Author: AIN Author

ವಾಷಿಂಗ್ಟನ್‌: ಅಮೆರಿಕ ಅಧ್ಯಕ್ಷೀಯ ಅಭ್ಯರ್ಥಿ ಭಾರತ ಮೂಲದ ವಿವೇಕ್‌ ರಾಮಸ್ವಾಮಿ (Vivek Ramaswamy) ಹಿಂದೂ ಧರ್ಮದ ಸಾರ್ವತ್ರಿಕ ಮೌಲ್ಯಗಳ ಬಗ್ಗೆ ಮಾತನಾಡಿದ್ದಾರೆ. ಅಮೆರಿಕದ ಸಿಎನ್‌ಎನ್‌ ಟೌನ್‌ ಹಾಲ್‌ನಲ್ಲಿ ವಿವೇಕ್‌ ಮಾತನಾಡುತ್ತಿದ್ದಾಗ, ಅಮೆರಿಕ (America) ಹಿಂದೂ ಅಧ್ಯಕ್ಷರನ್ನು ಒಪ್ಪಿಕೊಳ್ಳಬಹುದೇ ಎಂಬ ಪ್ರಶ್ನೆ ಕೇಳಿಬಂತು.  ಅದಕ್ಕೆ ವಿವೇಕ್‌ ಪ್ರತಿಕ್ರಿಯಿಸಿ, ನನ್ನದು ‘ನಕಲಿ ಮತಾಂತರ’ ಅಲ್ಲ, ನಾನು ಹಿಂದೂ (Hinduism). ರಾಜಕೀಯ ವೃತ್ತಿಜೀವನವನ್ನು ಹೆಚ್ಚಿಸಲು ಸುಳ್ಳು ಹೇಳುವುದಿಲ್ಲ ಎಂದು ಪ್ರತಿಕ್ರಿಯಿಸಿದ್ದಾರೆ. ಅಲ್ಲದೇ, ಹಿಂದೂ ಧರ್ಮ ಮತ್ತು ಕ್ರಿಶ್ಚಿಯನ್ ಧರ್ಮ ಒಂದೇ ಸಮಾನ ಮೌಲ್ಯವನ್ನು ಹೇಳುತ್ತವೆ ಎಂದು ಪ್ರತಿಪಾದಿಸಿದ್ದಾರೆ.  https://ainlivenews.com/mother-sells-her-daughter-for-rs-4-lakh-compulsion-to-engage-in-immoral-activity-by-an-intoxicated-person/ ನಾನು ನಕಲಿ ಮತಾಂತರ ಆಗಬಹುದು. ಆದರೆ ಅದನ್ನು ನಾನು ಮಾಡುವುದಿಲ್ಲ. ನನ್ನ ನಂಬಿಕೆಯ ಬಗ್ಗೆ ನಿಮಗೆ ಹೇಳುತ್ತೇನೆ. ನನ್ನ ಪಾಲನೆ ಸಾಕಷ್ಟು ಸಾಂಪ್ರದಾಯಿಕವಾಗಿತ್ತು. ಮದುವೆಗಳು ಪವಿತ್ರವೆಂದು ನನ್ನ ಪೋಷಕರು ನನಗೆ ಹೇಳುತ್ತಿದ್ದರು. ಕುಟುಂಬಗಳು ಸಮಾಜದ ಮೂಲಾಧಾರವಾಗಿದೆ ಎಂದು ತಿಳಿಸಿದ್ದಾರೆ. ದೇವರು ಎಂಬುದು ಸತ್ಯ. ದೇವರ ಹೆಸರನ್ನು ವ್ಯರ್ಥವಾಗಿ ತೆಗೆದುಕೊಳ್ಳಬೇಡಿ. ನಿಮ್ಮ ಹೆತ್ತವರನ್ನು ಗೌರವಿಸಿ. ಕೊಲ್ಲಬೇಡಿ, ಸುಳ್ಳು ಹೇಳಬೇಡಿ,…

