ಬೆಂಗಳೂರು: ಶಾಲಾ ಮಕ್ಕಳಿಗೆ ಸಿಹಿಸುದ್ದಿಯನ್ನು ನೀಡಲು ಮುಂದಾಗಿದ್ದು, ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ ಪ್ರಶ್ನೆಗೆ ಅವರು ಉತ್ತರಿಸಿದರು. ಶಾಲಾ ಮಕ್ಕಳಿಗೆ ಯಾಕೆ ಸೈಕಲ್ ಕೊಡ್ತಿಲ್ಲ? ಬಿಜೆಪಿ ಸರ್ಕಾರ ಸೈಕಲ್ ನಿಲ್ಲಿಸಿತ್ತು ಒಪ್ಪುತ್ತೇನೆ? ಅದಕ್ಕೆ ಜನ ನಮ್ಮನ್ನ ಇಲ್ಲಿಗೆ ಕೂರಿಸಿದ್ದಾರೆ. ಆದರೇ, ಈ ಸರ್ಕಾರಕ್ಕೆ ಸೈಕಲ್ ಕೊಡಲು ಹಣದ ಕೊರತೆ ಇದೆಯಾ? ಎಂದು ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, 2023-24ನೇ ಸಾಲಿನಲ್ಲಿ 55,43,828 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಲಾಗಿದೆ. 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಿಸಲಾಗಿದೆ. ವಿದ್ಯಾರ್ಥಿಗಳಿಗೆ ಸೈಕಲ್ ಹಿಂದಿನ ಸರ್ಕಾರ ಕೊಡೋದು ನಿಲ್ಲಿಸಿದೆ. ನಾನು ಈಗಾಗಲೇ ಸಿಎಂ ಜೊತೆಗೆ ಮಾತಾಡಿದ್ದೇನೆ. ಮುಂದಿನ ವರ್ಷದಿಂದಲೇ 8ನೇ ತರಗತಿ ಮಕ್ಕಳಿಗೆ ಸೈಕಲ್ ಕೊಡುವ ವ್ಯವಸ್ಥೆ ಮಾಡುತ್ತೇವೆ ಎಂದು ಭರವಸೆ ಕೊಟ್ಟರು.
Author: AIN Author
ಬೆಂಗಳೂರು: ಮಹಿಳೆಯನ್ನು ಬೆತ್ತಲೆಗೊಳಿಸಿ ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ಮಾಡಿದ ಪ್ರಕರಣವು ಇತ್ತೀಚೆಗೆ ಬೆಳಗಾವಿಯ ವೆಂಟಮೂರಿ ಗ್ರಾಮದಲ್ಲಿ ನಡೆದಿತ್ತು. ಸಂತ್ರಸ್ತೆಯ ಗುರುತು ಪತ್ತೆಯಾಗುವಂತೆ ವರದಿ ಮಾಡಿದ ಮಾಧ್ಯಮಗಳ ಕ್ರಮಕ್ಕೆ ರಾಜ್ಯ ಹೈಕೋರ್ಟ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು ಸಂತ್ರಸ್ತೆಯ ವಿಡಿಯೋ ಅಥವಾ ಫೋಟೋ ಪ್ರಸಾರ ಮಾಡದಂತೆ ಮಂಗಳವಾರ ಆದೇಶಿಸಿದೆ. ಮಹಿಳೆಯೊಬ್ಬರನ್ನು ಬೆತ್ತಲೆ ಮಾಡಿ ಮೆರವಣಿಗೆ ಮಾಡಿದ ಬಗ್ಗೆ ಮಾಧ್ಯಮಗಳ ವರದಿಗಳನ್ನು ಗಮನಿಸಿದ ಹೈಕೋರ್ಟ್, ಈ ಸಂಬಂಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ ಮತ್ತು ಘಟನೆಗೆ ಸಂಬಂಧಿಸಿದ ಯಾವುದೇ ವೀಡಿಯೊಗಳನ್ನು ಪ್ರಸಾರ ಮಾಡದಂತೆ ಎಲ್ಲಾ ಎಲೆಕ್ಟ್ರಾನಿಕ್ ಮಾಧ್ಯಮಗಳಿಗೆ ಆದೇಶಿಸಿದೆ. ಘಟನೆಯ ಸ್ಥಿತಿಗತಿ ವರದಿಯನ್ನು ಡಿಸೆಂಬರ್ 14 ರಂದು ಸಲ್ಲಿಸುವಂತೆ ಅಡ್ವೊಕೇಟ್ ಜನರಲ್ ಅವರಿಗೆ ಹೈಕೋರ್ಟ್ ಸೂಚಿಸಿದೆ. ಗೃಹ ಸಚಿವರು ಸಂತ್ರಸ್ತೆಯನ್ನು ಭೇಟಿಯಾದ ಸಂದರ್ಭದಲ್ಲಿ ಪತ್ರಿಕೆಗಳಲ್ಲಿ ಪ್ರಕಟವಾದ ಫೋಟೋದಲ್ಲಿ ಸಂತ್ರಸ್ತೆಯ ಗುರುತು ಸಿಗುವಂತೆ ಇದೆ. ಇದು ಮಾಧ್ಯಮದವರ ಅತ್ಯಂತ ಬೇಜವಾಬ್ದಾರಿ ಮತ್ತು ಸಂವೇದನಾರಹಿತವರ್ತನೆ ಹೈಕೋರ್ಟ್ ಕಿಡಿ ಕಾರಿದೆ. ವಿದ್ಯುನ್ಮಾನ ಮಾಧ್ಯಮದಲ್ಲಿ ಈಗಾಗಲೇ ಅಂತಹ ಸಂದರ್ಶನವನ್ನು ಪ್ರದರ್ಶಿಸಿದರೆ ಅಥವಾ…
ರಾಯಚೂರು: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿರುವ ಘಟನೆ ರಾಯಚೂರು ನಗರದ ಸಂತೋಷಿ ಸರೋವರ ಲಾಡ್ಜ್ ನಲ್ಲಿ ನಡೆದಿದೆ. ಲಾಡ್ಜ್ ನಲ್ಲಿ ಕೆಲಸ ಮಾಡ್ತಿದ್ದ ಸೋನಿ (23) ಮೃತ ಮಹಿಳೆಯಾಗಿದ್ದು, ಉತ್ತರಪ್ರದೇಶದ ನಗಲಬಾರಿ ಜಿಲ್ಲಾ ಅತ್ರಾಸ್ ಮೂಲದ ಮಹಿಳೆಯಾಗಿದ್ದಾಳೆ. ಲಾಡ್ಜ್ ನ ರೂಮ್ ನಂಬರ್ 113 ರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ರಾಯಚೂರು ಎಸ್.ಪಿ ನಿಖಿಲ್ ಭೇಟಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತ ಸೋನಿ ಪತಿ ಅವಿನಾಶ್ ನನ್ನು ವಿಚಾರಣೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
ಬೆಂಗಳೂರಿನಲ್ಲಿ ಗುಂಡಿ ಮುಚ್ಚದ ಪಾಲಿಕೆ ವಿರುದ್ಧ ಭುಗಿಲೆದ್ದು ಆಕ್ರೋಶಗೊಂಡಿದ್ದಾರೆ ಹಾಗೆ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಂಡಿ ವಿರುದ್ಧ ವಿಭಿನ್ನ ಪ್ರತಿಭಟನೆ ನಡೆಸಿದ್ದು ಮಹಾಗುಂಡಿಗೆ ಮಹಾಪೂಜೆ ಮಾಡಿದ ಬೆಂಗಳೂರು ಜನ ಬಲಿ ಪಡೆಯದೇ ಅನುಕಂಪ ತೋರಿದ ಗುಂಡಿಗೆ ಪೂಜೆ ಸಲ್ಲಿಸಿ ಕೃತಜ್ಞತೆ ಮೆರೆದಿದ್ದು ನಗರದ ಹಲಸೂರು ಬಳಿ ಏಕಾಏಕಿ ವೈಟ್ ಟಾಪಿಂಗ್ ರಸ್ತೆ ಕುಸಿದು ಅವಾಂತರವಾಗಿತ್ತು. ನಾಗರೀಕರನ್ನು ಬಲಿ ತೆಗೆದುಕೊಳ್ಳದೆ ಅನುಕಂಪವನ್ನು ತೋರಿರುವ ಮಹಾ ಗುಂಡಿಗೆ ಮಹಾಪೂಜೆ ಮಾಡಿ ಬ್ರ್ಯಾಂಡ್ ಬೆಂಗಳೂರಿಗೆ ಧಿಕ್ಕಾರ ಕೂಗಿ ಆಕ್ರೋಶ ಕೂಗಿದರು.
ಬೆಂಗಳೂರು: ಕೇರಳದಲ್ಲಿ (Kerala) ಭಾರೀ ಸದ್ದು ಮಾಡಿ, ಈ ಹಿಂದೆ ನಗರಕ್ಕೂ ಕಾಲಿಟ್ಟಿದ್ದ ವೈಫ್ ಸ್ವಾಪ್ (Wife Swaping) ಎಂಬ ಕೆಟ್ಟ ಸಂಸ್ಕೃತಿ ಬೆಂಗಳೂರಲ್ಲಿ (Bengaluru) ಮತ್ತೆ ಹುಟ್ಟಿಕೊಂಡಿದೆ. ಈಗ ಮತ್ತೆ ವೈಫ್ ಸ್ವಾಪ್ ಕುರಿತಾದ ಆರೋಪವೊಂದು ಕೇಳಿ ಬಂದಿದೆ. ಬಸವನಗುಡಿಯ ಪೂರ್ಣಚಂದ್ರ ಎಂಬಾತ ವೈಫ್ ಸ್ವಾಪ್ ಮಾಡಲು ತನ್ನ ಪತ್ನಿಯನ್ನು (Wife ) ಒತ್ತಾಯಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಪತ್ನಿ ಒಪ್ಪದಿದ್ದಕ್ಕೆ ಆತ ಆಕೆಯ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಈ ಸಂಬಂಧ ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಏನಿದು ವೈಫ್ ಸ್ವಾಪ್? ತನ್ನ ಹೆಂಡತಿಯನ್ನು ಸ್ನೇಹಿತರ ಜೊತೆಯೂ ಹೆಂಡತಿಯಂತೆ ಇರುವಂತೆ ಮಾಡುವುದು ಅಥವಾ ಸ್ನೇಹಿತರ ಹೆಂಡತಿಗೆ ಇವನು ಗಂಡನಂತೆ ಇರುವುದೇ ವೈಫ್ ಸ್ವಾಪ್ ಸಂಸ್ಕøತಿ. ಈ ಪದ್ಧತಿ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಸಾಮಾನ್ಯವಾಗಿದ್ದು, ಕೆಲವು ವರ್ಷಗಳ ಹಿಂದೆ ಕೇರಳದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಲ್ಲದೇ…
ಬೆಂಗಳೂರು: ಹೊಸ ವರ್ಷದ (New Year) ಹೊಸ್ತಿಲಲ್ಲಿ ಮದ್ಯಪ್ರಿಯರಿಗೆ ಶಾಕ್ ಎದುರಾಗಿದೆ. ನ್ಯೂ ಇಯರ್ ಜೋಶ್ ನಲ್ಲಿದ್ದವರಿಗೆ ಖುದ್ದು ಮದ್ಯದ ಕಂಪನಿಗಳೇ (Liquor Company) ರಿವರ್ಸ್ ಕಿಕ್ ಕೊಡಲು ರೆಡಿಯಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ (Congress Government Guarantee) ಗುಂಗಲ್ಲಿದ್ದ ಜನರಿಗೆ ಬೆಲೆ ಏರಿಕೆ ಶಾಕ್ ಬ್ಯಾಕ್ ಟು ಬ್ಯಾಕ್ ಎದುರಾಗುತ್ತಿದೆ. ದಿನನಿತ್ಯ ಬಳಕೆ ವಸ್ತುಗಳು ಈಗಾಗಲೇ ಗಗನಕ್ಕೇರಿವೆ. ಒಂದು