Author: AIN Author

ರಾಯಚೂರು:- ಕಾಂಗ್ರೆಸ್‌ನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಎನ್ ಎಸ್ ಬೋಸರಾಜ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್‌ನಲ್ಲಾಗಲಿ, ಕಾಂಗ್ರೆಸ್‌ ನಾಯಕರಲ್ಲಾಗಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯಗಳಿಲ್ಲ ಎಂದರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮೇಲೆ ಶಾಸಕ ಬಿ.ಕೆ.ಹರಿಪ್ರಸಾದ್‌ ಅಸಮಾಧಾನಗೊಂಡಿಲ್ಲ. ಅವರ ಸಮಾಜದ ಕಾರ್ಯಕ್ರಮಕ್ಕೆ ಸಿಎಂ, ಸಚಿವರು ಹಾಗೂ ಶಾಸಕರನ್ನು ಕರೆಯಲಾಗಿದೆ. ಸಮಾರಂಭಕ್ಕೆ ಹೋಗುವುದಿಲ್ಲವೆಂದು ಹರಿಪ್ರಸಾದ್‌ ನುಡಿದಿರುವುದು ಅವರ ವೈಯಕ್ತಿಕ ವಿಚಾರವಾಗಿದೆ. ಅದನ್ನು ಪಕ್ಷಕ್ಕೆ ತಳಕು ಹಾಕುವ ಅಗತ್ಯವಿಲ್ಲ ಎಂದರು. ಕಾಂಗ್ರೆಸ್‌ ಸರ್ಕಾರದ ಭ್ರಷ್ಟಾಚಾರ ಕುರಿತ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿಕೆಗೆ ಪ್ರತಿಕ್ರಿಯಿಸಿ, ದೇಶದಲ್ಲಿ ಪ್ರಜಾಸ್ವಾಮ್ಯದ ವ್ಯವಸ್ಥೆಯನ್ನು ಹದಗೆಡಿಸಿದ್ದು ಬಿಜೆಪಿ. ಕರ್ನಾಟಕ, ಮಧ್ಯಪ್ರದೇಶ, ಮಹಾರಾಷ್ಟ್ರದಲ್ಲಿ ಸಾವಿರಾರು ಕೋಟಿ ಖರ್ಚು ಮಾಡಿ ಶಾಸಕರನ್ನು ಖರೀದಿ ಮಾಡಿ ಆಡಳಿತ ನಡೆಸಿದ್ದಾರೆ. ಅದಕ್ಕೆ ಪ್ರಧಾನಿ ಮೋದಿ, ಅಮಿತ್ ಶಾ ಮನೆಯಿಂದ ಹಣ ತಂದಿದ್ದಾರಾ?. ಇದನ್ನು ಜೋಶಿಯವರು ಅರ್ಥ ಮಾಡಿಕೊಂಡು ಮಾತನಾಡಬೇಕು ಎಂದು ತಿರುಗೇಟು ನೀಡಿದರು.

