Author: AIN Author

ವಯೋಸಹಜ ಕಾಯಿಲೆಯಿಂದ ಶುಕ್ರವಾರ ಹಿರಿಯ ನಟಿ ಲೀಲಾವತಿ ಅವರು ಕೊನೆಯುಸಿರೆಳೆದರು. ಸ್ಯಾಂಡಲ್​ವುಡ್​​ಗೆ ಈ ಸಾವು ತುಂಬಲಾರದ ನಷ್ಟ ಉಂಟುಮಾಡಿದ್ದು, ಅವರ ಅಗಲಿಕೆಗೆ ಸಿನಿಮಾ ಮತ್ತು ರಾಜಕೀಯ ಕ್ಷೇತ್ರದ ಗಣ್ಯರು ಸೇರಿದಂತೆ ಸಹಸ್ರಾರು ಸಂಖ್ಯೆಯ ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಇಂದು ಬೆಳಗ್ಗೆ 5:30ರಿಂದಲೇ ನೆಲಮಂಗಲದಲ್ಲಿರುವ ಅಂಬೇಡ್ಕರ್ ಮೈದಾನದಲ್ಲಿ ಲೀಲಮ್ಮನ ಪಾರ್ಥಿವ ಶರೀರ ಇರಿಸಲಾಗಿದ್ದು, ಸಾರ್ವಜನಿಕರ ದರ್ಶನಕ್ಕೆ ಮೂಲ ವ್ಯವಸ್ಥೆ ಮಾಡಲಾಗಿದೆ. ಸ್ಥಳಕ್ಕೆ ಅಪಾರ ಸಂಖ್ಯೆಯಲ್ಲಿ ಜನರು ಆಗಮಿಸಿ, ಲೀಲಾವತಿ ಅವರಿಗೆ ಕೈಮುಗಿದು ತೆರಳುತ್ತಿದ್ದಾರೆ. ಇದಾದ ಬಳಿಕ ಬೆಳಗ್ಗೆ 10:45ರಿಂದ ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುವುದು. 11 ಗಂಟೆಗೆ ಸಿಎಂ ಸಿದ್ದರಾಮಯ್ಯ ಅವರು ಭೇಟಿ ಕೊಡಲಿದ್ದು, ಅಂತಿಮ ನಮನ ಸಲ್ಲಿಸಲಿದ್ದಾರೆ. ಮಧ್ಯಾಹ್ನ 2:15ರ ನಂತರ ಲೀಲಾವತಿ ಪಾರ್ಥಿವ ಶರೀರ ಸ್ಥಳಾಂತರಗೊಳ್ಳಲಿದ್ದು, ನೆಲಮಂಗಲದ ತೋಟದ ಮನೆಗೆ ತರಲಾಗುವುದು. ಇಂದು ಮಧ್ಯಾಹ್ನ 3:30ರ ನಂತರ ಅಂತ್ಯಕ್ರಿಯೆ ವಿಧಿವಿಧಾನವು ಬಂಟರ ಸಂಪ್ರದಾಯದಂತೆ ನೆರವೇರಲಿದೆ. ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನಡೆಯಲಿದೆ.

Read More

ಬೆಂಗಳೂರು:- ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ಲೀಲಾವತಿ ಅವರ ನಿಧನಕ್ಕೆ ಕರ್ನಾಟಕ ವಿಧಾನಪರಿಷತ್ ಸದಸ್ಯ ಟಿಎ ಶರವಣ ಅವರು ಸಂತಾಪ ಸೂಚಿಸಿದ್ದಾರೆ. ಈ ಸಂಬಂಧ “X” (ಈ ಹಿಂದೆ ಟ್ವಿಟ್ಟರ್) ಮಾಡಿರುವ ಅವರು, ಕನ್ನಡ ಚಿತ್ರರಂಗದ ಹಿರಿಯ ಕಲಾವಿದೆ ಲೀಲಾವತಿ ಅವರು ವಿಧಿವಶರಾದ ವಿಷಯ ತಿಳಿದು ಅತೀವ ದುಃಖವಾಗಿದೆ. ದಕ್ಷಿಣ ಭಾರತದ ಸುಮಾರು 600ಕ್ಕೂ ಅಧಿಕ ಚಿತ್ರಗಳಲ್ಲಿ ನಟಿಸಿ, ಚಿತ್ರರಂಗಕ್ಕೆ ಅಪಾರ ಸೇವೆ ಸಲ್ಲಿಸಿದ ಅವರ ಅಗಲಿಕೆ ದುಃಖಕರ. ಭಗವಂತ ಅವರ ಆತ್ಮಕ್ಕೆ ಚಿರಶಾಂತಿ ನೀಡಲಿ ಎಂದು ಪ್ರಾರ್ಥಿಸುವೆ, ಅವರ ಕುಟುಂಬ ಹಾಗೂ ಅಭಿಮಾನಿಗಳಿಗೆ ದುಃಖ ಸಹಿಸುವ ಶಕ್ತಿ ದೊರೆಯಲಿ. ಓಂ ಶಾಂತಿ ಎಂದು ಬರೆದುಕೊಂಡಿದ್ದಾರೆ. ಇನ್ನೂ 600ಕ್ಕೂ ಹೆಚ್ಚು ಸಿನಿಮಾಗಳಲ್ಲಿ ಅಭಿನಯಿಸಿದ್ದ ಕಲಾವಿದೆ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ಶುಕ್ರವಾರ ನಿಧನರಾಗಿದ್ದಾರೆ. ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ನಿನ್ನೆ ಮಧ್ಯಾಹ್ನ ದಿಢೀರ್…

Read More

ಮಹಿಳಾ ಪ್ರೀಮಿಯರ್ ಲೀಗ್ ನ ಎರಡನೇ ಋತು ಫೆಬ್ರವರಿ-ಮಾರ್ಚ್‌ನಲ್ಲಿ ಆಯೋಜಿಸುವ ನಿರೀಕ್ಷೆಯಿದೆ. ಪಂದ್ಯಾವಳಿಗೆ ಇನ್ನೂ ಸಾಕಷ್ಟು ಸಮಯ ಉಳಿದಿದೆ, ಆದರೆ ಅದಕ್ಕೂ ಮೊದಲು ಇಂದು ಡಿಸೆಂಬರ್ 9 ರ ಶನಿವಾರದಂದು ಹರಾಜು ಆಯೋಜಿಸಲಾಗುತ್ತಿದೆ. 5 ತಂಡಗಳಿರುವ ಈ ಟೂರ್ನಿಯ ಎರಡನೇ ಹರಾಜು ಇದಾಗಿದೆ. ಈ ಹರಾಜಿನ ವಿಶೇಷತೆಗಳೇನು, ಎಷ್ಟು ಆಟಗಾರರನ್ನು ಬಿಡ್ ಮಾಡಲಾಗುತ್ತದೆ, ತಂಡಗಳ ಬಳಿ ಎಷ್ಟು ಹಣವಿದೆ? ಈ ಎಲ್ಲಾ ಮಾಹಿತಿಯನ್ನು ನೋಡೋಣ. ಕಳೆದ ಸೀಸನ್‌ನಂತೆ ಈ ಬಾರಿ ಕೂಡ ಡಬ್ಲ್ಯುಪಿಎಲ್ 2024 ಹರಾಜು ಮುಂಬೈನಲ್ಲಿ ನಡೆಯಲಿದೆ. ಈ ಬಾರಿಯೂ ಕೇವಲ ಒಂದು ದಿನದ ಕಾರ್ಯಕ್ರಮವಾಗಿದ್ದು, ಮಧ್ಯಾಹ್ನ 2ರಿಂದ ಆರಂಭವಾಗಲಿದೆ. ಐದು ಫ್ರಾಂಚೈಸಿಗಳಾದ – ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್ ಮತ್ತು ಯುಪಿ ವಾರಿಯರ್ಸ್ ದೊಡ್ಡ ಆಟಗಾರರನ್ನು ಪಡೆಯುವತ್ತ ಚಿತ್ತ ನೆಟ್ಟಿದೆ. WPL ನಿಯಮಗಳ ಅಡಿಯಲ್ಲಿ, ಪ್ರತಿ ಫ್ರಾಂಚೈಸಿಯು ತನ್ನ ತಂಡದಲ್ಲಿ ಗರಿಷ್ಠ 18 ಮತ್ತು ಕನಿಷ್ಠ 15 ಆಟಗಾರರನ್ನು ಹೊಂದಿರಬೇಕು. ಇದರಲ್ಲಿ…

