Author: AIN Author

ದಾವಣಗೆರೆ : ಹಿಜಾಬ್ ಬಗ್ಗೆ ಸಿಎಂ ಸಿದ್ದರಾಮಯ್ಯ ಯು ಟರ್ನ್ ಹೊಡೆದ ಬಗ್ಗೆ ಮಾಜಿ ಸಿಎಂ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಮ್ಮೆಲ್ಲರ ಒತ್ತಾಯಕ್ಕೆ ಮಣಿದು ಸಿಎಂ ಸಿದ್ದರಾಮಯ್ಯ ತಮ್ಮ ಹೇಳಿಕೆ ವಾಪಸ್ ಪಡೆದಿದ್ದಾರೆ ಸಿಎಂ ಹೇಳಿಕೆ ವಾಪಸ್ ಪಡೆದಿರುವುದು ಒಳ್ಳೆಯ ಸಂಗತಿ ಈಗಲಾದರೂ ಅವರಿಗೆ ಸದ್ಬುದ್ಧಿ  ಬಂದಿದೆ. ನಾವೇನು ಅಲ್ಪ ಸಂಖ್ಯಾತರ ವಿರೋಧಿಗಳಲ್ಲ ಹಿಂದು ಮುಸ್ಲಿಂ ಕ್ರೈಸ್ತ್ ರು ಒಂದೇ ತಾಯಿ ಮಕ್ಕಳಂತೆ ಬಾಳಬೇಕು ಎನ್ನುತ್ತೇವೆ. ಜಾತಿ ವಿಷ ಬೀಜ‌ ಬಿತ್ತುವುದನ್ನ ಸಿದ್ದರಾಮಯ್ಯ ನಿಲ್ಲಿಸಬೇಕು  ಹಾಗೆ ಇದರಿಂದ ಯಾವುದೇ ಲಾಭ ಆಗುವುದಿಲ್ಲ ಎಂದು  ಸಿಎಂ ವಿರುದ್ಧ ಯಡಿಯೂರಪ್ಪ ಕಿಡಿಕಾರಿದರು. ಹಾಗೆ ಜಾತಿಗಣತಿ ಬಗ್ಗೆ ಸಮುದಾಯದ ವಿರೋಧ ವಿಚಾರ ಬಗ್ಗೆಯೂ ಮಾತನಾಡಿದ ಅವರು,  ಈಗಾಗಲೇ ಜಾತಿಗಣತಿ ಬಗ್ಗೆ ಎಲ್ಲರ ಮನಸ್ಸಲ್ಲು ವಿರೋಧವಿದೆ ನಾನು ಅದೇ ಭಾವನೆಯನ್ನ ವ್ಯಕ್ತಪಡಿಸುತ್ತೇನೆ ಹೊಸದಾಗಿ ಜಾತಿಗಣತಿ ಮಾಡಬೇಕು ಪ್ರಸ್ತುತ ಸ್ಥಿತಿಯನ್ನ ಜನತೆಗೆ ತಿಳಿಸಬೇಕು. ಈ ನಿಟ್ಟಿನಲ್ಲಿ ಪ್ರಾಮಾಣಿಕ ಪ್ರಯತ್ನ ಸರ್ಕಾರ ಮಾಡಲಿ…

