Author: AIN Author

ಹಾವೇರಿ: ಕಾಂಗ್ರೆಸ್ ಪಕ್ಷದ ಭ್ರಷ್ಟಾಚಾರ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ ನಡೆಸಲಾಯಿತು. ನಗರದ ಸಿದ್ದಪ್ಪ ಸರ್ಕಲ್ ಬಳಿ ನೂರಾರು ಕಾರ್ಯಕರ್ತರಿಂದ ಕಾಂಗ್ರೆಸ್ ಪಕ್ಷದ ವಿರುದ್ಧ ಘೋಷಣೆ ಕೂಗಿ ಪ್ರತಿಭಟನೆ ನಡೆಸಿದರು. ಅಕ್ರಮ ಹಣ ಗಳಿಸಿರುವ ಧಿರಜ್ ಸಾಹೂ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸಲಾಗಿದ್ದು, ಧೀರಜ್ ಸಾಹೂ ಅವರನ್ನ ಬಂಧಿಸಬೇಕು, ಭ್ರಷ್ಟಾಚಾರದ ಕರಾಳ ಮುಖವೇ ಕಾಂಗ್ರೆಸ್ ಪಕ್ಷ, ಅಕ್ರಮ ಹಣ ಮತ್ತು ಆಸ್ತಿ ಗಳಿಸಿರುವ ಭ್ರಷ್ಟ ಧೀರಜ್ ಸಾಹೂ ಹಾಗೂ ಅವರ ಜೊತೆ ಶ್ಯಾಮಿಲಾಗಿರುವ ಕಾಂಗ್ರೆಸ್ ಪಕ್ಷಕ್ಕೆ ದಿಕ್ಕಾರ ಎಂದು ನೂರಾರು ಬಿಜೆಪಿ ಕಾರ್ಯಕರ್ತರಿಂದ ನಗರದಲ್ಲಿ ಪ್ರತಿಭಟನೆ ನಡೆಸಿದರು. ಸ್ವಿಸ್ ಬ್ಯಾಂಕ್ ನಲ್ಲಿ ಕಾಂಗ್ರೆಸ್ ನಾಯಕರ ಹಣ ಇದೆ. ಕರ್ನಾಟಕದಲ್ಲೂ ಕಾಂಗ್ರೆಸ್ ಪಕ್ಷ ವಿಪರೀತ ಹಣ ಸಂಗ್ರಹಣರ ಮಾಡುತ್ತಿದೆ. ಮೊನ್ನೆ ನಡೆದ 5 ರಾಜ್ಯಗಳಲ್ಲಿ ಕೇವಲ ಒಂದೇ ಒಂದು ರಾಜ್ಯದಲ್ಲಿ ಕಾಂಗ್ರೆಸ್ ಗೆದ್ದಿದೆ. ಲೋಕಸಭೆಯಲ್ಲಿ ಬಿಜೆಪಿಯನ್ನ ಸೋಲಿಸಬೇಕು ಎಂದು India  ಮಾಡಿಕೊಂಡು ಅಕ್ರಮ ಹಣ ಸಂಗ್ರಹಣೆ ಮಾಡುತ್ತಿದೆ. ಮುಂದಿನ ಚುನಾವಣೆಯಲ್ಲಿ ಬಿಜೆಪಿಗೆ ಸ್ಪಷ್ಠವಾದ ಬಹುಮತವನ್ನ…

