Author: AIN Author

ಬೆಂಗಳೂರು: ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕಿನ ಚಂದಾಪುರದಲ್ಲಿ ಬಟ್ಟೆಯ ಮೇಲೆ ಚಾಕಲೇಟ್ ಅಂಟಿಸಿ ಗಮನ ಬೇರೆಡೆಗೆ ಸೆಳೆದು ಹಾಡಹಗಲೇ ಬ್ಯಾಗ್​ನಲ್ಲಿ 10 ಲಕ್ಷ ರೂ. ಕಳ್ಳತನ ಮಾಡಿರುವಂತಹ ಘಟನೆ  ತಡವಾಗಿ ಬೆಳಕಿಗೆ ಬಂದಿದೆ  . ನಾಲ್ವರು ಖದೀಮರಿಂದ ಕೃತ್ಯವೆಸಗಲಾಗಿದ್ದು, ಕಳ್ಳರ ಕೈಚಳಕ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಹೌದು ಬೆಂಗಳೂರು ಹೊರವಲಯದ  ಆನೇಕಲ್ ತಾಲೂಕಿನ ಚಂದಾಪುರ ಸಾಯಿ ಮೆಡಿಕಲ್ ನಲ್ಲಿ   ಮೆಡಿಕಲ್ಗೆ ಬಂದಾಗ ಬಟ್ಟೆಯ ಮೇಲೆ ಚಾಕಲೇಟ್ ಅಂಟಿಸಿ ಗಮನ ಬೇರೆಡೆಗೆ ಸೆಳೆದು ಹಾಡಹಗಲೇ ಬ್ಯಾಗ್​ನಲ್ಲಿ 10 ಲಕ್ಷ ರೂ. ಕಳ್ಳತನ ಎಸಗಿದ್ದಾರೆ … ಇನ್ನು ಎರಡು ಬೈಕ್​ಗಳಲ್ಲಿ ಬಂದಿದ್ದ ನಾಲ್ವರು ಖದೀಮರಿಂದ ಕೃತ್ಯವೆಸಗಲಾಗಿದ್ದು, ಕಳ್ಳರ ಕೈಚಳಕ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಸದ್ಯ ಸೂರ್ಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಲಾಗಿದೆ. https://ainlivenews.com/mother-sells-her-daughter-for-rs-4-lakh-compulsion-to-engage-in-immoral-activity-by-an-intoxicated-person/ ಚಂದಾಪುರದ ಸಾಯಿ ಮೆಡಿಕಲ್ ಮಾಲೀಕ ಮಾದವ ರೆಡ್ಡಿ ಎನ್ನುವವರು ಬ್ಯಾಂಕಿನಿಂದ 10 ಲಕ್ಷ ರೂ. ಹಣ ಡ್ರಾ ಮಾಡಿಕೊಂಡು…

Read More

ದಾವಣಗೆರೆ: ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ವಿವಿಧ ಆರೋಪಗಳನ್ನು ಮಾಡುತ್ತಿರುವ ಮಾಜಿ ಸಚಿವ ವಿ.ಸೋಮಣ್ಣ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ” ವಿ ಸೋಮಣ್ಣ ಹಾಗೂ ಯತ್ನಾಳ್‌ ಬ್ಲಾಕ್ ಮೇಲ್ ರಾಜಕಾರಣ ಬಿಡಬೇಕು. ಬ್ಲಾಕ್ ಮೇಲ್ ರಾಜಕಾರಣ ಯಾವತ್ತೂ ಮಾತಾಡಬಾರದು. ಇವರಿಗೆ ಪಾಪದ ಕೊಡ ತುಂಬಿದ್ದು, https://ainlivenews.com/mother-sells-her-daughter-for-rs-4-lakh-compulsion-to-engage-in-immoral-activity-by-an-intoxicated-person/ ಅಂತ್ಯವಾಗುವುದಕ್ಕೋಸ್ಕರ ಹೀಗೆಲ್ಲ ಮಾತಾಡುತ್ತಿದ್ಧಾರೆ. ಯಡಿಯೂರಪ್ಪ ಹಾಗೂ ವಿಜಯೇಂದ್ರರನ್ನ ಜನರ ಮುಂದೆ ವಿಲನ್ ಮಾಡೋಕೆ ಇಬ್ಬರು ಹೊರಟಿದ್ದಾರೆ. ಇವರೇನು ಮಾಡಿದ್ದಾರೆ ಅಂತ ನಾವು ಇನ್ನು ಹೇಳುತ್ತೇವೆ. ನಾವೇನು ಯಾರಿಗೂ ಹೆದರಲ್ಲ, ಸೊಪ್ಪು ಹಾಕಲ್ಲ. ಇಬ್ಬರು ಅವರ ಬಗ್ಗೆ ಮಾತಾಡುವುದನ್ನು ಬಿಡಬೇಕು, ಒಟ್ಟಾಗಿ ಹೋಗಬೇಕು. ಏನಾದರೂ ಸಮಸ್ಯೆ ಇದ್ದರೆ ನಾಲ್ಕು ಗೋಡೆಗಳ ಮಧ್ಯೆ ಮಾತಾಡಿ ಬಗೆಹರಿಸಕೊಳ್ಳಬೇಕು ” ಎಂದರು.

