ಬೆಂಗಳೂರು:- ನಗರದ ಟಿ.ಸಿ. ಪಾಳ್ಯ ಜಂಕ್ಷನ್ ಬಳಿ ಸಂಚಾರ ದಟ್ಟಣೆ ನಿವಾರಿಸಲು ಪ್ರಾಯೋಗಿಕವಾಗಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ ಎಂದು ನಗರ ಸಂಚಾರಿ ಪೊಲೀಸರು ತಿಳಿಸಿದ್ದಾರೆ. ಟಿ.ಸಿ. ಪಾಳ್ಯದ ಕಡೆಯಿಂದ ಬೆಂಗಳೂರು ನಗರದ ಕಡೆಗೆ ಸಂಚರಿಸುವವರು ಒ.ಎಂ. ರಸ್ತೆ ಮಾರ್ಗವಾಗಿ ಭಟ್ಟರಹಳ್ಳಿ ಸಿಗ್ನಲ್ನಲ್ಲಿ ತಿರುವು ಪಡೆದು ಮುಂದಕ್ಕೆ ಸಂಚರಿಸಬೇಕು. ಹೊಸಕೋಟೆ ಕಡೆಯಿಂದ ಟಿಸಿ ಪಾಳ್ಯ ಕಡೆಗೆ ಸಂಚರಿಸುವವರು ಕೆಆರ್ ಪುರ ಸರ್ಕಾರಿ ಕಾಲೇಜು ಜಂಕ್ಷನ್ ಬಳಿ ತಿರುವು ಪಡೆದುಕೊಳ್ಳಬೇಕು. ಮೇಡಹಳ್ಳಿ ಕಡೆಯಿಂದ ಟಿಸಿ ಪಾಳ್ಯ ಕಡೆಗೆ ಸರ್ವಿಸ್ ರಸ್ತೆಯಲ್ಲಿ ಬರುವ ವಾಹನ ಸವಾರರು ಟಿಸಿ ಪಾಳ್ಯ ಜಂಕ್ಷನ್ಗಿಂತ ಮೊದಲು ಸಿಗುವ ಮೀಡಿಯನ್ ಓಪನ್ ಬಳಿ ಬಂದು ಒಎಂ ರಸ್ತೆ ಮೂಲಕ ಮುಂದಕ್ಕೆ ಚಲಿಸಬೇಕು ಎಂದು ಸಂಚಾರ ಪೊಲೀಸರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Author: AIN Author
ಪೀಣ್ಯ ದಾಸರಹಳ್ಳಿ:- ನಾಗಸಂದ್ರ ಮೆಟ್ರೊ ಸ್ಟೇಷನ್ ಬಳಿಯ ರಸ್ತೆಯು ದಿಢೀರ್ ಕುಸಿತಗೊಂಡಿದ್ದು, ಕಳಪೆ ಕಾಮಗಾರಿಗೆ ಮತ್ತೊಂದು ನಿದರ್ಶನವಾಗಿದೆ. ಐದು ದಿನಗಳ ಹಿಂದೆ ಭಾರಿ ವಾಹನವೊಂದು ಈ ದಾರಿಯಲ್ಲಿ ಚಲಿಸಿದ ಮೇಲೆ ರಸ್ತೆ ಕುಸಿದಿದೆ. ಡಾಂಬರು ಸಹಿತ ಕುಸಿದಿದೆ. ಇವತ್ತಿನವರೆಗೂ ಅದನ್ನು ದುರಸ್ತಿ ಮಾಡಿಲ್ಲ. ಬದಲಿಗೆ, ಗುಂಡಿಯ ಸುತ್ತ, ಕಲ್ಲು ಇಟ್ಟು, ದಾರ ಕಟ್ಟಲಾಗಿದೆ. ಇದರಿಂದ ಮೆಟ್ರೊ ರೈಲು ನಿಲ್ದಾಣಕ್ಕೆ ಬಂದು ಹೋಗುವವರಿಗೆ ತುಂಬಾ ತೊಂದರೆಯಾಗುತ್ತಿದೆ. ‘ನೀರಿನ ಸಂಪರ್ಕಕ್ಕಾಗಿ ಪೈಪ್ ಅಳವಡಿಸಲು ಈ ಭಾಗದಲ್ಲಿ ಗುಂಡಿ ತೆಗೆದಿದ್ದು, ಕಾಮಗಾರಿ ಮುಗಿದ ಮೇಲೆ ಸಮರ್ಪಕವಾಗಿ ಮುಚ್ಚಿ ರಸ್ತೆ ಮಾಡದ ಕಾರಣ, ಹೀಗೆ ಗುಂಡಿ ಬಿದ್ದಿದದೆ. ಬಿಡಬ್ಲ್ಯುಎಸ್ಎಸ್ಬಿ ಅಧಿಕಾರಿಗಳು ಗುಂಡಿ ಮುಚ್ಚದೇ ನಿರ್ಲಕ್ಷ್ಯವಹಿಸಿದ್ದಾರೆ’ ಎಂದು ಸ್ಥಳೀಯರು ವ್ಯಕ್ತಪಡಿಸುತ್ತಿದ್ದಾರೆ. ಮೆಟ್ರೊ ನಿಲ್ದಾಣದ ಮುಂಭಾಗದಲ್ಲಿ ನೀರಿನ ಪೈಪ್ ಒಡೆದಿತ್ತು. ಅದನ್ನು ಸರಿಪಡಿಸಿದ್ದೇವೆ. ಪೈಪ್ ಅನ್ನು ಇನ್ನೊಂದು ಕಡೆಗೆ ನೇರ ಸಂಪರ್ಕ ಕಲ್ಪಿಸಬೇಕು. ಅದಕ್ಕಾಗಿ ಹಾಗೆ ಬಿಟ್ಟಿದ್ದೇವೆ. ಶೀಘ್ರವೇ ಗುಂಡಿಯನ್ನು ಮುಚ್ಚಿ ಸರಿಪಡಿಸುತ್ತೇವೆ’ ಎಂದು ಜಲಮಂಡಳಿ ಎಂಜಿನಿಯರ್ ನಾಗರಾಜ್ ಹೇಳಿದ್ದಾರೆ.
IPL 2024 ಹರಾಜು, ಮಾರಾಟವಾದ ಮತ್ತು ಮಾರಾಟವಾಗದ ಆಟಗಾರರ ಸಂಪೂರ್ಣ ಪಟ್ಟಿ: ಆಸ್ಟ್ರೇಲಿಯಾದ ನಾಯಕ ಪ್ಯಾಟ್ ಕಮ್ಮಿನ್ಸ್ ಹರಾಜು ಕೋಷ್ಟಕವನ್ನು ಸಾಕಷ್ಟು ನಿರೀಕ್ಷಿತವಾಗಿ ಬೆಂಕಿ ಹಚ್ಚಿದರು. ವೇಗದ ಬೌಲಿಂಗ್ ಆಲ್ರೌಂಡರ್ ಅವರನ್ನು ಎಸ್ಆರ್ಹೆಚ್ ₹20.5 ಕೋಟಿಗೆ ಪಡೆದುಕೊಂಡಿತು, ಐಪಿಎಲ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡರು. ನ್ಯೂಜಿಲೆಂಡ್ನ ಆಲ್ರೌಂಡರ್ ಡೇರಿಲ್ ಮಿಚೆಲ್ ₹ 14 ಕೋಟಿಗೆ ಹತ್ತಿರವಾಗಿದ್ದಾರೆ. ಅವರನ್ನು ಸಿಎಸ್ಕೆ ಆಯ್ಕೆ ಮಾಡಲಾಯಿತು. ₹ 11.75 ಕೋಟಿಗೆ ಖರೀದಿಸಿದ ಹರ್ಷಲ್ ಪಟೇಲ್ಗೆ ಪಿಬಿಕೆಎಸ್ ಬ್ಯಾಂಕ್ ಒಡೆಯಿತು. ಎರಡನೇ ಸೆಟ್ನಲ್ಲಿ ಶಾರ್ದೂಲ್ ಠಾಕೂರ್ (₹ 4 ಕೋಟಿ) ಮತ್ತು