Author: AIN Author

ಮುಂಬೈ ಇಂಡಿಯನ್ಸ್​ ತಂಡದ ನಾಯಕತ್ವ ಸ್ಥಾನದಿಂದ ರೋಹಿತ್ ಶರ್ಮಾ ಅವರನ್ನು ಕೆಳಗಿಳಿಸುವ ಮೂಲಕ ಕ್ರೀಡಾಭಿಮಾನಿಗಳನ್ನು ಮುಂಬೈ ಫ್ರಾಂಚೈಸಿ ಅಚ್ಚರಿಗೆ ದೂಡಿದೆ. ಅಲ್ಲದೆ, ಮುಂಬೈ ತಂಡದ ವಿರುದ್ಧ ಸಿಡಿದೆದ್ದಿರುವ ರೋಹಿತ್​ ಅಭಿಮಾನಿಗಳು ಜರ್ಸಿ ಸುಡುವ ಮೂಲಕ ತಮ್ಮ ಆಕ್ರೋಶ ಹೊರಹಾಕಿದ್ದಾರೆ. ಇನ್ನು ಕೆಲವರು ಫ್ರಾಂಚೈಸಿಯ ಇನ್​ಸ್ಟಾಗ್ರಾಂ ಖಾತೆಯನ್ನು ಅನ್​ಫಾಲೋ ಮಾಡಿದ್ದಾರೆ. ನಿನ್ನೆಯಷ್ಟೇ ಸೂರ್ಯಕುಮಾರ್​ ಯಾದವ್​ ಒಡೆದ ಹೃದಯದ ಎಮೋಜಿ ಶೇರ್ ಮಾಡುವ ಮೂಲಕ ತಮ್ಮ ಬೇಸರ ಹೊರಹಾಕಿದ್ದರು. ಇದೀಗ ರೋಹಿತ್​ ಪತ್ನಿ ರಿತಿಕಾ ಸಾಜ್ದೇಹ್​ ಮೊದಲ ಬಾರಿ ಪ್ರತಿಕ್ರಿಯೆ ನೀಡಿದ್ದಾರೆ. ಚೆನ್ನೈ ಸೂಪರ್​ ಕಿಂಗ್ಸ್ ತಂಡದ ಇನ್​ಸ್ಟಾಗ್ರಾಂ ಪೋಸ್ಟ್​ಗೆ ರಿತಿಕಾ ಪ್ರತಿಕ್ರಿಯಿಸಿದ್ದಾರೆ.​ 2013 ರಿಂದ 2023ರ ವರೆಗೆ ಒಂದು ದಶಕಗಳವರೆಗೆ ಉತ್ಸಾಹಭರಿತ ಸವಾಲು! ನಿಮ್ಮ ಮೇಲಿನ ಗೌರವ ಹೆಚ್ಚಿದೆ ಎಂದು ಚೆನ್ನೈ ತಂಡ, ರೋಹಿತ್​ ಅವರ ನಾಯಕತ್ವದ ಜರ್ನಿಯ ವಿಡಿಯೋ ತುಣುಕನ್ನು ಶೇರ್​ ಮಾಡಿಕೊಂಡು ಗೌರವ ಸೂಚಿಸಿದೆ. ಈ ಪೋಸ್ಟ್​ಗೆ ರಿತಿಕಾ ಅವರು ಕಾಮೆಂಟ್​ ಬಾಕ್ಸ್​ನಲ್ಲಿ ಹಳದಿ ಬಣ್ಣದ ಹೃದಯದ ಎಮೋಜಿ ಹಾಕುವ…