Read More

ಧಾರವಾಡ: ರಾಜ್ಯದಲ್ಲಿ ಲೋಕಸಭೆ ಕ್ಷೇತ್ರಗಳ ಪೈಕಿ ಮೂರು ಕ್ಷೇತ್ರಗಳಲ್ಲಿ ಮುಸ್ಲಿಮರಿಗೆ ಟಿಕೆಟ್ ನೀಡುವಂತೆ ಕೇಳಿರುವುದಾಗಿ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್‌ ತಿಳಿಸಿದರು. ಧಾರವಾಡ ನಗರದಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ” ನಮ್ಮ ಸರ್ಕಾರ ಬಂದ ಬಳಿಕ ಆಕಾಂಕ್ಷಿಗಳು ಹೆಚ್ಚಾಗಿದ್ದಾರೆ. ಕೇಂದ್ರ ಸರ್ಕಾರದ ಬಗ್ಗೆ ಜನರು ಬದಲಾವಣೆ ಬಯಸಿದ್ದಾರೆ. ಕರ್ನಾಟಕ ಮಾತ್ರವಲ್ಲ ಇಡೀ ದೇಶದಲ್ಲಿ ಜನ ಬದಲಾವಣೆ ಬಯಸಿದ್ದಾರೆ. https://ainlivenews.com/mother-sells-her-daughter-for-rs-4-lakh-compulsion-to-engage-in-immoral-activity-by-an-intoxicated-person/ ಜನ ಈಗ ತೀರ್ಮಾನ ತೆಗೆದುಕೊಂಡು ಆಗಿದೆ. ರಾಜ್ಯದಲ್ಲಿ ಕನಿಷ್ಠ 25 ಕ್ಷೇತ್ರದಲ್ಲಿ ಕಾಂಗ್ರೆಸ್ ಗೆಲ್ಲುತ್ತದೆ. ಬೆಂಗಳೂರು ಸೆಂಟ್ರಲ್, ಹಾವೇರಿ, ಬೀದರ್ ಸೇರಿ ಮೂರು ಕ್ಷೇತ್ರದಲ್ಲಿ ಮುಸ್ಲಿಂರಿಗೆ ಟಿಕೆಟ್ ಕೇಳಿದ್ದೇವೆ ಎಂದರು. ಆದರೆ,  ಅಭ್ಯರ್ಥಿಗ ಬಗ್ಗೆ ಸಚಿವರು ಮಾಹಿತಿ ನೀಡಿಲ್ಲ. ಟಿಕೆಟ್‌ಗೆ ಈಗಾಗಲೇ ಮನವಿ ಮಾಡಿದ್ದೇವೆ. ಹೈಕಮಾಂಡ್‌ ತೀರ್ಮಾನ ಏನು ಎಂಬುದನ್ನು ಕಾದು ನೋಡಬೇಕಿದೆ ಎಂದರು.

