ಕರ್ನಾಟಕದ ಮಟ್ಟಿಗೆ ನಮಗೆ ನಾಲ್ಕಾರು ವಿಧದ ಹಸಿ ಮೆಣಸೂ, ಬ್ಯಾಡಗಿ, ದೇವನೂರು ಮೊದಲಾದ ಒಣಮೆಣಸೇ ಸಾಕು. ಆದರೆ ಇವೆರಡರಲ್ಲಿ (ಅಂದರೆ ಹಸಿ ಅಥವಾ ಒಣ) ಯಾವುದು ಹೆಚ್ಚು ಆರೋಗ್ಯಕರ? ಹಸಿರು ಮೆಣಸಿನ ಆರೋಗ್ಯಲಾಭಗಳು ಸಲಾಡ್,ಚಾಟ್ ಇತ್ಯಾದಿಗಳಲ್ಲಿ ಹಸಿರು ಮೆಣಸಿನ ಬಳಕೆ ಖಾದ್ಯದ ತಾಜಾತನವನ್ನು ಹೆಚ್ಚಿಸುತ್ತದೆ. ಹಸಿರು ಮೆಣಸು ನಾರನ್ನು ಒಳಗೊಂಡಿರುವುದರಿಂದ ಅದರ ಸೇವನೆಯಿಂದ ಜೀರ್ಣಕ್ರಿಯೆ ಉತ್ತಮಗೊಳ್ಳುತ್ತದೆ ಮತ್ತು ಕರುಳು ಆರೋಗ್ಯಯುತವಾಗಿರುತ್ತದೆ. ತೂಕ ಇಳಿಕೆ: ಹಸಿರು ಮೆಣಸಿನಲ್ಲಿ ಕ್ಯಾಲರಿಗಳಿಲ್ಲ,ಹೀಗಾಗಿ ತೂಕ ಇಳಿಕೆಯಲ್ಲಿ ಅದು ತುಂಬ ಪರಿಣಾಮಕಾರಿ ಎಂದು ಪರಿಗಣಿಸಲಾಗಿದೆ. ಇದರ ಸೇವನೆಯು ಶರೀರದ ಚಯಾಪಚಯವನ್ನು ಹೆಚ್ಚಿಸುತ್ತದೆ ಮತ್ತು ತೂಕ ಇಳಿಕೆಗೆ ನೆರವಾಗುತ್ತದೆ. ವಿಟಾಮಿನ್ ಎ ಅನ್ನು ಸಮೃದ್ಧವಾಗಿ ಹೊಂದಿರುವ ಹಸಿರು ಮೆಣಸು ಕಣ್ಣುಗಳು ಮತ್ತು ಚರ್ಮದ ಆರೋಗ್ಯಕ್ಕೂ ಲಾಭದಾಯಕವಾಗಿದೆ. ಆರೋಗ್ಯಕರ ಹೃದಯ ತಾಜಾ ಹಸಿರು ಮೆಣಸಿನಲ್ಲಿರುವ ಬೀಟಾ ಕ್ಯಾರೊಟಿನ್ ಹೃದಯನಾಳೀಯ ವ್ಯವಸ್ಥೆಯು ಸುಗಮವಾಗಿ ಕಾರ್ಯ…
Author: AIN Author
ತಿರುವನಂತಪುರಂ: ಕೇರಳದ (Kerala) ವೈದ್ಯೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದು, ವರದಕ್ಷಿಣೆಗೆಬೇಡಿಕೆ ಇಟ್ಟದ್ದೇ ಇದಕ್ಕೆ ಕಾರಣ ಎಂಬ ಆರೋಪ ಕೇಳಿ ಬಂದಿದೆ. ಮೃತಳನ್ನು ಶಹನಾ (26) ಎಂದು ಗುರುತಿಸಲಾಗಿದೆ. ಇದೀಗ ಕೇರಳದ ಆರೋಗ್ಯ ಸಚಿವೆ ವೀಣಾ ಜಾರ್ಜ್ (Veena George) ಅವರು ಆತ್ಮಹತ್ಯೆ ಪ್ರಕರಣದ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸೂಚಿಸಿದ್ದಾರೆ. ತಿರುವನಂತಪುರಂ ಮೆಡಿಕಲ್ ಕಾಲೇಜಿನ ಸರ್ಜರಿ ವಿಭಾಗದ ಪಿಜಿ ವಿದ್ಯಾರ್ಥಿನಿ ಶಹಾನಾ (Shahana) ಸಂಸ್ಥೆಯ ಬಳಿಯ ಬಾಡಿಗೆ ಅಪಾರ್ಟ್ಮೆಂಟ್ನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ಸ್ನೇಹಿತ ಮದುವೆಯ ಪ್ರಸ್ತಾಪದಿಂದ ಹಿಂದೆ ಸರಿದ ನಂತರ ಶಹನಾ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಆಕೆಯ ಸಂಬಂಧಿಕರು ಆರೋಪಿಸಿದ್ದಾರೆ. ಗೆಳೆಯನ ಕುಟುಂಬವು ಚಿನ್ನ, ಜಮೀನು ಹಾಗೂ ಬಿಎಂಡಬ್ಲ್ಯು ಕಾರಿನ ರೂಪದಲ್ಲಿ ವರದಕ್ಷಿಣೆ ನೀಡುವಂತೆ ಬೇಡಿಕೆ ಇಟ್ಟಿತ್ತು. ಆದರೆ ಈ ಬೇಡಿಕೆಗಳನ್ನು ಈಡೇರಿಸಲು ಶಹಾನಾ ಕುಟುಂಬಕ್ಕೆ ಸಾಧ್ಯವಾಗಲಿಲ್ಲ. ಈ ಹಿನ್ನೆಲೆಯಲ್ಲಿ ವೈದ್ಯಕೀಯ ಪಿಜಿ ವೈದ್ಯರ ಸಂಘದ ಪ್ರತಿನಿಧಿಯೂ ಆಗಿದ್ದ ವೈದ್ಯ ಈಕೆಯ ಜೊತೆಗಿನ ಸಂಬಂಧವನ್ನು ಕೊನೆಗೊಳಿಸಿದ್ದಾನೆ. ಸದ್ಯ…
ದೇಶದಲ್ಲಿ 22 ಕ್ಯಾರೆಟ್ 10 ಗ್ರಾಂ ಗೋಲ್ಡ್ ರೇಟ್ 550 ರೂಪಾಯಿ ಇಳಿಕೆಯಾಗಿದ್ದು 57,150 ರೂಪಾಯಿ ಆಗಿದೆ. ಇದೇ ಸಂದರ್ಭದಲ್ಲಿ 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆಯು ಕೂಡಾ 600 ರೂಪಾಯಿ ಕುಸಿತವಾಗಿದ್ದು ಪ್ರಸ್ತುತ 62,350 ರೂಪಾಯಿ ಆಗಿದೆ. 18 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 450 ರೂಪಾಯಿ ಇಳಿಕೆಯಾಗಿ 46,760 ರೂಪಾಯಿ ಆಗಿದೆ. ಒಂದು ಕೆಜಿ ಬೆಳ್ಳಿ ಬೆಲೆಯು ಇಂದು ಇಳಿಕೆಯಾಗಿದ್ದು, 76,000 ರೂಪಾಯಿ ಆಗಿದೆ. 10 ಗ್ರಾಂ ಲೆಕ್ಕಾಚಾರದಲ್ಲಿ ಬೆಂಗಳೂರು 22 ಕ್ಯಾರೆಟ್ ಚಿನ್ನ: 57,150 ರೂಪಾಯಿ (-550 ರೂಪಾಯಿ) 24 ಕ್ಯಾರೆಟ್ ಚಿನ್ನ: 62,350 ರೂಪಾಯಿ (-600 ರೂಪಾಯಿ) ಮುಂಬೈ 22 ಕ್ಯಾರೆಟ್ ಚಿನ್ನ: 57,150 ರೂಪಾಯಿ (-550 ರೂಪಾಯಿ) 24 ಕ್ಯಾರೆಟ್ ಚಿನ್ನ: 62,350 ರೂಪಾಯಿ (-600 ರೂಪಾಯಿ) ದೆಹಲಿ 22 ಕ್ಯಾರೆಟ್ ಚಿನ್ನ: 57,300 ರೂಪಾಯಿ (-550 ರೂಪಾಯಿ) 24 ಕ್ಯಾರೆಟ್ ಚಿನ್ನ: 62,500 ರೂಪಾಯಿ (-600 ರೂಪಾಯಿ) ಕೇರಳ 22…