Read More

ಬೆಂಗಳೂರು:- ಬೆಂಗಳೂರು ನಿರ್ಮಾತೃ ಕೆಂಪೇಗೌಡರಿಗೆ ಅಪಮಾನವಾಗುವ ರೀತಿಯಲ್ಲಿ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೆಯೊಂದನ್ನು ನೀಡಿದ್ದ ನಟ ಚೇತನ್ ಕುಮಾರ್ ವಿರುದ್ಧ ಎನ್​ಸಿಆರ್​ ದಾಖಲಾಗಿದೆ. ನಾಡಪ್ರಭು ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದ್ದಾರೆ ಎಂದು ವಕೀಲ ಆರ್ ಎಲ್ ಎನ್ ಮೂರ್ತಿ ಅವರು ಶೇಷಾದ್ರಿಪುರ ಪೊಲೀಸ್​ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರು ಪಡೆದು ಎನ್ ಸಿಆರ್ ದಾಖಲಿಸಿಕೊಂಡಿದ್ದಾರೆ ಪೊಲೀಸರು. ಇನ್ನೂ ಸಾಮಾಜಿಕ ಆಗುಹೋಗುಗಳ ಬಗ್ಗೆ ವಿಭಿನ್ನ ರೀತಿಯಲ್ಲಿ ಪೋಸ್ಟ್​ ಹಾಕುವ ಚೇತನ್​ ಅವರ ಹೇಳಿಕೆಗಳು ಪ್ರತಿ ಬಾರಿಯೂ ವಿವಾದಕ್ಕೆ ಕಾರಣವಾಗುತ್ತವೆ. ಅಂತೆಯೇ ಈ ಬಾರಿ ಅವರು ಟಿಪ್ಪು ಸುಲ್ತಾನ್ ಹಾಗೂ ಕೆಂಪೇಗೌಡರ ನಡುವೆ ಹೋಲಿಕೆ ಮಾಡಿ ಟ್ವೀಟ್ ಹಾಕಿದ್ದರು.

Read More

ಚಿಕ್ಕಮಗಳೂರು:- ಭದ್ರತಾ ಲೋಪದ ಹಿಂದೆ ಕಾಂಗ್ರೆಸ್‌ ಪಕ್ಷದ ಟೂಲ್‌ ಕಿಟ್‌ ರಾಜಕಾರಣ ಇದ್ದಂತೆ ಮಾಜಿ ಶಾಸಕ ಸಿಟಿ ರವಿ ಅನುಮಾನ ವ್ಯಕ್ತಪಡಿಸಿದ್ದಾರೆ ಈ ಸಂಬಂಧ ಮಾತನಾಡಿದ ಅವರು,ಘಟನೆ ನಡೆದ ಕೆಲವೇ ಕ್ಷಣಗಳಲ್ಲಿ ಅದರ ಹಿನ್ನೆಲೆ ಅರ್ಥವಾಗುವ ಮುಂಚೆಯೇ ಯುವ ಕಾಂಗ್ರೆಸ್ ಕಾರ್ಯಕರ್ತರು ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತಾರೆ. ವಿಧಾನಸಭೆಯಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಪ್ರಶ್ನೆ ಮಾಡುತ್ತಾರೆ. ತನಿಖೆ ಮಾಡಿ ಎಂದು ಒತ್ತಾಯಿಸುವುದು ಸರಿ ಆದರೆ. ಅದನ್ನೂ ಮೀರಿ ಸಂಸದ ಪ್ರತಾಪ್ ಸಿಂಹ ಅವರನ್ನು ಗುರಿ ಮಾಡಿದರು ಎಂದರು. ಇತ್ತೀಚೆಗೆ ಕಾಂಗ್ರೆಸ್ ಸಂಸದನೊಬ್ಬನ ಮನೆಯಲ್ಲಿ ಐಟಿ ದಾಳಿ ವೇಳೆ ದಾಖಲೆ ಪ್ರಮಾಣದ ಹಣ ಪತ್ತೆಯಾಗಿದೆ. 500 ಕೋಟಿ ರು.ಗೂ ಹೆಚ್ಚಿನ ಅಕ್ರಮ ಆಸ್ತಿ, 350 ಕೋಟಿ ರು.ಗಳಿಗಿಂತ ಹೆಚ್ಚಿನ ನಗದು ಪತ್ತೆಯಾಗಿತ್ತು. ಇದೇ ವೇಳೆ 5 ರಾಜ್ಯಗಳ ಚುನಾವಣೆ ಪೈಕಿ 4 ರಾಜ್ಯಗಳಲ್ಲಿ ಬಿಜೆಪಿ ಜಯಭೇರಿ ಬಾರಿಸಿತು. ಇವರೆಡರ ವಿಷಯಾಂತರ ಮಾಡುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷ ಸಂಸತ್‌ನ…