Read More

ಹೈಡ್ ಅಂಡ್ ಸೀಕ್  (Hide and Sick)ಕಿರುಚಿತ್ರವನ್ನು ಭಾರತದ ಯುವ ನಿರ್ದೇಶಕಿ 20 ವರ್ಷ ವಯಸ್ಸಿನ ಮಿಸ್ ಕರೆನ್ ಕ್ಷಿತಿ ಸುವರ್ಣ (Karen Ksiti Suvarna)ಅವರು ನಿರ್ದೇಶಿಸಿದ್ದಾರೆ. ಇದು ಸ್ಕಿಜೋಫ್ರೇನಿಯಾ ಮತ್ತು ಅದರ ತೀವ್ರ ಪರಿಣಾಮಗಳ ಕುರಿತು ಸಂದೇಶವನ್ನು ಹೊಂದಿರುವ 10 ನಿಮಿಷಗಳ ಸ್ವತಂತ್ರ ಕಿರುಚಿತ್ರವಾಗಿದೆ. ಇಂದಿನ ಜಗತ್ತಿನಲ್ಲಿ ಇದು ಪ್ರಸ್ತುತವಾದ ವಿಷಯವಾಗಿದೆ. ಏಕೆಂದರೆ ನಾವು ಖಿನ್ನತೆ ಮತ್ತು ಸಿಂಜೊಫ್ರೇನಿಯಾ ಕಾಯಿಲೆಯಿಂದ ಕುಟುಂಬ ಹತ್ಯೆಗಳು / ಸಾರ್ವಜನಿಕ, ಸಾಮೂಹಿಕ ಹತ್ಯೆಗಳನ್ನು ನೋಡುತ್ತಿದ್ದೇವೆ ಎಂದಿದ್ದಾರೆ ಕರೆನ್. ಕರೆನ್ ಕ್ಷಿತಿ ಸುವರ್ಣ ಅವರು ತಮ್ಮ ಕ್ರಾಫ್ಟ್ ಮತ್ತು ಕಲೆಗಾಗಿ ಅವರ ಚಲನಚಿತ್ರ ತಯಾರಿಕೆಗಾಗಿ ಮೆಚ್ಚುಗೆ ಪಡೆದಿದ್ದಾರೆ. ಯುವ ನಿರ್ದೇಶಕರು ರೋಮಾಂಚಕ ಕಥೆಯನ್ನು ವಿವರಿಸಿದ್ದಾರೆ ಮತ್ತು ಆಧುನಿಕ ಪ್ರಪಂಚದ ಸ್ಕಿಜೋಫ್ರೇನಿಯಾದ ಝೇಂಕರಿಸುವ ವಿಷಯದ ಬಗ್ಗೆ ಸಂದೇಶವನ್ನು ನೀಡಿದ್ದಾರೆ. ಈ ಕಿರುಚಿತ್ರವನ್ನು ವಿಸಿಕಾ ಫಿಲಂಸ್ ಜೊತೆಗೆ ಮೋಹನ್ ಮತ್ತು ಮನು ಗೊರೂರ್ ಸಹ ನಿರ್ಮಾಪಕರಾಗಿ ನಿರ್ಮಿಸಿದ್ದಾರೆ. ಈ ಚಿತ್ರಕ್ಕೆ ಅನಿಲ್ ಕುಮಾರ್ ಅವರ ಛಾಯಾಗ್ರಹಣವಿದ್ದು, ರಾಷ್ಟ್ರ ಪ್ರಶಸ್ತಿ…

Read More

ದಕ್ಷಿಣದ ಹೆಸರಾಂತ ನಟಿ ತ್ರಿಷಾ (Trisha) ಅವರಿಗೆ ಮಾನಹಾನಿ ರೀತಿಯಲ್ಲಿ ಮಾತನಾಡಿದ್ದ ತಮಿಳಿನ ಖ್ಯಾತ ನಟ ಮನ್ಸೂರ್ ಅಲಿಖಾನ್ (Mansoor Ali Khan) ಗೆ ಮದ್ರಾಸ್ ಹೈಕೋರ್ಟ್ ಮತ್ತೆ ಎಚ್ಚರಿಕೆಯ ಮಾತುಗಳನ್ನು ಆಡಿದೆ. ತ್ರಿಷಾ ಅವರಿಗೆ ನಾನು ಮಾನ ಹಾನಿ ಆಗುವಂತಹ ಮಾತುಗಳನ್ನು ಆಡಿಲ್ಲ. ನನ್ನ ಮಾತುಗಳನ್ನು ಎಡಿಟ್ ಮಾಡಲಾಗಿದೆ. ಹಾಗಾಗಿ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲವೆಂದು ಮನ್ಸೂರ್ ನುಡಿದಿದ್ದರು. ತಮ್ಮ ಮೇಲಿನ ಪ್ರಕರಣವನ್ನು ರದ್ದುಗೊಳಿಸುವಂತೆ ಮತ್ತು ನಿರೀಕ್ಷನಾ ಜಾಮೀನು ನೀಡುವಂತೆ ಚೆನ್ನೈನ ಪ್ರಧಾನ ಸೆಷನ್ಸ್ ನ್ಯಾಯಾಲಯಕ್ಕೆ ಈ ಹಿಂದೆ ಮನ್ಸೂರ್ ಮೊರೆ ಹೋಗಿದ್ದರು. ಆಗಲೂ ಸೆಷನ್ಸ್ ನ್ಯಾಯಾಲಯ ಛೀಮಾರಿ ಹಾಕಿತ್ತು. ಈ ಪ್ರಕರಣ ಸುಖಾಂತ್ಯಗೊಳಲಿದೆ ಎನ್ನುವ ಹೊತ್ತಿನಲ್ಲಿ, ಮನ್ಸೂರ್ ಅಲಿಖಾನ್ ಮತ್ತೆ ತ್ರಿಷಾ ಹಾಗೂ ಇನ್ನೂ ಇಬ್ಬರ ಕಲಾವಿದರ ಬಗ್ಗೆ ಅಬ್ಬರಿಸಿದ್ದರು. ತ್ರಿಷಾ ವಿಚಾರದಲ್ಲಿ ಸುಖಾಸುಮ್ಮನೆ ತಮ್ಮ ಮಾನಹಾನಿ ಮಾಡಿದ್ದಾರೆ ಎಂದು ನಟಿ ಖುಷ್ಭೂ (Khushboo) ಹಾಗೂ ಚಿರಂಜೀವಿ (Chiranjeevi) ಅವರ ಮೇಲೆ ಹರಿಹಾಯ್ದಿದ್ದರು. ಅವರ ಮೇಲೆ ಮಾನನಷ್ಟ (Defamation)…

