Author: AIN Author

ಬೆಂಗಳೂರು:- ಶೀಘ್ರದಲ್ಲೇ ಕಾಂಗ್ರೆಸ್ ಪಕ್ಷದ ಐದನೇ ಗ್ಯಾರಂಟಿಯನ್ನು ಸರ್ಕಾರವು ವಾಗ್ದಾನದಂತೆ ಜಾರಿಗೊಳಿಸಲಿದೆ ಎಂದು ಕರ್ನಾಟಕ ಕಾಂಗ್ರೆಸ್‌ ಉಸ್ತುವಾರಿ ರಣದೀಪ್‌ ಸಿಂಗ್‌ ಸುರ್ಜೇವಾಲ ತಿಳಿಸಿದ್ದಾರೆ. ಪ್ರಸ್ತುತ ನಮ್ಮ ಐದನೇ ಗ್ಯಾರಂಟಿಯಾದ ಯುವ ನಿಧಿ ಯೋಜನೆಯನ್ನು ಇದೇ ಡಿಸೆಂಬರ್‌ ತಿಂಗಳ ಕೊನೆಯಲ್ಲಿ ನಿರುದ್ಯೋಗಿ ಪದವೀಧರ ಮತ್ತು ಐಟಿಐ ಪದವೀಧರರು ಗೌರವ ಧನ ಪಡೆಯಲು ನೋಂದಣಿ ಪ್ರಕ್ರಿಯೆ ಆರಂಭವಾಗಲಿದೆ. ಕಾಂಗ್ರೆಸ್ ಪಕ್ಷ ನೀಡಿದ್ದ ಗ್ಯಾರಂಟಿ ವಾಗ್ದಾನದ ಮೇಲೆ ವಿಶ್ವಾಸವಿಟ್ಟು ಮಹಾಜನತೆಯು ವಿಧಾನಸಭೆಯಲ್ಲಿ 136 ಸ್ಥಾನಗಳನ್ನು ಕಾಂಗ್ರೆಸ್‌ಗೆ ನೀಡಿ ಸಂಪೂರ್ಣ ಬಹುಮತದೊಂದಿಗೆ ಅಧಿಕಾರಕ್ಕೆ ನೀಡಿದೆ. ಈ ಮೂಲಕ ನಮ್ಮ ಸರ್ಕಾರದ ಜವಾಬ್ದಾರಿ ಇಮ್ಮಡಿಗೊಳಿಸಿದೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮೊದಲ ಸಂಪುಟದಲ್ಲೇ ಐದರಲ್ಲಿ ನಾಲ್ಕು ಗ್ಯಾರಂಟಿಗಳನ್ನು ಜಾರಿಗೊಳಿಸುವ ನಿರ್ಧಾರ ಕೈಗೊಂಡು ಅಧಿಸೂಚನೆ ಹೊರಡಿಸಲಾಯಿತು. ಮೊದಲನೆಯದಾಗಿ ಶಕ್ತಿ ಯೋಜನೆಯ ಮೂಲಕ ರಾಜ್ಯದ ಮಹಿಳೆಯರಿಗೆ ಸರ್ಕಾರಿ ಬಸ್​ಗಳಲ್ಲಿ ಉಚಿತವಾಗಿ ಪ್ರತಿ ದಿನ ಸುಮಾರು 60 ರಿಂದ 62 ಲಕ್ಷ ಮಹಿಳೆಯರು ಪ್ರಯಾಣಿಸುವ ಅವಕಾಶ ದೊರಕಿದೆ. ಇದುವರೆಗೆ…

