ಬೆಂಗಳೂರು:- ಉದ್ಯಮಿಯನ್ನ ಟ್ರಾಪ್ ಮಾಡಿದ್ದ ಹನಿಟ್ರ್ಯಾಪ್ ಗ್ಯಾಂಗ್ ಅನ್ನು ಸಿಸಿಬಿ ಪೊಲೀಸು ಅರೆಸ್ಟ್ ಮಾಡಿದ್ದಾರೆ. ಖಲೀಮ್, ಸಭಾ, ಓಬೆದ್ ರಕೀಮ್, ಅತೀಕ್ ಬಂಧಿತ ಆರೋಪಿಗಳು.. ಅತೀವುಲ್ಲಾ ಎಂಬ ಉದ್ಯಮಿಯನ್ನ ಆರೋಪಿಗಳು ಟ್ರ್ಯಾಪ್ ಮಾಡಿದ್ದರು. ಬಂಧಿತ ಆರೋಪಿಗಳಲ್ಲಿ ಖಲೀಮ್ ಮತ್ತು ಸಭಾ ಇಬ್ಬರೂ ಗಂಡ ಹೆಂಡತಿ.. ಅತೀವುಲ್ಲಾಗೆ ಪತ್ನಿ ಸಭಾಳನ್ನ ವಿಧವೆ ಅಂತಾ ಖಲೀಮ್ ಪರಿಚಯ ಮಾಡಿಸಿಕೊಟ್ಟಿದ್ದ. ಪರಿಚಯ ಮಾಡಿಸಿ ಆಕೆಯನ್ನ ನೋಡಿಕೊಳ್ಳುವಂತೆ ಹೇಳಿದ್ದ.. ನಂತರ ಸಭಾ ಮತ್ತು ಅತೀವುಲ್ಲಾ ನಡುವೆ ದೈಹಿಕ ಸಂಪರ್ಕ ನಡೆದಿತ್ತು.. ಕೆಲ ದಿನಗಳ ನಂತರ ಆರ್ ಆರ್ ನಗರದಲ್ಲಿ ರೂಮ್ ಬುಕ್ ಮಾಡಲು ಸಭಾ ಕರೆದಿದ್ದ. ಆಧಾರ್ ಕಾರ್ಡ್ ಜೊತೆ ಬಾ ಎಂದು ಅತೀವುಲ್ಲಾಗೆ ಕರೆದಿದ್ಳು. ರೂಮ್ ಬುಕ್ ಮಾಡಿ ಕೆಲ ಹೊತ್ತಲ್ಲೇ ಆರೋಪಿಗಳು ಎಂಟ್ರಿ ಕೊಟ್ಟಿದ್ದಾರೆ. ಏಕಾಏಕಿ ಎಂಟ್ರಿ ಕೊಟ್ಟು ಆರೋಪಿಗಳು ಸೀನ್ ಕ್ರಿಯೇಟ್ ಮಾಡಿದ್ದರು. ಖಲೀಮ್, ರಕೀಬ್, ಅತೀಕ್ ರಿಂದ ಸೀನ್ ಕ್ರಿಯೇಟ್ ಮಾಡಿದ್ದಾರೆ. ಇಜ ವಿಚಾರ ನಿಮ್ಮ ಮನೆಯವ್ರಿಗೆ ಹೇಳ್ತೀವಿ ಅಂತಾ ಆರು…
Author: AIN Author
ಬೆಂಗಳೂರು:- ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ 9 ಚಿನ್ನಾಭರಣ ಮಳಿಗೆ ಮೇಲೆ ನಡೆದ ಐಟಿ ದಾಳಿ ಅಂತ್ಯವಾಗಿದೆ. ಚಿನ್ನದ ವ್ಯಾಪಾರಿ ಓರ್ವರಿಗೆ ಸೇರಿದ ಮನೆಯಲ್ಲಿ ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ನಡೆಸಿದ ಶೋಧ ಅಂತ್ಯವಾಗಿದೆ. ಐಟಿ ಅಧಿಕಾರಿಗಳು ಜಯನಗರ 3ನೇ ಬ್ಲಾಕ್ನ 8ನೇ ಮುಖ್ಯರಸ್ತೆಯಲ್ಲಿರುವ ಆಭೂಷಣ ಮಳಿಗೆ, ಪೊಲ್ಕಿಸ್, ಮಂಗಳ, ರಿದ್ದಿ, ತಿರುಮಲ ಸೇರಿದಂತೆ 9 ಮಳಿಗೆ ಮೇಲೆ ದಾಳಿ ನಡೆಸಿದ್ದರು ಜಯನಗರ 2ನೇ ಬ್ಲಾಕ್ನಲ್ಲಿರುವ ಆಭೂಷಣ ಮಳಿಗೆ ಮಾಲೀಕನ ಫ್ಲ್ಯಾಟ್ ಮೇಲೂ ಐಟಿ ದಾಳಿ ನಡೆದಿತ್ತು. ಕಳೆದ ಮೂರು ದಿನಗಳಿಂದ ಐಟಿ ಅಧಿಕಾರಿಗಳು ಶೋಧ ನಡೆಸುತ್ತಿದ್ದರು. ಸದ್ಯ ಮೂರು ದಿನಗಳ ಪರಿಶೀಲನೆ ತಡ ರಾತ್ರಿ 2ಗಂಟೆಗೆ ಅಂತ್ಯವಾಗಿದೆ. ಹಲವು ಮಹತ್ವದ ದಾಖಲೆಗಳು, ರಶೀದಿ ಇನ್ವಾಯ್ಸ್ ಪರಿಶೀಲಿಸಲಾಗಿದೆ. ಆದಾಯ ತೆರಿಗೆ ವಂಚನೆ ಆರೋಪ ಹಿನ್ನೆಲೆಯಲ್ಲಿ ಕಳೆದ ಮೂರು ದಿನಗಳಿಂದ ನಗರದಲ್ಲಿ ಐಟಿ ರೇಡ್ ನಡೆಯುತ್ತಿದೆ. ಅಂಗಡಿ, ಶೋರೂಂ, ಮಾಲೀಕರ ಮನೆಯಲ್ಲಿ ಐಟಿ ಶೋಧ ಮಾಡುತ್ತಿದೆ. ಇದೀಗ ಆಭೂಷಣ ಚಿನ್ನದ ಅಂಗಡಿಯ ಮಾಲೀಕನ…
ಬೆಂಗಳೂರು:- ಕೋರ್ಟ್ ಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ. ಮಂಜುನಾಥ್ ಬಂಧಿತ ಆರೋಪಿ. ಹತ್ಯೆ, ಕೊಲೆಯತ್ನ, ವಾಹನಗಳಿಗೆ ಬೆಂಕಿ ಹಚ್ಚಿದ ಪ್ರಕರಣಗಳಲ್ಲಿ ಆರೋಪಿಯಾಗಿರುವ ಮಂಜುನಾಥ್ ಕಳೆದ ಆರೇಳು ತಿಂಗಳುಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ. ಕೊನೆಗೆ ಬೆಂಗಳೂರು, ಮಾಗಡಿ, ಕುಣಿಗಲ್ ಮಾರ್ಗದ ಬಸ್ಗಳಲ್ಲಿ ಕ್ಲೀನರ್ ಆಗಿ ಕೆಲಸ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಸಂಪಿಗೇಹಳ್ಳಿ ಪೊಲೀಸ್ ಠಾಣೆಯಲ್ಲಿ ಆರೋಪಿಯ ವಿರುದ್ಧ ಪ್ರಕರಣ ದಾಖಲಾಗಿದೆ.