Read More

ವೀಕೆಂಡ್ ನಲ್ಲೂ ಚಿನ್ನ ಮತ್ತು ಬೆಳ್ಳಿ ಬೆಲೆ ಇಳಿಕೆ ಮುಂದುವರಿದಿದೆ. ಸಾಂಪ್ರದಾಯಿಕವಾಗಿ, ಹಣದುಬ್ಬರ ಹೆಚ್ಚಾದಂತೆ, ಚಿನ್ನದ ಬೇಡಿಕೆಯು ಹೆಚ್ಚಾಗುತ್ತದೆ, ಹೂಡಿಕೆದಾರರು ಸುರಕ್ಷಿತ ಸ್ವತ್ತುಗಳನ್ನು ಹುಡುಕುತ್ತಾರೆ. ಆದಾಗ್ಯೂ, ಹೆಚ್ಚಿನ ಹಣದುಬ್ಬರದ ಅವಧಿಯಲ್ಲಿ ಚಿನ್ನದ ಬೆಲೆಗಳು ಏರಿಳಿತಗಳನ್ನು ಪ್ರದರ್ಶಿಸಬಹುದು. ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ : 22 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 57,300 ರೂ. 24 ಕ್ಯಾರಟ್​ನ 10 ಗ್ರಾಂ ಚಿನ್ನದ ಬೆಲೆ: 62,510ರೂ. ಬೆಳ್ಳಿ ಬೆಲೆ 1 ಕೆಜಿ: 75,500 ರೂ. ದೈನಂದಿನ ಪ್ರಕ್ರಿಯೆಯಲ್ಲಿ ಚಿನ್ನದ ದರವು ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಎಷ್ಟಿದೆ ಎಂದು ನೋಡುವುದಾದರೆ, ಬೆಂಗಳೂರಿನಲ್ಲಿ 22 ಕ್ಯಾರೆಟ್ 10 ಗ್ರಾಂ​ ಚಿನ್ನದ ಬೆಲೆ 57,750ರೂಪಾಯಿ ಇತ್ತು. ಆದರೆ ಇಂದು 57,300 ರೂಪಾಯಿ ಆಗಿದೆ. ನಿನ್ನೆ ಇದ್ದ ಬೆಲೆ ಗಿಂತ ಇಂದು 450 ರೂಪಾಯಿ ಇಳಿಕೆಯಾಗಿದೆ. ನಿನ್ನೆ ಬೆಂಗಳೂರಿನಲ್ಲಿ 24 ಕ್ಯಾರೆಟ್​ 10 ಗ್ರಾಂ ಚಿನ್ನದ ಬೆಲೆ 63,000ರೂಪಾಯಿ ಇತ್ತು. ಆದರೆ ಇಂದು 62,510 ರೂಪಾಯಿ ಆಗಿದೆ. ನಿನ್ನೆ…

Read More

ಬೆಂಗಳೂರು:- ವಿದೇಶಿ ಡ್ರಗ್ ಪೆಡ್ಲರ್ ಜೊತೆ ಕನ್ನಡದ ಕೆಲ ಕಿರುತೆರೆ ನಟ- ನಟಿಯರು ನಿತಂತರ ಸಂಪರ್ಕದಲ್ಲಿದ್ದರು ಎಂಬುದು ಸಿಸಿಬಿ ಪೊಲೀಸರ ತನಿಖೆ ವೇಳೆ ಬಯಲಾಗಿದೆ ಈ ಹಿಂದೆ ಸಹ ಡ್ರಗ್ ಜಾಲದಲ್ಲಿ ಸ್ಯಾಂಡಲ್ವುಡ್ ನಟ- ನಟಿಯರ ಹೆಸರು ಕೇಳಿ ಬಂದಿತ್ತು. ಹೀಗಾಗಿ ಪೊಲೀಸರು ಕೆಲ ನಟ-ನಟಿಯರನ್ನು ವಿಚಾರಣೆ ನಡೆಸಿದ್ದರು.ಈಗ ಮತ್ತೆ ಬಣ್ಣದ ಜಗತ್ತಿಗೆ ಡ್ರಗ್ ಜಾಲದ ನಂಟು ಇರುವುದು ಗೊತ್ತಾಗಿದೆ. ಕೆಲ ದಿನಗಳ ಹಿಂದೆ ಡ್ರಗ್ ಪೆಡ್ಲರ್ ಬಂಧಿಸಿದ್ದ ಸಿಸಿಬಿ ಪೊಲೀಸರು ತನಿಖೆ ವೇಳೆ ಪೆಡ್ಲರ್ ಮೊಬೈಲ್ ಪರಿಶೀಲನೆ ವೇಳೆ ಬಣ್ಣದ ಲೋಕದ ನಂಟು ಬಯಲಾಗಿದೆ‌. ರಾಮಮೂರ್ತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಿಗೆ ಮನೆಯೊಂದರಲ್ಲಿ ವಾಸವಿದ್ದ ಲಿಯೋನಾರ್ಡ್ ಒಕುವೊಡ್ಲಿ ಎಂಬಾತ ಡ್ರಗ್ ಪೆಡ್ಲಿಂಗ್ ಮಾಡುತ್ತಿದ್ದ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿ 16 ಕೋಟಿ ಮೌಲ್ಯದ ಎಂಡಿಎಂಎ, 5 ಕೋಟಿ ಮೌಲ್ಯದ ಎಂಡಿಎಂಎ ಸೀಜ್ ಮಾಡಲಾಗಿತ್ತು. ಹೊಸ ವರ್ಷದ ಸಂಭ್ರಮಾಚಣೆ ವೇಳೆ ಡ್ರಗ್ ಮಾರಲು ಈತ ಪ್ಲಾನ್ ಮಾಡಿಕೊಂಡಿದ್ದ. ಇನ್ನೂ…

