ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಚಳಿಯ ಪ್ರಮಾಣ ಹೆಚ್ಚಳವಾಗುತ್ತಿದೆ. ಇದರ ನಡುವೆ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಮೈಸೂರು, ಮಂಡ್ಯ, ಮಡಿಕೇರಿ, ಸೇರಿದಂತೆ ಸುತ್ತಮುತ್ತಲಿನ ಭಾಗಗಳಲ್ಲಿ ಮೋಡ ಮುಸುಕಿದ ವಾತಾವರಣ ಇರಲಿದ್ದು, ಕೊಂಚ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಾರವಾರದಲ್ಲಿ ಗರಿಷ್ಠ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ 23 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಲಿದೆ. ಸದ್ಯ ಕರ್ನಾಟಕದಲ್ಲಿ ಅಲ್ಲಲ್ಲಿ ಹಿಂಗಾರು ಮಳೆ ಚುರುಕುಗೊಳ್ಳುವ ಜೊತೆಗೆ ಚಳಿ ಹೆಚ್ಚಾಗುವ ಮುನ್ಸೂಚನೆ ದೊರೆತಿದೆ. ಉತ್ತರ ಒಳನಾಡಿನಲ್ಲಿ ಈ ವಾರಪೂರ್ತಿ ಶುಷ್ಕ ವಾತಾವರಣವೇ ಮುಂದುವರಿಯಲಿದೆ. ಹೀಗಿದ್ದರೂ ಈ ಭಾಗದಲ್ಲಿ ಚಳಿಯ ಪ್ರಮಾಣ ಹೆಚ್ಚಿರಲಿದೆ ಎಂದಿದೆ. ರಾಜ್ಯದ ಬಹುತೇಕ ಕಡೆ ಗರಿಷ್ಠ ತಾಪಮಾನ ಮತ್ತು ಕನಿಷ್ಠ ತಾಪಮಾನ ಇಳಿಕೆ ಆಗಿದೆ. ಹೀಗಾಗಿ ಚಳಿಗಾಲ ಆರಂಭವಾದ ಅನುಭವವಾಗುತ್ತಿದೆ. ಈ ಮೂಲಕ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ…
Author: AIN Author
ಭಾರತೀಯ ಚಿತ್ರರಂಗದ ಬಹುನಿರೀಕ್ಷಿತ ಚಿತ್ರವೆಂದರೆ ಅದು ಹೊಂಬಾಳೆ ಫಿಲಂಸ್ನ ‘ಸಲಾರ್ ಪಾರ್ಟ್ 1: ಸೀಸ್ಫೈರ್’. ಪ್ರಶಾಂತ್ ನೀಲ್ ನಿರ್ದೇಶನದ, ಪ್ರಭಾಸ್ ಅಭಿನಯದ ಈ ಚಿತ್ರವು ಅಭಿಮಾನಿಗಳಲ್ಲಿ ಬೆಟ್ಟದಷ್ಟು ನಿರೀಕ್ಷೆಗಳನ್ನು ಹುಟ್ಟುಹಾಕಿವೆ. ಈ ಚಿತ್ರವು ಡಿ.22ರಂದು ಹಿಂದಿ, ತಮಿಳು, ತೆಲುಗು, ಕನ್ನಡ ಮತ್ತು ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದ್ದು, ಈ ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕುತೂಹಲದಿಂದ ಕಾಯುತ್ತಿದ್ದಾರೆ. ಭಾರತದ ಬೃಹತ್ ಆ್ಯಕ್ಷನ್ ಚಿತ್ರ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಈ ಚಿತ್ರದ ‘ಆಕಾಶ ಗಾಡಿಯ’ ಎಂಬ ಮೊದಲ ಲಿರಿಕಲ್ ಹಾಡು, ಹೊಂಬಾಳೆ ಫಿಲಂಸ್ ಯೂಟ್ಯೂಬ್ ಚಾನಲ್ನಲ್ಲಿ ಬಿಡುಗಡೆ ಆಗಿದೆ. ಇದೊಂದು ಭಾವನಾತ್ಮಕ ಹಾಡಾಗಿದ್ದು, ಇಬ್ಬರು ಗೆಳೆಯರ ನಡುವಿನ ಬಾಂಧವ್ಯವನ್ನು ಸಾರುತ್ತದೆ. ಅವರಿಬ್ಬರ ಸಾಮರ್ಥ್ಯ ಮತ್ತು ದೌರ್ಬಲ್ಯಗಳನ್ನು ವಿಶ್ಲೇಷಿಸುತ್ತದೆ. ಈ ಹಾಡನ್ನು ಕಿನ್ನಾಲ್ ರಾಜ್ ಬರೆದಿದ್ದು, ವಿಜಯಲಕ್ಷ್ಮೀ ಮೆತ್ತಿನಹೊಳೆ ಹಾಡಿದ್ದಾರೆ. ರವಿ ಬಸ್ರೂರು ಸಂಗೀತ ಈ ಚಿತ್ರಕ್ಕಿದೆ. ಇತ್ತೀಚೆಗಷ್ಟೇ ಸೆನ್ಸಾರ್ ಮಂಡಳಿಯಿಂದ ‘ಎ’ ಪ್ರಮಾಣ ಪತ್ರ ಪಡೆದಿರುವ ‘ಸಲಾರ್ ಪಾರ್ಟ್ 1: ಸೀಸ್ಫೈರ್’ ಚಿತ್ರವು ಎರಡು…
ಬೆಂಗಳೂರು ಗ್ರಾಮಾಂತರ: ತೀವ್ರ ಸಂಚಲನ ಮೂಡಿಸಿದ ಸೂಲಿಬೆಲೆಯಲ್ಲಿ ನಡೆದ ಜೋಡಿ ಕೊಲೆಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಹೌದು,ಜೋಡಿ ಕೊಲೆಯ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೆತ್ತಿಕೊಂಡ ಪೊಲೀಸರು ಸೈಲೆಂಟ್ ಆಗಿಯೇ ವಿಚಾರಣೆ ನಡೆಸಿ ಕೊಲೆ ಪ್ರಕರಣಕ್ಕೆ ರೋಚಕ ತಿರುವೊಂದನ್ನು ಕೊಟ್ಟಿದ್ದಾರೆ. ಸೂಲಿಬೆಲೆ ಗ್ರಾಮದಲ್ಲಿ ಕಳೆದ 10ರಂದು ರಾಮಕೃಷ್ಣಪ್ಪ ಮತ್ತು ಮುನಿರಾಮಕ್ಕ ಎಂಬ ವೃದ್ಧ ದಂಪತಿ ಬರ್ಬರವಾಗಿ ಕೊಲೆಯಾಗಿದ್ದರು. ಜತೆಗೆ ಕೊಲೆ ವಿಚಾರ ತಿಳಿದು ಬಂದಿದ್ದ ವೃದ್ಧರ ಹೆಣ್ಮಕ್ಕಳು