Author: AIN Author

ಚಾಮರಾಜನಗರ:- ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ಕೃಷಿ ಇಲಾಖೆಯಿಂದ ಆಯೋಜಿಸಲಾಗಿದ್ದ ರೈತ ದಿನಾಚರಣೆ ಮತ್ತು ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬದ ವಸ್ತು ಪ್ರದರ್ಶನಕ್ಕೆ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಚಾಲನೆ ನೀಡಿದರು. ನಗರದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಸಿರಿಧಾನ್ಯ ಹಬ್ಬದ ವಸ್ತು ಪ್ರದರ್ಶನದಲ್ಲಿ ಜಿಲ್ಲೆಯ ಹಾಗೂ ಹೊರ ಜಿಲ್ಲೆಗಳಿಂದ ಆಗಮಿಸಿದ್ದ ರೈತರು ಸಿರಿಧಾನ್ಯಗಳಿಂದ ತಯಾರಿಸಿದ್ದ ತಿನಿಸುಗಳು ಹಾಗೂ ವಿವಿಧ ಇಲಾಖೆಗಳಿಂದ ತಯಾರಿಸಲಾಗಿದ್ದ ಸಿರಿಧಾನ್ಯಗಳ ಪದಾರ್ಥಗಳ ಪ್ರದರ್ಶನಗೊಂಡು ಮಾರಾಟವಾದವು. ಇದೇ ಸಂದರ್ಭದಲ್ಲಿ ಎಲ್ಲಾ ಮಳಿಗೆಗಳಿಗೆ ತೆರಳಿದ ಜಿಲ್ಲಾಧಿಕಾರಿ ಸಿ.ಟಿ.ಶಿಲ್ಪಾನಾಗ್ ಅವರು ರೈತರನ್ನು ಪರಿಚಯ ಮಾಡಿಕೊಂಡು ರೈತರು ಸಿರಿಧಾನ್ಯಗಳಿಂದ ತಯಾರಿಸಲಾಗಿದ್ದ ತಿನಿಸುಗಳ ರುಚಿ ಸವಿದು ರೈತರಿಗೆ ಶುಭಕೋರಿದರು.

Read More

ಚೆನ್ನೈ :- ತಮಿಳುನಾಡು ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಾಧ್ಯವಿಲ್ಲ ಎಂದು ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ತಮಿಳುನಾಡಿನಲ್ಲಿ ಇತ್ತೀಚೆಗೆ ಉಂಟಾಗಿರುವ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಸಾಧ್ಯವಿಲ್ಲ. ರಾಜ್ಯದಲ್ಲಿ ಭಾರಿ ಸಂಕಷ್ಟಕ್ಕೆ ಕಾರಣವಾಗಿರುವ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸುವಂತೆ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಕೇಂದ್ರ ಸರ್ಕಾರವನ್ನು ಕೋರಿದ್ದರು. ರಾಷ್ಟ್ರೀಯ ವಿಪತ್ತು ಘೋಷಣೆಗೆ ಸಂಬಂಧಿಸಿದಂತೆ ಯಾವುದೇ ವ್ಯವಸ್ಥೆ ಇಲ್ಲ ಎಂದು ನಿರ್ಮಲಾ ಸೀತಾರಾಮನ್ ಸ್ಪಷ್ಟಪಡಿಸಿದ್ದಾರೆ. ರಾಜ್ಯದಲ್ಲಿ ಮಳೆಯಿಂದಾದ ಅನಾಹುತಗಳನ್ನು ನಿರ್ವಹಿಸುವಲ್ಲಿ ವಿಫಲರಾಗಿರುವ ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ಮತ್ತು ಅವರ ಸರ್ಕಾರವನ್ನು ನಿರ್ಮಲಾ ಸೀತಾರಾಮನ್ ತೀವ್ರವಾಗಿ ಟೀಕಿಸಿದರು. ಉತ್ತರ ಮತ್ತು ದಕ್ಷಿಣ ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಿಲ್ಲ ಎಂದು ಆರೋಪಿಸಿದರು. 2015ರ ಪ್ರವಾಹದ ನಂತರವೂ ಸರ್ಕಾರ ಪಾಠ ಕಲಿತಿಲ್ಲ. ಮುನ್ನೆಚ್ಚರಿಕೆ ವಹಿಸಿದ್ದರೆ ಪ್ರವಾಹವನ್ನು ತಪ್ಪಿಸಬಹುದಿತ್ತು ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯವು ಕೋರಿರುವ ಹೆಚ್ಚುವರಿ ಹಣಕಾಸು ನೆರವು ಹಂಚಿಕೆ ಕುರಿತು ಗೃಹ ಸಚಿವಾಲಯವು…

