Author: AIN Author

ಕಲಬುರಗಿ: ಸರ್ಕಾರಿ ಬಸ್ ಮತ್ತು ಆಟೋ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಕಲಬುರಗಿಯಲ್ಲಿ ನಡೆದಿದೆ.. ಜೇವರ್ಗಿ ರಸ್ತೆಯ ಸೆಂಟ್ರಲ್ ಜೈಲ್ ಬಳಿ ಘಟನೆ ನಡೆದಿದ್ದು ರಾಯಚೂರಿನಿಂದ ಕಲಬುರಗಿ ಕಡೆ ಬಸ್ ಬರ್ತಿತ್ತು ಎನ್ನಲಾಗಿದೆ. ಸ್ಥಳಕ್ಕೆ ಸಂಚಾರಿ ಠಾಣೆ ಪೋಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಮೃತರ ಗುರುತು ಇನ್ನೂ ಪತ್ತೆಯಾಗಿಲ್ಲ..

Read More

ಬೆಂಗಳೂರು:    9 ಸಾವಿರ ಸಾರಿಗೆ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹೇಳಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿರುವ ಅವರು, 2016ರ ನಂತರ ಸಿಬ್ಬಂದಿ ನೇಮಕಾತಿ ಆಗಲಿಲ್ಲ. ಪ್ರಯಾಣಿಕರಿಗೆ ಗುಣಮಟ್ಟದ ಸಂಚಾರ ಸೌಲಭ್ಯ ಒದಗಿಸುವ ಉದ್ದೇಶದಿಂದ 9 ಸಾವಿರ ಸಿಬ್ಬಂದಿ ನೇಮಕಾತಿ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ. ಶಕ್ತಿ ಯೋಜನೆಯಿಂದ ನಮ್ಮ ಬಸ್‌ಗಳಲ್ಲಿ ಸಂಚರಿಸುವ ಪ್ರಯಾಣಿಕರ ಸಂಖ್ಯೆ 15 ರಿಂದ 20 ಲಕ್ಷ ಹೆಚ್ಚಾಗಿದೆ. 4 ವರ್ಷ ಸತತವಾಗಿ ಬಸ್ ಖರೀದಿ ಮಾಡಿಲ್ಲ. ಫೆಬ್ರವರಿ ಕೊನೆ ವೇಳೆಗೆ 5,500 ಬಸ್ ಬರಲಿವೆ ಎಂದು ಹೇಳಿದ್ದಾರೆ. ವಿದ್ಯಾರ್ಥಿಗಳಿಗೆ ‌ಬಸ್ ಸಮಸ್ಯೆ ಕುರಿತು ಶಾಸಕ ಬಿ.ವೈ ವಿಜಯೇಂದ್ರ‌ ಪೋಸ್ಟ್ ‌ವಿಚಾರವಾಗಿ ಮಾತನಾಡಿ, ವಿಜಯೇಂದ್ರ‌ ಅವರು ತುಮಕೂರಿನ ವಿದ್ಯಾರ್ಥಿಗಳ‌ ಬಸ್ ಸಮಸ್ಯೆ‌ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದರು. ಶಾಲಾ ಮಕ್ಕಳಿಗೆ ತೊಂದರೆ ಆಗದಂತೆ‌ ಮಾಡ್ತಿದ್ದೇವೆ. ಜನವರಿ, ಫೆಬ್ರವರಿಯಲ್ಲಿ‌ ಹೊಸ‌ ಬಸ್ ಗಳು ಬರಲಿವೆ. ಜೊತೆಗೆ ಡ್ರೈವರ್, ಕಂಡಕ್ಟರ್ ಗಳ ನೇಮಕಾತಿ ಕೂಡ‌ ಆಗಲಿದೆ ಎಂದು ತಿಳಿಸಿದ್ದಾರೆ. ಈಗಿನ ಸಮಸ್ಯೆಗಳಿಗೆ ಹಿಂದಿನ ಬಿಜೆಪಿ ಸರ್ಕಾರ ‌ಕಾರಣ. ಹಿಂದೆ ‌ನೇಮಕಾತಿ ಮಾಡಿರಲಿಲ್ಲ. ಈಗ…

Read More

ಹುಬ್ಬಳ್ಳಿ: ಇಲ್ಲಿಯ ಮೂರುಸಾವಿರ ಮಠದ ಶಾಲೆ ಆವರಣದಲ್ಲಿ ಹುಬ್ಬಳ್ಳಿ ಆಕಾಶ ಬುಟ್ಟಿ ಹಬ್ಬವನ್ನು ಡಿ. 16ರಂದು ಸಂಜೆ 5ಗಂಟೆಗೆ ಏರ್ಪಡಿಸಲಾಗಿದೆ ಎಂದು ಆಯೋಜಕಕ ರಾಜು ಜರತಾರಘರ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉದ್ಘಾಟಿಸುವರು. ಮೂರುಸಾವಿರಮಠದ ಶ್ರೀ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಶಾಸಕ ಮಹೇಶ ಟೆಂಗಿನಕಾಯಿ ಸೇರಿದಂತೆ ಇತರ ನಾಯಕರು ಆಗಮಿಸುವರು ಎಂದರು. ಸತತ ಮೂರು ವರ್ಷ ಈ ಹಬ್ಬವನ್ನು ಎಲ್ಲರೂ ಸೇರಿ ಆಚರಿಸಿದ್ದೇವೆ. ಇದು ನಾಲ್ಕನೇ ವರ್ಷ. ಈ ವರ್ಷ ಮಹಿಳೆಯರಿಗೆ ಮತ್ತು ಮಕ್ಕಳಿಗೆ ವಿಶೇಷ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ ಎಂದರು. ಈಗಾಗಲೇ 10 ಶಾಲೆಗಳಲ್ಲಿ ಮಕ್ಕಳಿಗೆ ಆಕಾಶ ಬುಟ್ಟಿ ತಯಾರಿಸುವ ಸ್ಪರ್ಧೆ ನಡೆದಿದೆ. ಬೆಂಕಿಯಿಲ್ಲದೇ ಅಡುಗೆ ತಯಾರಿಸುವುದು, ಮಕ್ಕಳಿಗೆ ಆನ್‌ಲೈನ್ ಶ್ಲೋಕ ಅಥವಾ ಮಂತ್ರ ಪಠಣ, ವೇಷಭೂಷಣ, ಕೇಶವಿನ್ಯಾಸ ಸ್ಪರ್ಧೆ ಆಯೋಜಿಸಲಾಗಿದೆ. ಗೆದ್ದವರಿಗೆ ನಗದು ಬಹುಮಾನ ನೀಡಲಾಗುವುದು. 10 ಲಕ್ಕಿ ಡ್ರಾ ಕೂಪನ್ ಬಹುಮನವನ್ನೂ ಕೊಡಲಾಗುತ್ತಿದೆ ಎಂದರು. ಬಿಜೆಪಿ ರಾಜ್ಯ ಶಿಸ್ತು ಸಮಿತಿ…

Read More

ಬೆಳಗಾವಿ: ಸಹಕಾರಿ ಸಾಲದ ಮೇಲಿನ‌ ಬಡ್ಡಿಯನ್ನು ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಸಹಕಾರ ಬ್ಯಾಂಕುಗಳಲ್ಲಿರುವ ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲದ ಅಸಲನ್ನು ಕಟ್ಟಿದರೆ ಸಂಪೂರ್ಣ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ನಮ್ಮ ಸರ್ಕಾರ ತೀರ್ಮಾನಿಸಿದೆ. ಇದರಿಂದ ಸಾಲಮನ್ನಾ ಮಾಡುವ ಕುರಿತು ನಾವು ನಮ್ಮ ಪ್ರಣಾಳಿಕೆಯಲ್ಲಿ  ಹೇಳಿಲ್ಲ. ಬಿಜೆಪಿಯವರು 2018 ರ ತಮ್ಮ ಪ್ರಣಾಳಿಕೆಯಲ್ಲಿ ನಮ್ಮ ಸರಕಾರದ ಮೊದಲ ಸಚಿವ ಸಂಪುಟ ಸಭೆಯಲ್ಲಿಯೇ ರಾಷ್ಟ್ರಿಕೃತ ಬ್ಯಾಂಕ್‌ ಮತ್ತು ಸಹಕಾರಿ ಸಂಘಗಳಲ್ಲಿ ಇರುವ 1 ಲಕ್ಷದವರೆಗೆ ರೈತರ ಬೆಳೆ ಸಾಲ ಮನ್ನಾ ಮಾಡಲಾಗುವುದು ಎಂದು ಹೇಳಿದ್ದರು. ಆದರೆ ಬಿಜೆಪಿಯವರು ಈ ಕುರಿತು ಏನಾದರೂ ಮಾಡಿದರಾ? ನಯಾಪೈಸೆ ಬಿಡುಗಡೆ ಮಾಡಿದರಾ? ಹೇಳಿ. ಯಡಿಯೂರಪ್ಪನವರು 2019 ರ ಆಗಸ್ಟ್‌ನಲ್ಲಿ ಅತಿವೃಷ್ಟಿಯ ಕಾರಣಕ್ಕೆ ಬೆಳೆ ಹಾನಿಯಾಗಿತ್ತು. https://ainlivenews.com/mother-sells-her-daughter-for-rs-4-lakh-compulsion-to-engage-in-immoral-activity-by-an-intoxicated-person/ ಆಗ ಶಿವಮೊಗ್ಗದಲ್ಲಿ ಯಡಿಯೂರಪ್ಪನವರು ಏನು ಹೇಳಿದರು ಗೊತ್ತಾ? “ಕೇಳಿದಷ್ಟು ಹಣ ಕೊಡಲು ಸರ್ಕಾರದಲ್ಲಿ ನೋಟ್ ಪ್ರಿಂಟ್ ಮಾಡುವ ಯಂತ್ರವಿಲ್ಲ” ಎಂದು ಹೇಳಿದ್ದರು. ಯಡಿಯೂರಪ್ಪನವರು ಈ ರೀತಿ ಹೇಳಿದ್ದು…

Read More

ರಷ್ಯಾ ಅಧ್ಯಕ್ಷರಾದ ವ್ಲಾಡಿಮಿರ್ ಪುಟಿನ್ ಅವರು ಉಕ್ರೇನ್ ಯುದ್ಧ ಆರಂಭಗೊಂಡ ಬಳಿಕ ಇದೇ ಮೊದಲ ಬಾರಿಗೆ ತಮ್ಮ ವರ್ಷಾಂತ್ಯದ ಮೊದಲ ಪತ್ರಿಕಾಗೋಷ್ಠಿ ನಡೆಸಿದರು. ಪುಟಿನ್ ಅವರು ತನ್ನ ಗುರಿಗಳಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ ಎಂದು ಸ್ಪಷ್ಟಪಡಿಸಿದ್ದು, ಶಾಂತಿ ಸ್ಥಾಪನೆಯಾಗುವ ತನಕ ಉಕ್ರೇನ್‌ನಲ್ಲಿ ತಮ್ಮ ಗುರಿಯ ಹಿಂದೆ ಸಾಗುವುದಾಗಿ ಘೋಷಿಸಿದರು. ಪುಟಿನ್ ಅವರು 2024ರಲ್ಲಿ ನಡೆಯುವ ಅಧ್ಯಕ್ಷೀಯ ಚುನಾವಣೆಯಲ್ಲಿ ತಾನು ಮರಳಿ ಭಾಗವಹಿಸಲು ಇಚ್ಛಿಸುವುದಾಗಿ ಘೋಷಿಸಿದ ಕೆಲ ಸಮಯದಲ್ಲಿ ಈ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ರಷ್ಯಾದಲ್ಲಿ ಅವರು ಹೊಂದಿರುವ ಛಾಪು, ಪ್ರಭಾವವನ್ನು ಗಮನಿಸಿದರೆ, 71 ವರ್ಷದ ಪುಟಿನ್ ಐದನೇ ಬಾರಿ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದು, 2030ರ ತನಕ ತನ್ನ ಅಧ್ಯಕ್ಷೀಯ ಗದ್ದುಗೆಯನ್ನು ವಿಸ್ತರಿಸುವ ಸಾಧ್ಯತೆಗಳು ದಟ್ಟವಾಗಿವೆ. ಈ ಗೆಲುವು ಅಧ್ಯಕ್ಷರಾಗಿ ಅವರ ಸ್ಥಾನವನ್ನು ಇನ್ನಷ್ಟು ಬಲಪಡಿಸಲಿದ್ದು, ಅವರು ಒಟ್ಟು 24 ವರ್ಷಗಳ ಕಾಲ ರಷ್ಯಾ ಅಧ್ಯಕ್ಷರಾದಂತಾಗುತ್ತದೆ. https://ainlivenews.com/mother-sells-her-daughter-for-rs-4-lakh-compulsion-to-engage-in-immoral-activity-by-an-intoxicated-person/ ಪ್ರಶ್ನೋತ್ತರ ಅವಧಿಯಲ್ಲಿ ಪುಟಿನ್ ಅವರು ಉಕ್ರೇನ್‌ನಲ್ಲಿ ಶಾಂತಿ ಸ್ಥಾಪನೆಯಾಗಬೇಕಾದರೆ ಆ ರಾಷ್ಟ್ರ ನಾಜಿ ಮುಕ್ತವಾಗಬೇಕು, ನಿಶ್ಶಸ್ತ್ರೀಕರಣಗೊಳ್ಳಬೇಕು ಮತ್ತು…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ (HD Kumaraswamy) ಅವರು ಸಿಂಗಾಪುರಕ್ಕೆ (Singapore) ಹಾರಿದ್ದಾರೆ. ಶನಿವಾರ ಕುಮಾರಸ್ವಾಮಿ ಅವರ ಹುಟ್ಟುಹಬ್ಬವಿದ್ದು, ಜನ್ಮದಿನದ (Birthday) ಆಚರಣೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಟುಂಬ ಮತ್ತು ಕೆಲ ಆಪ್ತರ ಜೊತೆ ಕುಮಾರಸ್ವಾಮಿ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. https://ainlivenews.com/govt-monitoring-right-wing-activists-to-prevent-hate-speech-cases-g-parameshwar/ ಅಭಿಮಾನಿಗಳಲ್ಲಿ ಮನವಿ: ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ಅಂದರೆ ನಾಳೆ ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಹೆಚ್‌ಡಿಕೆ ಪೋಸ್ಟ್ ಮಾಡಿದ್ದಾರೆ.

