ಬೆಂಗಳೂರು:- ಬಿಟ್ಟು ಬಿಟ್ಟು ಬರುತ್ತಿರುವ ಮಳೆಯಿಂದ ನಗರದಲ್ಲಿ ವೈರಲ್ ಫೀವರ್ ಹೆಚ್ಚಾಗಿದೆ. ಜ್ವರ, ಶೀತ, ಟೈಫಡ್ ಪ್ರಕರಣಗಳ ಜೊತೆ ಡೆಂಗ್ಯೂ ಪ್ರಕರಣಗಳು ಡಬ್ಬಲ್ ಆಗಿವೆ. ಹಿಂದಿನ ವರ್ಷಕ್ಕೆ ಕಂಪೇರ್ ಮಾಡಿದ್ರೆ ಈ ವರ್ಷ ಡೆಂಗ್ಯೂ ಲಕ್ಷಣಗಳು ಚೇಂಜ್ ಆಗಿವೆ. ಜ್ವರ ಬಿಟ್ಟು ಮತ್ತೆ 3 ದಿನಕ್ಕೆ ಜ್ವರ ಕಾಣಿಸಿಕೊಳ್ತಿದೆ. ಮಕ್ಕಳ ವಿಚಾರದಲ್ಲಿ ಹೆಚ್ಚಿನ ನಿಗಾ ವಹಿಸಿರುವ ವೈದ್ಯರು, ಜ್ವರ ಎಂದು ಬರುವ ಮಕ್ಕಳಿಗೆ ಡೆಂಗ್ಯೂ ಪರೀಕ್ಷೆ ಮಾಡುತ್ತಿದ್ದಾರೆ. ಬೆಂಗಳೂರಿಗೆ ಡೆಡ್ಲಿ ಡೆಂಗ್ಯೂ ಭೀತಿ ಜೋರಾಗಿದೆ. ರಾಜಧಾನಿಯಲ್ಲಿ ತಗ್ಗದ ಡೆಂಗ್ಯೂ ಆರ್ಭಟದಿಂದ ಜನರು ಹೈರಾಣಾಗಿದ್ದಾರೆ. ಕಳೆದೊಂದು ತಿಂಗಳಲ್ಲಿ ಬೆಂಗಳೂರಿನಲ್ಲಿ ದಾಖಲೆಯ ಕೇಸ್ ಪತ್ತೆಯಾಗಿವೆ. ಕಳೆದ 30 ದಿನಗಳಲ್ಲಿ ರಾಜಧಾನಿಯಲ್ಲಿ ಬರೊಬ್ಬರಿ 2970 ಹೊಸ ಡೆಂಗ್ಯೂ ಕೇಸ್ ಪತ್ತೆಯಾಗಿದೆ. ಕಳೆದ ತಿಂಗಳು ಕೊಂಚ ಇಳಿಕೆಯತ್ತ ಸಾಗಿದ್ದ ಹೆಮ್ಮಾರಿ ಡೆಂಗ್ಯೂ ಈಗ ಮತ್ತೆ ಸೈಲೆಂಟ್ ಆಗಿ ಏರಿಕೆಯತ್ತ ಸಾಗಿದೆ. ರಾಜಧಾನಿಯಲ್ಲಿ ಈ ವರ್ಷ ಜನವರಿಯಿಂದ ಇಲ್ಲಿಯವರೆಗೆ ದಾಖಲೆಯ 7673 ಹೊಸ ಡೆಂಗ್ಯೂ ಕೇಸ್ ಕಾಣಿಸಿಕೊಂಡಿದ್ರೆ ಕಳೆದೊಂದೇ…
Author: AIN Author
ದಾವಣಗೆರೆ:- ಬಹುಸಂಖ್ಯಾತ ಹಿಂದೂಗಳಿಗೆ ಯಾವುದೇ ಅನುದಾನವನ್ನೂ ಕಾಂಗ್ರೆಸ್ ಸರ್ಕಾರ ನೀಡಿಲ್ಲ. ಮುಸ್ಲಿಮರಿಗೆ ಅನುದಾನ ನೀಡಬೇಕೆಂದರೆ ನಿಮ್ಮ ಆಸ್ತಿಗಳನ್ನು ಮಾರಾಟ ಮಾಡಿ ಕೊಡಿ ಎಂದು ಮಾಜಿ ಸಚಿವ ಎಂ.ಪಿ.