ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಭರವಸೆಯಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಬಗ್ಗೆ ಮಹಿಳೆಯರಿಗೆ ಇನ್ನೂ ಅನುಕೂಲವಾಗುವಂತೆ ರಾಜ್ಯ ಸರ್ಕಾರ ಹೊಸ ನಿಯಮವನ್ನು ತಂದಿದೆ. ಮನೆ ಯಜಮಾನಿಗೆ ನೀಡುವ ಪ್ರತಿ ತಿಂಗಳು 2000 ರೂ. ಗೃಹಲಕ್ಷ್ಮೀ ಯೋಜನೆ ಯಾರ್ಯಾರಿಗೆ ಬೇಗ ಸಿಗುತ್ತಿಲ್ಲ ಅಂತವರಿಗೆ ಪರಿಹಾರ ಸೂಚಿಸಲು ಕ್ರಮ ಕೈಗೊಳ್ಳಲು ಹಾಗೆ ತಾಂತ್ರಿಕ ಸಮಸ್ಯೆಗಳನ್ನು ನಿವಾರಿಸಿ ಸ್ಥಳದಲ್ಲಿಯೇ ಪರಿಹಾರ ಒದಗಿಸಲು ವಿಶೇಷ ಶಿಬಿರ ಏರ್ಪಾಟ್ ಮಾಡಲಾಗಿದೆ. ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಶಿಬಿರ ಸ್ಥಾಪಿಸಲಾಗಿದ್ದು ಇದೇ ಡಿಸೆಂಬರ್ 27ರಿಂದ 29ರವರೆಗೆ ಮೂರು ದಿನಗಳ ಕಾಲ ವಿಶೇಷ ಶಿಬಿರವನ್ನು ಆಯೋಜಿಸಿದ್ದು ಗೃಹ ಲಕ್ಷ್ಮೀ ಯೋಜನೆಯಲ್ಲಿ ಏನಾದರೂ ಸಮಸ್ಯೆ ಇದ್ದರೆ ಫಲಾನುಭವಿಗಳು ಗ್ರಾಮ ಪಂಚಾಯಿತಿಗೆ ತೆರಳಿ ಪರಿಹಾರ ಕಂಡುಕೊಳ್ಳಬಹುದಾಗಿದೆ.
Author: AIN Author
ಬಾಗಲಕೋಟೆ:- ಸಾರ್ವಜನಿಕರ ಸಮಸ್ಯೆ ಆಲಿಸಲು ಸಿಎಂ ಸಿದ್ದರಾಮಯ್ಯ ಅವರು ಬಾಗಲಕೋಟೆಯಲ್ಲಿ ಕೈಗೊಂಡ ಜನತಾ ದರ್ಶನ ಸಕ್ಸಸ್ ಆಗಿದ್ದು, ಶೇಖಡಾ 99 ರಷ್ಟು ಯಶಸ್ಸು ಕಂಡಿದೆ. ಈ ಬಗ್ಗೆ ಸಚಿವ ಆರ್ ಬಿ ತಿಮ್ಮಾಪುರ ಅವರು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ. ಹೌದು, ಬಾಗಲಕೋಟೆಯಲ್ಲಿ ಮುಖ್ಯಮಂತ್ರಿಗಳ ಜನತಾ ದರ್ಶನ ಶೇಖಡಾ ೯೯ ರಷ್ಟು ಯಶಸ್ಸು ಕಂಡಿದೆ. ಈ ಜನತಾದರ್ಶನ ದಿಂದ ಜನರ ಸಮಸ್ಯೆ ಆಲಿಸಿ ಸ್ಥಳದಲ್ಲಿ ಪರಿಶೀಲಿಸಿ ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ. ಸೂಚನೆ ನೀಡಲಾಯಿತು ಎಂದು ಸುದ್ದಿಗೋಷ್ಠಿ ನಡೆಸಿ ಸಚಿವ ಆರ್, ಬಿ,ತಿಮ್ಮಾಪೂರ ಮಾತನಾಡಿದರು. ತಾಲ್ಲೂಕು ಹಾಗೂ ಜಿಲ್ಲಾ ಮಟ್ಟದ ಈ ಜನತಾ ದರ್ಶನ ಕಾರ್ಯಕ್ರಮದಲ್ಲಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿ ಸ್ಥಳದಲ್ಲಿಯೇ ಪರಿಹಾರ ನೀಡಲು ತುರ್ತು ಕ್ರಮ ಕೈಗೊಳ್ಳತ್ತಿರುವುದನ್ನು ನೋಡಿ ಶ್ಲಾಘಿಸಿದರು. ಬಳಿಕ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಬೀಳಗಿ ಶಾಸಕ ಜೆ,ಟಿ,ಪಾಟೀಲ, ಶಿಕ್ಷಕರು ಶಾಲಾ ಸಮಯದಲ್ಲಿ ಖಾಸಗಿ ಫ್ಯೂಶನ್ ನಡೆಸುವಂತಿಲ್ಲ ,ಬೇಜವಬ್ದಾರಿ ಹೇಳಿಕೆ ನೀಡುವಂತಿಲ್ಲ, ಅರ್ಹ ಫಲಾನುಭವಿಗಳಿಗೆ ರೇಷನ ಕಾರ್ಡ ನೀಡಿ,…
ಬೆಂಗಳೂರು: ಪಿಎಸ್ ಐ ನೇಮಕಾತಿ ಪರೀಕ್ಷಾ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ನಿವೃತ್ತ ನ್ಯಾಯಮೂರ್ತಿ ವೀರಪ್ಪ ನೇತೃತ್ವದ ವಿಚಾರಣಾ ಆಯೋಗವು ಮಾಜಿ ಮುಖ್ಯಮಂತ್ರಿ ಸೇರಿದಂತೆ ಹಲವು ರಾಜಕಾರಣಿಗಳಿಗೆ ನೋಟಿಸ್ ಜಾರಿ ಮಾಡಿದೆ. ಈ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಡಿಸಿಎಂ ಡಾ. ಸಿ.ಎನ್.ಅಶ್ವತ್ ನಾರಾಯಣ, ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಮಾಜಿ ಶಾಸಕ ಬಸವರಾಜ ದಡೇಸುಗೂರ್ ಅವರಿಗೆ ನೊಟೀಸ್ ನೀಡಿದ್ದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ. ಹೆಚ್.ಡಿ.ಕುಮಾರಸ್ವಾಮಿ ಮತ್ತಿತರರು ಪಿಎಎಸ್ ಐ ನೇಮಕಾತಿ ಹಗರಣದ ಸಂಬಂಧ ತಮ್ಮ ಬಳಿ ಮಹತ್ವದ ದಾಖಲೆಗಳಿವೆ ಎಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರು. ಮಾಜಿ ಡಿಸಿಎಂ ಡಾ. ಸಿ.ಎನ್. ಅಶ್ವತ್ ನಾರಾಯಣ ಅವರ ಸಹೋದರ ಸಂಬಂಧಿ ಈ ಅಕ್ರಮದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಲಾಗಿತ್ತು. ಹಾಗಾಗಿ ನ್ಯಾಯಮೂರ್ತಿ ವೀರಪ್ಪ ಆಯೋಗವು ಇವರಿಗೆ ನೊಟೀಸ್ ಜಾರಿ ಮಾಡಿದ್ದು, ಖುದ್ದಾಗಿ ಇಲ್ಲವೇ ವಕೀಲರ ಮೂಲಕ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.
