Author: AIN Author

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು ಡಿಸೆಂಬರ್ 2023 ರ ಇಸ್ರೋ ಅಧಿಕೃತ ಅಧಿಸೂಚನೆಯ ಮೂಲಕ ಅಕೌಂಟ್ಸ್ ಆಫೀಸರ್ (ಹಣಕಾಸು) ಪೋಸ್ಟ್‌ಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು 31-Dec-2023 ರಂದು ಅಥವಾ ಮೊದಲು ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ. ISRO ಹುದ್ದೆಯ ಅಧಿಸೂಚನೆ ಸಂಸ್ಥೆಯ ಹೆಸರು: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ISRO) ಹುದ್ದೆಗಳ ಸಂಖ್ಯೆ: 1 ಉದ್ಯೋಗ ಸ್ಥಳ: ಬೆಂಗಳೂರು – ಕರ್ನಾಟಕ ಹುದ್ದೆಯ ಹೆಸರು: ಅಕೌಂಟ್ಸ್ ಆಫೀಸರ್ (ಹಣಕಾಸು) ಸಂಬಳ: ISRO ನಿಯಮಗಳ ಪ್ರಕಾರ ISRO ನೇಮಕಾತಿ 2023 ಅರ್ಹತಾ ವಿವರಗಳು ಶೈಕ್ಷಣಿಕ ಅರ್ಹತೆ: ISRO ಅಧಿಕೃತ ಅಧಿಸೂಚನೆಯ ಪ್ರಕಾರ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ ಪೂರ್ಣಗೊಳಿಸಿರಬೇಕು. ವಯಸ್ಸಿನ ಮಿತಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯ ಗರಿಷ್ಠ…

Read More

ಬೆಳ್ಳುಳ್ಳಿಯು  ಆರೋಗ್ಯಕ್ಕೆ ಪ್ರಯೋಜನಕಾರಿಯಾದ ಹಲವಾರು ಗುಣಗಳನ್ನು ಹೊಂದಿದೆ. ಆದರೆ ಈ ಗುಣಗಳ ಗರಿಷ್ಠ ಪ್ರಯೋಜನವನ್ನು ಪಡೆಯಲು ಬೆಳ್ಳುಳ್ಳಿಯನ್ನು ಸರಿಯಾದ ರೀತಿಯಲ್ಲಿ ಮತ್ತು ಸರಿಯಾದ ಸಮಯದಲ್ಲಿ ತಿನ್ನಬೇಕು. ತಜ್ಞರ ಪ್ರಕಾರ, ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದು ಹೆಚ್ಚು ಪ್ರಯೋಜನಕಾರಿಯಾಗಿದೆ. ಖಾಲಿ ಹೊಟ್ಟೆಯಲ್ಲಿ ಬೆಳ್ಳುಳ್ಳಿ ತಿನ್ನುವುದರಿಂದ ಅದರ ಅಂಶಗಳು ದೇಹದಲ್ಲಿ ಸುಲಭವಾಗಿ ಹೀರಲ್ಪಡುತ್ತವೆ. ಮತ್ತು ಗರಿಷ್ಠ ಪ್ರಯೋಜನವನ್ನು ನೀಡುತ್ತವೆ. ಇದು ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದಲ್ಲದೆ, ಹಲವಾರು ಹೊಟ್ಟೆ ಸಂಬಂಧಿ ಸಮಸ್ಯೆಗಳನ್ನು ನಿವಾರಿಸುತ್ತದೆ ಮತ್ತು ಹೃದಯದ ಆರೋಗ್ಯವನ್ನು ಕಾಪಾಡುತ್ತದೆ. ಆದ್ದರಿಂದ ನೀವು ನಿಮ್ಮ ಆರೋಗ್ಯವನ್ನು ಉತ್ತಮ ರೀತಿಯಲ್ಲಿ ಕಾಪಾಡಿಕೊಳ್ಳಲು ಬಯಸಿದರೆ, ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಒಂದರಿಂದ ಎರಡು ಎಸಳು ಬೆಳ್ಳುಳ್ಳಿಯನ್ನು ತಿನ್ನಿರಿ. ತೂಕ ನಿಯಂತ್ರಿಸಲು ಸಹಕಾರಿ: ಬದಲಾಗುತ್ತಿರುವ ಜೀವನಶೈಲಿಯ ಕಾರಣ ಅನೇಕ ಜನರು ಸ್ಥೂಲಕಾಯತೆ ಅಥವಾ ದೇಹ ತೂಕ ಹೆಚ್ಚಾಗುವಂತಹ ಸಮಸ್ಯೆಯನ್ನು ಎದುರಿಸುತ್ತಿದ್ದಾರೆ. ಹೆಚ್ಚುತ್ತಿರುವ ದೇಹ ತೂಕದಿಂದ ನೀವು ಸಹ ತೊಂದರೆಗೊಳಗಾಗಿದ್ದರೆ, ಬೆಳಗ್ಗೆ ಎದ್ದ ನಂತರ ಖಾಲಿ ಹೊಟ್ಟೆಯಲ್ಲಿ ಹಸಿ ಬೆಳ್ಳುಳ್ಳಿಯನ್ನು ಸೇವಿಸಿ.…

Read More

ಅನಂತರದ ಮೋಕ್ಷದ ಏಕಾದಶಿ ಸೂರ್ಯೋದಯ: 06.38 AM, ಸೂರ್ಯಾಸ್ತ : 06.00 PM ಮಾರ್ಗಶಿರ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಏಕಾದಶಿ 07:11 AM ತನಕ ನಂತರ ದ್ವಾದಶಿ ನಕ್ಷತ್ರ: ಇವತ್ತು ಭರಣಿ 09:19 PM ತನಕ ನಂತರ ಕೃತ್ತಿಕ ಯೋಗ: ಇವತ್ತು ಶಿವ 09:08 AM ತನಕ ನಂತರ ಸಿದ್ದಿ ಕರಣ: ಇವತ್ತು ವಿಷ್ಟಿ 07:11 AM ತನಕ ನಂತರ ಬವ 06:45 PM ತನಕ ನಂತರ ಬಾಲವ ರಾಹು ಕಾಲ: 09:00 ನಿಂದ10:30 ವರೆಗೂ ಯಮಗಂಡ: 01:30 ನಿಂದ 03:00 ವರೆಗೂ ಗುಳಿಕ ಕಾಲ: 06:00 ನಿಂದ 07:30 ವರೆಗೂ ಅಮೃತಕಾಲ: 04.34 PM to 06.09 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:53 ನಿಂದ ಮ.12:36 ವರೆಗೂ ಮೇಷ: ಬಹುದಿನದಿಂದ ಪ್ರಯತ್ನಿಸಿದ ವರ್ಗಾವಣೆ ಮತ್ತು ಪ್ರಮೋಷನ್‌ಕ್ಕಾಗಿ ಇಂದು ಸಫಲತೆ ಕಾಣಲಿದೆ, ಮೇಲಾಧಿಕಾರಿಗಳು ನಿಮಗೆ ಹೆಚ್ಚಿನ ಒತ್ತಡ ಹಾಕಲಿದ್ದಾರೆ, ಒತ್ತಡದ ಕೆಲಸದಿಂದ ನಿಮ್ಮ ಹೃದಯಕ್ಕೆ…

Read More

ಬೆಂಗಳೂರು:- B.Ed ವ್ಯಾಸಂಗಕ್ಕಾಗಿ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ ಹೊರ ಬಿದ್ದಿದೆ. 2023-24ನೇ ಸಾಲಿನ ಬಿ.ಇಡಿ ಕೋರ್ಸಿಗೆ ದಾಖಲಾತಿಗಾಗಿ ಕಾಲೇಜುಗಳ Option Entry ಬದಲಾವಣೆಗೆ ಅವಕಾಶ ನೀಡಲಾಗಿದೆ. ಅಭ್ಯರ್ಥಿಗಳು ಆನ್‌ಲೈನ್ ಅರ್ಜಿಯಲ್ಲಿ ಆಯ್ಕೆ ಮಾಡಿಕೊಂಡಿರುವ ಕಾಲೇಜುಗಳ ಆಧ್ಯತೆಯ ಬದಲಾವಣೆಗೆ ದಿನಾಂಕ:22/12/2023 ರಿಂದ 24/12/2023ರ ಸಂಜೆ 6.00 ಗಂಟೆಯವರೆಗೆ ಅವಕಾಶ ಕಲ್ಪಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಆನ್‌ಲೈನ್ ಅರ್ಜಿಯಲ್ಲಿ ಲಾಗಿನ್ ಆಗುವುದರ ಮೂಲಕ ಕಾಲೇಜುಗಳ ಆದ್ಯತೆಯನ್ನು ಬದಲಾಯಿಸಿಕೊಳ್ಳಬಹುದಾಗಿದೆ