ರೇಣುಕಾಚಾರ್ಯ ತಾಕೀತು ಮಾಡಿದರು. ದೇವಸ್ಥಾನಗಳ ಹುಂಡಿಗಳಿಗೆ ಹಿಂದೂ ಭಕ್ತರು ನೀಡುವ ಕಾಣಿಕೆ ಹಣವನ್ನು ಮುಸ್ಲಿಮರಿಗೆ ನೀಡುತ್ತೀರಾ? ಇಡೀ ರಾಜ್ಯವೇ ಬರದಿಂದ ತತ್ತರಿಸಿದೆ. ರೈತರಿಗೆ ಬೆಳೆ ಹಾನಿ ಪರಿಹಾರದ ಬಗ್ಗೆ ಚಕಾರ ಎತ್ತದ ಕಾಂಗ್ರೆಸ್ ಸರ್ಕಾರ ಹೇಳಿದಂತೆ ರೈತರ ಖಾತೆಗೆ 2 ಸಾವಿರ ರು. ಪರಿಹಾರ ಹಣ ಬಂದಿಲ್ಲ. ಒಬೊಬ್ಬ ಶಾಸಕರಿಗೂ ಕ್ಷೇತ್ರದ ಅಭಿವೃದ್ಧಿಗೆ 50 ಲಕ್ಷ ರು. ಮಾತ್ರ ಬಿಡುಗಡೆ ಮಾಡಲಾಗಿದೆ. ಬೆಳೆ ಹಾನಿಗೆ ತುತ್ತಾದ ರೈತರಿಗೆ ಈ ವರೆಗೆ ಸರ್ಕಾರ ಬೆಳೆ ಹಾನಿ ಪರಿಹಾರವನ್ನೇ ನೀಡಿಲ್ಲ ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿದರು ಕೇಸರಿ ಪೇಟ ಧರಿಸುವುದಿಲ್ಲ, ಹಣೆಗೆ ಕುಂಕುಮ ಹಚ್ಚಲು ವಿರೋಧಿಸುವ ಸಿದ್ದರಾಮಯ್ಯ, ದೇವಸ್ಥಾನದ ಹುಂಡಿ ಹಣ ಅನ್ಯ ಧರ್ಮೀಯರ ಅಭಿವೃದ್ಧಿಗೆ ಬಿಡುಗಡೆ ಮಾಡುತ್ತೀರಾ? ಬೆಳಗಾವಿ ಅಧಿವೇಶನ ನಡೆಯುತ್ತಿದೆ. ಮೊದಲು ಶಾಸಕರ ಕ್ಷೇತ್ರದ…
ನವದೆಹಲಿ: ಪ್ಯಾಕಿಂಗ್ ಆಹಾರ (Packed Foods) ಉತ್ಪನ್ನಗಳು ಜಠರದಲ್ಲಿರುವ ಪ್ರೋಬಯಾಟಿಕ್ ಬ್ಯಾಕ್ಟೀರಿಯಾವನ್ನು ಹಾನಿಗೊಳಿಸುವುದರಿಂದ ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳು ಕಾಣಿಸಿಕೊಳ್ಳುತ್ತಿವೆ. ಇದರಿಂದ ಕ್ಯಾನ್ಸರ್ನಂತಹ ಗಂಭೀರ ಕಾಯಿಲೆಗಳು ಬರುವ ಸಾಧ್ಯತೆ ಇದೆ ಎಂದು ದೆಹಲಿ ಏಮ್ಸ್ (Delhi AIIMS) ಲ್ಯಾಬ್ ವರದಿ ತಿಳಿಸಿದೆ. ಜಠರದಲ್ಲಿರುವ ಪ್ರೋಬಯಾಟಿಕ್ ಬ್ಯಾಕ್ಟೀರಿಯಾ ಆಹಾರವನ್ನು ಜೀರ್ಣಿಸುವಲ್ಲಿ ದೊಡ್ಡ ಪಾತ್ರವನ್ನು