Author: AIN Author

ಕಾರವಾರ: ಕೋವಿಡ್ ಅರ್ಭಟ ಯಾಕೋ ನಿಲ್ಲವ ಲಕ್ಷಣ ಕಾಣ್ತಿಲ್ಲ.ಅಲೆಗಳ ಮೇಲೆ ಅಲೆಗಳು ಬಂದು ಈಗಾಗಲೇ ಜನರನ್ನ ಹಿಂಡಿ ಹಿಪ್ಪೆ  ಮಾಡಿರೋ ಈ ಕ್ರೂರಿ ಇದೀಗ ಮತ್ತಷ್ಟು ಆತಂಕ  ಹುಟ್ಟಿಸಿದೆ. ಕೇರಳದಲ್ಲಿ ಕಾಣಿಸಿಕೊಂಡಿರೋ ಹೆಮ್ಮಾರಿ ಭೀತಿ ರಾಜ್ಯಕ್ಕೂ ತಟ್ಟಿದ್ದು, ಆರೋಗ್ಯ ಇಲಾಖೆ ಅಲರ್ಟ್‌ ಆಗಿದೆ. ಆದ್ರೆ ಇದೀಗ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಗೂ ಕೊರೊನಾ ಸೋಂಕು ಕಾಲಿಟ್ಟಿದೆ. ಕಾರವಾರ ತಾಲೂಕಿನ ಸದಾಶಿವಗಡ ಗ್ರಾಮದ ಯುವಕನಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ. ಗೋವಾದಿಂದ ಕಾರವಾರಕ್ಕೆ ಬಂದಿದ್ದ ಯುವಕನೋರ್ವನಲ್ಲಿ ಕಳೆದ 15 ದಿನಗಳ ಹಿಂದೆ ಸೋಂಕು ಪತ್ತೆಯಾಗಿದ್ದು, https://ainlivenews.com/dont-eat-eggplant-because-of-this-health-problem/ ಈಗ ಆರ್‌ಟಿಪಿಸಿಆರ್ ರಿಪೋರ್ಟ್ ನೆಗೆಟಿವ್ ಬಂದಿದೆ. ಒಟ್ಟು 15ರಿಂದ 20 ಜನರಲ್ಲಿ ಕೆಮ್ಮು, ನೆಗಡಿ ಹಾಗೂ ಜ್ವರ ಕಾಣಿಸಿಕೊಂಡಿತ್ತು. ಒಂದೇ ಕುಟುಂಬದ ಸದಸ್ಯರಲ್ಲಿ ಕೊರೊನಾ ಲಕ್ಷಣಗಳು ಕಾಣಿಸಿಕೊಂಡಿದ್ದು, ಲಸಿಕೆ ಪಡೆದ ಹಿನ್ನೆಲೆ ಕೇವಲ 3ರಿಂದ 4 ದಿನಗಳಲ್ಲಿ ಪೂರ್ತಿ ಗುಣಮುಖರಾಗಿದ್ದಾರೆ. ಚಳಿಗಾಲದ ಹಿನ್ನೆಲೆ ಹೆಚ್ಚು ಜನರಲ್ಲಿ ನೆಗಡಿ, ಕೆಮ್ಮು, ಜ್ವರ ಕಾಣಿಸಿಕೊಳ್ಳುತ್ತಿದೆ. ಕೊರೊನಾ ಲಕ್ಷಣ ಹೆಚ್ಚಾಗಿ ಕಂಡು…