Read More

ಬೆಂಗಳೂರು:- ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಒತ್ತುವರಿ ತೆರವು ಕಾರ್ಯಾಚರಣೆಯ ಸರ್ವೇ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಭೂದಾಖಲೆಗಳ ಇಲಾಖೆಗೆ ಪತ್ರ ಬರೆಯಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯಲ್ಲಿ ಬೃಹತ್ ನೀರುಗಾಲುವೆಗಳ ಒತ್ತುವರಿ ತೆರವು ಕಾರ್ಯಾಚರಣೆಯ ಸಂಬಂಧ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಬೃಹತ್ ನೀರುಗಾಲುವೆ ಹಾಗೂ ಕೆರೆಗಳಲ್ಲಿ ಸರ್ವೇ ಮಾಡಲು ಹೆಚ್ಚು ಭೂಮಾಪಕರ ಅವಶ್ಯಕತೆಯಿದ್ದು, ಕಂದಾಯ ಇಲಾಖೆಯ ಅಡಿ ಬರುವ ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂದಾಖಲೆಗಳ ಇಲಾಖೆಗೆ ಪತ್ರ ಬರೆದು ಹೆಚ್ಚು ಭೂಮಾಪಕರನ್ನು ನಿಯೋಜನೆ ಮಾಡಲು ಅಗತ್ಯ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಯಿತು. ನಗರದಲ್ಲಿ ಬೃಹತ್ ನೀರುಗಾಲುವೆಗಳನ್ನು ಒತ್ತುವರಿ ಮಾಡಿಕೊಂಡಿರುವ ಸ್ಥಳಗಳನ್ನು ಭೂಮಾಪಕರಿಂದ ಸರ್ವೇ ನಡೆಸಿ ಮಾರ್ಕ್ ಮಾಡಿ, ತಹಶೀಲ್ದಾರ್ ರವರಿಂದ ಆದೇಶಗಳನ್ನು ಜಾರಿಮಾಡಿರುವಂತಹ ಒತ್ತುವರಿಗಳನ್ನು ಕೂಡಲೆ ತೆರವುಗೊಳಿಸಬೇಕು. ಉಚ್ಛ ನ್ಯಾಯಾಲಯದಲ್ಲಿ ತಡೆಯಾಜ್ಞೆಯಿರುವ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಗೊಳಿಸಿಕೊಂಡು ತೆರವು ಕಾರ್ಯಾಚರಣೆ ನಡೆಸಲು ಸೂಚನೆ ನೀಡಲಾಯಿತು. ನಿಗದಿತ…