Read More

ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಮಾರ್ಗಶಿರ ಮಾಸ, ಶುಕ್ಲ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ಪಂಚಮಿ 05:33 PM ತನಕ ನಂತರ ಷಷ್ಠಿ ನಕ್ಷತ್ರ: ಇವತ್ತು ಶ್ರವಣ  04:37 AM ತನಕ ನಂತರ ಧನಿಷ್ಠ ಯೋಗ: ಇವತ್ತು ವ್ಯಾಘಾತ03:48 AM ತನಕ ನಂತರ ಹರ್ಷಣ ಕರಣ: ಇವತ್ತು ಬವ 06:46 AM ತನಕ ನಂತರ ಬಾಲವ 05:33 PM ತನಕ ನಂತರ ಕೌಲವ ರಾಹು ಕಾಲ: 04:30 ನಿಂದ 06:00 ವರೆಗೂ ಯಮಗಂಡ: 12:00 ನಿಂದ 01:30 ವರೆಗೂ ಗುಳಿಕ ಕಾಲ: 03:00 ನಿಂದ 04:30 ವರೆಗೂ ಅಮೃತಕಾಲ: 05.15 PM to 06.44 PM ಅಭಿಜಿತ್ ಮುಹುರ್ತ: ಬೆಳಗ್ಗೆ.11:50 ನಿಂದ ಮ.12:33 ವರೆಗೂ ಶ್ರೀ ಸೋಮಶೇಖರ್B.Sc ( ವಂಶಪಾರಂಪರಿತ) ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪ್ರವೀಣರು. Mob.No.93534 88403 ಮೇಷ ರಾಶಿ: ಶ್ವೇತವರ್ಣದ ವಸ್ತ್ರ ಧರಿಸಿ ಪೂರ್ವ ದಿಕ್ಕಿನಿಂದ ಹೊರಡಿ.ಜೇಷ್ಠ ಪುತ್ರನಿಗೆ ಧನ…

Read More

ಕಲಬುರಗಿ:- ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಗೆ ನಾಲ್ಕು ಲಕ್ಷ ಮೌಲ್ಯದ ಕಬ್ಬು ಸುಟ್ಟು ಕರಕಲಾದ ಘಟನೆ ಕಲಬುರಗಿಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನ ಕಟ್ಟಿ ಸಂಗಾವಿಯಲ್ಲಿ ಘಟನೆ ನಡೆದಿದ್ದು ರೈತ ಕರಣಪ್ಪಗೆ ಸೇರಿದ 4 ಲಕ್ಷ ಮೌಲ್ಯದ ಕಬ್ಬು ಧಗಧಗ ಹೊತ್ತಿ ಉರಿದಿದೆ. ಕೂಡಲೇ ಅಗ್ನಿಶಾಮಕ ದಳ ಸ್ಥಳಕ್ಕೆ ಬಂತಾದ್ರೂ ಅಷ್ಟೊತ್ತಿಗೆ ಕಬ್ಬು ಭಸ್ಮವಾಗಿತ್ತು.