Read More

ಬೆಂಗಳೂರು:- ಬಿಜೆಪಿ ನಾಯಕರು ಬರಗಾಲದ ಬಗ್ಗೆ ಸುಮ್ಮನೆ ಮಾತನಾಡುವ ಬದಲು ಕೇಂದ್ರದಿಂದ ಪರಿಹಾರ ತರಲಿ. ಜತೆಗೆ ನರೇಗಾ ಯೋಜನೆಯಡಿ ಮಾನವ ದಿನಗಳನ್ನು 150ಕ್ಕೆ ಹೆಚ್ಚಳ ಮಾಡಿಸಲಿ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬರಗಾಲದ ಪರಿಸ್ಥಿತಿಯಲ್ಲಿ ಕಾಂಗ್ರೆಸ್ ನಾಯಕರು ರಾಜ್ಯ ಬಿಟ್ಟು ತೆಲಂಗಾಣಕ್ಕೆ ಹೋಗಿದ್ದಾರೆ ಎಂಬ ಬಿಜೆಪಿ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು. ಬರಗಾಲ ಬಂದಿದೆ. ವಿಪಕ್ಷ ನಾಯಕರು ಕೂಡ ಬರ ಅಧ್ಯಯನಕ್ಕಾಗಿ ಓಡಾಡಿದ್ದಾರೆ. ಅವರು ಕೇಂದ್ರದಿಂದ ಪರಿಹಾರ ಕೊಡಿಸಲಿ. ನರೇಗಾದಡಿ 100 ಕೆಲಸದ ದಿನಗಳನ್ನು 150 ದಿನಗಳಿಗೆ ವಿಸ್ತರಿಸಬಹುದು. ಇದನ್ನು ಕೇಂದ್ರದಿಂದ ಘೋಷಣೆ ಮಾಡಿಸುತ್ತಿಲ್ಲ ಯಾಕೆ? ಕೇಂದ್ರ ಸರ್ಕಾರದಿಂದ ಪರಿಹಾರ ಹಣ ಕೊಡಿಸುತ್ತಿಲ್ಲ ಯಾಕೆ ಎಂದು ಪ್ರಶ್ನಿಸಿದರು. ನಮ್ಮ ಸರ್ಕಾರದಲ್ಲಿ ಕಂದಾಯ ಹಾಗೂ ಕೃಷಿ ಸಚಿವರು ಎಲ್ಲರಿಗಿಂತ ಮುಂಚಿತವಾಗಿ ರಾಜ್ಯದ ಬರ ಪರಿಸ್ಥಿತಿ ಅಧ್ಯಯನ ಮಾಡಿ ಕೇಂದ್ರಕ್ಕೆ ವರದಿ ಸಲ್ಲಿಸಿದ್ದಾರೆ. ರಾಜ್ಯದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರಕ್ಕೆ ತುತ್ತಾಗಿದ್ದು, ಪರಿಹಾರ ಬೇಕು ಎಂದಿದ್ದಾರೆ. ಈವರೆಗೂ…