Read More

ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನದಲ್ಲಿ ಕನ್ನಡ ಹೆಸರಾಂತ ನಟಿ, ಕನಸಿನ ರಾಣಿ ಮಾಲಾಶ್ರೀ ಕುರಿತಾಗಿ ಬಿಸಿಬಿಸಿ ಚರ್ಚೆಯಾಗಿದೆ. ವಿಧಾನ ಪರಿಷತ್ (Vidhana Parishad) ನಲ್ಲಿ ಈ ಚರ್ಚೆ ನಡೆದಿದ್ದು, ಉಮಾಶ್ರೀ (Umashree) ಸೇರಿದಂತೆ ಹಲವರು ಇದರಲ್ಲಿ ಭಾಗಿಯಾಗಿದ್ದರು. ಅಷ್ಟಕ್ಕೂ ಮಾಲಾಶ್ರೀಯನ್ನು ನೆನಪಿಸಿಕೊಂಡಿದ್ದು ಬಿಜೆಪಿಯ ಸದಸ್ಯ ವಿಶ್ವನಾಥ್ (Vishwanath) ಎನ್ನುವುದು ವಿಶೇಷ. ವಿಧೇಯಕದ ಮೇಲಿನ ಚರ್ಚೆ ವೇಳೆ ಉಮಾಶ್ರೀ ಹೆಸರಿನ ಬದಲಾಗಿ, ಬಾಯ್ತಪ್ಪಿ ಮಾಲಾಶ್ರೀ (Malashree) ಅವರ ಹೆಸರು ಹೇಳಿದರು ವಿಶ್ವನಾಥ್. ಮಾಲಾಶ್ರೀ ಹೆಸರು ಕೇಳಿ ಸಭಾಪತಿಗಳಿಗೆ ಒಂದು ರೀತಿಯಲ್ಲಿ ಅಚ್ಚರಿ ಆಯಿತು. ಹಾಗಾಗಿ ಮಾಲಾಶ್ರೀ ಅವರನ್ನು ಈಗೇಕೆ ನೆನಪಿಸಿಕೊಂಡಿರಿ ಎಂದು ತಮಾಷೆಯಾಗಿಯೇ ವಿಶ್ವನಾಥ್ ಅವರನ್ನು ಕೇಳಿದರು.  ಈ ವೇಳೆ ಮಧ್ಯ ಪ್ರವೇಶ ಮಾಡಿದ ತೇಜಸ್ವಿನಿ ಗೌಡ, ಭಾರತದಲ್ಲಿ ಹೇಮಾಮಾಲಿನಿ ಹೇಗೆ ಕನಸಿನ ಕನ್ಯೆ ಎಂದು ಹೆಸರು ಪಡೆದಿದ್ರೊ, ಅದೇ ರೀತಿ ಕನ್ನಡ ಚಿತ್ರರಂಗದಲ್ಲಿ ಮಾಲಾಶ್ರೀ ನಟನೆಯಿಂದ ಹೆಸರು ಮಾಡಿದ್ರು ಎಂದರು. ಮಾತು ಮುಂದುವರೆಸಿದ ತೇಜಸ್ವಿನಿಗೌಡ  ನಾಯಕಿಯಾಗಲು ಸೌಂದರ್ಯದ ಮಾನದಂಡ ಬದಲು ನಟನೆಯ…

Read More

ಹೆಸರಾಂತ ನಟಿ ರಶ್ಮಿಕಾ ಮಂದಣ್ಣ ಅವರ ಮತ್ತೊಂದು ಡೀಪ್‌ಫೇಕ್ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ತಿಂಗಳ ಹಿಂದೆಯಷ್ಟೇ ಇವರ ಡೀಪ್‌ಫೇಕ್ ವಿಡಿಯೋ ಸಾಕಷ್ಟು ಸದ್ದು ಮಾಡಿತ್ತು. ಸರಕಾರದ ಮಟ್ಟದಲ್ಲಿ ಚರ್ಚೆಗೂ ಕಾರಣವಾಗಿತ್ತು. ಆದರೂ, ಅದನ್ನು ತಡೆಯಲು ಸಾಧ್ಯವಾಗಿಲ್ಲ ಎನ್ನುವುದಕ್ಕೆ ಹರಿಬಿಟ್ಟ ಮತ್ತೊಂದು ವಿಡಿಯೋ ಸಾಕ್ಷಿಯಾಗಿದೆ. ತಿಂಗಳ ಹಿಂದೆಯಷ್ಟೇ ರಶ್ಮಿಕಾ ಮಂದಣ್ಣ (Rashmika Mandanna) ಅವರ ಡೀಪ್‌ಫೇಕ್ ವಿಡಿಯೋ ಸಂಚಲನವನ್ನೇ ಸೃಷ್ಟಿ ಮಾಡಿತ್ತು. ರಶ್ಮಿಕಾ ಪರ ಅನೇಕರು ಮಾತನಾಡಿದ್ದರು. ದುರುಳರ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದರು. ಕೇಂದ್ರ ಸರಕಾರ ಕೂಡ ಇದನ್ನು ಗಂಭೀರವಾಗಿ ತೆಗೆದುಕೊಂಡು, ಡೀಪ್‌ಫೇಕ್ ಮಾಡುವವರ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾಗುವುದಾಗಿ ಹೇಳಿತ್ತು. ಆದರೂ, ಡೀಪ್‌ಫೇಕ್ ಕಾಟ ಮುಂದುವರೆದಿದೆ. ಡೀಪ್‌ನೆಕ್ ಬ್ಲಾಕ್ ಡ್ರೆಸ್‌ನಲ್ಲಿದ್ದ ಯುವತಿಯೊಬ್ಬರ ವಿಡಿಯೋವನ್ನು ಥೇಟ್ ರಶ್ಮಿಕಾ ಮಂದಣ್ಣ ಅವರಂತೆ ಮಾರ್ಫ್ ವಿಡಿಯೋ ಸೃಷ್ಟಿಸಿದ್ದರು. ವಿಡಿಯೋದಲ್ಲಿರುವುದು ರಶ್ಮಿಕಾ ಅಲ್ಲ, ಜರಾ ಪಟೇಲ್ ಎನ್ನುವುದು ಗೊತ್ತಾಗಿತ್ತು. ಡೀಪ್‌ಫೇಕ್ ತಂತ್ರಜ್ಞಾನ (Deepfake Technology) ಬಳಸಿ ರಶ್ಮಿಕಾ ಹೆಸರಿಗೆ ಮಸಿ ಬಳಿಯಲು ಕಿಡಿಗೇಡಿಗಳು ಯತ್ನಿಸಿದ್ದಕ್ಕೆ…

