ಚಿಕ್ಕಮಗಳೂರು :- ಬಿಜೆಪಿ ಪಕ್ಷದ ಮುಖಂಡರು ಈ ಬಾರಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಲ್ಲಿ ನಿಲ್ಲುವಂತೆ ಮಾಜಿ ಸಚಿವ ಸಿ.ಟಿ.ರವಿ ಅವರನ್ನು ಆಗ್ರಹಿಸಿದ್ದಾರೆ. ಸೋಮವಾರ ಪಕ್ಷದ ಜಿಲ್ಲಾ ಕಾರ್ಯಾಲಯದಲ್ಲಿ ನಡೆದ ಸಭೆಯಲ್ಲಿ ಈ ಒತ್ತಾಯ ಕೇಳಿಬಂತು. ಮುಖಂಡರು ಸಿ.ಟಿ.ರವಿ ಸಮ್ಮುಖದಲ್ಲೇ ಅವರನ್ನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವಂತೆ ಒತ್ತಡ ಹೇರಿದರು. ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಜಿಲ್ಲೆಯ 5 ಕ್ಷೇತ್ರಗಳಲ್ಲಿ ಸೋತಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲೂ ಇದೇ ಫಲಿತಾಂಶ ಬಂದರೆ ಪಕ್ಷಕ್ಕೆ ತುಂಬಾ ಹಾನಿಯಾಗಲಿದೆ. ಅಂಥ ಪರಿಸ್ಥಿತಿ ಬರಬಾರದು, ಪಕ್ಷ ಇನ್ನಷ್ಟು ಸಂಘಟನಾತ್ಮಕವಾಗಿ ಬೆಳೆಯಬೇಕಾದರೆ ತಾವೇ ಸ್ಪರ್ಧೆ ಮಾಡಬೇಕು ಎಂದು ಆಗ್ರಹಿಸಿದರು. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದಿಂದ ಸಿ.ಟಿ.ರವಿ ಅವರನ್ನು ಅಭ್ಯರ್ಥಿಯನ್ನಾಗಿ ಮಾಡುವಂತೆ ಕೋರಿ ಪಕ್ಷದ ವರಿಷ್ಠರಿಗೆ ಆಗ್ರಹಿಸಲು ಜಿಲ್ಲೆಯಿಂದ ನಿಯೋಗ ತೆಗೆದುಕೊಂಡು ಹೋಗಲಾಗುವುದು ಎಂದ ಮುಖಂಡರು, ಕ್ಷೇತ್ರದ ಹಾಲಿ ಸಂಸದೆ ಶೋಭಾ ಕರಂದ್ಲಾಜೆ ಅವರು ಬೆಂಗಳೂರು ಉತ್ತರ ಕ್ಷೇತ್ರದಿಂದ ಸ್ಪರ್ಧೆ ಮಾಡಲಿ, ನೀವು ಇಲ್ಲೇ ಸ್ಪರ್ಧೆ ಮಾಡಬೇಕು ಎಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ…
Author: AIN Author