Read More

ವಾಷಿಂಗ್ಟನ್‌: ವೆರಿಫೈಡ್‌ ಟ್ವಿಟ್ಟರ್‌ ಖಾತೆಗಳನ್ನು (Verified Account) ಹೊಂದಿರುವ ಕಂಟೆಂಟ್‌ ಕ್ರಿಯೇಟರ್ಸ್‌ಗಳಿಗೆ ಜಾಹೀರಾತು ಆದಾಯದಲ್ಲಿ ಹಣ ನೀಡುವುದಾಗಿ ಟ್ವಿಟ್ಟರ್‌ ಸಂಸ್ಥೆ ಘೋಷಣೆ ಮಾಡಿದೆ. ತಮ್ಮ ರಿಪ್ಲೈಗಳಲ್ಲಿ ಪ್ರದರ್ಶಿಸಲಾದ ಜಾಹೀರಾತು ಆದಾಯದಲ್ಲಿ ಕಟೆಂಟ್‌ ಕ್ರಿಯೇಟರ್ಸ್‌ಗಳು (Content Creators) ಪಾಲನ್ನು ಪಡೆದುಕೊಳ್ಳಲಿದ್ದಾರೆ. ಈ ಸೌಲಭ್ಯಕ್ಕೆ ಅರ್ಹರಾಗಲು ಅವರು ಕಳೆದ 3 ತಿಂಗಳಲ್ಲಿ ತಮ್ಮ ಪೋಸ್ಟ್‌ಗಳಿಗೆ ಕನಿಷ್ಠ 50 ಲಕ್ಷ ಇಂಪ್ರೆಶನ್‌ಗಳನ್ನ ಒಳಗೊಂಡಿರಬೇಕು. ಜೊತೆಗೆ ಸ್ಟ್ರೈಪ್‌ ಪೇಮೆಂಟ್‌ ಅಕೌಂಟ್‌ ಅನ್ನು ಸಹ ಹೊಂದಿರಬೇಕಾಗುತ್ತದೆ ಎಂದು ಟ್ವಿಟ್ಟರ್‌ ಸಂಸ್ಥೆ ತಿಳಿಸಿದೆ. ಮಾರ್ಕ್‌ ಜುಕರ್‌ಬರ್ಗ್‌ ಒಡೆತನದ ಮೆಟಾ ಸಂಸ್ಥೆ ಟ್ವಿಟ್ಟರ್‌ಗೆ ಸೆಡ್ಡು ಹೊಡೆಯಲು ಥ್ರೆಡ್ಸ್‌ ಅಪ್ಲಿಕೇಶನ್‌ ಅನ್ನು ಬಿಡುಗಡೆ ಮಾಡಿದೆ. ಈ ಬೆನ್ನಲ್ಲೇ ಟ್ವಿಟ್ಟರ್‌ ಹೆಚ್ಚು ಕಂಟೆಂಟ್‌ ಕ್ರಿಯೇಟರ್ಸ್‌ಗಳನ್ನ ತನ್ನತ್ತ ಸೆಳೆಯಲು ಪ್ಲ್ಯಾನ್‌ ಮಾಡಿದ್ದು, ಈ ಆಫರ್‌ ನೀಡಿದೆ. ಈ ನಡುವೆ ವಿಶ್ವದ ಶ್ರೀಮಂತ ಉದ್ಯಮಿಯಾಗಿರುವ ಎಲೋನ್ ಮಸ್ಕ್ (Elon Musk) ಹೊಸ ಕೃತಕ ಬುದ್ಧಿಮತ್ತೆಯ ಸ್ಟಾರ್ಟ್ ಅಪ್ ‘ಎಕ್ಸ್ಎಐ’ (xAI) ಅನ್ನು ಪ್ರಾರಂಭಿಸಿದ್ದಾರೆ. ಇತ್ತೀಚೆಗೆ ಎಐ (AI) ಲೋಕದಲ್ಲಿ…