Read More

ಬೆಂಗಳೂರು:  ಕೇರಳದಲ್ಲಿ ಕೋವಿಡ್​ ಪ್ರಕರಣಗಳು ಏರುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮುನ್ನೆಚರಿಕಾ ಕ್ರಮವಾಗಿ ರಾಜ್ಯ ಆರೋಗ್ಯ ಇಲಾಖೆ ಕೆಲವೊಂದು ಸಲಹಾಸೂಚನೆಗಳನ್ನು ಬಿಡುಗಡೆಗೊಳಿಸಿದೆ. ತಮಿಳುನಾಡು ಮತ್ತು ಕೇರಳದಲ್ಲಿ ಕೋವಿಡ್​ ನ ಉಪತಳಿ JN1, ವರದಿಯಾಗಿದೆ. ರಾಜ್ಯದ ಹವಾಮಾನ ಏರಿಳಿತ ಚಳಿಗಾಲ ಜೊತೆಗೆ ಇನ್ನು ಕೆಲವೇ ದಿನಗಳಲ್ಲಿ ಕ್ರಿಸ್​ಮಸ್​ ಹಬ್ಬ, ಹೊಸವರ್ಷ ಸಂಭ್ರಮಾಚರಣೆ ಬರಲಿದ್ದು ಕೋವಿಡ್​ ಎಚ್ಚಳವಾಗುವ ಸಾಧ್ಯತೆ ಇದೆ, ಈ ಹಿನ್ನೆಲೆ ರಾಜ್ಯದಲ್ಲಿ ಸಾರ್ವಜನಿಕರಿಗೆ ಆರೋಗ್ಯ ಇಲಾಖೆ ಸಲಹಾ ಪತ್ರ ಹೊರಡಿಸಿದೆ. https://ainlivenews.com/epidemic-corona-entered-the-state-a-rare-case-of-jn1-appeared-in-a-person/ ಆರೋಗ್ಯ ಇಲಾಖೆ ಮಾರ್ಗಸೂಚಿಗಳು: 60 ವರ್ಷ ಮೇಲ್ಪಟ್ಟವರು ಮತ್ತು ಅನಾರೋಗ್ಯ ಪೀಡಿತರು, ಹಾಲುಣಿಸಿವ ತಾಯಂದಿರು ಜನದಟ್ಟಣೆಯಿಂದ ದೂರ ಉಳಿಯುವುದು. ಜ್ವರ, ಶೀತ, ಕೆಮ್ಮು ಇರುವವರು ಅಗತ್ಯ ಚಿಕಿತ್ಸೆ ಪಡೆಯುವುದು. ಬಾಯಿ ಮೂಗು ಮುಚ್ಚುವಂತೆ ಮಾಸ್ಕ್ ಧರಿಸುವುದು. ಜನದಟ್ಟನೆ ಪ್ರದೇಶಕ್ಕೆ ತೆರಳದಿರುವುದು. ಉತ್ತಮ‌ ವೈಯಕ್ತಿಕ ಸ್ವಚ್ಚತೆ ಕಾಪಾಡಲು ಸಲಹೆ. ಆಗಾಗ ಕೈಗಳನ್ನ ಸಾಬೂನಿಂದ ತೊಳೆಯುವುದು. ಆರೋಗ್ಯ ಸಮಸ್ಯೆ ಇದ್ದಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿರುವುದು , ಹಿರಿಯರಿಂದ ದೂರ ಉಳಿಯುವುದು. ಅಂತರಾಷ್ಟ್ರಿಯ ಪ್ರಯಾಣದ…

