ಧಾರವಾಡ : ಜಿಲ್ಲೆಯ 525 ವಿಶೇಷ ಚೇತನರಿಗೆ ದಾಖಲೆಯ ತ್ರಿಚಕ್ರ ವಾಹನ ವಿತರಣೆಗೆ ಕ್ಷಣಗಣಗನೆ ಅರಂಭವಾಗಿದೆ. ಹೌದು ಕರ್ನಾಟಕ ಕಾಲೇಜು ಮೈದಾನದಲ್ಲಿ ಈಗಾಗಲೇ ವಿಶೇಷ ಚೇತನರಿಗೆ ನೀಡು ಮೊಟಾರ್ ಸೈಕಲ್ ಬಂದಿದ್ದು, ಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯನ ಹಾಗೂ ಉಪ ಮುಖ್ಯಂಮತ್ರಿ ಡಿಕೆಶಿ ಸಚಿವ ಸಂತೋಷ ಲಾಡ ಅವರ ನೇತೃತ್ವದಲ್ಲಿ ವಾಹನ ವಿತರಣೆಗೆ ಚಾಲನೆ ನೀಡಲಿದ್ದಾರೆ. ಈಗಾಗಲೇ ಕಳೆದ ಶನಿವಾರದಂದು ಕಾರ್ಮಿಕ ಸಚಿವ ಸಂತೋಷ ಲಾಡ್ ಅವರು ಕಾರ್ಯಕ್ರಮ ನಡೆಯುವ ಕೆಸಿಡಿ ಮೈದಾನಕ್ಕೆ ಪೊಲೀಸ್ ಆಯುಕ್ತರಾದ ರೇಣುಕಾ ಸುಕುಮಾರವರೊಂದಿಗೆ ಭೇಟಿ ನೀಡಿ ಕಾರ್ಯಕ್ರಮದ ಸಿದ್ಧತೆ ಕುರಿತು ಪರಿಶೀಲನೆ ಕೈಗೊಂಡಿ್ದಾರೆ. ಧಾರವಾಡ ಜಿಲ್ಲಾ ಉಸ್ತುವಾರಿ ಸಚಿಬರಾದ ಲಾಡ್ ಅವರಿಂದ ಇದು ಮತ್ತೊಂದು ಮಹೋನ್ನತ ಕಾರ್ಯಕ್ರಮವಾಗಿದ್ದು, ಈ ಕಾರ್ಯಕ್ರಮ ಯಶಸ್ವಿಗೆ ಧಾರವಾಡ ಜಿಲ್ಲಾಡಳುತ ಕಾರ್ಮಿಕ ಇಲಾಖೆ ಹಾಗೂ ಸಂತೋಷ ಲಾಡ್ ಪೌಂಡೇಶನ ಕೂಡಾ ಸಾಥ ನಾಡಿದೆ. ಇನ್ನೂ ಸಂತೋಷ ಲಾಡ್ ಫೌಂಡೇಶನ್ ವತಿಯಿಂದ 25 ತ್ರಿ ಚಕ್ರವಾಹನವು ಇದರಲ್ಲಿ ಸೇರಿದ್ದು, ಒಟ್ಟು 525 ವಿಶೇಷ…
Author: AIN Author
ನವದೆಹಲಿ: ಪ್ರಶ್ನೆಗಾಗಿ ನಗದು ಪಡೆದು ಪ್ರಕರಣದಲ್ಲಿ ಸಂಸತ್ ಸ್ಥಾನದಿಂದ ಉಚ್ಛಾಟನೆಗೊಂಡಿರುವ ಟಿಎಂಸಿ (TMC) ನಾಯಕಿ ಮಹುವಾ ಮೊಯಿತ್ರಾ (Mahua Moitra) ಅರ್ಜಿಯನ್ನು ಜನವರಿ 3ರಂದು ವಿಚಾರಣೆ ನಡೆಸುವುದಾಗಿ ಸುಪ್ರೀಂಕೋರ್ಟ್ ಹೇಳಿದೆ. ಉಚ್ಛಾಟನೆಯನ್ನು ಪ್ರಶ್ನೆ ಮಾಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಸಂಜೀವ್ ಖನ್ನಾ (Snajeev Khanna) ನೇತೃತ್ವ ಪೀಠ ಪ್ರಕರಣದ ಬಗ್ಗೆ ಅಧ್ಯಯನ ಮಾಡಲು ಸಮಯ ಸಿಕ್ಕಿಲ್ಲ ಎಂದು ಹೇಳಿದೆ. ಇತರೆ ಹಲವು