Read More

ಪಾದದ ಗಾಯದ ಸಮಸ್ಯೆಯಿಂದ ಬಳಸುತ್ತಿರುವ ಭಾರತ ತಂಡದ ಹಿರಿಯ ವೇಗಿ ಮೊಹಮ್ಮದ್‌ ಶಮಿ ಅವರು ದಕ್ಷಿಣ ಆಫ್ರಿಕಾ ಪ್ರವಾಸದ ಎರಡು ಪಂದ್ಯಗಳ ಟೆಸ್ಟ್‌ ಸರಣಿಯಿಂದ ಹೊರಗುಳಿಯಲಿದ್ದಾರೆಂದು ವರದಿಯಾಗಿದೆ. ಪ್ರಸ್ತುತ ಭಾರತ ಹಾಗೂ ಆಫ್ರಿಕಾ ತಂಡಗಳು ಮೂರು ಪಂದ್ಯಗಳ ಟಿ20 ಸರಣಿಯಲ್ಲಿ ಕಾದಾಟ ನಡೆಸುತ್ತಿವೆ. ವೈಟ್‌ ಬಾಲ್‌ ಸರಣಿ ಮುಗಿದ ಬಳಿಕ ಉಭಯ ತಂಡಗಳು ಡಿಸೆಂಬರ್‌ 26 ರಿಂದ ಟೆಸ್ಟ್‌ ಸರಣಿಯಲ್ಲಿ ಕಾದಾಟ ನಡೆಸಲಿವೆ. ರೋಹಿತ್‌ ಶರ್ಮಾ, ವಿರಾಟ್‌ ಕೊಹ್ಲಿ ಹಾಗೂ ಜಸ್‌ಪ್ರೀತ್‌ ಬುಮ್ರಾ ಅವರು ವಿಮಾನದ ಮೂಲಕ ದಕ್ಷಿಣ ಆಫ್ರಿಕಾಕ್ಕೆ ಪ್ರಯಾಣ ಬೆಳೆಸಿದ್ದಾರೆ. ಆದರೆ, ಮೊಹಮ್ಮದ್‌ ಶಮಿ ಇವರ ಜೊತೆ ಹೋಗಿಲ್ಲ ಎಂದು ಕ್ರಿಕ್‌ಬಝ್‌ ವರದಿ ಮಾಡಿದೆ. ಈ ಮೂವರು ಹಿರಿಯರ ಆಟಗಾರರ ಜೊತೆ ನವದೀಪ್‌ ಸೈನಿ ಹಾಗೂ ಹರ್ಷಿತ್‌ ರಾಣಾ ಕೂಡ ವಿಮಾನದಲ್ಲಿ ತೆರಳಿದ್ದಾರೆಂದು ವರದಿಯಾಗಿದೆ. ಬೌಲಿಂಗ್‌ ಲ್ಯಾಂಡಿಂಗ್‌ ಪಾದದಲ್ಲಿ ನೋವು ಕಾಣಿಸಿಕೊಂಡಿದೆ ಎಂದು ಮೊಹಮ್ಮದ್‌ ಶಮಿ ಇತ್ತೀಚೆಗೆ ಹೇಳಿಕೊಂಡಿದ್ದಾರೆಂದು ವರದಿಯಾಗಿದೆ. ಕಳೆದ ಏಕದಿನ ವಿಶ್ವಕಪ್‌ ಟೂರ್ನಿಯಲ್ಲಿಯೇ ಮೊಹಮ್ಮದ್‌ ಶಮಿ…

Read More

ದರ್ಶನ್ ನಟನೆಯ ‘ಕಾಟೇರ’ (Katera Film) ಸಿನಿಮಾದ ರಿಲೀಸ್ ಆಗೋಕೆ ಕೆಲವೇ ಕೆಲವು ದಿನಗಳು ಬಾಕಿಯಿದೆ. ಈ ಚಿತ್ರದ ಟ್ರೈಲರ್ ರಿಲೀಸ್‌ಗೆ ದಿನಗಣನೆ ಶುರುವಾಗಿದೆ. ಇದೀಗ ಸುದ್ದಿಗೋಷ್ಠಿಯಲ್ಲಿ ‘ಕಾಟೇರ’ ಚಿತ್ರದ ಸ್ಪೆಷಾಲಿಟಿ ಬಗ್ಗೆ ದರ್ಶನ್ ಮಾತನಾಡಿದ್ದಾರೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟನೆಯ ‘ಕಾಟೇರ’ (Katera) ಸಿನಿಮಾ ಇದೇ ಡಿ.29ಕ್ಕೆ ರಿಲೀಸ್ ಆಗ್ತಿದೆ. ಟ್ರೈಲರ್‌ ರಿಲೀಸ್ ಬಗ್ಗೆ ನಿರ್ಮಾಪಕ ರಾಕ್‌ಲೈನ್ ವೆಂಕಟೇಶ್ ಸಿಹಿಸುದ್ದಿ ನೀಡಿದ್ದಾರೆ. ಸಿನಿಮಾದಲ್ಲಿ ದರ್ಶನ್ (Darshan) ಲುಕ್ ಬಗ್ಗೆ ಮುಕ್ತವಾಗಿ ಮಾತನಾಡಿದ್ದಾರೆ. ಒಂದು ಸಂತೋಷದ ಸುದ್ದಿ ಹಂಚಿಕೊಳ್ಳಲು ನಾವೆಲ್ಲರೂ ಇಂದು ಇಲ್ಲಿ ಸೇರಿದ್ದೀವಿ. ಡಿ.16ಕ್ಕೆ ‘ಕಾಟೇರ’ ಚಿತ್ರದ ಟ್ರೈಲರ್‌ ರಿಲೀಸ್‌ ಆಗ್ತಿದೆ. ಇದೇ ತಿಂಗಳು 29ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಈ ಚಿತ್ರದ ನಿರ್ಮಾಪಕನಾಗಿ ಚಿತ್ರ ಹಿಟ್ ಆಗಬೇಕು ಅನ್ನೋ ಆಸೆಯೊಂದಿಗೆ ಚಿತ್ರ ಮಾಡಿದ್ದೇನೆ. ಸಾಕಷ್ಟು ಹಿರಿಯ ಕಲಾವಿದರು ಚಿತ್ರದಲ್ಲಿ ನಟಿಸಿದ್ದಾರೆ. ಎಲ್ಲರೂ ಯಾರನ್ನೋ ಮೆಚ್ಚಿಸೋಕೆ ಮಾತಾಡಿಲ್ಲ. ಪ್ರತಿಯೊಬ್ಬರು ಪ್ರೀತಿಯಿಂದ ಟೀಮ್ ವರ್ಕ್‌ನಿಂದ ಸಿನಿಮಾ ಮಾಡಿದ್ವಿ. ಈ ಥರ ಸ್ಟ್ರೈಟ್…