Read More

ಬೆಂಗಳೂರು:- ಮುಸ್ಲಿಮರ ಅತಿಯಾದ ತುಷ್ಟೀಕರಣಕ್ಕೆ ತಕ್ಕ ಬೆಲೆ ತೆರಬೇಕಾಗುತ್ತದೆ ಎಚ್ಚರ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಅತಿಯಾದ ತುಷ್ಟೀಕರಣ ಮಾಡಿದ್ದರಿಂದಲೇ 2018ರ ವಿಧಾನಸಭೆ ಚುನಾವಣೆಯಲ್ಲಿ ನೀವು ಸೋತಿದ್ದೀರಿ ಎಂಬುದನ್ನು ಮರೆಯಬಾರದು. ಈಗಲೂ ಅದು ಮುಂದುವರೆದರೆ ಜನ ಪಾಠ ಕಲಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಎಚ್ಚರಿಸಿದ್ದಾರೆ. ಅಷ್ಟಕ್ಕೂ ಕರ್ನಾಟಕದಲ್ಲಿ ಹಿಜಾಬ್‍ನ್ನು ಯಾರು ನಿಷೇಧ ಮಾಡಿದ್ದಾರೆ? ನಾನು ಆದೇಶವನ್ನು ವಾಪಸ್ ಪಡೆಯುತ್ತೇನೆಂದು ಹೇಳಿದ್ದೀರಿ. ನಿಮಗೆ ಕಾನೂನಿನ ಅರಿವು ಇದೆಯೇ ಎಂದು ಪ್ರಶ್ನಿಸಿದರು. ಶಾಲಾಕಾಲೇಜಿನ ಕೊಠಡಿಗಳಲ್ಲಿ ಮಾತ್ರ ಹಿಜಾಬ್ ಧರಿಸಬಾರದೆಂದು ರಾಜ್ಯ ಸರ್ಕಾರ ಸುತ್ತೋಲೆ ಹೊರಡಿಸಿತು ಯಾರು ಎಲ್ಲಿ ಬೇಕಾದರೂ ತಮಗೆ ಇಷ್ಟವಾದ ಉಡುಗೆ ತೊಡುಗೆಗಳನ್ನು ಧರಿಸಲು ಅವಕಾಶವಿದೆ. ಶಾಲಾಕಾಲೇಜುಗಳಲ್ಲಿ ಎಲ್ಲರೂ ಸಮಾನತೆ ಬರಲಿ ಎಂಬ ಕಾರಣಕ್ಕಾಗಿಯೇ ಸಂಹಿತೆಯನ್ನು ಜಾರಿಮಾಡಲಾಗಿದೆ. ಮುಸ್ಲಿಂ ವಿದ್ಯಾರ್ಥಿಗಳು ಹಿಜಾಬ್ ಧರಿಸಬಾರದೆಂದು ಬಿಜೆಪಿ ಸರ್ಕಾರ ಆದೇಶ ಹೊರಡಿಸಿತ್ತೆ? ಎಂದು ಪ್ರಶ್ನಿಸಿದರು. ಸರ್ಕಾರದ ಆದೇಶವನ್ನು ಹೈಕೋರ್ಟ್ ಕೂಡ ಎತ್ತಿ ಹಿಡಿದಿದೆ.…