ಕಡೆ ಸರ್ಕಾರ ಜನರ ಮೂಗಿಗೆ ತುಪ್ಪ ಸವರಿದಂತೆ, ಈ ಕಡೆ ಉಚಿತ ಭಾಗ್ಯ ಕೊಟ್ಟು ಮತ್ತೊಂದು ಕಡೆ ದರ ಏರಿಸಿ ಹೊರೆಯನ್ನು ಜನರ ಮೇಲೆಯೇ ಹಾಕುತ್ತಿದೆ ಸರ್ಕಾರದ ಖಜಾನೆಗೆ ಬೂಸ್ಟರ್ ಡೋಸ್ ಕೊಟ್ಟಿದ್ದ ಮದ್ಯಪ್ರಿಯರಿಗೆ ಇದೀಗ ಮತ್ತೊಮ್ಮೆ ರೇಟ್ ಹೈಕ್ ಬಿಸಿ ತಟ್ಟಲಿದೆ. ಆರಂಭದಲ್ಲೇ ಸರ್ಕಾರ ಆರ್ಥಿಕ ಮೂಲವಾದ ಅಬಕಾರಿ ಸುಂಕದ (Excise Duty) ದರವನ್ನು 20% ಹೆಚ್ಚಳ ಮಾಡಿತ್ತು. ಈಗ ಹೊಸ ವರ್ಷದ ಪಾರ್ಟಿ ಮೂಡ್ನಲ್ಲಿದ್ದವರಿಗೆ ಮತ್ತೆ ಮದ್ಯದ ಕಂಪನಿಗಳು ಶಾಕ್ ನೀಡುವ ಮೂಲಕ ಕಿಕ್ ಇಳಿಸಿವೆ. ಎಷ್ಟು ದುಬಾರಿ?…
ಬೆಂಗಳೂರು: ಹವಾಮಾನ ಇಲಾಖೆ ವರದಿ ಪ್ರಕಾರ, ರಾಜ್ಯದ ಬಹುತೇಕ ಕಡೆ ಗರಿಷ್ಠ ತಾಪಮಾನ ಮತ್ತು ಕನಿಷ್ಠ ತಾಪಮಾನ ಇಳಿಕೆ ಆಗಿದೆ. ಹೀಗಾಗಿ ಚಳಿಗಾಲ ಆರಂಭವಾದ ಅನುಭವವಾಗುತ್ತಿದೆ. ಬೆಳಗಾವಿ ವಿಮಾನ ನಿಲ್ದಾಣ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ರಾಯಚೂರು ಭಾಗದಲ್ಲಿ 17 ಡಿಗ್ರಿ ಸೆಲ್ಸಿಯಸ್ಗಿಂತಲೂ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರದಲ್ಲಿ 12, ಚಿಕ್ಕಮಗಳೂರಿನಲ್ಲಿ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಈ ಮೂಲಕ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ ಆವರಿಸುತ್ತಿದೆ. ದಿನೇ ದಿನೇ ವಾತಾವರಣದಲ್ಲಿನ ತಂಪು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಮಳೆಯ ಯಾವ ಮುನ್ಸೂಚನೆ ಇಲ್ಲ. ಬದಲಾಗಿ ಇಲ್ಲಿ ಸಹ ತಾಪಮಾನ ತೀವ್ರಗತಿಯಲ್ಲಿ ಇಳಿಕೆ ಕಂಡು ಬಂದಿದೆ. ನಗರದಲ್ಲಿ 16 ಡಿಗ್ರಿ ಸೆಲ್ಸಿಯಸ್ ವರೆಗೆ ಕನಿಷ್ಠ ತಾಪಮಾನ ಇಳಿಕೆ ಆಗಿದೆ. ಈ ಮೂಲಕ ಬೆಂಗಳೂರು ಮತ್ತೆ ಚಳಿ ವಾತಾವರಣಕ್ಕೆ ಈ ವರ್ಷ ತಡವಾಗಿ ಮರಳಿದೆ ಎನ್ನಬಹುದು.
