Author: AIN Author

ಬೆಂಗಳೂರು: ಹೊಸ‌ ವರ್ಷಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿ ಇದೆ. ಅದಾಗಲೇ ಸಿಲಿಕಾನ್‌ ಸಿಟಿಯನ್ನು ನಶೆಯಲ್ಲಿ ತೇಲಿಸೋಕ್ಕೆ ಗ್ಯಾಂಗ್ ರೆಡಿಯಾಗಿತ್ತು. ಆದ್ರೆ ಪಕ್ಕಾ ಮಾಹಿತಿ ಕಲೆ ಹಾಕಿದ್ದ ಸಿಸಿಬಿ .ಹೊಸ ವರ್ಷಕ್ಕೆ ಡ್ರಗ್ಸ್ ಸರಬರಾಜಗೆ ಬ್ರೇಕ್ ಹಾಕಿದೆ. ಸಿಸಿಬಿ ಸಿಕ್ರೇಟ್ ಅಪರೇಷನ್ ಡಿಟೇಲ್ಸ್ ಇಲ್ಲಿದೆ ನೋಡಿ. ಪ್ರತಿವರ್ಷದಂತೆ ಈ ವರ್ಷವು ನಗರದಲ್ಲಿ ಡ್ರಗ್ಸ್ ಸರಬರಾಜು ಮತ್ತು ಮಾರಾಟ ಮಾಡುವವರ ಮೇಲೆ ಸಿಸಿಬಿ ನಿಗಾ ಇಟ್ಟಿದೆ. ಖಚಿತ ಮಾಹಿತಿ ಮೇರೆಗೆ ಸಿಸಿಬಿ ಡಿಸಿಪಿ ಶ್ರೀನಿವಾಸಗೌಡ ನೇತೃತ್ವದ ತಂಡ ನಗರದಲ್ಲಿ ಹೊಸ ವರ್ಷಕ್ಕೆ ರೆಸ್ಟೋರೆಂಟ್ ‌ಹೊಟೇಲ್ ಪಾರ್ಟಿ, ರೇವಾ ಪಾರ್ಟಿಗಳಿಗೆ ಸರಬರಾಜು ಮಾಡೋದಿಕ್ಕೆ ಇಟ್ಟಿದ್ದ 21 ಕೋಟಿ ಮೌಲ್ಯದ ಎಮ್ ಡಿ ಎಮ್ ಎ ಕಿಸ್ಟ್ರಲ್, ಹಾಗು 500 ಗ್ರಾಂ ಕೋಕೇನ್ ವಶಪಡಿಸಿಕೊಂಡಿದ್ದಾರೆ. ರಾಮಮೂರ್ತಿ ನಗರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಆಫ್ರಿಕಾ ಪ್ರಜೆ ಲಿಯೋನಾರ್ಡ್ ಒಕ್ವಿಡಿಲಿ ಎಂಬಾತ ಡ್ರಗ್ಸ್ ಸ್ಟಾಕ್ ಮಾಡಿಟ್ಟಿಕೊಂಡಿದ್ದ. ಸಿಸಿಬಿ ದಾಳಿ ನಡೆಸಿ ಡ್ರಗ್ಸ್ ಜಪ್ತಿ ಮಾಡಿದ್ದಾರೆ. ಬ್ಯೂಸಿನೆಸ್ ವೀಸಾದಲ್ಲಿ ನಗರಕ್ಕೆ…