Read More

ನವದೆಹಲಿ: ಸಂಸತ್ತಿನಲ್ಲಿ ಬುಧವಾರ ನಡೆದ ಭದ್ರತಾ ಉಲ್ಲಂಘನೆಯ ಮಾಸ್ಟರ್‌ಮೈಂಡ್‌ ಲಲಿತ್‌ ಝಾನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಕೋಲ್ಕತ್ತಾ ಮೂಲದ ಶಿಕ್ಷಕ ಎರಡು ದಿನಗಳ ಕಾಲ ಪರಾರಿಯಾಗಿದ್ದ. ಲೋಕಸಭೆಯ ವೀಕ್ಷಕರ ಗ್ಯಾಲರಿಯಿಂದ ಜಿಗಿದ ಇಬ್ಬರು ಯುವಕರು ಹಳದಿ ಬಣ್ಣದ ಹೊಗೆ ಸಿಂಪಡಿಸಿದ್ದರು. ಭದ್ರತಾ ಉಲ್ಲಂಘನೆಗಾಗಿ ಐವರನ್ನು ಬುಧವಾರ ಬಂಧಿಸಲಾಗಿತ್ತು. https://ainlivenews.com/mother-sells-her-daughter-for-rs-4-lakh-compulsion-to-engage-in-immoral-activity-by-an-intoxicated-person/ ಸಾಗರ್‌, ಮನೋರಂಜನ್‌, ಅಮೋಲ್‌ ಮತ್ತು ನೀಲಂ ಅವರನ್ನು ಸ್ಥಳದಲ್ಲೇ ವಶಕ್ಕೆ ಪಡೆಯಲಾಗಿತ್ತು. ಅವರ ಜೊತೆ ಕೈಜೋಡಿಸಿದ್ದ ಮತ್ತೊಬ್ಬ ಆರೋಪಿ ವಿಶಾಲ್‌ನನ್ನು ಬಳಿಕ ವಿಚಾರಣೆಗೆ ಒಳಪಡಿಸಲಾಗಿತ್ತು. ಆರೋಪಿಗಳು ಸಂಸತ್ತಿಗೆ ಬರುವ ಮೊದಲು ವಿಶಾಲ್‌ ಅವರ ಗುರುಗ್ರಾಮದ ಮನೆಯಲ್ಲೇ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ ಪ್ರಮುಖ ಆರೋಪಿ ಲಲಿತ್‌ ಝಾ ತಲೆಮರೆಸಿಕೊಂಡಿದ್ದ. ಆತನ ಬಂಧನಕ್ಕೂ ಪೊಲೀಸರು ಕಾರ್ಯಾಚರಣೆ ನಡೆಸಿದ್ದರು. ಈಗ ಪ್ರಕರಣದ ಮಾಸ್ಟರ್‌ಮೈಂಡ್‌ನನ್ನು ಬಂಧಿಸಿದ್ದಾರೆ. ಲಲಿತ್‌ ಝಾ ತಾನಾಗಿಯೇ ಠಾಣೆಗೆ ಬಂದು ಸರೆಂಡರ್‌ ಆಗಿದ್ದಾನೆ ಎನ್ನಲಾಗಿದೆ. 