ಪ್ರಕರಣಗಳ ಅರ್ಜಿಗಳನ್ನು ಅಧ್ಯಯನ ಮಾಡಬೇಕಿದ್ದು, ಈ ಪ್ರಕರಣದ ಫೈಲ್ ಅನ್ನು ಓದಲು ನನಗೆ ಸಮಯ ಸಿಕ್ಕಿಲ್ಲ. ಹೀಗಾಗಿ ವಿಚಾರಣೆ ದಿನಾಂಕ ಬದಲಾಯಿಸಲಾಗುತ್ತಿದೆ. ಜನವರಿ 3 ರಂದು ವಿಚಾರಣೆ ನಡೆಸುವುದಾಗಿ ವಿಚಾರಣೆ ವೇಳೆ ನ್ಯಾ. ಸಂಜೀವ್ ಖನ್ನಾ ಹೇಳಿದರು. ಡಿಸೆಂಬರ್ 22ಕ್ಕೆ ಕಲಾಪ ಅಂತ್ಯವಾಗುತ್ತಿರುವ ಹಿನ್ನೆಲೆ ಸುಪ್ರೀಂಕೋರ್ಟ್ (Supreme Court) ಈ ನಿರ್ಧಾರದಿಂದ ಮಧ್ಯಂತರ ರಿಲೀಫ್ ಪಡೆದು ಮಹುವಾ ಮೊಯಿತ್ರಾ ಪ್ರಸಕ್ತ ಅಧಿವೇಶನದಲ್ಲಿ ಭಾಗಿಯಾಗಲು ಸಾಧ್ಯವಾಗುವುದಿಲ್ಲ
ಹುಬ್ಬಳ್ಳಿ: ಗದಗ ಜಿಲ್ಲೆಯ ಕುರ್ತಕೋಟಿ ಗ್ರಾಮದ ಮಾರ್ತಂಡಗೌಡ ಪ್ರಲ್ಹಾದಗೌಡ ಪಾಟೀಲ ಅವರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಿಳೆಯೂ ಸೇರಿದಂತೆ ನಾಲ್ವರು ಅಪರಾಧಿಗಳಿಗೆ ಧಾರವಾಡದ ಹೈಕೋರ್ಟ್ ಜೀವಾವಧಿ ಶಿಕ್ಷೆ ಹಾಗೂ ತಲಾ ₹ 10 ಸಾವಿರ ದಂಡ ವಿಧಿಸಿದೆ. https://ainlivenews.com/illegally-collected-1635-grams-of-ganja-seized/ ವಿರುಪಾಕ್ಷಗೌಡ ಪಾಟೀಲ, ತುಳಸರಡ್ಡಿ ಗಾಡರಡ್ಡಿ, ನಿಂಗಪ್ಪ ಈರಗಾರ ಹಾಗೂ ನೀಲವ್ವ ಪಾಟೀಲ ಶಿಕ್ಷೆಗೊಳಗಾದವರು. ಆಸ್ತಿಗೆ ಸಂಬಂಧಿಸಿದಂತೆ 2011ರ ಡಿಸೆಂಬರ್ 11ರಂದು ಮಾರ್ತಂಡಗೌಡ ಅವರ ಕೊಲೆಯಾಗಿತ್ತು. ನ್ಯಾಯಮೂರ್ತಿಗಳಾದ ಎಚ್.ಪಿ. ಸಂದೇಶ ಹಾಗೂ ರಾಮಚಂದ್ರ ಡಿ.ಹುದ್ದಾರ ಅವರು ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ. ಪಿರ್ಯಾದಿ ಪರವಾಗಿ ಎಲ್.ಎಸ್. ಸುಳ್ಳದ ವಾದಿಸಿದ್ದರು. ಇದಕ್ಕೂ ಮುಂಚೆ 2019ರ ಮಾರ್ಚ್ 30ರಂದು ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗಳನ್ನು ಖುಲಾಸೆ ಮಾಡಿ ಆದೇಶಿಸಿತ್ತು. ಈ ಆದೇಶವನ್ನು ಧಾರವಾಡ ಹೈಕೋರ್ಟ್ ರದ್ದುಪಡಿಸಿ, ಶಿಕ್ಷೆ ವಿಧಿಸಿದೆ.
