Author: AIN Author

ಮಂಡ್ಯ: ಬಸ್ ಹತ್ತುವ ವೇಳೆ ಹಿಂಬದಿ ಚಕ್ರಕ್ಕೆ ಸಿಲುಕಿ ಮಹಿಳೆಯೊಬ್ಬಳು ಸ್ಥಳದಲ್ಲೇ ಸಾವಿಗೀಡಾದ ಘಟನೆ ಮಂಡ್ಯದ ಕೆಎಸ್‍ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ನಡೆದಿದೆ. ಮೃತಪಟ್ಟ ಮಹಿಳೆಯನ್ನು ಬೆಂಗಳೂರು ಮೂಲದ ಪೂಜಾ ಎಂದು ಗುರುತಿಸಲಾಗಿದೆ. https://ainlivenews.com/representative-traveled-330-km-on-a-rented-bike-and-went-to-the-assembly/ ಮಹಿಳೆ ವೇಗವಾಗಿ ಬಂದ ಬಸ್‌ನಿಂದಾಗಿ ಗಾಬರಿಗೊಂಡ ಪರಿಣಾಮ ಚಕ್ರಕ್ಕೆ ಸಿಲುಕಿದ್ದಾಳೆ ಎನ್ನಲಾಗಿದೆ. ಘಟನೆಯಲ್ಲಿ ಆಕೆ ಸ್ಥಳದಲ್ಲೇ ಸಾವಿಗೀಡಾಗಿದ್ದಾಳೆ. ಘಟನಾ ಸ್ಥಳಕ್ಕೆ ಮಂಡ್ಯ ಸಂಚಾರಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. 

Read More

ದಾವಣಗೆರೆ: ಜಾರ್ಖಂಡ್ ನ ರಾಜ್ಯಸಭಾ ಸದಸ್ಯ ಧೀರಜ್ ಸಾಹು ಮನೆಯಲ್ಲಿ ಕೋಟ್ಯಂತರ ರೂ. ಹಣ ಪತ್ತೆ ಪ್ರಕರಣಕ್ಕೆ ಸಂಭಂಧಿ ಸಿದಂತೆ ಧೀರಜ್ ಸಾಹು ವಿರುದ್ಧ ದಾವಣಗೆರೆಯಲ್ಲಿ ಬಿಜೆಪಿ ಪ್ರತಿಭಟನೆ ನಡೆಸಿದರು. ದಾವಣಗೆರೆ ಬಿಜೆಪಿ ಕಚೇರಿಯಿಂದ ರೈಲ್ವೆ ನಿಲ್ದಾಣದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ರೈಲ್ವೆ ನಿಲ್ದಾಣದ ಮುಂದೆ ಧೀರಹ್ ಸಾಹು ವಿರುದ್ಧ ಘೋಷಣೆ ಕೂಗಿದರು. ಇನ್ನೂ ಧೀರಜ್ ಸಾಹು ವಿರುದ್ಧ ಸೂಕ್ತ ಕ್ರಮಕ್ಕೆ ದಾವಣಗೆರೆ ಜಿಲ್ಲಾ ಬಿಜೆಪಿ ಆಗ್ರಹಿಸಿತು.

