Author: AIN Author

ಬೆಂಗಳೂರು: ಕ್ರಿಸ್ಮಸ್ ಗೆ ಕೇವಲ ಎರಡೇ ದಿನಗಳು ಬಾಕಿ ಉಳಿದಿವೆ. ಕ್ರಿಸ್ಮಸ್ ಅಂದಾಕ್ಷಣ ನೆನಪಾಗೋದು ಕೇಕ್ ಶೋ (Cake Show). ಸಿಲಿಕಾನ್ ಸಿಟಿಯಲ್ಲಿ ಕೇಕ್‍ಗಳ ಲೋಕ ಧರೆಗಿಳಿದಿದ್ದು, ಎಲ್ಲರನ್ನೂ ಕೈ ಬೀಸಿ ಕರೆಯುತ್ತಿವೆ. ಹೌದು. ಕ್ರಿಸ್ಮಸ್ (Christmas) ಹಾಗೂ ನ್ಯೂ ಇಯರ್ (New Year) ಅನ್ನು ಬರ ಮಾಡಿಕೊಳ್ಳೋಕೆ ಬೆಂಗಳೂರಿಗರು ಸಜ್ಜಾಗಿದ್ದಾರೆ. ಕ್ರಿಸ್ಮಸ್ ಹಬ್ಬದ ಅಂದ ತಕ್ಷಣ ಬೆಂಗಳೂರಿಗರಿಗೆ ನೆನಪಾಗೋದು ಕೇಕ್ ಶೋ. ಪ್ರತಿ ವರ್ಷದಂತೆ ಈ ವರ್ಷವೂ ಸಂತ ಜೋಸೆಫ್ ಸ್ಕೂಲ್ ಗ್ರೌಂಡ್ ನ ಆವರಣದಲ್ಲಿ 49ನೇ ವರ್ಷದ ಕೇಕ್ ಶೋ ಆರಂಭವಾಗಿದೆ. ಇನ್ಸ್ಟಿಟ್ಯೂಟ್ ಆಫ್ ಬೇಕಿಂಗ್ ಮತ್ತು ಕೇಕ್ ಆರ್ಟ್ ಸಂಸ್ಥೆಯ ವಿದ್ಯಾರ್ಥಿಗಳು ಕೇಕ್‍ಗೆ ಕಲಾ ರೂಪ ಕೊಟ್ಟಿದ್ದು, ಸುಮಾರು 25 ಕೇಕ್ ನ ಕಲಾಕೃತಿಗಳನ್ನು ನಿರ್ಮಿಸಿದ್ದಾರೆ. ಪ್ರಮುಖವಾಗಿ ಈ ಬಾರಿ ಸರ್ಕಾರದ ಪ್ರಮುಖ ಗ್ಯಾರಂಟಿಯಾದ ಶಕ್ತಿ ಯೋಜನೆ (Shakti Scheme), ಮಹಿಳೆಯರ ಉಚಿತ ಪ್ರಯಾಣದ ಫ್ರೀ ಬಸ್, ಸಂಸತ್ತು ಭವನ, ದುರ್ಗ ದೇವಿ, ಚಂದ್ರಯಾನ (Chandrayaan), ಶಿವಾಜಿ, ಶಾಂಪಿಗ್…