ಬೆಂಗಳೂರಿನ ಒರಿಯನ್ ಮಾಲ್ನಲ್ಲಿ ನಂದಿ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಜರುಗಿದೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಟ ರವಿಚಂದ್ರನ್, ರಿಷಬ್ ಶೆಟ್ಟಿ, ಧ್ರುವ ಸರ್ಜಾ ಇನ್ನೂ ಹಲವು ತಾರೆಯರು ಭಾಗಿಯಾಗಿದ್ದಾರೆ. ಜೊತೆಗೆ ಹಿರಿಯ ನಟ ಶ್ರೀನಾಥ್, ನಟಿ ಪ್ರೇಮ, ವಿನೋದ್ ರಾಜ್, ಅನುಪ್ರಭಾಕರ್, ಉಮಾಶ್ರೀ ಇನ್ನೂ ಹಲವು ನಟ-ನಟಿಯರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದು ಮೊದಲ ನಂದಿ ಫಿಲಂ ಅವಾರ್ಡ್ ಆಗಿದ್ದು ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ನಟ ರವಿಚಂದ್ರನ್ ಮಾತನಾಡಿ, ‘ನಂದಿ ಪ್ರಶಸ್ತಿ ನೀಡುತ್ತಿರುವುದು ಬಹಳ ಖುಷಿಯಾಗಿದೆ. ಪ್ರಶಸ್ತಿ ಬಹಳ ಭಾರವಾಗಿದೆ ಅದು ನನಗೆ ಖುಷಿ ಕೊಟ್ಟಿತು, ನನ್ನಂಥಹಾ ಶಿವ ಭಕ್ತನಿಂದ ನಂದಿ ಪ್ರಶಸ್ತಿ ಕೊಡಿಸುತ್ತಿದ್ದೀರ. ಎಲ್ಲರ ಮನೆಗಳಿಗೂ ನಂದಿ ಸೇರುತ್ತದೆ ಎಂಬುದು ನನಗೆ ಖುಷಿ’ ಎಂದರು. ನಟ ಶ್ರೀನಾಥ್ ಅವರಿಗೆ ಜೀವನಮಾನ ಸಾಧನೆಗೆ ಲೈಫ್ ಟೈಮ್ ಅಚೀವ್ಮೆಂಟ್ ಅವಾರ್ಡ್ ನೀಡಲಾಯ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟ ಪೂರ್ವ ಅಧ್ಯಕ್ಷರಾದ ಭಾ.ಮಾ.ಹರೀಶ್, ನಿರ್ಮಾಪಕ ನಿತ್ಯಾನಂದ…
ಕಾಗವಾಡ:- ಪೋಲಿಸ್ ಠಾಣೆಯ ವತಿಯಿಂದ ಪಿಎಸ್ಐ ಎಂ.ಬಿ. ಬಿರಾದರ ಇವರ ನೇತೃತ್ವದಲ್ಲಿ ಪಟ್ಟಣದಲ್ಲಿ ಹೆಲ್ಮೆಟ್ ಧರಿಸುವಂತೆ ವಾಹನ ಸವಾರರಿಗೆ ಜಾಗೃತಿ ಮೂಡಿಸಲು ಬೈಕ್ ರ್ಯಾಲಿ ಹಮ್ಮಿಕೊಳ್ಳಲಾಯಿತು. ಠಾಣಾ ಆರಕ್ಷಕ ಉಪನಿರೀಕ್ಷಕರಾದ ಎಂ.