Read More

ಬಾಗಲಕೋಟೆ: ನವೀನ ಚಟುವಟಿಕೆಗಳ ಮೂಲಕ ಬೋಧನೆ ಮಾಡಿ ಮಕ್ಕಳ ಕಲಿಕೆ ಸುಗಮ ಮಾಡಬೇಕು. ಜ್ಞಾನದ ಜೊತೆಗೆ ಆತ್ಮವಿಶ್ವಾಸ ಬೆಳೆಸಬೇಕು. ಮಕ್ಕಳೊಂದಿಗೆ ಪ್ರೀತಿಯಿಂದ ಮಾತನಾಡಿ ಹತ್ತಿರವಾದಾಗ ಮಕ್ಕಳು ಆಪ್ತರಾಗಿ ಪರಿಣಾಮಕಾರಿಯಾಗಿ ಕಲಿಯುತ್ತಾರೆ ಎಂದು ರಾಜ್ಯ ಶಾಲಾ ಶಿಕ್ಷಣ ಇಲಾಖೆಯ ಪ್ರಾಥಮಿಕ ವಿಭಾಗದ ನಿರ್ದೇಶಕರಾದ ಪ್ರಸನ್ನಕುಮಾರ ಅಭಿಪ್ರಾಯಪಟ್ಟರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಯಲ್ಲಟ್ಟಿಯ ಕೊಣ್ಣೂರ್ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ನಡೆದ ಜಮಖಂಡಿ ಹಾಗೂ ರಬಕವಿ ಬನಹಟ್ಟಿ ತಾಲೂಕಿನ ಪ್ರೌಢಶಾಲಾ ಮುಖ್ಯೋಪಾಧ್ಯಾಯರ, ಹಾಗೂ ಸಹ ಶಿಕ್ಷಕರ ಪ್ರೇರಣಾ ಶಿಬಿರವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು.ಎಷ್ಟು ಎತ್ತರವಿದ್ದರೇನು ಹತ್ತಿರವಾಗದಿದ್ದರೆ ಹೇಗೆ ಎನ್ನುವ ಕವಿ ದೇವನೂರು ಮಹಾದೇವ ಅವರ ಕವಿತೆಯ ಸಾಲನ್ನು ನೆನಪಿಸಿದ ಅವರು ಮುಗ್ಧ ಮನಸ್ಸಿನ ಮಕ್ಕಳ ಜ್ಞಾನ ಮತ್ತು ಕೌಶಲ್ಯಗಳನ್ನು ಬೆಳೆಸುವ ದೃಷ್ಟಿಯಲ್ಲಿ ಶಿಕ್ಷಕರ ಪಾತ್ರ ಬಹಳ ದೊಡ್ಡದು ಎಂದು ಹೇಳಿದರು. ಹಾರ್ಡ್ ವರ್ಕ್ ಮಾಡುವ ಜೊತೆಗೆ ಅದಕ್ಕೆ ಸ್ಮಾರ್ಟ್ ಟಚ್ ನೀಡಿದರೆ ಶಿಕ್ಷಕರ ಬೋಧನೆ ಇನ್ನೂ ಪರಿಣಾಮಕಾರಿಯಾಗುತ್ತದೆ. ಸಾಮಾನ್ಯ ಬೋಧನೆಯೊಂದಿಗೆ ರಸಪ್ರಶ್ನೆ, ವಿದ್ಯಾರ್ಥಿಗಳ ಮನೆ ಭೇಟಿ,…