Read More

ದೇಶದ ಪ್ರಮುಖ ಯುಪಿಐ ಪ್ಲಾಟ್ಫಾರ್ಮ್ ಫೋನ್ಪೇ ಶೀಘ್ರದಲ್ಲೇ ಸಾಲದ ಸೇವೆಯನ್ನು ಪ್ರಾರಂಭಿಸಲಿದೆ ಎಂದು ವರದಿಯಾಗಿದೆ. ಜನವರಿ 2024ರಿಂದ ಈ ಸೇವೆ ಗ್ರಾಹಕರಿಗೆ ಲಭ್ಯವಾಗಲಿದೆ. ಇದಕ್ಕಾಗಿ, ಕಂಪನಿಯು ಸುಮಾರು 5 ಬ್ಯಾಂಕ್ಗಳು ಮತ್ತು ಬ್ಯಾಂಕೇತರ ಹಣಕಾಸು ಕಂಪನಿಗಳೊಂದಿಗೆ (ಎನ್ಬಿಎಫ್ಸಿ) ಮಾತುಕತೆಗಳನ್ನು ಬಹುತೇಕ ಅಂತಿಮಗೊಳಿಸಿದೆ. ವಾಲ್ಮಾರ್ಟ್ ಮಾಲೀಕತ್ವದ ಫೋನ್ಪೇ ವಿತರಕ ಸಂಸ್ಥೆಯಾಗಿ ಸಾಲ ವಿತರಣೆ ಮಾಡಲಿದೆ. ಇದರಿಂದ ಫೋನ್ಪೇ ಯುಪಿಐ ಅಪ್ಲಿಕೇಶನ್ ಬಳಸುವ 50 ಕೋಟಿಗೂ ಹೆಚ್ಚು ಗ್ರಾಹಕರು ಮತ್ತು 3.7 ಕೋಟಿ ಸಣ್ಣ ಮತ್ತು ದೊಡ್ಡ ಉದ್ಯಮಿಗಳಿಗೆ ಪ್ರಯೋಜನವಾಗಲಿದೆ. ಡಿಜಿಟಲ್ ಪಾವತಿ ವಲಯದಲ್ಲಿ ಬಲವಾದ ಹಿಡಿತ ಸಾಧಿಸಿರುವ ಫೋನ್ಪೇ ಈಗ ಹೊಸ ಹೊಸ ವಲಯಗಳನ್ನು ಪ್ರವೇಶಿಸಲು ಸಾಧ್ಯತೆಗಳನ್ನು ಪರಿಶೀಲಿಸುತ್ತಿದೆ. ಐದು ಬ್ಯಾಂಕ್ಗಳು ಮತ್ತು ಎನ್ಬಿಎಫ್ಸಿಗಳು ಫೋನ್ಪೇ ಪ್ಲಾಟ್ಫಾರ್ಮ್ಗೆ ಬರಲು ಒಪ್ಪಿಕೊಂಡಿವೆ. ಶೀಘ್ರದಲ್ಲೇ ಕಂಪನಿಯು ಈ ಬಗ್ಗೆ ಘೋಷಣೆ ಮಾಡಲಿದೆ. ಸುಮಾರು 6 ತಿಂಗಳಲ್ಲಿ ಫೋನ್ಪೇನಲ್ಲಿ ಜನರಿಗೆ ಹಲವು ರೀತಿಯ ಉತ್ಪನ್ನಗಳು ಲಭ್ಯವಾಗಲಿವೆ. ಪ್ರಸ್ತುತ ಕಂಪನಿಯು ತನ್ನ ಗ್ರಾಹಕರ ಡೇಟಾಬೇಸ್ನಿಂದ ವಿವಿಧ ರೀತಿಯ ಸಾಲಗಳಿಗೆ…

