Author: AIN Author

ರಾಯಚೂರು: ನೇಣು ಬಿಗಿದ ಸ್ಥಿತಿಯಲ್ಲಿ ಯುವತಿ ಶವ ಪತ್ತೆಯಾಗಿರುವ ಘಟನೆ ರಾಯಚೂರು ನಗರದ ಸಂತೋಷಿ ಸರೋವರ ಲಾಡ್ಜ್ ನಲ್ಲಿ ನಡೆದಿದೆ. ಲಾಡ್ಜ್ ನಲ್ಲಿ ಕೆಲಸ ಮಾಡ್ತಿದ್ದ ಸೋನಿ (23) ಮೃತ ಮಹಿಳೆಯಾಗಿದ್ದು, ಉತ್ತರಪ್ರದೇಶದ ನಗಲಬಾರಿ ಜಿಲ್ಲಾ ಅತ್ರಾಸ್ ಮೂಲದ ಮಹಿಳೆಯಾಗಿದ್ದಾಳೆ. ಲಾಡ್ಜ್ ನ ರೂಮ್ ನಂಬರ್ 113 ರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಸ್ಥಳಕ್ಕೆ ರಾಯಚೂರು ಎಸ್.ಪಿ ನಿಖಿಲ್ ಭೇಟಿ, ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮೃತ ಸೋನಿ ಪತಿ ಅವಿನಾಶ್ ನನ್ನು ವಿಚಾರಣೆ ನಡೆಸಿ ತನಿಖೆ ಕೈಗೊಂಡಿದ್ದಾರೆ.

Read More

ಬೆಂಗಳೂರಿನಲ್ಲಿ ಗುಂಡಿ ಮುಚ್ಚದ ಪಾಲಿಕೆ ವಿರುದ್ಧ ಭುಗಿಲೆದ್ದು ಆಕ್ರೋಶಗೊಂಡಿದ್ದಾರೆ ಹಾಗೆ ವಿನೂತನವಾಗಿ ಪ್ರತಿಭಟನೆ ನಡೆಸಿದ್ದಾರೆ. ರಾಜಧಾನಿ ಬೆಂಗಳೂರಿನಲ್ಲಿ ಗುಂಡಿ ವಿರುದ್ಧ ವಿಭಿನ್ನ ಪ್ರತಿಭಟನೆ ನಡೆಸಿದ್ದು  ಮಹಾಗುಂಡಿಗೆ ಮಹಾಪೂಜೆ ಮಾಡಿದ ಬೆಂಗಳೂರು ಜನ ಬಲಿ ಪಡೆಯದೇ ಅನುಕಂಪ ತೋರಿದ ಗುಂಡಿಗೆ ಪೂಜೆ ಸಲ್ಲಿಸಿ ಕೃತಜ್ಞತೆ ಮೆರೆದಿದ್ದು ನಗರದ ಹಲಸೂರು ಬಳಿ ಏಕಾಏಕಿ ವೈಟ್ ಟಾಪಿಂಗ್ ರಸ್ತೆ ಕುಸಿದು ಅವಾಂತರವಾಗಿತ್ತು. ನಾಗರೀಕರನ್ನು ಬಲಿ ತೆಗೆದುಕೊಳ್ಳದೆ ಅನುಕಂಪವನ್ನು ತೋರಿರುವ ಮಹಾ ಗುಂಡಿಗೆ ಮಹಾಪೂಜೆ ಮಾಡಿ ಬ್ರ್ಯಾಂಡ್ ಬೆಂಗಳೂರಿಗೆ ಧಿಕ್ಕಾರ ಕೂಗಿ ಆಕ್ರೋಶ ಕೂಗಿದರು.