Read More

ಚಿಕ್ಕಬಳ್ಳಾಪುರ:  ರೈಲಿಗೆ ಸಿಕ್ಕಿ 80 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ರೈಲು ಮಾರ್ಗದ ಲಕ್ಕಹಳ್ಳಿ ಗ್ರಾಮದ ಬಳಿ ನಡೆದಿದೆ. ರೈಲ್ವೆ ಹಳಿಗಳ ಪಕ್ಕದಲ್ಲೇ ಕೂದಲಮ್ಮ, ಕೂದಲಪ್ಪ, ಹಾಗೂ ದೇವರಾಜ್ ಎಂಬುವವರು ಕುರಿಗಳನ್ನ ಮೇಯಿಸುತ್ತಿದ್ದ ವೇಳೆ ನಾಯಿಗಳು ದಾಳಿ ಮಾಡಿವೆ. ನಾಯಿಗಳ ದಾಳಿಯಿಂದ ಕುರಿಗಳು ಬೆದರಿ ರೈಲು ಬರುವ ಸಮಯಕ್ಕೆ ರೈಲ್ವೆ ಹಳಿಗಳ ಮೇಲೆ ನುಗ್ಗಿವೆ. ಹೈಸ್ಪೀಡ್‌ನಲ್ಲಿ ಬರುತ್ತಿದ್ದ ರೈಲಿಗೆ ಸಿಕ್ಕಿ 80 ಕುರಿಗಳು ಸ್ಥಳದಲ್ಲೇ ಸಾವನ್ನಪ್ಪಿವೆ. ರೈಲ್ವೆ ಹಳಿಗಳ ಮೇಲೆ ರಾಶಿ ರಾಶಿ ಕುರಿಗಳು ಸಾವನ್ನಪ್ಪಿ ಬಿದ್ದಿವೆ. ಘಟನೆಯಲ್ಲಿ ಕುರಿಗಾಹಿ ಮಹಿಳೆ ಕೂದಲಮ್ಮ ಸಹ ಗಾಯಗೊಂಡಿದ್ದಾರೆ.

Read More

ಬೆಳಗಾವಿ: ಟಿಪ್ಪು ಜಯಂತಿ ಆಚರಣೆ ಮಾಡಬೇಕು ಎಂದು ಕಾಂಗ್ರೆಸ್ ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದರು. ಬೆಳಗಾವಿ ಸುವರ್ಣಸೌಧದಲ್ಲಿ ಮಾತನಾಡಿದ ಅವರು, ಟಿಪ್ಪು ಪರವಾಗಿ ಬ್ಯಾಟಿಂಗ್ ಮಾಡಿದರು. ಮೈಸೂರು ಏರ್ ಪೋರ್ಟ್‌ಗೆ ಟಿಪ್ಪು ಹೆಸರು ಇಡಬೇಕು ಎಂದು ಸದನಲ್ಲಿ ಪ್ರಸ್ತಾಪಿಸಿದ್ದೇನೆ. ಇದಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಮುಸ್ಲಿಂ ರಾಷ್ಟ್ರೀಯ ನಾಯಕರನ್ನ ವಿರೋಧಿಸಿಕೊಂಡು ಬಂದಿದ್ದಾರೆ ಎಂದರು. ಟಿಪ್ಪು ಒಬ್ಬ ರಾಷ್ಟ್ರೀಯ ಪ್ರೇಮಿ. ಮೊದಲ ಸ್ವಾತಂತ್ರ್ಯ ಹೋರಾಟಗಾರರು. https://ainlivenews.com/mother-sells-her-daughter-for-rs-4-lakh-compulsion-to-engage-in-immoral-activity-by-an-intoxicated-person/ ಮೈಸೂರು ಆಂಗ್ಲೋ ಮೂರು ಯುದ್ದ ಮಾಡಿದವರು.ತಮ್ಮ ಮಗನನ್ನೇ ಒತ್ತೆ ಇಟ್ಟ ಇತಿಹಾಸವಿದೆ.ಆದ್ರೆ ಬಿಜೆಪಿಯವರು ಇತಿಹಾಸ ತಿರುಚುವ ಕೆಲಸ ಮಾಡ್ತಿದ್ದಾರೆ ಎಂದರು. ಯಾರು ಬ್ರಿಟಿಷ್‌ರಿಗೆ ಸೆರೆಂಡರ್ ಆಗಿದ್ರೋ ಯಾರು ಬ್ರಿಟಿಷ್‌ರಿಂದ ಪಿಂಚಣಿ ಪಡೆಯುತ್ತಿದ್ರೋ ಅವರನ್ನ ಬಿಜೆಪಿ ರಾಷ್ಟ್ರ ಪ್ರೇಮಿ ಎಂದು ಬಿಜೆಪಿ ಬಿಂಬಿಸಲು ಹೊರಟಿದೆ. ಪರೋಕ್ಷವಾಗಿ ಸಾವರ್ಕರ್ ಫೋಟೋ ಹಾಕಿದ್ದಕ್ಕೆ ಅಬ್ಬಯ್ಯ ಕಿಡಿಕಾರಿದರು.