Read More

ದಾವಣಗೆರೆ:- ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರಿಡುವ ವಿಚಾರಕ್ಕೆ ಮಾಜಿ ಶಾಸಕ MP ರೇಣುಕಾಚಾರ್ಯ ವಿರೋಧ ವ್ಯಕ್ತಪಡಿಸಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪು ಸುಲ್ತಾನ್ ಹೆಸರು ಇಡಲು ಮುಂದಾದರೆ ಬಿಜೆಪಿ ಜೊತೆ ರಾಜ್ಯದ ಜನರೂ ಕೂಡ ರೊಚ್ಚಿಗೇಳ್ತಾರೆ, ಕ್ರಾಂತಿ ಆಗುತ್ತೆ” ಅಂತ ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ. ಇನ್ನು ಬಿಜೆಪಿಯ ಹಲವು ನಾಯಕರು ಟಿಪ್ಪು ನಾಮಕರಣ ವಿರೋಧಿಸಿದ್ದು, ಹೋರಾಟದ ಎಚ್ಚರಿಕೆ ನೀಡಿದ್ದಾರೆ. ಮೈಸೂರು ವಿಮಾನ ನಿಲ್ದಾಣಕ್ಕೆ ಟಿಪ್ಪುಸುಲ್ತಾನ್ ಹೆಸರಿಡಲು ವಿರೋಧವಿದೆ. ಈ ಮೈಸೂರು ಎನ್ನುವುದು ಮಹಾರಾಜರು ಆಳಿದಂತಹ ಪವಿತ್ರ ಭೂಮಿ. ಆದರೆ ಟಿಪ್ಪು ಒಬ್ಬ ಮತಾಂದ, ದೇಶದ್ರೋಹಿ, ಹಿಂದುಗಳ ಪವಿತ್ರ ದೇವಾಲಯ ನಿರ್ನಾಮ ಮಾಡಿದವನು. ಹಿಂದೂಗಳನ್ನು ಮುಸ್ಲಿಂ ಆಗಿ ಮತಾಂತರ ಮಾಡಿದ ಮತಾಂಧ ಟಿಪ್ಪು ಹೆಸರಿಡಲು ಕಾಂಗ್ರೆಸ್‌ನ ಕೆಲ ನಾಯಕರು ಹೇಳಿದ್ದಾರೆ. ಇದಕ್ಕೆ ಬಿಜೆಪಿ ವಿರೋಧ ಇದೆ ಎಂದಿದ್ದಾರೆ.