Read More

ಧಾರವಾಡ: ಇಷ್ಟುದಿನ ಮನೆ ಮಠ, ಬ್ಯಾಂಕ ಎಟಿಎಂ ಸೇರಿದಂತೆ ದೇವಸ್ಥಾನಗಳ ಹಿಂಡಿಗಳಿಗೆ ಕನ್ನಾ ಹಾಕುತ್ತಿದ್ದ ಕಳ್ಳರು ಈಗ ರೈತರ ಹತ್ತಿ ಫಸಲಿನ ಮೇಲೆ ಕಣ್ಣು ಹಾಕಿದ್ದಾರೆ. ಹೌದು ಇದು ಅಚ್ಚರಿ ಅನಿಸಿದ್ದರು ನಿಜ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಮೈಲಾರಪ್ಪ ಕುರಗುಂದ ಅವರ ಜಮೀನಿನಲ್ಲಿ ಒಂದು ವರೇ ಎಕರೆಯ ಜಮೀನಿನಲ್ಲಿನ ಹತ್ತಿಯನ್ನು ಕಳ್ಳರ ಗ್ಯಾಂಗ್ ಬಿಡಿಸಿಕೊಂಡು ಪರಾರಿಯಾಗಿದೆ. ಇನ್ನೂ ಹತ್ತಿ ಬಿಡಿಸುವ ಯೋಚನೆ ಮಾಡಿಕೊಂಡು ಜಮೀನಿಗೆ ಬಂದ್ ರೈತ ಮಲ್ಲಪ್ಪನಿಗೆ ಹೊಲದಲ್ಲಿನ ಹತ್ತಿ ಒಂದವರೇ ಎಕರೆಯಲ್ಲಿ ಹತ್ತಿ ಇಲ್ಲದನ್ನು ನೋಡಿ ಶಾಕ್ ಆಗಿದೆ. ಹತ್ತಿ ಬೆಳೆ ಫಸಲು ನೀಡಲು ಆರಂಭದಿಂದಾ ಒಂದು ಬಾರಿ ಹತ್ತಿ ಬೀಡಿಸಿ ಮಾರಾಟ ಮಾಡಿದ್ದು, ಎರಡನೇ ಬಾರಿ ಬೀಡಿಬೇಕಾಗಿತ್ತು. ಮನೆಯಲ್ಲಿ ಕೆಲಸ ಕಾರ್ಯಗಳಿಂದ ಹಾಗೂ ಆಳಿನ ಸಮಸ್ಯೆಯಿಂದಾ ಹಾಗೇ ಬಿಟ್ಟಿದ ಹತ್ತಿ ಬೆಳೆ ಈಗ ರೈತನ ಕೈ ತಪ್ಪಿ ಕಳ್ಳರ ಪಾಲಾಗಿದೆ‌. ಖದೀಮ ಕಳ್ಳರ ಈ ಕೃತ್ಯದಿಂದ ಬ್ಯಾಲ್ಯಾಳ…

Read More

ಕಲಬುರಗಿ: ತರಕಾರಿ ವ್ಯಾಪಾರ ಮಾಡುತಿದ್ದ ಯುವಕನನ್ನ ಬರ್ಬರವಾಗಿ ಕೊಲೆಗೈದ ಘಟನೆ ಕಲಬುರಗಿಯಲ್ಲಿ ನಡೆದಿದೆ.ಚಿತ್ತಾಪುರ ಪಟ್ಟಣದ ಹೊರವಲಯದಲ್ಲಿ ಕೊಲೆ ನಡೆದಿದ್ದು https://ainlivenews.com/kai-leaders-sons-gruesome-murder-friend-is-the-accused/ ಕೊಲೆಯ ನಂತ್ರ ಪೆಟ್ರೋಲ್ ಸುರಿದು ಶವ ಗುರುತು ಸಿಗದಂತೆ ಬೆಂಕಿ ಹಚ್ಚಲಾಗಿದೆ..ಕೊಲೆಯಾದಯುವಕನನ್ನ ದಾವಲ್ ಸಾಬ್ ಎಂದು ಗುರುತಿಸಲಾಗಿದೆ. ಸ್ಥಳಕ್ಕೆ ಭೇಟಿ ನೀಡಿದ ಚಿತ್ತಾಪುರ ಪೋಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ..ಕೊಲೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ ತನಿಖೆ ನಂತ್ರ ಪಾತಕಿಗಳ ಬಣ್ಣ ಬಯಲಾಗಲಿದೆ.

