ಹಾವೇರಿ:- ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ, ಬಿಸಿ ಊಟ ಕಾರ್ಯಕರ್ತೆಯರು ನಡೆಸುತ್ತಿರುವ ಧರಣಿ ಸತ್ಯಾಗ್ರಹ ಮೂರುನೇ ದಿನಕ್ಕೆ ಕಾಲ್ಲಿಟ್ಟಿದೆ. ಈ ನಡುವೆ ಧರಣಿ ಸತ್ಯಾಗ್ರಹದಲ್ಲಿ ತೊಡಗಿಕೊಂಡಿದ್ದ ಮಹಿಳೆ ಅಸ್ವಸ್ತಗೊಂಡಿದ್ದು,ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೂರು ದಿನದಿಂದ ಹೋರಾಟದಲ್ಲಿ ಪಾಲ್ಗೊಂಡಿದ್ದ ಲಲಿತಾ ಸುರೇಶ ಮೋಟೇಬೆನ್ನೂರ ಎಂಬ ಮಹಿಳೆ ಅಸ್ವಸ್ಥಗೊಂಡಿದ್ದಾಳೆ. ಮಹಿಳರ ಅಸ್ವಸ್ಥಗೊಂಡರು ಆರೋಗ್ಯ ವಿಚಾರಿಸದ ಇಲಾಖೆ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಈ ನಡೆ ಖಂಡಿಸಿ ಧರಣಿ ಸತ್ಯಾಗ್ರಹ ಮುಂದುವರಿದಿದೆ.
Author: AIN Author
ಮೈಸೂರು :- ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಪತನವಾಗಲ್ಲ ಎಂದು ಹೆಚ್ಕೆ ಪಾಟೀಲ್ ಹೇಳಿದ್ದಾರೆ. ಲೋಕಸಭಾ ಚುನಾವಣೆ ಬಳಿಕ ಕಾಂಗ್ರೆಸ್ ಸರ್ಕಾರ ಪತನವಾಗುವುದಿಲ್ಲ ಎಂದು ಹೇಳುವ ಮೂಲಕ ಸರ್ಕಾರ ಪತನದ ಬಗ್ಗೆ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ನೀಡಿದ ಹೇಳಿಕೆಗೆ ಟಾಂಗ್ ಕೊಟ್ಟಿರುವ ಅವರು, ನಾವು ಗಟ್ಟಿಯಾಗಿದ್ದೇವೆ, ಹೀಗಾಗಿ ನಮ್ಮ ಸರ್ಕಾರ ಪತನವಾಗುವುದಿಲ್ಲ ಎಂದರು. ಹೆಚ್.ಡಿ.ಕುಮಾರಸ್ವಾಮಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು. ಈಗ ಬೆಳಗಾವಿಯ ಸುವರ್ಣಸೌಧದಲ್ಲಿ ಚಳಿಗಾಲದ ಅಧಿವೇಶನ ನಡೆಯುತ್ತಿದೆ. ಇಂತಹ ಸಂದರ್ಭದಲ್ಲಿ ಹೇಳಿಕೆ ನೀಡುವ ಮೂಲಕ ಸರ್ಕಾರವನ್ನು ಅಲುಗಾಡಿಸಲು ಮುಂದಾಗುತ್ತಿದ್ದಾರೆ ಎಂದು ಆರೋಪಿಸಿದರು. ಸಿಎಂ ಸಿದ್ದರಾಮಯ್ಯ ವಿರುದ್ಧ ಕಾಂಗ್ರೆಸ್ ಎಂಎಲ್ಸಿ ಬಿ.ಕೆ.ಹರಿಪ್ರಸಾದ್ ವಾಗ್ದಾಳಿ ನಡೆಸಿದ ವಿಚಾರವಾಗಿ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಹೆಚ್ಕೆ ಪಾಟೀಲ್, ಎಂಎಲ್ಸಿ ಹರಿಪ್ರಸಾದ್ ನೀಡಿರುವ ಹೇಳಿಕೆಯನ್ನು ನಾನು ನೋಡಿಲ್ಲ. ಕೆಲವೊಮ್ಮೆ ಮಾಧ್ಯಮಗಳೇ ಇಂತಹ ವಿಚಾರವನ್ನ ಪ್ರಸ್ತಾಪ ಮಾಡುತ್ತವೆ. ಇದು ಮಾಧ್ಯಮಗಳ ಸೃಷ್ಟಿ ಅಷ್ಟೇ ಎಂದು ಹೇಳುವ ಮೂಲಕ ಮಾಧ್ಯಮಗಳತ್ತ ಬೊಟ್ಟು ಮಾಡಿದರು.
