Author: AIN Author

ಬಿಗ್ ಬಾಸ್ ಮನೆ (Bigg Boss Kannada 10) ಇದೀಗ ಅಲ್ಲೋಲ ಕಲ್ಲೋಲ ಆಗಿದೆ. ಕಾರ್ತಿಕ್ ಮತ್ತು ವಿನಯ್ ಜಟಾಪಟಿಗೆ ಸ್ಪರ್ಧಿಗಳು ಸುಸ್ತಾಗಿದ್ದಾರೆ. ಕಾರ್ತಿಕ್ ಕಡೆಯಿಂದ ಚಪ್ಪಲಿ ಏಟು ಬಿದ್ದಿದೆ ಅಂತ ವಿನಯ್ ಪರ ನಮ್ರತಾ ಗುಡುಗಿದ್ದಾರೆ. ಈ ವೇಳೆ, ಎದುರಾಳಿ ತಂಡದ ಸಂಗೀತಾ ಮೇಲೆ ನಮ್ರತಾ (Namratha Gowda) ತಿರುಗಿಬಿದ್ದಿದ್ದಾರೆ. ಅವಳು ಯಾವ ಸೀಮೆ ರಾಣಿ ಎಂದು ನಮ್ರತಾ ಕಿಡಿಕಾರಿದ್ದಾರೆ. ವಿನಯ್ ರಾಕ್ಷಸನಾದ್ಮೇಲೆ ಇಬ್ಬರ ನಡುವಿನ ಜಗಳ ಬೇರೆಯದ್ದೇ ಹಂತ ತಲುಪಿದೆ. ಕಾರ್ತಿಕ್ ಮುಖಕ್ಕೆ ಚಪಾತಿ ಹಿಟ್ಟಿನಿಂದ ವಿನಯ್ ಜೋರಾಗಿ ಬೀಸಿದರು. ಇದು ದೈಹಿಕ ದೌರ್ಜನ್ಯ ಅಂತ ಕಾರ್ತಿಕ್ ಹೇಳುತ್ತಿದ್ದರೂ, ವಿನಯ್ ನಿಲ್ಲಿಸಲಿಲ್ಲ. ಸಿಟ್ಟಿನಿಂದ ಕಾರ್ತಿಕ್ ಚಪ್ಪಲಿಯನ್ನ ನೆಲಕ್ಕೆ ಜೋರಾಗಿ ಬೀಸಿದರು. ಆಗ ಚಪ್ಪಲಿ ಬೌನ್ಸ್ ಆಗಿ ವಿನಯ್‌ಗೆ ತಾಕಿತು. ಪರಿಣಾಮ, ವಿನಯ್ ದೊಡ್ಡ ರಂಪ ಮಾಡಿದರು. https://ainlivenews.com/good-news-for-tourists-going-to-nandibetta-hill-is-very-easy-from-now-on/ ನನಗೆ ಚಪ್ಪಲಿಯಲ್ಲಿ ಹೊಡಿತೀಯಾ? ಇವನ ಹತ್ತಿರ ಚಪ್ಪಲಿಯಲ್ಲಿ ಹೊಡೆಸಿಕೊಂಡು ನಾನಿಲ್ಲಿ ಇರಬೇಕಾ? ನಾನಿಲ್ಲಿ ಇರೋಲ್ಲ. ಆಚೆ ಹೋಗ್ಬೇಕು ಎಂದು ವಿನಯ್…