ಬೆಂಗಳೂರು:- ರಾಜ್ಯದ ಸರಕಾರಿ ಶಾಲೆಗಳ ಪೈಕಿ ಇನ್ನೂ 69 ಶಾಲೆಗಳಲ್ಲಿ ಶೌಚಾಲಯ ಹಾಗೂ ನೀರಿನ ವ್ಯವಸ್ಥೆ ಇಲ್ಲ ಎಂಬುವುದು ಸಮೀಕ್ಷೆಯಲ್ಲಿ ಬಯಲಾಗಿದೆ. ಶೌಚಾಲಯ ಮತ್ತು ಕುಡಿಯುವ ನೀರು ಲಭ್ಯತೆ ಕೊರತೆ ಎದುರಿಸುತ್ತಿದ್ದ ರಾಜ್ಯದ 551 ಶಾಲೆಗಳಲ್ಲಿ ಸಮೀಕ್ಷೆ ನಡೆಸಲಾಗಿದ್ದು, ಅವುಗಳಲ್ಲಿ 482 ಶಾಲೆಗಳ ಸ್ಥಿತಿ ತೃಪ್ತಿಕರವಾಗಿದೆ ಮತ್ತು 69 ಶಾಲೆಗಳ ಸ್ಥಿತಿ ತೃಪ್ತಿಕರವಾಗಿಲ್ಲ ಎಂಬುದು ಸಮೀಕ್ಷೆಯಿಂದ ಕಂಡು ಬಂದಿದೆ ಎಂದು ಶಾಲಾ ಶಿಕ್ಷಣ ಇಲಾಖೆಯೇ ಹೈಕೋರ್ಟ್ಗೆ ಸೋಮವಾರ ತಿಳಿಸಿದೆ. ಶಾಲೆಯಿಂದ ಹೊರಗುಳಿದ ಮಕ್ಕಳ ಕುರಿತಂತೆ ಮಾಧ್ಯಮಗಳ ವರದಿ ಆಧರಿಸಿ ಹೈಕೋರ್ಟ್ ಸ್ವಯಂ ಪ್ರೇರಿತವಾಗಿ ದಾಖಲಿಸಿಕೊಂಡಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಮುಖ್ಯ ನ್ಯಾಯಮೂರ್ತಿ ಪಿ. ಬಿ. ವರಲೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್. ದೀಕ್ಷಿತ್ ಅವರಿದ್ದ ವಿಭಾಗೀಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಆಗ ಸರ್ಕಾರಿ ವಕೀಲರು, ನ್ಯಾಯಾಲಯದ ನಿರ್ದೇಶನದಂತೆ ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರದ ಪ್ರತಿನಿಧಿಗಳ ಸಮಕ್ಷಮದಲ್ಲಿ ಶಾಲೆಗಳ ಸಮೀಕ್ಷೆ ನಡೆಸಲಾಗಿದ್ದು, ಅದರ ವರದಿಯನ್ನು ಶಿಕ್ಷಣ ಇಲಾಖೆ ಆಯುಕ್ತೆ ಬಿ. ಬಿ. ಕಾವೇರಿ…
ಸೈಬರ್ ಕ್ರೈಮ್ಗಳು ಎಂಬುದು ಈಗೀಗ ಸಾಮಾನ್ಯವಾಗಿ ಬಿಟ್ಟಿದೆ. ಈ ಡಿಜಿಟಲ್ ಜಮಾನದಲ್ಲಿ ಸೈಬರ್ ದಾಳಿಕೋರರು ಅಮಾಯಕನ್ನು ಬಲೆಗೆ ಕೆಡವಲು ನಾನಾ ರೀತಿಯಲ್ಲಿ ಹವಣಿಸುತ್ತಿರುತ್ತಾರೆ. ಜೊತೆಗೆ ಹ್ಯಾಕರ್ಗಳು ಸುಲಭವಾಗಿ ಜನರ ಮಾಹಿತಿಗೆ ಕನ್ನ ಹಾಕಿ ಅವುಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇಂತಹ ಮೋಸದ ಜಾಲದಲ್ಲಿ ಸಿಲುಕಿ ನಲುಗಿದವರು ಅದೆಷ್ಟೋ ಮಂದಿ. ಈ ಸೈಬರ್ ಕ್ರಿಮಿನಲ್ಗಳ ಕಾಟಕ್ಕೆ ಸಾಕಷ್ಟು ಮಂದಿ ಕಣ್ಣೀರಲ್ಲಿ ಕೈತೊಳೆಯುತ್ತಿದ್ದಾರೆ ಎಂಬುದು ಕೂಡಾ ಸತ್ಯ. ನಿಮ್ಮ ವೈಯಕ್ತಿಕ, ಸಾಮಾಜಿಕ ಮಾಧ್ಯಮ ಅಥವಾ ಕೆಲಸದ ಖಾತೆಗಳನ್ನು ರಕ್ಷಿಸಲು ಸರಿಯಾದ ಮತ್ತು ಸದೃಢ ಪಾಸ್ವರ್ಡ್ ಅನ್ನು ಆಯ್ಕೆ ಮಾಡಿಕೊಳ್ಳುವುದು ಬಹಳ ಮುಖ್ಯವಾಗುತ್ತದೆ. ಈ ವಿಷಯದಲ್ಲಿ ನಿರ್ಲಕ್ಷ್ಯ ತೋರಿದರೆ ಕಡಿಮೆ ಅವಧಿಯಲ್ಲಿಯೇ ಅಪಾಯಕ್ಕೆ ಗುರಿಯಾಗುವ ಸಾಧ್ಯತೆಗಳನ್ನೂ ಅಲ್ಲಗಳೆಯುವಂತಿಲ್ಲ. ಯಾಕೆಂದರೆ ಸೈಬರ್ ಅಪರಾಧಿಗಳು ಸುಲಭವಾಗಿ ಹ್ಯಾಕ್ ಮಾಡಬಹುದಾದ ಪಾಸ್ವರ್ಡ್ ಅನ್ನು ಆಯ್ಕೆ ಮಾಡುವುದು ಜನರು ಮಾಡುವ ತಪ್ಪುಗಳಲ್ಲಿ ಒಂದಾಗಿದೆ. NordPassನ ವರದಿಯು ಭಾರತೀಯರು ಹೆಚ್ಚು ಬಳಸುವ 20 ಪಾಸ್ವರ್ಡ್ಗಳ ಪಟ್ಟಿಯನ್ನು ಬಹಿರಂಗಪಡಿಸಿದೆ ಮತ್ತು ಹ್ಯಾಕರ್ಗಳು ಅವುಗಳನ್ನು ಭೇದಿಸಲು ಹೆಚ್ಚು…
ಬೆಳಗಾವಿ:- ಪ್ರತಿಪಕ್ಷದ ನಾಯಕ ಅಶೋಕಗೆ ಬಿಜೆಪಿ ಶಾಸಕರ ಬೆಂಬಲವೇ ಇಲ್ಲ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದ್ದಾರೆ. ಪ್ರಕಟಣೆ ಬಿಡುಗಡೆ ಮಾಡಿದ ಅವರು ಪ್ರತಿಪಕ್ಷದ ನಾಯಕ ಅಶೋಕಗೆ ಬಿಜೆಪಿ ಶಾಸಕರ ಬೆಂಬಲವೇ ಇಲ್ಲ. ಅವರದೇ ಪಕ್ಷದ ಶಾಸಕರು ಪ್ರತಿದಿನ ಅವರಿಗೆ ಮಂಗಳಾರತಿ ಮಾಡುತ್ತಿದ್ದಾರೆ. ಯಾವ ಸ್ಥಾನ ಸಿಕ್ಕಿಲ್ಲವೆಂದು ಬಸನಗೌಡ ಪಾಟೀಲ ಯತ್ನಾಳ ಯಡಿಯೂರಪ್ಪರಿಂದ ಹಿಡಿದು ಎಲ್ಲರ ವಿರುದ್ಧ ಹರಿಹಾಯುತ್ತಿದ್ದಾರೆ. ಜನರ ಗಮನ ಬೇರೆಡೆ ಸೆಳೆಯುವ ಪ್ರಯತ್ನ ಈ ರೀತಿ ಮಾಡಲು ಪ್ರಯತ್ನಿಸುತ್ತಿದೆ ಅಷ್ಟೇ ಎಂದು ಜರೆದಿದ್ದಾರೆ. ಬೆಳಗಾವಿಯ ಅಧಿವೇಶನದಲ್ಲಿ ಈ ಭಾಗದ ಸಮಸ್ಯೆಗಳ ಪರಿಹಾರ ಕಂಡುಕೊಳ್ಳಲು ಕರೆಯಲಾಗಿದೆ. ಆದರೆ ಚರ್ಚೆಗೆ ಅವಕಾಶ ನೀಡುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ. ದಮ್ಮು ತಾಕತ್ ಬಗ್ಗೆ ಮಾತನಾಡುವ ಬಿಜೆಪಿಗರು ಕಲಾಪದಲ್ಲಿ ಭಾಗವಹಿಸುವ ಧೈರ್ಯ ತೋರಬೇಕು. ಆದರೆ ಸರ್ಕಾರವೇನಾದರೂ ತಪ್ಪು ಮಾಡಿದ್ದರೆ ಎತ್ತಿ ತೋರಿಸುವ ತಾಕತ್ತು ಪ್ರತಿಪಕ್ಷಕ್ಕೆ ಇಲ್ಲ. ಆಡಳಿತ ಪಕ್ಷವನ್ನು ಎದುರಿಸುವ ಧೈರ್ಯವೇ ಬಿಜೆಪಿಗಿಲ್ಲ. ರಾಜ್ಯದಲ್ಲಿ ಸಮರ್ಥ ಪ್ರತಿಪಕ್ಷ ಇರಬೇಕು. ಬಿಜೆಪಿ ಧರಣಿ ಕೈಬಿಟ್ಟು ಕಲಾಪದಲ್ಲಿ ಭಾಗವಹಿಸಬೇಕೆಂದು ಮನವಿ…
ಹುಬ್ಬಳ್ಳಿ: ಕ್ಷೌರಿಕ ವೃತ್ತಿಯಲ್ಲಿ ತೊಡಗಿರುವ ಸವಿತಾ ಸಮಾಜ ಆರ್ಥಿಕ, ಶೈಕ್ಷಣಿಕ, ಸಾಮಾಜಿಕವಾಗಿ ಹಿಂದುಳಿದಿದೆ. ಸವಿತಾ ಸಮಾಜಕ್ಕೆ ಪ್ರತ್ಯೇಕ ಮೀಸಲಾತಿ ಕಲ್ಪಿಸಬೇಕು. ಸರ್ಕಾರ ಕ್ಷೌರಿಕ ತರಬೇತಿ ಕೇಂದ್ರ ಹಾಗೂ ನಾದಸ್ವರ ಡೋಲು ತರಬೇತಿ ಕೇಂದ್ರ ಸ್ಥಾಪಿಸಬೇಕೆಂದು ಹೀಗೆ ಹಲವಾರು ಬೇಡಿಕೆಗಳಿ ಆಗ್ರಹಿಸಿ ಸವಿತಾ ಸಮಾಜದ ಪೀಠಾಧ್ಯಕ್ಷ ಸವಿತಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಹುಬ್ಬಳ್ಳಿಯಿಂದ ಬೆಳಗಾವಿ ವರೆಗೆ ಪಾದಯಾತ್ರೆ ಹೊರಟಿದ್ದಾರೆ. ಇನ್ನು ಹಳೇ ಹುಬ್ಬಳ್ಳಿಯಿಂದ ಆರಂಭವಾದ ಪಾದಯಾತ್ರೆ, ಸಾವಿರಾರು ಸವಿತಾ ಸಮಾದವರು ಸೇರಿದ್ದು, ಮುಖ್ಯ ರಸ್ತೆ ಮೂಲಕ ಪಾದಯಾತ್ರೆ ಹೊರಟಿದ್ದಾರೆ. ಇನ್ನು ಬೆಳಗಾವಿಯಲ್ಲಿ ನಡೆಯುತ್ತಿರು ಅಧಿವೇಶನದಲ್ಲಿ ಸವಿತಾ ಸಮಾಜದ ಬೇಡಿಕೆಗಳ ಬಗ್ಗೆ ಚರ್ಚೆ ಮಾಡಬೇಕು. ಮತ್ತು ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ಸುವರ್ಣ ಸೌಧದ ಮುಂದೆ ಧರಣಿ ಸತ್ಯಾಗ್ರಹ ಮಾಡಲಾಗುತ್ತದೆಂದು ತಿಳಿಸಿದರು.