Read More

ಬೆಂಗಳೂರು: ಸೋಮವಾರ ರಾತ್ರಿ 11.30ರ ಸುಮಾರಿಗೆ ರಾಜಭವನಕ್ಕೆ ಬಾಂಬ್ ​ಬೆದರಿಕೆ ಕರೆಯೂ ಬಂದಿದ್ದು, ಪೊಲೀಸರು ತಕ್ಷಣ ರಾಜಭವನದಲ್ಲಿ ಪರಿಶೀಲನೆ ನಡೆಸಿದ್ದಾರೆ, ಇದೊಂದು ಹುಸಿ ಬಾಂಬ್ ಬೆದರಿಕೆ ಕರೆ ಎಂದು ಗೊತ್ತಾಗಿದೆ. ಬಾಂಬ್ ಬೆದರಿಕೆ ಕರೆಯ ಕುರಿತು ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿ ಪತ್ತೆಗೆ ಮುಂದಾಗಿದ್ದಾರೆ. ಇತ್ತೀಚಿಗೆ ಬೆಂಗಳೂರಿನಲ್ಲಿ ಬಾಂಬ್​ ಬೆದರಿಕೆ ಕರೆಗಳು ಹೆಚ್ಚಾಗುತ್ತಿವೆ. ಸರಿಯಾಗಿ 12 ದಿವಸದ ಹಿಂದೆ ಡಿಸೆಂಬರ್​​ 1 ರಂದು ಬೆಂಗಳೂರಿನ 60ಕ್ಕೂ ಹೆಚ್ಚು ಖಾಸಗಿ ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್​ ಬೆದರಿಕೆ ಕರೆ ಬಂದಿತ್ತು. ಇದು ಶಾಲಾ ಆಡಳಿತ ಮಂಡಳಿಗೆ ಶಾಕ್​ ನೀಡಿತ್ತು. ಈ ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಬಾಂಬ್​ ನಿಷ್ಕ್ರಿಯ ದಳ ತಂಡ ಎಲ್ಲ ಶಾಲೆಗಳನ್ನು ಪರಿಶೀಲಿಸಿದ್ದರು. ಆಗ ಇದೊಂದು ಹುಸಿ ಬಾಂಬ್​ ಬೆದರಿಕೆ ಕರೆ ಎಂದು ತಿಳಿಯಿತು. ಇನ್ನು ವಿಷಯ ಗೊತ್ತಾಗುತ್ತಿದ್ದಂತೆ ಶಾಲೆಗಳಿಗೆ ತೆರಳಿದ ಪೋಷಕರು ಮಕ್ಕಳನ್ನು ಮನೆಗಳಿಗೆ ಕರೆದುಕೊಂಡು ಬಂದಿದ್ದರು. ಅಂದು ಒಂದು ದಿನ ಶಾಲೆಗಳಿಗೆ ರಜೆ ನೀಡಲಾಗಿತ್ತು.