Read More

ಸೂರತ್: ಇಂಡಿಯಾ ಕ್ಯಾಪಿಟಲ್ಸ್ ಹಾಗೂ ಗುಜರಾತ್ ಜೈಂಟ್ಸ್ ನಡುವಿನ ಎಲಿಮಿನೇಟರ್ ಪಂದ್ಯದ ವೇಳೆ ಭಾರತದ ಮಾಜಿ ಆಟಗಾರ ಗೌತಮ್ ಗಂಭೀರ್ (Gautam Gambhir) ಹಾಗೂ ವೇಗದ ಬೌಲರ್ ಶ್ರೀಶಾಂತ್ (Sreesanth) ನಡುವಿನ ಗಲಾಟೆ ವಿಚಾರವಾಗಿ ಶ್ರೀಶಾಂತ್‍ಗೆ ನೋಟಿಸ್‍ನ ಬಿಸಿ ತಟ್ಟಿದೆ.  ಗೌತಮ್ ಗಂಭೀರ್ ಫಿಕ್ಸರ್ ಎಂದು ಕರೆದಿದ್ದಾರೆ ಎಂದು ಶ್ರೀಶಾಂತ್ ಆರೋಪಿಸಿದ್ದರು. ಈಗ ಅವರಿಗೆ ಲೆಜೆಂಡ್ಸ್ ಲೀಗ್ ಕ್ರಿಕೆಟ್ (Legends League Cricket) ಕಮಿಷನರ್ ಲೀಗಲ್ ನೋಟಿಸ್ ನೀಡಿದ್ದಾರೆ. ಟಿ20 ಟೂರ್ನಿಯಲ್ಲಿ ಆಡುವ ವೇಳೆ ಒಪ್ಪಂದ ಉಲ್ಲಂಘಿಸಿದ್ದಕ್ಕಾಗಿ ಶ್ರೀಶಾಂತ್ ತಪ್ಪಿತಸ್ಥರು ಎಂದು ನೋಟಿಸ್‍ನಲ್ಲಿ ಹೇಳಲಾಗಿದೆ. https://ainlivenews.com/sunny-deol-drunken-bollywood-actor-reveals-rumors/ ಆಟಗಾರನನ್ನು ಟೀಕಿಸುವ ವೀಡಿಯೊಗಳನ್ನು ತೆಗೆದುಹಾಕಿದರೆ ಮಾತ್ರ ಅವರೊಂದಿಗೆ ಮಾತುಕತೆ ಮಾಡಲಾಗುವುದು ಎಂದು ಹೇಳಲಾಗಿದೆ. ಇಬ್ಬರ ಗಲಾಟೆ ವಿಚಾರವಾಗಿ ಅಂಪೈರ್‌ಗಳು ತಮ್ಮ ವರದಿಯನ್ನು ಕಳಿಸಿದ್ದು, ಶ್ರೀಶಾಂತ್ ಅವರನ್ನು ಫಿಕ್ಸರ್ ಎಂದು ಕರೆದ ಬಗ್ಗೆ ಅದರಲ್ಲಿ ಮಾಹಿತಿ ಇಲ್ಲ. ಶ್ರೀಶಾಂತ್ ಅವರು ಒಂದೆರಡು ವೀಡಿಯೋಗಳನ್ನು ಬಿಡುಗಡೆ ಮಾಡಿದ್ದು, ಅದರಲ್ಲಿ ಗಂಭೀರ್ ಅವರ ವಿರುದ್ಧ ಆರೋಪಗಳನ್ನು ಮಾಡಿದ್ದಾರೆ. ಈ ಇಬ್ಬರ…