Read More

ಬೆಂಗಳೂರು: ಕೇರಳದಲ್ಲಿ (Kerala) ಭಾರೀ ಸದ್ದು ಮಾಡಿ, ಈ ಹಿಂದೆ ನಗರಕ್ಕೂ ಕಾಲಿಟ್ಟಿದ್ದ ವೈಫ್ ಸ್ವಾಪ್ (Wife Swaping) ಎಂಬ ಕೆಟ್ಟ ಸಂಸ್ಕೃತಿ ಬೆಂಗಳೂರಲ್ಲಿ (Bengaluru) ಮತ್ತೆ ಹುಟ್ಟಿಕೊಂಡಿದೆ. ಈಗ ಮತ್ತೆ ವೈಫ್ ಸ್ವಾಪ್ ಕುರಿತಾದ ಆರೋಪವೊಂದು ಕೇಳಿ ಬಂದಿದೆ. ಬಸವನಗುಡಿಯ ಪೂರ್ಣಚಂದ್ರ ಎಂಬಾತ ವೈಫ್ ಸ್ವಾಪ್ ಮಾಡಲು ತನ್ನ ಪತ್ನಿಯನ್ನು (Wife ) ಒತ್ತಾಯಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಪತ್ನಿ ಒಪ್ಪದಿದ್ದಕ್ಕೆ ಆತ ಆಕೆಯ ಮೇಲೆ ಹಲ್ಲೆ ನಡೆಸಿ ಕಿರುಕುಳ ನೀಡಿದ್ದಾನೆ ಎಂದು ಮಹಿಳೆ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯ ಮೆಟ್ಟಿಲೇರಿದ್ದಾಳೆ. ಈ ಸಂಬಂಧ ಪತಿ ಹಾಗೂ ಆತನ ಕುಟುಂಬಸ್ಥರ ವಿರುದ್ಧ ಎಫ್‍ಐಆರ್ ದಾಖಲಾಗಿದೆ. ಏನಿದು ವೈಫ್ ಸ್ವಾಪ್? ತನ್ನ ಹೆಂಡತಿಯನ್ನು ಸ್ನೇಹಿತರ ಜೊತೆಯೂ ಹೆಂಡತಿಯಂತೆ ಇರುವಂತೆ ಮಾಡುವುದು ಅಥವಾ ಸ್ನೇಹಿತರ ಹೆಂಡತಿಗೆ ಇವನು ಗಂಡನಂತೆ ಇರುವುದೇ ವೈಫ್ ಸ್ವಾಪ್ ಸಂಸ್ಕøತಿ. ಈ ಪದ್ಧತಿ ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಸಾಮಾನ್ಯವಾಗಿದ್ದು, ಕೆಲವು ವರ್ಷಗಳ ಹಿಂದೆ ಕೇರಳದಲ್ಲಿ ದೊಡ್ಡ ಸದ್ದು ಮಾಡಿತ್ತು. ಅಲ್ಲದೇ…

Read More

ಬೆಂಗಳೂರು: ಹೊಸ ವರ್ಷದ (New Year) ಹೊಸ್ತಿಲಲ್ಲಿ ಮದ್ಯಪ್ರಿಯರಿಗೆ ಶಾಕ್ ಎದುರಾಗಿದೆ. ನ್ಯೂ ಇಯರ್ ಜೋಶ್ ನಲ್ಲಿದ್ದವರಿಗೆ ಖುದ್ದು ಮದ್ಯದ ಕಂಪನಿಗಳೇ (Liquor Company) ರಿವರ್ಸ್ ಕಿಕ್ ಕೊಡಲು ರೆಡಿಯಾಗಿದೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ (Congress Government Guarantee) ಗುಂಗಲ್ಲಿದ್ದ ಜನರಿಗೆ ಬೆಲೆ ಏರಿಕೆ ಶಾಕ್ ಬ್ಯಾಕ್ ಟು ಬ್ಯಾಕ್ ಎದುರಾಗುತ್ತಿದೆ. ದಿನನಿತ್ಯ ಬಳಕೆ ವಸ್ತುಗಳು ಈಗಾಗಲೇ ಗಗನಕ್ಕೇರಿವೆ. ಒಂದು ಕಡೆ ಸರ್ಕಾರ ಜನರ ಮೂಗಿಗೆ ತುಪ್ಪ ಸವರಿದಂತೆ, ಈ ಕಡೆ ಉಚಿತ ಭಾಗ್ಯ ಕೊಟ್ಟು ಮತ್ತೊಂದು ಕಡೆ ದರ ಏರಿಸಿ ಹೊರೆಯನ್ನು ಜನರ ಮೇಲೆಯೇ ಹಾಕುತ್ತಿದೆ ಸರ್ಕಾರದ ಖಜಾನೆಗೆ ಬೂಸ್ಟರ್ ಡೋಸ್ ಕೊಟ್ಟಿದ್ದ ಮದ್ಯಪ್ರಿಯರಿಗೆ ಇದೀಗ ಮತ್ತೊಮ್ಮೆ ರೇಟ್ ಹೈಕ್ ಬಿಸಿ ತಟ್ಟಲಿದೆ. ಆರಂಭದಲ್ಲೇ ಸರ್ಕಾರ ಆರ್ಥಿಕ ಮೂಲವಾದ ಅಬಕಾರಿ ಸುಂಕದ (Excise Duty) ದರವನ್ನು 20% ಹೆಚ್ಚಳ ಮಾಡಿತ್ತು. ಈಗ ಹೊಸ ವರ್ಷದ ಪಾರ್ಟಿ ಮೂಡ್‌ನಲ್ಲಿದ್ದವರಿಗೆ ಮತ್ತೆ ಮದ್ಯದ ಕಂಪನಿಗಳು ಶಾಕ್ ನೀಡುವ ಮೂಲಕ ಕಿಕ್ ಇಳಿಸಿವೆ. ಎಷ್ಟು ದುಬಾರಿ?…