Read More

ಮಂಗಳೂರು:  ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ ಹೈದರಾಬಾದ್‌ʼನಲ್ಲಿ ಕೆಲಸ ನಿರ್ವಹಿಸುತ್ತಿದ್ದ ಯುವ ವಿಜ್ಞಾನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಗಳೂರಿನಲ್ಲಿ ನಡೆದಿದೆ. ಭರತ್ ಕಲ್ಲರ್ಪೆ (24) ಆತ್ಮಹತ್ಯೆ ಮಾಡಿಕೊಂಡ ಯುವಕ. ಈತ ಪುತ್ತೂರಿನ ಕಲ್ಲರ್ಪೆ ನಿವಾಸಿಯಾಗಿದ್ದ. DRDO ಹೈದರಾಬಾದ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದ. ತಾತ್ಕಾಲಿಕ ನೆಲೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದ. https://ainlivenews.com/mother-sells-her-daughter-for-rs-4-lakh-compulsion-to-engage-in-immoral-activity-by-an-intoxicated-person/ ಎರಡು ತಿಂಗಳ ಹಿಂದೆಯಷ್ಟೇ ಉದ್ಯೋಗಕ್ಕೆ ಭರತ್‌ ಸೇರಿಕೊಂಡಿದ್ದ. ಕಳೆದ ಒಂದು ವಾರದ ಹಿಂದೆ ಊರಿಗೆ ಬಂದಿದ್ದ. ಸಂಸ್ಥೆಗೆ ರಾಜೀನಾಮೆ ಪತ್ರ ನೀಡಿದ್ದರೂ ರಾಜೀನಾಮೆ ಸ್ವೀಕಾರ ಮಾಡಿರಲಿಲ್ಲ. ನಿನ್ನೆ ರಾತ್ರಿ DRDO ಕಚೇರಿಯಿಂದ ಫೋನ್ ಬಂದಿತ್ತು. ಆ ಬಳಿಕ ಇಂದು (ಶುಕ್ರವಾರ) ಬೆಳಗ್ಗೆ ನೇಣು‌ ಬಿಗಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಈ ಇಡೀ ವಾರ ಬಿಗ್‌ಬಾಸ್ ಮನೆಯ ಸದಸ್ಯರು ಶಾಲೆಯಲ್ಲಿ ಮಕ್ಕಳಾಗಿ ನಲಿದಿದ್ದರು. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಹೊರತುಪಡಿಸಿದರೆ, ಯಾವುದೇ ಜಗಳಗಳಿಲ್ಲದೆ, ಅನಾಹುತಗಳಿಲ್ಲದೆ ಸುವ್ಯವಸ್ಥಿತವಾಗಿಯೇ ಕಳೆಯಿತು. ಇನ್ನೇನು ಇದೇ ರೀತಿ ಈ ವಾರ ಸುಖಾಂತ್ಯವನ್ನು ಕಾಣಲಿದೆ ಎನ್ನುವ ಹೊತ್ತಿಗೇ ಬಿಗ್‌ಬಾಸ್‌ ಮನೆಯಲ್ಲಿ ಕೋಲಾಹಲವೆದ್ದಿದೆ… ‘ಆಲ್ರೆಡಿ ಅವ್ರೆಲ್ಲ ರಾಕ್ಷಸರಾಗ್ತಿದಾರೆ’ ಎಂದು ತುಕಾಲಿ ಸಂತೋಷ್‌ ಕಳವಳದಿಂದ ಕ್ಯಾಮೆರಾ ಎದುರು ನಿಂತು ಅಲವತ್ತುಕೊಳ್ಳುತ್ತಿದ್ದಾರೆ. ಹಾಗಾದ್ರೆ ನಿಜಕ್ಕೂ ನಡೆದಿದ್ದೇನು? ಮನೆಯೊಳಗೆ ನಡೆದಿದ್ದರ ಸಣ್ಣ ಸುಳಿವು ಇಂದು JioCinemaಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಸಿಕ್ಕಿದೆ. ರಾಗಿ ಹಿಟ್ಟನ್ನು ನೋಡಿ, ಪ್ರತಾಪ್‌ಗೆ ಯಾಕೋ ಮುದ್ದೆ ತಿನ್ನುವ ಮನಸ್ಸಾಗಿದೆ. ‘ಯಾರಿಗೆಲ್ಲ ಮುದ್ದೆ ಬೇಕು?’ ಎಂದು ಮನೆಯ ಸದಸ್ಯರನ್ನು ಕೇಳಿದ್ದಾರೆ. ಕಾರ್ತಿಕ್‌, ‘ತಿಂತೀನಿ ಕಣೋ ಮಾಡೋ’ ಎಂದು ಪ್ರತಾಪ್‌ಗೆ ಪ್ರೋತ್ಸಾಹ ಕೊಟ್ಟಿದ್ದಾರೆ. ತುಕಾಲಿ ಅವರೂ, ‘ಮಾಡೋದ್ ಮಾಡ್ತಿದೀಯಾ. ಸ್ವಲ್ಪ ದಪ್ಪ ಮಾಡೋ’ ಎಂದು ಕೇಳಿದ್ದಾರೆ. ಪ್ರತಾಪ್ ಉತ್ಸಾಹದಿಂದಲೇ ಎಲ್ಲರಿಗೂ ಮುದ್ದೆ ಮಾಡಿ ಬಡಿಸಿದ್ದಾರೆ. ಎಲ್ಲರೂ ಖುಷಿಯಿಂದ ತಿಂದಿದ್ದಾರೆ ಕೂಡ. ಆದರೆ ಮಧ್ಯದಲ್ಲಿ ಎಲ್ಲೋ ತಾಳ ತಪ್ಪಿದೆ. ಮನೆಯ…