Read More

ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ (Leelavathi) ನಿಧನಕ್ಕೆ ಸಿಎಂ ಸಿದ್ದರಾಮಯ್ಯ (Cm Siddaramaiah) ಅವರು ಸಂತಾಪ ಸೂಚಿಸಿದ್ದಾರೆ. ಇಂದು ಲೋ ಬಿ ಪಿ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಿಸಿದ್ದರು. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ವಿಧಿವಶರಾಗಿದ್ದಾರೆ. ಲೀಲಾವತಿ ಅವರ ನಿಧನಕ್ಕೆ ಸಿಎಂ ಸಂತಾಪ ವ್ಯಕ್ತಪಡಿಸಿದ್ದಾರೆ. ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಅಗಲಿಕೆಯ ಸುದ್ದಿ ನೋವುಂಟು ಮಾಡಿದೆ. ಕಳೆದ ವಾರವಷ್ಟೇ ಅವರು ಅನಾರೋಗ್ಯಕ್ಕೀಡಾದ ವಿಚಾರ ತಿಳಿದು ಅವರ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿ ಪುತ್ರ ವಿನೋದ್ ರಾಜ್ ಕುಮಾರ್ ಅವರೊಂದಿಗೆ ಮಾತನಾಡಿದ್ದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ಸಿಎಂ ಸಿದ್ದರಾಮಯ್ಯ ಬರೆದುಕೊಂಡಿದ್ದಾರೆ.  https://twitter.com/CMofKarnataka/status/1733106836243615864?ref_src=twsrc%5Etfw%7Ctwcamp%5Etweetembed%7Ctwterm%5E1733106307954282835%7Ctwgr%5E5c2226957c8c1f7e6ec34c475a034b536e95dd04%7Ctwcon%5Es1_&ref_url=https%3A%2F%2Fpublictv.in%2Fcm-siddaramaiad-reacts-about-actress-leelavathi-death%2F ಹಲವು ದಶಕಗಳ ಕಾಲ ತಮ್ಮ ಮನೋಜ್ಞ ಅಭಿನಯದ ಮೂಲಕ ಪ್ರೇಕ್ಷಕರನ್ನು ರಂಜಿಸಿದ್ದ ಲೀಲಾವತಿ ಅವರು ಗುಣಮುಖರಾಗಿ ಇನ್ನಷ್ಟು ಕಾಲ ನಮ್ಮ ನಡುವೆ ಇರುತ್ತಾರೆಂಬ ನನ್ನ ನಂಬಿಕೆ ಹುಸಿಯಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ದೊರಕಲಿ, ಅವರ ಕುಟುಂಬ ವರ್ಗಕ್ಕೆ ಈ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು…

Read More

ನವದೆಹಲಿ: ಸಂಸತ್’ನಲ್ಲಿ ಪ್ರಶ್ನೆ ಕೇಳಲು ಲಂಚ ಪಡೆದಿರುವ ಆರೋಪಕ್ಕೆ ಸಂಬಂಧಿಸಿದಂತೆ ತೃಣಮೂಲ ಕಾಂಗ್ರೆಸ್‌ನ (TMC) ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದಿಂದ ಉಚ್ಚಾಟಿಸಲಾಗಿದೆ. ನೀತಿ ಸಮಿತಿಯ ವರದಿಯನ್ನು ಇಂದು ಲೋಕಸಭೆಯಲ್ಲಿ ಮಂಡಿಸಲಾಯಿತು. ವರದಿಯನ್ನು ಆಧರಿಸಿ ಲೋಕಸಭೆಯಿಂದ ಮಹುವಾ ಮೊಯಿತ್ರಾ (Mahua Moitra) ಅವರು ಉಚ್ಚಾಟನೆಗೊಂಡಿದ್ದಾರೆ. ಮೊಯಿತ್ರಾ ಅವರು ಸಂಸತ್ತಿನಲ್ಲಿ ನರೇಂದ್ರ ಮೋದಿ ಸರ್ಕಾರವನ್ನು ಟೀಕಿಸುವ ಪ್ರಶ್ನೆಗಳನ್ನು ಕೇಳುವ ಸಲುವಾಗಿ ಉದ್ಯಮಿ ದರ್ಶನ್ ಹಿರಾನಂದನಿ ಅವರಿಂದ 2 ಕೋಟಿ ರೂ. ನಗದು ಮತ್ತು ಐಷಾರಾಮಿ ಉಡುಗೊರೆ ವಸ್ತುಗಳು ಸೇರಿದಂತೆ ಲಂಚ ಪಡೆದ ಆರೋಪ ಹೊತ್ತಿದ್ದರು. https://ainlivenews.com/sunny-deol-drunken-bollywood-actor-reveals-rumors/ ಮಹುವಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸುವಂತೆ ಶಿಫಾರಸು ಮಾಡಿರುವ ವರದಿಯನ್ನು ಬಿಜೆಪಿ ಸಂಸದ ವಿನೋದ್‌ ಕುಮಾರ್‌ ಸೋನಕರ್‌ ನೇತೃತ್ವದ ನೀತಿ ಸಮಿತಿಯು ನ.9 ರಂದು ಅಂಗೀಕರಿಸಿತ್ತು. ಮಹುವಾ ಅವರನ್ನು ಉಚ್ಚಾಟನೆ ಮಾಡಬೇಕಾದರೆ ಈ ಬಗ್ಗೆ ಸರ್ಕಾರ ನಿಲುವಳಿ ಮಂಡಿಸಿ, ಸದನದ ಅಂಗೀಕಾರ ಪಡೆಯಬೇಕಿತ್ತು. ಪ್ರಕರಣ ಸಂಬಂಧ ಶುಕ್ರವಾರ ಬಿರುಸಿನ ಚರ್ಚೆ ಮತ್ತು ಧ್ವನಿ ಮತದ ನಂತರ ಸ್ಪೀಕರ್‌ ಓಂ…