Read More

ಬೆಳಗಾವಿ:- ರಾಜಕಾರಣದಲ್ಲಿ ಒಬ್ಬರು ನಾಯಕರ ಪರ, ವಿರೋಧ ಇರ್ತಾರೆ ಎಂದು ವಿಪಕ್ಷ ನಾಯಕ ಆರ್‌.ಅಶೋಕ್‌ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ರಾಜಕಾರಣದಲ್ಲಿ ಒಬ್ಬರು ನಾಯಕರ ಪರ, ವಿರೋಧ ಇರುತ್ತಾರೆ. ಒಬ್ಬರು ಆಯ್ಕೆಯಾದಾಗ ಹೀಗೆ ಹೇಳುತ್ತಾರೆ. ಹಾಗೇ ಕಾಂಗ್ರೆಸ್‌ನಲ್ಲೂ ಡಿಕೆಶಿ ಸಿದ್ದರಾಮಯ್ಯ, ಪರಮೇಶ್ವರ ಸಿದ್ದರಾಮಯ್ಯ ಪರ ವಿರೋಧ ಇದೆ. ಇವೆಲ್ಲವೂ ರಾಜಕಾರಣದಲ್ಲಿ ಕಾಮನ್ ಎಂದರು. ಸಭಾತ್ಯಾಗ ವಿಚಾರದಲ್ಲಿ ಹೊಂದಾಣಿಕೆ ಇಲ್ಲ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಯತ್ನಾಳ ಅವರು ನನ್ನ ಹತ್ತಿರ ಬಂದು ಹೇಳಿದರು. ಪ್ರತಿದಿನ ಧರಣಿ ಮಾಡಿದರೆ ಉತ್ತರ ಕರ್ನಾಟಕದ ಸಮಸ್ಯೆ ಬಗ್ಗೆ ಚರ್ಚೆ ಆಗಲ್ಲ. ನೀವು ಸದನದ ಬಾವಿಗೆ ಇಳಿದರೆ ಚರ್ಚೆ ಆಗಲ್ಲ. ಇಲ್ಲಿಗೆ ಬಂದು ಉತ್ತರ ಕರ್ನಾಟಕದ ಬಗ್ಗೆ ಚರ್ಚೆ ಆಗಬೇಕು. ಉತ್ತರ ಕರ್ನಾಟಕದ ಬಗ್ಗೆ ನಾನು ಮಾತಾಡಬೇಕು. ಹೀಗಾಗಿ ಧರಣಿ ಬೇಡ ಎಂದು ಯತ್ನಾಳ ಹೇಳಿದರು. ನಾನು ಅದಕ್ಕೆ ಮುಂದಿರುವವರನ್ನು ಕರೆದು ಚರ್ಚೆ ಮಾಡಿದೆ. ಇದರಿಂದ ಹಿಂದಿರೋರು ಮುಂದಿರೋರರ ಮಧ್ಯೆ ಕಮ್ಯೂನಿಕೇಷನ್ಸ್ ಗ್ಯಾಪ್ ಆಗಿದೆ ಅಷ್ಟೇ ಎಂದು…

Read More

ನಟಿ ಲೀಲಾವತಿಯವರ 86 ವರ್ಷಗಳ ಬದುಕಿನ ಪಯಣ ಸದಾ ನೆನಪಿನಂಗಳದಲ್ಲಿ ಹಚ್ಚಹಸಿರಾಗಿ ಉಳಿಯುವಂಥದ್ದು. ಸಿನಿಮಾರಂಗ ಕಂಡ ಶ್ರೇಷ್ಠ ಪ್ರತಿಭೆ ಇನ್ನೂ ನೆನಪು ಮಾತ್ರ. ಮೂರು ತಲೆಮಾರುಗಳಿಗೆ ಚಿರಪರಿಚಿತ ನಾಯಕಿ ಲೀಲಾವತಿ. ನಾಯಕಿಗೆ ಹೇಳಿಸಿದಂತೇ ಇದ್ದ ಸುಂದರ ಮುಖ, ಅರಳು ಕಣ್ಣುಗಳು, ತಿದ್ದಿತೀಡಿದಂಥ ಹುಬ್ಬು, ಮೂಗು, ಮೈಮಾಟ ಜತೆಗೆ ಪ್ರಬುದ್ಧ ಅಭಿನಯದೊಂದಿಗೆ ಚಿತ್ರರಂಗದ ಪ್ರವೇಶ. ನಾಯಕಿಯಾಗಿ ಛಾಪು ಮೂಡಿಸಿದ ಲೀಲಾವತಿ ಪೋಷಕ ನಟಿಯಾಗಿಯೂ ಎಲ್ಲರ ಪ್ರೀತಿಗಳಿಸಿಕೊಂಡವರು. ಭಾವಪೂರ್ಣ ಅಭಿನಯಕ್ಕೆ ಹೆಸರಾದ ಲೀಲಾವತಿಯವರು ಅಭಿನಯ ಕ್ಷೇತ್ರಕ್ಕೆ ಬರಲೇಬೇಕೆಂಬ ಹಂಬಲದಿಂದೇನೂ ಬಂದವರಲ್ಲ. ಅವರ ಜೀವನ ತುಂಬ ದುಸ್ತರವಾಗಿತ್ತು. ಚಿಕ್ಕಂದಿನಲ್ಲಿ ತುಂಬ ಬಡತನವನ್ನು ಕಂಡವರು. ಯಾರೋ, ‘ಸಿನಿಮಾದಲ್ಲಿ ತುಂಬ ದುಡ್ಡು ಸಿಗುತ್ತದೆ’ ಎಂದಾಗ, ಅದನ್ನು ಕೇಳಿದ ಲೀಲಾವತಿಯವರು ‘ಹೌದಾ’ ಎಂದು ಕಣ್ಣರಳಿಸಿದ್ದರಂತೆ. ಹಾಗಂತ ಸ್ವತಃ ಲೀಲಾವತಿಯವರೇ ಹೇಳಿಕೊಂಡಿದ್ದಾರೆ. ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯವರಾದ ಲೀಲಾವತಿ ಬಡತನದ ಕಾರಣದಿಂದಲೇ ಸಿನಿಮಾ ಕ್ಷೇತ್ರಕ್ಕೆ ಬಂದವರು. ರಂಗಭೂಮಿ ಹಾಗೂ ಚಲನಚಿತ್ರರಂಗದಲ್ಲಿ ಅಭಿನಯಿಸಬೇಕೆಂಬ ಅದಮ್ಯ ಹಂಬಲದಿಂದ ಅವರು ಹದಿಹರೆಯದಲ್ಲೇ ಮೈಸೂರಿಗೆ ಬಂದರು.…