Read More

ಬೆಂಗಳೂರು:  ಬಿಎಂಟಿಸಿ ಡ್ರೈವರ್ಗಳೆಂದ್ರೆ ಅವರು ಯಮದೂತರೆನ್ನೋ ಕಳಂಕವಿದೆ. ಅವರ ಯಾವಾಗಲೂ ಸುದ್ದಿಯಾಗದೇ ಆಕ್ಸಿಡೆಂಟ್ ಗಳಿಂದ. ಹೀಗಾಗಿ ಬಿಎಂಟಿಸಿಗೆ ಕಿಲ್ಲರ್ ಬಸ್ ಅನ್ನೋ ಹಣೆಪಟ್ಟಿ ಅಂಟಿದೆ. ಆದ್ರೆ ಇದೀಗ ಈ ಅಪವಾದಿಂದ ಮುಕ್ತವಾಗುವದಕ್ಕೆ ಹೆಜ್ಜೆ ಇರಿಸಿದೆ. ನಗರದಲ್ಲಿ ಹೆಚ್ಚಾಗ್ತಿರೋ ಆಕ್ಸಿಡೆಂಟ್ ರೇಟ್ ಇಳಿಸಲು ಇದೀಗ ಬಿಎಂಟಿಸಿಗೆ ಗುದ್ದು ನೀಡಲು ಪೊಲೀಸ್ ಇಲಾಖೆ ಮಧ್ಯೆ ಪ್ರವೇಶ ಮಾಡಿದೆ. ಅದು ಹೇಗೆ ಅಂತೀರಾ. ಈ ಸ್ಟೋರಿ.. ಬಿಎಂಟಿಸಿ ಬೆಂಗಳೂರು ನಗರದ ಜೀವನಾಡಿ. ಮೆಟ್ರೋ ಶುರುವಾದ್ರೂ ನಗರದಲ್ಲಿ ಬಿಎಂಟಿಸಿ ಪ್ರಯಾಣಿಕರ ಸಂಖ್ಯೆ ಇಳಿಯಾಗಿಲ್ಲ. ನಗರದ‌ ರಸ್ತೆ ರಸ್ತೆಯಲ್ಲೂ ಬಿಎಂಟಿಸಿ ಬಸ್ ಗಳು ಓಡಾಟ ನಡೆಸುತ್ತವೆ. ಬೆಂಗಳೂರಿನ ಟ್ರಾಫಿಕ್ ದಟ್ಟನೆಯಲ್ಲಿ ಓಡಾಟದ ವೇಳೆ ಈ ಬಿಎಂಟಿಸಿ ಬಸ್ ಗಳು ನೆಗಟಿವ್ ಕಾರಣಕ್ಕೆ ತುಂಬಾನೆ ಸುದ್ದಿ ಮಾಡ್ತಾವೆ. ಯಾವಾಗಲೂ ಬಿಎಂಟಿಸಿ ಡ್ರೈವರ್ ಗಳು ಸರಿಯಿಲ್ಲ, ಸರಿಯಾಗಿ ಡ್ರೈವ್ ಮಾಡಲ್ಲ, ರ್ಯಾಶ್ ಡ್ರೈವಿಂಗ್ ಮಾಡ್ತಾರೆ ಅನ್ನೋ ಸಾಲು ಸಾಲು ಆರೋಪ ಜನ ಮಾಡ್ತಾರೆ. ಮುಖ್ಯವಾಗಿ ನಗರದಲ್ಲಿ ಬಿಎಂಟಿಸಿ ಬಸ್ ಗಳು ಆಕ್ಸಿಡೆಂಟ್…