Read More

ಬೆಂಗಳೂರು: ಹಿಜಾಬ್​ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಬೈ. ವಿಜಯೇಂದ್ರ ಕಿಡಿಕಾರಿದರು. ಈ ಕುರಿತು  ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ನಿನ್ನೆ ಸಿಎಂ ಸಿದ್ದರಾಮಯ್ಯ ಬೇಜವಬ್ದಾರಿ ಹೇಳಿಕೆ ನೀಡಿದ್ದಾರೆ. ರಾಜ್ಯದಲ್ಲಿ ಹಿಜಾಬ್ ರದ್ದತಿ ಆದೇಶ ವಾಪಸ್‌ ವಿಚಾರ ಮತ್ತೆ ರಾಜ್ಯದಲ್ಲಿ ಹಿಜಾಬ್ ಗೆ ಅವಕಾಶ ನೀಡೊದಾಗಿ ಹೇಳಿ ಶಿಕ್ಷಣವನ್ನ ಕಲುಷಿತ ಮಾಡೊದಕ್ಕೆ ಸಿಎಂ ಕೈಹಾಕಿರೋದು ದುರಾದೃಷ್ಟಕರ, ಶಾಲೆಗೆ ಹೋಗುವ ಮಕ್ಕಳನ್ನಾದ್ರು ರಾಜಕೀಯದಲ್ಲಿ ಬಳಕೆ ಮಾಡಿಕೊಳ್ಳೊದ್ರಿಂದ ದೂರ ಇಡಬಹುದಾಗಿತ್ತು ಎಂದರು. https://ainlivenews.com/hijab-ban-back-cms-big-trick-lies-behind-this-r-ashok/ ಇದನ್ನ ನಾವು ವಿರೋಧ ವ್ಯಕ್ತಪಡಿಸುತ್ತೇವೆ, ಇವತ್ತಿಗೂ ಶೇ50 ರಷ್ಟು ಅಲ್ಪಸಂಖ್ಯಾತರಿಗೆ ಶಿಕ್ಷಣದಿಂದ ವಂಚಿತರಾಗಿದ್ದಾರೆ ಇದಕ್ಕೆ ಕಾಂಗ್ರೆಸ್ ಪಕ್ಷವೆ ಕಾರಣ ತಾನೆ. ಶೇ 6೦ ರಷ್ಟು ಕೆಲಸವಿಲ್ಲದೆ ಬೇಜವಾಬ್ದಾರಿಯಿಂದ ಓಡಾಡೊದಕ್ಕೆ ಕಾಂಗ್ರೆಸ್ ಕಾರಣ, ಅಲ್ಪಸಂಖ್ಯಾತರನ್ನ ಕೇವಲ‌ ಓಟ್ ಬ್ಯಾಂಕ್ ಗಾಗಿ ಮಾತ್ರ ಬಳಕೆ ಮಾಡಿಕೊಂಡಿದ್ದಾರೆ. ಪ್ರಧಾನಿ ಮೋದಿಯವರು ಅಲ್ಪಸಂಖ್ಯಾತ ಮಹಿಳೆರ ಪರವಾಗಿ ತ್ರಿಪಲ್‌ ತಲಾಕ್ ನಿಷೇಧ ಮಾಡಿದ್ದರು ಕಾಂಗ್ರೆಸ್ ನವರು ಏನ್ ಮಾಡಿದ್ದೀರಿ ಎಂದು…