ಹುಬ್ಬಳ್ಳಿ,: ನಗರದ ಬೆಂಡಿಗೇರಿಯಲ್ಲಿನ ಮನೆಯೊಂದರಲ್ಲಿ ಅಕ್ರಮವಾಗಿ ಸಂಗ್ರಹ ಮಾಡಿದ್ದ 1635 ಗ್ರಾಂ ಗಾಂಜಾ ವನ್ನು ಬೆಂಡಿಗೇರಿ ಪೊಲೀಸರು ವಶಪಡಿಸಿಕೊಂಡು, ಇಬ್ಬರನ್ನು ಬಂಧಿಸಿದ ಘಟನೆ ನಡೆದಿದೆ. ಅಂದಾಜು 40 ಸಾವಿರ ರೂ. ಮೌಲ್ಯದ ಗಾಂಜಾ ಇದಾಗಿದೆ. ಅಖಿಲೇಶ್ ಯರಮಸಾಳ, ಪ್ರಭು ಗೆಜ್ಜೆಹಳ್ಳಿ ಬಂಧಿತ ಆರೋಪಿಗಳು. ಇನ್ನು ಮನೆ ಪರಿಶೀಲನೆ ವೇಳೆ ಅಖಿಲೇಶ್ ಯರಮಸಾಳ ಬಳಿಯಿದ್ದ 1250 ಗ್ರಾಂ ಗಾಂಜಾ ಹಾಗೂ ಕಬ್ಬಿಣದ 4 ತಲ್ವಾರ್, 1ಕೊಡಲಿ ವಶಕ್ಕೆ ಪಡೆಯಲಾಗಿದೆ. ಮತ್ತೋರ್ವ ಆರೋಪಿ ಪ್ರಭು ಗೆಜ್ಜಿಹಳ್ಳಿ ಬಳಿ 385 ಗ್ರಾಂ ಗಾಂಜಾಯಿದ್ದು ಜಪ್ತಿ ಮಾಡಲಾಗಿದೆ. ಈ ಕುರಿತು ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Dr Bro, ನಮಸ್ಕಾರ ದೇವ್ರು ಅಂತಲೇ ವಿಡಿಯೋ ಶುರು ಮಾಡುವ ಗಗನ್ ಶ್ರೀನಿವಾಸನ್ ಯೂಟ್ಯೂಬ್ ನೋಡೋ ಜನರು ಮಾತ್ರವಲ್ಲ ಸೋಷಿಯಲ್ ಮೀಡಿಯಾ ಬಳಸೋ ಎಲ್ಲರಿಗೂ ಅತ್ಯಂತ ಅಚ್ಚು ಮೆಚ್ಚು ಅಂತಲೇ ಹೇಳಬಹುದುಕಳೆದೊಂದು ತಿಂಗಳಿಂದ ಒಂದೇ ಒಂದು ವಿಡಿಯೋ ಸಹ ಹಾಕದೆ ಎಲ್ಲಿದ್ದಾರೆ ಎಂಬ ಮಾಹಿತಿಯೂ ಇಲ್ಲದೆ ಅವರ ಅಭಿಮಾನಿಗಳು, ನೆಟ್ಟಿಗರು ಆತಂಕಕ್ಕೂ ಒಳಗಾಗಿದ್ದಾರೆ. ಕಳೆದ ಚೀನಾ ಪ್ರವಾಸ ಕೈಗೊಂಡಿದ್ದ ಅವರು ಇದಾದ ಬಳಿಕ ಒಂದೂ ವಿಡಿಯೋ ಹಂಚಿಕೊಂಡಿಲ್ಲ. ಇನ್ನು ಇದೀಗ ಡಾ ಬ್ರೋ(Dr Bro) ಕಳೆದ ಒಂದು ತಿಂಗಳಿನಿಂದ ವಿಡಿಯೋ ಮಾಡಿಲ್ಲ ಎಲ್ಲಿಯೂ ಕಾಣಿಸಿಕೊಂಡಿಲ್ಲ. ಇದನ್ನ ನೋಡೊದ ಗಗನ್ ಅವ್ರು ಅಭಿಮಾನಿಗಳು ಹಾಗೂ ನೆಟ್ಟಿಗರು ನಾಪತ್ತೆಯಾಗಿದ್ದಾರೆ ಗಗನ್ ಅಂತ ಸುದ್ದಿ ಹಬ್ಬಿಸಿದ್ರು. ಮಾಧ್ಯಮದವರು ಕೂಡ ಚೀನಾ ದೇಶದ ವಿಡಿಯೋ ಮಾಡಿ ಡಾ. ಬ್ರೋ ತೊಂದ್ರೇಗೆ ಸಿಲುಕಿದ್ದಾರೆ ಅಂತ ಹೇಳಿದ್ರು ಆದ್ರೆ ಇದೀಗ ಡಾ. ಬ್ರೋ ಬಗ್ಗೆ ಹೊಸ ಸುದ್ದಿಯೊಂದು ಸ್ಯಾಂಡಲ್ವುಡ್ ನಲ್ಲಿ ಹರಿದಾಡುತ್ತಿದ್ದೂ, ನಟ ಶೈನ್ ಶೆಟ್ಟಿ ಈ ಕುರಿತ ವಿಚಾರವೊಂದನ್ನ…
