತಿದ್ದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಸಾಫ್ಟ್ ಹಿಂದುತ್ವ ಹಾರ್ಡ್ ಹಿಂದುತ್ವ ಎಂದರೇನು? ಸಾಫ್ಟ್ ಹಾಗೂ ಹಾರ್ಡ್ ಹಿಂದುತ್ವ ಇಲ್ಲ. ಹಿಂದುತ್ವ ಬೇರೆ ಹಿಂದೂ ಧರ್ಮ ಬೇರೆ. ನಾವೂ ಶ್ರೀರಾಮ ಪೂಜೆ ಮಾಡಿಲ್ವಾ? ಇವರೊಬ್ಬರೇನಾ ಮಾಡುವುದು? ಅವರು ಮಾತ್ರ ಹಿಂದೂಗಳಾ ನಾವಲ್ಲವಾ? ಎಂದು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ನಡೆದ ಕಾಂಗ್ರೆಸ್ ಸಂಸ್ಥಾಪನಾ ದಿನಾಚರಣೆಯಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಆಧುನಿಕ ಭಾರತಕ್ಕೆ ನೆಹರೂ ಅಡಿಪಾಯ ಕಾರಣ. ಬಿಜೆಪಿ ಅಧಿಕಾರ ಅವಧಿಯಲ್ಲಿ ಒಂದೇ ಒಂದು ಅಣೆಕಟ್ಟು ಕಟ್ಟಿಲ್ಲ. ಇರುವ ಅಣೆಕಟ್ಟು ಕಾಂಗ್ರೆಸ್ ಅವಧಿಯಲ್ಲಿ ಕಟ್ಟಿದ್ದು. ಹಾಗಾದರೆ ನೀವು ಏನು ಮಾಡಿದ್ದೀರಿ? ಎಂದು ಬಿಜೆಪಿಗೆ ಪ್ರಶ್ನಿಸಿದರು. https://ainlivenews.com/corona-virus-concern-in-the-state-increased-cold-cold-cough-in-children/ ಡಿಜಿಟಲ್ ಇಂಡಿಯಾಗೆ ಅಡಿಪಾಯ ಹಾಕಿದ್ದು ರಾಜೀವ್ ಗಾಂಧಿ. ಬಿಜೆಪಿ ನಾಯಕರು ಸುಳ್ಳನ್ನು ತಲೆಗೆ ಹೊಡೆದ ಹಾಗೆ ಹೇಳುತ್ತಾರೆ. ಅವರ ಸುಳ್ಳು ಬಯಲು ಮಾಡುವ ಕೆಲಸ ಮಾಡಬೇಕಿದೆ ಎಂದು…
ಧಾರವಾಡ: ಪ್ರತಿಯೊಂದು ಚುನಾವಣೆಯಲ್ಲಿ ಮತದಾನ ಪ್ರಮಾಣ ಕ್ಷಿಣಿಸುವುದು ಆಘಾತಕಾರಿ ಸಂಗತಿ. ಪ್ರಜ್ಞಾವಂತರು ತಪ್ಪದೇ, ಮತದಾನ ಮಾಡಬೇಕೆಂದು ಜಿಲ್ಲಾ ಪಂಚಾಯತಿ ಯೋಜನಾಧಿಕಾರಿ ರೇಖಾ ಡೊಳ್ಳಿನವರ ವಿದ್ಯಾರ್ಥಿಗಳಿಗೆ ಕರೆ ನೀಡಿದರು. ಜಿಲ್ಲಾಡಳಿತ, ಜಿಲ್ಲಾ ಸ್ವೀಪ್ ಸಮಿತಿ, ಚುನಾವಣಾ ಸಾಕ್ಷರತಾ ಕ್ಲಬ್, ಅಂಜುಮನ್ ಮಹಾವಿದ್ಯಾಲಯ, ಎನ್ನೆಸ್ಸೆಸ್ ಸಹಯೋಗದಲ್ಲಿ ತಾಲೂಕಿನ ಮರೇವಾಡ ಗ್ರಾಮದಲ್ಲಿ ಮಂಗಳವಾರ ಹಮ್ಮಿಕೊಂಡ ಮತದಾನ ಜಾಗೃತಿಗೆ ಚಾಲನೆ ನೀಡಿ ಮಾತನಾಡಿದರು. ಪ್ರಜಾಪ್ರಭುತ್ವದ ಆರೋಗ್ಯದ ದೃಷ್ಟಿಯಿಂದ ಸರ್ವರೂ ಹಕ್ಕು ಚಲಾಯಿಸಬೇಕು. ಕೆಲವರು ಮತದಾನ ಮಾಡದಿರಲು ಕಾರಣ ಇರಬಹುದು. ಅಂತವರಿಗೆ ಸರ್ಕಾರ ನೋಟಾ ಅವಕಾಶ ಕಲ್ಪಿಸಿದೆ. ಹೀಗಾಗಿ ಮತದಾನ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳಲು ತಿಳಿಸಿದರು. ಮತದಾನ ಮೂಲಭೂತ ಹಕ್ಕುಗಳಲ್ಲಿ ಒಂದಾಗಿದೆ. ಪ್ರತಿಯೊಬ್ಬ ವ್ಯಕ್ತಿ ಕಡ್ಡಾಯ ಮಾತದಾನ ಮಾಡಬೇಕು. ಮುಖ್ಯವಾಗಿ 18 ವರ್ಷ ತುಂಬಿದ ಯುವಕ ಮತ್ತು ಯುವತಿಯರು ಪೋರ್ಟ್ಲ್ನಲ್ಲಿ ನೋಂದಣಿ ಮಾಡಿಕೊಳ್ಳಬೇಕು ಎಂದು ಕರೆ ನೀಡಿದರು. ಅಂಜುಮನ್ ಮಹಾವಿದ್ಯಾಲಯದ ಪ್ರಾಚಾರ್ಯ ಡಾ.ಎನ್.ಎಂ.ಮಕಾAದಾರ ಮಾತನಾಡಿ, ಸರ್ವರನ್ನು ಮತದಾನ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳುವಂತೆ ಮಾಡುವುದು ಪ್ರತಿಯೊಂದು ಶಿಕ್ಷಣ ಸಂಸ್ಥೆಗಳ ಸಾಮಾಜಿಕ ಜವಾಬ್ದಾರಿ ಎಂದು…
ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಪೂರ್ವ ವಿಧಾನಸಭಾ ವತಿಯಿಂದ ಕ್ಷೇತ್ರದ ಅಧ್ಯಕ್ಷ ಪ್ರಭು ನವಲಗುಂದಮಠ ಅವರ ನೇತೃತ್ವದಲ್ಲಿ ಕರ್ನಾಟಕ ವಿಧಾನಸಭೆ ಪ್ರತಿಪಕ್ಷದ ನೂತನ ಉಪನಾಯಕರಾಗಿ ಆಯ್ಕೆಯಾಗೊಂಡ ಹು-ಧಾ ಪಶ್ಚಿಮ ವಿಧಾನಸಭಾ ಕ್ಷೇತ್ರದ ಶಾಸಕರಾದ ಅರವಿಂದ ಬೆಲ್ಲದ್ ಅವರ ಗೃಹ ಕಛೇರಿಯಲ್ಲಿ ಅವರನ್ನು ಗೌರವಿಸಿ ಸನ್ಮಾನಿಸಿ ಶುಭಾಶಯ ಕೋರಿದೇವು. ಈ ವೇಳೆಯಲ್ಲಿ ಬಿಜೆಪಿ ಹಿರಿಯ ನಾಯಕರಾದ ಚಂದ್ರಶೇಖರ ಗೋಕಾಕ್, ಡಾ. ಕ್ರಾಂತಿಕಿರಣ, ಪಾಲಿಕೆ ಮಾಜಿ ಸದಸ್ಯ ಶಿವಾನಂದ ಮುತ್ತಣ್ಣವರ, ಮಂಜುನಾಥ್ ಚಿಂತಗಿಂಜಾಲ್, https://ainlivenews.com/sabarimala-ayyappa-swami-temple-earned-204-crore-rupees-in-39-days/ ಸಂತೋಷ್ ಅರಕೇರಿ, ರಾಜು ಕೊರ್ಯಾಣಮಠ, ದೀಪಕ್ ಲಾಳಗೆ, ರಾಜು ಜರ್ತಾರಘರ್, ಮಂಜುನಾಥ್ ಕಾಟಕರ್, ಡಾ. ರವೀಂದ್ರ ವೈ, ಪ್ರತಿಭಾ ಪವಾರ್, ಮಹೇಶ ಲಕಾಜಿನವರ, ಸುಭಾಷ ಅಥಣಿ, ಗೋಪಾಲ್ ಕೊಲ್ಲೂರ್, ಗಣೇಶ ಅಮರಾವತಿ, ನೀಲಕಂಠ ತಡಸದಮಠ, ಪೂಜಾ ರಾಯ್ಕರ್, ನಾಗರತ್ನ ಬಳ್ಳಾರಿ, ಮಾಧ್ಯಮ ಸಂಚಾಲಕ ಲಕ್ಷ್ಮೀಕಾಂತ್ ಘೋಡಕೆ, ಬಿಜೆಪಿ ಪೂರ್ವ ಕ್ಷೇತ್ರದ ಎಲ್ಲಾ ಮೋರ್ಚಾ ಪದಾಧಿಕಾರಿಗಳು ಹಾಗೂ ಅನೇಕರು ಉಪಸ್ಥಿತರಿದ್ದರು.
ಬಳ್ಳಾರಿ: ಇಂದು ಬಳ್ಳಾರಿ ಯಲ್ಲಿ ಎಐಡಿಎಸ್ಓ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ, ವಿದ್ಯಾರ್ಥಿಗಳ ಶೈಕ್ಷಣಿಕ ಗೊಂದಲ ಪರಿಹಾರಕ್ಕೆ ಆಗ್ರಹಿಸಿ ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆ ನಗರದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು. ಎಐಡಿಎಸ್ಓ ರಾಜ್ಯ ಖಜಾಂಚಿ ಸುಭಾಷ್ ಬಿ.ಜೆ ಅವರು ಮಾತನಾಡಿ ಈಗಾಗಲೇ ತಮ್ಮ ಸೂಕ್ತ ಗಮನದಲ್ಲಿರುವಂತೆ, ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳ ಅಥಿತಿ ಉಪನ್ಯಾಸಕರು ತಮ್ಮ ನ್ಯಾಯಯುತ ಬೇಡಿಕೆಗಳಿಗಾಗಿ ತರಗತಿಗಳನ್ನು ಬಹಿಷ್ಕರಿಸಿ ಕಳೆದ ಎರಡು ವಾರಗಳಿಂದ ಪ್ರತಿಭಟನೆ ನಡೆಸುತ್ತಿದ್ದಾರೆ. ಬಹುಪಾಲು ಅತಿಥಿ ಉಪನ್ಯಾಸಕರ ಮೇಲೆ ಅವಲಂಬಿತವಾಗಿರುವ ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಬಹುತೇಕ ತರಗತಿಗಳು ಸ್ಥಗಿತಗೊಂಡಿವೆ. ಒಂದೆಡೆ ತರಗತಿಗಳು ನಡೆಯುತ್ತಿಲ್ಲ ಮತ್ತು ಇನ್ನೊಂದೆಡೆ ಸೆಮಿಸ್ಟರ್ ಪರೀಕ್ಷೆಯ ದಿನಾಂಕಗಳು ಸಮೀಪಿಸುತ್ತಿವೆ. ಶೈಕ್ಷಣಿಕವಾಗಿ ನಷ್ಟ ಅನುಭವಿಸುತ್ತಿರುವ ವಿದ್ಯಾರ್ಥಿಗಳನ್ನು ಈ ಪರಿಸ್ಥಿತಿಯು ಸಾಕಷ್ಟು ಆತಂಕಕ್ಕೆ ತಳ್ಳಿದೆ. ಘನ ರಾಜ್ಯ ಸರ್ಕಾರವು ಕೂಡಲೇ ಈ ಕುರಿತು ಗಮನಹರಿಸಬೇಕು. ಅತಿಥಿ ಉಪನ್ಯಾಸಕರ ಸಮಸ್ಯೆಗಳನ್ನು ಪರಿಶೀಲಿಸಿ ಅವರಿಗೆ ನ್ಯಾಯ ಒದಗಿಸಬೇಕು ಮತ್ತು ಕಾಲೇಜುಗಳಲ್ಲಿ ಪಾಠಗಳು…
ಕಲಬುರಗಿ: ನಿರ್ಮಾಣ ಹಂತದಲ್ಲಿದ್ದ ಜಯದೇವ ಆಸ್ಪತ್ರೆಯ ಕಂಪೌಂಡ್ ಕುಸಿದ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದ ಮುಖ್ಯರಸ್ತೆಯಲ್ಲಿ ಜಯದೇವ ಆಸ್ಪತ್ರೆ ನಿರ್ಮಾಣ ಕಾರ್ಯ ಬಹುತೇಕ ಪೂರ್ಣಗೊಂಡಿದೆ. ಹೀಗಾಗಿ ಕಾಂಪೌಂಡ್ ಕಾರ್ಯ ಭರದಿಂದ ಸಾಗಿದ್ದು ಇನ್ನೇನು ಮುಗಿಯಲು ಬಂದಿತ್ತು..ಆದ್ರೆ ಏಕಾಎಕಿ 150 ಅಡಿ ಉದ್ದದ ಕಬ್ಬಿಣ ಹಾಗು ಸಿಮೆಂಟ್ ಕಂಬಗಳಿಂದ ನಿರ್ಮಿಸಿದ್ದ ಕಂಪೌಂಡ್ ಧರೆಗುರುಳಿದೆ.
ಕಲಬುರಗಿ: ಬರೋಬ್ಬರಿ 23 ವರ್ಷಗಳ ಬಳಿಕ ಕಲಬುರಗಿ ಯುವಕನೊಬ್ಬ ರಣಜಿಗೆ ಆಯ್ಕೆಯಾಗಿದ್ದಾನೆ. ಗುಲಾಬ್ ವಾಡಿಯ ಸ್ಲಂ ಬಡಾವಣೆ ನಿವಾಸಿ ಶಶಿಕುಮಾರ್ ರಣಜಿಗೆ ಆಯ್ಕೆಯಾದ ಕ್ರೀಡಾಪಟು. ರೈಟ್ ಆಮ್೯ ಆಫ್ ಸ್ಪಿನ್ನರ್ ಆಗಿರೋ ಶಶಿಕುಮಾರ್ ಕರ್ನಾಟಕ ತಂಡ ಪ್ರತಿನಿಧಿಸಲಿದ್ದಾನೆ. ಕಲಬುರಗಿ ಜಿಲ್ಲೆಯಿಂದ ಈ ಹಿಂದೆ 1998 ರಲ್ಲಿ ರಘುತ್ತಮ ಹಾಗೂ 2000 ರಲ್ಲಿ ವಿಜಯ್ ರಣಜಿಗೆ ಆಯ್ಕೆಯಾಗಿದ್ರು.ಹೀಗಾಗಿ ಕಲಬುರಗಿ ಜಿಲ್ಲೆಯಿಂದ ರಣಜಿಗೆ ಆಯ್ಕೆಯಾದ 3ನೇ ಆಟಗಾರ ಎಂಬ ಹೆಗ್ಗಳಿಕೆ ಶಶಿಕುಮಾರ್ ಪಾತ್ರರಾಗಿದ್ದಾರೆ. ಈ ವಿಚಾರದ ಬಗ್ಗೆ ಶಶಿಕುಮಾರ್ ಸ್ನೇಹಿತರು ಹಾಗು ಹಿತೈಷಿಗಳು ಸಂತಸಗೊಂಡಿದ್ದಾರೆ.