ರಚಿನ್ ರವೀಂದ್ರ (1.8 ಕೋಟಿ) ಅವರನ್ನು ಆಯ್ಕೆ ಮಾಡಿದ ಸಿಎಸ್ಕೆ ಆಲ್ರೌಂಡರ್ಗಳೊಂದಿಗೆ ಸಿಲುಕಿಕೊಂಡಿತು. ರಾಜಸ್ಥಾನ ರಾಯಲ್ಸ್ ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ನಡುವಿನ ಬಿಡ್ಡಿಂಗ್ ಯುದ್ಧದ ನಂತರ ವೆಸ್ಟ್ ಇಂಡೀಸ್ ಟಿ20 ನಾಯಕ ರೋವ್ಮನ್ ಪೊವೆಲ್ ಆರ್ಆರ್ಗೆ ₹ 7.40 ಕೋಟಿಗೆ ಮಾರಾಟವಾದರು. ₹1 ಕೋಟಿ ಮೂಲ ಬೆಲೆ ಹೊಂದಿದ್ದ ಪೊವೆಲ್, ಐಪಿಎಲ್…
ಬೆಂಗಳೂರು:- ಜಾತಿಗಣತಿ ಅನುಮಾನದ ಬಗ್ಗೆ ಸಿಎಂ ಗೆ ತಿಳಿಸಿದ್ದೇವೆ ಎಂದು ಸಚಿವ ಈಶ್ವರ್ ಖಂಡ್ರೆ ಹೇಳಿದ್ದಾರೆ. ಜಾತಿ ಗಣತಿಗೆ ತಾವು ವಿರೋಧವಿಲ್ಲ, ಆದರೆ ಹಿಂದೆ ನಡೆದ ಗಣತಿ ವೇಳೆ ಎಲ್ಲರ ಮನೆಗಳಿಗೆ ಹೋಗಿಲ್ಲ, ಸರಿಯಾಗಿ ಸಮೀಕ್ಷೆ ನಡೆದಿಲ್ಲ ಎಂಬ ದೂರುಗಳು ಇವೆ. 7 ವರ್ಷಗಳ ಹಿಂದೆ ನಡೆದ ಗಣತಿ ಬಗ್ಗೆ ನಮ್ಮ ಅನುಮಾನವಿದೆ. ಹಾಗಾಗಿ ಹೊಸದಾಗಿ ಜಾತಿ ಗಣತಿ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಲಾಗಿದೆ ಎಂದರು. ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜಾತಿ ಗಣತಿ ನಡೆಯಬೇಕು. ಅವಕಾಶ ವಂಚಿತರಿಗೆ ಹೆಚ್ಚಿನ ಅನುಕೂಲ ದೊರೆಯಬೇಕು ಎಂದು ಹೇಳಿದ್ದಾರೆ. ಈ ವಿಷಯದಲ್ಲಿ ನಮ್ಮ ಸಹಮತ ಇದೆ. ಆದರೆ ಏಳು ವರ್ಷಗಳ ಹಿಂದೆ ನಡೆದ ಗಣತಿ ಬಗ್ಗೆ ಅನುಮಾನ ಇದೆ. ಮನೆ ಮನೆಗಳಿಗೆ ಭೇಟಿ ನೀಡಿ ಗಣತಿ ಮಾಡಿಲ್ಲ ಎಂಬ ದೂರುಗಳು ಇವೆ. ಕೆಲವರು ಸರ್ಕಾರಿ ಸೌಲಭ್ಯಕ್ಕಾಗಿ ಜಾತಿ ಬಳಕೆ ಮಾಡುತ್ತಿದ್ದಾರೆ. ನಡೆದಿರುವ ಜಾತಿ ಗಣತಿಯ ಕುರಿತು ಇರುವ ಅನುಮಾನಗಳನ್ನು…