Read More

ಬೆಂಗಳೂರು: ಕಡಲೆಕಾಯಿ ಪರಿಷೆ (Kadalekai Parishe) ಹೆಸರಿನಲ್ಲಿ ನಿಯಮ ಮೀರಿ ಸುಂಕ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿತ್ತು ಇದರ ಬಗ್ಗೆ ಸಚಿವ ರಾಮಲಿಂಗಾರೆಡ್ಡಿಅವರ ಗಮನಕ್ಕೂ ಸಹ ನೀಡಲಾಗಿತ್ತು ದೇವಾಲಯದ ಆವರಣದ ಹೊರಗೆ ಕಡಲೆಕಾಯಿ ಮಾರಾಟ ಮಾಡುತ್ತಿದ್ದ ವ್ಯಾಪಾರಿಗಳ ಬಳಿ 500 ರೂ. ಹಣ ಪಡೆದು ರಶೀದಿ ನೀಡಲಾಗಿತ್ತು. ಈ ಬಗ್ಗೆ ನಿರಂತರ ವರದಿಯ ಬಳಿಕ ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಕ್ರಮಕೈಗೊಳ್ಳುವುದಾಗಿ ಭರವಸೆ ಕೊಟ್ಟಿದ್ದಾರೆ ರಶೀದಿಯ ಮೇಲೆ ದೊಡ್ಡ ಬಸವನಗುಡಿ (Basavanagudi) ದೇವಸ್ಥಾನ, ಕಡಲೆಕಾಯಿ ಪರಿಷೆ ಎಂದು ಮುದ್ರಣಗೊಂಡಿದೆ. ಈ ಬಗ್ಗೆ ವಿಚಾರಿಸಿದಾಗ ಪ್ರಸಾದ್ ಎಂಬವರಿಗೆ 2-3 ಲಕ್ಷಕ್ಕೆ ಬಿಡ್ ನೀಡಲಾಗಿದೆ. ಒಂದು ದಿನ ಮಾತ್ರ ಹಣ ವಸೂಲಿಗೆ ಅವಕಾಶ ಇದ್ದು, ಬಿಡ್ ನೀಡಿದ ಮಾತ್ರಕ್ಕೆ 500, 200 ರೂ. ಕಲೆಕ್ಟ್ ಮಾಡುವ ಹಾಗಿಲ್ಲ. ಈ ಬಗ್ಗೆ ಪರಿಶೀಲನೆ ಮಾಡಿ ಕ್ರಮಕೈಗೊಳ್ಳುವುದಾಗಿ ದೊಡ್ಡ ಗಣಪತಿ ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಅರವಿಂದ್ ಬಾಬು ಮಾಹಿತಿ ನೀಡಿದ್ದಾರೆ.