Read More

ಬೆಂಗಳೂರು:- ಅಪಾರ್ಟ್ಮೆಂಟ್‌ವೊಂದರಲ್ಲಿ ಕುಳಿತು ಆಟವಾಡುತ್ತಿದ್ದ ಮಗುವಿನ ಮೇಲೆಯೇ ಕಾರು ಹತ್ತಿರುವ ಘಟನೆ ಕಸುವಿನಹಳ್ಳಿಯ ಅಪಾರ್ಟ್ಮೆಂಟ್‌ವೊಂದರ ಮುಂಭಾಗ ನಡೆದಿದೆ. ಕಳೆದ 10 ದಿನಗಳ ಹಿಂದೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಜೋಗ್ ಜುತಾರ್, ಅನಿತಾ ದಂಪತಿಗೆ ಸೇರಿದ ಅರ್ಬಿನಾ (3) ಮಗುವಿನ ಮೇಲೆ ಚಾಲಕ ಕಾರು ಹತ್ತಿಸಿ ಹತ್ಯೆಗೈದಿದ್ದಾನೆ. ಅಮಾನವಿಯ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೊದಲು ತಮ್ಮ ಅರಿವಿಗೆ ಬಾರದೇ ಕಟ್ಟಡದ ಮೇಲಿಂದ ಮಗು ಬಿದ್ದಿರುವುದಾಗಿ ಪೋಷಕರು ದೂರು ಕೊಟ್ದಿದ್ದರು. ಆಸ್ಪತ್ರೆಗೆ ಕರೆತರುವ ಮಾರ್ಗಮಧ್ಯದಲ್ಲಿ ಮಗು ಮೃತಪಟ್ಟಿರುವುದಾಗಿ ಪೋಷಕರು ದೂರಿನಲ್ಲಿ ಉಲ್ಲೇಖಿಸಿದ್ದರು. ಆದ್ರೆ ಮಗುವಿನ ದೇಹದಲ್ಲಿ ರಕ್ತಸ್ರಾವ ಆಗುತ್ತಿದ್ದುದ್ದನ್ನು ಕಂಡು ಅನುಮಾನಗೊಂಡ ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲಿಸಿದ್ದಾರೆ. ನಂತರ ಎಕ್ಸ್ ಯುವಿ ಕಾರು ಮಗುವಿನ ಮೇಲೆ ಹರಿದಿರುವುದು ಗೊತ್ತಾಗಿದೆ. ಸದ್ಯ ಕೃತ್ಯ ಎಸಗಿದ ಅಪಾರ್ಟ್ಮೆಂನ ಸುಮನ್ ಎಕ್ಸ್ ಯುವಿ ಕಾರು ಚಾಲಕನ ವಿರುದ್ಧ ಬೆಳ್ಳಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದು ಬಂದಿದೆ.

Read More

ಹುಬ್ಬಳ್ಳಿ:- ಕಾಂಗ್ರೆಸ್‌ ಸರ್ಕಾರ ಇರುವ ರಾಜ್ಯಗಳಲ್ಲಿ ದೌರ್ಜನ್ಯ ಹೆಚ್ಚಳವಾಗಿದೆ ಎಂದು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ. ಬೆಳಗಾವಿ ತಾಲ್ಲೂಕಿನ ಹೊಸ ವಂಟಮೂರಿಯಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ, ಹಲ್ಲೆ ಮಾಡಿದ ಪ್ರಕರಣ ನಾಗರಿಕ ಸಮಾಜ ತಲೆ ತಗ್ಗಿಸುವಂತದ್ದು. ಕಾಂಗ್ರೆಸ್ ಸರ್ಕಾರ ಇರುವ ರಾಜ್ಯಗಳಲ್ಲಿ ಇಂತಹ ಪ್ರಕರಣಗಳು ಹೆಚ್ಚುತ್ತಿವೆ’ ಎಂದರು. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ, ಮಹಿಳೆಯರಿಗೆ ರಕ್ಷಣೆ ಒದಗಿಸಲು ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು. ದೇಶದ ಪ್ರಜಾಪ್ರಭುತ್ವ ಮಂದಿರಕ್ಕೆ ಕಳಂಕ ತರಲು ವ್ಯವಸ್ಥಿತವಾಗಿ ಸಂಚು ರೂಪಿಸಿ ಸಂಸತ್‌ ಭವನದಲ್ಲಿ ಹೊಗೆ ಬಾಂಬ್‌ ಸಿಡಿಸಲಾಗಿದೆ. ಪ್ರಕರಣ ಸಂಬಂಧ ಸ್ಪೀಕರ್ ಅವರು ಉನ್ನತಮಟ್ಟದ ತನಿಖೆಗೆ ಆದೇಶ ನೀಡಿದ್ಧಾರೆ. ಈಗಾಗಲೇ ತನಿಖೆ ಆರಂಭವಾಗಿದೆ. ಈ ರೀತಿಯ ಘಟನೆಗಳಲ್ಲಿ ರಾಜಕಾರಣ ಮಾಡುವುದು ಸರಿಯಲ್ಲ. ಎಲ್ಲರೂ ಒಂದಾಗಿ ಎದುರಿಸಬೇಕು’ ಎಂದರು.