ಹಾಸನ:- ದೇಶದ ಅಖಂಡತೆಗೆ ಧಕ್ಕೆ ತರುವ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಈಶ್ವರ್ ಖಂಡ್ರೆ ಹೇಳಿದ್ದಾರೆ. ಮುಸ್ಲಿಂ ಸಮುದಾಯ ಅಭಿವೃದ್ಧಿಗೆ 10 ಸಾವಿರ ಕೋಟಿ ನೀಡುತ್ತೇನೆ ಎಂಬ ಹೇಳಿಕೆಗೆ ವಿಪಕ್ಷ ಶಾಸಕರು ವಿರೋಧ ವ್ಯಕ್ತಪಡಿಸುತ್ತಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಈಶ್ವರ್ ಖಂಡ್ರೆ, ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಅಂತಾ ಮುಖ್ಯಮಂತ್ರಿಗಳು ಈಗಾಗಲೇ ಹೇಳಿದ್ದಾರೆ. ಈ ರಾಜ್ಯದಲ್ಲಿರುವ ಎಲ್ಲಾ ಸಮುದಾಯಗಳಿಗೂ ಸಾಮಾಜಿಕ ನ್ಯಾಯ, ಸಂವಿಧಾನ ಬದ್ಧ ಆಡಳಿತ ಕೊಡುತ್ತೇವೆ ಅಂತ ಹೇಳಿದ್ದಾರೆ, ಅದರಲ್ಲಿ ತಪ್ಪೇನಿದೆ ಎಂದರು. ಯಾರಿಗೂ ಅನ್ಯಾಯ ಮಾಡಲ್ಲ, ಬೇರೆಯವರ ರೀತಿ ಅವರಿಗೂ ಸಂಪೂರ್ಣವಾದಂತಹ ಹಕ್ಕಿದೆ. ನ್ಯಾಯಯುತವಾಗಿ ಏನು ಮಾಡಬೇಕು ಅದನ್ನು ಜಾರಿ ಮಾಡುತ್ತೇವೆ ಅಂತ ಹೇಳಿದ್ದಾರೆ. ನೀವು ಅದಕ್ಕೂ ಧೃವಿಕರಣ ಮಾಡುತ್ತೀರಿ, ಅದರಲ್ಲೂ ಜಾತಿ, ಧರ್ಮ ತರುತ್ತೀರಿ. ಬರೀ ಜಾತಿ ಜಾತಿಗಳಲ್ಲಿ, ಧರ್ಮ ಧರ್ಮಗಳಲ್ಲಿ ಒಡೆದಾಳುವ ನೀತಿಯನ್ನು ಅನುಸರಿಸಿ ಇಡೀ ಸಾಮರಸ್ಯ ಕದಡುತ್ತಿದ್ದೀರಿ. ಈ ದೇಶದ ಸಮಗ್ರತೆ, ಏಕತೆ, ಅಖಂಡತೆಗೆ ಧಕ್ಕೆ ತರುವ ಕೆಲಸ ಬಿಜೆಪಿ ಮಾಡುತ್ತಿದೆ. ಅದನ್ನು ಖಂಡಿಸುತ್ತೇನೆ…
ವಿಜಯಪುರ:- ಖೊಟ್ಟಿ ದಾಖಲೆ ಸೃಷ್ಟಿಸಿ ನೋಂದಣಿ ಮಾಡುವವರ ವಿರುದ್ಧ ಕ್ರಮಕೈಗೊಳ್ಳಿ ಎಂದು ಸಚಿವ ಎಂ ಬಿ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ವಿಜಯಪುರ ನಗರ ಸೇರಿದಂತೆ ಜಿಲ್ಲಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ನೋಂದಣಿ ಮಾಡುವ ಪ್ರಕರಣಗಳು ಕಂಡು ಬಂದಿದ್ದು, ಇಂತವರ ಮೇಲೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು” ಎಂದರು. ಕೆಲವರು ಆಧಾರ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ಮೂಲಕ ಭೂ ಮಾಲೀಕರ ಹೆಸರಿನಲ್ಲಿ ಖೊಟ್ಟಿ ದಾಖಲೆಗಳನ್ನು ಸೃಷ್ಟಿಸಿ ಆಸ್ತಿ ನೋಂದಣಿ ಮಾಡಿರುವ 13 ಪ್ರಕರಣಗಳನ್ನು ಈಗಾಗಲೇ ದಾಖಲಿಸಲಾಗಿದೆ. ಖೊಟ್ಟಿ ದಾಖಲೆ ಸೃಷ್ಟಿ ಮಾಡಿ, ಆಸ್ತಿಗಳನ್ನು ನೋಂದಣಿ ಮಾಡುವ ಇಂತಹ ಪ್ರಕರಣಗಳಲ್ಲಿ ಭಾಗಿಯಾಗಿರುವ ಬಾಂಡ್ ರೈಟರ್ಸ್ ಗುರುತಿಸಿ, ಅವರ ಬಾಂಡ್ ರೈಟರ್ಸ್ ಲೈಸೆನ್ಸ್ ರದ್ದುಗೊಳಿಸವಂತೆ” ಸಂಬಂಧಿಸಿದ ಅಧಿಕಾರಿಗಳಿಗೆ ತಾಕೀತು ಮಾಡಿದ್ದಾರೆ. ಅದರಂತೆ ಉಪ ನೋಂದಣಿ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಹಲವು ದಿನಗಳಿಂದ ಒಂದೇ ಕಚೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವರನ್ನು ಜಿಲ್ಲಾ ವ್ಯಾಪ್ತಿಯಿಂದ ತಾಲೂಕು ಮಟ್ಟಕ್ಕೆ ವರ್ಗಾವಣೆ ಮಾಡಿ, ತಾಲೂಕು…
ಕಡಲೆಕಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಲಾಭಗಳಿವೆ ಎನ್ನುವುದು ತಿಳಿಸುಕೊಳ್ಳೋಣ… ಪ್ರೋಟೀನ್, ಆರೋಗ್ಯಕರ ಕೊಬ್ಬುಗಳು, ಫೈಬರ್, ಜೀವಸತ್ವಗಳು (ಉದಾಹರಣೆಗೆ ಬಿ ಜೀವಸತ್ವಗಳು ಮತ್ತು ವಿಟಮಿನ್ ಇ), ಮತ್ತು ಖನಿಜಗಳು (ಮೆಗ್ನೀಸಿಯಮ್, ರಂಜಕ ಮತ್ತು ಪೊಟ್ಯಾಸಿಯಮ್) ಸೇರಿದಂತೆ ಕಡಲೆಕಾಯಿಗಳು ಅಗತ್ಯವಾದ ಪೋಷಕಾಂಶಗಳ ಉತ್ತಮ ಮೂಲವಾಗಿದೆ. 1) ಅತ್ಯಧಿಕ ನಾರಿನಾಂಶವನ್ನು ಒಳಗೊಂಡ ಕಾರಣ ಜೀರ್ಣಕ್ರಿಯೆಗೆ ಸಹಕಾರಿ ಮತ್ತು ಊರಿಯೂತವನ್ನು ನಿಯಂತ್ರಣದಲ್ಲಿಡುತ್ತದೆ. 2) ಕಡಲೆಕಾಯಿಯಲ್ಲಿ ಪ್ರೋಟೀನ್, ಫೈಬರ್ ಮತ್ತು ಆರೋಗ್ಯಕರ ಕೊಬ್ಬಿನ ಸಂಯೋಜನೆಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರಗೊಳಿಸಲು ಸಹಾಯ ಮಾಡುತ್ತದೆ. 3) ಕಡಲೆಕಾಯಿಯು ಮೆಗ್ನೀಸಿಯಮ್, ಫಾಸ್ಫರಸ್ ಮತ್ತು ಇತರ ಖನಿಜಗಳ ಉತ್ತಮ ಮೂಲವಾಗಿದೆ, ಇದು ಬಲವಾದ ಮತ್ತು ಆರೋಗ್ಯಕರ ಮೂಳೆಗಳನ್ನು ಕಾಪಾಡಿಕೊಳ್ಳುವಲ್ಲಿ ಸಹಾಯ ಮಾಡುತ್ತದೆ. 4) ಕಡಲೆಕಾಯಿಯಲ್ಲಿ ಬಹು ಉಪಯುಕ್ತವಾದ ಕೊಬ್ಬುಗಳು ಸಮೃದ್ಧವಾಗಿವೆ, ಅವು ಹೃದಯ-ಆರೋಗ್ಯ ಸಮಸ್ಯೆಗಳಿಗೆ ಉತ್ತಮ ಪರಿಹಾರವಾಗಿವೆ. ಅವು ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಮತ್ತು ಹೃದ್ರೋಗದ ಅಪಾಯವನ್ನು ಕಡಿಮೆ ಮಾಡಲು ಸಹಾಯ ಮಾಡಬಹುದು. 5) ಕ್ಯಾನ್ಸರ್ ಅಪಾಯ ಕಡಿಮೆ ಮಾಡಲು ಸಹಾಯ…
ಬೆಂಗಳೂರು:- ಕಾರ್ತಿಕ ಮಾಸದಲ್ಲಿ ಮಾಂಸಾಹಾರವನ್ನು ಸೇವಿಸುವ ಮಂದಿ ಕಡಿಮೆ. ಇದರ ಪರಿಣಾಮ ಬೆಂಗಳೂರು ಸೇರಿ ಹಲವೆಡೆ ಕೋಳಿ ಬೆಲೆಯಲ್ಲಿ ಕುಸಿತವಾಗಿದೆ. ಕಳೆದ ಹಲವು ದಿನಗಳಿಂದ ಚಿಕನ್ ಬೆಲೆ 260 ರಿಂದ 300 ರೂಪಾಯಿ ವರೆಗೆ ಇತ್ತು. ಪ್ರಸ್ತುತ ಬೆಂಗಳೂರಿನಲ್ಲಿ 1 ಕೆಜಿ ಚಿಕನ್ ಬೆಲೆ 160 ರೂಪಾಯಿ ಇದೆ. ಚಿಕನ್ ಲಿವರ್ 120 ರೂಪಾಯಿ ಇದ್ದರೆ, ಬೊನ್ಲೆಸ್ ಚಿಕನ್ 210 ರೂಪಾಯಿ, ನಾಟಿ ಕೋಳಿ 360 ರೂಪಾಯಿ, ಲೈವ್ ಚಿಕನ್ ರೂ. 130 ಹಾಗೂ ಸ್ಕಿನ್ಲೆಸ್ ಚಿಕನ್ ಕೆಜಿಗೆ ರೂ. 200 ರೂಪಾಯಿ ಇದೆ. ಆರ್ಟಿ ನಗರದಲ್ಲಿ ಲೈವ್ ಚಿನ್ ಕೆಜಿಗೆ 130 ರೂಪಾಯಿ ಇದ್ದರೆ, ಲಿವರ್ 105 ರೂಪಾಯಿ, ಸ್ಕಿನ್ಲೆಸ್ 180 ರೂ. ಹಾಗೂ ವಿತ್ ಸ್ಕಿನ್ 150 ರೂಪಾಯಿ ಇದೆ. ಬೆಲೆ ಮತ್ತಷ್ಟು ಕುಸಿಯುವ ಸಾಧ್ಯತೆ ಇದೆ ಎಂದು ಮಾರುಕಟ್ಟೆ ಮೂಲಗಳು ಹೇಳುತ್ತಿವೆ. ಕಾರ್ತಿಕ ಮಾಸ, ಹಬ್ಬ ಹರಿದಿನಗಳು ಯಾವುದನ್ನೂ ನಂಬದ ನಾನ್ ವೆಜ್ ಪ್ರಿಯರಿಗೆ ಬೆಲೆ ಕುಸಿತದಿಂದ…