Read More

ಧಾರವಾಡ: ಧಾರವಾಡದಲ್ಲಿ ಶಾಸಕ‌‌ ಬಸನಗೌಡ ಪಾಟೀಲ್ ಯತ್ನಾಳ ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಅಂಜುಮನ್ ಸಂಸ್ಥೆಯ ಪದಾಧಿಕಾರಿಗಳ ನೇತೃತ್ವದಲ್ಲಿ ನಗರ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ‌ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು. ತನ್ವೀರ್‌ ಪೀರಾ ಬಗ್ಗೆ ಭಯೋತ್ಪಾದನಕರ‌ ಜೊತೆ ನಂಟಿದೆ ಎಂದು ಹೇಳಿಕೆ‌ ಕೊಟ್ಟಿದ್ದ ಶಾಸಕ ಯತ್ನಾಳ್, ಇದರ ಬೆನ್ನಲ್ಲೇ ಸ್ವಾರ್ಥ ರಾಜಕಾರಣಕ್ಕಾಗಿ ಈ‌ ರೀತಿ ಹೇಳಿಕೆ‌ ಕೊಡುತ್ತಿದ್ದಾರೆ ಸರಿಯಲ್ಲ, ಮುಸ್ಲಿಂ ಸಮುದಾಯಕ್ಕೆ ಕ್ಷಮೆ ‌ಕೇಳಿ ಉತ್ತರ ಕರ್ನಾಟಕ ಅಭಿವೃದ್ಧಿಗೆ ಲೈ ಜೋಡಿಸಲು‌‌ ಒತ್ತಾಯ ಮಾಡಿದ್ದಾರೆ.

Read More

ಬೆಂಗಳೂರು:  ಮಕ್ಕಳನ್ನ‌ ರಸ್ತೆಯಲ್ಲಿ ಕರೆದೊಯ್ಯುವಾಗ ಪೋಷಕರೇ ಎಚ್ಚರವಾಗಿರಬೇಕು ನಾವು ಎಷ್ಟೇ ಸೇಫ್‌ ಆಗಿ ನೋಡ್ಕೊಂಡ್ರು ಆಗಲ್ಲ ಮಕ್ಕಳನ್ನು ಮನೆಗೆ ಕರೆದುಕೊಂಡು ಹೋಗುವಾಗ ಒಂಟಿಯಾಗಿ ಬಿಡಲೇಬಾರದು ಕೈ ಹಿಡಿದಿಟ್ಟುಕೊಳ್ಳಬೇಕು ಇಲ್ಲದಿದ್ರೆ ಅಪಾಯ ಕಟ್ಟಿಟ್ಟ ಬುತ್ತಿ ಹಾಗಾಗಿ ಇಲ್ಲಿದೆ ನೋಡಿ ಭಯಾನಕ ವಿಡಿಯೋ ಕೂಡ. ಹೌದು ನಾವು ಇಲ್ಲಿ ತೋರಿಸುವ ವಿಡಿಯೋದಲ್ಲಿ ಶಾಲೆ ಬಿಟ್ಟು ಮನೆಗೆ ತೆರಳುತ್ತಿರುವ ಮಕ್ಕಳು ಪೋಷಕರು ಮಕ್ಕಳನ್ನು ಕರೆದೊಯ್ಯುವಾ ಜಾಗೃತರಾಗಿರಬೇಕು ಇಲ್ಲಿದಿದ್ದರೆ ಅಪಾಯ ಕಟ್ಟಿಟ್ಟ ಬುತ್ತಿ. ರಸ್ತೆ ದಾಟುವಾಗ ಶಾಲಾ ವಿದ್ಯಾರ್ಥಿಗೆ ಗುದ್ದಿದ ಸ್ಕೂಟರ್  ಕೂದಲೆಳೆಯಲ್ಲಿ ಶಾಲಾ ಮಗು ಬಚಾವ್ ಆದ ಘಟನೆ  ಕೊರಮಂಗಲದಲ್ಲಿ ನಡೆದಿದೆ. ಕಾರ್ ಡ್ಯಾಶ್ ಬೋರ್ಡ್ ಕ್ಯಾಮರದಲ್ಲಿ‌ ವಿಡಿಯೋ ಸೆರೆಯಾಗಿದ್ದು ಪೋಷಕರ ನಿರ್ಲಕ್ಷ್ಯದಿಂದ ರಸ್ತೆ ದಾಟಿ ಓಡೋಡಿ ಬಂದ ಮಗು ಅಪಘಾತದ ದೃಶ್ಯ ಕಾರ್ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಸ್ಕೂಟರ್ ಓಡಿಸುತ್ತಿದ್ದ ಯುವತಿಯ ಸಮಯ ಪ್ರಜ್ಞೆಗೆ ತಪ್ಪಿದ ಅನಾಹುತ ಪೋಷಕರ ಕೈ ಬಿಡಿಸಿ ರಸ್ತೆಗೆ ಅಡ್ಡಲಾಗಿ ಓಡಿದ ಬಂದ ಮಗು ಈ ವೇಳೆ ತಿರುವು ದಾಟಿ ಬಂದ…