ನವದೆಹಲಿ:- ಬರ ಪರಿಹಾರ ಅಮಿತ್ ಷಾ ಜತೆ ಚರ್ಚೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯಗೆ ಪ್ರಧಾನಿ ಮೋದಿ ಭರವಸೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಬರ ಪರಿಹಾರ ಮನವಿಗೆ ಸಂಬಂಧಿಸಿ ಕೇಂದ್ರ ಗೃಹ ಸಚಿವ ಅಮಿತ್ ಷಾ ಜತೆ ಮಾತುಕತೆ ನಡೆಸಿ, ಸೂಕ್ತ ಕ್ರಮಕ್ಕೆ ಸೂಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ಸಂಸತ್ ಭವನದಲ್ಲಿ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರೊಂದಿಗೆ ಪ್ರಧಾನಿಯನ್ನು ಸಿದ್ದರಾಮಯ್ಯ ಭೇಟಿ ಮಾಡಿ, ರಾಜ್ಯದ ಬರ ಪರಿಸ್ಥಿತಿ ಮತ್ತು ಪರಿಹಾರ ಕೋರಿ ಸಲ್ಲಿಸಲಾಗಿರುವ ಮನವಿ ಬಗ್ಗೆ ಗಮನಸೆಳೆದಾಗ ಪಿಎಂ ಈ ಪ್ರತಿಕ್ರಿಯೆ ನೀಡಿದ್ದಾರೆ. ಬುಧವಾರ ಬೆಳಗ್ಗೆ ಅಮಿತ್ ಷಾ ಭೇಟಿಗೂ ಸಮಯ ಸಿಕ್ಕಿದ್ದು, ಬರ ಪರಿಹಾರದ ಬಗ್ಗೆ ಶೀಘ್ರ ಕ್ರಮ ಕೈಗೊಂಡು, ಹಣ ಬಿಡುಗಡೆಗೆ ಸಿಎಂ ಒತ್ತಾಯಿಸಲಿದ್ದಾರೆ. ಪ್ರಧಾನಿ ಭೇಟಿ ಬಳಿಕ ಸುದ್ದಿಗಾರರ ಜತೆ ಮಾಹಿತಿ ಹಂಚಿಕೊಂಡ ಸಿದ್ದರಾಮಯ್ಯ, ಅಮಿತ್ ಷಾ ನೇತೃತ್ವದ ಹೈ ಪವರ್ ಸಮಿತಿ ಸಭೆಯನ್ನು ತುರ್ತಾಗಿ…
ಆಧುನಿಕ ಜೀವನದ ಅವಿಭಾಜ್ಯ ಅಂಗವಾದ ಟೆಲಿವಿಶನ್ ಅನ್ನು ಮನೆಯಲ್ಲಿ ಯಾವ ಕೋಣೆಯ, ಯಾವ ದಿಕ್ಕಿನಲ್ಲಿಡಬೇಕು ಎಂಬುದೂ ವಾಸ್ತು ಶಾಸ್ತ್ರದ ಪ್ರಕಾರ ಮುಖ್ಯವಾಗಿದೆ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಎಲ್ಲೆಂದರಲ್ಲಿ ಟಿವಿ ಹಾಕುವುದರಿಂದ ವಾಸ್ತು ದೋಷ ಉಂಟಾಗುತ್ತದೆ. ಇದರಿಂದ ಮನೆ ಮಾಲೀಕರು ಹಲವು ಸಮಸ್ಯೆಗಳನ್ನು ಎದುರಿಸುವಂತಾಗಿ, ತೀವ್ರ ಆರ್ಥಿಕ ನಷ್ಟ ಅನುಭವಿಸುತ್ತಾರೆ ಎನ್ನಬಹುದು. ಹಾಗಿದ್ದರೆ ಮನೆಯಲ್ಲಿ ಟಿವಿಯನ್ನು ಯಾವ ದಿಕ್ಕಿನಲ್ಲಿ ಇಡಬೇಕು ಎಂಬುದನ್ನು ಇಲ್ಲಿ ತಿಳಿಯೋಣ. ವಾಸ್ತು ಶಾಸ್ತ್ರದ ಪ್ರಕಾರ ಮನೆಯಲ್ಲಿ ಟಿ.ವಿ ಇಡಲು ಆಗ್ನೇಯ ಅಥವಾ ಪೂರ್ವ ದಿಕ್ಕು ಸರಿಯಾದ ದಿಕ್ಕು. ಈ ದಿಕ್ಕಿನಲ್ಲಿ ಟಿ.ವಿಯನ್ನು ಇಡುವುದು ಮಂಗಳಕರವೆಂದು ಪರಿಗಣಿಸಲಾಗುತ್ತದೆ. ಇದರಿಂದ ಧನಾತ್ಮಕ ಶಕ್ತಿಯು ಮನೆಗೆ ಪ್ರವೇಶಿಸುತ್ತದೆ ಎಂದು ನಂಬಲಾಗಿದೆ. ವಾಸ್ತು ಪ್ರಕಾರ ಟಿ.ವಿ ನೋಡುವಾಗ ಪೂರ್ವಕ್ಕೆ ಮುಖ ಮಾಡಬೇಕು. ಅಲ್ಲದೆ, ಮನೆಯ ಪ್ರವೇಶದ್ವಾರದ ಮುಂದೆ ಟಿವಿಯನ್ನು ಎಂದಿಗೂ ಇಡಬೇಡಿ ಎಂಬುದನ್ನ ನೆನಪಿಡಿ. ಈ ರೀತಿ ಮಾಡುವುದರಿಂದ ಮನೆಯಲ್ಲಿ ಸದಾ ಜಗಳ ನಡೆದು, ಕುಟುಂಬ ಸದಸ್ಯರ ನಡುವೆ ಕಲಹದ ವಾತಾವರಣ ನಿರ್ಮಾಣವಾಗುತ್ತದೆ.…
ಬೆಂಗಳೂರು:- ರಾಜಧಾನಿ ಬೆಂಗಳೂರಿನಲ್ಲಿ ಬೈಕ್ ಕಳ್ಳರ ಹಾವಳಿ ಹೆಚ್ಚಾಗಿದೆ. ಮನೆ ಮುಂಭಾಗದ ರಸ್ತೆಯಲ್ಲಿ ನಿಲ್ಲಿಸಿದ್ದ ಬೈಕ್ ಗಳನ್ನೇ ಟಾರ್ಗೆಟ್ ಮಾಡಿ ಕಳ್ಳತನ ಮಾಡುತ್ತಿದ್ದಾರೆ. ಅದರಂತೆ ನಿನ್ನೆ ತಡರಾತ್ರಿ ಯಲಹಂಕದಲ್ಲಿ ಕವಿತಾ ಎಂಬುವರ ಬೈಕ್ ಕಳ್ಳತನವಾಗಿದ್ದು, ಬೈಕ್ ಕಳ್ಳತನದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮುಖಕ್ಕೆ ಕರ್ಚೀಪ್ ಕಟ್ಟಿಕೊಂಡು ಬಂದಿದ್ದ ಅಸಾಮಿಯಿಂದ ಕೃತ್ಯ ಎಸಗಲಾಗಿದೆ. ಯಲಹಂಕ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ ಜರುಗಿದೆ.
