ಹೊಸ ಜೀವನಕ್ಕೆ ಕಾಲಿಟ್ಟ ಪೂಜಾ ಗಾಂಧಿ (Pooja Gandhi) ದಂಪತಿ ಕವಿಶೈಲಕ್ಕೆ (Kavi Shaila)ಭೇಟಿ ನೀಡಿದ್ದಾರೆ. ಕುಪ್ಪಳ್ಳಿಯ ಕವಿ ಶೈಲಕ್ಕೆ ಪತಿಯೊಂದಿಗೆ ಆಗಮಿಸಿದ್ದ ಪೂಜಾ ಗಾಂಧಿ ಕೆಲ ಸಮಯವನ್ನು ಅಲ್ಲೆ ಕಳೆದಿದ್ದಾರೆ. ಕುವೆಂಪು ಅವರ ಪರಿಕಲ್ಪನೆಯ ಮಂತ್ರ ಮಾಂಗಲ್ಯ ಮಾಡಿಕೊಂಡಿದ್ದರ ಬೆನ್ನಲ್ಲೇ ದಂಪತಿ ಭೇಟಿ ನೀಡಿದ್ದು ವಿಶೇಷ. ಇತ್ತೀಚೆಗಷ್ಟೇ ಬೆಂಗಳೂರಿನ ಯಲಹಂಕದಲ್ಲಿ ನಟಿ ಪೂಜಾ ಗಾಂಧಿ ಮತ್ತು ಉದ್ಯಮಿ ವಿಜಯ್ ಘೋರ್ಪಡೆ (Vijay Ghorpade) ಬದುಕಿಗೆ ಕಾಲಿಟ್ಟಿದ್ದರು. ವಿಜಯ್ ಬೆಂಗಳೂರಿನ ಲಾಜೆಸ್ಟಿಕ್ ಕಂಪನಿಯ ಮಾಲೀಕರಾಗಿದ್ದು, ಪೂಜಾ ಅವರ ಕನ್ನಡ ಪ್ರೇಮವೇ ಇಬ್ಬರೂ ಮದುವೆ ಆಗುವಂತೆ ಮಾಡಿತ್ತು. ಪೂಜಾ- ವಿಜಯ್ ಮದುವೆಗೆ ಕುಟುಂಬಸ್ಥರು, ಆಪ್ತರು ಸ್ಯಾಂಡಲ್ವುಡ್ನ ಆತ್ಮೀಯ ಸ್ನೇಹಿತರು ಹಾಗೂ ಮುಂಗಾರು ಮಳೆ ನಿರ್ದೇಶಕ ಯೋಗರಾಜ್ ಭಟ್, ಸುಧಾರಾಣಿ, ಶುಭಾ ಪೂಂಜಾ, ಸುಮನಾ ಕಿತ್ತೂರು ಸೇರಿದಂತೆ ಅನೇಕರು ಭಾಗಿಯಾಗಿದ್ದರು.
Author: AIN Author
ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯಲು ಸೌರವ್ ಗಂಗೂಲಿ ಅವರೇ ಕಾರಣ ಎನ್ನುವಂತಹ ