Author: AIN Author

ಹುಬ್ಬಳ್ಳಿ: ಇದೇ ಡಿಸೆಂಬರ್ 29 ರಂದು ತೆರೆಗೆ ಬರಲು ಸಜ್ಜಾಗಿರುವ ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌, ಮಾಲಾಶ್ರೀ ಪುತ್ರಿ ಆರಾಧನಾ ಜೊತೆಯಾಗಿ ನಟಿಸಿರುವ ʻಕಾಟೇರʼ ಚಿತ್ರದ ಟ್ರೈಲರ್‌ ಹುಬ್ಬಳ್ಳಿಯಲ್ಲಿ ಬಿಡುಗಡೆಯಾಗಿದೆ. ಹುಬ್ಬಳ್ಳಿ ರೈಲ್ವೆ ಮೈದಾನದಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಟ್ರೈಲರ್‌ ಬಿಡುಗಡೆಗೊಳಿಸಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಶಾಸಕರಾದ ಕೋನರೆಡ್ಡಿ, ಪ್ರಸಾದ್ ಅಬ್ಬಯ್ಯ ಸಾಥ್ ನೀಡಿದರು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸಹ ಚಿತ್ರ ತಂಡಕ್ಕೆ ಆಲ್ ದ ಬೆಸ್ಟ್ ಹೇಳಿದರು. ರಾಕ್‌ಲೈನ್‌ ವೆಂಕಟೇಶ್‌ ನಿರ್ಮಾಣದ, ತರುಣ್ ಸುದೀರ್ ನಿರ್ದೇಶನದ ಕಾಟೇರ ಚಿತ್ರ ಇದೇ ತಿಂಗಳು 29ಕ್ಕೆ ತೆರೆಗೆ ಬರಲು ಸಿದ್ಧವಾಗಿದೆ. ನಟ ದರ್ಶನರ ಬಹು ನಿರೀಕ್ಷಿತ ಚಿತ್ರ ಇದಾಗಿದ್ದು, ಈಗಾಗಲೇ ಚಿತ್ರ ಭಾರೀ ಹೈಪ್ ಕ್ರಿಯೆಟ್ ಮಾಡಿದೆ. ಬಹಳ ದಿನಗಳ ಬಳಿಕ ಡಿ ಬಾಸ್ ಮಾಸ್ ಲುಕ್ ನಲ್ಲಿ ಕಾಣಿಸಿಕೊಂಡಿದ್ದಾರೆ. ಟೀಸರ್ ಮತ್ತು ಸಾಂಗ್ ಯೂಟ್ಯೂಬ್‌ನಲ್ಲಿ ಸೆನ್ಸೇಷನ್ ಕ್ರಿಯೇಟ್‌ ಮಾಡಿದೆ. ಚಿತ್ರ ಬಿಡುಗಡೆಗೆ ದಿನಗಣನೆ ಆರಂಭವಾಗಿದೆ. ಈ…

Read More

ಬೆಂಗಳೂರು: ರಾಮನಗರದ ಅರಳಿಕರೆದೊಡ್ಡಿ‌ ಗ್ರಾಮದಲ್ಲಿ ಒಂಟಿ ಸಲಗ ದಾಳಿಯಿಂದ ಮೃತಪಟ್ಟಿರುವ ತಿಮ್ಮಪ್ಪ ಅವರ ಕುಟುಂಬಕ್ಕೆ ಸೂಕ್ತ ಪರಿಹಾರ, ಅವರ ಮಗಳಿಗೆ ಉದ್ಯೋಗ ನೀಡಲು ಕ್ರಮ ಕೈಗೊಳ್ಳುವಂತೆ ಅರಣ್ಯಾಧಿಕಾರಿಗಳಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸೂಚನೆ ನೀಡಿದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ತಮ್ಮ ಗೃಹ ಕಚೇರಿಯಿಂದ ಭಾನುವಾರ ದೂರವಾಣಿ ಮೂಲಕ ಅರಣ್ಯಾಧಿಕಾರಿಗಳಿಂದ ಮಾಹಿತಿ ಪಡೆದ ಡಿಸಿಎಂ ಅವರು, “ಗ್ರಾಮಸ್ಥರ ಬೇಡಿಕೆಯಂತೆ ಅಲ್ಲಿ ಬ್ಯಾರಿಕೇಡ್ ವ್ಯವಸ್ಥೆ ಮಾಡಿ. ಅವರ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ನೀಡಿ” ಎಂದು ತಿಳಿಸಿದರು. ಅರಳಿಕರೆ ದೊಡ್ಡಿ ಗ್ರಾಮದ ತಿಮ್ಮಪ್ಪ (60) ಅವರು ಇಂದು ಮುಂಜಾನೆ‌ ನಾಯಿಗಳು ಬೊಗಳುತ್ತಿದ್ದ ಶಬ್ದ ಕೇಳಿ ತೋಟದ ಮನೆ ಬಳಿ ಹೋದಾಗ ಒಂಟಿ ಕಾಡಾನೆ ದಾಳಿಗೆ ಸಿಕ್ಕಿ ಬಲಿಯಾಗಿದ್ದಾರೆ.

Read More

ಬೆಂಗಳೂರು: ಕೇರಳದಲ್ಲಿ ಕೊವಿಡ್​ ರೂಪಾಂತರಿ ತಳಿ ಪತ್ತೆಯಾಗಿದ್ದು, ರಾಜ್ಯದಲ್ಲಿ ಕೊವಿಡ್​ ಆತಂಕ ಮನೆ ಮಾಡಿದೆ. ಕೊವಿಡ್ ಬಗ್ಗೆ ನಿರ್ಲಕ್ಷ್ಯವಹಿಸದಂತೆ ಆರೋಗ್ಯ ತಜ್ಞರು ಸಲಹೆ ನೀಡಿದ್ದಾರೆ. ಈ ಕುರಿತು ಕೆಲವೊಂದು ಸೂಚನೆಗಳನ್ನು ನೀಡಿರುವ ವೈದ್ಯರು, ಒಂದು ಕಡೆಯಿಂದ ಇನ್ನೊಂದು ಕಡೆ ಸಂಚಾರ ಮಾಡುವಾಗ ಕಡ್ಡಾಯವಾಗಿ ಮಾಸ್ಕ್​ ಬಳಸುವುದು ಕಡ್ಡಾಯ. ವಯಸ್ಸಾದವರು, ಸಕ್ಕರೆ ಕಾಯಿಲೆ ಇರುವವರು ಆದಷ್ಟು ಎಚ್ಚರ ವಹಿಸಲು ವೈದ್ಯರು ಸಲಹೆ ನೀಡಿದ್ದಾರೆ. ಕೆಮ್ಮು, ನೆಗಡಿ, ಜ್ವರ ಇದ್ದರೆ ಈಗಿನಿಂದಲೇ ಮಾಸ್ಕ್ ಬಳಸಲು ಸೂಚನೆ ನೀಡಲಾಗಿದೆ. ಇನ್ನು, ಯಾರಿಗೆ ಕೆಮ್ಮು ಇರುತ್ತದೆಯೋ ಅಂತಹವರ ಹತ್ತಿರ ಹೋಗುವುದು ಕಡಿಮೆ ಮಾಡಿ ಎಂದು ಸಲಹೆ ನೀಡಿದ್ದಾರೆ. ಆದಷ್ಟು ಸಾಮಾಜಿಕ ಅಂತರ ಕಾಪಾಡಿಕೊಳ್ಳುವಂತೆ ವೈದ್ಯರು ಸೂಚನೆ ನೀಡಿದ್ದಾರೆ.