Read More

ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ದಪ್ಪರ್ತಿ ಗ್ರಾಮದ ಮನೋಜ್ ಹಾಗೂ ಅಂಕಿತಾ ಇಬ್ಬರು ಪರಸ್ಪರ ಪ್ರೀತಿಸಿ ಮನೆ ಬಿಟ್ಟು ಓಡಿ ಹೋಗಿ ಭಾನುವಾರ ಮದುವೆಯಾಗಿದ್ದಾರೆ. ಇದರಿಂದ ರೊಚ್ಚಿಗೆದ್ದ ಅಂಕಿತಾ ಕುಟುಂಬಸ್ಥರು ಇಂದು ಯುವಕನ ತಂದೆ-ತಾಯಿ ಮನೆ ಮೇಲೆ ದಾಳಿ ನಡೆಸಿ ತಾಯಿ ವೆಂಕಟಲಕ್ಷ್ಮಮ್ಮ ಹಾಗೂ ತಂದೆ ಗಂಗರಾಜು ಮೇಲೆ ನಡುರಸ್ತೆಯಲ್ಲೇ ಮನಸ್ಸೋಇಚ್ಛೆ ಹಲ್ಲೆ ನಡೆಸಿದ್ದಾರೆ. https://ainlivenews.com/dont-eat-eggplant-because-of-this-health-problem/ ಮಧ್ಯಾಹ್ನದ ವೇಳೆಗೆ 20 ಮಂದಿ ಅಂಕಿತಾ ಪೋಷಕರ ಕಡೆಯವರು ಯುವಕನ ಮನೆ ಮೇಲೆ ದಾಳಿ ಮಾಡಿ ಮನೆಯಲ್ಲಿದ್ದ ವೆಂಕಟಲಕ್ಷ್ಮಮ್ಮ ಹಾಗೂ ಗಂಗರಾಜುವಿನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ. ಅಂಬುಲೆನ್ಸ್ ಸಹ ಗ್ರಾಮದೊಳಗೆ ಬರಲು ಬಿಡದೆ ಅಡ್ಡಿಪಡಿಸಿದ್ದಾರೆ ಎನ್ನಲಾಗಿದೆ. ಪೊಲೀಸರು ಬಂದ ನಂತರ ಅಂಬುಲೆನ್ಸ್ ಮೂಲಕ ಗಾಯಾಳುಗಳನ್ನು ಗುಡಿಬಂಡೆ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ. ಯುವಕ-ಯುವತಿ ಪರಾರಿಯಾಗಲು ಯುವಕನ ಪೋಷಕರು ಸಹ ಕಾರಣ ಎಂದು ಈ ಕೃತ್ಯ ನಡೆಸಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.

Read More

ಬೆಂಗಳೂರು: ರಾಜ್ಯ ಸರ್ಕಾರ ಹಣಕಾಸು ನಿರ್ವಹಣೆಯಲ್ಲಿ ಎಡವಿದೆ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಕಿಡಿಕಾರಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 6 ತಿಂಗಳ ಆಡಳಿತದ ಬಗ್ಗೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಟೀಕಾಪ್ರಹಾರ ಮಾಡಿದ್ದರು. https://ainlivenews.com/siddaramaiah-pm-met-siddaramaiah-cm-requested-to-release-drought-relief/ ರಾಜ್ಯದಲ್ಲಿ ಸರ್ಕಾರ ಇದೆ ಎಂದು ಯಾರಿಗೂ ಅನಿಸುತ್ತಿಲ್ಲ. ನಮ್ಮ ಅವಧಿಯಲ್ಲಿ ಅನುಷ್ಠಾನಗೊಂಡ ಯೋಜನೆಗಳಿಗೆ ಹಣ ಬಿಡುಗಡೆ ಮಾಡಬೇಡಿ ಎಂದು ಅಧಿಕಾರಿಗಳಿಗೆ ಮೌಖಿಕ ಆದೇಶ ನೀಡಲಾಗಿದೆ. ರಾಜ್ಯದ ಪ್ರಗತಿ ಶೂನ್ಯವಾಗಿದೆ ಎಂದು ಆರೋಪಿಸಿದರು. ಪ್ರತಿ ವರ್ಷ ಬಂಡವಾಳ ವೆಚ್ಚ ಏರಿಕೆಯಾಗಬೇಕು. ಆದರೆ, ಅಧಿವೇಶನದಲ್ಲಿ ಮಂಡಿಸಿದ ಮಧ್ಯಂತರ ಹಣಕಾಸು ವರದಿಯಲ್ಲಿ ಬಂಡವಾಳ ವೆಚ್ಚ ಕಳೆದ ಐದು ವರ್ಷಗಳಲ್ಲಿ ಕಡಿಮೆಯಾಗಿರುವುದು ರಾಜ್ಯ ಹಣಕಾಸು ಸ್ಥಿತಿಗೆ ಹಿಡಿದ ಕನ್ನಡಿ ಎಂದು ಹೇಳಿದರು. ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರ, ರಾಜ್ಯಕ್ಕೆ ಬರಬೇಕಾದ ಅನುದಾನ, ಹಣಕಾಸು ನೆರವು ನೀಡುತ್ತಿಲ್ಲ ಎಂದು ಹೇಳುವ ಮೂಲಕ ರಾಜಕೀಯ ಮಾಡುತ್ತಿದ್ದಾರೆ. ಕೇಂದ್ರದ ಮೇಲೆ ಗೂಬೆ ಕೂರಿಸುವ ಕೆಲಸ…