Read More

ಬೆಳಗಾವಿ:- ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಅವರು ರಾಜ್ಯದಲ್ಲಿ ಹಿಜಾಬ್ ಬ್ಯಾನ್ ವಾಪಸ್ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಬೆಳಗಾವಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯ ಅಧಿಕಾರಕ್ಕೆ ಬಂದಾಗಿನಿಂದ ಮುಸ್ಲಿಂ ತುಷ್ಟೀಕರಣ ಮಾಡ್ತಾರೆ. ಇದು ಹೊಸತೇನು ಅಲ್ಲ, ಈ ಸಲ ಅಧಿಕಾರಕ್ಕೆ ಬಂದಿದ್ದು ಮುಸ್ಲಿಂ ಮತಗಳಿಂದ ಎಂಬುದನ್ನು ಕಾಂಗ್ರೆಸ್ ಪಕ್ಷ ಸ್ಪಷ್ಟವಾಗಿ ಹೇಳಿದೆ. ಬಳಿಕ 10 ಸಾವಿರ ಕೋಟಿ ಕೊಡ್ತಿನಿ ಅಂತ ಹೇಳಿದರು. ನಂತರ ಹಿಜಾಬ್ ಬ್ಯಾನ್ ವಾಪಸ್ ಹೊಸದಲ್ಲ. ಹಿಂದುಗಳ ಮನಸ್ಸಿನಲ್ಲಿ ವಿಷಬೀಜ ಬಿತ್ತಿದ್ದು ದುರಂತ ಎಂದು ಹೇಳಿದರು ಮುಸ್ಲಿಂ ಮಹಿಳೆಯರ ಅಭಿವೃದ್ಧಿ ಮುಖ್ಯ ಎಂದು ಮೋದಿ ಸರ್ಕಾರ ತ್ರೀವಳಿ ತಲಾಕ್ ರದ್ದು ಮಾಡಿತು. ಸಿದ್ದರಾಮಯ್ಯ ನಡೆ ಪ್ರಗತಿಗೆ ವಿರೋಧವಾಗಿದೆ. ಹೋರಾಟವನ್ನು ಯಾರು ಮಾಡಬೇಕಿಲ್ಲ. ಹಿಂದೂಗಳು ಸಹ ಕೇಸರಿ ಶಾಲ್ ಹಾಕಿ ಬಂದ್ರೆ ಯಾರು ತಡೆಯುವಂತೆ ಇಲ್ಲ ಎಂದು ಹೇಳಿದರು. ತರಗತಿಯ ವಾತಾವರಣ ಹಾಳು ಮಾಡೋ ಕೆಲಸವನ್ನು ಸಿದ್ದರಾಮಯ್ಯ ಮಾಡಿದ್ದಾರೆ ಎಂದು ಹೇಳಿದ್ದಾರೆ.

Read More

ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ಕಾಟೇರ’ ಸಿನಿಮಾಗೆ ಯುಎ ಸೆನ್ಸಾರ್ ಸರ್ಟಿಫಿಕೇಟ್ ಸಿಕ್ಕಿದೆ. ಇದೇ ಡಿಸೆಂಬರ್ 29ರಂದು ‘ಕಾಟೇರ’ ಸಿನಿಮಾ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‘ಕಾಟೇರ’ ನೋಡಿ ಸೆನ್ಸಾರ್‌ ಮಂಡಳಿ ಮೆಚ್ಚಿದೆ. ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಮಾಹಿತಿ ಹಂಚಿಕೊಂಡಿರುವ ನಿರ್ದೇಶಕ ತರುಣ್ ಸುಧೀರ್ ಅವರು, ಕಾಟೇರ ಚಿತ್ರಕ್ಕೆ ಸೆನ್ಸಾರ್​ ಮಂಡಳಿ ಯುಎ ಸರ್ಟಿಫಿಕೇಟ್ ನೀಡಿದೆ. ಕನ್ನಡ ಸಿನಿ ಪ್ರೇಕ್ಷಕರು ಹಬ್ಬ ಮಾಡಲು ಸಿದ್ಧರಾಗಿ. ಇದೇ ಡಿಸೆಂಬರ್ 29ರಂದು (ಒಂದು ವಾರ) ನಿಮ್ಮ ‘ಕಾಟೇರ’ ಚಿತ್ರಮಂದಿರಗಳಿಗೆ ಲಗ್ಗೆ ಇಡಲಿದೆ ಎಂದು ಪೋಸ್ಟ್ ಮಾಡಿದ್ದಾರೆ. ‘ಕಾಟೇರ’ ಚಿತ್ರ ಈಗಾಗಲೇ ಎರಡು ಹಾಡು ಹಾಗೂ ಟ್ರೈಲರ್​ ಬಿಡುಗಡೆಯಾಗಿದ್ದು, ಸಿನಿ ಪ್ರೇಕ್ಷಕರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ನಟ ದರ್ಶನ್​ಗೆ ಜೊತೆಯಾಗಿ ಮಾಲಾಶ್ರೀ ಪುತ್ರಿ ಆರಾಧನಾ ಅಭಿನಯಿಸಿದ್ದಾರೆ. ರಾಕ್​ಲೈನ್ ವೆಂಕಟೇಶ್ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಚೌಕ, ರಾಬರ್ಟ್​ ಚಿತ್ರದ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಮತ್ತೊಮ್ಮೆ ದರ್ಶನ್​ಗೆ ಆಕ್ಷನ್​ ಕಟ್ ಹೇಳಿದ್ದಾರೆ. ಇದೇ ಡಿಸೆಂಬರ್ 29ರಂದು ‘ಕಾಟೇರ’…