Read More

ಬೆಂಗಳೂರು: ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ. ಈ ಹಬ್ಬವನ್ನು ಬೆಂಗಳೂರಿಗರು ಪ್ರತಿವರ್ಷ ಸಡಗರದಿಂದ ಆಚಾರಿಸುತ್ತಾರೆ. ಈ ವರ್ಷ ಕೂಡ ಅದ್ದೂರಿಯಾಗಿ ವೈಕುಂಠ ಏಕಾದಶಿಯನ್ನು ಆಚರಿಸಲಾಗುತ್ತಿದ್ದು, ನಗರದ ದೇವಸ್ಥಾನಗಳಲ್ಲಿ ಶುಕ್ರವಾರವೇ ಹಬ್ಬದ ವಾತಾವರಣ ಮನೆಮಾಡಿತ್ತು.ಮಲ್ಲೇಶ್ವರದ ಟಿಟಿಡಿ ದೇವಸ್ಥಾನದಲ್ಲಂತೂ ಸಂಭ್ರಮ ಮುಗಿಲುಮುಟ್ಟಿದೆ. ಇಂದು ಎಲ್ಲಾ ಕಡೆ ವೈಕುಂಠ ಏಕಾದಶಿ ಸಂಭ್ರಮ ಮನೆ ಮಾಡಿದೆ. ಇದು ಭಗವಾನ್ ಮಹಾವಿಷ್ಣು ನಿದ್ರೆಯಿಂದ ಎಚ್ಚರವಾಗಿ ಮುಕ್ಕೋಟಿ ದೇವತೆಗಳಿಗೆ ದರ್ಶನ ಕೊಟ್ಟ ಪುಣ್ಯ ದಿನ. ಆದ್ದರಿಂದ ‘ಮುಕ್ಕೋಟಿ ಏಕಾದಶಿ’ ಎಂದೂ ಕರೆಯುತ್ತಾರೆ.ವೈಕುಂಠ ಏಕಾದಶಿಯನ್ನ ಬೆಂಗಳೂರಿನಲ್ಲೂ ಸಂಭ್ರಮದಿಂದ ಆಚರಿಸಲಾಗುತ್ತದೆ.ವೈಕುಂಠ ಏಕಾದಶಿ ಪ್ರಯುಕ್ತವಾಗಿ ನಗರದ ಮಲ್ಲೇಶ್ವರಂ ನ ಟಿಡಿಡಿ  ದೇವಸ್ಥಾನದ ಸುತ್ತಲೂ ದಕ್ಷಿಣ ಶೈಲಿಯ ಚಪ್ಪರ ಹಾಕಿ ಹೂವಿನಿಂದ ಅಲಾಂಕಾರ ಮಾಡಲಾಗಿದೆ. ಬೆಳಗ್ಗೆ 6 ಗಂಟೆ ಸುಮಾರಿಗೇ ವಿಶೇಷ ಪೂಜೆ ಆರಂಭವಾಗಿದೆ. ವೆಂಕಟೇಶ್ವರನಿಗೆ ಪಂಚಾಭಿಷೇಕ ಮಾಡಿ, ಪುಷ್ಪಾಭಿಷೇಕ ಮಾಡಿ ನಂತರ ವಿಶೇಷ ಅಲಂಕಾರ ಮಾಡಿ ಭಕ್ತದಿಗಳಿಗೆ ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ. ದೇಗುಲಕ್ಕೆ ಬಂದ ಭಕ್ತರಿಗೆ ಪ್ರಸಾದ ವಿತರಣೆ ನಡೆಯಲಿದೆ.…