ಧಾರವಾಡ: ವ್ಯಾಟ್ಸ್ ಆ್ಯಫ್ನಲ್ಲಿ ಕಮ್ಯೂನಿಟಿಯಲ್ಲಿ ಹೋಲ್ ಸೇಲ್ ಬಟ್ಟೆ ಪೂರೈಸುವುದಾಗಿ ನಂಬಿಸಿ ರಿಟೇಲ್ ಬಟ್ಟೆ ವ್ಯಾಪಾರಿಯೊಬ್ಬರಿಗೆ ಮುಂಬೈ ಮೂಲದ ವ್ಯಕ್ತಿಯೊಬ್ಬ ಧಾರವಾಡ ವ್ಯಾಪಾರಿಗೆ ಬರೊಬ್ಬರಿ 1ಲಕ್ಷ16 ಸಾವಿರ ರೂಪಾಯಿ ಮಕ್ಮಲ್ ಟೋಪಿ ಹಾಕಿರುವ ಘಟನೆ ನಡೆದಿದೆ. ಧಾರವಾಡ ನಿವಾಸಿ ಮಹಾಂತೇಶ ಪಟ್ಟಣ ಶೆಟ್ಟಿ ಎಂಬ ಬಟ್ಟೆ ವ್ಯಾಪಾರಿಯೇ ವಂಚನೆಗೆ ಒಳಗಾದ ವ್ಯಕ್ತಿಯಾಗಿದ್ದಾನೆ. ನಗರದ ಸಂಗಮ ವೃತ್ತದಲ್ಲಿ ಬಟ್ಟೆ ಅಂಗಡಿ ಹೊಂದಿರುವ ಮಹಾಂತೇಶ ಅವರಿಗೆ ಮುಂಬೈ ಮೂಲದ ವ್ಯಕ್ತಿ ಪರಿಚಯ ವಾಗಿದ್ದ. ತಾನು ಹೋಲ್ ಸೇಲ್ ಬಟ್ಟೆ ಪೂರೈಸುವುದಾಗಿ ಮನೀಶ ಎಂಬ ಹೆಸರಿನಿಂದ ಪರಿಚಯವಾಗಿ, ಹೋಲ್ ಸೇಲ್ ವ್ಯಾಪಾರಿಯಾಗಿದ್ದೇನೆ ಎಂದು ಮಹಾಂತೇಶನ ನಂಬಿಸಿದ್ದಾನೆ. ನಂಬಿಕ ಬಂದ ಬಳಿಕ ಡಿ. 9 ತಾರೀಖಿನಂದ 20 ನೇ ತಾರೀಖಿನವರೆಗೆ ಹಂತ ಹಂತವಾಗಿ 1ಲಕ್ಷ 16 ಸಾವಿರ 8 ನೂರು ರೂಪಾಯಿ ಹಣವನ್ನು ಪೋನ್ ಪೇ ಮೂಲಕ ಹಾಕಿಸಿಕೊಂಡಿದ್ದಾನೆ. ಬಳಿಕ ಒಂದೆರಡು ದಿನದಲ್ಲಿ ಹೋಲ್ ಸೇಲ್ ಬಟ್ಟೆ ಬರುತ್ತೆ ಅಂದುಕೊಂಡಿದ್ದ ಮಾಹಾಂತೇಶಗೆ ಹಣ ಹಾಕಿಸಿಕೊಂಡ ವ್ಯಕ್ತಿ ಮೊಬೈಲ್…
ಶಿವಮೊಗ್ಗ: ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ತವರು ಜಿಲ್ಲೆಯಲ್ಲೆ ಶಿವಮೊಗ್ಗದಲ್ಲಿ ಶಾಲಾ ಮಕ್ಕಳಿಂದ ಶೌಚಾಲಯ ಸ್ವಚ್ಛಗೊಳಿಸಿದ ಅಮಾನವೀಯ ಘಟನೆ ನಡೆದಿದೆ. ಭದ್ರಾವತಿ ತಾಲೂಕಿನ ಕೋಮಾರನಹಳ್ಳಿ ಗ್ರಾ.