ಬೆಂಗಳೂರು: ಹೊಸ ವರ್ಷಕ್ಕೆ ನಂದಿನಿ ಹಾಲು, ಮೊಸರು ದರ ಹೆಚ್ಚಾಗುವ ಸಾಧ್ಯತೆಯಿದೆ. ಈ ಸಂಬಂಧ ಅಧಿವೇಶನದಲ್ಲಿ ಸರ್ಕಾರ ದರ ಏರಿಸುವ ಸುಳಿವು ನೀಡಿದೆ. ಹಾಲಿನ ದರ ಏರಿಕೆ ಪ್ರಸ್ತಾಪ ಪರಿಶೀಲನೆಯಲ್ಲಿದೆ ಎಂದು ಸರ್ಕಾರ ಹೇಳಿದೆ. ದರ ಹೆಚ್ಚಳ ಕುರಿತು ಮಾಲೂರು ಶಾಸಕ ಕೆ.ವೈ ನಂಜೇಗೌಡ ಪ್ರಶ್ನೆಗೆ ಪಶು ಸಂಗೋಪನೆ ಖಾತೆ ಸಚಿವ ಕೆ.ವೆಂಕಟೇಶ್ ಉತ್ತರ ನೀಡಿದ್ದಾರೆ. ಇತರೆ ಖಾಸಗಿ ಬ್ರ್ಯಾಂಡ್ಗಳ ದರಕ್ಕಿಂತ ನಂದಿನಿ ಬ್ರ್ಯಾಂಡ್ಗಳ ದರ 10-12 ರೂಪಾಯಿ ಕಡಿಮೆ ಇದೆ. ಹಾಲು ಉತ್ಪಾದಕರು, ಒಕ್ಕೂಟಗಳು ನಷ್ಟದಲ್ಲಿದ್ದು, ಗ್ರಾಹಕರಿಗೆ ಹೊರೆಯಾಗದಂತೆ ದರ ಹೆಚ್ಚಿಸುವುದಾಗಿ ಉತ್ತರ ಕೊಟ್ಟಿದ್ದಾರೆ. ಇದರೊಂದಿಗೆ ಹೊಸವರ್ಷಕ್ಕೆ ನಂದಿನ ಹಾಲಿನ ಉತ್ಪನ್ನಗಳ ಮೇಲಿನ ಬೆಲೆ ಏರಿಕೆಯಿಂದ ಗ್ರಾಹಕರಿಗೆ ಹೊರೆಯಾಗುವುದಂತು ಗ್ಯಾರೆಂಟಿಯಾಗಿದೆ.