Read More

ಚಳಿಗಾಲದಲ್ಲಿ ಸಾಮಾನ್ಯ ಸಮಸ್ಯೆ ಎಂದರೆ ಕೆಮ್ಮು. ಕೆಮ್ಮು ಒಮ್ಮೆ ಪ್ರಾರಂಭವಾದರೆ ನಿಮ್ಮ ದೈನಂದಿನ ಚಟುವಟಿಕೆಗಳ ಜೊತೆಗೆ ನಿದ್ದೆಗೂ ಅಡ್ಡಿಯುಂಟು ಮಾಡುತ್ತದೆ. ಇದರಿಂದಾಗಿ ಆಯಂಟಿಬಯೋಟಿಕ್‌ಗಳನ್ನು ಅವಲಂಬಿಸುವ ಬದಲು ಈ ಸಿಂಪಲ್​​ ಮನೆಮದ್ದುಗಳನ್ನು ಟ್ರೈ ಮಾಡಿ. ಕೆಮ್ಮು ಮತ್ತು ನೋಯುತ್ತಿರುವ ಗಂಟಲಿಗೆ ಜೇನುತುಪ್ಪವು ಉತ್ತಮ ಮನೆಮದ್ದು. ಚಳಿಗಾಲದಲ್ಲಿ ದೇಹವನ್ನು ಆರೋಗ್ಯವಾಗಿಡಲು ಜೇನುತುಪ್ಪವನ್ನು ವರ್ಷಗಳಿಂದ ಬಳಸಲಾಗುತ್ತಿದೆ. ಆದ್ದರಿಂದ ನೀವೂ ಕೂಡ ಒಣ ಕೆಮ್ಮಿನ ಸಮಸ್ಯೆಯಿಂದ ಬಳಲುತ್ತಿದ್ದರೆ ಜೇನುತುಪ್ಪದೊಂದಿಗೆ ತುಳಸಿ ಎಲೆಯನ್ನು ಸೇವಿಸಿ. ಇದರಿಂದ ಗಂಟಲು ನೋವಿನ ಸಮಸ್ಯೆ ನಿವಾರಣೆಯಾಗುತ್ತದೆ ಮತ್ತು ದೇಹವೂ ಆರೋಗ್ಯವಾಗಿರುತ್ತದೆ. ಇದಲ್ಲದೇ ಜೇನುತುಪ್ಪದೊಂದಿಗೆ ಈರುಳ್ಳಿ ರಸವನ್ನು ಬೆರೆಸಿ ಸೇವಿಸುವುದು ಉತ್ತಮ. ಈರುಳ್ಳಿಯಲ್ಲಿ ಕ್ವೆರ್ಸೆಟಿನ್ ಸಮೃದ್ಧವಾಗಿದ್ದು, ಇದರೊಂದಿಗೆ ಜೇನುತುಪ್ಪವನ್ನು ಬೆರೆಸಿದಾಗ ಅದು ಉತ್ತಮವಾಗಿ ಕಾರ್ಯನಿರ್ವಹಿಸುತ್ತದೆ. ಒಂದು ಜಾರ್​​ನಲ್ಲಿ ಜೇನುತುಪ್ಪವನ್ನು ಹಾಕಿ. ಈಗ ಅದಕ್ಕೆ 2 ಚಮಚ ಈರುಳ್ಳಿಯ ರಸ ಸೇರಿಸಿ. ಚೆನ್ನಾಗಿ ಅಲ್ಲಾಡಿಸಿ ಮತ್ತು 5-6 ಗಂಟೆಗಳ ಕಾಲ ಮುಚ್ಚಿಡಿ ಅಥವಾ ರಾತ್ರಿಯಿಡೀ ಹೀಗೆ ಇಡಬಹುದು. ಈಗ ಈ ಮಿಶ್ರಣವನ್ನು ದಿನಕ್ಕೆ 2 ಚಮಚ…