Read More

ರಾಜ್ಯದ ರೈತರಿಗೆ ಬರ ಪರಿಹಾರವಾಗಿ ರೂ.2,000 ಮೊದಲ ಕಂತಿನ ಬೆಳೆನಷ್ಟ ಪರಿಹಾರಧನವನ್ನು ಈ ವಾರವೇ ರೈತರ ಖಾತೆಗಳಿಗೆ ನೇರ ವರ್ಗಾವಣೆ ಮಾಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನಸಭಾ ಅಧಿವೇಶನದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ ಬರ ಪರಿಹಾರ ಕಾರ್ಯ ಜೋರಾಗಿ ನಡೆದಿದ್ದು, ಸದ್ಯ ರಾಜ್ಯದ 223 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದೆ. ಪರಿಣಾಮ ರೈತಾಪಿ ವರ್ಗ ಬೆಳೆ ಕಳೆದುಕೊಂಡು ಸಾಕಷ್ಟು ಸಂಕಷ್ಟದಲ್ಲಿದೆ. ರೈತರ ಸಾಲ ಮರುಪಾವತಿಗೆ ಒತ್ತಡ ಹೇರದಂತೆ ಬ್ಯಾಂಕ್ ಗಳಿಗೆ ನಿರ್ದೇಶನ ನೀಡಲು ಕೇಂದ್ರಕ್ಕೆ ಮನವಿ ಸಲ್ಲಿಸಲಾಗುವುದು ಎಂದು ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಅವರು ಬೆಳಗಾವಿಯ ಸುವರ್ಣಸೌಧದ ಕಚೇರಿಯಲ್ಲಿ ಮಾಧ್ಯಮಗಳಿಗೆ ತಿಳಿಸಿದರು. ಜಿಲ್ಲೆಯ ರೈತ ಸಂಘಟನೆಗಳ ಪ್ರತಿನಿಧಿಗಳು ಇಂದು ಕೃಷಿ ಸಚಿವರನ್ನು ಭೇಟಿ ಮಾಡು ತಮ್ಮ  ಅಹವಾಲು‌ಗಳನ್ನು ನೀಡಿದರು, ಈ ಸಂದರ್ಭದಲ್ಲಿ ಅವರುಗಳೊಂದಿಗೆ ಚರ್ಚಿಸಿ ಸಮಸ್ಯೆಗಳನ್ನು ಕಾನೂನಿನ ಪರಿಮಿತಿ‌ ಹಾಗೂ ಸಂಪನ್ಮೂಲಗಳ ಲಭ್ಯತೆ ಆಧಾರದ ಮೇಲೆ ಪರಿಹರಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಕೃಷಿ…