Read More

ಹುಬ್ಬಳ್ಳಿ: ಬಿಜೆಪಿಯವರು ಗೋಡ್ಸೆ ಅನುಯಾಯಿಗಳು. ಅವರಿಂದ ಏನೂ ನೀರಿಕ್ಷೆ ಮಾಡಲು ಸಾಧ್ಯ ಇಲ್ಲ. ಹಿಜಾಬ್ ಮತ್ತು ಭುರ್ಖಾ ನಡುವೆ ಸಾಕಷ್ಟು ವ್ಯತ್ಯಾಸ ಇದೆ. ಹಿಜಾಬ್ ಅನ್ನೋದು ತಲೆ ಮತ್ತೆ ಎದೆ ಮುಚ್ಚಿಕೊಳ್ಳೊಕೆ ಇರೋದು. ಈಗಾಗಲೇ ಕೆಲವು ಶಾಲಾ ಕಾಲೇಜುಗಳಲ್ಲಿ ಇದೆ. ಭುರ್ಖಾ ಅನ್ನೋದು ಸಂಪೂರ್ಣ ದೇಹ ಮುಚ್ಚಿಕೊಳ್ಳೋದು. ಶಾಲಾ ಕಂಪೌಂಡ್ ವರೆಗೂ ಭುರ್ಖಾ ಆ ನಂತರ ಹಿಜಾಬ್ ಇರಬೇಕು ಅನ್ನೋದು ನನ್ನ ಕಲ್ಪನೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ.ಹರಿಪ್ರಸಾದ ಹೇಳಿದರು. ನಗರದಲ್ಲಿಂದು ಮಾಧ್ಯಮದ ಜೊತೆಗೆ ಮಾತನಾಡಿದ ಅವರು, ಭಾರತೀಯ ಜನತಾ ಪಾರ್ಟಿಯವರು ಸಮಾನತೆ ವಿಚಾರ ಮಾತಾಡ್ತಾರೆ. ಅಹಾರ,ಉಡುಪಿನ ಹಕ್ಕು ಎಲ್ಲರ ವೈಯಕ್ತಿಕ. ಬಿಜೆಪಿಗೆ ರೈತರು,ಮಹಿಳೆಯರ ಶೋಷಣೆ ಬಗ್ಗೆ ಕಾಳಜಿ ಇಲ್ಲ. ಈ ವಿಚಾರ ಮಾತಾಡ್ತೀದಾರೆ. ಕಾಂಗ್ರೆಸ್ ಪಕ್ಷ ಸಂವಿಧಾನ ರಕ್ಷಣೆ ಮಾಡ್ತೀವಿ. ನಮ್ದು ಜ್ಯಾತ್ಯಾತೀತ ರಾಷ್ಟ್ರ, ಎಲ್ಲ ಜಾತಿ ಧರ್ಮಗಳನ್ನು ಕಾಪಾಡಬೇಕು ಎಂದರು. ಕಾಂಗ್ರೆಸ್ ತುಷ್ಟೀಕರಣ ಮಾಡತಿಲ್ಲ. ಬಹು ಸಂಖ್ಯಾತರ ತುಷ್ಟೀಕರಣ ಮಾಡ್ತಿರೋದು ಬಿಜೆಪಿ. ಹಿಂಸೆ ಸುಳ್ಳನ್ನು ಪ್ರಚಾರ ಮಾಡ್ತಿರೋದು ಬಿಜೆಪಿ.…

Read More

‘ಕಾಟೇರ.. ಕಾಟೇರ.. ಕಾಟೇರ..’ ಪರಭಾಷೆ ಸಿನಿಮಾಗಳ ಹಾವಳಿಯ ನಡುವೆಯೂ ಡಿ ಬಾಸ್ ಹವಾ ಕಡಿಮೆ ಆಗಿಲ್ಲ. ನಟ ದರ್ಶನ್ ನಟನೆಯ ಕಾಟೇರ ಸಿನಿಮಾ ಎಲ್ಲೆಲ್ಲೂ ಸದ್ದು ಮಾಡುತ್ತಿದೆ. ರಾಜ್ಯಾದ್ಯಂತ ‘ಜೈ ಡಿ ಬಾಸ್’ ಘೋಷಣೆ ಮೊಳಗುತ್ತಿದೆ. ಚಾಲೆಂಜಿಂಗ್ ಸ್ಟಾರ್ ಅಭಿನಯದ ಈ ಅಪ್ಪಟ್ಟ ಕನ್ನಡ ಸೊಗಡಿನ ಸಿನಿಮಾ ಬಿಡುಗಡೆಗಾಗಿ ದಾಸನ ಭಕ್ತಗಣ ಕಾತುರದಿಂದ ಕಾಯುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಈ ಸಿನಿಮಾದ ಟಿಕೆಟ್ ಬುಕ್ಕಿಂಗ್ ಆರಂಭವಾಗಿರುವುದಾಗಿ ಚಿತ್ರತಂಡ ಅಧಿಕೃತವಾಗಿ ತಿಳಿಸಿದೆ. ಈ ಕುರಿತು ನಟ ದರ್ಶನ್ ತೂಗುದೀಪ, ಚಿತ್ರದ ನಿರ್ದೇಶಕ ತರುಣ್ ಸುಧೀರ್ ತಮ್ಮ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ‘ಕಾಟೇರ’ ಚಿತ್ರದ ಮುಂಗಡ ಬುಕ್ಕಿಂಗ್‌ಗಳು ಓಪನ್ ಆಗಿದೆ. ಪ್ರೇಕ್ಷಕರೇ, ನಿಮ್ಮ ಟಿಕೆಟ್‌ಗಳನ್ನು ಕಾಯ್ದಿರಿಸಿ ಹಾಗೂ ಡಿಸೆಂಬರ್ 29ರಿಂದ ತೆರೆಮೇಲೆ ‘ಕಾಟೇರ’ ಘರ್ಜನೆ ನೋಡಲು ಸಿದ್ಧರಾಗಿ ಎಂದು ತಮ್ಮ ಭಕ್ತಗಣಕ್ಕೆ ಸಿಹಿ ಸುದ್ದಿ ನೀಡಿದ್ದಾರೆ. ಇದೇ ಡಿಸೆಂಬರ್ 29ರಂದು ಕಾಟೇರ ಸಿನಿಮಾ ಬಿಡುಗಡೆಯಾಗಲಿದ್ದು, ರಾಜ್ಯ ಸೇರಿದಂತೆ ದೇಶಾದ್ಯಂತ ಭಾರಿ ಬೇಡಿಕೆ ವ್ಯಕ್ತವಾಗಿದೆ. ಈಗಾಗಲೇ…