Read More

ಇತ್ತೀಚಿನ ಅಧ್ಯಯನವು ಹಗಲಿನ ನಿದ್ರೆಯನ್ನು ಒಂದು ನಿರ್ದಿಷ್ಟ ಸಮಯಕ್ಕೆ ಸೀಮಿತಗೊಳಿಸಿದರೆ ಉತ್ತಮ ಎಂದು ಸೂಚಿಸುತ್ತದೆ. ಇದು ಮನುಷ್ಯನಿಗೆ ಉತ್ಸಾಹವನ್ನು ನೀಡುತ್ತದೆ ಎಂದು ತೀರ್ಮಾನಿಸಲಾಗಿದೆ. ತಜ್ಞರು ಸಹ ಈ ಅಧ್ಯಯನವನ್ನು ಒಪ್ಪುತ್ತಾರೆ. ಮಲಗಲು ಸಹ ಸೂಚಿಸಲಾಗುತ್ತದೆ. ಮಧ್ಯಾಹ್ನ ಮಲಗುವುದರಿಂದ ಒತ್ತಡವನ್ನು ನಿವಾರಿಸಬಹುದು. ರಾತ್ರಿಯಲ್ಲಿ ಕೆಲಸ ಮಾಡುವ ಜನರು ಹೆಚ್ಚು ಸಮಯದವರೆಗೆ ಎಚ್ಚರವಾಗಿರುತ್ತಾರೆ. ಅಂತಹ ಜನರು ಒತ್ತಡವನ್ನು ನಿವಾರಿಸಲು ಹಗಲಿನಲ್ಲಿ ಮಲಗುತ್ತಾರೆ. ಒತ್ತಡ ಮತ್ತು ಕೆಲಸದ ಹೊರೆ ಹೆಚ್ಚಾದರೆ, ಹಗಲಿನಲ್ಲಿ ಮಲಗುವ ಆಲೋಚನೆ ಹೆಚ್ಚಾಗುತ್ತದೆ. ಪ್ರತಿ 12 ಗಂಟೆಗಳಿಗೊಮ್ಮೆ ದೇಹದ ಉಷ್ಣತೆಯು ಕಡಿಮೆಯಾಗುತ್ತದೆ. ಅಂತಹ ಸಮಯದಲ್ಲಿ ನೀವು ಕೇವಲ 20 ರಿಂದ 30 ನಿಮಿಷಗಳ ಕಾಲ ಮಲಗಿದರೆ, ನೀವು ಆಯಾಸವನ್ನು ತೊಡೆದುಹಾಕಬಹುದು. ನೀವು ಮನಸ್ಸಿನ ಶಾಂತಿಯನ್ನು ಪಡೆಯಬಹುದು ಎಂದು ತಜ್ಞರು ಹೇಳುತ್ತಾರೆ. ಮಧ್ಯಾಹ್ನ ಸಣ್ಣ ರಾತ್ರಿ ನಿದ್ರೆ ಮಾಡುವುದು ಸಾಮಾನ್ಯ. ಆದರೆ ಹೆಚ್ಚು ಸಮಯ ಮಲಗುವುದು ಆರೋಗ್ಯಕ್ಕೆ ಹಾನಿಕಾರಕ. ಇದು ರಾತ್ರಿಯ ನಿದ್ರೆಯ ಮೇಲೆ ಪರಿಣಾಮ ಬೀರುತ್ತದೆ. ಅದಕ್ಕಾಗಿಯೇ ತಜ್ಞರು ಹಗಲಿನಲ್ಲಿ ಸಾಧ್ಯವಾದಷ್ಟು ನಿದ್ರೆ…