ಮೈಸೂರು:- ಅರ್ಜುನ ಆನೆ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೊನೆ ಕ್ಷಣದಲ್ಲಿ ಆಗಿದ್ದೇನು? ಹಾಗೂ ಕಾರ್ಯಾಚರಣೆಯ ಕಂಪ್ಲೀಟ್ ಡೀಟೆಲ್ಸ್ ಇಲ್ಲಿದೆ. ಈ ಸುದ್ದಿ ಪೂರ್ತಿ ಓದಿ. ಕಾಡಾನೆಗಳ ಕಾರ್ಯಾಚರಣೆ ಆರಂಭವಾಗಿದ್ದು ನವೆಂಬರ್ 23 ರಂದು. ಒಟ್ಟು ಎರಡು ತಂಡಗಳಾಗಿ ಕಾಡಾನೆಗಳ ಕಾರ್ಯಾಚರಣೆ ನಡೆಸಲಾಗುತಿತ್ತು. ಒಂದು ತಂಡ ಮೂಡಿಗೆರೆ ಬಳಿ ಕಾರ್ಯಾಚರಣೆ ನಡೆಸುತಿತ್ತು. ಮತ್ತೊಂದು ತಂಡ ಸಕಲೇಶಪುರದ ಬಳಿ ಕಾರ್ಯಾಚರಣೆ ನಡೆಸುತ್ತಿತ್ತು. ಸಕಲೇಶಪುರೆ ಬಳಿಯ ಕಾರ್ಯಾಚರಣೆಯ ತಂಡದಲ್ಲಿದ್ದದ್ದು ಅರ್ಜುನ, ಕರ್ನಾಟಕದ ಭೀಮ, ಧನಂಜಯ ಮತ್ತು ಪ್ರಶಾಂತ್ ಸೇರಿ ಒಟ್ಟು 6 ಆನೆಗಳು. ತಂಡದಲ್ಲಿ ಡಾ. ರಮೇಶ್, ರಂಜನ್ ಹಾಗೂ ಮಾವುತ ಕಾವಾಡಿಗಳಿದ್ದರು. ಅರ್ಜುನ ಆನೆ ಇದ್ದ ತಂಡಕ್ಕೆ 9 ಆನೆಗಳ ಕಾರ್ಯಾಚರಣೆ ಟಾಸ್ಕ್ ನೀಡಲಾಗಿತ್ತು. ಸಾಮಾನ್ಯವಾಗಿ ಕಾಡಿನಲ್ಲಿರುವ ಎಲ್ಲಾ ಆನೆಗಳಿಗೂ ರೇಡಿಯೋ ಕಾಲರ್ಗಳನ್ನು ಹಾಕುವಂತಿಲ್ಲ. ಮೊದಲು ಕಾರ್ಯಾಚರಣೆ ಮಾಡಬೇಕಾದ ಆನೆಗಳನ್ನು ಗುರುತಿಸಲಾಗುತ್ತದೆ. ಅವುಗಳ ಪೋಟೋಗಳನ್ನು ಕ್ಲಿಕ್ಕಿಸಿಕೊಂಡು ಅವುಗಳ ಚಲನ ವಲನಗಳ ಬಗ್ಗೆ ನಿಗಾ ಇಡಲಾಗುತ್ತದೆ. ಎಲ್ಲಾ ಆದ ಮೇಲೆ ಕಾರ್ಯಾಚರಣೆ ನಡೆಸಲಾಗುತ್ತದೆ. ಇದೇ ರೀತಿಯಲ್ಲಿ…