Read More

ಬೆಂಗಳೂರು: ಹವಾಮಾನ ಇಲಾಖೆ ವರದಿ ಪ್ರಕಾರ, ರಾಜ್ಯದ ಬಹುತೇಕ ಕಡೆ ಗರಿಷ್ಠ ತಾಪಮಾನ ಮತ್ತು ಕನಿಷ್ಠ ತಾಪಮಾನ ಇಳಿಕೆ ಆಗಿದೆ. ಹೀಗಾಗಿ ಚಳಿಗಾಲ ಆರಂಭವಾದ ಅನುಭವವಾಗುತ್ತಿದೆ. ಬೆಳಗಾವಿ ವಿಮಾನ ನಿಲ್ದಾಣ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಕಲಬುರಗಿ, ಕೊಪ್ಪಳ ರಾಯಚೂರು ಭಾಗದಲ್ಲಿ 17 ಡಿಗ್ರಿ ಸೆಲ್ಸಿಯಸ್‌ಗಿಂತಲೂ ಕಡಿಮೆ ತಾಪಮಾನ ದಾಖಲಾಗಿದೆ. ವಿಜಯಪುರದಲ್ಲಿ 12, ಚಿಕ್ಕಮಗಳೂರಿನಲ್ಲಿ 15 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಈ ಮೂಲಕ ಬೆಂಗಳೂರು ನಗರ ಸೇರಿದಂತೆ ರಾಜ್ಯದ ಒಳನಾಡು ಭಾಗದಲ್ಲಿ ಚಳಿ ಆವರಿಸುತ್ತಿದೆ. ದಿನೇ ದಿನೇ ವಾತಾವರಣದಲ್ಲಿನ ತಂಪು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲಿ ಸದ್ಯಕ್ಕೆ ಮಳೆಯ ಯಾವ ಮುನ್ಸೂಚನೆ ಇಲ್ಲ. ಬದಲಾಗಿ ಇಲ್ಲಿ ಸಹ ತಾಪಮಾನ ತೀವ್ರಗತಿಯಲ್ಲಿ ಇಳಿಕೆ ಕಂಡು ಬಂದಿದೆ. ನಗರದಲ್ಲಿ 16 ಡಿಗ್ರಿ ಸೆಲ್ಸಿಯಸ್ ವರೆಗೆ ಕನಿಷ್ಠ ತಾಪಮಾನ ಇಳಿಕೆ ಆಗಿದೆ. ಈ ಮೂಲಕ ಬೆಂಗಳೂರು ಮತ್ತೆ ಚಳಿ ವಾತಾವರಣಕ್ಕೆ ಈ ವರ್ಷ ತಡವಾಗಿ ಮರಳಿದೆ ಎನ್ನಬಹುದು.

Read More

ಬೆಂಗಳೂರು ಗ್ರಾಮಾಂತರ: ಕೀಳು ಜಾತಿಯವರನ್ನು ಯಾಕೆ ಒಳಗೆ ಬಿಡ್ತೀರಾ !?ಒಲೆಯರು ಹೊಲಸು ಎತ್ತುವುದಕ್ಕೆ ಮಾತ್ರ ಹೊಲೆ ಮುಂಡೆಗಳ ಎಂದು ಅವಾಚ್ಯ ಶಬ್ದಗಳಿಂದ ನಿಂದನೆ ಮಾಡಿರುವಂತಹ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ಮಂಟಪ ಗ್ರಾಮ ಪಂಚಾಯಿತಿ ನಡೆದಿದೆ .. ಮಂಟಪ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಿಕೆ ಪ್ರವೀಣ್ ಕುಮಾರ್ ವಿರುದ್ಧ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.. ಹೌದು ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಮಂಟಪ ಗ್ರಾಮ ಪಂಚಾಯಿತಿಯಲ್ಲಿ ಇದೇ ತಿಂಗಳ 6ನೇ ತಾರೀಕು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ ..ಇನ್ನು ಮಂಟಪ ಗ್ರಾಮ ಪಂಚಾಯಿತಿಯಲ್ಲಿ ಕಸ ನಿರ್ವಹಣೆ ಮಾಡುತ್ತಿದ್ದ ಯಲ್ಲಮ್ಮ ,ಪ್ರೇಮ, ವಿಜಯಮ್ಮ ,ಎಂಬುವವರು ಎಂಟು ತಿಂಗಳಿಂದ ಕಸ ನಿರ್ವಹಣೆ ಮಾಡುತ್ತಿದ್ದರು.ಎಂಟು ತಿಂಗಳ ಸಂಬಳ ಕೇಳಲು ಈಗಿನ ಅಧ್ಯಕ್ಷರಾಗಿರುವ ಬಿಕೆ ಪ್ರವೀಣ್ ಕುಮಾರ್ ಬಳಿ ಹೋಗಿದ್ದಾಗ ಅಗ ಜಾತಿ ನಿಂದನೆ ಮಾಡಿರುವುದಾಗಿ ಬನ್ನೇರುಘಟ್ಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲೆ ಮಾಡಿದ್ದಾರೆ ಇನ್ನು ಈತನ ವಿರುದ್ಧ ಜಾತಿ…

Read More

ಜೈಪುರ: ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾದ ಭಜನ್‌ಲಾಲ್‌ ಶರ್ಮಾ (Bhajanlal Sharma) ಅವರನ್ನು ರಾಸ್ಥಾನದ ನೂತನ ಸಿಎಂ ಆಯ್ಕೆ ಮಾಡುವ ಮೂಲಕ ಬಿಜೆಪಿ ಅಚ್ಚರಿ ಮೂಡಿಸಿದೆ. ಈ ಬೆನ್ನಲ್ಲೇ ರಾಜವಂಶಸ್ಥೆ ದಿಯಾ ಕುಮಾರಿ (Diya Kumari) ಹಾಗೂ ಹಿರಿಯ ನಾಯಕ ಪ್ರೇಮ್‌ಚಂದ್‌ ಬೈರ್ವಾ ಅವರನ್ನ ಉಪಮುಖ್ಯಮಂತ್ರಿಗಳಾಗಿ ನೇಮ ಮಾಡಿದೆ. ಯಾರೀ ರಾಜಕುಮಾರಿ? ರಾಜ್ಯಸ್ಥಾನದ ನೂತನ ಉಪಮುಖ್ಯಮಂತ್ರಿಗಳಲ್ಲಿ (Rajasthan DCM) ಒಬ್ಬರಾದ ದಿಯಾ ಕುಮಾರಿ ಅವರು 1970ರ ಜನವರಿ 30 ರಂದು ರಾಜಮನೆತನದಲ್ಲಿ (Royal Family) ಜನಿಸಿದರು. ಅವರ ಅಜ್ಜ ಮಾನ್‌ ಸಿಂಗ್‌ II (2ನೇ ಮಾನ್‌ಸಿಂಗ್‌) ಜೈಪುರದ ಕೊನೆಯ ಆಡಳಿತ ಮಹರಾಜರಾಗಿದ್ದರು. ಇನ್ನೂ ದಿಯಾ ಕುಮಾರಿ ಅವರ ತಂದೆ ಬ್ರಿಗೇಡಿಯರ್ ಸವಾಯಿ ಭವಾನಿ ಸಿಂಗ್ ಅವರಿಗೆ 1971ರ ಭಾರತ-ಪಾಕಿಸ್ತಾನ ಯುದ್ಧದಲ್ಲಿ ಹೋರಾಡಿದ ಶೌರ್ಯಕ್ಕಾಗಿ ಮಹಾವೀರ ಚಕ್ರ ನೀಡಿ ಗೌರವಿಸಲಾಗಿತ್ತು. https://ainlivenews.com/see-how-hot-and-hot-this-cold-can-be/ ದಿಯಾ ಕುಮಾರಿ ಅವರು ಮಹಾರಾಣಿ ಗಾಯತ್ರಿ ದೇವಿ ಶಾಲೆಯಲ್ಲಿ ತಮ್ಮ ಶಾಲಾ ಶಿಕ್ಷಣ ಪೂರ್ಣಗೊಳಿಸಿದರು. ಜೈಪುರದ ಮಹಾರಾಣಿ ಕಾಲೇಜಿನಲ್ಲಿ ಕಾಲೇಜು…