ಕಾಸರಗೋಡು: ಕೇರಳ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟದ ಟೆಕ್ವಾಂಡೋದಲ್ಲಿ ಚಿನ್ನದ ಪದಕ ಗೆದ್ದು, (Taekwondo) ಕನ್ನಡತಿ ಎನ್. ಗಣ್ಯ ರಾಷ್ಟ್ರೀಯ ಶಾಲಾ ಕ್ರೀಡಾಕೂಟಕ್ಕೆ ಆಯ್ಕೆಯಾಗಿದ್ದಾರೆ. ಕಾಸರಗೋಡು (Kasaragod) ಜಿಲ್ಲೆಯ ಎಡನೀರು ಸ್ವಾಮೀಜಿಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ಲಸ್ ಒನ್ ವಿದ್ಯಾರ್ಥಿನಿಯಾಗಿರುವ ಗಣ್ಯ, 17 ವರ್ಷದೊಳಗಿನ ಬಾಲಕಿಯರ 50-65 ಕೆಜಿ ವಿಭಾಗದಲ್ಲಿ ಮಿಂಚಿದರು. ಗಣ್ಯ ಸಾಧನೆಯಿಂದಾಗಿ ಕಾಸರಗೋಡು ಜಿಲ್ಲೆ ಸೀನಿಯರ್ ಹಾಗೂ ಜೂನಿಯರ್ ಟೆಕ್ವಾಂಡೋ (Junior Taekwondo) ವಿಭಾಗದಲ್ಲಿ ಸಮಗ್ರ ಪ್ರಶಸ್ತಿಯನ್ನು ಗೆದ್ದಿದೆ. ಆರ್ಎಸ್ಸಿ ಎರ್ನಾಕುಳಂನಲ್ಲಿ (Ernakulam) ನಡೆದ ಕೇರಳ ರಾಜ್ಯ ಮಟ್ಟದ ಶಾಲಾ ಕ್ರೀಡಾಕೂಟದ ಗೆಲುವಿನೊಂದಿಗೆ ಗಣ್ಯ ಮಧ್ಯಪ್ರದೇಶದಲ್ಲಿ ನಡೆಯುವ ರಾಷ್ಟ್ರೀಯ ಶಾಲಾ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಹತೆ ಪಡೆದಿದ್ದಾರೆ. ಸ್ ಒನ್ ವಿಜ್ಞಾನ ವಿಭಾಗದಲ್ಲಿ (PCMB) ವಿದ್ಯಾಭ್ಯಾಸ ಮಾಡುತ್ತಿರುವ ಗಣ್ಯ ಈಗಾಗಲೇ ಹಲವಾರು ಪ್ರಶಸ್ತಿಗಳನ್ನು ಪಡೆದಿದ್ದು, ಯೋಗಾಭ್ಯಾಸದಲ್ಲೂ ಸಾಧನೆ ಮಾಡಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಾಸರಗೋಡು ಯೋಧ ಟೆಕ್ವಾಂಡೋ ಅಕಾಡೆಮಿಯಲ್ಲಿ ಜಯನ್ ಪೊಯಿನಾಚಿ ಅವರಿಂದ ಗಣ್ಯ ತರಬೇತಿ ಪಡೆದಿದ್ದಾರೆ. ಖಾಸಗಿ ಸಂಸ್ಥೆಯೊಂದರಲ್ಲಿ ಮ್ಯಾನೇಜರ್…
ಕೇರಳ: ಶುಕ್ರವಾರ ಸಂಜೆ ಕೇರಳದಲ್ಲಿ ಭೀಕರ ರಸ್ತೆ ಅಪಘಾತಗಳು ಸಂಭವಿಸಿದೆ. ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ಗೆ ಆಟೋ ಡಿಕ್ಕಿಯಾಗಿ ಐದು ಜನ ಸಾವನ್ನಪ್ಪಿರುವ ಘಟನೆ ಕೇರಳದ ಮಲಪ್ಪುರಂನಲ್ಲಿ ನಡೆದಿದೆ. ಕರ್ನಾಟಕದಿಂದ ಶಬರಿಮಲೆಗೆ ತೆರಳುತ್ತಿದ್ದ ಬಸ್ಗೆ ಚಾಲಕನ ನಿಯಂತ್ರಣ ತಪ್ಪಿ ಆಟೋ ಡಿಕ್ಕಿಯಾಗಿದೆ. ಅಪಘಾತದ ಭೀಕರತೆಗೆ ಆಟೋದಲ್ಲಿದ್ದ ಐವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆಟೋ ಡ್ರೈವರ್ ಅಬ್ದುಲ್ ಮಜೀದ್, ಪ್ರಯಾಣಿಕರಾದ ಮುಹ್ಸಿನಾ, ಥಸ್ನೀಮ್, ರಿಯಾಜ್ ಹಾಗೂ ಗುರು ಸಿಗದ ಇನ್ನಿಬ್ಬರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಅಪಘಾತದಲ್ಲಿ ಗಾಯಗೊಂಡವರನ್ನು ಕೂಡಲೇ ಆ್ಯಂಬುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಮಲಪ್ಪುರಂನಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಬರಿಮಲೆಯ ಅವ್ಯವಸ್ಥೆ ನಡುವೆಯೇ ಶಬರಿಮಲೆಯತ್ತ ತೆರಳುತ್ತಿರುವ ಭಕ್ತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಶಬರಿಮಲೆಯ ಮಾರ್ಗದಲ್ಲಿ ವಾಹನ ದಟ್ಟಣೆ ಕೂಡ ಹೆಚ್ಚಾಗುತ್ತಿದೆ, ವಾಹನ ಚಾಲಕರು ಜಾಗರೂಕತೆಯಿಂದ ವಾಹನ ಚಲಾಯಿಸಬೇಕಿದೆ. ಶಬರಿಮಲೆ ದೇವಸ್ಥಾನದಿಂದ ಸುಮಾರು ಮುನ್ನೂರು ಕೋಟಿ ರೂಪಾಯಿ ಆದಾಯ ಬಂದರೂ ಕೂಡ ಕೇರಳ ಸರ್ಕಾರ ಇಲ್ಲಿ…
ಬೆಂಗಳೂರು:- ರಸ್ತೆ ಮದ್ಯೆ ಹುಚ್ಚಾಟ ಮೆರೆದಿದ್ದ ಯುವಕರ ತಂಡದ ವಿರುದ್ದ ಚಿಕ್ಕಜಾಲ ಸಂಚಾರಿ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ. ಏರ್ಪೋರ್ಟ್ ರಸ್ತೆಯಲ್ಲಿ ಕಾರ್ ರೂಫ್ ಮೇಲೆ ಹತ್ತಿ ಯುವಕರ ತಂಡ ಡ್ಯಾನ್ಸ್ ಮಾಡಿದ್ದರು. ಚಲಿಸುತ್ತಿರುವ ಕಾರಿನ ಮೇಲೆ ಬಟ್ಟೆ ಕಳಚಿ ಡ್ಯಾನ್ಸ್ ಮಾಡುತ್ತಿದ್ದರು. ನಾಲ್ವರು ಯುವಕರಿಂದ ನಡು ರಸ್ತೆಯಲ್ಲಿ ಪುಂಡಾಟ ತೋರಲಾಗಿತ್ತು. DL 3cba9775 ನಂಬರಿನ ಕಾರಿನಲ್ಲಿ ಪುಂಡಾಟ ನಡೆಸಲಾಗಿತ್ತು. ಕುಡಿದ ಅಮಲಿನಲ್ಲಿ ಕಾರಿನ ರೂಫ್ ಹತ್ತಿ ಪುಂಡಾಟ ಶಂಕೆ ವ್ಯಕ್ತವಾಗಿದೆ. ಎನ್ ಹೆಚ್ 7 ಏರ್ ಪೋರ್ಟ್ ರಸ್ತೆಯಲ್ಲಿ ನಡೆದಿದ್ದ ಘಟನೆ ಜರುಗಿದೆ. ಇದನ್ನ ಪೊಲೀಸರಿಗೆ ಸಾರ್ವಜನಿಕರು ಟ್ಯಾಗ್ ಮಾಡಿ ಪ್ರಶ್ನಿಸಿದ್ದರು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಚಿಕ್ಕಜಾಲ ಸಂಚಾರಿ ಪೊಲೀಸರು, ಇಂಡಿಯನ್ ಮೊಟಾರ್ ಸೈಕಲ್ ಆ್ಯಕ್ಟ್ ಅಡಿ ಪ್ರಕರಣ ದಾಖಲು ಮಾಡಿದ್ದಾರೆ.