Read More

ಬೆಂಗಳೂರು:- ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ವ್ಯಕ್ತಿಯ ವಿರುದ್ಧ ಗಿರಿನಗರ ಪೊಲೀಸ್ ಠಾಣೆಯಲ್ಲಿ FIR ದಾಖಲಾಗಿದೆ. ಇನ್ಸ್‌ಪೆಕ್ಟರ್ ದೇವರಾಜೇ ಅರಸು ನೀಡಿದ ದೂರಿನ ಅನ್ವಯ ಜಗದೀಶ್ ಎಂಬಾತನ ವಿರುದ್ಧ ಪ್ರಕರಣ ದಾಖಲಾಗಿದೆ. ಇನ್ನೂ ಡಿಸೆಂಬರ್ 14ರಂದು ಬೆಳಗ್ಗಿನ ಜಾವ ಆರೋಪಿ ಜಗದೀಶ್, ತನಗೆ ಪರಿಚಿತ ಮಹಿಳೆಯೊಬ್ಬರು ಹಾಗೂ ಅರುಣ್ ಕುಮಾರ್ ಎಂಬಾತನ ಮಧ್ಯೆ ಹಣದ ವರ್ಗಾವಣೆ, ಮೆಸೇಜ್ ರವಾನೆಯಾಗಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿ ಅರುಣ್ ಕುಮಾರ್ ಮನೆ ಮುಂದೆ ಗಲಾಟೆ ಮಾಡುತ್ತಿದ್ದ. ಇದರಿಂದ ಅರುಣ್ ಕುಮಾರ್ ಪಕ್ಕದ ಮನೆಯವರು ಹೊಯ್ಸಳ ಕಂಟ್ರೋಲ್​ ರೂಂಗೆ ಕರೆ ಮಾಡಿದ್ದರು. ಹೊಯ್ಸಳ ಸಿಬ್ಬಂದಿಗಳು ಸ್ಥಳಕ್ಕೆ ತೆರಳಿ ಆತನನ್ನು ಅಲ್ಲಿಂದ ಕಳುಹಿಸಲು ಯತ್ನಿಸಿದಾಗ ಅವಾಚ್ಯವಾಗಿ ನಿಂದಿಸಲಾರಂಭಿಸಿದ್ದ ಜಗದೀಶ್, ನನಗೆ ಮಾನವ ಹಕ್ಕು ಆಯೋಗದವರು ಗೊತ್ತು, ನಿಮ್ಮನ್ನು ಜೈಲಿಗೆ ಕಳಿಸುತ್ತೇನೆ ಎಂದು ಬೆದರಿಕೆ ಹಾಕಿದ್ದ. ತಕ್ಷಣ ಆರೋಪಿ ವಶಕ್ಕೆ ಪಡೆದ ಪೊಲೀಸ್ ಸಿಬ್ಬಂದಿ ಆರೋಪಿಯನ್ನ ಠಾಣೆಗೆ ಕರೆತಂದು, ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ಇನ್ಸ್‌ಪೆಕ್ಟರ್ ಮುಂದೆ ಹಾಜರುಪಡಿಸಿದ್ದರು ಈ ಸಂದರ್ಭದಲ್ಲಿ ಇನ್ಸ್‌ಪೆಕ್ಟರ್​ಗೆ…