ಲಕ್ನೋ: ಶಾಲೆಗೆ ಹೋಗಲು ನಿರಾಕರಿಸಿದ್ದಕ್ಕೆ ತಾಯಿ ಹೊಡೆದಳೆಂದು ನೊಂದ ಅಪ್ರಾಪ್ತೆಯೊಬ್ಬಳು ರೈಲಿನಡಿ ಹಾರಿ ಆತ್ಮಹತ್ಯೆಗೆ ಶರಣಾದ ಘಟನೆ ಉತ್ತರಪ್ರದೇಶದ (Uttarpradesh) ಮಥುರಾದಲ್ಲಿ ನಡೆದಿದೆ. 13 ವರ್ಷದ ಬಾಲಕಿಗೆ ಶಾಲೆಗೆ ಹೋಗಲು ಇಷ್ಟವಿರಲಿಲ್ಲ. ಹೀಗಾಗಿ ಆಕೆ ಅಂದು ಶಾಲೆಗೆ ಹೋಗಿರಲಿಲ್ಲ ಎಂದು ಪೊಲೀಸರು ಹೇಳಿದ್ದಾರೆ. https://ainlivenews.com/notice-to-shah-rukh-khan-ajay-akshay-kumar-do-you-know-why/ ಇತ್ತ ಶಾಲೆಗೆ ಹೋಗುವಂತೆ ಹೇಳಿ ತಾಯಿ ಮಗಳಿಗೆ ಬೈದು, ಹೊಡೆದಿದ್ದಾರೆ. ಅಂತೆಯೇ ಬಾಲಕಿ ಶಾಲೆಗೆ ತೆರಳಿ ಅಲ್ಲಿಂದ ನೇರವಾಗಿ ರೈಲ್ವೆ ಹಳಿಯತ್ತ ಹೋಗಿದ್ದಾಳೆ. ಬಳಿಕ ರೈಲು ಬರುತ್ತಿದ್ದಂತೆಯೇ ಹಳಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ. ಈ ಸಂಬಂಧ ಅಲ್ಲಿಯ ಎಸ್ಪಿ ಪ್ರಕಾಶ್ ಸಿಂಗ್ ಪ್ರತಿಕ್ರಿಯಿಸಿ, ಶಾಲೆಗೆ ಹೋಗಲು ನಿರಾಕರಿಸಿದ್ದಕ್ಕೆ ಬಾಲಕಿಗೆ ಆಕೆಯ ತಾಯಿ ಹೊಡೆದಿದ್ದಾರೆ. ಇದೇ ಕೋಪದಿಂದ ಶಾಲೆಗೆ ಹೋಗಿರುವ ಆಕೆ ರೈಲಿನಡಿ ಹಾರಿ ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ.
ಸುವರ್ಣಸೌಧ:- ನಟಿ ಲೀಲಾವತಿ ಪ್ರತಿಮೆ ಅವರ ಆಸ್ಪತ್ರೆ ಮುಂದೆ ನಿರ್ಮಿಸಲು ಚಿಂತನೆ ನಡೆಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿಕೆಶಿ ಹೇಳಿದ್ದಾರೆ. ಲೀಲಾವತಿ ನಿಧನಕ್ಕೆ ವಿಧಾನ ಮಂಡಲದ ಉಭಯ ಸದನಗಳಲ್ಲಿ ಸಂತಾಪ ಸೂಚಿಸಿ ನುಡಿನಮನ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ವಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಶಾಸಕಿ, ನಟಿ ಉಮಾಶ್ರೀ, ‘ಜಾನುವಾರು ರಕ್ಷಣೆಯಲ್ಲಿ ಲೀಲಾವತಿ ಪಾತ್ರ ಮಹತ್ವದ್ದು. ಅವರು ನಿರ್ಮಿಸಿರುವ ಪಶು ಆಸ್ಪತ್ರೆಯ ಮುಂದೆ ಪ್ರತಿಮೆ ಸ್ಥಾಪಿಸಬೇಕು’ ಎಂದು ಆಗ್ರಹಿಸಿದರು. ಇದಕ್ಕೆ ಉತ್ತರಿಸಿದ ಡಿಕೆಶಿ, ‘ಲೀಲಾವತಿ ಅವರ ಬಳಿ ಹಣವಿಲ್ಲದಿದ್ದರೂ ಹೃದಯವಂತಿಯಲ್ಲಿ ಬಹಳ ದೊಡ್ಡ ಶ್ರೀಮಂತರು. ತಮ್ಮ ಬದುಕಿನಲ್ಲಿ ಅನೇಕ ಕಷ್ಟ ಬಂದರೂ ಅವರು ಪರೋಪಕಾರಕ ಜೀವನ ನಡೆಸಿದರು.ಲೀಲಾವತಿ ಅವರ ಬಳಿ ಹಣವಿಲ್ಲದಿದ್ದರೂ ಅವರು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ಕೊಟ್ಟು ಹೋಗಿದ್ದಾರೆ. ಹೀಗಾಗಿ ಅವರು ನಿಜಕ್ಕೂ ಧನವಂತರು. ಅವರು ಕಟ್ಟಿರುವ ಪಶುವೈದ್ಯ ಆಸ್ಪತ್ರೆ ಮುಂಭಾಗದಲ್ಲಿ ಅವರ ಪ್ರತಿಮೆ ನಿರ್ಮಾಣ ಮಾಡುವ ಕುರಿತು ಸಿಎಂ ಜತೆ ಚರ್ಚಿಸಲಾಗುವುದು’ ಎಂದರು.
ಬೆಂಗಳೂರು:- ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನದಿಂದ ಎಚ್.ಡಿ.ದೇವೇಗೌಡ ಅವರನ್ನು ‘ವಜಾ’ಗೊಳಿಸಿ ಉಚ್ಚಾಟಿತರಾಗಿದ್ದ ಸಿ.ಕೆ.ನಾಣು ಅವರನ್ನು ನೂತನ ‘ರಾಷ್ಟ್ರೀಯ ಅಧ್ಯಕ್ಷ’ರನ್ನಾಗಿ ಆಯ್ಕೆ ಮಾಡಲಾಗಿದೆ. ಸಿ.ಕೆ.ನಾಣು ಅವರು ಅಧ್ಯಕ್ಷರಾಗಿರುವ ಪಕ್ಷಕ್ಕೆ ಚಿಹ್ನೆ ನೀಡಬೇಕು ಎಂದು ಆಯೋಗಕ್ಕೆ ಮನವಿ ಮಾಡಲೂ ನಿರ್ಧರಿಸಲಾಗಿದೆ. ಬೆಂಗಳೂರಿನ ಕೆ.ಜಿ.ಹಳ್ಳಿಯ ಖಾಸಗಿ ಹೋಟೆಲ್ನಲ್ಲಿ ಸಿ.ಎಂ.ಇಬ್ರಾಹಿಂ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ. ಸಭೆಯಲ್ಲಿ ಒಟ್ಟು ಮೂರು ನಿರ್ಣಯಗಳನ್ನು ಕೈಗೊಳ್ಳಲಾಗಿದೆ. ದೇವೇಗೌಡ ಅವರ ವಜಾ, ಸಿ.ಕೆ.ನಾಣು ಅವರು ನೂತನ ಅಧ್ಯಕ್ಷರು ಮತ್ತು ಎನ್ಡಿಎಯೇತರ ಪಕ್ಷಗಳ ಪ್ರಮುಖ ನಾಯಕರನ್ನು ಭೇಟಿ ಮಾಡಿ ಪಕ್ಷವನ್ನು ಸಂಘಟಿಸುವ ಹೊಣೆಯನ್ನು ಇಬ್ರಾಹಿಂ ಅವರಿಗೆ ವಹಿಸಲು ತೀರ್ಮಾನಿಸಲಾಗಿದೆ. ಸಿ.ಕೆ.