Read More

ಬೆಂಗಳೂರು:- ಹಿರಿಯ ನಟಿ ಲೀಲಾವತಿ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದಾರೆ. ಈ ಬಗ್ಗೆ X ಮಾಡಿರುವ ಅವರು, ಕನ್ನಡ ಚಿತ್ರರಂಗದ ಹೆಸರಾಂತ ನಟಿ ಲೀಲಾವತಿ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸಿನಿಮಾದ ನೈಜ ಪ್ರತೀಕವಾದ ಅವರು ಹಲವಾರು ಚಲನಚಿತ್ರಗಳಲ್ಲಿ ತಮ್ಮ ಬಹುಮುಖ ನಟನೆಯೊಂದಿಗೆ ಬೆಳ್ಳಿ ಪರದೆಯನ್ನು ಅಲಂಕರಿಸಿದವರು. ಅವರ ವೈವಿಧ್ಯಮಯ ಪಾತ್ರಗಳು ಮತ್ತು ಅದ್ಭುತ ಪ್ರತಿಭೆಯನ್ನು ಸದಾ ಸ್ಮರಿಸಲಾಗುತ್ತದೆ ಮತ್ತು ಪ್ರಶಂಸಿಸಲಾಗುತ್ತದೆ. ಅವರ ಕುಟುಂಬ ಮತ್ತು ಅಭಿಮಾನಿಗಳಿಗೆ ನನ್ನ ಸಂತಾಪಗಳು. ಓಂ ಶಾಂತಿ” ಎಂದು ಪ್ರಧಾನಿ ನರೇಂದ್ರ ಮೋದಿ ತಮ್ಮ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ. ಇನ್ನೂ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ನಟಿ ಡಾ.ಲೀಲಾವತಿ ವಿಧಿವಶರಾಗಿದ್ದಾರೆ. ಇವರ ನಿಧನ ಇಡೀ ಸ್ಯಾಂಡಲ್​ವುಡ್​ಗೆ ಆಘಾತ ಉಂಟು ಮಾಡಿದೆ. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ಅನೇಕ ರಾಜಕೀಯ ಗಣ್ಯರು, ಸಿನಿಮಾ ತಾರೆಯರು ಸೋಷಿಯಲ್​ ಮೀಡಿಯಾದ ಮೂಲಕ ಲೀಲಾವತಿ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ

Read More

ಸಧ್ಯದ ಪರಿಸ್ಥಿತಿಯಲ್ಲಿ ಹೆಚ್ಚು ಮಂದಿಗೆ ನಿದ್ದೆ ಬರದೇ ಮಾತ್ರೆಗಳ ಮೊರೆ ಹೋಗುತ್ತಾರೆ. ಇಂತಹ ಅಭ್ಯಾಸ ಆರೋಗ್ಯಕ್ಕೆ ಹಾನಿ ಮಾಡುತ್ತದೆ. ಇದೀಗ ನಾವು ಈಗ ಹೇಳುತ್ತಿರುವ ಸಲಹೆಯು ನಿಮಗೆ ಉತ್ತಮ ನಿದ್ರೆಯನ್ನು ನೀಡುವುದಲ್ಲದೆ ನಮ್ಮ ದೇಹಕ್ಕೆ ಅಗತ್ಯವಿರುವ ಪೋಷಕಾಂಶಗಳನ್ನು ಸಹ ಒದಗಿಸುತ್ತದೆ. ಇದು ನಮ್ಮನ್ನು ಆರೋಗ್ಯವಾಗಿರಿಸುತ್ತದೆ. 200 ಗ್ರಾಂ ಒಣಗಿದ ಖರ್ಜೂರವನ್ನು ತೆಗೆದುಕೊಂಡು ಅವುಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. 100 ಗ್ರಾಂ ಬಾದಾಮಿಯನ್ನು ತೆಗೆದುಕೊಂಡು ಅವುಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ. ಒಂದು ಮಿಕ್ಸಿ ಜಾರ್ ನಲ್ಲಿ, ಕತ್ತರಿಸಿದ ಖರ್ಜೂರ, ಕತ್ತರಿಸಿದ ಬಾದಾಮಿ, 50 ಗ್ರಾಂ ಕುಂಬಳಕಾಯಿ ಬೀಜಗಳು, 25 ಗ್ರಾಂ ಗಸಗಸೆ ಬೀಜಗಳನ್ನು ಸೇರಿಸಿ ಮೃದುವಾದ ಪುಡಿ ಮಾಡಿ. ಈ ಪುಡಿಯನ್ನು ಸುಮಾರು ಇಪ್ಪತ್ತು ದಿನಗಳವರೆಗೆ ಸಂಗ್ರಹಿಸಬಹುದು. ನೀವು ಪ್ರತಿದಿನ ರಾತ್ರಿ ಮಲಗುವ ಮೊದಲು ಒಂದು ಲೋಟ ಬೆಚ್ಚಗಿನ ಹಾಲಿನಲ್ಲಿ ಒಂದು ಚಮಚ ಪುಡಿಯನ್ನು ತೆಗೆದುಕೊಂಡರೆ, ದೇಹಕ್ಕೆ ಅಗತ್ಯವಾದ ಪೋಷಕಾಂಶಗಳು ಮತ್ತು ಉತ್ತಮ ರಾತ್ರಿ ನಿದ್ರೆ ಸಿಗುತ್ತದೆ. ಬಾದಾಮಿಯಲ್ಲಿರುವ ಮೆಲಟೋನಿನ್ ನಿದ್ರೆಗೆ ಸಹಾಯ…

Read More

ಸ್ಯಾಂಡಲ್ ವುಡ್ ನ ಖ್ಯಾತ ಹಿರಿಯ ನಟಿ ಲೀಲಾವತಿ ಅವರು, ಶುಕ್ರವಾರ ನಿಧನ ಹೊಂದಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಅಪಾರ ಅಭಿಮಾನಿಗಳನ್ನು ಹೊಂದಿರುವ ಲೀಲಾವತಿ ಅವರ ಅಂತಿಮ ದರ್ಶನಕ್ಕೆ ಕುಟುಂಬ ಹಾಗೂ ತಾಲ್ಲೂಕು ಆಡಳಿತ ವ್ಯವಸ್ಥೆ ಮಾಡಿದೆ. ನೆಲಮಂಗಲ ತಹಶೀಲ್ದಾರ್, ಜಿಲ್ಲಾ ಎಸ್​ಪಿ, ಐಜಿಪಿ ರವಿಕಾಂತೇಗೌಡ, ಜಿಲ್ಲಾಧಿಕಾರಿಗಳು ನೆಲಮಂಗಲಕ್ಕೆ ಧಾವಿಸಿದ್ದು, ಹಿರಿಯ ನಟಿಯ ಅಂತಿಮ ದರ್ಶನಕ್ಕೆ ಸಕಲ ವ್ಯವಸ್ಥೆಯ ಜವಾಬ್ದಾರಿ ಹೊತ್ತಿದ್ದಾರೆ. ಅಭಿಮಾನಿಗಳು ನೂಕು-ನುಗ್ಗಲು ಮಾಡಿಕೊಳ್ಳದೆ ಶಾಂತ ರೀತಿಯಲ್ಲಿ ಹಿರಿಯ ನಟಿಯ ಅಂತಿಮ ದರ್ಶನ ಮಾಡಬೇಕೆಂದು ಅಧಿಕಾರಿಗಳು ಮನವಿ ಮಾಡಿದ್ದಾರೆ ನೆಲಮಂಗಲದ ಜೂನಿಯರ್ ಕಾಲೇಜಿನ ಅಂಬೇಡ್ಕರ್ ಮೈದಾನದಲ್ಲಿ ವ್ಯವಸ್ಥೆ ಮಾಡಿದ್ದು, ಇಂದು ಮಧ್ಯಾಹ್ನದ ವರೆಗೆ ಲೀಲಾವತಿಯವರ ಅಂತಿಮ ದರ್ಶನ ಮಾಡಬಹುದುದಾಗಿದೆ. ಆ ಬಳಿಕ ಅಂತಿಮ ಸಂಸ್ಕಾರವನ್ನು ಸೋಲದೇವನಹಳ್ಳಿಯ ತೋಟದಲ್ಲಿ ಮಾಡಲಾಗುತ್ತದೆ. ಇನ್ನೂ ಹಿರಿಯ ನಟಿ ಲೀಲಾವತಿಯವರು ನಿನ್ನೆ ಸಂಜೆ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಕೊನೆ ಉಸಿರೆಳೆದಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ಅಪಾರ ಅಭಿಮಾನಿಗಳನ್ನು ಹೊಂದಿದ್ದಾರೆ.