Read More

ಇಸ್ಲಾಮಾಬಾದ್: ಹಲವು ಔಷಧೀಯ ಗುಣಗಳನ್ನು ಹೊಂದಿರುವ ಅಪರೂಪದ ಮೀನುಗಳನ್ನು ಮಾರಾಟ ಮಾಡಿ ಪಾಕಿಸ್ತಾನದ ಮೀನುಗಾರನೊಬ್ಬ (Pakistan Fisherman) ರಾತ್ರೋರಾತ್ರಿ ಕೋಟ್ಯಧಿಪತಿಯಾಗಿದ್ದಾರೆ. ಬಡ ಇಬ್ರಾಹಿಂ ಹೈದರಿ ಮೀನುಗಾರಿಕಾ ಗ್ರಾಮದಲ್ಲಿ ವಾಸಿಸುವ ಹಾಜಿ ಬಲೋಚ್ ಮತ್ತು ಆತನ ಸಂಗಡಿಗರು ಅರಬ್ಬಿ ಸಮುದ್ರದಿಂದ ಗೋಲ್ಡನ್ ಫಿಶ್ ಅಥವಾ “ಸೋವಾ” (Sowa Fish) ಎಂದು ಕರೆಯಲ್ಪಡುವ ಮೀನುಗಳನ್ನು ಹಿಡಿದಿದ್ದರು. ಮೀನು ಮಾರಿ ಬಂದ ಹಣವನ್ನು 7 ಮಂದಿ ಮೀನುಗಾರರು ಹಂಚಿಕೊಂಡಿದ್ದಾರೆ. ಬೆಳಗ್ಗೆ ಕರಾಚಿ ಬಂದರಿನಲ್ಲಿ ಅಪರೂಪದ ಮೀನುಗಳನ್ನು ಹರಾಜು ಹಾಕಲಾಯಿತು. ಸುಮಾರು 7 ಕೋಟಿ ರೂಪಾಯಿಗೆ ಮೀನು ಮಾರಾಟವಾಗಿದೆ ಎಂದು ಪಾಕಿಸ್ತಾನದ ಮೀನುಗಾರರ ಜಾನಪದ ವೇದಿಕೆಯ ಮುಬಾರಕ್ ಖಾನ್ ತಿಳಿಸಿದ್ದಾರೆ. ಸೋವಾ ಮೀನು ಅಪರೂಪದ್ದು ಮತ್ತು ಬೆಲೆಬಾಳುವಂತಹದ್ದು. ಏಕೆಂದರೆ ಅದರ ಹೊಟ್ಟೆಯಲ್ಲಿರುವ ಪದಾರ್ಥಗಳು ಕಾಯಿಲೆಗಳನ್ನು ಗುಣಪಡಿಸುವ ಮತ್ತು ಔಷಧೀಯ ಗುಣಗಳನ್ನು ಹೊಂದಿವೆ ಎಂದು ಹೇಳಲಾಗುತ್ತದೆ. ಮೀನಿನ ದಾರದಂತಹ ವಸ್ತುವನ್ನು ಶಸ್ತ್ರಚಿಕಿತ್ಸಾ ವಿಧಾನಗಳಲ್ಲಿಯೂ ಬಳಸಲಾಗುತ್ತದೆ. https://ainlivenews.com/what-did-dk-shivakumar-say-about-pratap-singh-being-trapped/ ಒಂದು ಮೀನು ಹರಾಜಿನಲ್ಲಿ ಸುಮಾರು 70 ಲಕ್ಷ ರೂಪಾಯಿಗೆ ಮಾರಾಟವಾಗುತ್ತದೆ. ಸಾಮಾನ್ಯವಾಗಿ…

Read More

ಮಡಿಕೇರಿ:- ಡಿ. 18ರಂದು ಅಂದರೆ ನಾಳೆ ಮುತ್ತಪ್ಪ ದೇವಾಲಯ ಉತ್ಸವ ಸಮಿತಿ ವತಿಯಿಂದ ಮಡಿಕೇರಿಯ ಮುತ್ತಪ್ಪ ದೇವಾಲಯದಲ್ಲಿ ಸುಬ್ರಹ್ಮಣ್ಯಸ್ವಾಮಿ ಷಷ್ಠಿ ಮಹೋತ್ಸವ ನಡೆಯಲಿದೆ ಎಂದು ತಿಳಿದು ಬಂದಿದೆ. ಮಹೋತ್ಸವದಲ್ಲಿ ದೇಗುಲದ ಆವರಣದಲ್ಲಿರುವ ಸುಬ್ರಹ್ಮಣ್ಯದೇವರ ಮೂರ್ತಿಗೆ ಪಂಚಾಮೃತ ಅಭಿಷೇಕ, ಕ್ಷೀರಾಭಿಷೇಕ, ಅಪ್ಪಂಸೇವೆ, ಪಂಚಕಜ್ಜಾಯ ಸೇವೆ, ಹಣ್ಣುಕಾಯಿ ಪೂಜೆ, ಪುಷ್ಪಾರ್ಚನೆ, ಮಂಗಳಾರತಿ, ಮಹಾಪೂಜೆ ಮೊದಲಾದ ಸೇವೆಗಳು ನಡೆಯಲಿವೆ ಎಂದು ಮುತ್ತಪ್ಪ ದೇವಾಲಯ ಸಮಿತಿ ಅಧ್ಯಕ್ಷ ಅಧ್ಯಕ್ಷ ಟಿ.ಕೆ.ಸುಧೀರ್ ತಿಳಿಸಿದರು. ಬೆಳಿಗ್ಗೆ 9 ಗಂಟೆಗೆ ಮುತ್ತಪ್ಪದೇವರ ವೆಳ್ಳಾಟಂ, 10 ಗಂಟೆಗೆ ಗುಳಿಗ ದೇವರ ವೆಳ್ಳಾಟಂ, 10.30ಕ್ಕೆ ಪೋದಿ ದೇವರ ವೆಳ್ಳಾಟಂ, ಮಧ್ಯಾಹ್ನ 12 ಗಂಟೆಗೆ ಸುಬ್ರಹ್ಮಣ್ಯದೇವರ ಶ್ರೀಭೂತ ಬಲಿ, 12.30ಕ್ಕೆ ಮಹಾಮಂಗಳಾರತಿ ಹಾಗೂ ಅನ್ನಸಂತರ್ಪಣೆ ನಡೆಯಲಿದೆ ಎಂದರು.