Read More

ಕನ್ನಡ ಸಿನಿಮಾ ರಂಗದ ಖ್ಯಾತ ನಟಿ ಲೀಲಾವತಿ ಅವರು ವಯೋಸಹಜ ಕಾಯಿಲೆಯಿಂದ ನಿಧನರಾಗಿದ್ದಾರೆ (Passed away). ಅವರ ಆರೋಗ್ಯದಲ್ಲಿ ಮತ್ತೆ ಸಮಸ್ಯೆ ಕಾಣಿಸಿಕೊಂಡಿದ್ದರ ಹಿನ್ನೆಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಎರಡು ದಿನಗಳಿಂದ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡಿತ್ತು. ಇಂದು ಮಧ್ಯಾಹ್ನ ದಿಢೀರ್ ಅಂತ ಲೋ ಬಿಪಿ ಸಮಸ್ಯೆ ಶುರುವಾಗಿದೆ. https://ainlivenews.com/demand-money-using-bangalore-district-collectors-name-register-fir/ ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ನಿಧನರಾಗಿದ್ದಾರೆ. ಲೀಲಾವತಿ (Leelavathi) ಅವರು ಕೆಲವು ದಿನಗಳಿಂದ ಅನಾರೋಗ್ಯ ಕಾರಣದಿಂದಾಗಿ ಹಾಸಿಗೆ ಹಿಡಿದಿದ್ದರು. ಅವರ ಆರೋಗ್ಯ (Health) ಯೋಗ ಕ್ಷೇಮ ವಿಚಾರಿಸಲು ಖುದ್ದು ಸಿಎಂ ಸಿದ್ದರಾಮಯ್ಯ (Cm Siddaramiah) ನಟಿ ಲೀಲಾವತಿ ಮನೆಗೆ ಭೇಟಿ ನೀಡಿದ್ದರು.