Read More

ದಾವಣಗೆರೆ: ಬೆಳಗಾವಿ ಸುವರ್ಣಸೌಧದಲ್ಲಿ ನಡೆಯುತ್ತಿರುವ ಅಧಿವೇಶನಕ್ಕೆ ಹೊರಟಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರ ಬಸ್​ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದ್ದು ಚಾಲಕ ಸೇರಿ 20ಕ್ಕೂ ಹೆಚ್ಚು ಜನರಿಗೆ ಗಾಯಗಳಾದ ಘಟನೆ ನಡೆದಿದೆ. ದಾವಣಗೆರೆ ನಗರದ ಹೊರವಲಯದ ಜಿಲ್ಲಾ ಪಂಚಾಯಿತ್ ಎದುರು ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಅಪಘಾತ ಸಂಭವಿಸಿದೆ. ಗಾಯಾಳುಗಳಿಗೆ ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕಬಳ್ಳಾಪುರ, ಚಿಂತಾಮಣಿ ಸೇರಿದಂತೆ ವಿವಿಧ ಕಡೆಗಳಿಂದ ಮೂರು ಬಸ್​ಗಳಲ್ಲಿ ಮಾದಿಗ ದಂಡೋರ ಸಮಿತಿ ಸದಸ್ಯರು ಬೆಳಗಾವಿ ಅಧಿವೇಶನಕ್ಕೆ ಹೊರಟಿದ್ದರು. ಮೂರು ಬಸ್ಸುಗಳಲ್ಲಿ ಒಂದು ಬಸ್ಸಿಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದಿದೆ. ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ನ್ಯಾಯ‌ಮೂರ್ತಿ ಎಜೆ ಸದಾಶಿವ ಆಯೋಗದ ವರದಿ ಜಾರಿಗೆ ನಿರ್ಧಾರ ತೆಗೆದುಕೊಳ್ಳುವಂತೆ ಆಗ್ರಹಿಸಲು ಬೆಳಗಾವಿಗೆ ತೆರಳುತ್ತಿದ್ದ ಮಾದಿಗ ದಂಡೋರ ಸಮಿತಿ ಸದಸ್ಯರ ಬಸ್​ಗೆ ಅಪಘಾತವಾಗಿದೆ. ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ನವದೆಹಲಿ: ಜಮ್ಮು ಮತ್ತು ಕಾಶ್ಮೀರಕ್ಕೆ (Jammu Kashmir) ಸಂವಿಧಾನದ 370ನೇ ವಿಧಿಯ (Article 370) ಅಡಿ ನೀಡಲಾಗಿದ್ದ ವಿಶೇಷ ಸ್ಥಾನಮಾನವನ್ನು (Special Status) ರದ್ದು ಪಡಿಸಿದ ಕೇಂದ್ರ ಸರ್ಕಾರ ನಿರ್ಧಾರ ಸರಿಯಾಗಿದೆ ಎಂದು ಸುಪ್ರೀಂಕೋರ್ಟ್‌ (Supreme Court) ಐತಿಹಾಸಿಕ ತೀರ್ಪು ನೀಡಿದೆ. ಅಷ್ಟೇ ಅಲ್ಲದೇ 2024ರ ಸೆಪ್ಟೆಂಬರ್‌ 30ರ ಒಳಗಡೆ ಒಳಗಡೆ ವಿಧಾನಸಭಾ ಚುನಾವಣೆ ನಡೆಸಬೇಕೆಂದು ಚುನಾವಣಾ ಆಯೋಗಕ್ಕೆ ಸೂಚಿಸಿದೆ. ವಿಶೇಷ ಸ್ಥಾನವನ್ನು ರದ್ದು ಪಡಿಸಿದ ಕೇಂದ್ರ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ಮುಕ್ತಾಯಗೊಳಿಸಿದ್ದ  ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ಸಂಜೀವ್ ಖನ್ನಾ, ಬಿಆರ್ ಗವಾಯಿ ಮತ್ತು ಸೂರ್ಯಕಾಂತ್ ಅವರನ್ನೊಳಗೊಂಡ ಐದು ನ್ಯಾಯಾಧೀಶರ ಸಂವಿಧಾನ ಪೀಠದಿಂದ ಸರ್ವಾನುಮತದ ತೀರ್ಪು ಪ್ರಕಟವಾಗಿದೆ. ತೀರ್ಪು ಓದಿದ ಸಿಜೆಐ ಚಂದ್ರಚೂಡ್‌ ಅವರು, ಜಮ್ಮು ಕಾಶ್ಮೀರಕ್ಕೆ ನೀಡಲಾದ ವಿಶೇಷ ಸ್ಥಾನಮಾನ ತಾತ್ಕಾಲಿಕ. ಭಾರತದ ಸಂವಿಧಾನದ 1 ಮತ್ತು 370 ನೇ ವಿಧಿಗಳಿಂದ ಸ್ಪಷ್ಟವಾದಂತೆ ಜಮ್ಮು ಮತ್ತು ಕಾಶ್ಮೀರವು ಭಾರತದ ಅವಿಭಾಜ್ಯ ಅಂಗವಾಗಿದೆ.…