Read More

ಬೆಂಗಳೂರು: ಸಿಲಿಕಾನ್‌ ಸಿಟಿಯಲ್ಲಿ ಕಾವೇರಿ ನೀರು ಕಳ್ಳರಿಗೆ ಮತ್ತೊಂದು  ಶಾಕ್ ಕಾದಿದ್ದು  ಅಕ್ರಮ ನೀರಿನ ಸಂಪರ್ಕ ಪಡೆದ  ಜನರ ಮೇಲೆ ಕಾನೂನು ಅಸ್ತ್ರ ಪ್ರಯೋಗಿಸಲು ಜಲಮಂಡಳಿ ರೆಡಿಯಾಗಿದೆ. ಇನ್ಮೇಲೆ ಅಕ್ರಮ ನೀರಿನ ಸಂಪರ್ಕ ಪಡೆದಿದ್ರೆ ದಂಡ ಅಲ್ಲಜೈಲು ಶಿಕ್ಷೆ ಕೂಡ ವಿಧಿಸಲಾಗುತ್ತೆ  ಬೆಂಗಳೂರಿನಲ್ಲಿ ಅನಧಿಕೃತ ಕಾವೇರಿ ನೀರಿನ ಸಂಪರ್ಕ ಶಿಕ್ಷಾರ್ಹ ಅಪರಾಧ ಆದ್ರೂ ಕಾವೇರಿ ನೀರು ಕಳ್ಳತನ ಮಾಡ್ತಿರೋ ಸಿಲಿಕಾನ್ ಸಿಟಿ ಜನ ಕೇಸ್‌ ಹಾಕ್ತೀವಿ ಅಂದ್ರೂ ಅನಧಿಕೃತ ಸಂಪರ್ಕ ಪಡೆದಯುತ್ತಿದ್ದಾರೆ  ಹೀಗಾಗಿ ಅನಧಿಕೃತ ಸಂಪರ್ಕ ಪಡೆದವರ ಮೇಲೆ ಕಾನೂನು ಕ್ರಮಕ್ಕೆ ಸನ್ನದ್ದ ಬೆಂಗಳೂರು ನಗರದಲ್ಲಿ ಸಾವಿರಾರು ಮಂದಿ ಅನಧಿಕೃತ ನೀರಿನ ಸಂಪರ್ಕ ಪಡೆದುಕೊಂಡಿದ್ದಾರೆ ರಾಜಧಾನಿಯಲ್ಲಿ ಶೇ 35 ರಷ್ಟು ನೀರು ಲೆಕ್ಕಕ್ಕೆ ಸಿಗ್ತಿಲ್ಲಅನಧಿಕೃತ ಸಂಪರ್ಕಗಳನ್ನ ಪತ್ತೆಗೆ ವಿಶೇಷ ತಂಡ ರಚನೆ ಇದ್ರೂ ಕೇವಲ ದಂಡಕ್ಕೆ ಮಾತ್ರ ಸೀಮಿತ ಇಷ್ಟು ದಿನ ಜಲಮಂಡಳಿ ಇಂಜಿನಿಯರ್ಸ್ ದಂಡ ಹಾಕಿ ಸೈಲೆಂಟ್ ಆಗ್ತಿದ್ರು ಇದೀಗ ಅನಧಿಕೃತ ನೀರಿನ ಸಂಪರ್ಕ ಪಡೆದವರ ಮೇಲೆ ಎಫ್ ಐಆರ್…

Read More

ಚಾಮರಾಜನಗರ: ಹುಲಿಗಳ ನಾಡು ಎಂದೇ ಖ್ಯಾತಿ ಪಡೆದಿರುವ ಗಡಿ ಜಿಲ್ಲೆ ಚಾಮರಾಜನಗರದಲ್ಲಿ ಹುಲಿ ದಾಳಿಗೆ ಆದಿವಾಸಿ ವ್ಯಕ್ತಿ ಬಲಿಯಾಗಿರುವ ಘಟನೆ  ನಡೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ  ತಾಲ್ಲೂಕಿನಲ್ಲಿರುವ ಬಂಡೀಪುರ ಹುಲಿ ಸಂರಕ್ಚಿತ ಅರಣ್ಯ ಪ್ರದೇಶದ ಆಡಿನ ಕಣಿವೆ ಗ್ರಾಮದ ಬಸವಯ್ಯ ಎಂಬ (55) ವರ್ಷದ ವ್ಯಕ್ತಿ ಮೇಕೆಗಳಿಗೆ ಮೇವು ತರಲು ಬೆಳಿಗ್ಗೆ ಜಮೀನಿನ ಕಡೆಗೆ ಹೊಗಿದ್ದು ವಾಪಸ್ ಮನೆಗೆ ಬಂದಿರಲಿಲ್ಲಾ ಇದರಿಂದ. ಗಾಬರಿಯಾದ ಕುಟುಂಬದವರು ಮತ್ತು ಗ್ರಾಮಸ್ಥರು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ತಿಳಿಸಿದ್ದರು. ಈ ವೇಳೆ  ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಕುಂದಕೆರೆ ಅರಣ್ಯ ವಲಯದ ವ್ಯಾಪ್ತಿಗೆ ಬರುವ ವೀರೇಶ್ವರ ಗುಡ್ಡ ಎಂಬ ಅರಣ್ಯದಲ್ಲಿ ಇಂದು ಬಸವಯ್ಯನ ಅರ್ದ ದೇಹ ಪತ್ತೆಯಾಗಿದ್ದು ಹುಲಿಯು ದಾಳಿ ಮಾಡಿರಬಹುದು ಎಂದು ಶಂಕಿಸಲಾಗಿದೆ. ಕಾಡಂಚಿನ ಗ್ರಾಮಗಳಲ್ಲಿ ಕಾಡುಪ್ರಾಣಿಗಳು ಮತ್ತು ಮನುಷ್ಯರ ನಡುವಿನ ಇಂತಹ ದಾಳಿಗಳು ಪದೇ ಪದೇ ನಡೆಯುತ್ತಿದೆ.ಕಳೆದ ಒಂದು ವಾರದ ಹಿಂದೆ ಓಂಕಾರ ಅರಣ್ಯವ್ಯಾಪ್ತಿಯ ನಾಗಣಾಪುರಗ್ರಾಮದ ಮಹಿಳೆಯ ಮೇಲಿನದಾಳಿಯನ್ನ ಸ್ಮರಿಸಬಹುದಾಗಿದೆ. ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ…