Read More

ಮೈಸೂರು: ಚಿರತೆ ಸೆರೆ ಹಿಡಿಯಲು ಇಟ್ಟ ಬೋನಿಗೆ ತಾಯಿ ಚಿರತೆ ಬಿದ್ದು ಆಯರಹಳ್ಳಿ ಗ್ರಾಮದ ಜನರು ನಿಟ್ಟುಸಿರು ಬಿಡುವಂತಾಗಿದೆ. ಕೆಲ ದಿನಗಳ ಹಿಂದೆ ಮೈಸೂರು ತಾಲ್ಲೂಕಿನ ಆಯರಹಳ್ಳಿ ಗ್ರಾಮಸ್ಥರು ಗದ್ದೆಯಲ್ಲಿ ಕಬ್ಬು ಕಟಾವು ಮಾಡುವ ಸಂದರ್ಭದಲ್ಲಿ ಕಬ್ಬಿನ ಗದ್ದೆಯಲ್ಲಿ ಮೂರು ಚಿರತೆ ಮರಿಗಳು ಪತ್ತೆಯಾಗಿತ್ತು. ಈ ಕುರಿತು ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದು, https://ainlivenews.com/demand-money-using-bangalore-district-collectors-name-register-fir/  ಸ್ಥಳಕ್ಕೆ ಬಂದ ಅಧಿಕಾರಿಗಳು ಚಿರತೆ ಮರಿಯನ್ನು ರಕ್ಷಿಸಿ ತಾಯಿ ಚಿರತೆ ಸೆರೆಗೆ ಬೋನ್ ಇಟ್ಟಿದ್ದರು ಅದರಂತೆ ಗುರುವಾರ ರಾತ್ರಿ ಮರಿಗಳನ್ನು ಹುಡುಕಿಕೊಂಡು ಬಂದ ಚಿರತೆ ಅರಣ್ಯ ಅಧಿಕಾರಿಗಳು ಇಟ್ಟ ಬೋನ್ ನಲ್ಲಿ ಬಂಧಿಯಾಗಿದೆ. ಈ ಕುರಿತು ಗ್ರಾಮಸ್ಥರು ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದು ಸ್ಥಳಕ್ಕೆ ಬಂದ ಅಧಿಕಾರಿಗಳು ಚಿರತೆಯನ್ನು ರಕ್ಷಣೆ ಮಾಡಿದ್ದಾರೆ. ಇದರೊಂದಿಗೆ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ.

Read More

ಶಿವಮೊಗ್ಗ: ಸಿದ್ದರಾಮಯ್ಯ (Siddaramaiah) ಅವರು ಮುಖ್ಯಮಂತ್ರಿಯಾಗಿ ಅಲ್ಪಸಂಖ್ಯಾತರಿಗೆ ಹಣ ಕೊಡಲು ನಮ್ಮ ಅಭ್ಯಂತರ ಇಲ್ಲ. 10 ಸಾವಿರ ಕೋಟಿ ಕೊಡುತ್ತೇನೆ ಎಂದು ಅಲ್ಪಸಂಖ್ಯಾತರ ಓಲೈಕೆ ಮಾಡುತ್ತಿರುವುದು ಶೋಭೆ ತರುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ (BS Yediyurappa) ತಿಳಿಸಿದರು. ಶಿವಮೊಗ್ಗದಲ್ಲಿ (Shivamogga) ಮಾಧ್ಯಮದವರ ಜೊತೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಅಲ್ಪಸಂಖ್ಯಾತರ ಪರ ಹೇಳಿಕೆ ಹಿಂದೂಗಳ ಆಕ್ರೋಶಕ್ಕೆ ಅವಕಾಶ ಆಗುತ್ತದೆ. ಈ ರೀತಿಯ ಮಾತುಗಳನ್ನು ಮುಖ್ಯಮಂತ್ರಿ ಅವರಿಂದ ನಿರೀಕ್ಷೆ ಮಾಡಿರಲಿಲ್ಲ. ಈಗಾಗಲೇ ಅವರ ಹೇಳಿಕೆಯನ್ನು ಮಠಾಧಿಪತಿಗಳು ಸೇರಿದಂತೆ ಎಲ್ಲರೂ ಖಂಡಿಸಿದ್ದಾರೆ. ಏನಾದರೂ ಮಾತನಾಡಬೇಕಾದರೆ ಎಚ್ಚರಿಕೆ ವಹಿಸಿ ಮಾತನಾಡಬೇಕು ಎಂಬುದು ನನ್ನ ಸಲಹೆ ಎಂದರು.  https://ainlivenews.com/demand-money-using-bangalore-district-collectors-name-register-fir/ ಲೋಕಸಭೆ ಚುನಾವಣೆಯಲ್ಲಿ (Lok Sabha Election) ಮೋದಿ ಹೆಸರಿನಲ್ಲಿ ನೂರಕ್ಕೆ ನೂರು ಗೆಲ್ಲುವುದರಲ್ಲಿ ಯಾವುದೇ ಅನುಮಾನ ಬೇಡ. ಓಲೈಕೆ ರಾಜಕಾರಣದಲ್ಲಿ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದರೆ ಅದು ಸಾಧ್ಯವಿಲ್ಲ. ಬಿಜೆಪಿ (BJP) ಪರವಾದ, ಮೋದಿ ಪರವಾದ ವಾತಾವರಣದಿಂದ ನಾವು ರಾಜ್ಯದ ಎಲ್ಲಾ ಕ್ಷೇತ್ರಗಳಲ್ಲಿ ಗೆಲ್ಲಲ್ಲು ಪ್ರಯತ್ನಿಸುತ್ತಿದ್ದೇವೆ.…