Read More

ಮಧುಮೇಹಿಗಳಿಗಾಗಿಯೇ ಹೊಸ ತಳಿ ಅಕ್ಕಿ ಬಂದಿದ್ದು, ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಪ್ರಯೋಗ ಮಾಡಲಾಗಿದೆ. ಇದರ ಕಂಪ್ಲೀಟ್ ಡೀಟೈಲ್ಸ್ ತಿಳಿಯಲು ಸುದ್ದಿ ಮಿಸ್ ಮಾಡ್ದೆ ಓದಿ. ಬಿಳಿ ಅಕ್ಕಿ ಅನ್ನ ಕಂಡರೆ ಭಯಬೀಳುವ ಮಧುಮೇಹಿಗಳಿಗಾಗಿ ಸಕ್ಕರೆ ಅಂಶ ಕಡಿಮೆ ಇರುವ ಭತ್ತವನ್ನು ಈಗ ರಾಜ್ಯದ ರೈತರು ಬೆಳೆಯಲು ಆರಂಭಿಸಿದ್ದಾರೆ. ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ‘ಆರ್‌ಎನ್‌ಆರ್–15048’ ಎಂಬ ಭತ್ತದ ತಳಿಯನ್ನು ಪರಿಚಯಿಸಲಾಗಿದೆ. ಸೋನಾ ಮಸೂರಿ ಸೇರಿದಂತೆ ಇತರೆ ಅಕ್ಕಿಗಳಿಗೆ ಹೋಲಿಸಿದರೆ ಈ ಅಕ್ಕಿ ಕಡಿಮೆ ‘ಗ್ಲೈಸಿಮಿಕ್ ಇಂಡೆಕ್ಸ್’ (ಜಿ.ಐ–ಕಾರ್ಬೋಹೈಡ್ರೇಟ್‌ ಹೊಂದಿರುವ ಆಹಾರಗಳಿಗೆ ರೇಟಿಂಗ್) ಹೊಂದಿದೆ. ಇತರ ತಳಿಯ ಅಕ್ಕಿ ಸಾಮಾನ್ಯವಾಗಿ ಶೇ 56.5ರಷ್ಟು ಜಿ.ಐ ಹೊಂದಿದ್ದರೆ, ಈ ತಳಿಯ ಅಕ್ಕಿ ಶೇ 51.5ರಷ್ಟು ಹೊಂದಿದೆ. ರಾಗಿ ಹಾಗೂ ಸಿರಿ ಧಾನ್ಯಗಳ ರೀತಿಯಲ್ಲಿಯೇ ಆರ್‌ಎನ್‌ಆರ್–15048 ಭತ್ತದ ತಳಿಯ ಅಕ್ಕಿಯು ನಿಧಾನವಾಗಿ ದೇಹಕ್ಕೆ ಸಕ್ಕರೆ ಅಂಶ ಬಿಡುಗಡೆ ಮಾಡುವ ವಿಶೇಷ ಗುಣ ಹೊಂದಿದೆ. ಆರ್‌ಎನ್‌ಆರ್ ತಳಿಯ ಭತ್ತದಿಂದ ತಯಾರಿಸಿದ ಅಕ್ಕಿಯು ಸೋನಾ ಮಸೂರಿಯಂತೆ ಗಾತ್ರದಲ್ಲಿ…

Read More

ರಾಯಬಾಗ :-ತಾಲೂಕೀನ ಅಳಗವಾಡಿ ಗ್ರಾಮದ ಹೊರವಲಯದ ಕೆನಾಲ ಕಾಲೂವೆಗೆ ಬಿದ್ದು ಬೈಕ್ ಸವಾರ ಸ್ಥಳದಲ್ಲಿ ಸಾವು ಅವನ ಜೋತೆಗೆ ಇದ್ದವರು ಸುಮಾರ ೫ ರಿಂದ ೬ ಅಡಿ ಆಳದ ಕಾಲೂವೆಗೆ ಇಳಿದು ಬಿದ್ದಿದ ಬೈಕ್‌ನ್ನು ಎತ್ತಿಕೊಂಡು ಯಾರ ಕಣ್ಣಿಗೆ ಕಾಣದಂತೆ ಪರಾರಿಯಾಗಿದ್ದಾರೆ. ಮೃತ ಬೈಕ್ ಸವಾರ ಅಜೀತ ಮಾಂಗ (೨೩) ಉಗಾರ ಗ್ರಾಮದ ಯುವಕ ಚಿಕ್ಕನಿಂದಲು ಅಳಗವಾಡಿ ಗ್ರಾಮದ ತನ್ನ ಸೊದರ ಮಾವನ ಮನೆಯಲ್ಲೆ ಕೂಲಿ ಕೆಲಸ ಮಾಡಿಕೊಂಡು ಇದ್ದ, ಬುಧವಾರ ರಾಯಬಾಗ ಶಾಸಕ ಡಿ.ಎಂ ಐಹೋಳೆ ಇವರ ಸಹೋದರನ ತೋಟದಲ್ಲಿ ಶ್ರೀ ಯಲ್ಲಮ್ಮಾದೇವಿ ಜಾತ್ರೆ ನಿಮಿತ್ಯ ಉತ್ತರ ಕರ್ನಾಟಕ ಜಾನಪದ ಕಲಾವಿದ ಪರಶು ಕೋಲ್ಲುರ ಇವರು ರಸಮಂಜರಿ ಕಾರ್ಯಕ್ರಮ ನೋಡಿಕೊಂಡು ಬರುವಾಗ ಈ ಅವಗಡ ಸಂಭವಿಸಿದೆ, ಈ ಘಟನೆ ಹಾರೂಗೇರಿ ಪೋಲಿಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ ಹಾರೂಗೇರಿ ಪೋಲಿಸ್ ಠಾಣೆಯ ಸಿ.ಪಿ.ಆಯ್ ರವಿಚಂದ್ರ ಡಿಬಿ ಬೆಳಗ್ಗೆ ಸ್ಥಳಕ್ಕೆ ಬಂದು ಸ್ಥಳ ಪರಶೀಲನೆ ಮಾಡಿ ಪ್ರಕರಣ ದಾಖಲಿಸಿಕೊಂಡು. ಬೈಕ್‌ನೊಂದಿಗೆ ಪಾರಿಯಾದವರಿಗೆ ಪೊಲಿಸರು…

Read More

ನವದೆಹಲಿ:- ಸಂಸದರ ಮನವಿ ಮೇರೆಗೆ ಅಮಾನತು ಮಾಡಲಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಸಂಸತ್ತಿನ ಚಳಿಗಾಲದ ಅಧಿವೇಶನದಿಂದ ಅಮಾನತು ಮಾಡುವಂತೆ ಕೆಲ ಸಂಸದರು ಅವರಾಗಿಯೇ ಮನವಿ ಮಾಡಿದ್ದರು’ ಎಂದರು. ಅಷ್ಟೊಂದು ಸಂಸದರನ್ನು ಅಮಾನತುಗೊಳಿಸುವ ಉದ್ದೇಶ ಸರ್ಕಾರಕ್ಕೆ ಇರಲಿಲ್ಲ. ಆದರೆ ಅಶಿಸ್ತಿಗಾಗಿ ಕೆಲವು ಸಂಸದರನ್ನು ಅಮಾನತು ಮಾಡಿದಾಗ, ಆ ಪಕ್ಷಗಳ ಇತರ ಸದಸ್ಯರು ತಮ್ಮನ್ನೂ ಅಮಾನತು ಮಾಡುವಂತೆ ಮನವಿ ಮಾಡಿಕೊಂಡರು. ಕಾಂಗ್ರೆಸ್‌ ಪಕ್ಷ ಯಾವ ಮಟ್ಟಕ್ಕೂ ಇಳಿಯಲು ಸಿದ್ಧ’ ಎಂದು ಕಿಡಿಕಾರಿದರು. ‘ಭಿತ್ತಿಪತ್ರಗಳನ್ನು ತಂದು ಅಶಿಸ್ತು ತೋರುವವರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಲಾಗಿತ್ತು. ಆದರೂ ಅಶಿಸ್ತು ತೋರಿದರು. ಅಮಾನತು ಆಗಬೇಕೆಂಬುದೇ ಅವರ ಉದ್ದೇಶವಾಗಿತ್ತು’ ಎಂದರು. ಚಳಿಗಾಲದ ಅಧಿವೇಶನದಲ್ಲಿ ಲೋಕಸಭೆಯ 100 ಮತ್ತು ರಾಜ್ಯಸಭೆಯ 46 ಸಂಸದರು ಸೇರಿ ಒಟ್ಟು 146 ಮಂದಿಯನ್ನು ಅಮಾನತು ಮಾಡಲಾಗಿದೆ ಎಂದರು.