Read More

ಬೆಂಗಳೂರು: ಫೈಟರ್ ರವಿ ಒಂದು ಕಾಲದಲ್ಲಿ ಫೀಲ್ಡಲ್ಲಿ ಹೆಸರು ಮಾಡಿದ್ದ ಆಸಾಮಿ.. ನಾಗಮಂಗಲದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿದ್ದ ಮಲ್ಲಿಕಾರ್ಜುನ ಅಲಿಯಾಸ್ ಫೈಟರ್ ರವಿ ಟಿಕೆಟ್ ಕೈತಪ್ಪಿ ಪಕ್ಷೇತರ ಅಭ್ಯರ್ಥಿಯಾಗಿ‌ ಕಣಕ್ಕಿಳಿದು ಸದ್ದು ಮಾಡಿದ್ದ.. ಇದೀಗ ಐಟಿ ದಾಳಿಯಾಗಿ ಸಿಸಿಬಿಯ ಕೆಂಗಣ್ಣಿಗೂ ಗುರಿಯಾಗಿದ್ದಾರೆ.. ಹೀಗೆ ಮಾತನಾಡುತ್ತಾ ನಿಂತಿರೋ ಇವರ ಹೆಸರು ಬಿಎಂ ಮಲ್ಲಿಕಾರ್ಜುನ.. ಹೀಗಂದ್ರೆ ಇವ್ರು ಯಾರು ಅನ್ನೋದು ಯಾರಿಗೂ ತಿಳಿಯೋದಿಲ್ಲ..  ಫೈಟರ್ ರವಿ ಅಂದ್ರೆನೆ ಎಲ್ಲಾರಿಗೂ ಗೊತ್ತಾಗೊದು.. ರವಿ ಇದೀಗ ಮತ್ತೆ ಸುದ್ದಿಯಲ್ಲಿರೋಕೆ ಕಾರಣ ಮೊನ್ನೆ ಮೊನ್ನೆಯಷ್ಟೇ ತೆರಿಗೆ ವಂಚನೆ ಆರೋಪದ ಮೇಲೆ  ಐಟಿ ಅಧಿಕಾರಿಗಳು ದಾಳಿಯನ್ನು ನಡೆಸಿದ್ದರು.. ಈಗ ಸಿಸಿಬಿಯ ದೃಷ್ಟಿ ಸಹ ಫೈಟರ್ ರವಿ ಮೇಲೆ ಬಿದ್ದಿದ್ದು ಹೈಗ್ರೌಂಡ್ಸ್ ಠಾಣೆಯಲ್ಲಿ ದಾಖಲಾಗಿದ್ದ ಗೋಡಂಬಿ ವ್ಯವಹಾರದ ವಂಚನೆ ಪ್ರಕರಣದಲ್ಲಿ ಸಿಸಿಬಿ ಅಧಿಕಾರಿಗಳು ಗಂಟೆಗಟ್ಟಲೆ ಕಾದು ಫೈಟರ್ ರವಿ ಮನೆಗೆ ಬಂದಾಗ ವಿಚಾರಣೆಗೆ ಹಾಜರಾಗುವಂತೆ ನೊಟೀಸ್ ನೀಡಿದ್ದಾರೆ. ಇನ್ನು ನನ್ನ‌ ಮೇಲೆ ಯಾವ ಪ್ರಕರಣ ದಾಖಲಾಗಿದೆ ಎಂಬುದರ ಮಾಹಿತಿ ತನಗಿಲ್ಲ.  ಸಿಸಿಬಿ…