Read More

ಬೆಳಗಾವಿ, ಡಿ. 15: “ಬಿಜೆಪಿ ನಾಯಕರಿಗೆ ರಾಜಕಾರಣ ಮುಖ್ಯವೇ ಹೊರತು ರಾಜ್ಯದ ಅಭಿವೃದ್ಧಿಯಾಗಲಿ, ಜನರ ಸಮಸ್ಯೆಯಾಗಲಿ ಅಲ್ಲ. ಅವರಿಗೆ ಜನರ ಸಮಸ್ಯೆ ಬಗ್ಗೆ ಆಸಕ್ತಿ ಇಲ್ಲವೆಂದರೆ ನಾವೇನು ಮಾಡೋಕಾಗುತ್ತೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಪ್ರಶ್ನಿಸಿದರು. ಸುವರ್ಣಸೌಧದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶುಕ್ರವಾರ ಉತ್ತರಿಸಿದರು. “ಬಿಜೆಪಿ ಹಾಗೂ ಜನತಾದಳದವರಿಗೆ ಜನರ ಸಮಸ್ಯೆ ಬಗ್ಗೆ ಎಷ್ಟು ಕಾಳಜಿ ಇದೆ ಎಂಬುದು ಮುಖ್ಯ. ಆದರೆ ಬಿಜೆಪಿಯವರಿಗೆ ಈ ಬಗ್ಗೆ ಚರ್ಚೆ ಮಾಡಲು ಆಸಕ್ತಿ ಇಲ್ಲದಿದ್ದರೆ ನಾವೇನು ಮಾಡಲು ಸಾಧ್ಯ? ಬಿಜೆಪಿಗೆ ಕೇವಲ ರಾಜಕಾರಣ ಬೇಕು. ಅವರು ರಾಜಕಾರಣ ಮಾಡಿಕೊಂಡಿರಲಿ, ನಾವು ರಾಜ್ಯದ ಅಭಿವೃದ್ಧಿಯತ್ತ ಗಮನ ಹರಿಸುತ್ತೇವೆ” ಎಂದರು. ಭೋಜನಕೂಟದಲ್ಲಿ ಅನ್ಯ ಪಕ್ಷಗಳ ಶಾಸಕರ ಭಾಗಿ ವಿಚಾರವಾಗಿ ಕೇಳಿದಾಗ, “ಮದುವೆ, ಶುಭ ಸಮಾರಂಭ, ಭೋಜನ ಕೂಟದಲ್ಲಿ ನಾಯಕರು ಪಕ್ಷಾತೀತ ಹಾಗೂ ಜಾತ್ಯಾತೀತವಾಗಿ ಸೇರುತ್ತಾರೆ. ಅದರಲ್ಲಿ ತಪ್ಪೇನಿದೆ? ಬಿಜೆಪಿಯವರು ನನ್ನ ಜೊತೆ ಮಾತನಾಡುವುದು, ನಮ್ಮ ಪಕ್ಷದ ನಾಯಕರು ಅವರ ಜೊತೆ ಮಾತನಾಡುವುದು ಸಹಜವಾದುದ್ದು. ರಾಜಕೀಯವಾಗಿ…

Read More