Read More

ಪರಭಾಷಾ ಬಿಗ್ ಬಾಸ್ (Bigg Boss Telugu) ಶೋನಲ್ಲಿ ಭಾಗಿಯಾಗಿ, ಸಖತ್ ಸದ್ದು ಮಾಡಿದ್ದ ಕನ್ನಡತಿ ಶೋಭಾ ಶೆಟ್ಟಿ ಈ ವಾರ ಎಲಿಮಿನೇಟ್ (Eliminated) ಆಗಿದ್ದಾರೆ. ಈ ಮೂಲಕ ಅಸಂಖ್ಯಾತ ಅಭಿಮಾನಿಗಳಿಗೆ ನಿರಾಸೆ ಮಾಡಿದ್ದಾರೆ. ಈ ಬಾರಿ ಫಿನಾಲೆ ವೇದಿಕೆಯ ಮೇಲೆ ಶೋಭಾ ಶೆಟ್ಟಿ ಇರಲಿದ್ದಾರೆ ಎಂದೇ ನಂಬಲಾಗಿತ್ತು. ಆದರೆ, ಆ ನಂಬಿಕೆ ಇದೀಗ ಸುಳ್ಳಾಗಿದೆ. ‘ಅಗ್ನಿಸಾಕ್ಷಿ’ ನಟಿ ಶೋಭಾ ಶೆಟ್ಟಿ (Shobha Shetty) ತೆಲುಗು ಕಿರುತೆರೆಯಲ್ಲಿ ಸಂಚಲನ ಮೂಡಿಸಿದ್ದರು. ನಾಗಾರ್ಜುನ (Nagarjuna) ನಿರೂಪಣೆಯ ಬಿಗ್ ಬಾಸ್‌ನಲ್ಲಿ ಶೋಭಾ ಶೆಟ್ಟಿ ಕಮಾಲ್ ಮಾಡ್ತಿದ್ದರು. ಕನ್ನಡದ ನಟಿಯ ಆಟ ನೋಡಿ, ಇವ್ರು ಕನ್ನಡದ ಬಿಗ್ ಬಾಸ್ ಸೀಸನ್ 10ನಲ್ಲಿ ಇರಬಾರದಿತ್ತಾ ಎಂದು ಫ್ಯಾನ್ಸ್ ಬೇಸರ ಹೊರಹಾಕಿದ್ದರು. ತೆಲುಗು ಬಿಗ್ ಬಾಸ್ ಸೀಸನ್-7ರಲ್ಲಿ ಬೆಂಗಳೂರಿನ ಈ ಬೆಡಗಿ ದೊಡ್ಮನೆಯಲ್ಲಿ ರೆಬೆಲ್ ಆಗಿ ಆಟ ಆಡುತ್ತಿದ್ದರು. ಅವರ ಆಟಕ್ಕೆ ಮನೆ ಮಂದಿ ಗಪ್ ಚುಪ್ ಆಗಿದ್ದರು. ಶೋಭಾ ಖಡಕ್ ಆಟ ನೋಡಿ, ಅಯ್ಯೋ ಇವರು ಕನ್ನಡದ…