Read More

ಸಲಾರ್ ಸಿನಿಮಾ ರಿಲೀಸ್ ಬೆನ್ನಲ್ಲೇ ನಿರ್ದೇಶಕ ಪ್ರಶಾಂತ್ ನೀಲ್ ಅವರನ್ನು ಹಾಡಿಹೊಗಳಿದ್ದಾರೆ ನಟ ಪ್ರಭಾಸ್. ನಿರ್ದೇಶಕರ ಕಾರ್ಯ ವೈಖರಿಗೆ ಪ್ರಭಾಸ್ ಫಿದಾ ಆಗಿದ್ದಾರೆ. ಪ್ರಶಾಂತ್ ಜೊತೆ ಕೆಲಸ ಮಾಡಲು ಯಾವಾಗಲೂ ನಾನು ಉತ್ಸುಕನಾಗಿದ್ದೇನೆ ಎಂದು ಹೇಳಿದ್ದಾರೆ. ಇಡೀ ವಿಶ್ವವೇ ಇದರತ್ತ ನೋಡುತ್ತಿದೆ. ಮೂರು ವರ್ಷದಿಂದ ಕಾಯುತ್ತಿದ್ದ ಗಳಿಗೆ ಹತ್ತಿರವಾಗಿದೆ. ಕಾರಣ ಸಲಾರ್ (Salaar) ಅಬ್ಬರಿಸಲು ಸಜ್ಜಾಗಿದೆ. ಈ ಹೊತ್ತಲ್ಲಿ ಹಲವು ರಹಸ್ಯ ಬಿಚ್ಚಿಟ್ಟಿದ್ದಾರೆ ಕ್ಯಾಮೆರಾಮನ್ ಭುವನ್ ಗೌಡ. ಯರ‍್ಯಾರೊ ಏನೇನೊ ಅಂದುಕೊಂಡಿದ್ದು ಸುಳ್ಳು. ಇದು ಸತ್ಯ ಎಂದು ಗುಡುಗಿದ್ದಾರೆ. ಏನಿದು ಸಲಾರ್ ಅಪರೂಪದ ಸಮಾಚಾರ ಇಲ್ಲಿದೆ ನೋಡಿ. ಬರೀ ಪ್ರಭಾಸ್ (Prabhas) ಫ್ಯಾನ್ಸ್ ಮಾತ್ರ ಅಲ್ಲ, ಇಡೀ ವಿಶ್ವವೇ ಸಲಾರ್‌ಗಾಗಿ ಕಾಯುತ್ತಿದೆ. ಒಂದು ಕಡೆ ಪ್ರಶಾಂತ್ ನೀಲ್ ಏನು ಮಾಡಲಿದ್ದಾರೆ ಎನ್ನುವ ಕುತೂಹಲ ಇನ್ನೊಂದು ಕಡೆ ಪ್ರಭಾಸ್ ಕಾಂಬಿನೇಶನ್ ಹೆಂಗೆ ಕಿಕ್ ಏರಿಸುತ್ತದೆ ಎನ್ನುವ ಹಂಬಲ. ಎರಡೂ ಸೇರಿ ಸಲಾರ್‌ಗೆ ಭೂಮಿ ತೂಕದ ಬಲ ತಂದುಕೊಟ್ಟಿದೆ. ಈ ಹೊತ್ತಲ್ಲಿ ಕ್ಯಾಮೆರಾಮನ್ ಭುವನ್…