Read More

ಬಾಲಿವುಡ್ (Bollywood) ನಟಿ ಜಾಕ್ವೆಲಿನ್ ಫರ್ನಾಂಡಿಸ್ (Jacqueline Fernandez) ಇಡಿ ವಿರುದ್ಧ ದೆಹಲಿ ಹೈಕೋರ್ಟ್ ಮೊರೆ ಹೋಗಿದ್ದಾರೆ. ಆರೋಪಿ ಸುಕೇಶ್ ಚಂದ್ರಶೇಖರ್ (Sukesh Chandrashekar) ಒಳಗೊಂಡ 200 ಕೋಟಿ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕ್ರಿಮಿನಲ್ ಮೊಕದ್ದಮೆ ಮತ್ತು ಇಡಿ ಸಲ್ಲಿಸಿದ ಪೂರಕ ಆರೋಪಪಟ್ಟಿಯಿಂದ ತನ್ನ ಹೆಸರನ್ನ ಕೈಬಿಡುವಂತೆ ಜಾಕ್ವೆಲಿನ್ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದಾರೆ. ಇಡಿ ದಾಖಲಿಸಿರುವ ಪ್ರಕರಣದಲ್ಲಿ ಜಾಕ್ವೆಲಿನ್ ಫೆರ್ನಾಂಡಿಸ್ ಸಹ- ಆರೋಪಿಯಾಗಿದ್ದಾರೆ. ಆದರೆ ಈ ಮೊದಲು ದೆಹಲಿ ಪೊಲೀಸರು ದಾಖಲಿಸಿದ್ದ ಈ ಸುಲಿಗೆ ಪ್ರಕರಣದಲ್ಲಿ ಜಾಕ್ವೆಲಿನ್ ಅವರನ್ನು ಸಾಕ್ಷಿಯಾಗಿ ಹೆಸರಿಸಲಾಗಿತ್ತು.‌ ಆರೋಪಿ ಸುಕೇಶ್, ರೆಲಿಗೇರ್ ಎಂಟರ್‌ಪ್ರೈಸಸ್ ಮಾಜಿ ಪ್ರವರ್ತಕ ಶಿವಿಂದರ್ ಮೋಹನ್ ಸಿಂಗ್ ಅವರ ಪತ್ನಿ ಅದಿತಿ ಸಿಂಗ್ ಅವರಿಂದ ಹಣ ಸುಲಿಗೆ ಮಾಡುತ್ತಿದ್ದನು ಎಂದು ಆರೋಪಿಸಿ, ದೆಹಲಿ ಪೊಲೀಸ್ ಆರ್ಥಿಕ ಅಪರಾಧ ವಿಭಾಗ (EOW) ವಂಚನೆ ಪ್ರಕರಣ ದಾಖಲಿಸಿತ್ತು. ಆನಂತರ ಈ ಪ್ರಕರಣ ಇಡಿ ಅಂಗಳ ತಲುಪಿತು. ಆರೋಪಿ ಸುಕೇಶ್‌ಗೆ ತಾನು ಯಾವುದೇ ರೀತಿಯಲ್ಲಿ ಸಹಾಯ…