Read More

ದಕ್ಷಿಣ ಭಾರತದ ಖ್ಯಾತನಟಿ, ಮಂಗಳೂರು ಮೂಲದ ಪೂಜಾ ಹೆಗ್ಡೆಗೆ (Pooja Hegde) ಕೊಲೆ ಬೆದರಿಕೆ ಹಾಕಲಾಗಿದೆ ಎ‍ನ್ನುವ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಕ್ಲಬ್ ವೊಂದರ ಉದ್ಘಾಟನೆಗೆ ಪೂಜಾ ದುಬೈಗೆ (Dubai) ಹಾರಿದ್ದರಂತೆ. ಈ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ನಟಿ ಜಗಳ ಮಾಡಿಕೊಂಡಿದ್ದರು ಎಂದು ಹೇಳಲಾಗುತ್ತಿದೆ. ಹಾಗಾಗಿ ಅಲ್ಲಿಂದಲೇ ಕೊಲೆ ಬೆದರಿಕೆ (Death Threats) ಬಂದಿದೆ ಎನ್ನುವುದು ಸಮಾಚಾರದ ಸಾರ. ದುಬೈನಲ್ಲಿ ಗಲಾಟೆಯಾದರೂ, ಅಲ್ಲಿದ್ದಾಗ ಯಾವುದೇ ಬೆದರಿಕೆಯೂ ಬಂದಿರಲಿಲ್ಲವಂತೆ. ದುಂಬೈನಿಂದ ವಾಪಸ್ಸು ಭಾರತಕ್ಕೆ ಬಂದಾಗ ಕರೆ ಮಾಡಿ ಕೊಲೆ ಬೆದರಿಕೆ ಹಾಕಲಾಗಿದೆ ಎಂದು ವರದಿ ಆಗಿದೆ. ಈ ಸುದ್ದಿ ಸಾಕಷ್ಟು ವೈರಲ್ ಕೂಡ ಆಗಿದೆ. ಈ ಸುದ್ದಿಗೆ ಸ್ವತಃ ಪೂಜಾ ಅವರೇ ಪ್ರತಿಕ್ರಿಯೆಯನ್ನೂ ನೀಡಿದ್ದಾರೆ. ದುಬೈಗೆ ಹೋಗಿದ್ದು ನಿಜ. ಕ್ಲಬ್ ಉದ್ಘಾಟನೆಗಾಗಿ ಅಲ್ಲಿಗೆ ಹೋಗಿದ್ದೆ. ಆದರೆ, ಈ ಸಂದರ್ಭದಲ್ಲಿ ಯಾವುದೇ ಗಲಾಟೆ ಆಗಿಲ್ಲ. ಅಲ್ಲದೇ, ನನಗೆ ಕೊಲೆ ಬೆದರಿಕೆ ಕೂಡ ಬಂದಿಲ್ಲ. ಇದು ಯಾರೋ ಸೃಷ್ಟಿಸಿದ ಸುಳ್ಳು ಸುದ್ದಿಯಾಗಿದೆ ಎಂದಿದ್ದಾರೆ ಪೂಜಾ. ಈ…

Read More

ಮುಂಬೈ: ಭಾರತ ಕ್ರಿಕೆಟ್‌ ತಂಡದ ಮಾಜಿ ನಾಯಕ ಎಂ.ಎಸ್‌.ಧೋನಿ (MS Dhoni) ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿ ಈಗಾಗಲೇ 3 ವರ್ಷ ಕಳೆದಿದೆ. ಈಗ ಅವರ ನಂ.7 ಜೆರ್ಸಿಯನ್ನೂ ನಿವೃತ್ತಗೊಳಿಸಲು ನಿರ್ಧರಿಸಲಾಗಿದೆ ಎಂದು ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ತಿಳಿಸಿದೆ. ಭಾರತ ಕ್ರಿಕೆಟ್‌ ಕಂಡ ಯಶಸ್ವಿ ನಾಯಕರಲ್ಲಿ ಧೋನಿ ಅಗ್ರಗಣ್ಯರು. ಭಾರತ ತಂಡಕ್ಕೆ ಮೂರು ಐಸಿಸಿ (ICC) ಟ್ರೋಫಿ ಗೆಲ್ಲಿಸಿಕೊಟ್ಟ ಏಕೈಕ ನಾಯಕ. ಅವರ ಸಾಧನೆಗೆ ಸಮಾನಾರ್ಥಕವಾಗಿದೆ ಜೆರ್ಸಿ. ಕ್ರಿಕೆಟ್‌ ದೇವರು ಸಚಿನ್ ತೆಂಡೂಲ್ಕರ್ ಅವರ ನಂ. 10 ಶರ್ಟ್ ಕೂಡ ಈಗಾಗಲೇ ಭಾರತೀಯ ಮಂಡಳಿಯಿಂದ ನಿವೃತ್ತಿ ಹೊಂದಿದೆ. ಅಂತೆಯೇ ಭಾರತ ತಂಡಕ್ಕೆ ಧೋನಿ ನೀಡಿದ ಕೊಡುಗೆಯನ್ನು ಗೌರವಿಸಿ ನಂ. 7 ಜೆರ್ಸಿಯನ್ನು ಆ ಪಟ್ಟಿಗೆ ಸೇರಿಸಲು ನಿರ್ಧರಿಸಲಾಗಿದೆ ಭಾರತೀಯ ಜೆರ್ಸಿ ಧರಿಸುವಾಗ 10 ನೇ ಶರ್ಟ್ ಅನ್ನು ಆಯ್ಕೆ ಮಾಡಲು ಯಾರಿಗೂ ಅವಕಾಶವಿಲ್ಲ. ಹಾಗೆಯೇ ಭಾರತೀಯ ತಂಡದಲ್ಲಿರುವ ಆಟಗಾರರು ನಂಬರ್ 7 ಜೆರ್ಸಿ ಧರಿಸುವಂತಿಲ್ಲ ಎಂದು ಬಿಸಿಸಿಐ ಹೇಳಿದೆ. ಯುವ…