Read More

ಶಾಲಾ ಕಾಲೇಜುಗಳ ಕರ್ಮಕಾಂಡ ಹೊರ ಬಂದು ಸರ್ಕಾರದ ಮಾನ ಹರಾಜಿಗೆ ಬೀಳುತ್ತಿದ್ದಂತೆ ಸಿಎಂ ಸಿದ್ದರಾಮಯ್ಯನವರು ಅವರು ಹಿಜಾಬ್ ವಿಚಾರ ಮುನ್ನಲೆಗೆ ತಂದಿದ್ದಾರೆ. https://x.com/BJP4Karnataka/status/1738779500979093815?s=20 ಕಾಂಗ್ರೆಸ್ ತಿರುಚುವ ಕಲೆಗಳ ಬಗ್ಗೆ ತಿಳಿಯಲು ವಿಡಿಯೋ ನೋಡಿ

Read More

ಕೊಪ್ಪಳ: ಅಂಜನಾದ್ರಿ ಬೆಟ್ಟದಲ್ಲಿ ಇಂದು ಹನುಮಮಾಲೆ ವಿಸರ್ಜನೆ ಕಾರ್ಯಕ್ರಮ ವಿಜೃಂಭಣೆಯಿಂದ ನಡೆಯುತ್ತದೆ. ಆಂಧ್ರ, ತೆಲಂಗಾಣ ಸೇರಿದಂತೆ ವಿವಿಧೆಡೆಯಿಂದ ಲಕ್ಷಾಂತರ ಹನುಮ ಭಕ್ತರು ಆಗಮಿಸಿದ್ದು ಹನುಮ ಮಾಲಾಧಾರಿಗಳು ಹನುಮ ಮಾಲೆ  ವಿಸರ್ಜನೆ ಮಾಡಲಿದ್ದಾರೆ. ಇನ್ನು ಅಂಜನಾದ್ರಿಯಲ್ಲಿ ಜೈ ಶ್ರೀರಾಮ, ಜೈ ಆಂಜನೇಯ ಎಂಬ ಘೋಷವಾಕ್ಯಗಳ ನಡುವೆ ಮೋದಿ, ಪುನೀತ್ ರಾಜ್​ಕುಮಾರ್​ಗಳ  ಘೋಷಣೆಗಳು ಮೊಳಗಿವೆ. ಸಾವಿರಾರು ಭಕ್ತರು ಪ್ರಧಾನಿ ನರೇಂದ್ರ ಮೋದಿ, ದಿ. ಪುನೀತ್ ರಾಜ್​ಕುಮಾರ್ ಭಾವಚಿತ್ರ ಹಿಡಿದು ಅಂಜನಾದ್ರಿಗೆ ಆಗಮಿಸಿದ್ದಾರೆ. ಅಂಜನಾದ್ರಿ ಬೆಟ್ಟದಲ್ಲಿ ಇಂದು ಹನುಮ ಮಾಲೆ ವಿಸರ್ಜನೆ ನಡೆಯುತ್ತಿದೆ. ಹೀಗಾಗಿ ಹನುಮ ಮಾಲಾಧಾರಿಗಳಷ್ಟೇ ಅಲ್ಲದೆ ಲಕ್ಷಾಂತರ ಭಕ್ತರು ಬೆಟ್ಟಕ್ಕೆ ಆಗಮಿಸಿದ್ದಾರೆ. ಗದಗ ಮತ್ತು ಬೆಳಗಾವಿ ಜಿಲ್ಲೆಗಳಿಂದ ಬಂದಿದ್ದ ಭಕ್ತರು ಮೋದಿ ಮತ್ತು ಪುನೀತ್ ರಾಜ್​ಕುಮಾರ್ ಅವರ ಭಾವಚಿತ್ರ ಹಿಡಿದು ಜೈಕಾರ ಹಾಕಿದ್ದಾರೆ.

Read More

ಶಿವಮೊಗ್ಗ : ರಾಜ್ಯದಲ್ಲಿ ಹಿಜಾಬ್ ರಾಜಕಾರಣ ಮಾಡಲು ಯತ್ನಿಸಿ ಮುಸಲ್ಮಾನರನ್ನು ಓಲೈಸಬೇಕು ಎಂದು ಯತ್ನಿಸಿದ್ದ ಸಿದ್ದರಾಮಯ್ಯ ಅವರ ಯತ್ನ. ಇದರ ವಿರುದ್ಧ ಬಿಜೆಪಿಯ ವಿರೋಧ, ಹಿಂದುತ್ವದ ಶಕ್ತಿ ಗಮನಿಸಿ ಸಿಎಂ‌ ಉಲ್ಟಾ ಹೊಡೆದಿದ್ದಾರೆ ಎಂದು ಮಾಜಿ ಸಚಿವ ಕೆ‌.ಎಸ್. ಈಶ್ವರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಸಿದ್ದರಾಮಯ್ಯ ನಾನು ಹಾಗೆ ಹೇಳಿಲ್ಲ. ಪರಿಶೀಲನೆ ಮನನ ಮಾಡುತ್ತೇವೆ ಎಂದು ಹೇಳಿದ್ದಾರೆ. ರಾಜ್ಯದ ಮೂಲೆ ಮೂಲೆಗಳಿಂದ ಹಿಂದುಗಳಿಂದ ವ್ಯಕ್ತವಾದ ವಿರೋಧ ಗಮನಿಸಿ ಹೀಗೆ ಹೇಳಿದ್ದಾರೆ ಎಂದು ಕುಟುಕಿದ್ದಾರೆ. ಕಾನೂನು ಸಚಿವರು ಸಿಎಂ ಸಿದ್ದರಾಮಯ್ಯ ಹೇಳಿದ್ದರಲ್ಲಿ ತಪ್ಪೇನಿದೆ? ಎಂದು ಹೇಳಿದ್ದಾರೆ. ಕಾನೂನು ಸಚಿವರು ಹೀಗೆ ಹೇಳುವುದು ಸರಿಯಲ್ಲ. ಚರ್ಚೆಯೇ ಮಾಡದೆ ಈ ರೀತಿಯಲ್ಲಿ ನಡೆದುಕೊಳ್ಳುವುದು ಸರಿಯಲ್ಲ. ಅದಕ್ಕೆ ನಾನು ಸಿದ್ದರಾಮಯ್ಯ ಅವರದ್ದು ತೊಘಲಕ್ ದರ್ಬಾರ್ ಎಂದು ಹೇಳಿದ್ದು ಎಂದು ಕಿಡಿಕಾರಿದ್ದಾರೆ.