Read More

ಗೋಡಂಬಿಯನ್ನು ಹುರಿದು, ಖಾದ್ಯಗಳಿಗೆ ಬಳಕೆ ಮಾಡಲಾಗುತ್ತದೆ. ಗೋಡಂಬಿ ಹಾಕಿದ ಖಾದ್ಯದ ರುಚಿಯು ಅದ್ಭುತವಾಗಿರುತ್ತದೆ. ಹಬ್ಬಗಳ ಸಂದರ್ಭದಲ್ಲಿ ಹೆಚ್ಚಾಗಿ ಗೋಡಂಬಿಯನ್ನು ಬಳಕೆ ಮಾಡಲಾಗುತ್ತದೆ. ಇದರಿಂದ ಬರ್ಫಿ ಕೂಡ ತಯಾರು ಮಾಡುವರು.  ಗೋಡಂಬಿ ಬೀಜದಂತೆ ಅದರ ಹಣ್ಣು ಕೂಡ ರುಚಿಕರ ಹಾಗೂ ಅದರಲ್ಲೂ ಹಲವಾರು ರೀತಿಯ ಪೋಷಕಾಂಶಗಳು ಇವೆ. ಗೋಡಂಬಿಯನ್ನು ಅತಿಯಾಗಿ ತಿಂದರೆ ಅದು ಕೊಬ್ಬು ಹೆಚ್ಚಿಸುತ್ತದೆ ಎಂದು ಹೇಳುವರು. ಆದರೆ ಗೋಡಂಬಿಯಿಂದ ಸಿಗುವ ಆರೋಗ್ಯ ಲಾಭಗಳ ಬಗ್ಗೆ ತಿಳಿಯಿರಿ. ಹೃದಯದ ಆರೋಗ್ಯ ಗೋಡಂಬಿ ಸೇವನೆ ಮಾಡಿದರೆ ಅದರಿಂದ ಹೃದಯದ ಕೆಲವು ಸಮಸ್ಯೆಗಳು ಸೇರಿದಂತೆ ವಿವಿಧ ರೀತಿಯ ಕಾಯಿಲೆಗಳನ್ನು ದೂರವಿಡುತ್ತದೆ ಎಂದು ಅಧ್ಯಯನಗಳು ಹೇಳಿವೆ. ಇದರಲ್ಲಿ ಕೊಲೆಸ್ಟ್ರಾಲ್ ನ್ನು ಕಡಿಮೆ ಮಾಡುವಂತಹ ಗುಣವಿದ್ದು, ಆರೋಗ್ಯಕಾರಿ ಆಹಾರ ಕ್ರಮಕ್ಕೆ ಪರಿಣಾಮಕಾರಿ ಮತ್ತು ಆಕ್ಸಿಡೇಟಿವ್ ಒತ್ತಡ, ಉರಿಯೂತ ಮತ್ತು ನಾಳೀಯ ಪ್ರತಿಕ್ರಿಯಾತ್ಮಕತೆ ಮೇಲೆ ಪರಿಣಾಮ ಬೀರುವುದು. ಗೋಡಂಬಿಯು ಉತ್ತಮ ಕೊಲೆಸ್ಟ್ರಾಲ್ ನ್ನು ಹೆಚ್ಚಿಸುವುದು ಮತ್ತು ಕೆಟ್ಟ ಕೊಲೆಸ್ಟ್ರಾಲ್ ಕಡಿಮೆ ಮಾಡುವುದು. ರಕ್ತದ ಕಾಯಿಲೆ ತಡೆಯುವುದು ಗೋಡಂಬಿಯನ್ನು ಮಿತ…

Read More

ಸೂರ್ಯೋದಯ: 06.31 AM, ಸೂರ್ಯಾಸ್ತ : 05.54 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ತ್ರಯೋದಶಿ 07:10 AM ತನಕ ನಂತರ ಚತುರ್ದಶಿ ನಕ್ಷತ್ರ: ಇವತ್ತು ವಿಶಾಖ 12:14 PM ತನಕ ನಂತರ ಅನುರಾಧ ಯೋಗ: ಇವತ್ತು ಸುಕರ್ಮಾ08:59 PM ತನಕ ನಂತರ ಧೃತಿ ಕರಣ: ಇವತ್ತು ವಣಿಜ 07:10 AM ತನಕ ನಂತರ ವಿಷ್ಟಿ 06:52 PM ತನಕ ನಂತರ ಶಕುನಿ ರಾಹು ಕಾಲ: 07:30 ನಿಂದ 09:00 ವರೆಗೂ ಯಮಗಂಡ: 10:30 ನಿಂದ 12:00 ವರೆಗೂ ಗುಳಿಕ ಕಾಲ: 12:00 ನಿಂದ 01:30 ವರೆಗೂ ಅಮೃತಕಾಲ: 03.17 AM to 04.54 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:47 ನಿಂದ ಮ.12:31 ವರೆಗೂ ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ. “ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು” ಸೋಮಶೇಖರ್ ಗುರೂಜಿB.Sc ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ,…