Read More

ಚಿಕ್ಕಬಳ್ಳಾಪುರ, ಚಿಂತಾಮಣಿಯಿಂದ ದಲಿತ ಮುಖಂಡರು ಬೆಳಗಾವಿ ಅಧಿವೇಶನಕ್ಕೆ ತೆರಳಲಿ ಮನವಿ ಸಲ್ಲಿಸಲು ಸೋಮವಾರ ದಾವಣಗೆರೆ ಸಮೀಪ ತೆರಳುವಾಗ ಬಸ್ ಅಪಘಾತವಾಗಿ ಕೆಲವರು ಗಾಯಾಳುಗಳಾಗಿದ್ದಾರೆ. ಗಾಯಾಳುಗಳನ್ನು ದಾವಣಗೆರೆಯ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಬಳಿಕ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಯೋಗಕ್ಷೇಮವನ್ನು ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ ವಿಚಾರಿಸಿದರು. https://ainlivenews.com/samantha-gave-a-bold-look-like-never-before-in-jeans-see-photos/ ಇಂದು ಬೆಳಗಿನ ವೇಳೆ ದಾವಣಗೆರೆ ಹೊರಭಾಗದ ಜಿಲ್ಲಾ ಪಂಚಾಯತ್ ಕಚೇರಿ ಬಳಿ ರಾ.ಹೆದ್ದಾರಿಯಲ್ಲಿ ಬಸ್ ಅಪಘಾತವಾಗಿ ಸುಮಾರು 18 ಜನರು ಗಾಯಾಳುಗಳಾಗಿದ್ದಾರೆ. ಇವರು ಚಿಂತಾಮಣಿ, ಚಿಕ್ಕಬಳ್ಳಾಪುರ, ಗೌರಿಬಿದನೂರು ನಿವಾಸಿಗಳಾಗಿದ್ದಾರೆ.ಈ ವೇಳೆ ಗಾಯಾಳುಗಳಿಗೆ ಸೂಕ್ತವಾದ ಚಿಕಿತ್ಸೆಯನ್ನು ನೀಡಲು ಸೂಚನೆ ನೀಡಿದ ಅವರು ಇವರಿಗೆ ಯಾವುದೇ ಹೆಚ್ಚಿನ ಚಿಕಿತ್ಸೆ ಅವಶ್ಯಕತೆ ಇದ್ದಲ್ಲಿ ಕೂಡಲೇ ನೀಡಲು ತಿಳಿಸಿದರು. ಜಿಲ್ಲಾ ಸರ್ಜನ್ ಡಾ; ನಾಗೇಂದ್ರಪ್ಪ ಹಾಗೂ ವಿವಿಧ ಮುಖಂಡರು ಉಪಸ್ಥಿತರಿದ್ದರು.

Read More

ಬೆಂಗಳೂರು: ಬ್ರ್ಯಾಂಡ್ ಬೆಂಗಳೂರು ಮತ್ತೊಂದು ರಸ್ತೆಯ ಕ್ವಾಲಿಟಿ ಈಗ ಮತ್ತೊಮ್ಮೆ ಬಟಾಬಯಲಾಗಿದೆ. ನಗರದ ಮತ್ತೊಂದು ವೈಟ್ ಟ್ಯಾಪಿಂಗ್ ರಸ್ತೆ ಕುಸಿತಗೊಂಡಿದ್ದು  ರಸ್ತೆ ಮಧ್ಯೆಯೆ ಭಾರಿ ಪ್ರಮಾಣದ ಹೊಂಡ ಸೃಷ್ಠಿಯಾಗಿ ವಾಹನಗಳಿಗೆ ಓಡಾಡಲು ಕಷ್ಟವಾಗುತ್ತಿದ್ದು ತಪ್ಪಿದ ಭಾರಿ ಅನಾಹುತ- ವಾಹನ ಸವಾರರು ಪಾರು ಕೂಡ ಆಗಿದ್ದಾರೆ. ರಸ್ತೆ ಮಧ್ಯೇ ಭಾರಿ ಪ್ರಮಾಣದಲ್ಲಿ ಕುಸಿದಿರೋ ರಸ್ತೆ ಹಲಸೂರು ಕೆರೆ ಬಳಿಯ ಡಿ ಭಾಸ್ಕರನ್ ರಸ್ತೆಯಲ್ಲಿ ರಸ್ತೆ ಕುಸಿದಿದ್ದು ಸುಮಾರು 4 ಅಡಿಯಷ್ಟು ಕುಸಿದಿದ್ದು ನಿನ್ನೆ ರಾತ್ರಿ 8 ಗಂಟೆ ವೇಳೆಗೆ ನಡೆದಿರೋ ಘಟನೆಯಾಗಿದೆ. ಕಳೆದ ಒಂದು ವರ್ಷದ ಹಿಂದಷ್ಟೇ ಆಗಿದ್ದ ಕಾಮಗಾರಿ ಧಿಡೀರ್ ರಸ್ತೆ ಕುಸಿತದಿಂದ ವಾಹನ ಸವಾರರ ಪರದಾಟ ಸದ್ಯ ಹೊಂಡ ಸುತ್ತ ಬ್ಯಾರಿಕೇಡ್ ಹಾಕಿರೋ ಪೊಲೀಸರು ಪಕ್ಕದ ರಸ್ತೆಯಿಂದ ವಾಹನ ಸಂಚಾರಕ್ಕೆ ಅವಕಾಶ ಮಾಡಿರುವ ಸಂಚಾರಿ ಪೊಲೀಸರು