Read More

ಕೊಪ್ಪಳ: ಹನುಮಮಾಲೆ ವಿಸರ್ಜನೆ ಅಂಗವಾಗಿ ಶನಿವಾರ ಮಧ್ಯರಾತ್ರಿಯೇ ಹನುವನಿಗೆ ತರಹೇವಾರಿ ಬಣ್ಣಗಳ ಹೂಗಳಿಂದ ಮೂರ್ತಿಯನ್ನು ಅಲಂಕಾರ ಮಾಡಲಾಗಿತ್ತು. ನಾಡಿನ ವಿವಿದೆಡೆ ಹನುಮಮಾಲಾ ಧಾರಿಗಳಿಂದ ಮಾಲೆ ವಿಸರ್ಜನೆ ಮಾಡಲು ಅತಿ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿದ್ದಾರೆ. 575 ಮೆಟ್ಟಿಲುಗಳನ್ನು ಹತ್ತಿ ಬಂದು ಮಾಲೆ ವಿಸರ್ಜನೆ ಮಾಡುತ್ತಿರುವ ಹನುಮ ಭಕ್ತರು ಹನುಮಮಾಲಾ ವಿಸರ್ಜನೆ ಹಿನ್ನಲೆಯಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿದೆ. ಇನ್ನೂ  ಶನಿವಾರವೂ ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರಿಂದ ಅವರ ಸಂಖ್ಯೆ ಭಾನುವಾರ ಕೂಡ ಹೆಚ್ಚುತ್ತಲೇ ಹೋಯಿತು. ಹೊತ್ತು ಏರುತ್ತಿದ್ದಂತೆಯೇ ಸಾಲುಸಾಲಾಗಿ ಬರುತ್ತಿರುವ ಭಕ್ತರನ್ನು ನಿಯಂತ್ರಿಸಲು ಹಾಗೂ ಸರತಿ ಸಾಲಿನಲ್ಲಿ ಕಳಿಸಲು ಪೊಲೀಸರು ಎರಡು ದಿನಗಳಿಂದ ಸರತಿ ಮೇಲೆ ಇಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದ್ದಂತೆಯೇ ಇಲ್ಲಿಗೆ ಬರುವ ಭಕ್ತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಹೊರರಾಜ್ಯ ಮತ್ತು ಹೊರಜಿಲ್ಲೆಗಳಿಂದಲೂ ಅಪಾರ ಸಂಖ್ಯೆಯಲ್ಲಿ ಭಕ್ತರು ಅಂಜನಾದ್ರಿಗೆ ಬರುತ್ತಿದ್ದಾರೆ. ಅವರಿಗೆ ಮಾಹಿತಿ ನೀಡಲು ಸಹಾಯವಾಣಿ ಆರಂಭಿಸಲಾಗಿದೆ.

Read More

ವಿಜಯಪುರ: ಯಡ್ಡಿಯೂರಪ್ಪನವರದ್ದು ಕೆಜೆಪಿ 1, ಇದು ಕೆಜೆಪಿ 2, ಮೊಮ್ಮಗನದು ಕೆಜೆಪಿ 3 ಎಂದು ಹೇಳುವ ಮೂಲಕ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌(Basanagouda Patil Yatnal) ಬಿಜೆಪಿ ರಾಜ್ಯ ಘಟಕದ ನೂತನ ಪಟ್ಟಿಗೆ ವ್ಯಂಗ್ಯವಾಡಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಈ ಪಟ್ಟಿಯ ಆಯುಷ್ಯ 2024ರ ಲೋಕಸಭೆ ಚುನಾವಣೆ. 28 ಸೀಟ್ ತರುತ್ತೇನೆ ಅಂತಾ ಹೇಳಿದ್ದಾರೆ. 28 ರಲ್ಲಿ ಒಂದು ಕಡಿಮೆ ಬಿದ್ದರೂ ಚಿಕ್ಕಮಕ್ಕಳು ಹೇಗೆ ಸಿಗರೇಟ್ ಪ್ಯಾಕ್ ಮನೆ ಮಾಡಿರ್ತಾರೆ ಆ ರೀತಿಯಾಗಿ ಈ ಪಟ್ಟಿ ಹಾಗೆ ಬಿದ್ದು ಹೋಗುತ್ತದೆ ಎಂದರು ಈಗ ರಾಜಕೀಯದಲ್ಲಿ ಏನಾಗಿದೆ ಎಂದರೆ ಲಂಪಟರು ಬಹಳ ಇದ್ದಾರೆ. ಅವರೆಲ್ಲ ಹಲ್ಕಾ ಕೆಲಸ ಮಾಡುತ್ತಾರೆ. ಇವತ್ತು ಮೌಲ್ಯಾಧಾರಿತ ರಾಜಕಾರಣ ಇಲ್ಲ. ಎಲ್ಲಾ ಕಳ್ಳರು, ಲಫಂಗರು ಹೆಚ್ಚು ಸೇರುತ್ತಿದ್ದಾರೆ. ಒಳ್ಳೆಯವರಿಗೆ ಬ್ಲ್ಯಾಕ್‌ಮೇಲ್‌ ಮಾಡುತ್ತಾರೆ. 2024 ರ ಚುನಾವಣೆಯ ನಂತರ ಮೇಜರ್ ಆಪರೇಷನ್ ಮಾಡದೇ ಇದ್ದರೆ ಮುಂದಿನ ನಿರ್ಣಯ ನಾನು ಮಾಡುತ್ತೇನೆ ಎಂದು ಹೇಳಿದರು. ಸಾರ್ವಜನಿಕ ಕೆಲಸ ಮಾಡಲು, ಕ್ರಾಂತಿ ಮಾಡಲು…

Read More