ಬೆಂಗಳೂರು ಗ್ರಾಮಾಂತರ: ಕೀಳು ಜಾತಿಯವರನ್ನು ಯಾಕೆ ಒಳಗೆ ಬಿಡ್ತೀರಾ !?ಒಲೆಯರು ಹೊಲಸು ಎತ್ತುವುದಕ್ಕೆ ಮಾತ್ರ ಹೊಲೆ ಮುಂಡೆಗಳ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವಂತಹ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಮಂಟಪ ಗ್ರಾಮ ಪಂಚಾಯಿತಿ ನಡೆದಿದೆ .. ಮಂಟಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿಕೆ ಪ್ರವೀಣ್ ಕುಮಾರ್ ವಿರುದ್ಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. ಹೌದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮಂಟಪ ಗ್ರಾಮ ಪಂಚಾಯಿತಿಯಲ್ಲಿ ಇದೇ ತಿಂಗಳ 6ನೇ ತಾರೀಕು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ..ಇನ್ನು ಮಂಟಪ ಗ್ರಾಮ ಪಂಚಾಯಿತಿಯಲ್ಲಿ ಕಸ ನಿರ್ವಹಣೆ ಮಾಡುತ್ತಿದ್ದ ಯಲ್ಲಮ್ಮ ,ಪ್ರೇಮ, ವಿಜಯಮ್ಮ ,ಎಂಬುವವರು ಎಂಟು ತಿಂಗಳಿಂದ ಕಸ ನಿರ್ವಹಣೆ ಮಾಡುತ್ತಿದ್ದರು.ಎಂಟು ತಿಂಗಳ ಸಂಬಳ ಕೇಳಲು ಈಗಿನ ಅಧ್ಯಕ್ಷರಾಗಿರುವ ಬಿಕೆ ಪ್ರವೀಣ್ ಕುಮಾರ್ ಬಳಿ ಹೋಗಿದ್ದಾಗ ಅಗ ಜಾತಿ ನಿಂದನೆ ಮಾಡಿರುವುದಾಗಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲೆ ಮಾಡಿದ್ದಾರೆ ಇನ್ನು ಈತನ ವಿರುದ್ಧ ಜಾತಿ…
ಜೈಪುರ: ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಭಜನ್ಲಾಲ್ ಶರ್ಮಾ (Bhajanlal Sharma) ಅವರನ್ನು ರಾಸ್ಥಾನದ ನೂತನ ಸಿಎಂ ಆಯ್ಕೆ ಮಾಡುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ. ಈ ಬೆನ್ನಲ್ಲೇ ರಾಜವಂಶಸ್ಥೆ ದಿಯಾ ಕುಮಾರಿ (Diya Kumari) ಹಾಗೂ ಹಿರಿಯ ನಾಯಕ ಪ್ರೇಮ್ಚಂದ್ ಬೈರ್ವಾ ಅವರನ್ನ ಉಪಮುಖ್ಯಮಂತ್ರಿಗಳಾಗಿ ನೇಮ ಮಾಡಿದೆ. ಯಾರೀ ರಾಜಕುಮಾರಿ? ರಾಜ್ಯಸ್ಥಾನದ ನೂತನ ಉಪಮುಖ್ಯಮಂತ್ರಿಗಳಲ್ಲಿ (Rajasthan DCM) ಒಬ್ಬರಾದ ದಿಯಾ ಕುಮಾರಿ ಅವರು 1970ರ ಜನವರಿ 30 ರಂದು ರಾಜಮನೆತನದಲ್ಲಿ (Royal Family) ಜನಿಸಿದರು. ಅವರ ಅಜ್ಜ ಮಾನ್ ಸಿಂಗ್ II (2ನೇ ಮಾನ್ಸಿಂಗ್) ಜೈಪುರದ ಕೊನೆಯ ಆಡಳಿತ ಮಹರಾಜರಾಗಿದ್ದರು. ಇನ್ನೂ ದಿಯಾ ಕುಮಾರಿ ಅವರ ತಂದೆ ಬ್ರಿಗೇಡಿಯರ್ ಸವಾಯಿ ಭವಾನಿ ಸಿಂಗ್ ಅವರಿಗೆ 1971ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಹೋರಾಡಿದ ಶೌರ್ಯಕ್ಕಾಗಿ ಮಹಾವೀರ ಚಕ್ರ ನೀಡಿ ಗೌರವಿಸಲಾಗಿತ್ತು. https://ainlivenews.com/see-how-hot-and-hot-this-cold-can-be/ ದಿಯಾ ಕುಮಾರಿ ಅವರು ಮಹಾರಾಣಿ ಗಾಯತ್ರಿ ದೇವಿ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣ ಪೂರ್ಣಗೊಳಿಸಿದರು. ಜೈಪುರದ ಮಹಾರಾಣಿ ಕಾಲೇಜಿನಲ್ಲಿ ಕಾಲೇಜು…
ಪ್ರಶಾಂತ್ ನೀಲ್ (Prashant Neel) ಹಾಗೂ ಪ್ರಭಾಸ್ ಕಾಂಬಿನೇಷನ್ ನ ಸಲಾರ್ ಸಿನಿಮಾದ ಮೊದಲ ಹಾಡು (Song) ಇಂದು ಬಿಡುಗಡೆ ಆಗಲಿದೆ. ಒಟ್ಟು ಐದು ಭಾಷೆಗಳಲ್ಲಿ ಹಾಡು ಬಿಡುಗಡೆಯಾಗಲಿದ್ದು, ಮೊದಲ ಹಾಡಿಗಾಗಿ ಅಭಿಮಾನಿಗಳು ತುದಿಗಾಲಿಲ್ಲ ಕಾಯುತ್ತಿದ್ದಾರೆ. ಬಿಡುಗಡೆಯ ಸಮಯವನ್ನು ಹೊಂಬಾಳೆ ಸಂಸ್ಥೆ ತಿಳಿಸದೇ ಇದ್ದರೂ, ಇಂದು ಪಕ್ಕಾ ಹಾಡು ಬಿಡುಗಡೆ ಮಾಡುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ. ಪ್ರಭಾಸ್ ಅಲ್ಲದೇ, ಸಲಾರ್ ಸಿನಿಮಾದಲ್ಲಿ ಮಲಯಾಳಂನ ಹೆಸರಾಂತ ನಟ ಪೃಥ್ವಿರಾಜ್ ಸುಕುಮಾರನ್ (Pruthviraj Sukumaran) ಹೊಸಬಗೆಯ ಪಾತ್ರ ಮಾಡಿದ್ದಾರೆ. ಐದು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬಂದಿದ್ದು ವಿಶೇಷವೆಂದರೆ ತಮ್ಮ ಪಾತ್ರಕ್ಕೆ ಐದೂ ಭಾಷೆಗಳಲ್ಲಿ ತಾವೇ ಡಬ್ (Dubbing) ಮಾಡಿದ್ದಾರಂತೆ ಪೃಥ್ವಿರಾಜ್ ಈಗಾಗಲೇ ಸಿನಿಮಾ ರಿಲೀಸ್ ಗೆ ಸರ್ವಸಿದ್ಧತೆ ನಡೆದಿದೆ. ಈ ನಡುವೆ ಸಲಾರ್ ಸಿನಿಮಾಗೆ ಪ್ರಾದೇಶಿಕ ಸೆನ್ಸಾರ್ (Censor) ಮಂಡಳಿಯ ಪ್ರಮಾಣ ಪತ್ರವನ್ನು ನೀಡಿದೆ. ತೀವ್ರಗತಿಯ ಸಾಹಸ ಸನ್ನಿವೇಶಗಳು ಇರುವ ಕಾರಣದಿಂದಾಗಿ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ಸೆನ್ಸಾರ್ ಮಂಡಳಿ ನೀಡಿದೆ. ಭಾರತದಲ್ಲಿನ…