Read More

ಹುಬ್ಬಳ್ಳಿ; ಮಾಜಿ ಮುಖ್ಯಮಂತ್ರಿಗಳು ಹಾಗೂ ವಿಧಾನ ಪರಿಷತ್ ಸದಸ್ಯರಾದ ಜಗದೀಶ ಶೆಟ್ಟರ ರವರ ಹುಟ್ಟು ಹಬ್ಬದ ಅಂಗವಾಗಿ ಇಂದು ಬೆಂಗೇರಿಯ ಖಾದಿ ಗ್ರಾಮೋದ್ಯೋಗ ಸಭಾಭವನದಲ್ಲಿ ಕಾಂಗ್ರೆಸ್ ಸಮಿತಿಯ ಜಿಲ್ಲಾ ಕಾರ್ಯದರ್ಶಿಯಾದ ಹಟೇಲಸಾಬ (ಕಲಂದರ್) ಮುಲ್ಲಾ ನೇತೃತ್ವದಲ್ಲಿ ಉಚಿತ ಕಣ್ಣು ತಪಾಸಣೆ ಮತ್ತು ಶಸ್ತ್ರ ಚಿಕಿತ್ಸೆ ಶಿಬಿರದ ಉದ್ಘಾಟನಾ ಕಾರ್ಯಕ್ರಮವನ್ನು ಮಾಜಿ ಮುಖ್ಯಮಂತ್ರಿಗಳಾದ ಜಗದೀಶ ಶೆಟ್ಟರ್ ಉದ್ಘಾಟನೆ ಮಾಡಿದರು. ಮಾಜಿ ಸಂಸದ ಸನದಿ, ಮಾಜಿ ಸಚಿವರಾದ ಎ.ಎಂ. ಹಿಂಡಸಗೇರಿಯವರು, ಶಾಕೀರ ಸನದಿ , ಪಾರಸಮಲ್ ಜೈನ್,ದೊಡ್ಡಮನಿ, ಮಲ್ಲಿಕಾರ್ಜುನ ಸಾವಕಾರ, ನಾಗೇಶ ಕಲಬುರ್ಗಿ, ಹೂವಪ್ಪ ದಾಯಗೋಡಿ, ಪಾಲಿಕೆ ಸದಸ್ಯ ಸಂದೀಲಕುಮಾರ , ಸಂಕಲ್ಪ ಶೆಟ್ಟರ , ವಿರೂಪಾಕ್ಷಪ್ಪ ರಾಯನಗೌಡ , ಸುನೀಲ್ ಮಠಪತಿ, ಅಬ್ದುಲ್ ಗಣಿ ವಲಿಅಹ್ಮದ್, ಮಕ್ತು ಜಾಲೆಗಾರ್, ಪ್ರಕಾಶ್ಜಾ ದವ್, ಶ್ರೀಮತಿ ಕಲಾವತಿ,ಭಾರತಿ ಟಪಾಲ, ನಬಿಸಾಬ್ ನದಾಫ್, ಶಂಕರ್ ವಡ್ಡಟ್ಟಿ, ಬಸವರಾಜ್ ಮ್ಯಾಗಡಿ, ಹಾಗೂ ಪಕ್ಷದ ಪ್ರಮುಖರು ಬೆಂಗೇರಿಯಲ್ಲಿರುವ ಸ್ಥಳೀಯರು ಗುರುಹಿರಿಯರು ಉಪಸ್ಥಿತರಿದ್ದರು.

Read More

ಬಾಗಲಕೋಟೆ: ಸಂತೆ ಮೇಳ ಮಕ್ಕಳಲ್ಲಿ ಮಾರುಕಟ್ಟೆ ಜ್ಞಾನ, ಹಣಕಾಸು ಜ್ಞಾನ, ವ್ಯವಹಾರ ಜ್ಞಾನ ಬೆಳೆಸಿ ಮಕ್ಕಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಶಿಕ್ಷಣ ಸಂಯೋಜಕ ಶ್ರೀಶೈಲ ಬುರ್ಲಿ ಅಭಿಪ್ರಾಯ ಪಟ್ಟರು. ಬಾಗಲಕೋಟೆ ಜಿಲ್ಲೆಯ ರಬಕವಿ ಬನಹಟ್ಟಿ ತಾಲೂಕಿನ ಹೊಸೂರ ಶ್ರೀ ಸಿದ್ಧಾರೂಢ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಿದ್ದ ಮಕ್ಕಳ ಸಂತೆ ಮೇಳ ಕಾರ್ಯಕ್ರಮ ನಡೆಯಿತು. ಕಲಿಕೆ ಯಶಸ್ವಿಯಾಗಲು ಚಟುವಟಿಕೆಗಳು ಪೂರಕ. ಸಂತಸಮಯ ಕಲಿಕೆಯಿಂದ ಕೌಶಲ್ಯ, ಜ್ಞಾನ ಬೆಳೆದು ಮಕ್ಕಳ ಸಮಗ್ರ ವ್ಯಕ್ತಿತ್ವ ವಿಕಾಸವಾಗಲು ಸಹಕಾರಿಯಾಗಿದೆ. ಇಂಥ ಚಟುವಟಿಕೆಗಳನ್ನು ಮತ್ತಷ್ಟು ಕೈಗೊಳ್ಳುವ ಮೂಲಕ ಮಕ್ಕಳ ಪ್ರಗತಿಗೆ ಶಿಕ್ಷಕರು ನಿರಂತರ ಪ್ರಯತ್ನ ಮಾಡಬೇಕು ಎಂದು ಕರೆ ಕೊಟ್ಟರು. ಪರಮಾನಂದ ಸ್ವಾಮೀಜಿ ಮಾತನಾಡಿ ಬರೀ ಪುಸ್ತಕೀಯ ಜ್ಞಾನ ಬೆಳೆಸಿ ಪುಸ್ತಕದ ಬದನೆಕಾಯಿ ಮಾಡುವುದು ಬೇಡ. ಇಂದಿನ ಮಕ್ಕಳು ಬಹಳ ಕ್ರಿಯಾಶೀಲರು, ಸೃಜನಶೀಲರು. ಜಗತ್ತಿನ ಸವಾಲುಗಳನ್ನು ಎದುರಿಸಲು ಅವರನ್ನು ಸಿದ್ದಗೊಳಿಸಬೇಕು ಎಂದರು. ಮಕ್ಕಳು ವಿವಿಧ ಬಗೆಯ ತರಕಾರಿ, ಹಣ್ಣು,, ತೆಂಗಿನಕಾಯಿ, ತಿನುಸುಗಳು, ಪಾನಿಪುರಿ, ಬಜ್ಜಿ, ಬಡಂಗ, ಮಿಸಳ,…