ಬಿ. ಬಿರಾದರ ಇವರ ನೇತೃತ್ವದಲ್ಲಿ ಎಲ್ಲ ಪೊಲೀಸ್ ಸಿಬ್ಬಂದಿಯವರು ಠಾಣೆಯಿಂದ ಹೊರಟು, ಚೆನ್ನಮ್ಮಾ ಸರ್ಕಲ್, ಬಸ್ ನಿಲ್ದಾಣ ಸೇರಿದಂತೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪೊಲೀಸ್ ವಾಹನದೊಂದಿಗೆ ಸಿಬ್ಬಂದಿಯವರು ಬೈಕ್ ಮೇಲೆ ಹೆಲ್ಮೆಟ್ ಧರಿಸುವ ಮೂಲಕ ರ್ಯಾಲಿ ನಡೆಸಿದರು. ಜನದಟ್ಟಣೆ ಇರುವ ಜಾಗದಲ್ಲಿ ಬೈಕ್ ನಿಲ್ಲಿಸಿ, ಮಾತನಾಡಿದ ಪಿಎಸ್ಐ ಎಂ.ಬಿ. ಬಿರಾದರ ಅವರು ಇತ್ತೀಚಿನ ದಿನಗಳಲ್ಲಿ ವಾಹನಗಳ ಸಂಖ್ಯೆ ಹಾಗೂ ಸಂಚಾರ ದಟ್ಟಣೆ ಹೆಚ್ಚಾಗಿದ್ದು, ಕಬ್ಬಿನ ಹಂಗಾಮು ಪ್ರಾರಂಭವಾಗಿದ್ದರಿAದ ರಸ್ತೆ ಮೇಲೆ ವಾಹನ ದಟ್ಟಣೆ ಹೆಚ್ಚುತ್ತಿದೆ. ಇದರಿಂದ ಅಪಘಾತಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಿರುವುದರಿಂದ ವಾಹನ ಸವಾರರು ವಾಹನ ಚಾಲನೆ ಮಾಡುವಾಗ ತಮ್ಮ ಸುರಕ್ಷತೆ ದೃಷ್ಟಿಯಿಂದ ಇಲಾಖೆ ನೀತಿ ನಿಯಮಗಳನ್ನು ಪಾಲಿಸುವ ಮೂಲಕ ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ, ಸುರಕ್ಷಿತ ಪ್ರಯಾಣ ಮಾಡಬೇಕು.…
ಅಥಣಿ : ಕಳೆದ ಹತ್ತಾರು ವರ್ಷಗಳಿಂದ ಬೇಡಿಕೆಯಲ್ಲಿ ಇದ್ದ ಅಥಣಿಯನ್ನು ಜಿಲ್ಲೆಯನ್ನಾಗಿ ಮಾಡಬೇಕು ಎಂದು ನಮ್ಮ ಮಾಳಿ ಸಮಾಜದ ಶ್ರೀ ಮಹಾತ್ಮಾ ಜ್ಯೋತಿಬಾ ಫುಲೆ ಸರ್ಕಲ್ ಯುವ ಕಮೀಟಿ ಹಾಗೂ ಮಾಳಿ ಸಮಾಜ ಯುವಕ ಕಮೀಟಿಯ ಎಲ್ಲ ಸದಸ್ಯರು ಸೇರಿಕೊಂಡು ಈ ಮೂಲಕ “ಅಥಣಿ ಜಿಲ್ಲಾ ಹೋರಾಟ ಸಮೀತಿ” ಗೆ ಬೆಂಬಲವನ್ನು ಘೋಷಿಸುತ್ತಿದ್ದೆವೆ ಎಂದು ಅಧ್ಯಕ್ಷ ರವಿ ಭಾಸಿಂಗಿ ಅವರು ಹೇಳಿದರು. ಅವರು ಸ್ಥಳೀಯ ಶ್ರೀ ರಾಮಲಿಂಗೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡ ಪತ್ರಿಕಾಘೋಷ್ಠಿಯಲ್ಲಿ ಮಾತನಾಡಿ ಸದರಿ ಜಿಲ್ಲಾ ಹೋರಾಟ ಸಮೀತಿ ವತಿಯಿಂದ ಜರುಗುವ ಪ್ರತಿಯೊಂದು ಸಭೆ, ಸಮಾರಂಭ, ಪ್ರತಿಭಟನೆ ಇತ್ಯಾದಿ ಸೇರಿ ಎಲ್ಲದರಲ್ಲಿ ನಮ್ಮ ಸಂಘಟನೆಯ ಸರ್ವರೂ ಸೇರಿ ತನು, ಮನ, ಧನದಿಂದ ಭಾಗವಹಿಸುತ್ತೆವೆ ಎಂದರು. ಅನಂತರ ಸರ್ಕಲ್ ಕಮೀಟಿ ಅಧ್ಯಕ್ಷ ರಮೇಶ ಮಾಳಿ ಮಾತನಾಡಿ ಈ ಹಿಂದೆಯೂ ಕೂಡ ನಮ್ಮ ಸಂಘದಿಂದ ಬೆಂಬಲ ಕೊಟ್ಟಿದ್ದೆವು ಮುಂದೆಯೂ ಕೂಡ ನಾವು ಅವಿರತವಾಗಿ ಬೆಂಬಲ ಸೂಚಿಸಿ ಜೊತೆಗೆ ಇರುತ್ತೆವೆ ಎಂದರು. ಈ ವೇಳೆ…