ನಾಣು ಅವರು ನೂತನ ಅಧ್ಯಕ್ಷರಾಗಿರುವ ಬಗ್ಗೆ ಸಭೆಯಲ್ಲಿ ಒಂದು ಸಾಲಿನ ನಿರ್ಣಯವನ್ನು ತೆಲಂಗಾಣ ಜೆಡಿಎಸ್ ಅಧ್ಯಕ್ಷ ಸೂರಿ ಅವರು ಓದಿ ಹೇಳಿದರು. ಇದಕ್ಕೆ ಇಬ್ರಾಹಿಂ ಅವರ ನೇತೃತ್ವದಲ್ಲಿ ನಿರ್ಣಯ ಅಂಗೀಕಾರ ಮಾಡಲಾಯಿತು. ಎನ್ಡಿಎ ಜತೆ ಜೆಡಿಎಸ್ ಕೈ ಜೋಡಿಸುವ ಬಗ್ಗೆ ದೇವೇಗೌಡ ಅವರಾಗಲಿ, ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಾಗಲಿ ರಾಜ್ಯಾಧ್ಯಕ್ಷರ…
ಬೆಂಗಳೂರು:- ಕಲಬುರಗಿ ವಕೀಲ ಪಾಟೀಲ ಹತ್ಯೆಗೆ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ವಿಚಾರಣೆ ವೇಳೆ ಈರಗಣ್ಣ ಗೌಡರ ಹತ್ಯೆ ಘಟನೆಯನ್ನು ಪ್ರಸ್ತಾಪಿಸಿದ ನ್ಯಾಯಮೂರ್ತಿ ವಿ.ಶ್ರೀಷಾನಂದ ಅವರು, 20 ಎಕರೆ ಜಾಗದ ಮೇಲಿನ ಹಕ್ಕಿನ ವಿಚಾರ ಸಂಬಂಧ ಈ ಕೊಲೆ ನಡೆದಿದೆ ಎಂದು ಬೇಸರ ವ್ಯಕ್ತಪಡಿಸಿದರು. ಅಲ್ಲದೆ, ಇಂತಹ ಘಟನೆಗಳನ್ನು ಮಟ್ಟಹಾಕದೆ ಹೋದರೆ ಮುಂದಿನ 20 ವರ್ಷಗಳ ನಂತರ ಸಿವಿಲ್ ವ್ಯಾಜ್ಯಗಳು ಕೋರ್ಟ್ಗೆ ದಾಖಲಾಗುವುದು ಅನುಮಾನ, ಕೊಲೆಗಡುಕರು ಮುಂದೊಂದು ದಿನ ಶ್ರೀಸಾಮಾನ್ಯರನ್ನು ಬೆದರಿಸಿ ಸಿವಿಲ್ ವ್ಯಾಜ್ಯಗಳನ್ನು ತಾವೇ ಇತ್ಯರ್ಥ ಮಾಡಿಕೊಳ್ಳುತ್ತಾರೆ. ಈ ಹೇಯ ಕೃತ್ಯಗಳು ನಿಜಕ್ಕೂ ವ್ಯವಸ್ಥೆಗೆ ಬೆದರಿಕೆಯಾಗಿದೆ ಎಂದು ನ್ಯಾಯಮೂರ್ತಿಗಳು ಮೌಖಿಕವಾಗಿ ನುಡಿದರು ಇನ್ನೂ ನಗರದ ಜೀವರ್ಗಿ ರಸ್ತೆಯ ಸಾಯಿ ಮಂದಿರ ಬಳಿಯ ಅಪಾರ್ಟ್ಮೆಂಟ್ ಬಳಿ ಡಿ.7ರಂದು ನಡೆದ ಹೈಕೋರ್ಟ್ ವಕೀಲ ಈರಣ್ಣಗೌಡ ಪೊಲೀಸ್ ಪಾಟೀಲ ಹತ್ಯೆಗೆ ಸಂಬಂಧಿಸಿ ಅವರ ಸೋದರ ಸಂಬಂಧಿ ನೀಲಕಂಠಗೌಡ ಪೊಲೀಸ್ ಪಾಟೀಲ್ ದಂಪತಿಯನ್ನು ವಿವಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಹೊಲದ ಆಸ್ತಿ ವಿಚಾರವಾಗಿ ಕೊಲೆ ನಡೆದಿದ್ದು, ನೀಲಕಂಠಗೌಡ…