Read More

ಬೆಂಗಳೂರು: ಬ್ರಿಟಿಷರು ದೇಶ, ರಾಜ್ಯವನ್ನು ವಿಭಜಿಸಿ ಆಳಿದ ಮಾದರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾತಿ, ಧರ್ಮದ ಆಧಾರದಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಮಾಡುತ್ತಿದ್ದಾರೆ; ಇದನ್ನು ಬಿಜೆಪಿ ಖಂಡಿಸುತ್ತದೆ ಎಂದು ಬಿಜೆಪಿ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಅವರು ತಿಳಿಸಿದರು. https://ainlivenews.com/did-cm-siddaramaiah-backfire-on-the-withdrawal-of-hijab-ban-order/ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಹಿಜಾಬ್ ವಿಷಯ ಇದೀಗ ಸುಪ್ರೀಂ ಕೋರ್ಟಿನಲ್ಲಿದೆ. ಇಂಥ ಸಂದರ್ಭದಲ್ಲಿ ಹಿಜಾಬ್‍ಗೆ ಅನುಮತಿ ಕೊಡುವುದು ಎಷ್ಟು ಸರಿ ಎಂದು ಅವರು ಪ್ರಶ್ನಿಸಿದರು. ಈ ವಿಷಯ ಹಿಂದೆ ಬಿಜೆಪಿ ಆಡಳಿತದ ಸಂದರ್ಭದಲ್ಲಿ ಹೈಕೋರ್ಟಿಗೆ ಹೋಗಿ, ಹಿಜಾಬ್ ಬೇಕೇ ಬೇಡವೇ ಎಂಬುದು ಸಾಕಷ್ಟು ಚರ್ಚೆ ಆಗಿತ್ತು. ಹಿಜಾಬ್ ಧರಿಸಬಾರದು; ಸಮವಸ್ತ್ರ ಧರಿಸಿ ಹೋಗಬೇಕೆಂದು ಹೈಕೋರ್ಟಿನ ತೀರ್ಪು ಬಂದಿತ್ತು ಎಂದು ತಿಳಿಸಿದರು. ಆದರೆ, ನಿನ್ನೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತ ವಿದ್ಯಾರ್ಥಿನಿಯರು ಹಿಜಾಬ್ ಧರಿಸಿಕೊಂಡು ಹೋಗಬಹುದು ಎಂದು ಹೇಳಿದ್ದಾರೆ ಎಂದು ಟೀಕಿಸಿದರು. ಎಸ್.ಎಂ.ಕೃಷ್ಣ ಅವರು…

Read More

ಶಿವಮೊಗ್ಗ :- ಹಿಜಾಬ್ ವಿಚಾರವಾಗಿ ಸಿಎಂ ನೀಡಿದ ಹೇಳಿಕೆಯನ್ನು ಸಚಿವ ಮಧು ಬಂಗಾರಪ್ಪ ಸಮರ್ಥಿಸಿಕೊಂಡಿದ್ದಾರೆ. ಸಿಎಂ ಸಿದ್ದರಾಮಯ್ಯ ಹಿಜಾಬ್ ಬಗ್ಗೆ ಮಾತನಾಡಿದ್ದಾರೆ. ಹೃದಯ ಶ್ರೀಮಂತಿಕೆ ತೋರಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಏನು ತೀರ್ಮಾನ ತೆಗೆದುಕೊಳ್ಳುತ್ತಾರೆ ನೋಡೋಣ. ಎಲ್ಲಾ ಧರ್ಮಗಳಿಗೂ ಗೌರವ ಕೊಡಬೇಕು. ಕೋರ್ಟ್ ನಲ್ಲಿ ಏನಿದೆ ನೋಡಿಕೊಂಡು ತೀರ್ಮಾನ ಕೈಗೊಳ್ಳುತ್ತೇವೆ ಎಂದರು. ಬಿಜೆಪಿಯವರಿಗೆ ಚುನಾವಣೆ ಸಂದರ್ಭ ಬಂದಾಗ ಹಿಜಾಬ್ ತರಬೇಕು, ಪಠ್ಯಪುಸ್ತಕ ಪರಿಷ್ಕರಣೆ ಮಾಡಬೇಕು. ನೀವೆಷ್ಟು ಕೀಳು ಮಟ್ಟದಲ್ಲಿ ಮಾತನಾಡ್ತೀರಾ ಅದೆಲ್ಲಾ ನೀವೆ ಎಂದು ತಿರುಗೇಟು ನೀಡಿದರು. ಹಿಜಾಬ್ ವಿಚಾರದಲ್ಲಿ ರಾಜ್ಯದಲ್ಲಿ ಗಲಭೆಯಾದ್ರೆ ಸಿಎಂ ಸಿದ್ದರಾಮಯ್ಯ ಕಾರಣ ಈಶ್ವರಪ್ಪ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಮಧು ಬಂಗಾರಪ್ಪ, ದಂಗೆ ಮಾಡುವವರೇ ಹೀಗೆ ಹೇಳುವುದು. ಕಾನೂನು ಬಹಳ ಗಟ್ಟಿಯಾಗಿದೆ ತಲೆ ಕೆಡಿಸಿಕೊಳ್ಳಲು ಹೋಗಬೇಡಿ. ಎಲ್ಲಾ ಧರ್ಮಗಳಿಗೂ ಗೌರವ ಕೊಡಬೇಕು, ಅದೇ ರೀತಿ ಹಿಜಾಬ್ ಗೂ ಎಂದರು.