ಬೆಂಗಳೂರು: ಸ್ಕೋಪ್ ಫೌಂಡೇಶನ್ ಇಂಕ್ ಸ್ಥಾಪಕ ಅಧ್ಯಕ್ಷ, ಮಂಡ್ಯ ಮೂಲದ ಡಾ. ಹಲ್ಲೆಗೆರೆ ಮೂರ್ತಿ (ಲಕ್ಷ್ಮೀ ನರಸಿಂಹಮೂರ್ತಿ) ಅವರು ಡಿಸಿಎಂ ಡಿ ಕೆ ಶಿವಕುಮಾರ್ ಅವರನ್ನು ಸದಾಶಿವನಗರ ನಿವಾಸದಲ್ಲಿ ಬುಧವಾರ ಭೇಟಿ ಮಾಡಿ ಸಮಾಲೋಚನೆ ನಡೆಸಿದರು. ಈ ವೇಳೆ ಎಂಎಲ್ಸಿ ದಿನೇಶ್ ಗೂಳಿಗೌಡ, ಅಮೇರಿಕಾದ ಅಕ್ಕಾ ಸಂಸ್ಥೆ ಮಾಜಿ ಅಧ್ಯಕ್ಷ ಶಿವಮೂರ್ತಿ ಕಿಲಾರ ಜತೆಗಿದ್ದರು. ಬೆಂಗಳೂರಿನ ಕಬ್ಬನ್ ಪಾರ್ಕ್ ನಲ್ಲಿ ಜನವರಿ 21 ರಂದು ಹಮ್ಮಿಕೊಂಡಿರುವ “ಭೂಮಿ ತಾಯಿ ಉಳಿಸಿ, ಮರ ಗಿಡ ಬೆಳೆಸಿ” ಸಂದೇಶ ಸಾರುವ ನಡಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವಂತೆ ಹಲ್ಲೆಗೆರೆ ಮೂರ್ತಿ ಅವರು ಡಿಸಿಎಂ ಅವರನ್ನು ಆಹ್ವಾನಿಸಿದರು. ಮಂಡ್ಯ ತಾಲೂಕಿನ ಹಲ್ಲೆಗೆರೆಯಲ್ಲಿ ಶ್ರೀ ಭೂದೇವಿ ಟ್ರಸ್ಟ್ ವತಿಯಿಂದ ಅಂತಾರಾಷ್ಟ್ರೀಯ ಆಧ್ಯಾತ್ಮಿಕ ಕೇಂದ್ರ ಸ್ಥಾಪನೆ ಸಂಬಂಧ ಚರ್ಚಿಸಿದರು. ಹಲ್ಲೆಗೆರೆ ಮೂರ್ತಿ ಅವರ ಪುತ್ರ ಡಾ ವಿವೇಕ್ ಮೂರ್ತಿ ಅವರು ವಿಶ್ವ ಆರೋಗ್ಯ ಸಂಸ್ಥೆ ಸದಸ್ಯರು ಹಾಗೂ ಅಮೇರಿಕ ಅಧ್ಯಕ್ಷ ಜೋಬೈಡನ್ ಅವರ ಆರೋಗ್ಯ ಸಲಹೆಗಾರರು ಆಗಿದ್ದಾರೆ.
ಬೆಂಗಳೂರು: ಕಸ ಗುತ್ತಿಗೆದಾರರಿಂದ ಪೌರ ಕಾರ್ಮಿಕರಿಗೆ ವಂಚನೆ ಆರೋಪ ವಂಚಕ ಗುತ್ತಿಗೆದಾರರ ಮೇಲೆ ಎಫ್ ಐ ಅರ್ ದಾಖಲು 134 ಪೌರ ಕಾರ್ಮಿಕರ pf..ESI ಹಣ ಲೂಟಿ ಮಾಡಿದ ಗುತ್ತಿಗೆದಾರರ ಪದ್ಮನಾಭನಗರದ ವಾರ್ಡ 165 ಗಣೇಶ್ ಮಂದಿರ ವಾರ್ಡ ನಲ್ಲಿ ವಂಚನೆ ಕಳೆದ ನಾಲ್ಕು ವರ್ಷಗಳಿಂದ ಪೌರ ಕಾರ್ಮಿಕರನ್ನೂ ಬಳಸಿ ಕೊಂಡು ESI..PF .ಕಟ್ಟದೆ ವಂಚನೆ ಕೋಟ್ಯಂತರ ಹಣ ಪೌರಕಾರ್ಮಿಕರ ಹೆಸರಲ್ಲಿ ಲೂಟಿ ಮಾಡಿದ್ದು ಪಾಲಿಕೆಯಿಂದ PF..ESI .