Read More

ಬೆಳಗಾವಿ: ಹುಬ್ಬಳ್ಳಿಯಲ್ಲಿ ನಡೆದ ಮೌಲ್ವಿ ಕಾರ್ಯಕ್ರಮಕ್ಕೆ ಐಸಿಸ್ ನಂಟು ಇದೆ ಎಂದು ಶಾಸಕ ಯತ್ನಾಳ್ (Basangouda Patil Yatnal) ಆರೋಪಕ್ಕೆ ಸಚಿವ ಹೆಚ್‌ಕೆ ಪಾಟೀಲ್ (HK Patil) ಆಕ್ರೋಶ ಹೊರಹಾಕಿದ್ದಾರೆ. ಬೆಳಗಾವಿಯ (Belagavi) ಕೊಂಡಸಕೊಪ್ಪದಲ್ಲಿ ಸಚಿವ ಹೆಚ್‌ಕೆ ಪಾಟೀಲ್ ಪ್ರತಿಕ್ರಿಯೆ ನೀಡಿ, ಸಂತ ಸೂಫಿಗಳ ಪ್ರಭಾವಕ್ಕೆ ಒಳಗಾದವರು ಉಗ್ರಗಾಮಿ ಆಗ್ತಾರಾ? ಭ್ರಾತೃತ್ವ ಭಾವನೆ ಬೆಳೆಸಲು ಪ್ರಯತ್ನ ಮಾಡುವವರು, ಸಂತರನ್ನು ಸಮ ಭಾವನೆಯಿಂದ ನೋಡುವವರು, https://ainlivenews.com/demand-money-using-bangalore-district-collectors-name-register-fir/  ಟೆರರಿಸ್ಟ್ ಮತ್ತು ಉಗ್ರಗಾಮಿ ಅಂತ ಹೇಳುವುದು ಸರಿಯಲ್ಲ. ತಪ್ಪು ಗ್ರಹಿಕೆ ಮತ್ತು ಮಾಹಿತಿ ಕೊರತೆ ಮೂಲಕ ಹಾಗೆ ಹೇಳುವುದು ಸರಿಯಲ್ಲ ಎಂದರು. ಇದೇ ವೇಳೆ ಕೊಂಡಸಕೊಪ್ಪದ ಪ್ರತಿಭಟನೆ ಸ್ಥಳದಲ್ಲಿ ಅಕ್ರಮ ಸಾರಾಯಿ ನಿಷೇಧಕ್ಕೆ ಮಹಿಳೆಯ ಒತ್ತಾಯದ ಬಗ್ಗೆ ಮಾತನಾಡಿ, ಅಕ್ರಮ ಮಾರಾಟದ ಬಗ್ಗೆ ತಕರಾರು ಮಾಡಿದ್ರು. ಆಗ ನಾನು ನೀನು ಹೆಣ್ಣು ಮಗಳಮ್ಮ, ನೀನು ಮದ್ಯ ನಿಷೇಧಕ್ಕೆ ಒತ್ತಾಯ ಮಾಡು. ಕೇವಲ ಅಕ್ರಮ ಮಾರಾಟಕ್ಕೆ ಒತ್ತು ಕೊಡಬೇಡ ಅಂತ ಹೇಳಿದೆ ಎಂದರು. 