Read More

ದುಬೈ: ಐಪಿಎಲ್ ಮಿನಿ ಹರಾಜಿನಲ್ಲಿ (IPL 2024 Auction) ಆಸ್ಟ್ರೇಲಿಯಾ ತಂಡದ ಸ್ಟಾರ್‌ ಆಟಗಾರ ಹಾಗೂ ನಾಯಕ ಪ್ಯಾಟ್‌ ಕಮ್ಮಿನ್ಸ್‌ (Pat Cummins) ಬರೋಬ್ಬರಿ 20.50 ಕೋಟಿ ರೂ.ಗೆ ಬಿಕರಿಯಾಗಿದ್ದಾರೆ. ಈ ಮೂಲಕ ಐಪಿಎಲ್‌ ಇತಿಹಾಸದಲ್ಲೇ ದುಬಾರಿ ಮೊತ್ತಕ್ಕೆ ಬಿಡ್ ಆದ ಆಟಗಾರ ಎಂಬ ಕೀರ್ತಿಗೆ ಪಾತ್ರರಾಗಿದ್ದಾರೆ. 2023ರ ಐಪಿಎಲ್‌ ಮಿನಿ ಹರಾಜಿನಲ್ಲಿ ಇಂಗ್ಲೆಂಡ್‌ನ ಸ್ಟಾರ್‌ ಆಲ್‌ರೌಂಡರ್‌ ಸ್ಯಾಮ್‌ ಕರ್ರನ್‌ (Sam Curran) 18.50 ಕೋಟಿ ರೂ.ಗೆ ಮಾರಾಟವಾಗಿದ್ದು ಇತಿಹಾಸವಾಗಿತ್ತು. ಆದ್ರೆ ಈ ಬಾರಿ ಏಕದಿನ ವಿಶ್ವಕಪ್‌ (ODI World Cup) ವಿಜೇತ ತಂಡದ ಸಾರಥ್ಯ ವಹಿಸಿದ್ದ ಪ್ಯಾಟ್‌ ಕಮ್ಮಿನ್ಸ್‌ ದುಬಾರಿ ಮೊತ್ತಕ್ಕೆ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡದ ಪಾಲಾಗಿದ್ದಾರೆ. ತೀವ್ರ ಪೈಪೋಟಿಯಿಂದ ಕೂಡಿದ ಬಿಡ್‍ನಲ್ಲಿ ಪ್ಯಾಟ್‌ ಕಮ್ಮಿನ್ಸ್‌ ಅವರನ್ನ ಖರೀದಿಸಲು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ಹಾಗೂ ಸನ್‌ರೈಸರ್ಸ್‌ ಹೈದರಾಬಾದ್‌ ನಡುವೆ ಜಿದ್ದಾ-ಜಿದ್ದಿ ನಡೆದಿತ್ತು. ತನ್ನ ಪರ್ಸ್‌ನಲ್ಲಿ 23.25 ಕೋಟಿ ರೂ.ಗಳನ್ನಷ್ಟೇ ಉಳಿಸಿಕೊಂಡಿದ್ದ ಆರ್‌ಸಿಬಿ 20.25 ಕೋಟಿ ರೂ.ವರೆಗೂ ಬಿಡ್‌ ಮಾಡಿತ್ತು. ಅಂತಿಮವಾಗಿ…