ಬಿಡುಗಡೆ ಅಗಿದ್ರು ಪೌರ ಕಾರ್ಮಿಕರಿಗೆ ನೀಡುತ್ತಿರಲಿಲ್ಲ ಸ್ಥಳೀಯ ಶಾಸಕ ಹಾಗೂ ಬಿಜೆಪಿ ವಿಪಕ್ಷ ನಾಯಕ ಅರ್ .ಅಶೋಕ ಕ್ಷೇತ್ರದಲ್ಲೆ ವಂಚನೆ ವಿಕೆ. ಎಂಟರ್ ಪ್ರೈಸಸ್ ಹೆಸರಲ್ಲಿ ಪೌರ ಕಾರ್ಮಿಕರಿಗೆ ವಂಚನೆ ಮಾಡಿದ್ದು ಗುತ್ತಿಗೆದಾರರದ ವಿಜಯ್ ಕುಮಾರ್.. ಮುನಿರಾಜು ರವರಿಂದ ವಂಚನೆ ಮಾಡುತ್ತಿರುವ ಆರೋಪ ಕೇಳಿಬಂದಿದ್ದು ದಾಖಲೆ ಸಮೇತ ಚನ್ನಮ್ಮನ ಕೆರೆ ಪೊಲೀಸ್ ಠಾಣೆಯಲ್ಲಿ FIR ದಾಖಲು ಮಾಡಲಾಗಿದೆ ಕೂಡಲೇ ಗುತ್ತಿಗೆದಾರರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದು ಇಲ್ಲದಿದ್ರೆ ಮುಂದಿನ ದಿನಗಳಲ್ಲಿ ಅಶೋಕ…
ಬೀದರ್: ಅಕ್ರಮವಾಗಿ ದಾಸ್ತಾನು ಮಾಡಿದ್ದ ಪಡಿತರ ಅಕ್ಕಿಯನ್ನು ಜಪ್ತಿ ಮಾಡಲಾಗಿದ್ದು, ಹಾಗೂ ಕಿಂಗ್ ಪಿನ್ ಬಂಧಿಸಿರುವ ಘಟನೆ ಬೀದರ್ ನಲ್ಲಿ ಜರುಗಿದೆ. ಹೌದು, ಬೀದರ ನಗರದ ಹೊರವಲಯದ ಗೋಡೌನ್ನಲ್ಲಿ ತೋಟಗಾರಿಕೆ ಇಲಾಖೆಯ ಪಕ್ಕದಲ್ಲಿಯೇ ಅಕ್ರಮವಾಗಿ ದಾಸ್ತಾನು ಮಾಡಲಾಗಿದ್ದ ಅಪಾರ ಪ್ರಮಾಣದ ಅಕ್ಕಿಯನ್ನು ಜಪ್ತಿ ಮಾಡಿರುವ ಪೊಲೀಸರು ಈ ಸಂಬಂಧ ಕಿಂಗ್ ಪಿನ್ ಶಾರುಕ್ ಎಂಬಾತನನ್ನು ಬಂಧಿಸಿದ್ದಾರೆ. ಆಶ್ಚರ್ಯವೆಂದರೆ ಮಿಡ್ ಡೇ ಮೀಲ್ ಸ್ಟ್ರೀಮ್ ಪ್ಯಾಕಿಂಗ್ ಸೀಲ್ ಬಳಸಿ ಕಾಳಸಂತೆಗೆ ಮಾರಾಟ ಮಾಡ್ತಿದ್ದ ಚಾಲಾಕಿಯನ್ನು ತಪಾಸಣೆ ಮಾಡಿದರೂ, ಅಧಿಕಾರಿಗಳನ್ನು ಯಾಮಾರಿಸಲು ಸರ್ಕಾರದ ಸಪ್ರೈ ಎಂಬಂತೆ ಸೀಲ್ ಮಾಡಿದ್ದ. ಕಾಮನ್ ರೈಸ್ ಫಾರ್ ಮಿಡ್ ಡೇ ಮೀಲ್ ಸ್ಕಿಮ್ 2023- 24, ನಾಟ್ ಫಾರ್ ಓಪನ್ ಮಾರ್ಕೆಟ್ ಸೇಲ್ ಎಂದು ಪ್ರಿಂಟ್ ಮಾಡಿ ಕಳ್ಳಸಾಗಾಟ ಮಾಡುತ್ತಿದ್ದರು. ಗೋಣಿ ಚೀಲದಿಂದ ಪ್ಲಾಸ್ಟಿಕ್ ಚೀಲಕ್ಕೆ ತುಂಬುವಾಗ ದಾಳಿ ನಡೆಸಿದ ಪೊಲೀಸರು ಇತರೆ ಮೂವರನ್ನೂ ವಶಕ್ಕೆ ಪಡೆದಿದ್ದಾರೆ. ಈ ಅಕ್ಕಿಯನ್ನು ಆರೋಪಿಗಳು ಅಕ್ರಮವಾಗಿ ತೆಲಂಗಾಣಕ್ಕೆ ಕಳ್ಳಸಾಗಾಟ ಮಾಡುತ್ತಿದ್ದರು ಎಂದು…
