ಟಾಸ್ಕ್ ನಲ್ಲಿ ಗಾಯಗಳಾಗೋದು ಸಹಜ. ಎಷ್ಟೋ ಬಾರಿ ವಿಪರೀತ ಏಟು ಮಾಡಿಕೊಂಡು ಬಿಗ್ ಬಾಸ್ (Bigg Boss Kannada) ಮನೆಯಿಂದ ಆಚೆ ಬಂದವರು ಇದ್ದಾರೆ. ಈ ಸೀಸನ್ ನಲ್ಲಿ ತನಿಷಾ ಏಟು ಮಾಡಿಕೊಂಡು ಆಸ್ಪತ್ರೆ ಪಾಲಾಗಿದ್ದರು. ಹುಷಾರಾಗಿ ಮತ್ತೆ ಮನೆ ಪ್ರವೇಶ ಮಾಡಿದರು. ಮೊನ್ನೆ ಮೊನ್ನೆಯಷ್ಟೇ ಪ್ರತಾಪ್ ಮತ್ತು ಸಂಗೀತಾ ಕೂಡ ಕಣ್ಣಿಗೆ ಕೆಮಿಕಲ್ ನೀರು ಹಾಕಿಸಿಕೊಂಡು ಆಸ್ಪತ್ರೆ ಸೇರಿಕೊಂಡಿದ್ದರು. ನಿನ್ನೆ ನಡೆದ ಟಾಸ್ಕ್ ನಲ್ಲಿ ವಿನಯ್ ಮತ್ತು ಕಾರ್ತಿಕ್ ಇಬ್ಬರೂ ಗಾಯಗೊಂಡಿದ್ದಾರೆ. ಅದರಲ್ಲೂ ವಿನಯ್ ಬೆರಳಿಗೆ ಬಲವಾಗಿಯೇ ಏಟು ಬಿದ್ದಿದೆ. ಟಾಸ್ಕ್ ನಲ್ಲಿ ವಿನಯ್ (Vinay) ಗೌಡ ಸಿಕ್ಕಾಪಟ್ಟೆ ಅಗ್ರೆಸಿವ್ ಆಗಿ ಆಡುತ್ತಾರೆ. ಅವರನ್ನು ಕಂಟ್ರೋಲ್ ಮಾಡೋದು ತುಂಬಾ ಕಷ್ಟ. ಕುಸ್ತಿ ಪಟುವಿನಂತೆ ಸದಾ ಮುಸಿಮುಸಿ ಅನ್ನುತ್ತಲೇ ಇರುತ್ತಾರೆ. ನಿನ್ನೆ ನಡೆದ ಕಲೆ ಒಳ್ಳೆಯದಲ್ಲ ಟಾಸ್ಕ್ ನಲ್ಲೂ ಅವರು ಸಖತ್ ಅಗ್ರೆಸಿವ್ ಆಗಿಯೇ ಆಟವಾಡಿದರು. ಪರಿಣಾಮ ಬೆರಳಿಗೆ ಏಟು ಮಾಡಿಕೊಂಡರು. ಅದಕ್ಕಾಗಿ ಅವರು ಆ ಟಾಸ್ಕ್ ನಿಂದಲೇ ಹೊರ ಬರಬೇಕಾಯಿತು.…
Author: AIN Author
ನವದೆಹಲಿ: ಬ್ರಿಜ್ ಭೂಷಣ್ ಶರಣ್ ಸಿಂಗ್ (Brij Bhushan Sharan Singh) ಆಪ್ತ ಸಂಜಯ್ ಸಿಂಗ್ (Sanjay Singh) ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಅಧ್ಯಕ್ಷರಾಗಿ ಆಯ್ಕೆಯಾಗಿದ್ದನ್ನು ವಿರೋಧಿಸಿ, ಕುಸ್ತಿಪಟು ಬಜರಂಗ್ ಪುನಿಯಾ (Bajrang Punia) ತಮ್ಮ ಪದ್ಮಶ್ರೀ ಪ್ರಶಸ್ತಿಯನ್ನು ಹಿಂದಿರುಗಿಸಿದ್ದಾರೆ. ಸಂಜಯ್ ಸಿಂಗ್ ಆಯ್ಕೆ ವಿರೋಧಿಸಿ ಕುಸ್ತಿಪಟು ಸಾಕ್ಷಿ ಮಲಿಕ್ (Sakshee Mallikh), ಗುರುವಾರ ಕಣ್ಣೀರಿಟ್ಟು ಕುಸ್ತಿಗೆ ವಿದಾಯ ಹೇಳಿದರು. ಇದರ ಬೆನ್ನಲ್ಲೇ ಬಜರಂಗ್ ಪುನಿಯಾ, ಪದ್ಮಶ್ರೀ ಪ್ರಶಸ್ತಿ (Padma Shri) ಹಿಂದಿರುಗಿಸುತ್ತಿರುವುದಾಗಿ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪತ್ರ ಬರೆದಿದ್ದಾರೆ. ‘ನಾನು ನನ್ನ ಪದ್ಮಶ್ರೀ ಪ್ರಶಸ್ತಿಯನ್ನು ಪ್ರಧಾನಿಗೆ ಹಿಂದಿರುಗಿಸುತ್ತಿದ್ದೇನೆ. ಅದನ್ನು ಹೇಳಲು ಈ ಪತ್ರ ಬರೆದಿದ್ದೇನೆ ಎಂದು ಬಜರಂಗ್ ಪುನಿಯಾ ಎಕ್ಸ್ನಲ್ಲಿ ಪೋಸ್ಟ್ ಹಾಕಿದ್ದಾರೆ. https://ainlivenews.com/consuming-okra-is-very-good-for-diabetics-do-you-know-why/ ‘ಎಲ್ಲಿ ಹೋಗಬೇಕು, ಏನು ಮಾಡಬೇಕು ಮತ್ತು ಹೇಗೆ ಬದುಕಬೇಕು ಎಂದು ನನಗೆ ಅರ್ಥವಾಗಲಿಲ್ಲ. ಸರ್ಕಾರ ಮತ್ತು ಜನರು ನನಗೆ ತುಂಬಾ ಗೌರವ ನೀಡಿದರು. ಈ ಗೌರವದ ಹೊರೆಯಲ್ಲಿ ನಾನು ಉಸಿರುಗಟ್ಟುವುದನ್ನು ಮುಂದುವರಿಸಬೇಕೇ?…
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ ಸಂಭವಿಸಿದ್ದು ಅಗ್ನಿ ಅವಘಡಕ್ಕೆ ಸುಟ್ಟು ಕರುಕಲಾದ ಗ್ಯಾರೇಜ್ ಕೆಜಿ ಹಳ್ಳಿಯ ಪಾನಿಕಂ ಚಾಯ್ ಸರ್ಕಲ್ ಬಳಿ ನಡೆದಿರುವ ಘಟನೆಯಾಗಿದೆ. ಬೆಳಗಿನ ಜಾವ ಗ್ಯಾರೇಜ್ ನಲ್ಲಿ ಕಾಣಿಸಿಕೊಂಡ ಬೆಂಕಿ ಆಕಸ್ಮಿಕ ಅಗ್ನಿ ಅವಘಡಕ್ಕೆ ಹೊತ್ತಿಯುರಿದ ಗ್ಯಾರೇಜ್ ಹಾಗೆ ಆ ಬೆಂಕಿಯ ತೀವ್ರತೆಗೆ ಗ್ಯಾರೇಜ್ ನಲ್ಲಿದ್ದ 6 ಮಿನಿ ಟೆಂಪೋ ಕೂಡ ಸುಟ್ಟು ಕರುಕಲಾಗಿವೆ. ಆದರೆ ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲ ಸಂಭವಿಸಿಲ್ಲ ತಕ್ಷಣ ಸ್ಥಳಕ್ಕೆ ಕೆಜಿ ಹಳ್ಳಿ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದು ಅಗ್ನಿ ಶಾಮಕ ತಂಡದಿಂದ ಬೆಂಕಿಯನ್ನು ನಂದಿಸಿದ್ದಾರೆ.