ಪ್ಯೊಂಗ್ಯಾಂಗ್: ದೇಶದ ಮಹಿಳೆಯರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಎಂದು ಮನವಿ ಮಾಡಿ ಉತ್ತರ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ (Kim Jong Un) ಕಣ್ಣೀರಿಟ್ಟಿದ್ದಾರೆ. ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡುವಾಗ ಕಿಮ್ ಜಾಂಗ್ ಉನ್ ಕಣ್ಣೀರಿಟ್ಟಿದ್ದಾರೆ. ಉತ್ತರ ಕೊರಿಯಾದಲ್ಲಿ (North Korea) ಜನನ ಪ್ರಮಾಣ ಕ್ಷೀಣಿಸುತ್ತಿದೆ. ರಾಷ್ಟ್ರೀಯ ಶಕ್ತಿಯನ್ನು ಬಲಪಡಿಸಲು ದೇಶದ ಮಹಿಳೆಯರು ಹೆಚ್ಚಿನ ಮಕ್ಕಳನ್ನು ಹೊಂದಬೇಕು ಮನವಿ ಮಾಡಿದ್ದಾರೆ. https://twitter.com/OliLondonTV/status/1732130034863800647?ref_src=twsrc%5Etfw%7Ctwcamp%5Etweetembed%7Ctwterm%5E1732130034863800647%7Ctwgr%5E9d3292e455c15fec166480a34e69b60ed0be6ef0%7Ctwcon%5Es1_&ref_url=https%3A%2F%2Fpublictv.in%2Fkim-jong-un-cries-as-he-tells-north-korean-women-to-have-more-babies%2F ಪ್ಯೋಂಗ್ಯಾಂಗ್ನಲ್ಲಿ ತಾಯಂದಿರಿಗಾಗಿ ನಡೆದ ಕಾರ್ಯಕ್ರಮದಲ್ಲಿ ಮನವಿ ಮಾಡುವಾಗ ಬಿಳಿ ಕರವಸ್ತ್ರದಿಂದ ತನ್ನ ಕಣ್ಣುಗಳನ್ನು ಒರೆಸಿಕೊಂಡ ದೃಶ್ಯ ಕಂಡುಬಂದಿದೆ. ಜನನ ಪ್ರಮಾಣ ಕುಸಿತವಾಗದಂತೆ ನೋಡಿಕೊಳ್ಳಬೇಕು. ಮಕ್ಕಳ ಉತ್ತಮ ಆರೈಕೆ ಮತ್ತು ಅವರಿಗೆ ಶಿಕ್ಷಣ ಒದಗಿಸುವುದು ನಮ್ಮ ಕುಟುಂಬದ ಆದ್ಯ ಕರ್ತವ್ಯ. ನಾವು ನಮ್ಮ ತಾಯಂದಿರೊಂದಿಗೆ ಒಟ್ಟಾಗಿ ನಿಲ್ಲುತ್ತೇವೆ ಎಂದು ತಿಳಿಸಿದ್ದಾರೆ.ವಿಶ್ವಸಂಸ್ಥೆಯ ಮಾಹಿತಿಯ ಪ್ರಕಾರ, ಇತ್ತೀಚಿನ ದಶಕಗಳಲ್ಲಿ ಜನನದಲ್ಲಿ ವಿಸ್ತೃತ ಕುಸಿತದ ನಡುವೆ 2023 ರ ಹೊತ್ತಿಗೆ ಉತ್ತರ ಕೊರಿಯಾದಲ್ಲಿ ಜನಿಸಿದ ಮಕ್ಕಳ ಸರಾಸರಿ ಸಂಖ್ಯೆ 1.8 ರಷ್ಟಿದೆ.