Read More

ಪವಾಡ ಪುರುಷನ ನೆಲೆ ಹಾಗೂ ಪ್ರಸಿದ್ಧ ಯಾತ್ರಾ ಸ್ಥಳ ಮಲೆ ಮಹದೇಶ್ವರಸ್ವಾಮಿ ದೇವಾಲಯದಲ್ಲಿ ಕಡೆ ಕಾರ್ತಿಕ ಸೋಮವಾರದ ಅಂಗವಾಗಿ ಮಲೆ ಮಹದೇಶ್ವರ ಸ್ವಾಮಿಗೆ ವಿಶೇಷ ಪೂಜೆ ಪುನಸ್ಕಾರಗಳು ವಿಜೃಂಭಣೆಯಿಂದ ನಡೆದವು. ಮಾದಪ್ಪನ ಬೆಟ್ಟದಲ್ಲಿ ಮಾದಪ್ಪನ ದೇವಾಲಯದಲ್ಲಿ ಕಡೆಯ ಕಾರ್ತಿಕ ಮಾಸದಪ್ರಯಕ್ತ ಬಗೆಬಗೆಯ ಹೂವುಗಳಿಂದ ಅಲಂಕರಿಸಲಾಗಿತ್ತು. ರಾತ್ರಿ ಬೆಟ್ಟದ ದೀಪದಗಿರಿ ಒಡ್ಡುವಿನಲ್ಲಿ ಪವಾಡಪುರುಷ ಮಹದೇಶ್ವರ ಸ್ವಾಮಿಯ ಮಹಾ ಜ್ಯೋತಿಯನ್ನು ಬೆಳಗಲಾಯಿತು. ಸಾಲೂರು ಮಠದ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನೇತೃತ್ವದಲ್ಲಿ ಬೇಡಗಂಪಣ ಸಮುದಾಯದ ಅರ್ಚಕರು, ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಅಧಿಕಾರಿಗಳು ಹಾಗೂ ನೂರಾರು ಭಕ್ತರ ಸಮ್ಮುಖದಲ್ಲಿ ಮಹಾ ಜ್ಯೋತಿ ಬೆಳಗಿದರು. ಈ ಸಂದರ್ಭದಲ್ಲಿ ಭಕ್ತರು ‘ಉಫೇ ಮಾದಪ್ಪ, ಮಾಯ್ಕಾರ ಮಾದಪ್ಪ…’ ಮುಂತಾದ ಘೋಷಣೆಗಳನ್ನು ಕೂಗಿದರು. https://ainlivenews.com/samantha-gave-a-bold-look-like-never-before-in-jeans-see-photos/ ಪ್ರತಿ ವರ್ಷ ಕಾರ್ತಿಕ ಮಾಸದ ಕೊನೆಯ ಸೋಮವಾರದ ರಾತ್ರಿ ಈ ಸೇವೆಯನ್ನು ನೆರವೇರಿಸಲಾಗುತ್ತದೆ. ಜ್ಯೋತಿ ಬೆಳಗುವುದಕ್ಕೂ ಮುನ್ನ, ದೇವಾಲಯದ ಒಳ ಆವರಣದಲ್ಲಿ ಮಹದೇಶ್ವರ ಸ್ವಾಮಿಯ ಉತ್ಸವ ಪೂಜೆ ನೆರವೇರಿಸಿ ಮೂರ್ತಿಗೆ ವಿಶೇಷ ಒಳ ಆವರಣದಲ್ಲಿ ಉತ್ಸಮೂರ್ತಿಯನ್ನು ದೇವಾಲಯಕ್ಕೆ ಮೂರು…

Read More