Read More

ಕೋಲಾರ: ರಾಜ್ಯದಲ್ಲಿ ಪಿಎಸ್​ಐ ನೇಮಕಾತಿ, ಶಿಕ್ಷಕರ ನೇಮಕಾತಿ ಸೇರಿದಂತೆ ಕೆಲವೊಂದು ಇಲಾಖೆಗಳಲ್ಲಿನ ನೇಮಕಾತಿಯಲ್ಲಿ ನಡೆದ ಅಕ್ರಮಗಳು ಬಯಲಿಗೆ ಬಂದಂತೆ, ಇದೀಗ ಕೋಲಾರ ಹಾಲು ಒಕ್ಕೂಟದ ನೇಮಕಾತಿಯಲ್ಲಿ ನಡೆದ ದಂಧೆ ವಿಚಾರವೂ ಬಟಾಬಯಲಾಗಿದೆ. ಸಂಭವನೀಯ ಅಭ್ಯರ್ಥಿಗಳ ಪಟ್ಟಿ ವೈರಲ್ ಆಗುತ್ತಿದ್ದು, ನೇಮಕಾತಿಯಲ್ಲಿ ಲಕ್ಷ ಲಕ್ಷ ಡೀಲ್ ನಡೆದಿರುವ ಅನುಮಾನ ವ್ಯಕ್ತವಾಗಿದೆ. ಕೋಲಾರ ಹಾಲು ಒಕ್ಕೂಟದ ನೇಮಕಾತಿಯಲ್ಲಿ ವಿದ್ಯಾರ್ಹತೆಗಿಂತ ಶಿಫಾರಸ್ಸು ಪತ್ರವೇ ಮುಖ್ಯವಾಗಿದೆ. ಶಿಫಾರಸ್ಸು ಇದ್ದವರಿಗೆ ಮಾತ್ರ ಒಕ್ಕೂಟದಲ್ಲಿ ಕೆಲಸ ನೀಡಲಾಗುತ್ತದೆ. ಸೆಪ್ಟೆಂಬರ್​ನಲ್ಲಿ ಕೆರೆಯಲಾಗಿದ್ದ 81 ಹುದ್ದೆಗಳ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿ ಲಿಖಿತ ಪರೀಕ್ಷೆ ನಡೆದಿದ್ದು, ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಕೂಡ ಸಿದ್ಧವಾಗಿದೆ. ಸದ್ಯ, ಸಂಭವನೀಯ ಅಭ್ಯರ್ಥಿಗಳ ಪಟ್ಟಿ ವೈರಲ್ ಆಗಿದ್ದು, ಅಭ್ಯರ್ಥಿಗಳ ಹೆಸರ ಮುಂದೆ ಶಿಫಾರಸ್ಸು ಮಾಡಿದರ ಹೆಸರು ಹಾಕಲಾಗಿದೆ. https://ainlivenews.com/dont-eat-eggplant-because-of-this-health-problem/ ಒಕ್ಕೂಟದ ನಿರ್ದೇಶಕರು ಸೇರಿ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಶಾಸಕರುಗಳ ಹೆಸರುಗಳು ಪತ್ತೆಯಾಗಿವೆ. ಇದರ ಪ್ರತಿ ಸಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದು, ನೆಟ್ಟಿಗರಿಂದ ಆಕ್ರೋಶ ವ್ಯಕ್ತವಾಗಿದೆ. ಇನ್ನೂ ಕೋಲಾರ ಹಾಲು…

Read More

ಡೆಂಗ್ಯೂ ಜ್ವರದಿಂದ ಬಳಲುತ್ತಿದ್ದ ಖ್ಯಾತ ನಟ ಬ್ರಿಜೇಶ್ ತ್ರಿಪಾಠಿ (Brijesh Tripathi) ಮೀರತ್ ನ ಆಸ್ಪತ್ರೆಗೆ ದಾಖಲಾಗಿದ್ದರು. ಜ್ವರಕ್ಕೆ ಚಿಕಿತ್ಸೆ ಕೂಡ ಪಡೆಯುತ್ತಿದ್ದರು. ಈ ಸಂದರ್ಭದಲ್ಲಿ ಅವರಿಗೆ ಹೃದಯಾಘಾತವಾಗಿ ನಿಧನರಾಗಿದ್ದಾರೆ (passed away). ಭೋಜ್ ಪುರಿ (BhojPuri) ಚಿತ್ರರಂಗದಲ್ಲಿ ತ್ರಿಪಾಠಿ ಜನಪ್ರಿಯ ನಟರಾಗಿದ್ದಾರೆ. 46 ವರ್ಷಗಳ ಕಾಲ ಸಿನಿಮಾ ರಂಗದಲ್ಲೇ ಸೇವೆ ಸಲ್ಲಿಸಿರುವ ತ್ರಿಪಾಠಿ, ಭೋಜ್ ಪುರಿ ಸಿನಿಮಾ ರಂಗದಲ್ಲಿ ಮಾತ್ರವಲ್ಲ, ಹಿಂದಿ ಸಿನಿಮಾ ರಂಗದಲ್ಲೂ ತಮ್ಮದೇ ಆದ ಪಾತ್ರಗಳ ಮೂಲಕ ಹೆಸರು ಮಾಡಿದವರು. 250ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಹೆಗ್ಗಳಿಕೆ ಇವರದ್ದು. ಭೋಜ್ ಪುರಿಯ ಓಂ ಸಿನಿಮಾ ಇವರಿಗೆ ಸಾಕಷ್ಟು ಹೆಸರು ತಂದುಕೊಟ್ಟಿತ್ತು. ನೆಚ್ಚಿನ ನಟನ ನಿಧನಕ್ಕೆ ಭೋಜ್ ಪುರಿ ಚಿತ್ರರಂಗ ಮತ್ತು ಫ್ಯಾನ್ಸ್ ಕಂಬನಿ ಮಿಡಿದಿದೆ. ಅವರ ಚಿತ್ರಗಳನ್ನು ಕೊಂಡಾಡಿದೆ. ಮೃತರ ಆತ್ಮಕ್ಕೆ ಅನೇಕ ನಟರು ಮತ್ತು ತಂತ್ರಜ್ಞರು ಸಂತಾಪ ಸೂಚಿಸಿದ್ದಾರೆ.

Read More

ಈ ವರ್ಷ ತೆರೆಕಂಡ ಅನೇಕ ಸಿನಿಮಾಗಳಲ್ಲಿ ಪ್ರೇಕ್ಷಕರಿಂದ  ಅಪಾರ ಪ್ರಶಂಸೆಗೆ, ಚರ್ಚೆಗೆ ಒಳಗಾದ ಚಿತ್ರ ಟೋಬಿ (Toby) . ರಾಜ್ ಬಿ ಶೆಟ್ಟಿ ((Raj B Shetty)) ಬರೆದು, ನಟಿಸಿದ ದೊಡ್ಡ ವೆಚ್ಚದ ಚಿತ್ರ ಟೋಬಿ ಭಾಷೆಯ ಎಲ್ಲೆಯನ್ನೂ ಮೀರಿ ದೇಶದಾದ್ಯಂತ ಮೆಚ್ಚುಗೆಯನ್ನು ಪಡೆದಿತ್ತು. ಥಿಯೇಟರ್ ನಲ್ಲಿ ಗೆದ್ದ ಟೋಬಿಯನ್ನು ಒಟಿಟಿಯಲ್ಲಿ ನೋಡಲು ಕಾಯುತ್ತಿದ್ದ ಸಿನಿ ರಸಿಕರಿಗೆ ಹೊಸ ಮಾಹಿತಿಯೊಂದು ಬಂದಿದೆ, ಹೌದು ಟೋಬಿ ಚಿತ್ರ ಇದೇ ಡಿಸೆಂಬರ್ 22 ಕ್ಕೆ ಪ್ರಖ್ಯಾತ ಸೋನಿ ಲಿವ್ ಒಟಿಟಿ ಆ್ಯಪ್ ನಲ್ಲಿ ಬಿಡುಗಡೆಗೊಳ್ಳಲಿದೆ. ಒಟಿಟಿಯಲ್ಲಿ  ನೋಡಬೇಕು ಎಂದು ಕಾದವರಿಗೆ ಅವಕಾಶ ಸಿಕ್ಕಿದೆ. ಪುನೀತ್ ರಾಜ್ ಕುಮಾರ್ ನಟಿಸಿದ ಕೊನೆಯ ಚಿತ್ರ ‘ಜೇಮ್ಸ್’ ನ ನಂತರ ಸೋನಿ ಸಂಸ್ಥೆ ಯಲ್ಲಿ ಬಿಡುಗಡೆಗೊಳ್ಳಲಿರುವ ಎರಡನೇ ಕನ್ನಡ ಚಿತ್ರ ಎಂಬ ಹೆಗ್ಗಳಿಕೆಯೂ ಟೋಬಿಗೆ ಸಿಕ್ಕಿದೆ. ಜೇಮ್ಸ್ ಚಿತ್ರಕ್ಕೆ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿತ್ತು. ಈ ಸಿನಿಮಾಗೂ ಸಿಗಲಿದೆ ಎನ್ನುವ ವಿಶ್ವಾಸ ಸಂಸ‍್ಥೆಯದ್ದು.