Read More

ಬೆಂಗಳೂರು:- ಆಟವಾಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಗುವಿನ ಪೋಷಕರು ಹೇಳಿದ ಕಥೆ ಕೇಳಿದರೆ ಎಂಥವರಿಗೂ ಕರುಳು ಹಿಂಡುವಂತೆ ಮಾಡುತ್ತದೆ. ಕಾರು ಹತ್ತಿರುವ ವಿಚಾರ ತಿಳಿಯದೇ ಮಗುವನ್ನು ಹಿಡಿದು ಪೋಷಕರು ನಾಲ್ಕು ಆಸ್ಪತ್ರೆ ಸುತ್ತಿದ್ದಾರೆ. ಕೈಯಲ್ಲಿ ಹಣವಿಲ್ಲದೇ ಅಸಹಾಯಕರಾಗಿ ಆಸ್ಪತ್ರೆ ಸುತ್ತಾಡಿದ್ದರು. ಆದರೂ ಕೂಡ ಖಾಸಗಿ ಆಸ್ಪತ್ರೆ ವೈದ್ಯರು ಮಾನವೀಯತೆ ಮರೆತ್ರಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಕೈಯಲ್ಲಿ ಹಣವಿಲ್ಲದೇ ಅಸಹಾಯಕರಾಗಿ ಆಸ್ಪತ್ರೆ ಸುತ್ತಾಡಿದ್ದರು. ಸಾವು ಬದುಕಿನ ನಡುವೆ ಹೋರಾಡ್ತಿದ್ದ ಮಗುವಿಗೆ ಚಿಕಿತ್ಸೆ ನೀಡಲು 30 ಸಾವಿರ ಹಣವನ್ನು ಖಾಸಗಿ ಆಸ್ಪತ್ರೆ ಸಿಬ್ವಂದಿ ಕೇಳಿದ್ದರು. ಅಸಹಾಯಕರಾಗಿ ಸಂಜಯ್ ಗಾಂಧಿ ಆಸ್ಪತ್ರೆಗೆ ಪೋಷಕರು ಕೊಂಡೊಯ್ದಿದ್ದಾರೆ. ಅಲ್ಲಿಂದ ನಿಮ್ಹಾನ್ಸ್ ಕೊಂಡೊಯ್ಯುವಷ್ಟರಲ್ಲಿ ಬಾಲಕಿ ಪ್ರಾಣ ಬಿಟ್ಟಿದ್ದಾಳೆ. ತಂದೆ ಮಡಿಲಲ್ಲಿ ನರಳುತ್ತಾ ಮೂರು ವರ್ಷದ ಕಂದಮ್ಮ ಪ್ರಾಣ ಬಿಟ್ಟಿದೆ. ನಾಲ್ಕು ಆಸ್ಪತ್ರೆಯಲ್ಲಿ ಒಬ್ಬರಾದ್ರು ಸರಿಯಾಗಿ ಗಮನಿಸಿದ್ರೆ ಪುಟ್ಟ ಕಂದಮ್ಮನ ಜೀವ ಉಳಿತಿತ್ತು ಎಂಬ ಮಾತುಗಳು ಕೇಳಿ ಬಂದಿದೆ.