ವಹಿಸತ್ತದೆ. ಅಲ್ಲದೇ ಇದನ್ನು ಉತ್ತಮ ಬ್ಯಾಕ್ಟೀರಿಯಾ ಎಂದು ಪರಿಗಣಿಸಲಾಗುತ್ತದೆ. ನಿರಂತರವಾಗಿ ಪ್ಯಾಕಿಂಗ್ ಆಹಾರಗಳನ್ನು ಸೇವಿಸುವುದರಿಂದ ಈ ಆಹಾರ ಪ್ರೋಬಯಾಟಿಕ್ ಬ್ಯಾಕ್ಟೀರಿಯಾ ದೇಹದಿಂದ ಹೊರ ಹಾಕುತ್ತದೆ ಎಂದು ದೆಹಲಿ ಏಮ್ಸ್ ವೈದ್ಯರು (Doctors) ನಡೆಸಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಆಹಾರವನ್ನು ಜೀರ್ಣಿಸಿಕೊಳ್ಳುವುದು ಮತ್ತು ಅದರಿಂದ ಪೋಷಕಾಂಶಗಳನ್ನು ಹೊರತೆಗೆದು ದೇಹದ ವಿವಿಧ ಭಾಗಗಳಿಗೆ ತಲುಪಿಸುವುದು ಪ್ರೋಬಯಾಟಿಕ್ ಬ್ಯಾಕ್ಟೀರಿಯಾದ ಕೆಲಸವಾಗಿದೆ. ಸಂಸ್ಕರಿಸಿದ ಆಹಾರದಲ್ಲಿ ಇರುವ ಹೆಚ್ಚಿನ ಕೊಬ್ಬು ಮತ್ತು ಹೆಚ್ಚಿನ ಸಕ್ಕರೆ ಈ ಬ್ಯಾಕ್ಟೀರಿಯಾವನ್ನು ಕೊಲ್ಲುತ್ತದೆ. ಇದು ಜೀರ್ಣಕ್ರಿಯೆಯ ಪ್ರಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಇಂತಹ ಸಂದರ್ಭಗಳಲ್ಲಿ ಪೌಷ್ಠಿಕ ಆಹಾರ ಸೇವಿಸಿದರೂ…
ಹುಬ್ಬಳ್ಳಿ:- ಇಂದು ಬೆಂಗಳೂರಿನಲ್ಲಿ ನಡೆಯುವ ಈಡಿಗ ಸಮಾವೇಶ ಕುತಂತ್ರದ್ದಾಗಿದೆ ಎಂದು ಬಿಕೆ ಹರಿಪ್ರಸಾದ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ಇಂದು ರಾಜಧಾನಿ ಬೆಂಗಳೂರಿನಲ್ಲಿ ನಡೆಯಲಿರುವ ಈಡಿಗ ಜಾಗೃತಿ ಸಮಾವೇಶಕ್ಕೆ ಬಿ.ಕೆ.ಹರಿಪ್ರಸಾದ್ ಅಪಸ್ವರ ಎತ್ತಿದ್ದಾರೆ. ಈಡಿಗ ಸಮಾವೇಶ ರಾಜಕೀಯ ಪ್ರೇರಿತ ಹಾಗೂ ಕುತಂತ್ರದ್ದಾಗಿದೆ. ಸಮಾವೇಶದಲ್ಲಿ ನಾನು ಪಾಲ್ಗೊಳ್ಳುತ್ತಿಲ್ಲ. ಈಡಿಗ ಸಮಾಜ ಅಂದಾಜು 50 ಲಕ್ಷ ಜನಸಂಖ್ಯೆ ಹೊಂದಿದೆ. ಆದರೆ ಈಡಿಗ ಸಂಘದಲ್ಲಿ ಇರುವುದು ಕೇವಲ 12 ಸಾವಿರ ಸದಸ್ಯತ್ವ ಮಾತ್ರ. ಸಂಘಕ್ಕೆ 75 ವರ್ಷ ತುಂಬಿದ ಹಿನ್ನೆಲೆಯಲ್ಲಿ ಅಮೃತ ಮಹೋತ್ಸವ ಮಾಡುವುದಾಗಿ ಹೇಳುತ್ತಾರೆ. ಆದರೆ ಸಂಘದ ರಜತ ಹಾಗೂ ಸುವರ್ಣ ಮಹೋತ್ಸವ ಯಾವಾಗ ಮಾಡಿದರೋ ಗೊತ್ತಿಲ್ಲ. ಈಡಿಗ ಸಮಾಜದಲ್ಲಿ ಆರು ಜನ ಸ್ವಾಮೀಜಿಗಳಿದ್ದಾರೆ. ಈ ಪೈಕಿ ಇಬ್ಬರು ಸ್ವಾಮೀಜಿಗಳನ್ನು ಅಮೃತ ಮಹೋತ್ಸವ ಸಮಾರಂಭಕ್ಕೆ ಆಹ್ವಾನಿಸಿಲ್ಲ. ರಾಜ್ಯದಲ್ಲಿ ಸೇಂದಿ, ಸಾರಾಯಿ ನಿಷೇಧ ಮಾಡಿದಾಗ ಈ ಸಂಘದಲ್ಲಿ ಇದ್ದವರು ಏನೂ ಮಾಡಲಿಲ್ಲ ಎಂದು ಕಿಡಿ ಕಾರಿದರು. ಸಮಾರಂಭದಲ್ಲಿ ಸಂಘದವರು ಸಮಾಜದ ವಿವಿಧ ಬೇಡಿಕೆಗಳನ್ನು ಮಂಡನೆ…
ಅಲಹಾಬಾದ್:- ವೈವಾಹಿಕ ಜೀವನದಲ್ಲಿನ ಅತ್ಯಾಚಾರ ಅಪರಾಧವಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ನ್ಯಾಯಮೂರ್ತಿ ರಾಮ ಮನೋಹರ್ ನಾರಾಯಣ ಮಿಶ್ರಾರ ಪೀಠ ಹೇಳಿದೆ. ವೈವಾಹಿಕ ಅತ್ಯಾಚಾರವನ್ನು ಕ್ರಿಮಿನಲ್ಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಗಳು ಇನ್ನೂ ಸುಪ್ರೀಂ ಕೋರ್ಟ್ ಮುಂದೆ ಬಾಕಿಯಿವೆ. ಆದ್ದರಿಂದ ಸವೋನ್ನತ ನ್ಯಾಯಾಲಯ ನಿರ್ಧಾರ ಕೈಗೊಳ್ಳುವವರೆಗೆ ವೈವಾಹಿಕ ಅತ್ಯಾಚಾರಕ್ಕೆ ಯಾವುದೇ ಕ್ರಿಮಿನಲ್ ದಂಡ ಶಿಕ್ಷೆ ವಿಧಿಸಲಾಗದು ಎಂದು ಕೋರ್ಟ್ ಹೇಳಿದೆ. ತಮ್ಮ ಮದುವೆ ಒಂದು ಅಪವಿತ್ರ ಸಂಬಂಧ ವಾಗಿದೆ ಎಂದು ದೂರುದಾರ ಮಹಿಳೆ ಅರ್ಜಿಯಲ್ಲಿ ಆರೋಪಿಸಿದ್ದಾಳೆ. ಪತಿ ತನ್ನನ್ನು ಮೌಖಿಕ ಹಾಗೂ ದೈಹಿಕ ನಿಂದನೆ ಹಾಗೂ ಬಲವಂತಕ್ಕೆ ಒಳಪಡಿಸಿದ್ದಾನೆ ಎಂಬುದು ಮಹಿಳೆಯ ಆರೋಪವಾಗಿದೆ.