Read More

ಬೆಂಗಳೂರು: ಇಂದು ಮಾಜಿ ಸಚಿವರು ಹಾಗೂ ಶಾಸಕರಾದ ಎಚ್.ಡಿ.ರೇವಣ್ಣ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸದಸ್ಯರಾದ ಟಿ.ಎ,ಶರವಣ ಅವರು ಶುಭ ಹಾರೈಸಿದ್ದಾರೆ. ಜನಪ್ರಿಯ ಶಾಸಕರಾದ ಎಚ್.ಡಿ.ರೇವಣ್ಣ ಅವರ ಬೆಂಗಳೂರಿನ ಬಸವನಗುಡಿ ನಿವಾಸಕ್ಕೆ MLC  ಟಿ. ಎ. ಶರವಣ ಅವರು ಭೇಟಿ ನೀಡಿ ಹುಟ್ಟು ಹಬ್ಬದ ಶುಭಾಶಯಗಳನ್ನು ಕೋರಿದರು. ಸಾಯಿಬಾಬಾ ಅವರ ಆಶೀರ್ವಾದ ಸದಾ ಇವರ ಮೇಲಿರಲಿ, ಇನ್ನೂ ಹೆಚ್ಚಿನ ಜನ ಸೇವೆಯನ್ನು ಮಾಡುವ ಶಕ್ತಿ ಭಗವಂತ ಕರುಣಿಸಲಿ ಎಂದು ಹಾರೈಸಿದರು.

Read More

ರಾಮನಗರ:- ಒಂಟಿ ಸಲಗ ದಾಳಿಯಿಂದ ಮೃತಪಟ್ಟ ವ್ಯಕ್ತಿಯ ಮಗಳಿಗೆ ಕೆಲಸ ನೀಡಲು ಡಿಕೆಶಿ ಸೂಚನೆ ನೀಡಿದ್ದಾರೆ. ರಾಮನಗರ ಜಿಲ್ಲೆಯ ಹರಳಿಕರೆ ದೊಡ್ಡಿ‌ ಗ್ರಾಮದಲ್ಲಿ ಒಂಟಿ ಸಲಗ ದಾಳಿಯಿಂದ ವ್ಯಕ್ತಿಯೋರ್ವ ಸಾವನ್ನಪ್ಪಿದ ವಿಚಾರವನ್ನು ಅರಣ್ಯಾಧಿಕಾರಿಗಳು ಡಿಸಿಎಂ ಡಿ.ಕೆ. ಶಿವಕುಮಾರ್ ಅವರಿಗೆ ತಿಳಿಸಿದ್ದಾರೆ. ತಿಮ್ಮಪ್ಪ (64) ಮುಂಜಾನೆ‌ ಜಮೀನಿಗೆ ತೆರಳಿದ ವೇಳೆ ಒಂಟಿ ಸಲಗ ದಾಳಿ ಮಾಡಿದೆ. 12 ಕಿ.ಮೀ ರೈಲ್ವೆ ಬ್ಯಾರಿಕೇಡ್ ಹಾಕುವಂತೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ಮೃತ ವ್ಯಕ್ತಿಯ ಮಗಳಿಗೆ ಅರಣ್ಯ ಇಲಾಖೆಯಲ್ಲಿ ಕೆಲಸ ನೀಡುವಂತೆ ಮನವಿ ಮಾಡಿದ್ದಾರೆ ಎಂದು ಅರಣ್ಯಾಧಿಕಾರಿಗಳು ಡಿಸಿಎಂ ಗೆ ಮಾಹಿತಿ ನೀಡಿದರು. ಮೃತರ ಕುಟುಂಬಕ್ಕೆ ಪರಿಹಾರ ನೀಡಿ, ಬ್ಯಾರಿಕೇಡ್ ಅಳವಡಿಸಿ. ಜತೆಗೆ ಆ ಹೆಣ್ಣು ಮಗಳಿಗೆ ನಿಮ್ಮ‌ ಇಲಾಖೆಯಲ್ಲಿ ಕೆಲಸ ನೀಡಿ ಎಂದು ಸೂಚನೆ ನೀಡಿದ್ದಾರೆ.