Read More

ಪ್ರಶಾಂತ್ ನೀಲ್ (Prashant Neel) ಹಾಗೂ ಪ್ರಭಾಸ್ ಕಾಂಬಿನೇಷನ್ ನ ಸಲಾರ್  ಸಿನಿಮಾದ ಮೊದಲ ಹಾಡು (Song) ಇಂದು ಬಿಡುಗಡೆ ಆಗಲಿದೆ. ಒಟ್ಟು ಐದು ಭಾಷೆಗಳಲ್ಲಿ ಹಾಡು ಬಿಡುಗಡೆಯಾಗಲಿದ್ದು, ಮೊದಲ ಹಾಡಿಗಾಗಿ ಅಭಿಮಾನಿಗಳು ತುದಿಗಾಲಿಲ್ಲ ಕಾಯುತ್ತಿದ್ದಾರೆ. ಬಿಡುಗಡೆಯ ಸಮಯವನ್ನು ಹೊಂಬಾಳೆ ಸಂಸ್ಥೆ ತಿಳಿಸದೇ ಇದ್ದರೂ, ಇಂದು ಪಕ್ಕಾ ಹಾಡು ಬಿಡುಗಡೆ ಮಾಡುವುದಾಗಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದೆ. ಪ್ರಭಾಸ್ ಅಲ್ಲದೇ, ಸಲಾರ್ ಸಿನಿಮಾದಲ್ಲಿ ಮಲಯಾಳಂನ ಹೆಸರಾಂತ ನಟ ಪೃಥ್ವಿರಾಜ್ ಸುಕುಮಾರನ್ (Pruthviraj Sukumaran) ಹೊಸಬಗೆಯ ಪಾತ್ರ ಮಾಡಿದ್ದಾರೆ. ಐದು ಭಾಷೆಗಳಲ್ಲಿ ಈ ಸಿನಿಮಾ ಮೂಡಿ ಬಂದಿದ್ದು ವಿಶೇಷವೆಂದರೆ ತಮ್ಮ ಪಾತ್ರಕ್ಕೆ ಐದೂ ಭಾಷೆಗಳಲ್ಲಿ ತಾವೇ ಡಬ್ (Dubbing) ಮಾಡಿದ್ದಾರಂತೆ ಪೃಥ್ವಿರಾಜ್ ಈಗಾಗಲೇ ಸಿನಿಮಾ ರಿಲೀಸ್ ಗೆ ಸರ್ವಸಿದ್ಧತೆ ನಡೆದಿದೆ. ಈ ನಡುವೆ ಸಲಾರ್ ಸಿನಿಮಾಗೆ ಪ್ರಾದೇಶಿಕ ಸೆನ್ಸಾರ್ (Censor) ಮಂಡಳಿಯ ಪ್ರಮಾಣ ಪತ್ರವನ್ನು ನೀಡಿದೆ. ತೀವ್ರಗತಿಯ ಸಾಹಸ ಸನ್ನಿವೇಶಗಳು ಇರುವ ಕಾರಣದಿಂದಾಗಿ ಚಿತ್ರಕ್ಕೆ ‘ಎ’ ಪ್ರಮಾಣ ಪತ್ರವನ್ನು ಸೆನ್ಸಾರ್ ಮಂಡಳಿ ನೀಡಿದೆ. ಭಾರತದಲ್ಲಿನ…

Read More

ನವದೆಹಲಿ: ಅಧಿವೇಶನ (Session) ನಡೆಯುತ್ತಿರುವಾಗಲೇ ಸಂಸತ್‌ʼನಲ್ಲಿ ಭದ್ರತಾ ಲೋಪ ನಡೆದಿದೆ. ಲೋಕಸಭಾ ವೀಕ್ಷಕರ ಗ್ಯಾಲರಿಯಿಂದ ಒಬ್ಬ ವ್ಯಕ್ತಿ ಮೇಲಿನಿಂದ ಜಿಗಿದಿದ್ದಾನೆ. ಕೂಡಲೇ ಭದ್ರತಾ ಸಿಬ್ಬಂದಿ ಆತನನ್ನು ಹಿಡಿದಿದ್ದಾರೆ. https://ainlivenews.com/know-how-to-take-care-of-gums-and-teeth-in-winter-here-are-the-tips/ ಸಂಸತ್‌ ಮೇಲೆ ದಾಳಿ ನಡೆದು 22 ವರ್ಷವಾದ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ ಹುತಾತ್ಮ ಭದ್ರತಾ ಸಿಬ್ಬಂದಿಗೆ ಗೌರವ ಸಲ್ಲಿಸಲಾಗಿತ್ತು. ಸಂಸತ್‌ ಒಳ ಪ್ರವೇಶಕ್ಕೆ ಪಾಸ್‌ ಇಲ್ಲದೇ ಯಾರನ್ನು ಬಿಡಲ್ಲ. ಹೀಗಿರುವಾಗ ಇಷ್ಟೊಂದು ದೊಡ್ಡ ಮಟ್ಟದ ಭದ್ರತಾ ಲೋಪ ನಡೆದಿದ್ದು ಹೇಗೆ ಎನ್ನುವುದೇ ದೊಡ್ಡ ಪ್ರಶ್ನೆಯಾಗಿದೆ.

Read More

‘ಅಣ್ಣ ತಂಗಿ’ ಸೀರಿಯಲ್ ನಟಿ ಅಖಿಲಾ ಪ್ರಕಾಶ್ (Akhila Prakash) ಅವರು ದಾಂಪತ್ಯ ಜೀವನಕ್ಕೆ (Wedding) ಕಾಲಿಟ್ಟಿದ್ದಾರೆ. ಭರತ್ ಕಾಂತ್ ಎಂಬುವವರ ಜೊತೆ ಅಖಿಲಾ ಹೊಸ ಬಾಳಿಗೆ ಕಾಲಿಟ್ಟಿದ್ದು, ಹೊಸ ಜೋಡಿಗೆ ಅಭಿಮಾನಿಗಳು ಶುಭಕೋರುತ್ತಿದ್ದಾರೆ. ಕೊಡಗಿನ ಕುವರಿ ಅಖಿಲಾ ಪ್ರಕಾಶ್ ಮತ್ತು ಭರತ್ ಕಾಂತ್ (Bharath Kanth) ಹಲವು ವರ್ಷಗಳು ಪ್ರೀತಿಸಿ, ಗುರುಹಿರಿಯರ ಸಮ್ಮತಿ ಪಡೆದು ಕುಟುಂಬಸ್ಥರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಕೆಲ ತಿಂಗಳುಗಳ ಹಿಂದೆ ಇಬ್ಬರೂ ಎಂಗೇಜ್‌ಮೆಂಟ್ ಮಾಡಿಕೊಂಡಿದ್ದರು. ಇದೀಗ ಮದುವೆಯಾಗಿದ್ದಾರೆ. ಅಖಿಲಾ ಪ್ರಕಾಶ್ ಮದುವೆಗೆ ‘ಅಣ್ಣ ತಂಗಿ’ (Anna Thangi Serial) ಸೀರಿಯಲ್ ತಂಡ ಮತ್ತು ಹಲವು ಕಿರುತೆರೆ ಕಲಾವಿದರು ಆಗಮಿಸಿ ಹೊಸ ಜೋಡಿಗೆ ಶುಭಹಾರೈಸಿದ್ದಾರೆ.

Read More