Read More

ಬೆಂಗಳೂರು: ಮುಂದಿನ ವರ್ಷದಿಂದಲೇ ಶಾಲಾ ಮಕ್ಕಳಿಗೆ ಸೈಕಲ್ (Cycle) ವಿತರಣೆ ಮಾಡಲಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ (Madhu Bangarappa) ಭರವಸೆ ನೀಡಿದ್ದಾರೆ. ವಿಧಾನ ಪರಿಷತ್ ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ರವಿಕುಮಾರ್ (Ravikumar) ಪ್ರಶ್ನೆಗೆ ಅವರು ಉತ್ತರಿಸಿದರು. ಶಾಲಾ ಮಕ್ಕಳಿಗೆ ಯಾಕೆ ಸೈಕಲ್ ಕೊಡ್ತಿಲ್ಲ? ಬಿಜೆಪಿ‌ ಸರ್ಕಾರ (BJP Government) ಸೈಕಲ್ ನಿಲ್ಲಿಸಿತ್ತು ಒಪ್ಪುತ್ತೇನೆ? ಅದಕ್ಕೆ ಜನ ನಮ್ಮನ್ನ ಇಲ್ಲಿಗೆ ಕೂರಿಸಿದ್ದಾರೆ. ಆದ್ರೆ ಈ ಸರ್ಕಾರಕ್ಕೆ ಸೈಕಲ್ ಕೊಡಲು ಹಣದ ಕೊರತೆ ಇದೆಯಾ? ಎಂದು ಪ್ರಶ್ನೆ ಮಾಡಿದರು. ಮಕ್ಕಳಿಗೆ ಶೂ, ಸಾಕ್ಸ್, ಸಮವಸ್ತ್ರಕ್ಕೆ 100 ರೂ. ಕೊಡ್ತಿದ್ದಾರೆ. ಖರ್ಚೀಫ್ ಗೆ ಕೊಡುವಷ್ಟು ಹಣ ಕೊಡ್ತಿದ್ದಾರೆ. ಇಷ್ಟು ಹಣ ಶೂ, ಸಾಕ್ಸ್, ಸಮವಸ್ತ್ರಕ್ಕೆ ಸಾಕಾಗುತ್ತದೆಯೇ? ಶೂ, ಸಾಕ್ಸ್ ಹಣ ಹೆಚ್ಚಳ ಮಾಡಬೇಕು ಅಂತ ಒತ್ತಾಯ ಮಾಡಿದರು.  ಇದಕ್ಕೆ ಉತ್ತರಿಸಿದ ಸಚಿವ ಮಧು ಬಂಗಾರಪ್ಪ, 2023-24ನೇ ಸಾಲಿನಲ್ಲಿ 55,43,828 ವಿದ್ಯಾರ್ಥಿಗಳಿಗೆ ಪಠ್ಯಪುಸ್ತಕ ನೀಡಲಾಗಿದೆ. 45,45,749 ವಿದ್ಯಾರ್ಥಿಗಳಿಗೆ ಸಮವಸ್ತ್ರ, ಶೂ, ಸಾಕ್ಸ್ ವಿತರಿಸಲಾಗಿದೆ. ವಿದ್ಯಾರ್ಥಿಗಳಿಗೆ…