Read More

ಬೆಂಗಳೂರು: : ಕೋಲಾರ ಜಿಲ್ಲೆಯ ಮಾಲೂರು ತಾಲೂಕಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಶಾಲಾ ಮಕ್ಕಳನ್ನು ಮಲದ ಗುಂಡಿ ಸ್ವಚ್ಚಕಾರ್ಯಕ್ಕೆ ಬಳಸಿಕೊಂಡ ವಿಚಾರಕ್ಕೆ ಸಂಬಂಧಿಸಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಕೋಲಾರದ ಮಾಲೂರು ಮಲದಗುಂಡಿ ಪ್ರಕರಣದಿಂದ ವಿಷಯ ಗೊತ್ತಾಗಿದೆ. ಈ ಬಗ್ಗೆ ಮಾಹಿತಿ ತರಿಸುತ್ತಿದ್ದೇನೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುತ್ತೇನೆ ಎಂದು ಹೇಳಿದ್ದಾರೆ. ಶಾಲಾ ಮಕ್ಕಳನ್ನ ಶೌಚ ಗುಂಡಿಗೆ ಇಳಿಸಿದ ಪ್ರಕರಣ ಸಂಬಂಧ ಪ್ರಾಂಶುಪಾಲೆ ಭಾರತಮ್ಮ, ಶಿಕ್ಷಕರಾದ ಅಭಿಷೇಕ್​​​​​​​, ಮುನಿಯಪ್ಪ, ವಾರ್ಡನ್​​​ ಮಂಜುನಾಥ್​ರನ್ನು​​ ಅಮಾನತು ಮಾಡಲಾಗಿದೆ. ಸಚಿವ ಡಾ.H.C.ಮಹದೇವಪ್ಪ ಸೂಚನೆ ಮೇರೆಗೆ ಜಿಲ್ಲಾಧಿಕಾರಿಗಳು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.  ಕ್ರಿಮಿನಲ್​​​ ಕೇಸ್​​ ದಾಖಲಿಸಲು ಸಚಿವರು ಸೂಚನೆ ನೀಡಿದ್ದಾರೆ.