ಬೆಂಗಳೂರು:- ಅರ್ಧ ಬೆಲೆಗೆ ದುಬೈ ಕರೆನ್ಸಿ ಕೊಡ್ತಿನಿ ಅಂತ ಕಲರ್ ಜೆರಾಕ್ಸ್ ಪೇಪರ್ ಕೊಡ್ತಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ದೆಹಲಿ ಮೂಲದ ಇಮ್ರಾನ್ ಶೇಕ್ ಬಂಧಿತ ಆರೋಪಿ. ಈತನ ಜೋಡಿ ರುಕ್ಸಾನ ಎಸ್ಕೇಪ್ ಆಗಿದ್ದಾರೆ. ಆರೋಪಿಗಳು, ದುಬೈ ಕರೆನ್ಸಿ ಧಿರಾಮ್ ಎಂದು ನಂಬಿಸಿ ಕಲರ್ ಜೆರಾಕ್ಸ್ ಕೊಡುತ್ತಿದ್ದರು. ಈ ಕಿಲಾಡಿ ಜೋಡಿ, ಉದ್ಯಮಿಗಳನ್ನ ಪರಿಚಯ ಮಾಡಿಕೊಳ್ಳುತ್ತಿದ್ದ. ನಮ್ಮತ್ರ ಸಾಕಷ್ಟು ದುಬೈ ಕರೆನ್ಸಿ ಇದೆ ಆದ್ರೆ ಎಲ್ಲಾ ಕರೆನ್ಸಿನಾ ಎಕ್ಸ್ ಚೇಂಜ್ ಮಾಡೋದು ಕಷ್ಟ ಎನ್ನುತ್ತಿದ್ದರು. ಒಂದು ಧಿರಾಮ್ ಗೆ 22-25 ರೂಪಾಯಿ ಆಗುತ್ತೆ. ಆದರೆ ಕಿಲಾಡಿಗಳು 12 ರೂಪಾಯಿ ಕೊಟ್ರೆ ಧಿರಾಮ್ ಕೊಡ್ತಿವಿ ಎಂದು ನಂಬಿಸುತ್ತಿದ್ದರು. ಉದ್ಯಮಿಗಳನ್ನು ನಂಬಿಸಲು ಒಂದು ಅಸಲಿ ಕರೆನ್ಸಿ ಕೊಟ್ಟು ಚೆಕ್ ಮಾಡಿಕೊಳ್ಳಿ ಅಂತ ಬಿಡ್ತಿದ್ರು. ಯಾಮಾರಿದವರು ಹಣ ರೆಡಿ ಮಾಡಿಕೊಂಡು ಕರೆನ್ಸಿ ಎಕ್ಸ್ ಚೇಂಜ್ ಗೆ ಮುಂದಾಗ್ತಿದ್ರು.ನಂತರ ಆರೋಪಿ ಶೇಕ್ ಹಣ ಪಡೆದು ಜೆರಾಕ್ಸ್ ನೋಟ್ ಕೈಗಿಟ್ಟು ಎಸ್ಕೇಪ್ ಆಗ್ತಿದ್ದ. ಸದ್ಯ ಆರೋಪಿ ಇಮ್ರಾನ್ ಶೇಕ್…
ಬೆಂಗಳೂರು:- ಬೆಂಗಳೂರಿನ ಉದ್ಯಮಿಗಳಿಗೆ ಕರವೆ ನಾರಾಯಣ ಗೌಡ ಬಣ ಎಚ್ಚರಿಕೆ ಕೊಟ್ಟಿದೆ. ಬೆಂಗಳೂರಿನಲ್ಲಿ ಅನ್ಯಭಾಷೆ ನಾಮ ಫಲಕ ಹೆಚ್ಚಾದ ಹಿನ್ನೆಲೆ ಹೋರಾಟಕ್ಕೆ ಕರವೇ ಮುಂದಾಗಿದೆ. ಡಿಸೆಂಬರ್ 27ರೊಳಗೆ ಕನ್ನಡ ನಾಮಫಲಕ ಅಳವಡಿಸುವಂತೆ ಕರವೆ ಆಗ್ರಹಿಸಿದ್ದಾರೆ. ಕನ್ನಡ ನಾಮಪಲಕ ಅಳವಡಿಸದಿದ್ದಲ್ಲಿ ಬೃಹತ್ ಹೋರಾಟದ ಎಚ್ಚರಿಕೆ ನೀಡಲಾಗಿದೆ. ಡಿಸೆಂಬರ್ 27ರಂದು ಬೆಂಗಳೂರಿನಾದ್ಯಂತ ಕರವೇ ಬೃಹತ್ ಹೋರಾಟ ನಡೆಸಲಿದೆ. ಕರವೇ ನಾರಾಯಣ ಗೌಡ ಬಣದಿಂದ ಎಲ್ಲಾ ಅಂಗಡಿ ,ಹೋಟೆಲ್ ,ಮಾಲ್ ಗಳಿಗೆ ಎಚ್ಚರಿಕೆ ಸಂದೇಶ ನೀಡಲಾಗಿದೆ.