ಆಸ್ತಿಗಾಗಿ ಅಣ್ಣನೇ ಕೊಲೆ ಮಾಡಿದ್ದಾನೆ ಎಂದು ನರಸಿಂಹಮೂರ್ತಿ ಮನೆ ಮೇಲೆ ದಾಳಿ ನಡೆಸಿ ಆಕ್ರೋಶ ಹೊರ ಹಾಕಿದ್ದರು. ಹೀಗಾಗಿ ಕೊಲೆಯಾದ ವೃದ್ಧ ದಂಪತಿಯ ಮಗ ನರಸಿಂಹಮೂರ್ತಿಯನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ನಡೆಸಿದ ಪೊಲೀಸರಿಗೆ ಕೊಲೆ ಕೇಸ್ನಲ್ಲಿ ತಿರುವು ಸಿಕ್ಕಿದೆ. ಆ ವೃದ್ಧ ದಂಪತಿಯನ್ನು ಕೊಲೆ ಮಾಡಿದ್ದು ನರಸಿಂಹಮೂರ್ತಿ ಅಲ್ಲ ಬದಲಾಗಿ ಆತನ ಪತ್ನಿ ಭಾಗ್ಯಮ್ಮ, ಮಗಳು ವರ್ಷಾ ಹಾಗೂ ಅಪ್ರಾಪ್ತ ಮಗ ಎಂದು ತನಿಖೆಯ ವೇಳೆ ತಿಳಿದು ಬಂದಿದೆ. ನರಸಿಂಹಮೂರ್ತಿ ಟೂರರ್ಸ್ ಆ್ಯಂಡ್ ಟ್ರಾವೇಲ್ಸ್,…
ಬಿಗ್ ಬಾಸ್ ಮನೆಯಿಂದ (Bigg Boss Kannada 10) 9ನೇ ವಾರ ಸ್ನೇಹಿತ್ ಔಟ್ ಆದರು. ಸ್ನೇಹಿತ್ (Snehith Gowda) ಎಲಿಮಿನೇಟ್ ಆದ್ಮೇಲೆ ನಮ್ರತಾ ಬಿಕ್ಕಿ ಬಿಕ್ಕಿ ಅತ್ತರು. ಸ್ನೇಹಿತ್ನ ತುಂಬಾ ಮಿಸ್ ಮಾಡಿಕೊಳ್ತಿದ್ದೇನೆ ಅಂತ್ಹೇಳಿ ನಮ್ರತಾ ಕಣ್ಣೀರು ಸುರಿಸಿದ್ದರು. ಇದೀಗ ಪರೋಕ್ಷವಾಗಿ ಸ್ನೇಹಿತ್ಗೆ ನಮ್ರತಾ (Namratha Gowda) ‘ಐ ಲವ್ ಯೂ’ ಎಂದಿದ್ದಾರೆ. ಈ ವಾರ ಸ್ಕೂಲ್ ಟಾಸ್ಕ್ ಚಾಲ್ತಿಯಲ್ಲಿದೆ. ಸ್ಪರ್ಧಿಗಳು ಶಿಕ್ಷಕರಾಗಿ, ವಿದ್ಯಾರ್ಥಿಗಳಾಗಿ ಬದಲಾಗಿದ್ದಾರೆ. ನಮ್ರತಾ ಶಾಲಾ ಪುಟ್ಟ ಬಾಲಕಿಯ ಪಾತ್ರ ನಿರ್ವಹಿಸುತ್ತಿದ್ದರು. ಈ ವೇಳೆ, ಸ್ಲೇಟ್ ಮೇಲೆ ಐ ಲವ್ ಯೂ ಎಂದು ನಮ್ರತಾ ಬರೆದಿದ್ದಾರೆ. ಆಗ, ಶಿಕ್ಷಕಿಯ ಪಾತ್ರ ನಿರ್ವಹಿಸುತ್ತಿದ್ದ ತನಿಷಾ (Tanisha Kuppanda) ಯಾರಿಗಾಗಿ ಬರೆದಿದ್ದು? ಅಂತ ಕೇಳಿದರು. ಅದಕ್ಕೆ, ಟ್ರಾನ್ಸ್ಫರ್ ಆಗಿ ಹೋದ ಹುಡುಗನಿಗಾಗಿ ಬರೆದಿದ್ದು ಎಂದು ಎಲಿಮಿನೇಟ್ ಆದ ಸ್ನೇಹಿತ್ ಕುರಿತಾಗಿ ಅಂತ ನಮ್ರತಾ ಹೇಳುತ್ತಾರೆ. ಅಲ್ಲಿಗೆ, ಸ್ನೇಹಿತ್ಗೆ ನಮ್ರತಾ ‘ಐ ಲವ್ ಯೂ’ ಎಂದು ಬರೆದಿದ್ದು ಅಂತ ಸ್ಪಷ್ಟವಾಯಿತು. ಬಿಗ್…