Read More

ಬೆಂಗಳೂರು: ಪ್ರತಾಪ್ ಸಿಂಹರನ್ನು ಟ್ರ್ಯಾಪ್ ಮಾಡಲಾಗ್ತಿದೆ ಎಂಬ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಡಿಸಿಎಂ ಡಿಕೆಶಿವಕುಮಾರ್ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಗರದಲ್ಲಿ ಮಾತನಾಡಿದ ಅವರು, ಪ್ರತಾಪ್ ಸಿಂಹಾರನ್ನ ಟ್ರ್ಯಾಪ್ ಹೇಗೆ ಮಾಡಲಾಗುತ್ತದೆ, ಯಾರ್ರೀ ಮಾಡ್ತಾರೆ? ಇನ್ನೂ ಏನೂ ಚಿಕ್ಕ ಹುಡುಗರಲ್ಲ, ನಾನೂ ಹುಡುಗರಲ್ಲ ನಮ್ಮ ನಮ್ಮ ಜವಾಬ್ದಾರಿ ಇರುತ್ತದೆ ಎಂದು ಪ್ರತಾಪ್ ಸಿಂಹಾ ವಿರುದ್ಧ ಕಿಡಿ ಕಾರಿದ್ದಾರೆ. ಹಾಗೆ ದೆಹಲಿ ಪ್ರವಾಸ ವಿಚಾರ ಮಾತನಾಡಿದ ಅವರು, ಹೈಕಮಾಂಡ್ ನಾಯಕರೇ ಅವರೇನೂ ಕರೆದಿಲ್ಲ, ನಾವೇ ಹೋಗ್ತಾ ಇದ್ದೇವೆ ನಾವೆಲ್ಲ ನಿಗಮ ಮಂಡಳಿ ಲಿಸ್ಟ್ ಕೊಟ್ಟಿದ್ದೇವೆ ಅದಕ್ಕೆ ಅಂಕಿತ ಬೇಕು ತಾಲೂಕು ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಕಾರ್ಯಕ್ರಮ ಮಾಡಬೇಕು ಇನ್ನು 15 ದಿನಗಳ ಒಳಗೆ ಕಾರ್ಯಕ್ರಮ ಮಾಡಬೇಕು ಎಂದು ಹೇಳಿದರು. ಹಾಗೆ ನಾರಾಯಣಗೌಡ ಬಂದು ಭೇಟಿಯಾಗಿದ್ದರು ಕನ್ನಡದ ಬೋರ್ಡ್ ಹಾಕಿ ಅಂದಿದ್ದಕ್ಕೆ ಇವರ ಮೇಲೆ ಕೇಸ್ ಹಾಕಿದ್ದಾರೆ ಯಾರೋ ದುರ್ನಡತೆಯಿಂದ ನಡೆದುಕೊಂಡಿದ್ದಾರೆ ಅಂತ ಬಂದಿದ್ದರು ಅದರ ಬಗ್ಗೆ ಕಮಿಷನರ್ ಹತ್ರ ಮಾತಾಡಿದ್ದೇನೆ ಕನ್ನಡಿಗ ಹೋರಾಟಗಾರರ ಮೇಲೆ…

Read More

ಕೊಳ್ಳೇಗಾಲ:- ಅನುಮಾನಾಸ್ಪದವಾಗಿ ಮಹಿಳೆ ಮೃತಪಟ್ಟಿದ್ದು, ಅವರ ಆರು ವರ್ಷದ ಮಗಳು ನಾಪತ್ತೆಯಾಗಿರುವ ಘಟನೆ ಆದರ್ಶ ನಗರ ಬಡಾವಣೆಯಲ್ಲಿ ಜರುಗಿದೆ. ಪಟ್ಟಣ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿದೆ. ರೇಖಾ, ಮಗಳೊಂದಿಗೆ ಬಾಡಿಗೆ ಮನೆಯಲ್ಲಿ ಮಗಳ ಜೊತೆ ವಾಸವಿದ್ದರು. ಮಗಳನ್ನು ಲಿಂಗಣಾಪುರ ಸರ್ಕಾರಿ ಪ್ರಾಥಮಿಕ ಶಾಲೆಗೆ ಕಳುಹಿಸುತ್ತಿದ್ದರು. ಎರಡು ದಿನಗಳಿಂದ ಬಾಲಕಿ ಶಾಲೆಗೆ ಬಂದಿಲ್ಲ ಎಂದು ಶಾಲೆಯ ಶಿಕ್ಷಕರು ಶನಿವಾರ ಮನೆಗೆ ಬಂದು ನೋಡಿದಾಗ ರೇಖಾಳ ಶವ ಮನೆಯಲ್ಲಿ ಮಲಗಿದ್ದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಮಗಳು ಅಲ್ಲಿರಲಿಲ್ಲ. ತಕ್ಷಣ ಶಿಕ್ಷಕರು ಪೊಲೀಸರಿಗೆ ವಿಷಯ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಪದ್ಮಿನಿ ಸಾಹೂ, ಡಿವೈಎಸ್ಪಿ ಸೋಮೇಗೌಡ, ಶ್ವಾನದಳ ಹಾಗೂ ಬೆರಳು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಇನ್ನೂ ಮಗಳ ಸಾವಿಗೆ ಸಂಬಂಧಿಸಿದಂತೆ ರೇಖಾ ತಂದೆ ನಾಗರಾಜು ಪೊಲೀಸರಿಗೆ ದೂರು ನೀಡಿದ್ದು, ಕೊಲೆ ಆರೋಪ ಮಾಡಿದ್ದಾರೆ.

Read More