Read More

ಕಲಬುರಗಿ: ಸತತ ನಾಲ್ಕು ಬಾರಿ ಮುಂದೂಡಿದ್ದ ಕಲಬುರಗಿ ಜಿಲ್ಲಾ ಪ್ರಗತಿ ಪರಿಶೀಲನಾ ಸಭೆ ಮತ್ತೆ ಫಿಕ್ಸ್ ಆಗಿದ್ದು ಇದೇ 20 ರಂದು ಡೇಟ್ ನಿಗದಿಯಾಗಿದೆ.. ಪದೇಪದೇ ಸಭೆ ಮುಂದೂಡಿದ್ದ ಹಿನ್ನಲೆ ಸರ್ಕಾರದ ವಿರುದ್ಧ ವಿಪಕ್ಷ ಬಿಜೆಪಿ ತೀವ್ರ ಕಿಡಿಕಾರಿತ್ತು. ಹೀಗಾಗಿ ಇದೀಗ ಮತ್ತೆ ದಿನಾಂಕ ನಿಗದಿಯಾಗಿದೆ ಅನ್ನೋ ಮಾತುಗಳು ಕೇಳಿಬರ್ತಿವೆ. ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ನೇತ್ರತ್ವದಲ್ಲಿ ಸಭೆ ನಡೆಯಲಿದ್ದು ಡಿಸಿ ಕಚೇರಿ ಸಭಾಂಗಣದಲ್ಲಿ ಅವತ್ತು ಬೆಳಿಗ್ಗೆ 10.30 ಕ್ಕೆ ಎಲ್ಲ ಅಧಿಕಾರಿಗಳು ಪೂರ್ಣ ಮಾಹಿತಿಯೊಂದಿಗೆ ಸಭೆಗೆ ಹಾಜರಿರಬೇಕು ಅಂತ ಜಿಲ್ಲಾಡಳಿತ ಸೂಚಿಸಿದೆ..

Read More

ಹುಬ್ಬಳ್ಳಿ: ನೈಋತ್ಯ ರೈಲ್ವೆಯ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ (ಸಿಪಿಆರ್​ಒ)ಯಾಗಿ ಡಾ. ಮಂಜುನಾಥ ಕನ್ಮಡಿ ಸೋಮವಾರ ಅಧಿಕಾರ ವಹಿಸಿಕೊಂಡರು ಇಂಡಿಯನ್ ರೈಲ್ವೆ ಟ್ರಾಫಿಕ್ ಸರ್ವಿಸ್​ನ 2013ನೇ ಬ್ಯಾಚ್​ನ ಅಧಿಕಾರಿಯಾಗಿರುವ ಡಾ. ಮಂಜುನಾಥ ಅವರು ಉಪ ಮುಖ್ಯ ವಾಣಿಜ್ಯ ವ್ಯವಸ್ಥಾಪಕ (ಪ್ರಯಾಣಿಕ ಸೇವೆ)ರಾಗಿದ್ದರು. ಹುಬ್ಬಳ್ಳಿ ಮತ್ತು ಮೈಸೂರು ವಿಭಾಗದಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯನಿರ್ವಹಿಸಿದ್ದರು. ನಿರ್ಗಮಿತ ಸಿಪಿಆರ್​ಒ ಅನೀಶ್ ಹೆಗಡೆ ಅಧಿಕಾರ ಹಸ್ತಾಂತರಿಸಿದರು. ರೈಲ್ವೆ ಮಂಡಳಿಯ ಜಂಟಿ ನಿರ್ದೇಶಕ ಹುದ್ದೆಗೆ ಅನೀಶ್ ಹೆಗಡೆ ನಿಯುಕ್ತಿಗೊಂಡಿದ್ದಾರೆ.