ಸೂರ್ಯೋದಯ: 06.36 AM, ಸೂರ್ಯಾಸ್ತ : 05.58 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಅಷ್ಟಮಿ 11:14 AM ತನಕ ನಂತರ ನವಮಿ ನಕ್ಷತ್ರ: ಇವತ್ತು ಪೂರ್ವಾ ಭಾದ್ರ 12:02 AM ತನಕ ನಂತರ ಉತ್ತರಾ ಭಾದ್ರ 10:58 PM ತನಕ ನಂತರ ರೇವತಿ ಯೋಗ: ಇವತ್ತು ವ್ಯತೀಪಾತ 03:57 PM ತನಕ ನಂತರ ವರಿಯಾನ್ ಕರಣ: ಇವತ್ತು ವಿಷ್ಟಿ 12:08 AM ತನಕ ನಂತರ ಬವ 11:14 AM ತನಕ ನಂತರ ಬಾಲವ 10:23 PM ತನಕ ನಂತರ ಕೌಲವ ರಾಹು ಕಾಲ: 12:00 ನಿಂದ 01:30 ವರೆಗೂ ಯಮಗಂಡ:07:30 ನಿಂದ 09:00 ವರೆಗೂ ಗುಳಿಕ ಕಾಲ: 10:30 ನಿಂದ 12:00 ವರೆಗೂ ಅಮೃತಕಾಲ: 06.23 PM to 07.54 PM ಅಭಿಜಿತ್ ಮುಹುರ್ತ: 0: ನಿಂದ 0: ವರೆಗೂ ಸೋಮಶೇಖರ್B.Sc ವಂಶಪಾರಂಪರಿತ ಜ್ಯೋತಿಷ್ಯರು,…
ಬೆಂಗಳೂರು:- ಶಾಲೆ ಸಮಯ ಬದಲಾಗದು ಎಂದು ಹೈಕೋರ್ಟ್ಗೆ ರಾಜ್ಯ ಸರ್ಕಾರ ವರದಿ ಸಲ್ಲಿಸಿದೆ. ಬೆಂಗಳೂರು ನಗರ ವ್ಯಾಪ್ತಿಯಲ್ಲಿ ವಾಹನ ಸಂಚಾರ ದಟ್ಟಣೆ ನಿಯಂತ್ರಿಸುವ ಸಲುವಾಗಿ ಶಾಲಾ-ಕಾಲೇಜು ಮತ್ತು ಕಾರ್ಖಾನೆಗಳ ಸಮಯ ಬದಲಾವಣೆ ಮಾಡುವ ಕುರಿತು ಹೈಕೋರ್ಟ್ ಸಲಹೆ ನೀಡಿತ್ತು. ಇದಕ್ಕೆ ಬಂಧಿಸಿದಂತೆ ರಾಜ್ಯ ಸರಕಾರ ಶಾಲಾ ಸಮಯ ಬದಲಾವಣೆ ಮಾಡಲು ಆಗುವುದಿಲ್ಲ ಎಂದು ಹೈಕೋರ್ಟ್ಗೆ ವರದಿ ನೀಡಿದೆ. ಬಳ್ಳಾರಿ ರಸ್ತೆ ವಿಸ್ತರಣೆ ಕುರಿತಂತೆ ಸಮರ್ಪಣಾ ಸಾಂಸ್ಕೃತಿಕ ಮತ್ತು ಸಮಾಜ ಸೇವಾ ಸಂಘಟನೆ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ನ್ಯಾಯಪೀಠವು ವಿಚಾರಣೆ ನಡೆಸಿತು. ಬೆಂಗಳೂರು ನಗರದ ವಾಹನದಟ್ಟಣೆಯು ಕೇವಲ ಶಾಲಾ ಸಮಯದ ಕಾರಣದಿಂದ ಆಗಿರುವುದಿಲ್ಲ.