ಹೊಸ ವರ್ಷದ ಮೊದಲ ಮಾಸದಂದು ಸ್ಯಾಂಡಲ್ ವುಡ್ ನ ಬಹು ನಿರೀಕ್ಷಿತ ರೆಟ್ರೋ ಮೂವಿ ರಂಗಸಮುದ್ರ ಬಿಡುಗಡೆಗೆ ಸಿದ್ದವಾಗಿದೆ. ಈಗಾಗಲೆ ಚಿತ್ರದ ಮೂರು ಹಾಡುಗಳು ಜಂಕಾರ್ ಮ್ಯೂಸಿಕ್ ಯುಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಗೊಂಡು ಸಂಗೀತ ಪ್ರಿಯರ ಮನಸ್ಸು ಗೆದ್ದಿವೆ.. ಈಗ ಭಾರತದ ಮುಂಚೂಣಿಯಲ್ಲಿರುವ ಮ್ಯೂಸಿಕ್ ಡೈರೆಕ್ಟರ್, ಪದ್ಮಶ್ರೀ, ರಾಷ್ಟ್ರ ಪ್ರಶಸ್ತಿ ಹಾಗೂ ವಿಶ್ವದ ಅತ್ಯಂತ ಪ್ರಮುಖ ಪ್ರಶಸ್ತಿಯಾದ ಆಸ್ಕರ್ ವಿಜೇತ ಬಾಹುಬಲಿ ಹಾಗೂ ಆರ್.ಆರ್.ಆರ್ ಚಿತ್ರಗಳ ಸಂಗೀತ ಮಾಂತ್ರಿಕ ನಿರ್ದೇಶಕ ಎಮ್.ಎಮ್ ಕೀರವಾಣಿ ಅವರಿಂದ ಚಿತ್ರದಲ್ಲಿ ತಿರುವು ಪಡೆಯುವ ಅದ್ಭುತ ಗೀತೆಯೊಂದನ್ನು ಹಾಡಿಸಿ ಗೀತೆಯನ್ನು ಬಿಡುಗಡೆಗೆಗೊಳಿಸಿದೆ. ಹೌದು ಭಾರತದ ಎಮ್.ಎಮ್ ಕೀರವಾಣಿಯವರು ಹಲವು ದಶಕಗಳ ನಂತರ “ರಂಗಸಮುದ್ರ” ಚಿತ್ರದ ಮೂಲಕ ಕನ್ನಡಕ್ಕೆ ಮರಳಿ ಗೀತೆಯೊಂದಕ್ಕೆ ದನಿಯಾಗಿರುವುದು ಚಿತ್ರತಂಡಕ್ಕೆ ಆತ್ಮವಿಶ್ವಾಸ ಹೆಚ್ಚಿಸಿದಂತಾಗಿದೆ. ಅರ್ಥಾತ್ ಬಾಹುಬಲಿ ಸಂಗೀತ ಮಾಂತ್ರಿಕನ ಬಲ ಸಿಕ್ಕಾಂತಾಗಿದೆ ಎನ್ನುವುದು ಈಗಾಗಲೆ ಗಾಂಧಿನಗರದಲ್ಲಿ ಪ್ರಸ್ತುತ ಪರಸ್ಪರ ಪಿಸುಮಾತಗುತ್ತಿರುವ ಸುದ್ದಿ. ರಂಗಸಮುದ್ರ ಚಿತ್ರದ ನಿರ್ದೇಶಕ ರಾಜ್ ಕುಮಾರ್ ಅಸ್ಕಿ , ಸಾಹಿತಿ ವಾಗೀಶ್…
ವಿಶ್ವಾದ್ಯಂತ ಪ್ರಭಾಸ್ ಅಭಿನಯದ ಸಲಾರ್ ಚಿತ್ರ ಇಂದು ರಿಲೀಸ್ ಆದ ಬಳಿಕ ಪ್ರಭಾಸ್ ಫ್ಯಾನ್ಸ್ ಥಿಯೇಟರ್ಗಳಿಗೆ ಮುಗಿಬೀಳುತ್ತಿದ್ದಾರೆ. ಇದೀಗ ಪ್ರೇಕ್ಷಕರು ಸಲಾರ್ ವಿಮರ್ಶೆಯನ್ನು ಸೋಷಿಯಲ್ ಮೀಡಿಯಾಗಳಲ್ಲಿ ಹಂಚಿಕೊಳ್ಳುತ್ತಿದ್ದಾರೆ. ಪ್ರಶಾಂತ್ ನೀಲ್ ಅವರ ನಿರ್ದೇಶನ ಹಾಗೂ ಪ್ರಭಾಸ್ ಅವರ ಅಭಿನಯಕ್ಕಾಗಿ ಹಾಡಿ ಹೊಗಳುತ್ತಿದ್ದಾರೆ. ವ್ಯಾಪಾರ ತಜ್ಞ ಮನೋಬಾಲಾ ವಿ ಅವರು ಸಲಾರ್ ವಿಮರ್ಶೆಯನ್ನು ಬರೆದು, ಪೃಥ್ವಿರಾಜ್ ಸುಕುಮಾರನ್ ಅವರ ನಟನೆಯನ್ನು ಶ್ಲಾಘಿಸಿದರು. ಮನೋಬಾಲಾ ಅವರು ತಮ್ಮ ಟ್ವೀಟ್ನಲ್ಲಿ ಬರೆದಿದ್ದಾರೆ, ʻʻಪ್ರಭಾಸ್ ದೇವನಾಗಿ ಮಿಂಚಿದ್ದಾರೆ. ಹ್ಯಾಟ್ರಿಕ್ ಬ್ಲಾಕ್ಬಸ್ಟರ್ಗಳನ್ನು ನೀಡಿದ ಬಳಿಕ ಪ್ರಶಾಂತ್ ನೀಲ್ ಈ ಸಿನಿಮಾದೊಂದಿಗೆ ಯಶಸ್ಸನ್ನು ಮುಂದುವರಿಸುವಲ್ಲಿ ಗೆದ್ದಿದ್ದಾರೆ. ವರ್ಧರಾಜ ಮನ್ನಾರ್ ಪಾತ್ರಕ್ಕೆ ಪೃಥ್ವಿರಾಜ್ ಸೂಕ್ತವಾಗಿ ಹೊಂದಿಕೆಯಾಗುತ್ತದೆ. ಜಗಪತಿ ಬಾಬು ಅವರು ತಂದೆಯಾಗಿ ಮಿಂಚಿದ್ದಾರೆ. ಹಿನ್ನೆಲೆ ಧ್ವನಿ ಅದ್ಭುತʼʼಎಂದು ಬರೆದುಕೊಂಡಿದ್ದಾರೆ. ಯಶ್ ಬಾಸ್ ಅತಿಥಿ ಪಾತ್ರ ಅಚ್ಚರಿಯ ಪ್ಯಾಕೇಜ್ ಆಗಿದೆ. ಕ್ಲೈಮ್ಯಾಕ್ಸ್ ಇನ್ನೂ ವಿಶೇಷವಾಗಿಸುತ್ತದೆ, ”ಎಂದು ಇನ್ನೊಬ್ಬರು ಬರೆದುಕೊಂಡಿದ್ದಾರೆ. ಬಾಹುಬಲಿ ನಂತರ ಪ್ರಭಾಸ್ ಈ ಸಿನಿಮಾ ಮೂಲಕ ಅತ್ಯುತ್ತಮ ಅಭಿನಯವನ್ನು ನೀಡಿದ್ದಾರೆ. ಅನೇಕರು…
ದಕ್ಷಿಣ ಭಾರತದ ಹೆಸರಾಂತ ನಟಿ ಸಾಯಿ ಪಲ್ಲವಿ ಉಡುಪಿ (Udupi) ಶ್ರೀ ಕೃಷ್ಣ ಮಠಕ್ಕೆ (Shrikrishna Math) ಭೇಟಿ ನೀಡಿದ್ದಾರೆ. ಖಾಸಗಿ ಕಾರ್ಯದ ನಿಮಿತ್ತ ಉಡುಪಿಗೆ ಬಂದಿರುವ ಅವರು, ಕನಕ ನವಗ್ರಹ ಕಿಂಡಿಯ ಮೂಲಕ ಕೃಷ್ಣ ದೇವರ ದರ್ಶನ ಕೈಗೊಂಡಿದ್ದಾರೆ. ರಥಬೀದಿಯಲ್ಲಿರುವ ಕಾಣಿಯೂರು