ಪಂಚಾಯಿತಿಯ ಗುಡ್ಡದ ನೇರಲೆಕೆರೆ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶಂಕರಪ್ಪ ಹಾಗೂ ಇತರೆ ಶಿಕ್ಷಕರು ವಿದ್ಯಾರ್ಥಿಗಳ ಕೈಯಿಂದ ಶೌಚಾಲಯ ಸ್ವಚ್ಛಗೊಳಿಸಿದ್ದಾರೆ. ಮಕ್ಕಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಬಗ್ಗೆ ದಲಿತ ಸಂಘರ್ಷ ಸಮಿತಿ ಶಿವಮೊಗ್ಗ ಎಸಿ ಸತ್ಯನಾರಾಯಣ ಅವರಿಗೆ ದೂರು ಸಲ್ಲಿಸಿದೆ. ಮಕ್ಕಳನ್ನು ದುರ್ಬಳಕೆ ಮಾಡಿದ ಶಿಕ್ಷಕರ ವಿರುದ್ಧ ಕ್ರಮಕ್ಕೆ ಸಂಘಟನೆ ಮತ್ತು ಪೋಷಕರು ಒತ್ತಾಯಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ: ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಹತ್ತಿಕ್ಕುವಲ್ಲಿ ಭಾರತೀಯ ಸೇನೆ ಯಶಸ್ವಿ ಆಗಲಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ. ಗಡಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಮಾತನಾಡಿದ ರಾಜನಾಥ್ ಸಿಂಗ್, ಯೋಧರ ಧೈರ್ಯ ಹಾಗೂ ಸಾಹಸವನ್ನು ಕೊಂಡಾಡಿದರು. https://ainlivenews.com/sabarimala-ayyappa-swami-temple-earned-204-crore-rupees-in-39-days/ ಭಾರತೀಯ ಸೇನೆಯ ಯೋಧರ ಧೈರ್ಯ ಹಾಗೂ ದೃಢತೆ ಬಗ್ಗೆ ನನಗೆ ನಂಬಿಕೆ ಇದೆ ಎಂದು ಹೇಳಿದ ರಾಜನಾಥ್ ಸಿಂಗ್, ಜಮ್ಮು ಮತ್ತು ಕಾಶ್ಮೀರವು ಭಯೋತ್ಪಾನೆಯಿಂದ ಮುಕ್ತ ಆಗಬೇಕು. ಇದಕ್ಕಾಗಿ ನಾವು ದೃಢ ಸಂಕಲ್ಪ ಮಾಡಿದ್ದೇವೆ. ಈ ಸಂಕಲ್ಪದ ಸಾಕಾರ ಆಗಬೇಕು. ನಮ್ಮ ಯೋಧರು ಉಗ್ರವಾದವನ್ನು ಮೆಟ್ಟಿ ನಿಲ್ಲುತ್ತಾರೆ ಅನ್ನೋ ವಿಶ್ವಾಸವಿದೆ ಎಂದು ರಾಜನಾಥ್ ಸಿಂಗ್ ಹೇಳಿದ್ದಾರೆ.