Read More

ದುಬೈ: ಐಸಿಸಿ (ICC) ಟಿ20 ಬೌಲಿಂಗ್‌ನಲ್ಲಿ ಭಾರತ ತಂಡದ ಯುವ ಲೆಗ್‌ ಸ್ಪಿನ್ನರ್‌ ರವಿ ಬಿಷ್ಣೋಯ್‌ (Ravi Bishnoi) ನಂಬರ್‌ 1 ಸ್ಥಾನ ಅಲಂಕರಿಸಿದ್ದಾರೆ. ಆ ಮೂಲಕ ಐಸಿಸಿ ರ‍್ಯಾಂಕಿಂಗ್‌ಗಳಲ್ಲಿ ಭಾರತ ತನ್ನ ಪ್ರಾಬಲ್ಯ ಮುಂದುವರಿಸಿದೆ. ರವಿ ಬಿಷ್ಣೋಯ್, ಈಚೆಗೆ ನಡೆದ ಆಸ್ಟ್ರೇಲಿಯಾ ವಿರುದ್ಧದ 5 ಪಂದ್ಯಗಳ ಸರಣಿಯಲ್ಲಿ ತಮ್ಮ ಅದ್ಭುತ ಪ್ರದರ್ಶನದೊಂದಿಗೆ ICC T20I ಶ್ರೇಯಾಂಕ ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ಟಿ20 ಬೌಲರ್‌ಗಳ ರ‍್ಯಾಂಕಿಂಗ್‌ ಪಟ್ಟಿಯಲ್ಲಿ ನಂಬರ್‌ 1 ಸ್ಥಾನದಲ್ಲಿದ್ದ ರಶೀದ್‌ ಖಾನ್‌ ಅವರನ್ನು ಹಿಂದಿಕ್ಕಿ ರವಿ ಬಿಷ್ಣೋಯ್‌ ಅಗ್ರಸ್ಥಾನ ಗಳಿಸಿದ್ದಾರೆ. 699 ರೇಟಿಂಗ್‌ ಪಾಯಿಂಟ್ಸ್‌ ಮೂಲಕ ಬಿಷ್ಣೋಯ್‌ ಮೊದಲನೇ ಸ್ಥಾನ ಪಡೆದುಕೊಂಡಿದ್ದಾರೆ. ಶುಭಮನ್ ಗಿಲ್, ರವಿಚಂದ್ರನ್ ಅಶ್ವಿನ್ ಮತ್ತು ಸೂರ್ಯಕುಮಾರ್ ಯಾದವ್ ಕ್ರಮವಾಗಿ ODI ಬ್ಯಾಟರ್, ಟೆಸ್ಟ್ ಬೌಲರ್ ಮತ್ತು T20I ಬ್ಯಾಟರ್‌ಗಳ ಶ್ರೇಯಾಂಕದಲ್ಲಿ ಅಗ್ರ ಸ್ಥಾನಗಳನ್ನು ಪಡೆದುಕೊಂಡಿದ್ದಾರೆ. https://ainlivenews.com/demand-money-using-bangalore-district-collectors-name-register-fir/ ಆಲ್‌ರೌಂಡರ್‌ಗಳ ವಿಷಯಕ್ಕೆ ಬಂದರೆ ಟೆಸ್ಟ್‌ನಲ್ಲಿ ರವೀಂದ್ರ ಜಡೇಜಾ ಮೊದಲ ಸ್ಥಾನ ಪಡೆದಿದ್ದಾರೆ. ಬಿಷ್ಣೋಯ್ ಅವರೊಂದಿಗೆ ಭಾರತೀಯ ಆಟಗಾರರು…