ಚಂಡೀಗಢ: ಪ್ರೀತಿಗೆ ಗಡಿಯಿಲ್ಲ ಎಂಬುದು ಮತ್ತೆ ಮತ್ತೆ ಸಾಬೀತಾಗುತ್ತಿದೆ. ತಾಯ್ನಾಡು ತೊರೆದು ಪ್ರೇಮಿಯನ್ನು ಸೇರುವವರ ಸಂಖ್ಯೆಯೂ ಹೆಚ್ಚಾಗುತ್ತಿದೆ. ಈಚೆಗೆ ಪಾಕಿಸ್ತಾನದಿಂದ ಭಾರತಕ್ಕೆ ಪ್ರೇಮಿಯನ್ನು ಅರಸಿ ಬಂದು ಸೀಮಾ ಹೈದರ್ ಸುದ್ದಿಯಾಗಿದ್ದರು. ಭಾರತದಿಂದ ಅಂಜು ಎಂಬಾಕೆ ಪಾಕಿಸ್ತಾನಕ್ಕೆ ಹೋಗಿ ಪ್ರಿಯಕರನ ಸೇರಿದಳು. ಅದೇ ಮಾದರಿಯಲ್ಲಿ ಮತ್ತೊಂದು ಸುದ್ದಿ ಈಗ ಸದ್ದು ಮಾಡುತ್ತಿದೆ. ಪಾಕಿಸ್ತಾನದ ಮಹಿಳೆಯೊಬ್ಬರು (Pakistan Women) ಭಾರತಕ್ಕೆ ಬಂದು ಪ್ರಿಯಕರನ ಸೇರಿದ್ದಾರೆ. ಕರಾಚಿ ನಿವಾಸಿ ಜವೇರಿಯಾ ಖಾನುಮ್ ಅಮೃತಸರ ಜಿಲ್ಲೆಯ ಅಟ್ಟಾರಿಯಿಂದ ಭಾರತಕ್ಕೆ ಬಂದಿದ್ದಾರೆ. ಆಕೆ ನಿಶ್ಚಿತ ವರ ಸಮೀರ್ ಖಾನ್ನನ್ನು ಸೇರಿದ್ದಾಳೆ. ವಾಘಾ-ಅಟ್ಟಾರಿ ಅಂತಾರಾಷ್ಟ್ರೀಯ ಗಡಿಯಿಂದ ಭಾರತಕ್ಕೆ ಬಂದಿದ್ದು, ಕೋಲ್ಕತ್ತಾ ನಿವಾಸಿ ಸಮೀರ್ನನ್ನು ಮುಂದಿನ ವರ್ಷದ ಜನವರಿಯಲ್ಲಿ ಮದುವೆಯಾಗಲಿದ್ದಾರೆ. https://ainlivenews.com/allotment-of-charge-of-additional-portfolios-to-four-union-ministers-including-karandlaje/ ಖಾನುಮ್ಗೆ 45 ದಿನಗಳ ವೀಸಾವನ್ನು ನೀಡಲಾಗಿದೆ. ಕೋವಿಡ್ ಸಾಂಕ್ರಾಮಿಕವು ಭಾರತಕ್ಕೆ ಬರುವ ಆಕೆಯ ಯೋಜನೆಗೆ ಐದು ವರ್ಷಗಳ ಕಾಲ ಅಡ್ಡಗಾಲಾಗಿತ್ತು. ಮುಂದಿನ ವರ್ಷ ಜನವರಿಯಲ್ಲಿ ನಾವು ಮದುವೆಯಾಗುತ್ತೇವೆ ಎಂದು ಮಾಧ್ಯಮಗಳಿಗೆ ಜೋಡಿ ಪ್ರತಿಕ್ರಿಯಿಸಿದೆ. ನನಗೆ 45 ದಿನಗಳ ವೀಸಾ ನೀಡಲಾಗಿದೆ.…