Read More

ಬೆಂಗಳೂರು: ಹಿಜಬ್ ನಿಷೇಧ ಆದೇಶ ವಾಪಸ್ ಹೇಳಿಕೆ ನೀಡಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಉಲ್ಟಾ ಹೊಡೆದ್ರಾ ಎಂಬ ಪ್ರಶ್ನೆ ಎದ್ದಿದೆ. ಈ ಸಂಬಂಧ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಹಿಜಬ್ ನಿಷೇಧ (Hijab Ban Withdraw) ಆದೇಶ ವಾಪಸ್‌ಗೆ ಇನ್ನೂ ತೀರ್ಮಾನಿಸಿಲ್ಲ. ಯಾರೋ ಪ್ರಶ್ನೆ ಕೇಳಿದ್ರು. ಆಗ ಆದೇಶ ವಾಪಸ್ಸಿಗೆ ಯೋಚನೆ ಮಾಡ್ತಿದ್ದೀವಿ ಅಂತಷ್ಟೇ ಹೇಳಿದೆ. ಸರ್ಕಾರದ ಮಟ್ಟದಲ್ಲಿ ಚರ್ಚೆ ಮಾಡಿ ತೀರ್ಮಾನಿಸ್ತೀವಿ ಎಂದು ಹೇಳಿದ್ದಾರೆ https://ainlivenews.com/i-tell-school-students-to-come-wearing-a-saffron-shawl-yatnal/ ಈ ಮೂಲಕ ಭಾರೀ ವಿವಾದದ ಬಳಿಕ ಸಿಎಂ ಎಚ್ಚೆತ್ತುಕೊಂಡು ಇಂದು ಹೇಳಿಕೆ ಬದಲಿಸಿದ್ರಾ ಎಂಬ ಪ್ರಶ್ನೆ ಎದ್ದಿದೆ. ಅಲ್ಲದೆ ಪಕ್ಷದ ವೇದಿಕೆಯಲ್ಲಿ ಚರ್ಚೆ ಬಳಿಕ ಹಿಜಬ್ ಬಗ್ಗೆ ತೀರ್ಮಾನ ಮಾಡುತ್ತೇವೆ ಎಂದು ಹೇಳುವ ಮೂಲಕ ಸಿಎಂ ಮತ್ತೊಂದು ವಿವಾದದಲ್ಲಿ ಸಿಲುಕಿದ್ರಾ ಅನ್ನೋ ಅನುಮಾನವೂ ಮೂಡಿದೆ ನಿನ್ನೆ ಮೈಸೂರಿನಲ್ಲಿ ಮಾತನಾಡಿರುವ ಸಿದ್ದರಾಮಯ್ಯ, ಬಿಜೆಪಿ ಸರ್ಕಾರ ಹಿಜಬ್‌ ನಿಷೇಧಿಸಿತ್ತು. ಅದನ್ನು ವಾಪಸ್‌ ಪಡೆಯಲಾಗುವುದು. ಹಿಜಬ್‌ ನಿಷೇಧ ವಾಪಸ್‌ಗೆ ತಿಳಿಸಿದ್ದೇನೆ ಎಂದು ಹೇಳಿದ್ದರು.