ಹುಬ್ಬಳ್ಳಿ:- ನನಗೆ ಸಿಎಂ ಸಿದ್ದರಾಮಯ್ಯ ಅಷ್ಟೇನೂ ಪರಿಚಯಸ್ಥರಲ್ಲ ಎಂದು ಬಿ ಕೆ ಹರಿಪ್ರಸಾದ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ʻನಾನು ಪುಟ್ಬಾಲ್ ಇದ್ದಂತೆ. ತುಳಿದಷ್ಟು ಮೇಲೆ ಪುಟ್ಟಿದೇಳುತ್ತೇನೆʼ ಎಂದು ಹೇಳುವ ಮೂಲಕ ಸಿಎಂಗೆ ಟಾಂಗ್ ನೀಡಿದ್ದಾರೆ. ʻನನಗೆ ಸಿಎಂ ಅಷ್ಟೇನು ಪರಿಚಯವಿಲ್ಲ, ನಾನೆಂದು ಮ್ಯಾಚ್ ಫಿಕ್ಸಿಂಗ್ ರಾಜಕಾರಣ ಮಾಡಿಲ್ಲ, ಮಾಡಿದ್ರೆ ನಂಗೆ ಎಲ್ಲರೂ ಚೆನ್ನಾಗಿರ್ತಿದ್ರುʼ ಅಂತ ಸಿಎಂ ವಿರುದ್ದ ಹರಿಪ್ರಸಾದ್ ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಇನ್ನು ಅರಮನೆ ಮೈದಾನದಲ್ಲಿ ನಡೆದ ಈಡಿಗ ಸಮಾವೇಶಕ್ಕೆ ಗೈರಾದ ಬಗ್ಗೆ ರಿಪ್ಲೈ ನೀಡಿ, ಇದು ರಾಜಕೀಯ ಪ್ರೇರಿತ ಮತ್ತು ರಾಜಕೀಯ ಕುತಂತ್ರದಿಂದ ಆಯೋಜನೆ ಆಗಿರೋ ಸಮಾವೇಶ. ಅದ್ರಿಂದ್ಲೇ ನಾನು ಹೋಗುತ್ತಿಲ್ಲ. ನಮ್ಮ ಸಮಾಜಕ್ಕೆ ಒಳ್ಳೆಯದಾಗುವುದಿದ್ದರೆ ನಾನು ಪಾಲ್ಗೊಳ್ಳುತ್ತಿದ್ದೆ. ರಾಜಕೀಯ ಪ್ರೇರಿತ ಸಮಾವೇಶಗಳಲ್ಲಿ ನಾನು ಭಾಗಿಯಾಗುವುದಿಲ್ಲ ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ಅಂದ್ಹಾಗೆ ಸಚಿವ ಸ್ಥಾನ ವಿಚಾರದಲ್ಲಿ ಈಡಿಗ ಸಮುದಾಯದಿಂದ ತಮ್ಮ ಬದಲಿಗೆ ಮಧು ಬಂಗಾರಪ್ಪ ಅವ್ರನ್ನ ಮಂತ್ರಿ ಮಾಡಿದ್ದರು. ಇದೀಗ ಈಡಿಗ ಸಮಾವೇಶಕ್ಕೆ ಮಧು ಬಂಗಾರಪ್ಪ ಸಿಎಂಗೆ ಆಹ್ವಾನಿಸಿ…
ಬೆಂಗಳೂರು: ಯಾವುದೇ ಮಾಹಿತಿ ಇಲ್ಲದೆ ನ್ಯಾಯ ಬೆಲೆ ಅಂಗಡಿ ಸ್ಥಳಾಂತರ ಹಿನ್ನೆಲೆ, ಆಹಾರ ಇಲಾಖೆಯ ವಿರುದ್ಧ ಜನರು ಆಕ್ರೋಶ ಹೊರ ಹಾಕಿದ್ದಾರೆ. ನ್ಯಾಯ ಬೆಲೆ ಅಂಗಡಿ ಸ್ಥಳಾಂತರಕ್ಕೆ ಜನಸಾಮಾನ್ಯರು ವಿರೋಧ ವ್ಯಕ್ತಪಡಿಸಿದ್ದಾರೆ. ಯಶವಂತಪುರ ಕ್ಷೇತ್ರದ ಚನ್ನಕ್ಕಿಪಾಳ್ಯದಿಂದ ಚಿಕ್ಕಬಿದರಕಲ್ಲು ಗ್ರಾಮಕ್ಕೆ ಸ್ಥಳಾಂತರ ಮಾಡಲಾಗಿದೆ. ಇದರಿಂದ ಸುಮಾರು 250 ಪಡಿತರ ಕಾರ್ಡ್ ಇರುವ ಜನರಿಗೆ ಶಾಕ್ ನೀಡಿದಂತಾಗಿದೆ. ಸುಮಾರು 30 ವರ್ಷದಿಂದ ಇದ್ದ ನ್ಯಾಯ ಬೆಲೆ ಅಂಗಡಿ ಶಿಪ್ಟ್ ಮಾಡಲಾಗಿದ್ದು, ಪ್ರಭಾವಿಗಳ ಒತ್ತಡಕ್ಕೆ ಮಣಿದು ಅಧಿಕಾರಿಗಳ ನಡೆಗೆ ಆಕ್ರೋಶ ವ್ಯಕ್ತವಾಗಿದೆ. ಇಂದು ಪಡಿತರ ಧಾನ್ಯ ಪಡೆಯಲು ಬಂದ ಜನರಿಗೆ ಶಾಕ್ ನೀಡಿದೆ.bನಮಗೆ ಚನ್ನಕ್ಕಿ ಪಾಳ್ಯದ ನ್ಯಾಯ ಬೆಲೆ ಅಂಗಡಿಯಲ್ಲಿ ಪಡಿತರ ನೀಡುವಂತೆ ಆಗ್ರಹಿಸಿದ್ದಾರೆ
ಬೆಂಗಳೂರು:- ಈಡಿಗ ಸಮುದಾಯದ ಅಭಿವೃದ್ಧಿ ನಿಗಮಕ್ಕೆಗೆ ₹500 ಕೋಟಿ ಅನುದಾನ ನೀಡಬೇಕು ಎಂಬ ಮನವಿ ಬಂದಿದ್ದು, ಇದನ್ನು ಈಡೇರಿಸುವ ಭರವಸೆ ನೀಡುತ್ತೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ನಗರದ ಅರಮನೆ ಮೈದಾನದಲ್ಲಿ ನಡೆದ ಕರ್ನಾಟಕದ ಪ್ರದೇಶ ಆರ್ಯ ಈಡಿಗರ ಸಂಘದ ಅಮೃತ ಮಹೋತ್ಸವದಲ್ಲಿ ಮಾತನಾಡಿ, “ಈಗ ಅಧಿವೇಶನ ನಡೆಯುತ್ತಿದ್ದು ಅಧಿಕೃತ ಘೋಷಣೆ ಮಾಡಲು ಆಗುವುದಿಲ್ಲ. ಹೀಗಾಗಿ ನಿಮ್ಮ ಬೇಡಿಕೆ ಈಡೇರಿಸುವ ಭರವಸೆ ನೀಡುತ್ತೇನೆ” ಎಂದರು. ಉಳಿದಂತೆ ಅವರು ಹೇಳಿದ್ದಿಷ್ಟು; “ರಾಜ್ಯದ ಈಡಿಗ ಸಮುದಾಯ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತರಲು ಒಟ್ಟಾಗಿ ಶ್ರಮಿಸಿದೆ. ನಿಮ್ಮ ಬೆಂಬಲಕ್ಕೆ ಎಷ್ಟು ಅಭಿನಂದನೆ ತಿಳಿಸಿದರೂ ಸಾಲದು. ನಾವು ನಿಮಗೆ ಕೊಟ್ಟಿರುವ ಮಾತು ಉಳಿಸಿಕೊಳ್ಳುತ್ತೇವೆ. ವಿಧಾನಸಭಾ ಚುನಾವಣೆಯಲ್ಲಿ ಮತ್ತು ಇಂದು ಈಡಿಗ ಸಮುದಾಯದವರೆಲ್ಲಾ ಒಗ್ಗಟ್ಟಾಗಿ, ಸಿದ್ದರಾಮಯ್ಯನವರ ಸರ್ಕಾರದ ಜೊತೆಗೆ ಇದ್ದೇವೆ ಎಂಬ ಸಂದೇಶ ನೀಡಿದ್ದೀರಿ. ಇದಕ್ಕೆ ನಾನು ಆಭಾರಿ. ‘ವಿದ್ಯೆಯಿಂದ ವಿವೇಕವಂತರಾಗಬೇಕು, ಸಂಘಟನೆಯಿಂದ ಬಲಿಷ್ಠರಾಗಬೇಕು’ ಎನ್ನುವ ನಾರಾಯಣಗುರುಗಳ ಮಾತುಗಳನ್ನು ನಾವು ಮತ್ತು ನೀವು ಎಂದಿಗೂ ಮರೆಯಬಾರದು. ನಾನು,…