ಬೆಂಗಳೂರು:- ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ತಮ್ಮ 64ನೇ ಹುಟ್ಟುಹಬ್ಬ ಹಿನ್ನೆಲೆ ಸಿಂಗಾಪುರಕ್ಕೆ ತೆರಳಿದ್ದಾರೆ. ಜನ್ಮದಿನ ಆಚರಣೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಕುಟುಂಬ ಮತ್ತು ಕೆಲ ಆಪ್ತರ ಜೊತೆ ಸಿಂಗಾಪುರಕ್ಕೆ ಪ್ರಯಾಣ ಬೆಳೆಸಿದ್ದಾರೆ. ನನ್ನ ಜನ್ಮದಿನವಾದ ಡಿಸೆಂಬರ್ 16ರಂದು, ನಾನು ಬೆಂಗಳೂರು ನಗರದಲ್ಲಿ ಲಭ್ಯವಿರುವುದಿಲ್ಲ. ಕಾರ್ಯಕರ್ತರಾದಿಯಾಗಿ ನನ್ನ ಮೇಲೆ ಪ್ರೀತಿ, ವಾತ್ಸಲ್ಯ ಇರಿಸಿರುವ ಪ್ರತಿಯೊಬ್ಬರೂ ನನ್ನ ವೈಯಕ್ತಿಕ ಭೇಟಿಗೆ ಪ್ರಯತ್ನಿಸದೇ ತಾವು ಇದ್ದಲ್ಲಿಂದಲೇ ಶುಭ ಕೋರಬೇಕಾಗಿ ನಿಮ್ಮೆಲ್ಲರಲ್ಲೂ ವಿನಂತಿ ಮಾಡಿಕೊಳ್ಳುತ್ತೇನೆ ಎಂದು ಹೆಚ್ಡಿಕೆ ಪೋಸ್ಟ್ ಮಾಡಿದ್ದಾರೆ.
ಬೆಂಗಳೂರು:- ರಾಜಧಾನಿ ಬೆಂಗಳೂರಿನ ಹಲವೆಡೆ ಇಂದಿನಿಂದ ಎರಡು ದಿನ ಪವರ್ ಕಟ್ ಇರಲಿದೆ ಎಂದು ಬೆಸ್ಕಾಂ ತಿಳಿಸಿದೆ ವೃಷಭಾವತಿ ವಿದ್ಯುತ್ ಕೇಂದ್ರದವ್ಯಾಪ್ತಿಯ ಬಾಪೂಜಿನಗರ, ಗಂಗೊಂಡನಹಳ್ಳಿ, ದೀಪಾಂಜಲಿನಗರ, ಅತ್ತಿಗುಪ್ಪೆ, ಪಂತರ ಪಾಳ್ಯ, ಕೆಂಚೇನಹಳ್ಳಿ, ಆರ್.ಆರ್. ನಗರ, ಬೆಟ್ಟನಪಾಳ್ಯ, ಐಡಿಯಲ್ ಹೋಮ್ಸ್, ಬಿಎಚ್ ಇಎಲ್ ಲೇಔಟ್,ಜ್ಞಾನಭಾರತಿ,ವಿನಾಯಕಲೇಔಟ್, ಕೆಂಗೇರಿಉಪನಗರ, ಜ್ಞಾನಭಾರತಿ ಲೇಔಟ್, ಬಂಡೇಮಠ, ,ಮೈಲಸಂದ್ರ, ವಿಶ್ವೇಶ್ವರಯ್ಯ ಲೇಔಟ್, ಆರ್ಆರ್ಲೇಔಟ್, ಕೆಂಗುಂಟೆ, ಕೊಡಿಗೇಹಳ್ಳಿ, ಮುದ್ದಿನ ಪಾಳ್ಯ, ಮರಿಯಪ್ಪನಪಾಳ್ಯ, ಸುಭಾಷ್ನಗರ, ಗಿರಿನಗರ, ಬ್ಯಾಂಕ್ ಕಾಲೋನಿ, ಶ್ರೀನಗರ, ಹನುಮಂತನಗರ, ವಿದ್ಯಾಪೀಠ, ತ್ಯಾಗರಾಜ ನಗರ, ಹೊಸಕೆರೆ ಹಳ್ಳಿ, ನಾಗೇಂದ್ರ ಬ್ಲಾಕ್, ಅವಲಹಳ್ಳಿ ಹಾಗೂ ಮೈಸೂರು ರಸ್ತೆಯ ಸುತ್ತಮುತ್ತಲಿನ ಪ್ರದೇಶಗಳು. ಸರ್ಎಂವಿ ಲೇಔಟ್ ವಿದ್ಯುತ್ ಕೇಂದ್ರದ ವ್ಯಾಪ್ತಿಯ ಉಲ್ಲಾಳ ಮುಖ್ಯ ರಸ್ತೆ, ಪ್ರೆಸ್ ಲೇಔಟ್, ರೈಲ್ವೆಲೈ ಔಟ್, ಜ್ಞಾನಜ್ಯೋತಿನಗರ, ಮುನೇಶ್ವರನಗರ, ಎಂಪಿಎಂ ಲೇಔಟ್, ಐಟಿಐ ಲೇಔಟ್, ಕೆಂಗುಂಟೆ, ಮಲ್ಲತ್ತಹಳ್ಳಿ, ಡಿಗ್ರೂಪ್ ಲೇಔಟ್, ದೊಡ್ಡಬಸ್ತಿ, ಚಿಕ್ಕಬಸ್ತಿ, ರಾಮಸಂದ್ರ, ಗಾಯತ್ರಿ ಲೇಔಟ್, ಸೊನ್ನೇನಹಳ್ಳಿ, ಅಮ್ಮ ಆಶ್ರಮ, ಜ್ಞಾನಭಾರತಿ ಲೇಔಟ್, ಅಂಜನಾ ನಗರ, ರತ್ನಾನಗರ, ದೊಡ್ಡಗೊಲ್ಲರಹಟ್ಟಿ, ಸರ್…
ಬೆಂಗಳೂರು:- ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿ.17ರಿಂದ ಎರಡು ದಿನಗಳ ಕಾಲ ಮಳೆ ಆಗಲಿದೆ ಎಂದು ಭಾರತೀಯ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರಾವಳಿ, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ವಿಜಯಪುರದಲ್ಲಿ 9.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ. ಎಚ್ಎಎಲ್ನಲ್ಲಿ 26.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 15.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 2.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 27.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ…
ಬಿಗ್ ಬಾಸ್’ ಬೆಡಗಿ ಸಾನ್ಯ ಅಯ್ಯರ್ (Saanya Iyer) ಸದಾ ಒಂದಲ್ಲಾ ಒಂದು ಫೋಟೋಶೂಟ್ ಮೂಲಕ ಪಡ್ಡೆಹುಡುಗರನ್ನ ಅಟ್ರ್ಯಾಕ್ಟ್ ಮಾಡುತ್ತಿರುತ್ತಾರೆ. ಇದೀಗ ಬಾತ್ ಟಬ್ನಲ್ಲಿ ಕುಳಿತು ಮಸ್ತ್ ಆಗಿ ಫೋಟೋಶೂಟ್ ಮಾಡಿಸಿದ್ದಾರೆ. ಸಾನ್ಯ ನೋಟಕ್ಕೆ ಫ್ಯಾನ್ಸ್ ಫಿದಾ ಆಗಿದ್ದಾರೆ. ಕಪ್ಪು ಬಣ್ಣದ ತುಂಡು ಬಟ್ಟೆ ಧರಿಸಿ ಹಿಂದೆ ಜರಿಯಂತೆ ಕಲರ್ಫುಲ್ ಡ್ರೆಸ್ ತೊಟ್ಟು ಸಾನ್ಯ ಮಿಂಚಿದ್ದಾರೆ. ತಲೆಗೆ ಕಡ್ಡಿಯ ಕಿರೀಟ ಧರಿಸಿ ಮುದ್ದು ಮುದ್ದಾಗಿ ಕ್ಯಾಮೆರಾಗೆ ಪೋಸ್ ನೀಡಿದ್ದಾರೆ. ಬಾತ್ ಟಬ್ನಲ್ಲಿ ಮಲಗಿ ನಾನಾ ರೀತಿಯ ಪೋಸ್ ನೀಡಿದ್ದಾರೆ. ಕಳೆದ ವರ್ಷ ‘ಬಿಗ್ ಬಾಸ್’ ಸೀಸನ್ 9ರಲ್ಲಿ (Bigg Boss Kannada 9) ಸಾನ್ಯ ಅಯ್ಯರ್ ಸ್ಪರ್ಧಿಯಾಗಿದ್ದರು. 