Read More

ರಾಗಿಯಿಂದ ಮಾಡಿದ ಎಲ್ಲಾ ಆಹಾರಗಳು ದೇಹಕ್ಕೆ ಎಷ್ಟು ಒಳ್ಳೆಯದು ಎಂಬುದು ನಿಮಗೆ ತಿಳಿದಿರಬಹುದು. ಆದರೆ ಮಕ್ಕಳಿಗೂ ಇಷ್ಟವಾಗುವಂತೆ ಮತ್ತು ಬಾಯಿಗೂ ರುಚಿಕೊಡಲು, ರಾಗಿಯ ಜೊತೆ ಇನ್ನೊಂದಿಷ್ಟು ಪದಾರ್ಥಗಳನ್ನು ಸೇರಿಸಿಕೊಳ್ಳುವ ಮೂಲಕ ರಾಗಿ ರೊಟ್ಟಿ ಅಥವಾ ಫಿಂಗರ್ ಮಿಲ್ಲೆಟ್ ರೊಟ್ಟಿ ಮಾಡುವ ಸರಳ ವಿಧಾನ ಇಲ್ಲಿದೆ. ರಾಗಿಯಲ್ಲಿ ಕ್ಯಾಲ್ಸಿಯಂ ಸಮೃದ್ಧವಾಗಿದೆ ಮತ್ತು ಫೈಬರ್ ಅಧಿಕವಾಗಿದೆ ಈ ರಾಗಿ ರೊಟ್ಟಿಯನ್ನು ತಯಾರಿಸುವುದು ಸುಲಭ. . ರಾಗಿ ರೊಟ್ಟಿ ಮಾಡಲು ಬೇಕಾಗುವ ಸಾಮಾಗ್ರಿಗಳು ರಾಗಿ ಹಿಟ್ಟು – 1 ಕಪ್ ಸೌತೆಕಾಯಿ – 1/2 ಕಪ್ ಕ್ಯಾರೆಟ್ – 1/2 ಕಪ್ ತೆಂಗಿನಕಾಯಿ – 1/4 ಕಪ್ ಶುಂಠಿ – 1 ಇಂಚು ಹೆಚ್ಚಿದ ಮೆಣಸಿನ ಕಾಯಿ – 1 ಸಣ್ಣಗೆ ಹೆಚ್ಚಿದ ಜೀರಿಗೆ – 1/2 ಚಮಚ ಸಬ್ಬಸಿಗೆ ಸೊಪ್ಪು ಸಣ್ಣಗೆ ಹೆಚ್ಚಿದ ಈರುಳ್ಳಿ – 1 ಉಪ್ಪು ರುಚಿಗೆ ತಕ್ಕಷ್ಟು ನೀರು – 1/2 ಕಪ್ ಈ ಎಲ್ಲಾ ಸಾಮಾಗ್ರಿಗಳನ್ನು ಒಂದು ಬೌಲ್​​​ನಲ್ಲಿ…

Read More