ಮೂಲವ್ಯಾಧಿಯ ರೋಗಿಗಳು ದಿನವೂ ಈರುಳ್ಳಿಯನ್ನು ಅಥವಾ ಮೂಲಂಗಿಯನ್ನು ಹಸಿಯಾಗಿ ತಿನ್ನುವುದರಿಂದ ಲಾಭವಾಗುತ್ತದೆ. ಬೇರುಸಹಿತ ಗರಿಕೆ ಹುಲ್ಲನ್ನು ಸಣ್ಣದಾಗಿ ಕತ್ತರಿಸಿ, ಕುಟ್ಟಿ ಹಿಂದಿನ ರಾತ್ರಿ ತಣ್ಣೀರಿನಲ್ಲಿ ನೆನೆ ಹಾಕಿ, ಬೆಳಿಗ್ಗೆ ಅದನ್ನು ಕಿವುಚಿ ಶೋಧಿಸಿ ಕುಡಿಯುವುದರಿಂದ ಮೂಲವ್ಯಾಧಿ ಗುಣವಾಗುತ್ತದೆ. ಅಮೃತಬಳ್ಳಿಯ ಸತ್ವಕ್ಕೆ ಸಮಾಂಶ ಕಲ್ಲುಸಕ್ಕರ ಪುಡಿ ಮಾಡಿ ಸೇರಿಸಿ; 48 ದಿನಗಳು ಸೇವಿಸುವುದರಿಂದ ಮೂಲವ್ಯಾಧಿ ಪರಿಹಾರವಾಗುತ್ತದೆ. ಬಸಳೆಸೊಪ್ಪನ್ನು ಪಲ್ಯ ಮಾಡಿ ಪ್ರತಿದಿನವೂ ಸೇವಿಸುವುದರಿಂದದ ಮೂಲವ್ಯಾಧಿಯು ಗುಣವಾಗುತ್ತದೆ. ಮೇಕೆ ಹಾಲನ್ನು ನಿತ್ಯವೂ ಸೇವಿಸಿದರೆ ಮಲಬದ್ಧತೆ, ಮೂಲವ್ಯಾಧಿ ಗುಣವಾಗುತ್ತದೆ. ಕರಿಬೇವಿನ ಎಲೆ ಎಲೆಗಳನ್ನು ಜೇನುತುಪ್ಪದೊಂದಿಗೆ ತಿನ್ನುವುದರಿಂದಲೂ ಮೂಲವ್ಯಾಧಿಯನ್ನು ದೂರಗೊಳಿಸಬಹುದು. ದಿನವೂ ಮಲಗುವ ಮುನ್ನ ಏಲಕ್ಕಿಪುಡಿಯೊಂದಿಗೆ ಬಾಳೆಹಣ್ಣನ್ನು ಸೇವಿಸುವುದರಿಂದ ಮೂಲವ್ಯಾಧಿ ದೂರವಾಗುವುದು. ಮೂಲವ್ಯಾಧಿಯಿಂದ ರಕ್ತಸ್ರಾವಕ್ಕೆ ಹೊನೆಗೊನೆ ಸೊಪ್ಪಿನ ರಸಕ್ಕೆ ಸಮಪ್ರಮಾಣದಲ್ಲಿ ಕ್ಯಾರೆಟ್ ರಸವನ್ನು ಸೇರಿಸಿ ಸೈಂಧವ ಲವಣವನ್ನು ಅತಿ ಕನಿಷ್ಠ ಪ್ರಮಾಣದಲ್ಲಿ ಸೇರಿಸಿ, ಬಳಸಿದರೆ ಮೂಲವ್ಯಾಧಿಯಲ್ಲಿ ಉಂಟಾಗುವ ರಕ್ತಸ್ರಾವ ನಿಲ್ಲುವುದು. ಮೊಸರಿಗೆ ಅನ್ನ ಬೆಲ್ಲ ಸೇರಿಸಿ ಊಟ ಮಾಡಿದರೆ, ಮೂಲವ್ಯಾಧಿ ಗುಣವಾಗುತ್ತದೆ.