Read More

ಬೆಂಗಳೂರು: ಇದು ಪವಾಡವೋ? ಚರಿತ್ರೆಯೋ? ಮರು ಜನ್ಮವೋ? ಯಾಕಂದ್ರೆ ಅಂತಹದೊಂದು ಘಟನೆ ನಡೆದಿದೆ. ತಲೆಗೆ ಗುಂಡು ಹೊಕ್ಕಿ 18 ವರ್ಷ ಕಳೆದವನಿಗೆ ನಗರದ ಆಸ್ಪತ್ರೆಯಲ್ಲಿ ಮರುಜನ್ಮ ಸಿಕ್ಕಿದೆ. ಈ ಕುರಿತ ವರದಿ ಇಲ್ಲಿದೆ. ಕಿವಿ ಕೇಳಿಸುತ್ತಿರಲಿಲ್ಲ, ಭಾಷೆ ಬರ್ತಿರ್ಲಿಲ್ಲ. ಅಲೆಯದ ಆಸ್ಪತ್ರೆ ಇಲ್ಲ..ಭೇಟಿಯಾಗದ ವೈದ್ಯರಿಲ್ಲ.ನೋವು ಅನುಭವಿಸದ ದಿನಗಳಿಲ್ಲ…ಇದು 18 ವರ್ಷಗಳ ಕಾಲ ಯಾತನೆ ಅನುಭವಿಸಿ ಸಾವಿನ ಮನೆಯಿಂದ ಹೊರ ಬಂದವನ ಸ್ಟೋರಿ. ಯೆಮನ್ ಪ್ರಜೆಗೆ ನಗರದ ಆಸ್ಪತ್ರೆಯಲ್ಲಿ ಮರುಜನ್ಮ ಸಿಕ್ಕ ಕಹಾನಿ. ತಲೆಗೆ ಗುಂಡು ಹೊಕ್ಕಿ 18 ವರ್ಷ ಕಳೆದವನಿಗೆ ಬೆಂಗಳೂರಿನ ಆಸ್ಟರ್ ಆಸ್ಪತ್ರೆ ಮರು ಜನ್ಮ ಕೊಟ್ಟಿದೆ. ಬದುಕಿನುದ್ದಕ್ಕೂ ನರಕ ಯಾತನೆ ಕಟ್ಟಿಟ್ಟ ಬುತ್ತಿ ಅಂದುಕೊಂಡು ದಿನ ದೂಡುತ್ತಿದ್ದ ಅಮಾಯಕ ವ್ಯಕ್ತಿಯ ಬಾಳಿಗೆ ಹೊಸ ಹುರುಪು ಸಿಕ್ಕಿದೆ. ಇನ್ನೇನು ಜೀವನ ಮುಗಿದೇ ಹೋಯಿತು, ಬದುಕು ಕ್ಷಣಿಕ ಅಂದುಕೊಂಡವನಿಗೆ ಬೆಂಗಳೂರು ವೈದ್ಯರು ದೇವರಾಗಿ ಬಂದು ಜೀವ ಉಳಿಸಿದ್ದಾರೆ. ಇದು ಪವಾಡವೋ? ಚರಿತ್ರೆಯೋ? ಮರು ಜನ್ಮವೋ? ಗೊತ್ತಿಲ್ಲ. ಆದರೆ ನಮ್ಮ ಹೆಮ್ಮೆಯ ಬೆಂಗಳೂರಿನ…