Read More

ಬೆಂಗಳೂರು:- ಆರು ಬಾರಿ ಜೈಲಿಗೆ ಹೋಗಿ ಬಂದ್ರೂ ಬುದ್ದಿ ಕಲಿಯದ ಪಿಂಪ್ ನನ್ನು ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ವೇಶ್ಯವಾಟಿಕೆ ಜಾಲ ಮುಂದುವರೆಸಿದ್ದ ಮಂಜುನಾಥ್ ನನ್ನು ಗೂಂಡಾ ಕಾಯ್ದೆಯಡಿ ಬಂಧಿಸಲಾಗಿದೆ. ಆರೋಪಿಯು, ಹುಳಿಮಾವು, ಮಡಿವಾಳ, ಪುಟ್ಟೇನಹಳ್ಳಿ, ಮೈಕೊ ಲೇಔಟ್, ಸುದ್ದುಗುಂಟೆಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಗಳಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ. ಉದ್ಯೋಗ ಅರಸಿ ಬೆಂಗಳೂರಿಗೆ ಬರುವ ಹೊರರಾಜ್ಯದ ಯುವತಿಯರು ಇವನು ಟಾರ್ಗೆಟ್ ಮಾಡುತ್ತಿದ್ದ. ಯುವತಿಯರನ್ನ ಕೆಲಸದ ಆಮಿಷವೊಡ್ಡಿ ಮಾನವ ಕಳ್ಳಸಾಗಾಣಿಕೆ ಮಾಡಿ ದಂಧೆಗೆ ನೂಕುತ್ತಿದ್ದ. ಯುವತಿಯರನ್ನ ಲಾಡ್ಜ್, ಬಾಡಿಗೆ ಮನೆಗಳಲ್ಲಿ ಇರಿಸಿಕೊಂಡು ದಂಧೆ ಮಾಡುತ್ತಿದ್ದ. ಆರೋಪಿ ವಿರುದ್ಧ ಈ ಮುನ್ನ ವಿವಿಧ ಠಾಣೆಗಳಲ್ಲಿ 7 ಪ್ರಕರಣ ದಾಖಲಾಗಿತ್ತು. ಜಾಮೀನು ಪಡೆದು ಮತ್ತೆ ವೇಶಾವ್ಯಾಟಿಕೆ ಜಾಲದಲ್ಲಿ ಆರೋಪಿ ತೊಡಗಿಸಿಕೊಂಡಿದ್ದ. ಈ ಹಿನ್ನೆಲೆ ಗೂಂಡಾ ಕಾಯ್ದೆಯಡಿ ಸಿಸಿಬಿ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

Read More

ಹುಬ್ಬಳ್ಳಿ :- ಡಿ. 23, 24 ರಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾ ಅಧಿವೇಶನ ನಡೆಯಲಿದೆ. ಇದೇ ಡಿಸೆಂಬರ್ 23 ಮತ್ತು 24 ರಂದು ದಾವಣಗೆರೆಯಲ್ಲಿ ನಡೆಯಲಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ 24ನೇ ರಾಷ್ಟ್ರೀಯ ಮಹಾ ಅಧಿವೇಶನಕ್ಕೆ ಜಿಲ್ಲೆಯಾದ್ಯಂತ ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸಿ ಮಹಾ ಅಧಿವೇಶನದ ಯಶಸ್ವಿಗೆ ತಮ್ಮ ಉಪಸ್ಥಿತಿ ಬಹಳ ಮಹತ್ವವಾದುದು. ಎರಡು ದಿನಗಳ ಕಾಲ ನಡೆಯಲಿರುವ ಐತಿಹಾಸಿಕ ಸಮ್ಮೇಳನದಲ್ಲಿ ಸಮಾಜದ ಸಮಸ್ಯೆಗಳ ಬೆಳಕ ಚೆಲ್ಲುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಮೇಲೆ ಹಕ್ಕುತ್ತಾಯ ಹಾಗೂ ಹಲವಾರು ನಿರ್ಣಯಗಳನ್ನು ಕೈಗೊಳ್ಳುತ್ತಿದ್ದು. ಹೆಚ್ಚಿನ ಸಂಖ್ಯೆಯಲ್ಲಿ ಸಮಾಜ ಬಾಂಧವರು ಭಾಗವಹಿಸಬೇಕೆಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ರಾಜ್ಯ ಘಟಕದ ಪೋಷಕರು ಸಮಾಜದ ಮುಖಂಡರಾದ ಸದಾನಂದ ವಿ ಡಂಗನವರ ವಿನಂತಿ ಮಾಡಿಕೊಂಡಿದ್ದಾರೆ.

Read More