Read More

ಬೆಂಗಳೂರು: ಸಿಲಿಕಾನ್ ಸಿಟಿ ಹೊಸ ವರ್ಷಾಚರಣೆಗೆ ಸಜ್ಜಾಗುತ್ತಿದ್ದರೆ ಈ ಕಡೆ ಮಾತ್ರ  ಬೆಂಗಳೂರಿನಲ್ಲಿ ಡ್ರಗ್ಸ್ ವಾಸನೆ ತೋರಿಸಲು ಮುಂದಾಗಿದ್ದ ಮೂವರು ಡ್ರಗ್ ಪೆಡ್ಲರ್’ಗಳನ್ನ ಸಿಸಿಬಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ. ಸಿಸಿಬಿಯಿಂದ ಒರ್ವ ವಿದೇಶಿ ಮತ್ತು ಇಬ್ಬರು ಕೇರಳ ಡ್ರಗ್ ಪೆಡ್ಲರ್’ಗಳನ್ನ ಅರೆಸ್ಟ್ ಮಾಡಲಾಗಿದ್ದು  ಜೋಶುಹಾ, ನಿಸಾಮ್, ಅಬ್ದುಲ್ ಅಹದ್ ಬಂಧಿತ ಆರೋಪಿಗಳು ಬಂಧಿತರಿಂದ 52 ಲಕ್ಷ ಮೌಲ್ಯದ ಮಾದಕ ವಸ್ತುಗಳು ವಶಕ್ಕೆ ಪಡೆದಿದ್ದಾರೆ. ಬೇಗೂರು ಮತ್ತು ಕೋರಮಂಗಲ ವ್ಯಾಪ್ತಿಯಲ್ಲಿ ಮಾದಕ ವಸ್ತು ಸಂಗ್ರಹ ಮಾಡಿಕೊಂಡಿದ್ರು  ಖಚಿತ ಮಾಹಿತಿ ಮೇರೆ ದಾಳಿ ನಡೆಸಿ ಆರೋಪಿಗಳು ಹಾಗೂ 86.89 ಗ್ರಾಂ. MDMA, 100 LSD Strips ಸೇರಿದಂತೆ ಅನೇಕ ವಿಧದ ಡ್ರಗ್ಸ್ ವಶಕ್ಕೆ ಪಡೆದಿದ್ದಾರೆ. ಮೂರು ತಿಂಗಳಿಂದ  ಬೆಂಗಳೂರಿನಲ್ಲಿ ವಾಸವಿದ್ದ ವಿದೇಶಿ ಪ್ರಜೆ  ಇಲ್ಲಿ ವಾಸವಿರೋ ಆಫ್ರಿಕಾ ಪ್ರಜೆಗಳಿಂದ ಕಡಿಮೆ ಬೆಲೆಗೆ ಡ್ರಗ್ಸ್ ಖರೀದಿ ಮಾಡಿ ಹೆಚ್ಚು ಬೆಲೆಗೆ ಮಾರಾಟ ಮಾಡ್ತಿದ್ದ  ಉಳಿದ ಇಬ್ಬರು ಕೇರಳ ಡ್ರಗ್ ಪೆಡ್ಲರ್ಗಳು ಸ್ಥಳೀಯ ಪೆಡ್ಲರ್ ನಿಂದ ಖರೀದಿ…