ಹೊಂಬಾಳೆ ಫಿಲ್ಮ್ಸ್ ಬ್ಯಾನರ್ ನಲ್ಲಿ ಮೂಡಿ ಬರುತ್ತಿರುವ ಬಘೀರ (Bagheera) ಸಿನಿಮಾ ಟೀಮ್ ನಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಈಗಾಗಲೇ ಬಹುತೇಕ ಶೂಟಿಂಗ್ ಮುಗಿಸಿರುವ ಚಿತ್ರತಂಡವು, ಅದರ ಮೊದಲ ನೋಟವನ್ನು ಪ್ರೇಕ್ಷಕರಿಗೆ ತೋರಿಸಲು ಮುಂದಾಗಿದೆ. ಇದೇ ಡಿಸೆಂಬರ್ 17ಕ್ಕೆ ಸಿನಿಮಾದ ಟೀಸರ್ (Teaser) ರಿಲೀಸ್ ಮಾಡುವುದಾಗಿ ನಿರ್ಮಾಣ ಸಂಸ್ಥೆ ಘೋಷಿಸಿದೆ. ಉಗ್ರಂ, ಭರಾಟೆ, ಮದಗಜ ಸಿನಿಮಾಗಳ ಮೂಲಕ ಮೋಡಿ ಮಾಡಿದ್ದ ರೋರಿಂಗ್ ಸ್ಟಾರ್ ಶ್ರೀಮುರಳಿ (Srimurali) ಬಘೀರನಾಗಿ ಮಿಂಚಲು ರೆಡಿಯಾಗಿದ್ದಾರೆ. ಕೆಜಿಎಫ್’ ಮಾಸ್ಟರ್ ಮೈಂಡ್ ಪ್ರಶಾಂತ್ ನೀಲ್ ಬರೆದಿರುವ ಕಥೆಗೆ, ಡಾ.ಸೂರಿ ನಿರ್ದೇಶನ ಮಾಡುತ್ತಿದ್ದು, ಬಘೀರನಾಗಿ ಶ್ರೀಮುರಳಿ ಕಾಣಿಸಿಕೊಳ್ತಿದ್ದಾರೆ. ಚಿತ್ರದಲ್ಲಿ ಶ್ರೀಮುರಳಿ ರಗಡ್ ಪೊಲೀಸ್ ಆಫೀಸರ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಇನ್ನು ಡಿಫರೆಂಟ್ ಸ್ಟೋರಿ ಮೂಲಕ ಮೋಡಿ ಮಾಡೋಕೆ ಶ್ರೀಮುರಳಿ ರೆಡಿಯಾಗಿದ್ದಾರೆ. ಈ ಹಿಂದೆಯೇ ಚಿತ್ರ ಫಸ್ಟ್ ಲುಕ್ ರಿವೀಲ್ ಆಗಿದ್ದು, ಶ್ರೀಮುರಳಿ ಸಖತ್ ಖಡಕ್ ಲುಕ್ಕಿನಲ್ಲಿ ಕಾಣಿಸಿಕೊಂಡಿದ್ರು. ಈ ಲುಕ್ ನೋಡಿ ಅಭಿಮಾನಿಗಳು ಕೂಡ ಖುಷಿಪಟ್ಟಿದ್ದರು. ಈ ಚಿತ್ರದ ಮೇಲೆ…