ಕನ್ನಡದ ಹೆಸರಾಂತ ಸಾಹಸ ನಿರ್ದೇಶಕ ಜಾಲಿ ಬಾಸ್ಟಿನ್ (Jolly Bastin) ನಿಧನಕ್ಕೆ ನಟ, ನಿರ್ದೇಶಕ ದುನಿಯಾ ವಿಜಯ್ ಕಂಬನಿ ಮಿಡಿದಿದ್ದಾರೆ. ಇತ್ತೀಚೆಗಷ್ಟೇ ಜಾಲಿ ಮಾಸ್ಟರ್ ಜೊತೆ ವಿಜಯ್ ಕೆಲಸ ಮಾಡಿದ್ದನ್ನು ನೆನಪಿಸಿಕೊಂಡಿದ್ದಾರೆ. ದುನಿಯಾ ವಿಜಯ್ (Duniya Vijay) ನಿರ್ದೇಶಿಸಿ, ನಟಿಸುತ್ತಿರುವ ಭೀಮ ಚಿತ್ರಕ್ಕೆ ಜಾಲಿ ಬಾಸ್ಟಿನ್ ಅವರ ಸಾಹಸ ನಿರ್ದೇಶನವಿದೆ. ಅತ್ಯುತ್ತಮ ಸಾಹಸ ನಿರ್ದೇಶಕನನ್ನು ಕಳೆದುಕೊಂಡಿರುವುದಾಗಿ ವಿಜಯ್ ಬರೆದುಕೊಂಡಿದ್ದಾರೆ. ಮಲಯಾಳಂ ಮೂಲದ, ಕನ್ನಡಿಗರೇ ಆಗಿರುವ ಜಾಲಿ ಬಾಸ್ಟಿನ್ ನಿನ್ನೆ ಹೃದಯಾಘಾತದಿಂದ (Heart Attack) ನಿಧನರಾಗಿದ್ದಾರೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಸಾವಿರಾರು ಚಿತ್ರಗಳಿಗೆ ಸಾಹಸ ದೃಶ್ಯಗಳನ್ನು ಕಂಪೋಸ್ ಮಾಡಿರುವ ಜಾಲಿ ಬಾಸ್ಟಿನ್, ಬಹುಬೇಡಿಕೆ ಸ್ಟಂಟ್ ಮಾಸ್ಟರ್ ಆಗಿದ್ದರು. ಬೈಕ್ ಮೆಕಾನಿಕ್ ಆಗಿ ಕೆಲಸ ಮಾಡುತ್ತಿದ್ದ ಜಾಲಿ ಬಾಸ್ಟಿನ್, ಕ್ರೇಜಿಸ್ಟಾರ್ ರವಿಚಂದ್ರನ್ ಕಣ್ಣಿಗೆ ಬಿದ್ದು, ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದರು. ಪ್ರೇಮಲೋಕ ಸೇರಿದಂತೆ ರವಿಚಂದ್ರನ್ ಅವರ ಬಹುತೇಕ ಚಿತ್ರಗಳಿಗೆ ಇವರ ಸಾಹಸ ನಿರ್ದೇಶನವಿದೆ. ಶಾಂತಿ ಕ್ರಾಂತಿಗಾಗಿ ಮಾಡಿದ ಸಾಹಸ ದೃಶ್ಯಗಳ ಕಂಪೋಸ್…
ವಿಜಯಪುರ:- ಬಿಜೆಪಿ ಸರ್ಕಾರದ ಅವಧಿಯಲ್ಲಿ 40 ಸಾವಿರ ಕೋಟಿ ಅವ್ಯವಹಾರ ನಡೆದಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಸರ್ಕಾರದ ಆಡಳಿತದಲ್ಲಿ ಕೋವಿಡ್ ಹೆಸರಿನಲ್ಲಿ ₹40 ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ. ಕೋವಿಡ್ ವೇಳೆ ₹45 