Read More

ಗೃಹ ಸಾಲದ ಮೇಲೆ ಕಡಿಮೆ ಬಡ್ಡಿ ದರ ಕಡಿಮೆ ಮಾಡಿಕೊಳ್ಳಲು ಈ ಸುದ್ದಿ ಸಂಪೂರ್ಣವಾಗಿ ಓದಿ. ಆರ್‌ಬಿಐ ಹಣಕಾಸು ನೀತಿ ಪರಾಮರ್ಶೆಯಲ್ಲಿ ರೆಪೋ ದರವನ್ನು ಯಥಾಸ್ಥಿತಿಯಲ್ಲಿ ಮುಂದುವರಿಸಿದೆ. ಹೀಗಾಗಿ, ಗೃಹ, ವಾಹನ ಸೇರಿ ಬಹುತೇಕ ಸಾಲಗಳ ಬಡ್ಡಿ ದರವು ಮೊದಲಿನಿಂತೆಯೇ ಮುಂದುರಿದಿದೆ. ರೆಪೋ ದರ ಯಥಾಸ್ಥಿತಿಯಲ್ಲಿ ಮುಂದುವರಿದ ಪರಿಣಾಮ ಗ್ರಾಹಕರು ಪಡೆದುಕೊಂಡ ಬಹುತೇಕ ಸಾಲಗಳ ಮೇಲೆ ಬಡ್ಡಿ ದರ ಕೂಡ ಯಥಾಸ್ಥಿತಿಯಲ್ಲಿ ಮುಂದುವರಿದಿದೆ. ರೆಪೋ ದರ ಕಡಿಮೆಯಾಗಿ ತಮ್ಮ ಸಾಲದ ಬಡ್ಡಿ ಕಡಿಮೆಯಾಗುವ ಮೂಕಲ ಮಾಸಿಕ ಕಂತಿನ ಮೊತ್ತ ಕಡಿಮೆ ಆಗಬಹುದು ಎಂಬ ಗ್ರಾಹಕರ ನಿರೀಕ್ಷೆ ಹುಸಿಯಾಗಿದೆ. ಅಕ್ಟೋಬರ್ 2019 ರಿಂದ, ಬ್ಯಾಂಕ್​ಗಳು ನೀಡುವ ಎಲ್ಲಾ ಫ್ಲೋಟಿಂಗ್ ದರದ ಸಾಲಗಳನ್ನು (floating rate loans) ಬಾಹ್ಯ ಮಾನದಂಡ ಆಧಾರಿತ ಸಾಲ ದರಕ್ಕೆ (EBLR) ಲಿಂಕ್ ಮಾಡಲಾಗಿದೆ, ಇದು ಚಿಲ್ಲರೆ ಸಾಲಗಳ ಸಂದರ್ಭದಲ್ಲಿ ವಿಧಿಸಲಾಗುವ ರೆಪೋ ದರವಾಗಿದೆ. ರೆಪೋ ದರದಲ್ಲಿ ಯಾವುದೇ ಬದಲಾವಣೆಯಾದರೆ, ಅಂದರೆ ರೆಪೋ ಬಡ್ಡಿ ದರದಲ್ಲಿ ಏರಿಕೆ ಅಥವಾ ಕಡಿತವಾದರೆ…