ಬೆಳಗಾವಿ: ನಾನು ದೇಶೀಯ ಆಕಳಿನ ತುಪ್ಪವನ್ನು (Ghee) ಕೆಜಿಗೆ 5,000 ರೂ.ನಂತೆ ಮಾರುತ್ತಿದ್ದೇನೆ. ನನ್ನ ಬಳಿ ಗಿರ್ ತಳಿಯ 250 ಹಸುಗಳಿವೆ. ಅದರ ತುಪ್ಪವನ್ನು ಕೆಜಿಗೆ 2,500 ರೂ. ನಂತೆ ಮಾರುತ್ತಿದ್ದೇನೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagouda Patil Yatnal) ಹೇಳಿಕೆ ನೀಡಿದ್ದಾರೆ. ಬೆಳಗಾವಿಯಲ್ಲಿ (Belagavi) ನಡೆಯುತ್ತಿರುವ ವಿಧಾನಸಭೆಯ ಅಧಿವೇಶನದಲ್ಲಿ ಮಾತನಾಡಿದ ಅವರು, ಜೋಳ ಬೆಳೆದರೆ ಗೋ ಸಂಪತ್ತು ಉಳಿಯುತ್ತದೆ. ತೊಗರಿಯಿಂದ ಗೋ ಸಂಪತ್ತು ಉಳಿಯುವುದಿಲ್ಲ. ನನ್ನದೇ ಒಂದು ಗೋಶಾಲೆ ಇದೆ. ತುಪ್ಪ ಮಾರುವುದರೊಂದಿಗೆ ವಿಭೂತಿ, ಕರ್ಪೂರ ಹಾಗೂ ಕುಂಕುಮವನ್ನು ತಯಾರಿಸುತ್ತಿದ್ದೇನೆ. ಅಲ್ಲದೇ ಸಾಬೂನು ಕೂಡಾ ತಯಾರು ಮಾಡುತ್ತಿದ್ದೇನೆ. ಗೋಮೂತ್ರವನ್ನು ಸಹ 130 ರೂ.ಗೆ ಮಾರುತ್ತಿದ್ದೇನೆ. ಆಕಳಿನ ಮಜ್ಜಿಗೆಯನ್ನು 30 ರೂ.ಗೆ ಹಾಗೂ ದೇಶೀಯ ಆಕಳಿನ ಹಾಲನ್ನು 100 ರೂ.ಗೆ ಮಾರುತ್ತಿದ್ದೇನೆ. ನಮ್ಮಲ್ಲಿ ಗೋ ಸಂಪತ್ತು ಉಳಿಯ ಬೇಕಾದರೆ ಜೋಳಕ್ಕೆ ಹೆಚ್ಚಿನ ಪ್ರಾಮುಖ್ಯತೆಯನ್ನು ಕೊಡಬೇಕು ಎಂದರು. https://ainlivenews.com/do-you-know-why-you-should-not-cut-your-nails-at-night-heres-why/ ನಮ್ಮ ಭಾಗದಲ್ಲಿ ಅಕ್ಕಿಯ ಬದಲಾಗಿ ಜೋಳ ಕೊಡಿ. 10…
ಬೆಂಗಳೂರು: ಖಾಸಗಿ ಶಾಲೆಗಳ ವಿರುದ್ಧ ಸಾರಿಗೆ ಇಲಾಖೆ ಸಮರ ಸಾರಿದ್ದು ಖಾಸಗಿ ಶಾಲೆಗಳ ಮೇಲೆ RTO ದಾಳಿ ನಡೆಸಿದೆ. ನಗರದ ವಿವಿಧ ಖಾಸಗಿ ಶಾಲಾ ವಾಹನಗಳ ಮೇಲೆ ದಾಳಿ ನಡೆಸಿದ್ದು ನಿಯಮ ಉಲ್ಲಂಘನೆ ಮಾಡುತ್ತಿರುವ ನೂರಾರು ಬಸ್ ಗಳ ವಿರುದ್ಧ ಸಾರಿಗೆ ಇಲಾಖೆಯ ಜಂಟಿ ಆಯುಕ್ತೆ ಶೋಭಾ ನೇತೃತ್ವದಲ್ಲಿ ದಾಳಿ ನಡೆಸಿದೆ. ದಾಳಿ ವೇಳೆ ಖಾಸಗಿ ಬಸ್ ಗಳ ನಿಯಮ ಉಲ್ಲಂಘನೆ ಖಾಸಗಿ ಶಾಲಾ ವಾಹನಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ಕರೆದುಕೊಂಡು ಹೋಗುತ್ತಿರುವುದು ಪತ್ತೆ ಒಮ್ನಿ ವಾಹನಗಳಲ್ಲಿ ನಿಯಮಮೀರಿ ಮಕ್ಕಳನ್ನು ಪಿಕ್ ಡ್ರಾಪ್ ಮಾಡುತ್ತಿರುವ ಶಾಲೆಗಳು ನಿಯಮ ಉಲ್ಲಂಘನೆ ಮಾಡಿದ ಒಮ್ನಿ, ಬಸ್ ಗಳನ್ನು ಸೀಜ್ ಮಾಡಿದ ಅಧಿಕಾರಿಗಳು ಜಯನಗರ ಹಾಗೂ ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತಲಿನ ಶಾಲೆಗಳ ಬಸ್ಗಳನ್ನ ತೀವ್ರ ತಪಾಸಣೆ ಮಾಡುತ್ತಿರುವ ಸಾರಿಗೆ ಇಲಾಖೆಯ ಅಧಿಕಾರಿಗಳು ಮಕ್ಕಳಿಗೆ ಬಸ್ ಒಮ್ಮಿ ವಾಹನಗಳಲ್ಲಿ ಸೇಫ್ಟಿ ಇಲ್ಲ ಅಂತ ಸಾಲು ಸಾಲು ಹೀಗಾಗಿ ವಿವಿಧ ಶಾಲೆಗಳ ಬಸ್ ಗಳನ್ನ ತಪಾಸಣೆ ಮಾಡ್ತಿರೋ ಸಾರಿಗೆ…
ಕನ್ನಡ ಚಿತ್ರರಂಗದ ಕನಸಿನ ರಾಣಿ ಮಾಲಾಶ್ರೀ (Malashree) ಅವರು ಪುತ್ರಿಯ ಜೊತೆ ಸಿದ್ಧಿವಿನಾಯಕ ದೇವರ ದರ್ಶನ ಪಡೆದಿದ್ದಾರೆ. ಗಣಪನಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಕುರಿತ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಪಡ್ಡೆಹುಡುಗರ ಕನಸಿನ ರಾಣಿಯಾಗಿ ಮರೆದವರು. ಇಂದಿಗೂ ಸಿನಿಮಾಗಳಲ್ಲಿ ನಟಿಸುತ್ತಾ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಇದೀಗ ಜ್ಯೂ.ಮಾಲಾಶ್ರೀ ಆರಾಧಾನಾ (Aradhana Ram) ಕೂಡ ಸಿನಿಮಾಗೆ ಎಂಟ್ರಿ ಕೊಡ್ತಿದ್ದಾರೆ. ಈ ಬೆನ್ನಲ್ಲೇ ದೇವರ ಸನ್ನಿಧಿಗೆ ಮಾಲಾಶ್ರೀ-ಆರಾಧಾನಾ ಭೇಟಿ ನೀಡಿದ್ದಾರೆ. 5ಕ್ಕೂ ಹೆಚ್ಚು ದೇವಸ್ಥಾನಕ್ಕೆ ಭೇಟಿ ಕೊಟ್ಟಿದ್ದಾರೆ. ಮಹಾರಾಷ್ಟ್ರದಲ್ಲಿರುವ ಸಿದ್ಧಿ ವಿನಾಯಕನ ದೇವಸ್ಥಾನಕ್ಕೆ ಮಾಲಾಶ್ರೀ ಕುಟುಂಬವು ವಿಶೇಷ ಪೂಜೆ ಸಲ್ಲಿಸಿದ್ದಾರೆ.
ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದ ಭೀತಿ ಎದುರಿಸುತ್ತಿದ್ದ ಬಾಲಿವುಡ್ ನಟಿ, ಹಾಗೂ ಡಾನ್ಸರ್ ಜರೀನ್ ಖಾನ್ ಅವರಿಗೆ ಷರತ್ತುಬದ್ಧ ಜಾಮೀನು (Bail) ಸಿಕ್ಕಿದೆ. ವಿದೇಶ ಪ್ರವಾಸ ಮಾಡದಂತೆ ನಿರ್ಬಂಧದ ಜೊತೆಗೆ ಮೂವತ್ತು ಸಾವಿರ ರೂಪಾಯಿಗಳ ಬಾಂಡ್ ಅನ್ನು ಭದ್ರತೆಗೆ ನೀಡುವಂತೆ ಆದೇಶಿಸಲಾಗಿದೆ. ನಟಿ ಜರೀನ್ ಖಾನ್ಗೆ (Zareen Khan) ಈ ಹಿಂದೆ ಸಂಕಷ್ಟ ಎದುರಾಗಿತ್ತು. ವಂಚನೆ ಪ್ರಕರಣದ ಸಂಬಂಧಿಸಿದಂತೆ ಜರೀನ್ ಖಾನ್ಗೆ ಕೋಲ್ಕತಾ ನ್ಯಾಯಾಲಯ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು. ವಂಚನೆ ಪ್ರಕರಣ ಸಂಬಂಧವಾಗಿ ಜರೀನ್ ಖಾನ್ಗೆ ಕೋಲ್ಕತಾ ನ್ಯಾಯಾಲಯ ನೋಟಿಸ್ ಜಾರಿ ಮಾಡಿತ್ತು.. 2018ರಲ್ಲಿ ಕೋಲ್ಕತಾದಲ್ಲಿ (Kolkata) ಆಯೋಜಿಸಿದ್ದ ದುರ್ಗಾ ಪೂಜೆ ಕಾರ್ಯಕ್ರಮದಲ್ಲಿ ಜರೀನ್ಗೆ ಆಹ್ವಾನ ನೀಡಲಾಗಿತ್ತು. ಈ ಸಮಾರಂಭಕ್ಕಾಗಿ ಸಂಭಾವನೆ ಕೂಡ ನೀಡಲಾಗಿತ್ತು. ಆದರೆ ಅಂದು ನಟಿ ಕಾರ್ಯಕ್ರಮಕ್ಕೆ ಗೈರಾಗಿದ್ದರು. ಈ ವಿಚಾರವಾಗಿ ನಟಿಯ ವಿರುದ್ದ ಆಯೋಜಕರು ಎಫ್ಐಆರ್ ದಾಖಲಿಸಿದ್ದರು. 2018ರಿಂದ ದಾಖಲಾದ ಪ್ರಕರಣದ ಕುರಿತು ನಟಿ ಕೋರ್ಟ್ ವಿಚಾರಣೆಗೆ ಹಾಜರಾಗಲಿಲ್ಲ.
ಕಲಬುರಗಿ: ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಅರವಿಂದ ಕುಮಾರ್ ಅರಳಿಅವರ ತಾಯಿ ಹಿಟ್ ಆ್ಯಂಡ್ ರನ್ಗೆ ಬಲಿಯಾಗಿದ್ದಾರೆ. ಕಲಬುರಗಿಯ ಸೇಡಂ ರಿಂಗ್ ರಸ್ತೆಯಲ್ಲಿರುವ ಟೊಯೋಟಾ ಶೋರೂಂ ಬಳಿ ಅರವಿಂದ ಅರಳಿ ಅವರ ತಾಯಿ ಸುಮಿತ್ರಾಗೆ ಬೈಕ್ ಬಂದು ಗುದ್ದಿದೆ. ಪರಿಣಾಮ ಸುಮೀತ್ರಾಬಾಯಿ (75) ಮೃತಪಟ್ಟಿದ್ದಾರೆ. https://ainlivenews.com/do-you-know-why-you-should-not-cut-your-nails-at-night-heres-why/ ಬೀದರ್ನಿಂದ ಕಲಬುರಗಿಯಲ್ಲಿರುವ ಅಳಿಯನ ಮನೆಗೆ ಬಂದಿದ್ದ ಸುಮಿತ್ರಾ ಅವರು, ಟೊಯೋಟಾ ಶೋರೂಂ ಬಳಿ ರಸ್ತೆ ದಾಟುತ್ತಿದ್ದಾಗ ಅಪರಿಚಿತ ಬೈಕ್ ಬಂದು ಡಿಕ್ಕಿ ಹೊಡಿದೆ. ಬೈಕ್ ಗುದ್ದಿದ ರಭಸಕ್ಕೆ ಸುಮಿತ್ರಾ ಸ್ಥಳದಲ್ಲೇ ಕುಸಿದುಬಿದ್ದಿದ್ದು, ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.