ಬೆಂಗಳೂರು:- ಉದ್ಯಮಿಯನ್ನ ಟ್ರಾಪ್ ಮಾಡಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಸಿಸಿಬಿ ಪೊಲೀಸು ಅರೆಸ್ಟ್ ಮಾಡಿದ್ದಾರೆ. ಖಲೀಮ್, ಸಭಾ, ಓಬೆದ್ ರಕೀಮ್, ಅತೀಕ್ ಬಂಧಿತ ಆರೋಪಿಗಳು.. ಅತೀವುಲ್ಲಾ ಎಂಬ ಉದ್ಯಮಿಯನ್ನ ಆರೋಪಿಗಳು ಟ್ರ್ಯಾಪ್ ಮಾಡಿದ್ದರು. ಬಂಧಿತ ಆರೋಪಿಗಳಲ್ಲಿ ಖಲೀಮ್ ಮತ್ತು ಸಭಾ ಇಬ್ಬರೂ ಗಂಡ ಹೆಂಡತಿ.. ಅತೀವುಲ್ಲಾಗೆ ಪತ್ನಿ ಸಭಾಳನ್ನ ವಿಧವೆ ಅಂತಾ ಖಲೀಮ್ ಪರಿಚಯ ಮಾಡಿಸಿಕೊಟ್ಟಿದ್ದ. ಪರಿಚಯ ಮಾಡಿಸಿ ಆಕೆಯನ್ನ ನೋಡಿಕೊಳ್ಳುವಂತೆ ಹೇಳಿದ್ದ.. ನಂತರ ಸಭಾ ಮತ್ತು ಅತೀವುಲ್ಲಾ ನಡುವೆ ದೈಹಿಕ ಸಂಪರ್ಕ ನಡೆದಿತ್ತು.. ಕೆಲ ದಿನಗಳ ನಂತರ ಆರ್ ಆರ್ ನಗರದಲ್ಲಿ ರೂಮ್ ಬುಕ್ ಮಾಡಲು ಸಭಾ ಕರೆದಿದ್ದ. ಆಧಾರ್ ಕಾರ್ಡ್ ಜೊತೆ ಬಾ ಎಂದು ಅತೀವುಲ್ಲಾಗೆ ಕರೆದಿದ್ಳು. ರೂಮ್ ಬುಕ್ ಮಾಡಿ ಕೆಲ ಹೊತ್ತಲ್ಲೇ ಆರೋಪಿಗಳು ಎಂಟ್ರಿ ಕೊಟ್ಟಿದ್ದಾರೆ. ಏಕಾಏಕಿ ಎಂಟ್ರಿ ಕೊಟ್ಟು ಆರೋಪಿಗಳು ಸೀನ್ ಕ್ರಿಯೇಟ್ ಮಾಡಿದ್ದರು. ಖಲೀಮ್, ರಕೀಬ್, ಅತೀಕ್ ರಿಂದ ಸೀನ್ ಕ್ರಿಯೇಟ್ ಮಾಡಿದ್ದಾರೆ. ಇಜ ವಿಚಾರ ನಿಮ್ಮ ಮನೆಯವ್ರಿಗೆ ಹೇಳ್ತೀವಿ ಅಂತಾ ಆರು…