ಕೋಪನ್ ಹ್ಯಾಗನ್: ಸಾರ್ವಜನಿಕ ಸ್ಥಳಗಳಲ್ಲಿ ಕುರಾನ್ (Quran) ಪ್ರತಿಗಳನ್ನು ಸುಡುವುದನ್ನು ತಡೆಯುವ ಮಸೂದೆಗೆ ಡೆನ್ಮಾರ್ಕ್ (Denmark) ಸಂಸತ್ ಗುರುವಾರ ಅನುಮೋದನೆ ನೀಡಿದೆ. ಇಸ್ಲಾಂ ಧರ್ಮದ ಪವಿತ್ರ ಗ್ರಂಥವನ್ನು ಅಪವಿತ್ರಗೊಳಿಸಿದ ಮೇಲೆ ಮುಸ್ಲಿಂ ರಾಷ್ಟ್ರಗಳಲ್ಲಿ ಪ್ರತಿಭಟನೆಗಳು ಹೆಚ್ಚಾಗುತ್ತಿದ್ದು, ಡ್ಯಾನಿಶ್ ಭದ್ರತಾ ವ್ಯವಸ್ಥೆಯಲ್ಲಿ ಆತಂಕ ಎದುರಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕುರಾನ್ ಪ್ರತಿಗಳನ್ನು ಸುಡುವುದನ್ನು ಕಾನೂನುಬಾಹಿರಗೊಳಿಸುವ ಮಸೂದೆಯನ್ನು ಡೆನ್ಮಾರ್ಕ್ ಸಂಸತ್ತು ಗುರುವಾರ ಅಂಗೀಕರಿಸಿತು. ಡೆನ್ಮಾರ್ಕ್ ಮತ್ತು ಸ್ವೀಡನ್ ಈ ವರ್ಷ ಸಾರ್ವಜನಿಕ ಪ್ರತಿಭಟನೆಗಳ ಪರಿಣಾಮ ಎದುರಿಸಿದವು. ಅಲ್ಲಿ ಇಸ್ಲಾಂ ವಿರೋಧಿ ಕಾರ್ಯಕರ್ತರು ಕುರಾನ್ನ ಪ್ರತಿಗಳನ್ನು ಸುಟ್ಟುಹಾಕಿದರು. ಇದರಿಂದ ಮುಸ್ಲಿಮರೊಂದಿಗೆ ಉದ್ವಿಗ್ನತೆ ಉಂಟಾಯಿತು. ಇಂತಹ ನಡವಳಿಕೆಗಳಿಗೆ ಕಡಿವಾಣ ಬೀಳಬೇಕು ಎಂದು ಪ್ರಬಲವಾಗಿ ಒತ್ತಾಯಿಸಲಾಯಿತು. ಕುರಾನ್ ಪ್ರತಿಗಳನ್ನು ಸುಡುವುದು, ಧರ್ಮವನ್ನು ಟೀಕಿಸುವುದು ಸರಿಯಲ್ಲ. ಇಂತಹ ನಡವಳಿಕೆಗಳು ಈ ನೆಲದ ಉದಾರವಾದಿ ಸ್ವಾತಂತ್ರ್ಯವನ್ನು ದುರ್ಬಲಗೊಳಿಸುತ್ತದೆ ಎಂದು ಸ್ವೀಡನ್ ಮತ್ತು ಡೆನ್ಮಾರ್ಕ್ನ ದೇಶೀಯ ವಿಮರ್ಶಕರು ವಾದಿಸಿದ್ದಾರೆ. ಈ ಹೊಸ ನಿಯಮಗಳು ವಾಕ್ ಸ್ವಾತಂತ್ರ್ಯದ ಮೇಲೆ ಸ್ವಲ್ಪಮಟ್ಟಿಗೆ ಪರಿಣಾಮ ಬೀರುತ್ತದೆ. ಇತರ ರೀತಿಯಲ್ಲಿ ಧರ್ಮವನ್ನು…
ಬಿಗ್ ಬಾಸ್ ಮನೆಯಲ್ಲಿ ಕಳ್ಳಾಟ ಆಡಿದವರಿಗೆ ಕಿಚ್ಚ ಸುದೀಪ್ ಶಾಕ್ ಕೊಟ್ಟಿದ್ದಾರೆ. ಅಲ್ಲದೇ ಕ್ಯಾಪ್ಟನ್ ಕೋಣೆಗೆ ಬೀಗವೂ ಬಿದ್ದಿದೆ. ವರ್ತೂರು ಸಂತೋಷ್ ಆಟವನ್ನು ನ್ಯಾಯವಾಗಿ ಗೆಲ್ಲಲಿಲ್ಲ. ವರ್ತೂರು ಸಂತೋಷ್ ಹಾಗೂ ಮೈಕಲ್ಗೆ ವಿನಯ್ ಸಹಾಯ ಮಾಡಿದರು. ಕುರ್ಚಿಯ ಮೇಲೆ ಕೂತ ವರ್ತೂರ್ ಸಂತೋಷ್ ಗೆ ಹೊರಗಡೆಯಿಂದ ಸಮಯ ಎಣಿಸಿ ವಿನಯ್ ಗೌಡ, ವರ್ತೂರು ಸಂತೋಷ್ ಹಾಗೂ ಮೈಕಲ್ ಇಬ್ಬರಿಗೂ ಸಿಗ್ನಲ್ ಕೊಟ್ಟಿದ್ರು. ಇಬ್ಬರು ಸೇರಿ ಮೋಸದ ಆಟ ಆಡಿದ್ದಕ್ಕೆ ಸಿಟ್ಟಾದ ಸುದೀಪ್ ವರ್ತೂರ್ ಅವರನ್ನು ಪ್ರಶ್ನೆ ಮಾಡಿದ್ರು. ನೀವು ನ್ಯಾಯವಾಗಿ ಟಾಸ್ಕ್ ಗೆದ್ದರ ವರ್ತೂರು ಎಂದು ಸುದೀಪ್ ಪ್ರಶ್ನೆ ಮಾಡಿದ್ರು, ವರ್ತೂರು ಸಂತೋಷ್ ಸೈಲೆಂಟ್ ಆದ್ರು. ಇದಕ್ಕೆ ಉತ್ತರಿಸಿದ ನಮ್ರತಾ ಗೌಡ, ವಿನಯ್ ಹೊರಗಿನಿಂದ ಕೌಂಟ್ ಮಾಡಿ ವರ್ತೂರು ಸಂತೋಷ್ಗೆ ಸಿಗ್ನಲ್ ಕೊಟ್ರು ಎಂಬ ಸತ್ಯವನ್ನು ನಮ್ರತಾ ಬಾಯ್ಬಿಟ್ಟಿದ್ದಾರೆ. ಈ ವಾರ ವರ್ತೂರು ಸಂತೋಷ್ ಗೆ ಇಮ್ಯುನಿಟಿ ಇರೋದಿಲ್ಲ ಎಂದಿರುವ ಸುದೀಪ್, ಬಿಗ್ ಬಾಸ್ ಮನೆಯ ಕ್ಯಾಪ್ಟನ್ ರೂಮ್ಗೆ ಬೀಗ ಹಾಕಿಸಿದ್ದಾರೆ.…
ಹುಬ್ಬಳ್ಳಿ: ನಗರದ ಇಂದಿರಾ ಗಾಜಿನ ಮನೆ ಆವರಣದಲ್ಲಿರುವ ಎಂ.ವಿ. ಮಿಣಜಗಿ ಆರ್ಟ್ ಗ್ಯಾಲರಿ ಪುನಃ ಆರಂಭಿಸಬೇಕು ಎಂದು ಒತ್ತಾಯಿಸಿ ಕುಂಚಬ್ರಹ್ಮ ಡಾ. ಎಂ.ವಿ. ಮಿಣಜಗಿ ಆರ್ಟ್ ಗ್ಯಾಲರಿ ಸಮಿತಿ ಸದಸ್ಯರು ನಗರದಲ್ಲಿ ವಿಧಾನಪರಿಷತ್ ಸದಸ್ಯ ಜಗದೀಶ ಶೆಟ್ಟರ್ ಅವರಿಗೆ ಮನವಿ ಸಲ್ಲಿಸಿದರು. ‘ಅನೇಕ ವರ್ಷಗಳಿಂದ ನಗರದ ಇಂದಿರಾ ಗಾಂಧಿ ಗಾಜಿನ ಮನೆಯಲ್ಲಿ ಮಿಣಜಗಿ ಆರ್ಟ್ ಗ್ಯಾಲರಿ ಕಾರ್ಯನಿರ್ವಹಿಸುತ್ತಿತ್ತು. ಸ್ಮಾರ್ಟ್ಸಿಟಿ ಯೋಜನೆ ಕಾಮಗಾರಿಯಿಂದಾಗಿ ಗ್ಯಾಲರಿಯನ್ನು ಬಂದ್ ಮಾಡಲಾಗಿದೆ. ಕಲಾವಿದರಿಗೆ ಚಿತ್ರಕಲೆ ಪ್ರದರ್ಶಿಸಲು ನಗರದಲ್ಲಿ ಗ್ಯಾಲರಿಯಿಲ್ಲದೆ ಪರದಾಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿರುವ ಗ್ಯಾಲರಿಯನ್ನು ತೆರೆದು ಕಲಾವಿದರಿಗೆ ಮುಕ್ತಗೊಳಿಸಬೇಕು. ಇಲ್ಲದಿದ್ದರೆ ಈಗಿರುವ ವಿದ್ಯಾನಗರದ ಪೊಲೀಸ್ ಠಾಣೆ, ಮೊದಲು ಚಿಕ್ಕವೀರಯ್ಯ ಆರ್ಟ್ ಗ್ಯಾಲರಿಯಾಗಿತ್ತು. ಅದನ್ನಾದರೂ ಪುನಃ ಆರ್ಟ್ ಗ್ಯಾಲರಿಯನ್ನಾಗಿ ಮಾರ್ಪಡಿಸಿ ಕಲಾವಿದರಿಗೆ ನೀಡಬೇಕು’ ಎಂದು ಮನವಿ ಪತ್ರದಲ್ಲಿ ಆಗ್ರಹಿಸಿದ್ದಾರೆ. ಸಮಿತಿಯ ಅಧ್ಯಕ್ಷ ಆರ್.