Read More

ತುಮಕೂರು: ಮೊಂಬತ್ತಿ ಬೆಳಕಿನಲ್ಲಿ ಬೈಕ್‌ಗೆ ಪೆಟ್ರೋಲ್ ಹಾಕುವಾಗ ಪೆಟ್ರೊಲ್‌ ಬಾಟಲ್‌ ಕೈತಪ್ಪಿ ಸ್ಫೋಟಗೊಂಡ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದ ಸೌಂದರ್ಯ (16) ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ. ಕುಣಿಗಲ್ ತಾಲೂಕು ಎಡೆಯೂರು ಹೋಬಳಿಯ ಕಟ್ಟಿಗೇಹಳ್ಳಿ ಗ್ರಾಮದ  ಲಕ್ಷ್ಮಣರವರ ಮಗಳು ಸೌಂದರ್ಯ ಪಟ್ಟಣದ ಮಹಾತ್ಮ ಗಾಂಧಿ ಪದವಿ ಪೂರ್ವ ಕಾಲೇಜಿನಲ್ಲಿ ಹತ್ತನೇ ತರಗತಿ ಓದುತ್ತಿದ್ದಳು.  ಶುಕ್ರವಾರ ರಾತ್ರಿ ಮನೆಯ ಅಂಗಡಿಯಲ್ಲಿ ವಿದ್ಯುತ್ ಇಲ್ಲದಾಗ ಮೊಂಬತ್ತಿ ಹಚ್ಚಿ ಇಡಲಾಗಿತ್ತು. ಎದುರಿನಲ್ಲಿಯೇ ಬೈಕ್‌ಗೆ ಪೆಟ್ರೋಲ್ ಹಾಕುವಾಗ ವಿದ್ಯುತ್ ಬಂದಾಗ ಗಾಬರಿಗೊಂಡ ಸೌಂದರ್ಯ ಪೆಟ್ರೋಲ್ ಬಾಟಲಿ ಕೈ ಬಿಟ್ಟಿದ್ದಾಳೆ. ಈ ವೇಳೆ ಪೆಟ್ರೋಲ್ ಚೆಲ್ಲಿ ಮೇಣದಬತ್ತಿಯ ಕಿಡಿಯಿಂದ ಬೆಂಕಿ ಹತ್ತಿಕೊಂಡು ಅಂಗಡಿ ಸಾಮಾಗ್ರಿ ಆಹುತಿಯಾಗಿತ್ತು. ಗಾಯಗೊಂಡಿದ್ದ ಸೌಂದರ್ಯಳನ್ನು ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಸೌಂದರ್ಯ ಮೃತಪಟ್ಟಿದ್ದು, ಅಮೃತೂರು ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

Read More

ನವದೆಹಲಿ: ಇಂಡಿಯಾ ಒಕ್ಕೂಟದ (INDIA Bloc) ನಾಲ್ಕನೇ ಸಭೆಯನ್ನು ಮತ್ತೆ ಮುಂದೂಡಲಾಗಿದ್ದು, ಡಿಸೆಂಬರ್ 19 ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ (Jai Ram Ramesh) ಹೇಳಿದ್ದಾರೆ. ಈ ಹಿಂದೆ ಡಿಸೆಂಬರ್ 17 ರಂದು ಸಭೆ ನಿಗದಿಯಾಗಿತ್ತು. ಆದರೆ ಇದೀಗ ಮತ್ತೆ ಈ ಸಭೆಯನ್ನು ಮುಂದೂಡಿದ್ದು, ಇದಕ್ಕೆ ಕಾರಣ ತಿಳಿದುಬಂದಿಲ್ಲ. ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್, ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೆನ್ ಮತ್ತು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಸೇರಿದಂತೆ ಮೈತ್ರಿಕೂಟದ ಉನ್ನತ ನಾಯಕರು ನಿರ್ಧರಿಸಿದ ಹಿನ್ನೆಲೆಯಲ್ಲಿ ಡಿ.6ರಂದು ನಿಗದಿಯಾಗಿದ್ದ ಸಭೆಯನ್ನು ಡಿ. 17 ಕ್ಕೆ ಮುಂದೂಡಲಾಗಿತ್ತು. https://ainlivenews.com/representative-traveled-330-km-on-a-rented-bike-and-went-to-the-assembly/ ಮಧ್ಯಪ್ರದೇಶ, ಛತ್ತೀಸ್‌ಗಢ, ತೆಲಂಗಾಣ ಮತ್ತು ರಾಜಸ್ಥಾನಗಳ ಚುನಾವಣಾ ಫಲಿತಾಂಶ ಪ್ರಕಟವಾದ ದಿನವೇ ಡಿಸೆಂಬರ್ 6 ರಂದು ಕಾಂಗ್ರೆಸ್ ಸಭೆಯನ್ನು (Comgress Meeting) ಕರೆದಿತ್ತು . ಆದರೆ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸುತ್ತಿದ್ದಂತೆಯೇ…

Read More

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ಭದ್ರಾವತಿಯಲ್ಲಿ ರಾಜಕೀಯ ಸಂಘರ್ಷ ಆರಂಭವಾಗಿದೆಯಾ? ಹೀಗೆ ಪ್ರಶ್ನೆ ಮೂಡುವುದಕ್ಕೆ ಕಾರಣವಾಗಿರುವುದು ನಿನ್ನೆ ಬಿಜೆಪಿ ಕಾರ್ಯಕರ್ತನ ಮೇಲೆ ನಡೆದಿರುವ ಮಾರಣಾಂತಿಕ ಹಲ್ಲೆ ಪ್ರಕರಣ.. ಹೌದು  ಶಾಸಕ ಸಂಗಮೇಶ್​ ಹಾಗೂ ಅವರ ಪುತ್ರನ ವಿರುದ್ಧ ಫೇಸ್​ಬುಕ್ ಫೋಸ್ಟ್​ನ್ನ ಗೋಕುಲಕೃಷ್ಣ ಪೋಸ್ಟ್ ಮಾಡಿದ್ದರು. ಅದರ ಬೆನ್ನಲ್ಲೆ ದುಷ್ಕರ್ಮಿಗಳು  ಗೋಕುಲ್​ ರವರಿಗೆ ಸೇರಿದ್ದ ಕಾರನ್ನ ಲಟ್ಟಾದಿಂದ ಹೊಡೆದು ಜಖಂಗೊಳಿಸಿದ್ದರು. ಇನ್ನೇನು ಇಲ್ಲಿಗೆ ಮುಗಿಯಿತು ಎನ್ನುವಷ್ಟರಲ್ಲಿ ನಿನ್ನೆ ರಾತ್ರಿ ಗೋಕುಲ್​ರವರ ಮೇಲೆ ಹಲ್ಲೆ ಮಾಡಲಾಗಿದೆ. ಈ ಬಗ್ಗೆ ಬಿಜೆಪಿ ಮುಖಂಡರು ತಮ್ಮ ಸೋಶಿಯಲ್ ಮೀಡಿಯಾಗಳಲ್ಲಿ ಮಾಹಿತಿ ಹಂಚಿಕೊಳ್ಳುತ್ತಿದ್ದು, ನಡೆದ ಘಟನೆಯ ಬಗ್ಗೆ ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ.  ಕಾರು ಜಖಂಗೊಂಡ ಸಂದರ್ಭದಲ್ಲಿ ಗೋಕುಲ್ ಮನೆಯಲ್ಲಿ ಇರಲಿಲ್ಲ. ಬೇರೆಡೆಗೆ ಹೋಗಿದ್ದ ಅವರು ಸಂಜೆ ಭದ್ರಾವತಿಗೆ ವಾಪಸ್ ಆಗಿದ್ದಾರೆ. ಅಲ್ಲದೆ ಊಟ ತೆಗೆದುಕೊಳ್ಳಲು ಬಿ.ಹೆಚ್​.ರೋಡ್​ನಲ್ಲಿರುವ ಕಾಂಚನ್​ ಹೋಟೆಲ್​ ಹೋಗಿದ್ದರು ಎನ್ನಲಾಗಿದೆ. ಈ ವೇಳೆ ಅಲ್ಲಿಗೆ ಬಂದು ದುಷ್ಕರ್ಮಿಗಳು ಅವರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬುದು ಆರೋಪ. ಇನ್ನೂ ಪ್ರಕರಣ…

Read More