Read More

ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಸಿನಿಮಾದ ಬಗ್ಗೆ ಅನೇಕ ಕಡೆ ಚರ್ಚೆಯಾಗುತ್ತಿದೆ. ಅನೇಕರು ಟೈಟಲ್ ಟೀಸರ್ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಹಿರಿಯ ನಟಿ ಶಿವರಾಜ್ ಕುಮಾರ್ (Shivaraj Kumar) ಕೂಡ ಟೈಟಲ್ ಟೀಸರ್ ಬಗ್ಗೆ ಮಾತನಾಡಿದ್ಧಾರೆ. ಯಶ್ ಅವರ ಬೆಳವಣಿಗೆ ನೋಡ್ತಾ ಇದ್ದರೆ ನನ್ನ ತಮ್ಮನೇ ಬೆಳೆಯುತ್ತಿದ್ದಾನೆ ಅನಿಸುತ್ತಿದೆ ಎಂದು ಹೇಳಿದ್ದಾರೆ. ಈ ಮೂಲಕ ಅಪ್ಪು ಅವರನ್ನೂ ಶಿವರಾಜ್ ಕುಮಾರ್ ನೆನಪಿಸಿಕೊಂಡಿದ್ದಾರೆ. ಒಂದು ನಿಮಿಷ ಹದಿನೆಂಟು ಸೆಕೆಂಡ್‌ನ ‘ಟಾಕ್ಸಿಕ್‘ (Toxic Film) ವಿಡಿಯೋ ಸೈಕ್ ಮಾಡ್ತಿದೆ. ಪ್ರತಿ ಬಾರಿ ಈ ಟೈಟಲ್ ಟೀಸರ್‌ನ ನೋಡಿದಾಗ ಹೊಸದೊಂದು ಅನುಭವ ಕೊಡ್ತಿದೆ. ಅಷ್ಟೋಂದು ವಿಷಗಳನ್ನ ಈ ಪುಟ್ಟ ವಿಡಿಯೋದಲ್ಲಿ ಅಡಗಿಸಲಾಗಿದೆ. ಈ ಟೀಸರ್‌ನಲ್ಲಿ ರ‍್ಯಾಪ್ ಮಾಡಿರೋದು ಯಾರು? ಮ್ಯೂಸಿಕ್ ಕೊಟ್ಟವರು ಯಾರು? ಡಿಸೈನರ್ ಯಾರು ಅನ್ನೋ ಹಲವಾರು ಪ್ರಶ್ನೆಗಳು ಅಭಿಮಾನಿಗಳು ಕೇಳ್ತಿದ್ದಾರೆ. ಕಾಯಿಸಿಸತಾಯಿಸಿ ಯಶ್ ಅದ್ಬುತವಾದ ಕಂಟೆಂಟ್‌ನ ಜನರ ಮುಂದಿಟ್ಟಿದ್ದಾರೆ. ಡಿಸೆಂಬರ್ 8ರಂದು ರಿಲೀಸ್ ಆದ ‘ಟಾಕ್ಸಿಕ್‘ ಟೈಟಲ್ ಟೀಸರ್ ಗಂಟೆಗಳಲ್ಲಿ…

Read More