Read More

ತುಮಕೂರು:- ಫೈನಾನ್ಸ್ ನೌಕರರ ಕಿರುಕುಳಕ್ಕೆ ಮನನೊಂದು ಮಹಿಳೆ ಆತ್ಮಹತ್ಯೆ ಮಾಡಿಕೊಂಡ ಘಟನೆ ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಮದ್ಲೇಹಳ್ಳಿಯಲ್ಲಿ ಜರುಗಿದೆ. 36 ವರ್ಷದ ಪುಪ್ಪಲತಾ ಆತ್ಮಹತ್ಯೆ ಮಾಡಿಕೊಂಡ ಮಹಿಳೆ ಎನ್ನಲಾಗಿದೆ. ಪುಷ್ಪಲತಾ ತಿಪಟೂರು ನಗರದಲ್ಲಿರುವ ಬಜಾಜ್ ಫೈನಾನ್ಸ್ ನಿಂದ 90,000 ಸಾಲ ಪಡೆದಿದ್ದ. ಕೊನೆಯ ಕಂತು ಕಟ್ಟಲು ಸ್ವಲ್ಪ ವಿಳಂಬವಾದ ಹಿನ್ನೆಲೆ, ಒಂದು ಕಂತಿಗೆ ಮನೆಯ ಮುಂದೆ ಬಂದು ಫೈನಾನ್ಸ್ ನೌಕರರು ಗಲಾಟೆ ಮಾಡಿದರು. ಹರ್ಷವರ್ಧನ್ ಮತ್ತು ಮತ್ತೊಬ್ಬ ವ್ಯಕ್ತಿಯಿಂದ ಕಿರುಕುಳ ಆರೋಪ ಕೇಳಿ ಬಂದಿದೆ. ಜೀವ ಹೋಗಿದೆ ಎಂದರೂ ಹಣವೇ ಮುಖ್ಯ ಎಂದು ಫೈನಾನ್ಸ್ ನೌಕರರು ಮಾತನಾಡಿದ್ದಾರೆ. ಸತ್ರೆ ಸಾಯ್ತಾರೆ, ನಮ್ಮ ಹಣ ಕೊಡಿ ಎಂದು ಪೈನಾನ್ಸ್ ನೌಕರರು ಹಾವಾಜ್ ಹಾಕಿದ್ದಾರೆ. ಕಿಬ್ಬನಹಳ್ಳಿ ಪೊಲೀಸ್ ಠಾಣೆಗೆ ಪತಿ ಕೃಷ್ಣಕುಮಾರ್ ದೂರು ನೀಡಿದ್ದು, ಕಿಬ್ಬನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಹುಬ್ಬಳ್ಳಿ:- ನಗರದ ಇಸ್ಕಾನ್ ದೇವಸ್ಥಾನದಲ್ಲಿ ವೈಕುಂಠ ಏಕಾದಶಿಯನ್ನು ಅತಿ ವಿಜೃಂಭಣೆಯಿಂದ ಆಚರಿಸಲಾಯಿತು. ಇಸ್ಕಾನ್ ಸಂಸ್ಥೆಯ ಅಧ್ಯಕ್ಷರಾದ ರಾಜೀವ್ ಲೋಚನ್ ದಾಸ್ ಹಾಗೂ ಸರ್ವ ಭಕ್ತರ ಸಮ್ಮುಖದಲ್ಲಿ ಬೆಳಗಿನ ವಿಶೇಷ ಪೂಜೆ ಪ್ರಾರಂಭವಾಯಿತು. ಹೂವಿನ ಅಭಿಷೇಕ ಗಂಧದ ಅಭಿಷೇಕ ಅಲ್ಲದೆ ನೂರಾರು ಭಕ್ತರು ಹೂವಿನ ಅಭಿಷೇಕ ಮಾಡುವ ಮುಖಾಂತರ ವೈಕುಂಠ ಏಕಾದಶಿ ಆಚರಿಸಲಾಯಿತು ರಾಜೀವ್ ಲೋಚನ್ ದಾಸ್ ಅವರ ಮಾತನಾಡಿ, ಏಕಾದಶಿ ವೃತವನ್ನು ವಿಷ್ಣುವಿನ ಭಕ್ತರು ಭಗವಂತನ ನಾಮಸ್ಮರಣೆ, ಜಪ ಹಾಗೂ ಭಕ್ತಿ ಸಂಗೀತದೊಂದಿಗೆ ಆಚರಿಸುತ್ತಾರೆ. ಏಕಾದಶಿಯು ಪೌರ್ಣಿಮೆ ಅಥವಾ ಅಮಾವಾಸ್ಯೆಯ ನಂತರ ಬರುವ ಹನ್ನೊಂದನೆ ದಿನವಾಗಿದ್ದು ತಿಂಗಳಿಗೆ ಎರಡು ಬಾರಿ ಬರುತ್ತದೆ. ಆದರೆ, ಮಾರ್ಗಶೀರ್ಷ ಮಾಸದ ಶುಕ್ಲಪಕ್ಷದಲ್ಲಿ (ಡಿಸೆಂಬರ್-ಜನೇವರಿ) ಬರುವ ಏಕಾದಶಿಯು ಮಹತ್ವದ್ದಾಗಿದ್ದು ವೈಕುಂಠ ಏಕಾದಶಿಯೆಂದು ಕರೆಯಲ್ಪಡುತ್ತದೆ. ಇದು ದಕ್ಷಿಣ ಭಾರತದಾದ್ಯಂತ ವಿಷ್ಣುವಿನ ದೇವಾಲಯಗಳಲ್ಲಿ ಆಚರಿಸಲ್ಪಡುವ ಪ್ರಮುಖ ಹಬ್ಬಗಳಲ್ಲೊಂದಾಗಿದೆ ಎಂದು ಹೇಳಿದರು. ಈ ವಿಶಿಷ್ಟ ದಿನದಂದು ಈ ಬಾಗಿಲನ್ನು ಪ್ರವೇಶ ಮಾಡಿದವರು ಆಧ್ಯಾತ್ಮಿಕ ಉನ್ನತಿಯನ್ನು ಹೊಂದುತ್ತಾರೆಂದು ನಂಬಲಾಗುತ್ತದೆ ಎಂದು ಹೇಳಿದರು. ಭಗವಂತನ…

Read More

ಬೆಂಗಳೂರು:ಹಿಜಾಬ್ ನಿಷೇಧ ವಾಪಸ್ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ದೊಡ್ಡ ಕುತಂತ್ರ ಅಡಗಿದೆ ಎಂದು ಬಿಜೆಪಿ ವಿರೋಧ ಪಕ್ಷದ ನಾಯಕ ಆರ್. ಅಶೋಕ ಹೇಳಿದ್ದಾರೆ. ಈ ಕುರಿತಂತೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಗ್ಯಾರೆಂಟಿಗಳಿಂದ ಬರಿದಾದ ಖಜಾನೆ, ಅನುದಾನಕ್ಕಾಗಿ ಶಾಸಕರ ಒತ್ತಡ, ನಿಗಮ ಮಂಡಳಿ ನೇಮಕಕ್ಕೆ ಸೊಪ್ಪು ಹಾಕದ ಹೈಕಮಾಂಡ್ ಇವೆಲ್ಲದರಿಂದ ತಾವೇ ಸೃಷ್ಟಿಸಿಕೊಂಡ ಚಕ್ರವ್ಯೂಹದಲ್ಲಿ ಸಿಲುಕಿಕೊಂಡಿರುವ ಮುಖ್ಯಮಂತ್ರಿ ಸಿದ್ದಾಮಯ್ಯನವರು ಹಿಜಾಬ್ ವಿಷಯವನ್ನು ಪ್ರಸ್ತಾಪಿಸಿ ಜನರನ್ನು ದಿಕ್ಕು ತಪ್ಪಿಸಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ. https://ainlivenews.com/use-of-children-for-school-toilet-cleaning-how-polluted-minds-are-this-incident-is-witness-hdk-kidi/ ಹಿಜಾಬ್ ನಿಷೇಧ ವಾಪಸ್ ಪಡೆಯುವ ನಿರ್ಧಾರಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೂ ವಿರೋಧ ವ್ಯಕ್ತಪಡಿಸಿದ್ದಾರೆ. ‘ಹಿಜಾಬ್ ನಿಷೇಧ ವಾಪಸ್ ಪಡೆಯುವ ನಿರ್ಧಾರ ಶಿಕ್ಷಣ ಸಂಸ್ಥೆಗಳಲ್ಲಿ ಇರುವ ಜಾತ್ಯತೀತತೆ ಸ್ವರೂಪವನ್ನು ಪ್ರಶ್ನಿಸುವಂತಿದೆ’ ಎಂದು ಅವರು ‘ಎಕ್ಸ್’ನಲ್ಲಿ ಬರೆದುಕೊಂಡಿದ್ದಾರೆ.