Read More

ದೇಹದಿಂದ ಕೆಟ್ಟ ಕೊಲೆಸ್ಟ್ರಾಲ್ ಹೊರಹಾಕಲು ಚಳಿಗಾಲದಲ್ಲಿ ಸಾಕಷ್ಟು ಪ್ರಮಾಣದಲ್ಲಿ ನಾವು ಕೆಳಗೆ ಹೇಳುತ್ತಿರುವ ಉಂಡೆ ಸೇವಿಸುತ್ತಾ ಬಂದ್ರೆ ಪ್ರಯೋಜನಕಾರಿ ಆಗಲಿದೆ. ಅಗಸೆಬೀಜದ ಲಡ್ಡು ಸೇವನೆಯಿಂದ ಚಳಿಗಾಲದ ಹಲವು ರೀತಿಯ ಸಮಸ್ಯೆಗಳು ನಿವಾರಣೆಯಾಗುತ್ತವೆ. ಅಗಸೆಬೀಜವು ಒಮೆಗಾ -3 ಕೊಬ್ಬಿನಾಮ್ಲಗಳು ಮತ್ತು ಅನೇಕ ಅಗತ್ಯ ಜೀವಸತ್ವಗಳನ್ನು ಒಳಗೊಂಡಿರುವ ಬೀಜಗಳಾಗಿವೆ. ಅಗಸೆ ಬೀಜದ ಲಡ್ಡು ಮಾಡುವ ಪಾಕವಿಧಾನ ಅಗತ್ಯ ಪದಾರ್ಥಗಳು ಅಗಸೆಬೀಜ – 500 ಗ್ರಾಂ ಮೆಂತ್ಯ ಬೀಜಗಳು – 50 ಗ್ರಾಂ ಅಕ್ಕಿ ಹಿಟ್ಟು – 1 ಕಪ್ ಬೆಲ್ಲ – 500 ಗ್ರಾಂ ಒಣ ಶುಂಠಿ – 50 ಗ್ರಾಂ ದೇಸಿ ತುಪ್ಪ – 150 ಗ್ರಾಂ ಒಣದ್ರಾಕ್ಷಿ – 50 ಗ್ರಾಂ ಗೋಡಂಬಿ – 50 ಗ್ರಾಂ ಒಣ ತೆಂಗಿನಕಾಯಿ – 50 ಗ್ರಾಂ ತಯಾರಿಸುವ ವಿಧಾನ >> ಅಗಸೆಬೀಜದ ಲಡ್ಡು ತಯಾರಿಸಲು, ಮೊದಲು ಅಗಸೆಬೀಜಗಳನ್ನು ಚೆನ್ನಾಗಿ ಹುರಿಯಿರಿ. >> ಇದರ ನಂತರ, ಅದನ್ನು ತಣ್ಣಗಾಗಿಸಿ ಮತ್ತು ಒರಟಾಗಿ ಪುಡಿಮಾಡಿ. ಈಗ…

Read More

ಹಾವೇರಿ:- ವಿವಿಧ‌ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಬಿಸಿ ಊಟ ಕಾರ್ಯಕರ್ತೆಯರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಮೂರುನೇ ದಿನಕ್ಕೆ ಕಾಲ್ಲಿಟ್ಟಿದೆ‌. ಈ ನಡುವೆ ಧರಣಿ ಸತ್ಯಾಗ್ರಹದಲ್ಲಿ ತೊಡಗಿಕೊಂಡಿದ್ದ ಮಹಿಳೆ ಅಸ್ವಸ್ತಗೊಂಡಿದ್ದು,ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ‌ ನೀಡಲಾಗುತ್ತಿದೆ. ಮೂರು ದಿನದಿಂದ ಹೋರಾಟದಲ್ಲಿ ಪಾಲ್ಗೊಂಡಿದ್ದ ಲಲಿತಾ ಸುರೇಶ ಮೋಟೇಬೆನ್ನೂರ ಎಂಬ ಮಹಿಳೆ ಅಸ್ವಸ್ಥಗೊಂಡಿದ್ದಾಳೆ. ಮಹಿಳರ ಅಸ್ವಸ್ಥಗೊಂಡರು ಆರೋಗ್ಯ ವಿಚಾರಿಸದ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಈ ನಡೆ ಖಂಡಿಸಿ ಧರಣಿ ಸತ್ಯಾಗ್ರಹ ಮುಂದುವರಿದಿದೆ.