Read More

ಸಂಡೂರು:- ತಾಲೂಕಿನ ಹೊಸದರೋಜಿ ಗ್ರಾಮದಲ್ಲಿ ದಿನಾಂಕ 16-12-2023 ರಂದು ಆರೋಗ್ಯ ಆಯುಷ್ ಮತ್ತು ಕ್ಷೇಮಾಭಿವೃದ್ಧಿ ಅಡಿಯಲ್ಲಿ ಸ್ವಚ್ಛತಾ ಆಂದೋಲನ ಮತ್ತು ಯೋಗಾ ತರಬೇತಿ ಕಾರ್ಯಕ್ರಮ ಸಹಕಾರ ದೇವರಾಜ ಅರಸು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ (ಬಿ.ಸಿ.ಎಂ) ಹೊಸದರೋಜಿ ಹಮ್ಮಿಕೊಳ್ಳಲಾಗಿತ್ತು. ನಮ್ಮ ಆರೋಗ್ಯ ಚೆನ್ನಾಗಿ ಇರಬೇಕಾದರೆ ದಿನ ನಿತ್ಯ ನಮ್ಮ ಸುತ್ತಲಿನ ಪ್ರದೇಶವನ್ನು ಸ್ವಚ್ಛತೆಯಿಂದ ಕಾಪಾಡಿಕೊಳ್ಳಬೇಕು ಹಾಗೂ ನಮ್ಮ ಆರೋಗ್ಯವನ್ನು ಕಾಪಾಡಿಕೊಳೊಳಲು ದಿನ ನಿತ್ಯ ಯೋಗಾಭ್ಯಾಸ ಮತ್ತು ಧ್ಯಾನ ಮಾಡಬೇಕು ಎಂದು ಸಸಿಗೆ ನೀರು ಹಾಕುವುದರ ಮೂಲಕ ಉದ್ಘಾಟನಾ ಕಾರ್ಯಕ್ರಮವನ್ನು ನೇರವೇರಿಸಿ ಆರ್ಯವೇದಿಕ ಡಾಕ್ಟರ್ ಡಾ.ಫಣೀಂಧರ ಉದ್ಘಾಟಕರ ನುಡಿಯನ್ನು ನುಡಿದರು. ನೆಮ್ಮದಿ ಎಂಬುವುದು ಈಗೀನ ಜನರಲ್ಲಿ ಇಲ್ಲ ಪ್ರತಿ ನಿತ್ಯ ಜಂಜಾಟದಲ್ಲಿ ಮುಳುಗಿ ಹೋಗುವುದನ್ನು ಕಾಣುತ್ತೇವೆ.ಸುಖವಾಗಿ ಜೀವನ ನಡೆಸಲು ಆಗುತ್ತಿಲ್ಲ ಏಕೆಂದರೆ ನಾವು ಊಟ ಮಾಡುವ ಜಿಂಗಾ ಆಹಾರವನ್ನು ಸೇವನೆ ಮಾಡುತ್ತೇವೆ. ಅದಕ್ಕಾಗಿ ನಮಗೆ ಬೆಳಿಗ್ಗೆ ಏಳಲು, ನಡೆಯಲು ಆಗುತ್ತಿಲ್ಲ. ನಾವು ತಿನ್ನುವ ಪ್ರತಿಯೊಂದು ಆಹಾರದಲ್ಲಿ ಕ್ಯಾಮಿಕಲ್ಸ್ ಒಳಗೊಂಡಿರುವುದು ತಿನ್ನುತ್ತೇವೆ. ಅದಕ್ಕಾಗಿ ನಾವೆಲ್ಲರೂ…

Read More

ಬೆಳಗಾವಿ: ಸಮೀಪದ ಹೊಸ ವಂಟಮುರಿ ಗ್ರಾಮದಲ್ಲಿ ಇತ್ತೀಚೆಗೆ ದೌರ್ಜನ್ಯಕ್ಕೆ ಒಳಗಾಗಿರುವ ಮಹಿಳೆಗೆ ಸರಕಾರವು 2.03 ಎಕರೆ ಜಮೀನು ಮಂಜೂರು ಮಾಡಿ ಆದೇಶಿಸಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ದೌರ್ಜನ್ಯಕ್ಕೆ ಒಳಗಾಗಿರುವ ಕಾಕತಿ ಪೊಲೀಸ್ ಠಾಣೆ ವ್ಯಾಪ್ತಿಯ ಹೊಸ ವಂಟಮುರಿ ಗ್ರಾಮದ ಸಂತ್ರಸ್ತ ಮಹಿಳೆಗೆ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ವತಿಯಿಂದ ಭೂ ಒಡೆತನ ಯೋಜನೆಯಡಿ ಜಮೀನು ಮಂಜೂರು‌ ಮಾಡಿ ಆದೇಶಿಸಲಾಗಿರುತ್ತದೆ. ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಚಿವರಾದ ಬಿ.ನಾಗೇಂದ್ರ ಅವರು ವಿಶೇಷ ಪ್ರಕರಣವೆಂದು ಪರಿಗಣಿಸಿ ತಕ್ಷಣವೇ ಜಮೀನು ಮಂಜೂರಾತಿಗೆ ನಿರ್ದೇಶನ ನೀಡಿದ್ದರು. ಈ. ಹಿನ್ನೆಲೆಯಲ್ಲಿ ನೊಂದ ಮಹಿಳೆಗೆ ಆರ್ಥಿಕ ಸ್ಥಿರತೆ ಒದಗಿಸುವ ದೃಷ್ಟಿಯಿಂದ ವಿಶೇಷ ಪ್ರಕರಣವೆಂದು ಪರಿಗಣಿಸಿ ಜಮೀನು ಮಂಜೂರು ಮಾಡಿ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅನುಮೋದನೆ ನೀಡಿರುತ್ತದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ. 2.03 ಎಕರೆ ಜಮೀನು…