Read More

ಹುಬ್ಬಳ್ಳಿ:- ಆನ್‌ಲೈನ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ ಟ್ರೇಡಿಂಗ್ ಖಾತೆ ತೆರೆದು ಹೆಚ್ಚು ಲಾಭ ಗಳಿಸಬಹುದು ಎಂದು ವ್ಯಕ್ತಿಯೊಬ್ಬರನ್ನು ನಂಬಿಸಿ 1.03 ಕೋಟಿ ರೂ. ವಂಚಿಸಿರುವ ಪ್ರಕರಣ ಬೆಳಕಿಗೆ ಬಂದಿದೆ. ಇಲ್ಲಿಯ ಗೋಕುಲ್‌ ರಸ್ತೆಯ ಲಕ್ಷ್ಮೀನಗರದ ಅರುಣ ಗಲಗಲಿ ಎಂಬವರು ವಂಚನೆಗೊಳಗಾದವರು. ಇವರಿಗೆ ಅ.24ರಂದು ಕರೆ ಮಾಡಿದ ಅಪರಿಚಿತ ವ್ಯಕ್ತಿ, ತಾನು ರವಿ ಸಿಂಗ್ ಎಂದು ಟ್ರೇಡನ್ ಫಾರೆಕ್ಸ್ ಟ್ರೋಕರ್ ಎಂದು ಪರಿಚಯಿಸಿಕೊಂಡಿದ್ದಾನೆ. ಬಳಿಕ ಆನ್‌ಲೈನ್ ಟ್ರೇಡಿಂಗ್ ಪ್ಲಾಟ್‌ಫಾರ್ಮ್‌ನಲ್ಲಿ 5 ಸಾವಿರ ರೂ. 4,500 ರೂ. ಸಂದಾಯ ಮಾಡಿದರೆ, ಹೆಚ್ಚು ಹಣ ಗಳಿಸಬಹುದು ಎಂದು ಹೇಳಿದ್ದಾನೆ. ನಂತರ ಕ್ರೆಡಿನಟೈಲ್ ನೀಡಿ ಮಾಹಿತಿ ಬಳಸಿ ಆನ್‌ಲೈನ್ ಅಪ್ಲಿಕೇಶನನಲ್ಲಿ ಖಾತೆ ತೆರೆಯಲು ಹೇಳಿದ್ದಾನೆ. ಇದಾದ ಬಳಿಕ ವ್ಯಾಟ್ಸ್‌ಆ್ಯಪ್‌ ಗೆ ಕರೆ ಮಾಡಿದ ಮತ್ತೊಬ್ಬ ಆನ್‌ಲೈನ್ ಅಪ್ಲಿಕೇಶನ್ ನಲ್ಲಿ ಹಣ ಜಮಾ ಆದಂತೆ ತೋರಿಸಿದ್ದಾನೆ. ಆರಂಭದಲ್ಲಿ ಟ್ರೇಡಿಂಗ್ ಪ್ಲಾಟ್ ಫಾರ್ಮ್‌ನಿಂದ ಹಣ ವಿಥ್‌ಡ್ರಾ ಹೇಗೆ ಮಾಡುವುದು ಎಂದು ತಿಳಿಸಿ ಅರುಣ ಅವರ ಬ್ಯಾಂಕ್ ಖಾತೆಗೆ 2 ಸಾವಿರ ರೂ.…