Read More

ಮೈಸೂರು :- ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಪತನವಾಗಲ್ಲ ಎಂದು ಹೆಚ್​ಕೆ ಪಾಟೀಲ್ ಹೇಳಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುವುದಿಲ್ಲ ಎಂದು ಹೇಳುವ ಮೂಲಕ ಸರ್ಕಾರ ಪತನದ ಬಗ್ಗೆ ಮಾಜಿ ಸಿಎಂ ಹೆಚ್​.ಡಿ. ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಟಾಂಗ್ ಕೊಟ್ಟಿರುವ ಅವರು, ನಾವು ಗಟ್ಟಿಯಾಗಿದ್ದೇವೆ, ಹೀಗಾಗಿ ನಮ್ಮ ಸರ್ಕಾರ ಪತನವಾಗುವುದಿಲ್ಲ ಎಂದರು. ಹೆಚ್​.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಈಗ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಹೇಳಿಕೆ ನೀಡುವ ಮೂಲಕ ಸರ್ಕಾರವನ್ನು ಅಲುಗಾಡಿಸಲು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಎಂಎಲ್​ಸಿ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹೆಚ್​ಕೆ ಪಾಟೀಲ್, ಎಂಎಲ್​ಸಿ ಹರಿಪ್ರಸಾದ್ ನೀಡಿರುವ ಹೇಳಿಕೆಯನ್ನು ನಾನು ನೋಡಿಲ್ಲ. ಕೆಲವೊಮ್ಮೆ ಮಾಧ್ಯಮಗಳೇ ಇಂತಹ ವಿಚಾರವನ್ನ ಪ್ರಸ್ತಾಪ ಮಾಡುತ್ತವೆ. ಇದು ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದು ಹೇಳುವ ಮೂಲಕ ಮಾಧ್ಯಮಗಳತ್ತ ಬೊಟ್ಟು ಮಾಡಿದರು.

Read More

ಹಾಸನ:- ದೇಶದ ಅಖಂಡತೆಗೆ ಧಕ್ಕೆ ತರುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ. ಮುಸ್ಲಿಂ ಸಮುದಾಯ ಅಭಿವೃದ್ಧಿಗೆ 10 ಸಾವಿರ ಕೋಟಿ ನೀಡುತ್ತೇನೆ ಎಂಬ ಹೇಳಿಕೆಗೆ ವಿಪಕ್ಷ ಶಾಸಕರು ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರ್ ಖಂಡ್ರೆ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಅಂತಾ ಮುಖ್ಯಮಂತ್ರಿಗಳು ಈಗಾಗಲೇ ಹೇಳಿದ್ದಾರೆ. ಈ ರಾಜ್ಯದಲ್ಲಿರುವ ಎಲ್ಲಾ ಸಮುದಾಯಗಳಿಗೂ ಸಾಮಾಜಿಕ ನ್ಯಾಯ, ಸಂವಿಧಾನ ಬದ್ಧ ಆಡಳಿತ ಕೊಡುತ್ತೇವೆ ಅಂತ ಹೇಳಿದ್ದಾರೆ, ಅದರಲ್ಲಿ ತಪ್ಪೇನಿದೆ ಎಂದರು. ಯಾರಿಗೂ ಅನ್ಯಾಯ ಮಾಡಲ್ಲ, ಬೇರೆಯವರ ರೀತಿ ಅವರಿಗೂ ಸಂಪೂರ್ಣವಾದಂತಹ ಹಕ್ಕಿದೆ. ನ್ಯಾಯಯುತವಾಗಿ ಏನು ಮಾಡಬೇಕು ಅದನ್ನು ಜಾರಿ ಮಾಡುತ್ತೇವೆ ಅಂತ ಹೇಳಿದ್ದಾರೆ. ನೀವು ಅದಕ್ಕೂ ಧೃವಿಕರಣ ಮಾಡುತ್ತೀರಿ, ಅದರಲ್ಲೂ ಜಾತಿ, ಧರ್ಮ ತರುತ್ತೀರಿ. ಬರೀ ಜಾತಿ ಜಾತಿಗಳಲ್ಲಿ, ಧರ್ಮ ಧರ್ಮಗಳಲ್ಲಿ ಒಡೆದಾಳುವ ನೀತಿಯನ್ನು ಅನುಸರಿಸಿ ಇಡೀ ಸಾಮರಸ್ಯ ಕದಡುತ್ತಿದ್ದೀರಿ. ಈ ದೇಶದ ಸಮಗ್ರತೆ, ಏಕತೆ, ಅಖಂಡತೆಗೆ ಧಕ್ಕೆ ತರುವ ಕೆಲಸ ಬಿಜೆಪಿ ಮಾಡುತ್ತಿದೆ. ಅದನ್ನು ಖಂಡಿಸುತ್ತೇನೆ…