Read More

ಮೈಸೂರು: ಜಾತಿಗಣತಿ ವರದಿಯನ್ನು ಎರಡು ಪ್ರಬಲ ಸಮುದಾಯಗಳು ವಿರೋಧಿಸುತ್ತಿವೆ. ಜಾತಿಗಣತಿಯಿಂದ ಮಾತ್ರ ವೈಜ್ಞಾನಿಕವಾಗಿ ಮೀಸಲಾತಿ ನೀಡಲು ಸಾಧ್ಯ. ಯಾವ ಜನಾಂಗ ಎಷ್ಟಿದ್ದಾರೆ ಎಂದು ತಿಳಿಯಬೇಕು ಎಂದಾದರೆ ಜಾತಿಗಣತಿ ವರದಿಯನ್ನು ಸ್ವೀಕರಿಸಬೇಕು ಎಂದು ಎಎಪಿ ರಾಜ್ಯಾಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಶನಿವಾರ ಒತ್ತಾಯಿಸಿದರು. ಮೈಸೂರಿನಲ್ಲಿ ನಡೆದ ಮೈಸೂರು ಜಿಲ್ಲಾ ಮತ್ತು ತಾಲ್ಲೂಕು ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮದಲ್ಲಿ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಅವರು, 1931ರ ಬಳಿಕ ದೇಶದಲ್ಲಿ ಜಾತಿಗಣತಿ ಆಗಿಯೇ ಇಲ್ಲ. ಆಯಾ ಸರ್ಕಾರಗಳು ಅನುಕೂಲಕ್ಕೆ ತಕ್ಕಂತೆ ಮೀಸಲಾತಿ ನೀಡುತ್ತಾ ಬಂದಿವೆ. ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ, ಮುಸ್ಲಿಂರಿಗೆ ಸದ್ಯ ಯಾವುದೇ ತೊಂದರೆ ಆಗಿಲ್ಲ. ಏಕೆಂದರೆ ಜನಗಣತಿ ವೇಳೆಯಲ್ಲಿಯೇ ಆ ಸಮುದಾಯ ಎಷ್ಟಿದೆ ಎಂಬ ಅಂಕಿಅಂಶಗಳು ಸಿಕ್ಕಿವೆ. ಇಲ್ಲಿ ತೊಂದರೆಗೆ ಒಳಗಾಗಿರುವವರು, ಪ್ರವರ್ಗ 1 ಮತ್ತು ಪ್ರವರ್ಗ 2ಎ ಅಡಿಯಲ್ಲಿ ಬರುವ ಜಾತಿಗಳು. ಈ ವರ್ಗದಲ್ಲಿ ಕುರುಬರು, ಈಡಿಗರನ್ನು ಸೇರಿಸಿ 197 ಜಾತಿಗಳಿವೆ. ಈ ಜಾತಿಗಳಲ್ಲಿ ಜನಸಂಖ್ಯೆ ಎಷ್ಟಿದೆ ಎಂಬುದು ತಿಳಿಯದೇ ಮೀಸಲಾತಿ ನೀಡಲಾಗುತ್ತಿದೆ ಎಂದು…

Read More

‘ಲಿಯೋ’ (Leo Film) ಸಿನಿಮಾ ನಿರ್ಮಾಪಕರು ಇದೀಗ ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ಲೇಡಿ ಸೂಪರ್ ಸ್ಟಾರ್ ನಯನತಾರಾ ಪತಿ ವಿಘ್ನೇಶ್ ಶಿವನ್ ಜೊತೆ ‘ಲಿಯೋ’ ಟೀಮ್ ಕೈಜೋಡಿಸಿದೆ. ತಮಿಳಿನ ಈ ಸಿನಿಮಾಗೆ ಕನ್ನಡದ ನಟಿಗೆ ಹೀರೋಯಿನ್ ಆಗಿದ್ದಾರೆ. ಸಾಲು ಸಾಲು ಫ್ಲಾಪ್ ನಂತರ ಕರಾವಳಿ ನಟಿ ಕೃತಿ ಶೆಟ್ಟಿ (Krithi Shetty) ಅವರು ತಮಿಳು ಚಿತ್ರರಂಗದತ್ತ ಮುಖ ಮಾಡಿದ್ದಾರೆ. ವಿಘ್ನೇಶ್ ಶಿವನ್ ನಿರ್ದೇಶನದ ಹೊಸ ಸಿನಿಮಾದಲ್ಲಿ ಕೃತಿ ಶೆಟ್ಟಿ ನಾಯಕಿಯಾಗಿ ಫೈನಲ್ ಆಗಿದ್ದಾರೆ. ಒಂದು ವಿಭಿನ್ನ ಪ್ರೇಮಕಥೆಗೆ ನಟಿ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಈ ಚಿತ್ರದ ಮುಹೂರ್ತ ಸಮಾರಂಭ ಇಂದು (ಡಿ.15) ನೆರೆವೇರಿದ್ದು, ಹೀರೋ ಆಗಿ ‘ಲವ್ ಟುಡೇ’ ನಟ ಪ್ರದೀಪ್ (Pradeep) ಆಯ್ಕೆ ಆಗಿದ್ದಾರೆ. ಈ ಚಿತ್ರಕ್ಕೆ ಖ್ಯಾತ ಸಂಗೀತ ನಿರ್ದೇಶಕ ಅನಿರುದ್ಧ ರವಿಚಂದರ್‌ ಸಂಗೀತ ನೀಡಲಿದ್ದಾರೆ