Read More

ಚಿತ್ರದುರ್ಗ:  ಮಾಜಿ ಸಚಿವ ಹೆಚ್. ಏಕಾಂತಯ್ಯ ಅವರು ಮುರುಘಾ ಮಠದಿಂದ ನಿರ್ಮಾಣ ಮಾಡುತ್ತಿರುವ ಕಂಚಿನ ಬಸವ ಪುತ್ಥಳಿ ಅನುದಾನದಲ್ಲಿ ದುರುಪಯೋಗವಾಗಿದೆ ಎಂದು ಜಿಲ್ಲಾಧಿಕಾರಿಗೆ ದೂರು‌ ನೀಡಿದ್ದು, ಇದರಲ್ಲಿ ಯಾವುದೇ ದುರುಪಯೋಗವಾಗಿಲ್ಲ ಎಂದು ಮಠದ ಉಸ್ತುವಾರಿಗಳಾದ ಬಸವಪ್ರಭು ಶ್ರೀಗಳು ಸ್ಪಷ್ಟನೆ ನೀಡಿದರು. ಅವರು ಮುರುಘಾ ಮಠದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತಾಡಿದರು. ಮುರುಘಾ ಮಠದಲ್ಲಿ ನಿರ್ಮಾಣವಾಗುತ್ತಿರುವ 320 ಅಡಿಗಳ ಬಸವ ಪುತ್ಥಳಿ ಯಲ್ಲಿ ದುರಪಯೋಗವಾಗಿದೆ ಎಂದು ಅವರು ಆರೋಪಿಸಿರುವುದು ಯಾವುದೋ ದ್ವೇಷದಿಂದ ಮಾಡಿದ್ದಾರೆ. ಜಿಲ್ಲೆ ಅಭಿವೃದ್ದಿಯಾಗುವುದು ಅವರಿಗೆ ಬೇಡವಾಗಿದೆ ಅನಿಸುತ್ತದೆ. ದುರಪಯೋಗವಾಗಿದೆ ಎಂಬ ದೂರಿನ ಮೇರೆಗೆ ಜಿಲ್ಲಾಧಿಕಾರಿ ಐದು ಜನರ ಸಮಿತಿಯೊಂದನ್ನು ರಚಿಸಿದ್ದಾರೆ. ಅವರು ತನಿಖೆ ನಡೆಸಲು ಬಂದಾಗ ಅವರಿಗೆ ಎಲ್ಲಾ ರೀತಿಯ ದಾಖಲೆಗಳನ್ನು ಕೊಡಲು ನಾವು ಸಿದ್ದರಿದ್ದೇವೆ. 25ಕೋಟಿ  ಹಣ ಖರ್ಚಾಗಿದೆ. 10 ಕೋಟಿ ಬ್ಯಾಂಕಿನಲ್ಲಿದೆ. ಈ ಹಣದಲ್ಲಿ ಮತ್ತೆ ಕಾಮಗಾರಿ ಆರಂಭವಾಗುತ್ತದೆ . ಏಕಾಂತಯ್ಯ ಅವರು ಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದು, ಯಾವುದೇ ತನಿಖೆ ಎದುರಿಸಲು ಸಿದ್ದರಿದ್ದೇವೆ. ಇದರ ಬಗ್ಗೆ ಕಾನೂನಿ ಹೋರಾಟ…

Read More