Read More

ಗದಗ: ಡಾ. ಬಿ ಆರ್ ಅಂಬೇಡ್ಕರ್ ಪುಥ್ಥಳಿ ಪ್ರತಿಷ್ಠಾಪನೆ ಮಾಡದ ಹಿನ್ನೆಲೆ ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರೋ ಘಟನೆ ಗದಗ ಜಿಲ್ಲೆಯ ಮುಂಡರಗಿ ಪಟ್ಟಣದಲ್ಲಿ ನಡೆದಿದೆ. ಡಾ. ಬಿ ಆರ್ ಅಂಬೇಡ್ಕರ್ ಅಭಿಮಾನಿ ಬಳಗದಿಂದ ಪ್ರತಿಭಟನೆ ಮಾಡಲಾಗಿದೆ. ಮುಂಡರಗಿ ಪಟ್ಟಣದ ಪೊಲೀಸ್ ಮೈದಾನದ ಪಕ್ಕದ ಉದ್ಯಾನವನದಲ್ಲಿ ಅಂಬೇಡ್ಕರ್ ಪುಥ್ಥಳಿ ನಿರ್ಮಾಣ ಮಾಡಲು ಅಕ್ಟೋಬರ್ 22, 2021 ರಲ್ಲೇ ಠರಾವು ಪಾಸ್ ಮಾಡಲಾಗಿತ್ತು. ಆದರೆ ಈವರೆಗೂ ಪ್ರತಿಷ್ಠಾಪನೆ ಮಾಡದ ಹಿನ್ನೆಲೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.  ಇನ್ನು ಪುಥ್ಥಳಿ ಪ್ರತಿಷ್ಠಾಪನೆಗೆ ಭೂಮಿ ಪೂಜೆ ಮಾಡುವಂತೆ ಸಂಘಟನೆಗಳು ಗಡುವು ನೀಡಿದ್ದವು. ಗಡುವು ಮುಗಿದಿದ್ದರಿಂದ ಇಂದು ಪುರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಾಗಿದೆ. ಪೊಲೀಸರು ಪುರಸಭೆ ಗೇಟ್ ಬಂದ್ ಮಾಡಿದ್ರೂ ಕೂಡಾ ಗೇಟ್ ದೂಡಿಕೊಂಡು ಒಳನುಗ್ಗಿ ಪ್ರತಿಭಟನಾಕಾರರು ಮುತ್ತಿಗೆಗೆ ಯತ್ನಿಸಿದ್ರು. ತಮಟೆ ಬಾರಿಸುತ್ತಾ ಪ್ರತಿಭಟಿಸಿ ತಮ್ಮ ಆಕ್ರೋಶ ಹೊರಹಾಕಿದ್ರು. ಸ್ಥಳದಲ್ಲೇ ತಹಶಿಲ್ದಾರ ಧನಂಜಯ ಮಾಲಗಿತ್ತಿ ಮತ್ತು ಸಿಪಿಐ ಮಂಜುನಾಥ ಹಾಜರಿದ್ರೂ ಕೂಡಾ ಸ್ಥಳಕ್ಕೆ ಎಸಿ ಬರುವಂತೆ ಪ್ರತಿಭಟನಾಕಾರರು…

Read More