Read More

ಹುಬ್ಬಳ್ಳಿ: ಏಕಾಏಕಿ ಶಾರ್ಟ್‌ ಸರ್ಕೀಟ್‌ನಿಂದ ಸ್ಕ್ರ್ಯಾಪ್ ಗೋದಾಮಿಗೆ ಬೆಂಕಿ ತಗುಲಿದ ಘಟನೆ, ಹುಬ್ಬಳ್ಳಿಯ ತಿರುಮಲಕೊಪ್ಪದಲ್ಲಿ ನಡೆದಿದೆ. ಹೌದು,,, ಮಂಜುನಾಥ ಹುಬ್ಬಳ್ಳಿ ಎಂಬುವವರಿಗೆ ಸೇರಿದ ಗೋದಾಮು, ಧಗಧಗನೇ ಹೊತ್ತಿ ಉರಿಯುತ್ತಿದೆ. ಈ ಗೋದಾಮಿನಲ್ಲಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳು ಸುಟ್ಟು ಭಸ್ಮವಾಗಿವೆ. ಇನ್ನು ಬೆಂಕಿ ತಗುಲಿದ ಬಗ್ಗೆ ಅಗ್ನಿಶಾಮಕ ದಳಕ್ಕೆ ತಿಳಿಸಿದ ಕೂಡಲೆ ಸ್ಥಳಕ್ಕೆ ದೌಡಾಯಿಸಿದ ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸಲು ಹರ ಪ್ರಯತ್ನ ನಡೆಸಿದ್ದಾರೆ. ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ಬೆಂಗಳೂರು: ಪೋಷಕರೇ, ರಾಜಧಾನಿಯ ಬೀದಿಯಲ್ಲಿ ನಿಮ್ಮ ಮಕ್ಕಳನ್ನು ಆಡಲು ಬಿಡುವವರು ನೀವಾದರೆ ಕಟ್ಟೆಚ್ಚರ ವಹಿಸಿ. ಯಾಕೆಂದ್ರೆ ರಸ್ತೆಯಲ್ಲಿ ಬರೋರನ್ನ ಹರಿದು ಮುಕ್ಕೋಕೆ ಬೀದಿನಾಯಿಗಳು ಕಾಯ್ತಾ ಇರರ್ತವೆ. ಹೌದು ರಾಜಧಾನಿಯಲ್ಲಿ ಬೀದಿ ನಾಯಿಗಳ ಹಾವಳಿ ಮಿತಿ ಮೀರಿದ್ದು, ದಿನಕ್ಕೆ ಸರಾಸರಿ 60 ರಿಂದ 70 ಮಂದಿ ಮೇಲೆ ಅಟ್ಯಾಕ್ ಮಾಡುತ್ತಿವೆ ಅಂತೆ ಪಾಲಿಕೆಯೇ ರಿಪೋರ್ಟ್ ಬಿಡುಗಡೆ ಮಾಡಿದೆ.ಇವರಲ್ಲೂ ಮಕ್ಕಳೇ ಅಧಿಕವಾಗಿರೋದು ಆತಂಕ ಹುಟ್ಟಿಸಿದೆ. ಹಾಗಾದ್ರೆ ಕಳೆದ ಕೆಲ ವರ್ಷಗಳಲ್ಲಿ ನಗರದಲ್ಲಿ ನಾಯಿಗಳಿಂದ ಅಟ್ಯಾಕ್ ಆದವರ ಸಂಖ್ಯೆ ಎಷ್ಟಿದೆ ಗೊತ್ತಾ, ಇಷ್ಟು ಇದ್ರೂ ಪಾಲಿಕೆ ಏನ್ಮಾಡ್ತಿದೆ ಬನ್ನಿ ತೋರಿಸ್ತಿವಿ.. ರಾಜಧಾನಿ ಬೆಂಗಳೂರಿನಲ್ಲಿ ದಿನೇ ದಿನೇ ಬೀದಿನಾಯಿಗಳ ಹಾವಳಿ ಹೆಚ್ಚಾಗ್ತಿದೆ. ಬೀದಿನಾಯಿಗಳ ಹಾವಳಿಯಿಂದ ಎಷ್ಟೋ ಮಕ್ಕಳು ಬಲಿಯಾಗಿದ್ದಾರೆ. ಆದ್ರೂ ಬಿಬಿಎಂಪಿ ಈ ಬಗ್ಗೆ ತಲೆನೇ ಕೆಡೆಸಿಕೊಂಡಿಲ್ಲ. ನಗರದ ಪಾರ್ಕ್ ನಲ್ಲೂ ನಾಯಿ ಕಾಟ.. ಬೀದಿಯಲ್ಲೂ ಶ್ವಾನಗಳ ಹಾವಾಳಿ ಮಿತಿ ಮೀರಿದೆ. ಬೀದಿನಾಯಿಗಳ ಉಪಟಳಕ್ಕೆ ಈಗಾಗಲೇ ಬೆಂಗಳೂರಿಗರು ಬೆದರಿ ಹೋಗಿದ್ದಾರೆ. ವರ್ಷದಿಂದ ವರ್ಷಕ್ಕೆ ಹೆಚ್ಚಾಗ್ತಿರೋ ಈ ಸಂತತಿಯ…