Read More

ಬೆಳಗಾವಿ:- ಇಲ್ಲಿ ನಡೆದ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಮಹಿಳೆಯ ಭೇಟಿಗೆ ಬೆಂಗಳೂರು ಹೈಕೋರ್ಟ್ ನಿರ್ಬಂಧ ವಿಧಿಸಿದೆ. ಕೋರ್ಟ್ ಸಾಮಾನ್ಯವಾಗಿ ವ್ಯಕ್ತಿಗಳ ಸ್ವಾತಂತ್ರ್ಯ ನಿರ್ಬಂಧಿಸುವುದಿಲ್ಲ. ನೊಂದಿರುವ ಸಂತ್ರಸ್ತ ಮಹಿಳೆಗೆ ವೈದ್ಯರು ಚಿಕಿತ್ಸೆ ಒದಗಿಸುತ್ತಿದ್ದಾರೆ. ಹೀಗಾಗಿ ಸಂತ್ರಸ್ತೆಯ ಭೇಟಿಗೆ ಷರತ್ತುಬದ್ಧ ನಿರ್ಬಂಧ ವಿಧಿಸಲಾಗಿದೆ. ವೈದ್ಯಾಧಿಕಾರಿ ಲಿಖಿತ ಅನುಮತಿಯಿಲ್ಲದೇ ಭೇಟಿ ನೀಡುವಂತಿಲ್ಲ ಹಾಗೂ ವ್ಯಕ್ತಿ, ಸಂಘಟನೆ ಅಥವಾ ರಾಜಕೀಯ ಪಕ್ಷಗಳ ಭೇಟಿಗೂ ಕೂಡ ನಿರ್ಬಂಧ ಹೇರಲಾಗಿದೆ. ಆಯೋಗಗಳು, ತನಿಖಾ ಸಂಸ್ಥೆಗಳು ಮಾತ್ರ ಸಂತ್ರಸ್ತೆ ಭೇಟಿ ಮಾಡಬಹುದು. ಇದು ಸಂತ್ರಸ್ತೆಯ ಹಿತದೃಷ್ಟಿಯಿಂದ‌ ಈ ಕ್ರಮ ಎಂದು ಮುಖ್ಯ ನ್ಯಾಯಾಧೀಶರಾದ ಪ್ರಸನ್ನ ಬಿ ವರಾಳೆ ಹಾಗೂ ನ್ಯಾಯಮೂರ್ತಿ.ಕೃಷ್ಣ ದೀಕ್ಷಿತ್‌ರಿದ್ದ ಪೀಠ ಆದೇಶಿಸಿದೆ. ಈ ವೇಳೆ ಆದೇಶ ಪಾಲಿಸುವುದಾಗಿ ಸರ್ಕಾರದ ಎಎಜಿ ಪ್ರತಿಮಾ ಹೊನ್ನಾಪುರ ಭರವಸೆ ನೀಡಿದ್ದಾರೆ. ಇನ್ನು ಈ ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಹೋಗಲು ತಡ ಮಾಡಿದ ಹಿನ್ನಲೆ ನಿನ್ನೆ(ಡಿ.15) ಕಾಕತಿ ಠಾಣೆಯ ಸಿಪಿಐ ವಿಜಯ್ ಸಿನ್ನೂರ್ ಅವರನ್ನು ಅಮಾನತುಗೊಳಿಸಿ ಬೆಳಗಾವಿ ಪೊಲೀಸ್ ಆಯುಕ್ತ…

Read More