ಮೌಲ್ಯದ ಒಂದು ಮಾಸ್ಕ್ಗೆ ₹485 ಬಿಲ್ ಹಾಕಲಾಯಿತು. ಎಲ್ಲದಕ್ಕೂ ಮನಬಂದಂತೆ ದರ ನಿಗದಿಪಡಿಸಿ, ಬಡವರನ್ನು ಶೋಷಿಸಿದ್ದಾರೆ’ ಎಂದು ಹರಿಹಾಯ್ದರು. ‘ಬೆಂಗಳೂರಿನಲ್ಲಿ 10 ಸಾವಿರ ಬೆಡ್ಗಳನ್ನು ಬಾಡಿಗೆಗೆ ಪಡೆದು, ಒಂದು ಬೆಡ್ಗೆ ದಿನಕ್ಕೆ ₹20 ಸಾವಿರ ಬಾಡಿಗೆ ದರ ನಿಗದಿ ಮಾಡಲಾಯಿತು. ಬಾಡಿಗೆ ಹಣ ಕೊಡುವ ಬದಲು ಅದೇ ದರದಲ್ಲಿ ಎರಡು ಬೆಡ್ ಖರೀದಿಸಬಹುದಿತ್ತು’ ಎಂದರು. ‘ಕೋವಿಡ್ ತಗುಲಿದ್ದ ರೋಗಿಗಳಿಗೆ ₹8 ಲಕ್ಷದಿಂದ ₹10 ಲಕ್ಷದವರೆಗೆ ಬಿಲ್ ಮಾಡಲಾಯಿತು. ನಮ್ಮದೇ ಬಿಜೆಪಿ ಸರ್ಕಾರವಿದ್ದರೂ ಕಳ್ಳರು ಕಳ್ಳರೇ ತಾನೇ? ಇದನ್ನು ಯಡಿಯೂರಪ್ಪ ಅವರ ಬಗ್ಗೆ ವಿಧಾನಸೌಧದಲ್ಲಿಯೇ ಹೇಳಿದ್ದೇನೆ. ಈ ಕುರಿತಂತೆ ನನ್ನಲ್ಲಿ ಇನ್ನಷ್ಟು ವಿಷಯಗಳಿವೆ.…
ಮೈಸೂರು: ಪ್ರತಾಪ್ಸಿಂಹಗೂ ಮನೋರಂಜನ್ಗೂ ಏನು ಸಂಬಂಧ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನೆ ಮಾಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸಂಸದ ಪ್ರತಾಪಸಿಂಹ ಅವರಿಗೆ ಚಾಮುಂಡೇಶ್ವರಿ ಮೇಲೆ ಭಕ್ತಿ ಇದ್ದರೆ ಕೇಂದ್ರದ ವೀಕ್ಷಕರು ಮಾಡಿರುವ ವರದಿಯಲ್ಲಿ ಏನಿದೆ ? ಮನೋರಂಜನ್ಗೂ ನಿಮಗೂ ಸಂಪರ್ಕ ಇಲ್ಲವೇ, ಪ್ರಕರಣದಲ್ಲಿ ನಿಮ್ಮ ಪಾತ್ರ ಇಲ್ಲವೇ ಎಂಬುದನ್ನು ಬಹಿರಂಗಪಡಿಸಿ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಾಗ್ದಾಳಿ ನಡೆಸಿದರು. ಲೋಕಸಭೆಯಲ್ಲಿ ಭದ್ರತಾ ವೈಲ್ಯಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಸಂಸದ ಪ್ರತಾಪ್ಸಿಂಹ ಹಾಗೂ ಮನೋರಂಜನ್ಗೂ ಏನು ಸಂಬಂಧ ? ಒಟ್ಟು ಪ್ರಕರಣದಲ್ಲಿ ಅವರ ಪಾತ್ರವೇನು ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ಪ್ರಶ್ನಿಸಿದರು. ಸಂಸದ ಪ್ರತಾಪ್ಸಿಂಹ ಅವರು ಲೋಕಸಭೆ ಭದ್ರತೆ ವಿಚಾರವಾಗಿ ಕೇಳಿದರೆ ತಾಯಿ ಚಾಮುಂಡೇಶ್ವರಿ ಎಲ್ಲ ನೋಡಿಕೊಳ್ಳುತ್ತಾಳೆ. ನಾನು ದೇಶ ಭಕ್ತನೋ ಇಲ್ಲವೋ ಎಂದು ಜನರು ಚುನಾವಣೆಯಲ್ಲಿ ನಿರ್ಧರಿಸುತ್ತಾರೆ ಎಂದು ಹೇಳಿ ತಪ್ಪಿಸಿಕೊಳ್ಳುತ್ತಿದ್ದಾರೆ. ಇವರಿಗೆ ಚಾಮುಂಡೇಶ್ವರಿ ಮೇಲೆ ಭಕ್ತಿ ಇದ್ದರೆ ಕೇಂದ್ರದ ವೀಕ್ಷಕರು ಮಾಡಿರುವ ವರದಿಯಲ್ಲಿ ಏನಿದೆ ? ಮನೋರಂಜನ್ಗೂ ನಿಮಗೂ ಸಂಪರ್ಕ…
ಬಾಲಿವುಡ್ ನ ಖ್ಯಾತ ನಟ ಸಲ್ಮಾನ್ ಖಾನ್ (Salman Khan) ಇಂದು ಹುಟ್ಟು ಹಬ್ಬವನ್ನು (Birthday) ಆಚರಿಸಿಕೊಳ್ಳುತ್ತಿದ್ದಾರೆ. ಸಲ್ಮಾನ್ ಹುಟ್ಟು ಹಬ್ಬಕ್ಕೆ ಕಿಚ್ಚ ಸುದೀಪ್ (Kiccha Sudeep) ಶುಭಾಶಯ ತಿಳಿಸಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಕುರಿತು ಅವರು ಬರೆದುಕೊಂಡಿದ್ದು, ನಿಮ್ಮೊಂದಿಗೆ ಕಳೆದ ಕ್ಷಣಗಳು ಯಾವತ್ತಿಗೂ ಹಸಿರಾಗಿರುತ್ತವೆ. ನಿಮ್ಮಂತಹ ಅದ್ಭುತ ಮನುಷ್ಯ ನನಗೆ ಸಿಕ್ಕಿದ್ದಕ್ಕೆ ಧನ್ಯವಾದಗಳು’ ಎಂದು ಅವರು ಹೇಳಿದ್ದಾರೆ. ಕೆಲ ತಿಂಗಳ ಹಿಂದೆಯಷ್ಟೇ ಕಿಚ್ಚ ಸುದೀಪ್ ನೀಡಿದ ಸಂದರ್ಶನವೊಂದರಲ್ಲಿ ತಮ್ಮ ನಿರ್ದೇಶನದ ಬಗ್ಗೆ ಬ್ರೇಕಿಂಗ್ ಅಪ್ಡೇಟ್ವೊಂದನ್ನ ನೀಡಿದ್ದರು. ಬ್ಯಾಡ್ ಬ್ಯಾಯ್ ಸಲ್ಮಾನ್ ಖಾನ್ ಗಾಗಿ ಚಿತ್ರವೊಂದನ್ನು ನಿರ್ದೇಶನ ಮಾಡುವುದಾಗಿ ಹೇಳಿದ್ದರು ಸಲ್ಲುಗಾಗಿಯೇ ಕಿಚ್ಚ ಭಿನ್ನ ಕಥೆ ಬರೆದಿದ್ದಾರೆ. ಮುಂದಿನ ದಿನಗಳಲ್ಲಿ ಸಲ್ಮಾನ್ ಖಾನ್ಗೆ ಕಥೆ ಹೇಳಿ, ಸಿನಿಮಾ ಮಾಡುವುದಾಗಿ ಕಿಚ್ಚ ಸುದೀಪ್ ಹೇಳಿಕೊಂಡಿದ್ದಾರೆ. ಈ ಮೂಲಕ ತಾವು ಮತ್ತೆ ನಿರ್ದೇಶನದ ಕ್ಯಾಪ್ ಧರಿಸುವ ಸೂಚನೆ ನೀಡಿದ್ದಾರೆ. ಇನ್ನು ವಿಕ್ರಾಂತ್ ರೋಣ ಚಿತ್ರದ ಹಿಂದಿ ವರ್ಷನ್ ಅನ್ನು ಸಲ್ಮಾನ್ ಖಾನ್ ಫಿಲ್ಮ್ಂ ಪ್ರೇಸೆಂಟ್…