Read More

ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದ ಹೊರ ವಲಯದಲ್ಲಿ ಸಿದ್ಧವಾಗಿರುವ ಗುರು ರಾಘವೇಂದ್ರ ಸ್ವಾಮಿಗಳ ಮಠ ಇದೇ ಡಿಸೆಂಬರ್ 15 ರಂದು ಲೋಕಾರ್ಪಣೆ ಆಗಲಿದ್ದು ಮಂತ್ರಾಲಯದ ಪರಮಪೂಜ್ಯ 1008 ಸುಬುಧೇಂದ್ರ ಶ್ರೀಪಾದಂಗಳರವರು ಮೃತ್ತಿಕಾ ಬೃಂದಾವನದ ಪೂಜೆ ನೆರವೇರಿಸಲಿದ್ದಾರೆ. 14 ರಂದು ಶೋಭಾಯಾತ್ರೆ ನಡೆಯಲಿದ್ದು, ಸಂಜೆ 6 ಕ್ಕೆ ಶ್ರೀಗಳು ಪುರಪ್ರವೇಶ ಮಾಡಲಿದ್ದಾರೆ. 13 ರಿಂದ 15 ರವರೆಗೆ ಮೂರೂ ದಿನವೂ ಕ್ಷೀರಾಭಿಷೇಕ ಪಂಚಾಮೃತಾಭಿಷೇಕ ಅರ್ಚನೆ ಪುಷ್ಪಾಲಂಕಾರ ವಸ್ತ್ರಸಮರ್ಪಣ ಸೇವೆಗಳು ನಡೆಯಲಿವೆ. ಭಕ್ತ ಮಂಡಳಿ ಪೂರ್ವಭಾವಿ ಸಭೆ ನಡೆಸಿದ್ದುಎಲ್ಲ ತಯಾರಿ ಪೂರ್ಣಗೊಂಡಿದೆ ಅಂತ ಮಠದ ಮುಖ್ಯಸ್ಥರಾದ ಗುಂಡೇರಾವ್ ಕುಲಕರ್ಣಿ ತಿಳಿಸಿದ್ದಾರೆ..ಇದೇವೇಳೆ ರಾಯರ ಭಕ್ತರಾದ ಪಿವಿ ಜೋಶಿಯವರು ಕೋಡ್ಲಾ ರಸ್ತೆಯ ಲಕ್ಷ್ಮೀ ನಗರ ಬಡಾವಣೆಯಲ್ಲಿ ಮಠಕ್ಕಾಗಿ ಭೂಮಿ ದಾನಮಾಡಿದ್ದು ವಿಶೇಷ…

Read More