ಮಠಕ್ಕೆ ತೆರಳಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಅವರಿಂದ ಆಶೀರ್ವಾದ ಪಡೆದಿದ್ದಾರೆ. ಮಠಕ್ಕೆ ಭೇಟಿ ನೀಡಿದ ಸಾಯಿ ಪಲ್ಲವಿ ಅವರನ್ನು ಶ್ರೀ ಕೃಷ್ಣ ಮಠದ ವತಿಯಿಂದ ಗೌರವಿಸಲಾಯಿತು. ಸಾಯಿ ಪಲ್ಲವಿ (Sai pallavi) ಪ್ರತಿಭಾನ್ವಿತ ನಟಿ. ಆದರೆ ಕಳೆದೊಂದು ವರ್ಷದಿಂದ ಸಾಯಿ ಪಲ್ಲವಿ ಅಡ್ರೆಸ್ಗೆ ಇಲ್ಲ. ಗಾರ್ಗಿ ರಿಲೀಸ್ ಆಗಿ ವರ್ಷ ಉರುಳಿದೆ. ಬಳಿಕ ಒಂದೂ ಸಿನಿಮಾ ಬಂದಿಲ್ಲ. ಸಿನಿಮಾ ಘೋಷಣೆಯೂ ಆಗಿಲ್ಲ. ಏನಾಯ್ತು ಸಾಯಿ ಪಲ್ಲವಿ ಬದುಕಲ್ಲಿ? ವಿರಾಟ ಪರ್ವಂ ಇದೊಂದು ಚಿತ್ರಕ್ಕಾಗಿ ಸಾಯಿಪಲ್ಲವಿ ನೀಡಿದ ಸಂದರ್ಶನ ಜೀವನದ ದಿಕ್ಕನ್ನೇ ಬದಲಾಯಿಬಿಡುತ್ತೆ ಅಂತ ಖುದ್ದು ಸಾಯಿಪಲ್ಲವಿ ಅಂದುಕೊಂಡಿರಲಿಲ್ಲ. ಕಾಶ್ಮೀರ್ ಫೈಲ್ಸ್ (The Kashmir Files) ಸಿನಿಮಾದ…
ಭಾರತದಲ್ಲಿ ಪ್ರತಿ ವರ್ಷ ಡಿಸೆಂಬರ್ 23 ರಂದು ರೈತರ ದಿನವನ್ನು ಆಚರಿಸಲಾಗುತ್ತದೆ. ಭಾರತದ ರೈತರ ಕೊಡುಗೆ ಮತ್ತು ಶ್ರಮಕ್ಕೆ ನಮನವನ್ನು ಸಲ್ಲಿಸಲು ದಿನವನ್ನು ವಿಶೇಷವಾಗಿ ಆಚರಣೆ ಮಾಡಲಾಗುತ್ತದೆ. ಈ ದಿನದಂದು, ದೇಶದ ಪ್ರತಿ ರೈತನ ಅದ್ಭುತ ಕೊಡುಗೆಯನ್ನು ನೆನಪಿಸಿಕೊಳ್ಳಲು ಮತ್ತು ಒಗ್ಗೂಡಲು ಈ ಸಮಯ ತುಂಬ ಅವಿಸ್ಮರಣೀಯವಾದದ್ದು. ಮಾಜಿ ಪ್ರಧಾನಿ ಜನ್ಮದಿನದಂದು ರೈತ ದಿನಾಚರಣೆ ಆಚರಣೆ! ನಿಮಗೆ ಗೊತ್ತಾ ಭಾರತದ ಮಾಜಿ ಪ್ರಧಾನಿಯೊಬ್ಬರ ಜನ್ಮ ದಿನದಂದು ರೈತ ದಿನಾಚರಣೆ ಆಚರಿಸುತ್ತಾರೆಂದು? ಹೌದು ಭಾರತದಲ್ಲಿ ಮಾಜಿ ಪ್ರಧಾನಿ ಚೌಧರಿ ಚರಣ್ ಸಿಂಗ್ ಅವರ ಜನ್ಮ ದಿನದಂದು ರೈತ ದಿನಾಚರಣೆ ಆಚರಣೆ ಮಾಡಲಾಗುತ್ತದೆ. ಚೌಧರಿ ಚರಣ್ ಸಿಂಗ್ ಅವರು ದೇಶಾದ್ಯಂತ ರೈತರ ಅನುಕೂಲ ಹಾಗೂ ಕಲ್ಯಾಣಕ್ಕಾಗಿ ಅನೇಕ ರೀತಿಯ ಯೋಜನೆಗಳನ್ನು ಜಾರಿಗೆ ತಂದಿದ್ದರು. ಇದರ ಸ್ಮರಣಾರ್ಥವಾಗಿ ಚೌಧರಿ ಚರಣ್ ಸಿಂಗ್ ಅವರ ಜನ್ಮದಿನವನ್ನು ಭಾರತದಲ್ಲಿ ರೈತರ ದಿನವನ್ನಾಗಿ ಆಚರಿಸಲಾಗುತ್ತದೆ. ಅಷ್ಟೇ ಅಲ್ಲದೆ ಚೌಧರಿ ಚರಣ್ ಸಿಂಗ್ ಅವರು ರೈತರುಗಾಗಿ ಭೂಸಂರಕ್ಷಣಾ ಕಾಯ್ದೆಯನ್ನು ಜಾರಿಗೊಳಿಸುವಲ್ಲಿ ಯಶಸ್ವಿಯಾಗಿದ್ದರು.…
ಬೆಂಗಳೂರು: ಬಿಬಿಎಂಪಿ ಶಾಲೆಗಳು ಇನ್ಮುಂದೆ ಶಿಕ್ಷಣ ಇಲಾಖೆ ಅಧೀನಕ್ಕೆ ನೀಡಲು ಬಿಬಿಎಂಪಿ ನಿರ್ಧಾರ ಮಾಡಿದೆ. ಇಂದು (ಶುಕ್ರವಾರ) ಡಿಸಿಎಂ ಡಿ.ಕೆ.ಶಿವಕುಮಾರ್ (D.K.Shivakumar) ಮತ್ತು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬಿಬಿಎಂಪಿ ಶಾಲೆಗಳನ್ನ ಶಿಕ್ಷಣ ಇಲಾಖೆಗೆ ನೀಡುವ ನಿರ್ಧಾರ ಮಾಡಲಾಯ್ತು. https://ainlivenews.com/hijab-ban-is-out-of-the-question-i-condemn-it-ex-cm-bommai/ ಸಭೆ ಬಳಿಕ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಬಿಎಂಪಿ (BBMP) ಶಾಲೆಗಳನ್ನು ಇನ್ಮುಂದೆ ಶಿಕ್ಷಣ ಇಲಾಖೆ ಸುಪರ್ದಿಗೆ ನೀಡಲು ತೀರ್ಮಾನಿಸಲಾಗಿದೆ. ಪ್ರತಿ ವರ್ಷ ಫಲಿತಾಂಶದಲ್ಲಿ ಬಿಬಿಎಂಪಿ ಶಾಲೆಗಳಲ್ಲಿ ಕುಸಿತ ಕಂಡಿರುವುದನ್ನು ನಾವು ಗಮನಿಸಿದ್ದೇವೆ. ಇದಕ್ಕೆ ಅವಕಾಶ ನೀಡಬಾರದು. ಖಾಸಗಿ ಶಾಲೆಗಳಿಗೆ ಸರಿಸಮನಾಗಿ ಗುಣಮಟ್ಟದ ಶಿಕ್ಷಣ ನೀಡಲು ಈ ತೀರ್ಮಾನ ಮಾಡಲಾಗಿದೆ. ಶಾಲೆಗಳಲ್ಲಿ ಶಿಕ್ಷಣ ನೀಡುವಂತಹ ಜವಾಬ್ದಾರಿಯನ್ನು ಮಾತ್ರ ಶಿಕ್ಷಣ ಇಲಾಖೆಗೆ ನೀಡಲಾಗುತ್ತಿದ್ದು, ಈ ಶಾಲೆಗಳ ಮೂಲಸೌಕರ್ಯಗಳ ಉನ್ನತೀಕರಣ ಹಾಗೂ ನಿರ್ವಹಣೆಯನ್ನು ಬಿಬಿಎಂಪಿಯಿಂದಲೇ ಮಾಡಲಾಗುವುದು. ಶಾಲೆಯ ಜಾಗ, ಕಟ್ಟಡ ನಿರ್ವಹಣೆ ಸೇರಿದಂತೆ ಎಲ್ಲಾ ಮೂಲಭೂತ ಸೌಕರ್ಯವನ್ನು ಪಾಲಿಕೆಯಿಂದಲೇ ನಿರ್ವಹಿಸಲಾಗುವುದು. ಗುಣಮಟ್ಟದ ಶಿಕ್ಷಣ ನೀಡುವ ಜವಾಬ್ದಾರಿಯನ್ನು ಇಲಾಖೆಗೆ ಹಸ್ತಾಂತರಿಸಲಾಗಿದೆ…
ಜೈಪುರ್: ಎರಡು ವರ್ಷಗಳ ಹಿಂದೆ ಬಾರ್ಮರ್ನ ಮಾಜಿ ಶಾಸಕ ಹಾಗೂ ಕಾಂಗ್ರೆಸ್ (Congress) ಮುಖಂಡ ಮೇವರಂ ಜೈನ್ (Mevaram Jain) ಮತ್ತು ಆರ್ಪಿಎಸ್ ಅಧಿಕಾರಿ ಆನಂದ್ ಸಿಂಗ್ ರಾಜಪುರೋಹಿತ್ ಸೇರಿದಂತೆ ಒಂಬತ್ತು ಮಂದಿ ತನ್ನ ಮೇಲೆ ಅತ್ಯಾಚಾರ ನಡೆಸಿದ್ದು, ತನ್ನ ಮಗಳಿಗೂ ಕಿರುಕುಳ ನೀಡಿದ್ದಾರೆ ಎಂದು ಮಹಿಳೆಯೊಬ್ಬಳು ಆರೋಪಿಸಿ ಪ್ರಕರಣ ದಾಖಲಿಸಿದ್ದಾಳೆ. ಆರೋಪಿಗಳು ತನ್ನ ಅಪ್ರಾಪ್ತ ವಯಸ್ಸಿನ ಸ್ನೇಹಿತೆ ಮೇಲೆ ಅತ್ಯಾಚಾರ ಎಸಗಿದ್ದು, ಇತರ ಹುಡುಗಿಯರನ್ನು ತಮ್ಮ ಬಳಿಗೆ ಕರೆತರುವಂತೆ ತನ್ನ ಮೇಲೆ ಒತ್ತಡ ಹೇರಿದ್ದಾನೆ ಎಂದು ಮಹಿಳೆ ನೀಡಿದ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈ ಸಂಬಂಧ ಜೋಧಪುರದ ರಾಜೀವ್ ಗಾಂಧಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಲ್ಲಿ ಇನ್ನಿಬ್ಬರು ಪೊಲೀಸ್ ಅಧಿಕಾರಿಗಳಾದ ಬಾರ್ಮರ್ ಎಸ್ಎಚ್ಒ ಗಂಗಾರಾಮ್ ಖಾವಾ ಮತ್ತು ಸಬ್ ಇನ್ಸ್ಪೆಕ್ಟರ್ ದೌದ್ ಖಾನ್ ಹಾಗೂ ಪ್ರಧಾನ್ ಗಿರ್ಧಾರಿ ಸಿಂಗ್ ಸೋಧಾ ಸೇರಿದ್ದಾರೆ. https://ainlivenews.com/is-eating-garlic-on-an-empty-stomach-good-for-health-here-is-the-answer/ ಎಫ್ಐಆರ್ ನ್ನು ದೃಢೀಕರಿಸಿದ ಎಸ್ಎಚ್ಒ ಶಕೀಲ್ ಅಹ್ಮದ್, ಜೈನ್ ಮತ್ತು ಇತರ 8 ಜನರ ವಿರುದ್ಧ…
ಬೆಂಗಳೂರು: ಹಿಜಾಬ್ ನಿಷೇಧ ವಾಪಸ್ ಬಗ್ಗೆ ಸಿಎಂ ಹೇಳಿಕೆ ವಿಚಾರ ಬಗ್ಗೆ ಮಾಜಿ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಹಿಜಾಬ್ ನಿಷೇಧ ಅನ್ನೋದು ಪ್ರಶ್ನೆಯೇ ಇಲ್ಲ ಎಲ್ಲಿ ಡ್ರೆಸ್ ಕೋಡ್ ಇದ್ಯೋ ಅಲ್ಲಿ ಹಿಜಾಬ್ ಇಲ್ಲ ಹಿಜಾಬ್ ನಿಷೇಧ ಆಗಿಲ್ಲ ಎಲ್ಲ ಮಾರ್ಕೆಟ್ ನಲ್ಲಿ ಹಾಕ್ತಾರೆ,ಅಧಿವೇಶನದಲ್ಲಿ ಹಾಕ್ಕೊಂಡು ಬರ್ತಾರೆ ಈ ಹಿಂದೆ ಇದ್ದ ಡ್ರೆಸ್ ಕೋಡ್ ಇದೆ ಹೈಕೋರ್ಟ್ ನಲ್ಲಿ ಈ ಬಗ್ಗೆ ವಿಚಾರಣೆ ನಡೆದಿದೆ ಸುಪ್ರೀಂ ಕೋರ್ಟ್ ನಲ್ಲಿ ಇಬ್ಬರು ನ್ಯಾಯಾಧೀಶರು ಬೇರೆ ಬೇರೆ ಆದೇಶ ಕೊಟ್ಟಿದ್ದರು ಇದೀಗ ಸುಪ್ರೀಂ ಸಿಜೆ ತ್ರಿಸದಸ್ಯ ಪೀಠ ರಚನೆ ಮಾಡಿದ್ದಾರೆ https://ainlivenews.com/congress-government-is-a-bank-government-yadiyurappa-spark/ ಹಿಜಾಬ್ ನಿಷೇಧ ವಿಷಯವೇ ಇಲ್ಲ ಈ ವಿಚಾರವನ್ನ ಸಿಎಂ ರಾಜಕೀಯ ಮಾಡ್ತಿದ್ದಾರೆ ಇದನ್ನ ನಾನು ಖಂಡಿಸುತ್ತೇನೆ ಬೆಳಗಾವಿ ಅಧಿವೇಶನ ನಡೆಯುವಾಗ ಹುಬ್ಬಳ್ಳಿ ಮುಸ್ಲಿಂ ಸಮಾವೇಶಕ್ಕೆ ಹೋಗಿ ಹತ್ತು ಸಾವಿರ ಕೋಟಿ ಕೊಡ್ತೀನಿ ಎಂದಿದ್ದರು ವಿಷಯಂತರ ಮಾಡಲು ಪ್ರಯತ್ನ ಮೈನಾರಿಟಿ ಓಲೈಕೆ ಮಾಡಲು ಪ್ರಯತ್ನ…