Read More

ಬೆಂಗಳೂರು: ಆ ಯುವಕ ಡಿಲವರಿ ಬಾಯ್ ಆಗಿ ಕೆಲಸ ಮಾಡ್ತಿದ್ದ..ಈ ನಡುವೆ ಯುವತಿಯೊಬ್ಬಳ ಪರಿಚಯವಾಗಿ ಅದು ಸ್ನೇಹವಾಗಿತ್ತು..ದಿನ ಕಳೆದಂತೆ ಪ್ರೀತಿಯಾಗಿ ಇಬ್ಬರೂ ಪ್ರಣಯ ಪಕ್ಷಿಗಳಂತೆ ಓಡಾಡ್ತಿದ್ರು..ಹೀಗೆ ಎಂಟು ವರ್ಷಗಳೇ ಕಳೆದಿತ್ತು..ಆದ್ರೆ ಆ ಪ್ರೀತಿ ಮದುವೆ ಹಂತಕ್ಕೆ ಬರ್ತಿದ್ದಂತೆ,ಯುವತಿ ಒಲ್ಲೆ ಎಂದಿದ್ಲು..ಅದ್ಕೆ ಯುವಕ ಏನ್ಮಾಡ್ಬಿಟ್ಟ ಗೊತ್ತಾ . ಪ್ರೀತಿ ಕೊಂದ ಕೊಲೆಗಾತಿ…. ಈ ಸ್ಟೋರಿ ನೋಡಿ. ಈ ಪೋಟೋದಲ್ಲಿ ಕಾಣ್ತಿರೋ ಜೋಡಿಯನ್ನೊಮ್ಮೆ ನೋಡಿ..ಹೆಸ್ರು ರಾಕೇಶ್, ಪ್ರಿಯಾಂಕ ಅಂತ .ರಾಕೇಶ್ ಮೂಲತಃ ಅನೇಕಲ್ ತಾಲೂಕಿನ ಕಲ್ಲಬಾಳು ಗ್ರಾಮದವನು. ವೃತ್ತಿಯಲ್ಲಿ ಡೆಲಿವರಿ ಬಾಯ್ ಆಗಿದ್ದ ..ಹೀಗಿರುವಾಗ ಕೆಂಗೇರಿಯ ಕೋಡಿಪಾಳ್ಯದ ಬಳಿ ದೊಡ್ಡಮ್ಮನ ಮನೆಗೆ ಬರುವಾಗ ಇದೇ ಪ್ರೀಯಾಂಕಳ ಪರಿಚಯವಾಗಿತ್ತು..ಸ್ನೇಹ ಪ್ರೀತಿ ಅಂತ ಇಬ್ಬರದ್ದೇ ಒಂದು ಪ್ರಪಂಚವಾಗಿಬಿಟ್ಟಿತ್ತು..ಎಂಟು ವರ್ಷಗಳಿಂದ ಇಬ್ಬರು ಪ್ರೀತಿಸಿದ್ದು, ರೀಲ್ಸ್ ,ಪಾರ್ಕ್ ಮಾಲ್ ಅಂತ ಓಡಾಡಿಕೊಂಡಿದ್ರು..ಯುವತಿಗಾಗಿಯೇ ರಾಕೇಶ್ ಸಾಕಷ್ಟು ಖರ್ಚು ಮಾಡಿದ್ನಂತೆ..ಈ ನಡುವೆ ಮಗನ ಲವ್ ವಿಚಾರ ಗೊತ್ತಾಗಿ  ಮದುವೆಗೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿತ್ತಂತೆ..ಆದ್ರೆ ಯುವತಿ ಇತ್ತೀಚೆಗೆ ರಾಕೇಶ್ ನನ್ನ ಅವೈಡ್ ಮಾಡ್ತಿದ್ಲಂತೆ…ಇದ್ರಿಂದ…

Read More