Read More

ಬೆಂಗಳೂರು: ಅಂದ್ರಹಳ್ಳಿ ಸರಕಾರಿ ಶಾಲೆ ಮಕ್ಕಳಿಂದ ಶೌಚಾಲಯ ಸ್ವಚ್ಚ ಮಾಡಿಸಿದ್ದು, ಮಾಲೂರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ವಿದ್ಯಾರ್ಥಿಗಳನ್ನು ಮಲದ ಗುಂಡಿಗೆ ಇಳಿಸಿದ ಘಟನೆಗಳು ನನಗೆ ತೀವ್ರ ಆಘಾತ ಉಂಟು ಮಾಡಿವೆ ಹಾಗೆ ನಮ್ಮ ವ್ಯವಸ್ಥೆ, ಮನಸ್ಸುಗಳು ಎಷ್ಟು ಮಲೀನವಾಗಿವೆ ಎನ್ನುವುದಕ್ಕೆ ಎರಡೂ ಘಟನೆಗಳು ಸಾಕ್ಷಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರು ಕಿಡಿ ಕಾರಿದ್ದಾರೆ. https://twitter.com/hd_kumaraswamy/status/1738459502922604553?t=s-QMk0wuFySn7BDcOYi2YQ&s=19 ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿರುವ ಅವರು, ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರು ಸೂಕ್ಷ್ಮ ಮನಸ್ಸಿನಿಂದ ವರ್ತಿಸಬೇಕಿತ್ತು. ‘ಆಚಾರ್ಯದೇವೋ ಭವ’ ಎನ್ನುವ ಭಾರತೀಯ ಪರಂಪರೆಯನ್ನು ಅವರೊಮ್ಮೆ ನೆನಪು ಮಾಡಿಕೊಳ್ಳಬೇಕಿತ್ತು. ಆದಾಗ್ಯೂ, ಈ ಎರಡೂ ಘಟನೆಗಳಲ್ಲಿ ಕೇವಲ ಶಿಕ್ಷಕರು, ಪ್ರಾಂಶುಪಾಲರನ್ನೇ ಅಪರಾಧಿ ಸ್ಥಾನದಲ್ಲಿ ನಿಲ್ಲಿಸಿ ಸರಕಾರ ಹೊಣೆಗಾರಿಕೆಯಿಂದ ನುಣುಚಿಕೊಳ್ಳುವುದು ಸರಿಯಲ್ಲ ಸರಕಾರಿ ಶಾಲೆ ಒಂದರ ಸ್ವಚ್ಛತೆ, ಸಂಪೂರ್ಣ ನಿರ್ವಹಣೆ ಸೇರಿ ಸಾದಿಲ್ವಾರು ವೆಚ್ಚಗಳಿಗೆ ಕೊಡುತ್ತಿರುವ ಹಣವೆಷ್ಟು? ಈ ಹಣ ನಿಯಮಿತವಾಗಿ ಬಿಡುಗಡೆ ಆಗುತ್ತಿಲ್ಲ. ನನಗೆ ಬಂದಿರುವ ಮಾಹಿತಿ ಪ್ರಕಾರ ಪ್ರಸಕ್ತ ವರ್ಷ ಈ ಅನುದಾನವನ್ನೇ ಕೊಟ್ಟಿಲ್ಲ.…

Read More