Read More

ಬೆಂಗಳೂರು:- ದೇವರನಾಡು ಕೇರಳಾದಲ್ಲಿ ಮತ್ತೆ ಕೊರೊನಾ ಆತಂಕ ಶುರುವಾಗಿದೆ. ಹೀಗಾಗಿ ನಮ್ಮಲಿಯೂ ಕೊರೊನಾ ಆತಂಕ ಮತ್ತೆ ಶುರುವಾಗಿದೆ. ಕಳೆದ ಮೂರು ವರ್ಷದಿಂದ ಭಾರತದಲ್ಲಿ ಮೊದಲ ಪ್ರಕರಣ ಕೇರಳದಲ್ಲೇ ಕಂಡು ಬಂದಿತ್ತು. ಈಗ ಮತ್ತೆ ಅದೇ ರಾಜ್ಯದಲ್ಲಿ ಸಂಕ್ರಾಮಿಕ ರೋಗದ ಪ್ರಕರಣಗಳು ಹೆಚ್ಚಾಗುತ್ತಿದ್ದು, ಆತಂಕಕ್ಕೆ ಕಾರಣವಾಗಿದೆ. ಈ ನಿಟ್ಟಿನಲ್ಲಿ ನಿರಂತರ ಮುಂಜಾಗ್ರತೆ ವಹಿಸುವಂತೆ ಸೂಚನೆಗಳನ್ನು ಕೇಂದ್ರ ಆರೋಗ್ಯ ಇಲಾಖೆ ನೀಡಿದೆ. ಕೇರಳದಲ್ಲಿನ ಕೊರೊನಾ ಏರಿಕೆ ಆತಂಕ ರಾಜ್ಯಕ್ಕೆ ಡವ ಡವ ಶುರುವಾಗಿದೆ. ಈಗಾಗಲೇ ಸಿಂಗಾಪುರ, ಮಲೇಷ್ಯಾ ಮತ್ತು ಇಂಡೋನೇಷ್ಯಾ ಸೇರಿದಂತೆ ಆಗ್ನೇಯ ಏಷ್ಯಾದ ದೇಶಗಳಲ್ಲಿ ಕೊರೊನಾ ಪ್ರಕರಣಗಳು ದಾಖಲೆಯ ಪ್ರಮಾಣದಲ್ಲಿ ಹೆಚ್ಚಳವಾಗುತ್ತಿದೆ ಈ ನಡುವೆ ಕೇರಳದಲ್ಲೂ ಕೊರೊನಾ ಏರಿಕೆ ಕಂಡಿದೆ. ಓಮಿಕ್ರಾನ್‌ನ ಉಪ ತಳಿಯಾದ ಜೆಎನ್.1 ಹೆಚ್ಚಳವು ಪಕ್ಕದ ರಾಜ್ಯ ಕೇರಳದಲ್ಲಿ ಈಗ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ನಮ್ಮಲ್ಲಿಯೂ ಕೊರೊನಾ ಏರಿಕೆಯ ಆತಂಕ ಶುರುವಾಗಿದೆ. ಜೆಎನ್.1 ಲಕ್ಷಣಗಳು? ಜ್ವರ, ಕೆಮ್ಮು, ಸುಸ್ತು, ಮೂಗು ಕಟ್ಟುವಿಕೆ, ಸ್ರವಿಸುವ ಮೂಗು, ಅತಿಸಾರ ಮತ್ತು ತಲೆನೋವು. ಕೇರಳದಲ್ಲಿ…

Read More