80ಕ್ಕೂ ಹೆಚ್ಚು ದಿನಗಳವರೆಗೂ ಸಾನ್ಯ ಆಟ ಆಡಿ ಎಲಿಮಿನೇಟ್ ಆಗಿದ್ದರು. ರೂಪೇಶ್ ಶೆಟ್ಟಿ (Roopesh Shetty) ಜೊತೆಗಿನ ಸ್ನೇಹದ ವಿಚಾರವಾಗಿ ಸಖತ್ ಸುದ್ದಿಯಾಗಿದ್ದರು. ಇದೀಗ ಇಂದ್ರಜಿತ್ ಲಂಕೇಶ್ ನಿರ್ದೇಶನದ ‘ಗೌರಿ’ (Gowri) ಚಿತ್ರದಲ್ಲಿ ಸಾನ್ಯ ಅಯ್ಯರ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಚೊಚ್ಚಲ ಸಿನಿಮಾದಲ್ಲೇ ಪಾತ್ರಕ್ಕೆ…
ಲ್ಯಾಪ್ಟಾಪ್ಗಳು ಟೆಕ್ಲೋಕವನ್ನು ಆವರಿಸಿಕೊಂಡಿದೆ. ಲ್ಯಾಪ್ಟಾಪ್ಗಳನ್ನು ಸುಲಭವಾಗಿ ಎಲ್ಲಿಗೆ ಬೇಕಾದರೂ ಕೊಂಡೊಯ್ಯಬಹುದು. ಟೆಕ್ನಾಲಜಿ ಪ್ರಪಂಚದಲ್ಲಿ ಲ್ಯಾಪ್ಟಾಪ್ಗಳ ಪಾತ್ರ ಬಹಳ ಮುಖ್ಯವಾಗಿದೆ. ಸುಲಭವಾಗಿ ಸಾಗಿಸಬಹುದಾದ ಈ ಕಂಪ್ಯೂಟರ್ ಸಾಧನ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಕೇವಲ ಐಟಿ ಮತ್ತು ಸಾಫ್ಟ್ವೇರ್ ಕ್ಷೇತ್ರಕ್ಕೆ ಮಾತ್ರ ಲ್ಯಾಪ್ಟಾಪ್ ಸೀಮಿತವಾಗಿಲ್ಲ, ಇನ್ನಿತರ ವಲಯಗಳಿಗೂ ಈ ಲ್ಯಾಪ್ಟಾಪ್ನ ಅಗತ್ಯ ತುಂಬಾ ಇದೆ. ಇನ್ನೂ ಇತ್ತೀಚಿನ ದಿನಗಳಲ್ಲಿ ವರ್ಕ್ ಫ್ರಮ್ ಹೋಮ್ ಸಂಸ್ಕೃತಿ ಹೆಚ್ಚು ಪ್ರಚಲಿತದಲ್ಲಿದೆ. ಕರೊನಾ ನಂತರ ವರ್ಕ್ ಫ್ರಮ್ ಹೋಮ್ ಆಯ್ಕೆ ಹೆಚ್ಚು ಮುನ್ನೆಲೆಗೆ ಬಂದಿತು. ಅನೇಕರು ಮನೆಯಲ್ಲಿ ಕೆಲಸ ಮಾಡುವಾಗ ತಮ್ಮ ತೊಡೆಯ ಮೇಲೆ ಲ್ಯಾಪ್ಟಾಪ್ ಇಟ್ಟುಕೊಳ್ಳುವುದು ಸಾಮಾನ್ಯವಾಗಿದೆ. ಆದರೆ, ಹೆಚ್ಚು ಹೊತ್ತು ತೊಡೆಯ ಮೇಲೆ ಲ್ಯಾಪ್ಟ್ಯಾಪ್ ಇಟ್ಟು ಕೆಲಸ ಮಾಡುವುದರಿಂದ ಗಂಭೀರ ಆರೋಗ್ಯ ಸಮಸ್ಯೆಗಳು ಬರುತ್ತವೆ ಎಂದು ಅಧ್ಯಯನವೊಂದು ತಿಳಿಸಿದೆ. ಕ್ಯಾನ್ಸರ್ ಬರುವ ಸಾಧ್ಯತೆ ಚರ್ಮದ ಕ್ಯಾನ್ಸರ್ಗೆ ಕಾರಣವಾಗುತ್ತದೆ ಎಂದು ಹೇಳಲಾಗಿದೆ. ಸಂಶೋಧಕರ ಪ್ರಕಾರ ಲ್ಯಾಪ್ಟಾಪ್ ಖಾಸಗಿ ಭಾಗಗಳಿಗೆ ಹತ್ತಿರವಾಗಿದ್ದರೆ ಕ್ಯಾನ್ಸರ್ ಬರುವ ಸಾಧ್ಯತೆ ಹೆಚ್ಚಾಗುತ್ತದೆಯಂತೆ.…