ಬಿ. ಗರಗ, ಬಿ.ಆರ್. ಮಲ್ಲಾಪುರ, ಪ್ರೊ.ಐ.ಜಿ. ಸನದಿ, ಗೋವಿಂದ ಮಣ್ಣೂರು, ಶಿವರುದ್ರಪ್ಪ ಬಡಿಗೇರ ಜಗದೀಶ ಗದಗಿನ ಸೇರಿ ಕಲಾವಿದರು ಇದ್ದರು.
ಹುಬ್ಬಳ್ಳಿ: ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸುತ್ತಿದ್ದ ಗೋದಾಮಿನ ಮೇಲೆ ದಾಳಿ ಮಾಡಿದ, ಹುಬ್ಬಳ್ಳಿ -ಧಾರವಾಡ ಮಹಾನಗರ ಪೊಲೀಸ್ ಕಮಿಷನರೇಟ್ ನ ಸಿಸಿಬಿ ವಿಭಾಗದ ಪೊಲೀಸರು, ಅಂದಾಜು 4.42 ಲಕ್ಷ ರೂ ಮೌಲ್ಯದ ಪಡಿತರ ಅಕ್ಕಿ ವಶಪಡಿಸಿಕೊಂಡು, ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಇಲ್ಲಿನ ಅಮರಗೋಳದ ಎಪಿಎಂಸಿ ಗೋದಾಮಿನಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟು, ಕಾಳಸಂತೆಯಲ್ಲಿ ಮಾರಾಟಕ್ಕೆ ಯತ್ನಿಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ, ಸಿಸಿಬಿ ಪೊಲೀಸರು ದಾಳಿ ಮಾಡಿದ್ದು, ಗೋದಾನದಲ್ಲಿ ಸಂಗ್ರಹಿಸಿಟ್ಟಿದ್ದ ಅಂದಾಜು 4.42 ಲಕ್ಷ ರೂ ಮೌಲ್ಯದ ಸುಮಾರು 130 ಕ್ವಿಂಟಲ್ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂದೀಪ ಜರತಾರಘರ ಎಂಬಾತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ನೀಡಲಾಗಿದೆ. ನವನಗರ- ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಿಸಿಬಿ ಪೊಲೀಸರ ಕಾರ್ಯವನ್ನು ಹುಬ್ಬಳ್ಳಿ- ಧಾರವಾಡ ಮಹಾನಗರ ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ ಶ್ಲಾಘಿಸಿದ್ದಾರೆ.