Read More

ವಿಜಯಪುರ:- ಖೊಟ್ಟಿ ದಾಖಲೆ ಸೃಷ್ಟಿಸಿ ನೋಂದಣಿ ಮಾಡುವವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಸಚಿವ ಎಂ ಬಿ ಪಾಟೀಲ್​ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವಿಜಯಪುರ ನಗರ ಸೇರಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ನೋಂದಣಿ ಮಾಡುವ ಪ್ರಕರಣಗಳು ಕಂಡು ಬಂದಿದ್ದು, ಇಂತವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದರು. ಕೆಲವರು ಆಧಾರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಮೂಲಕ ಭೂ ಮಾಲೀಕರ ಹೆಸರಿನಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ನೋಂದಣಿ ಮಾಡಿರುವ 13 ಪ್ರಕರಣಗಳನ್ನು ಈಗಾಗಲೇ ದಾಖಲಿಸಲಾಗಿದೆ. ಖೊಟ್ಟಿ ದಾಖಲೆ ಸೃಷ್ಟಿ ಮಾಡಿ, ಆಸ್ತಿಗಳನ್ನು ನೋಂದಣಿ ಮಾಡುವ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಾಂಡ್ ರೈಟರ್ಸ್ ಗುರುತಿಸಿ, ಅವರ ಬಾಂಡ್ ರೈಟರ್ಸ್ ಲೈಸೆನ್ಸ್ ರದ್ದುಗೊಳಿಸವಂತೆ” ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಅದರಂತೆ ಉಪ ನೋಂದಣಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹಲವು ದಿನಗಳಿಂದ ಒಂದೇ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವರನ್ನು ಜಿಲ್ಲಾ ವ್ಯಾಪ್ತಿಯಿಂದ ತಾಲೂಕು ಮಟ್ಟಕ್ಕೆ ವರ್ಗಾವಣೆ ಮಾಡಿ, ತಾಲೂಕು…

Read More

ಕಡಲೆಕಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಲಾಭಗಳಿವೆ ಎನ್ನುವುದು ತಿಳಿಸುಕೊಳ್ಳೋಣ… ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಫೈಬರ್, ಜೀವಸತ್ವಗಳು (ಉದಾಹರಣೆಗೆ ಬಿ ಜೀವಸತ್ವಗಳು ಮತ್ತು ವಿಟಮಿನ್ ಇ), ಮತ್ತು ಖನಿಜಗಳು (ಮೆಗ್ನೀಸಿಯಮ್, ರಂಜಕ ಮತ್ತು ಪೊಟ್ಯಾಸಿಯಮ್) ಸೇರಿದಂತೆ ಕಡಲೆಕಾಯಿಗಳು ಅಗತ್ಯವಾದ ಪೋಷಕಾಂಶಗಳ ಉತ್ತಮ ಮೂಲವಾಗಿದೆ. 1) ಅತ್ಯಧಿಕ ನಾರಿನಾಂಶವನ್ನು ಒಳಗೊಂಡ ಕಾರಣ ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಊರಿಯೂತವನ್ನು ನಿಯಂತ್ರಣದಲ್ಲಿಡುತ್ತದೆ. 2) ಕಡಲೆಕಾಯಿಯಲ್ಲಿ ಪ್ರೋಟೀನ್, ಫೈಬರ್ ಮತ್ತು ಆರೋಗ್ಯಕರ ಕೊಬ್ಬಿನ ಸಂಯೋಜನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. 3) ಕಡಲೆಕಾಯಿಯು ಮೆಗ್ನೀಸಿಯಮ್, ಫಾಸ್ಫರಸ್ ಮತ್ತು ಇತರ ಖನಿಜಗಳ ಉತ್ತಮ ಮೂಲವಾಗಿದೆ, ಇದು ಬಲವಾದ ಮತ್ತು ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳುವಲ್ಲಿ ಸಹಾಯ ಮಾಡುತ್ತದೆ. 4) ಕಡಲೆಕಾಯಿಯಲ್ಲಿ ಬಹು ಉಪಯುಕ್ತವಾದ ಕೊಬ್ಬುಗಳು ಸಮೃದ್ಧವಾಗಿವೆ, ಅವು ಹೃದಯ-ಆರೋಗ್ಯ ಸಮಸ್ಯೆಗಳಿಗೆ ಉತ್ತಮ ಪರಿಹಾರವಾಗಿವೆ. ಅವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು. 5) ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಸಹಾಯ…

Read More