ಹಾಸನ : ಮೇಕೆ ಮೇಯಿಸಲು ತೆರಳಿದ್ದ 65 ವರ್ಷದ ವಯಸ್ಸಾದ ಅಜ್ಜಿಯನ್ನು ಕೊಲೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚನ್ನರಾಯಪಟ್ಟಣ ಪೊಲೀಸರು 53 ಗ್ರಾಮ್ ಚಿನ್ನ ಹಾಗೂ ಎರಡು ಜನ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಎಸ್ಪಿ ಮೊಹಮದ್ ಸುಜೀತಾ ಮಾಹಿತಿ ನೀಡಿದರು. ನಗರದ ನಗರ ಪೋಲೀಸ್ ಠಾಣೆಯಲ್ಲಿ ಸುದ್ದಿಗೋಷ್ಠಿ ನಡೆಸಿ ಎರಡು ಪ್ರತ್ಯೇಕ ಕೊಲೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ ಅವರು, ಚನ್ನರಾಯಪಟ್ಟಣ ತಾಲೂಕಿನ ಅಡಗೂರು ಗ್ರಾಮದ ಮೃತ ಸುಶೀಲಮ್ಮ ಎಂಬುವವರು ನ.21 ರಂದು ನಾಯಿಗುಂಡಿ ಹಳ್ಳದ ಸಮೀಪ ಶವವಾಗಿ ಪತ್ತೆಯಾಗಿದ್ದರು. ಇವರ ಮಗ ಚನ್ನರಾಯಪಟ್ಟ ಪೋಲಿಸ್ ಠಾಣೆಯಲ್ಲಿ ದೂರು ನೀಡಿದ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಪೋಲಿಸರು ಇಬ್ಬರು ಆರೋಪಿಗಳಾದ ಅಡುಗೂರು ಗ್ರಾಮದವರಾದ ಕಾರ್ತಿಕ್ ಹಾಗೂ ಸಾಗರ್ ಎಂಬುವವರನ್ನು ಬಂಧಿಸಿದ್ದಾರೆ. ಬಂದಿತ ಅರೋಪಿಗಳಿಂದ ಒಟ್ಟು 53 ಗ್ರಾಮ್ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು. ಸುಶೀಲಮ್ಮ ಜೀವನಾಂಶಕ್ಕಾಗಿ ಮೇಕೆಗಳನ್ನು ಸಾಕಿಕೊಂಡಿದ್ದು, ಪ್ರತಿನಿತ್ಯ ಅವುಗಳನ್ನು ಮೇಯಿಸಲು ಕೆರೆಕೋಡಿ ನಾಯಿಗುಂಡಿ ಹಳ್ಳದ ಕಡೆ ಹೋಗುತ್ತಿದ್ದರು. ನ.…
ಬೆಳ್ಳುಳ್ಳಿ ಅಡುಗೆಮನೆಯಲ್ಲಿ ಮಾತ್ರವಲ್ಲದೆ ಮಲಗುವ ಕೋಣೆಯಲ್ಲಿಯೂ ಬಳಸಿಕೊಳ್ಳಿ. ನೀವು ಪ್ರತಿ ದಿನ ರಾತ್ರಿ ಮಲಗುವ ಮುನ್ನ ನಿಮ್ಮ ದಿಂಬಿನ ಕೆಳಗಡೆ ಬೆಳ್ಳುಳ್ಳಿ ಎಸಳುಗಳನ್ನು ಇಟ್ಟುಕೊಂಡು ಮಲಗಿ. ಇದರಿಂದಾಗಿ ಆರೋಗ್ಯ ಪ್ರಯೋಜನಗಳು ಇಲ್ಲಿವೆ. ಹಿಂದಿನ ಕಾಲದಲ್ಲಿ ಬೆಳ್ಳುಳ್ಳಿಯ ಎರಡು ಮೂರು ಎಸಳುಗಳನ್ನು ದಿಂಬಿನ ಕೆಳಗಡೆ ಇಟ್ಟು ಮಲಗುತ್ತಿದ್ದರು. ಇದರಿಂದಾಗಿ ನೀವು ಮಲಗಿದಂತಹ ಸಮಯದಲ್ಲಿ ಕ್ರಿಮಿ ಕೀಟಗಳು ನಿಮ್ಮ ಹತ್ತಿರ ಬರದಿರಲಿ ಎಂದು, ಅಂದರೆ ಬೆಳ್ಳುಳ್ಳಿಯ ವಾಸನೆಯಿಂದ ಕ್ರಿಮಿ ಕೀಟಗಳನ್ನು ತಡೆಯುವ ಶಕ್ತಿಯಿದೆ ಎಂದು ಹಿರಿಯರು ಹೇಳುತ್ತಿದ್ದರು. ಇದರ ಜೊತೆಗೆ ಬೆಳ್ಳುಳ್ಳಿಗೆ ಕೆಟ್ಟ ಶಕ್ತಿಯನ್ನು ತಡೆಯುವ ಶಕ್ತಿ ಇದೆ. ಇದರಿಂದಾಗಿ ಕೆಟ್ಟ ಶಕ್ತಿ ನಿಮ್ಮ ಹತ್ತಿರ ಸುಳಿಯದಂತೆ ನೋಡಿಕೊಳ್ಳುತ್ತದೆ ಎಂದು ನಂಬಿಕೆ ಇದೆ. ಇಂದಿನ ಬದಲಾದ ಜೀವನಶೈಲಿಯಿಂದಾಗಿ ಜನರು ಹಿಂದಿನ ನಂಬಿಕೆಗಳನ್ನು ಮೂಡನಂಬಿಕೆ ಎಂದು ಹೇಳುವುದು ಕಾಣಬಹುದು. ಆದರೆ ಹಿರಿಯರು ಪಾಲಿಸಿಕೊಂಡು ಬಂದ ಪ್ರತಿಯೊಂದು ನಂಬಿಕೆಯಲ್ಲಿಯೂ ಅದರದೇ ಆದ ವೈಜ್ಞಾನಿಕ ಕಾರಣಗಳಿವೆ. ನಿಮ್ಮ ದಿಂಬಿನ ಕೆಳಗೆ ಬೆಳ್ಳುಳ್ಳಿಯನ್ನು ಇಟ್ಟುಕೊಂಡು ನೀವು ಅದ್ಬುತ ಪ್ರಯೋಜನವನ್ನು ಪಡೆಯಬಹುದಾಗಿದೆ.…
ಸೂರ್ಯೋದಯ: 06.31 AM, ಸೂರ್ಯಾಸ್ತ : 05.54 PM ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078, ಕಾರ್ತೀಕ ಮಾಸ, ಕೃಷ್ಣ ಪಕ್ಷ, ದಕ್ಷಿಣಾಯಣ, ಶರತ್ ಋತು, ತಿಥಿ: ಇವತ್ತು ದ್ವಾದಶಿ 07:13 AM ತನಕ ನಂತರ ತ್ರಯೋದಶಿ ನಕ್ಷತ್ರ: ಇವತ್ತು ಸ್ವಾತಿ 11:50 AM ತನಕ ನಂತರ ವಿಶಾಖ ಯೋಗ: ಇವತ್ತು ಅತಿಗಂಡ10:35 PM ತನಕ ನಂತರ ಸುಕರ್ಮಾ ಕರಣ: ಇವತ್ತು ತೈತಲೆ 07:13 AM ತನಕ ನಂತರ ಗರಜ 07:17 PM ತನಕ ನಂತರ ವಣಿಜ ರಾಹು ಕಾಲ: 04:30 ನಿಂದ 06:00 ವರೆಗೂ ಯಮಗಂಡ: 12:00 ನಿಂದ 01:30 ವರೆಗೂ ಗುಳಿಕ ಕಾಲ: 03:00 ನಿಂದ 4:30 ವರೆಗೂ ಅಮೃತಕಾಲ: 02.37 AM to 04.18 AM ಅಭಿಜಿತ್ ಮುಹುರ್ತ: ಬೆಳಗ್ಗೆ.11:46 ನಿಂದ ಮ.12:30 ವರೆಗೂ ಮೇಷ ರಾಶಿ: ಪಿ ಜಿ ನಿಧಾನಗತಿಯ ಆರ್ಥಿಕ ಚೇತರಿಕೆ,ಖಾನಾವಳಿ ನಡೆಸುವವರಿಗೆ ಆರ್ಥಿಕ ಚೇತರಿಕೆ,ಈ ರಾಶಿಯವರಿಗೆ ಈ ಬಾರಿ ಬಂಪರ್ ಕೊಡುಗೆ,ಗುತ್ತಿಗೆ…