Read More

ಇಂದು ಸಂಜೆ ಪ್ರಸಾರವಾಗಬೇಕಿದ್ದ ವಾರದ ಕಥೆ ಕಿಚ್ಚನ ಜೊತೆ ಮತ್ತು ಕಿಚ್ಚನ ಪಂಚಾಯಿತಿ ಪ್ರಸಾರವಾಗುವುದಿಲ್ಲ. ಕಾರಣ ಸುದೀಪ್ ಚಿತ್ರೀಕರಣದಲ್ಲಿ ಭಾಗಿಯಾಗಿಲ್ಲ. ಸುದೀಪ್ ನೇತೃತ್ವದಲ್ಲಿ ನಡೆಯುತ್ತಿರುವ ಕ್ರಿಕೆಟ್ ಪಂದ್ಯಾವಳಿ ಇಂದು ಮತ್ತು ನಾಳೆ ನಡೆಯುತ್ತಿದೆ. ಇಂದು ಅದ್ಧೂರಿಯಾಗಿ ಪಂದ್ಯಕ್ಕೆ ಚಾಲನೆ ಸಿಗಲಿದೆ. ಹೀಗಾಗಿ ಸುದೀಪ್ (sudeep) ಚಿತ್ರೀಕರಣದಲ್ಲಿ ಭಾಗಿಯಾಗಿಲ್ಲ. ಹಾಗಂತ ಇಂದಿನ ಕಾರ್ಯಕ್ರಮವನ್ನು ನೆನಪಿಸುವಂತಹ ಮತ್ತೊಂದು ಏರ್ಪಾಟನ್ನು ಮಾಡಿಕೊಂಡಿದೆ ಬಿಗ್ ಬಾಸ್ (Bigg Boss Kannada) ಟೀಮ್. ಇಂದು ಮನೆಯೊಳಗೆ ಹಿರಿಯ ನಟಿ, ಬಿಗ್ ಬಾಸ್ ವಿನ್ನರ್ ಶ್ರುತಿ ಅವರನ್ನು ಕಳುಹಿಸಿದೆ. ಬೆಳಗ್ಗೆ ಎಲ್ಲ ಸ್ಪರ್ಧಿಗಳೂ ನೋಡುತ್ತಿದ್ದ ಹಾಗೆಯೇ ಮನೆಯ ಮುಖ್ಯದ್ವಾರ ತೆರೆದುಕೊಂಡಿದೆ. ಅದರಿಂದ ಶ್ರುತಿ ಅವರು ಮನೆಯೊಳಗೆ ಪ್ರವೇಶಿಸಿದ್ದಾರೆ. ಎಲ್ಲರೂ ಸಂತೋಷದ ಅಲೆಯಲ್ಲಿ ತೇಲುತ್ತಿರುವ ಹಾಗೆಯೇ ಕಟಕಟೆಯಲ್ಲಿ ನಿಲ್ಲುವ ಗಳಿಗೆ ಎದುರಾಗಿದೆ. ಶ್ರುತಿ ನ್ಯಾಯಾಧೀಶರ ಕುರ್ಚಿಯಲ್ಲಿ ಕೂತಿದ್ದಾರೆ. ಈ ನಡುವೆ ಮತ್ತೋರ್ವ ಅತಿಥಿ ಕೂಡ ಬಿಗ್ ಬಾಸ್ ಮನೆ ಪ್ರವೇಶ ಮಾಡಲಿದ್ದಾರೆ ಎಂದು ಹೇಳಲಾಗಿತ್ತು. ಶ್ರುತಿ ಅವರು ಮನೆಯಿಂದ ಆಚೆ ಬರುತ್ತಿದ್ದಂತೆಯೇ…

Read More