ಸಂಚಾರದಟ್ಟಣೆಯ ಒಟ್ಟಾರೆ ವಾಹನಗಳ ಬಳಕೆ ವಿವಿಧ ಕಚೇರಿಗಳು, ಕೈಗಾರಿಕೆಗಳು ಮತ್ತು ಇತರೆ ಸ್ಥಳಗಳಿಗೆ ತೆರಳುವ ವಾಹನಗಳಿಂದ ಉಂಟಾಗುತ್ತದೆ ಎಂದು ಸರಕಾರ ಹೈಕೋರ್ಟ್ಗೆ ತಿಳಿಸಿದೆ. ವಾಹನದಟ್ಟಣೆಯನ್ನು ತಪ್ಪಿಸಲು ಶಾಲೆಗಳನ್ನು ಬೇಗನೆ ಆರಂಭಿಸಿದಲ್ಲಿ ಮಕ್ಕಳಿಗೆ ನಿದ್ರೆ, ಊಟ, ಉಪಚಾರ ನಿಗದಿತ ವೇಳೆಯಲ್ಲಿ ಆಗದೆ ಪ್ರತಿಕೂಲ ಪರಿಣಾಮ ಉಂಟಾಗುತ್ತದೆ. ಹೀಗಾಗಿ,…
ನವದೆಹಲಿ :- ಲೋಕಸಭೆಯ ಭದ್ರತಾ ವೈಫಲ್ಯಕ್ಕೆ ವಿಪಕ್ಷದ ಬೆಂಬಲವಿದೆ ಎಂದು PM ನರೇಂದ್ರ ಮೋದಿ ಹೇಳಿದ್ದಾರೆ. ಭದ್ರತಾ ವೈಫಲ್ಯ ಘಟನೆಗೆ ರಾಜಕೀಯ ಬಣ್ಣ ನೀಡುವ ಮೂಲಕ ಈಚಿನ ವಿಧಾನಸಭೆ ಚುನಾವಣಾ ಸೋಲಿನ ಹತಾಶೆಯನ್ನು ವಿಪಕ್ಷಗಳು ಹೊರಹಾಕುತ್ತಿವೆ. ವಿರೋಧ ಪಕ್ಷಗಳ ಗುರಿಯು ನಮ್ಮ ಸರ್ಕಾರವನ್ನು ಕೆಳಗಿಳಿಸುವುದಾಗಿದೆ. ಆದರೆ ನಮ್ಮ ಸರ್ಕಾರದ ಗುರಿಯು ದೇಶಕ್ಕೆ ಉಜ್ವಲ ಭವಿಷ್ಯ ಖಾತ್ರಿಪಡಿಸುವುದಾಗಿದೆ’ ಎಂದು ಹೇಳಿದರು. ‘ಸಂಸತ್ತಿನ ಭದ್ರತಾ ವೈಫಲ್ಯವನ್ನು ಸಮರ್ಥಿಸಿಕೊಳ್ಳುವ ಕೆಲಸ ನಡೆಯುತ್ತಿದೆ. ಇದು ಭದ್ರತಾ ವೈಫಲ್ಯದಷ್ಟೇ ಗಂಭೀರ ಸಮಸ್ಯೆ’ ಎಂದು ಮೋದಿ ಹೇಳಿರುವುದಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಅವರು ತಿಳಿಸಿದರು. ನಿರುದ್ಯೋಗ, ಬೆಲೆ ಏರಿಕೆಯು ಸಂಸತ್ತಿನ ಭದ್ರತಾ ವೈಫಲ್ಯಕ್ಕೆ ಕಾರಣ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಈಚೆಗೆ ಆರೋಪಿಸಿದ್ದರು. ಈ ಹೇಳಿಕೆ ಹಿನ್ನೆಲೆಯಲ್ಲಿ ಮೋದಿ ಅವರು ಹೀಗೆ ಹೇಳಿದ್ದಾರೆ. ಪ್ರಜಾಪ್ರಭುತ್ವ ಮತ್ತು ಪ್ರಜಾಪ್ರಭುತ್ವದ ಮೌಲ್ಯಗಳಲ್ಲಿ ನಂಬಿಕೆ ಇರಿಸಿರುವ ಎಲ್ಲರೂ ಭದ್ರತಾ ವೈಫಲ್ಯ ಕೃತ್ಯವನ್ನು ಖಂಡಿಸಬೇಕು ಎಂದಿದ್ದಾರೆ.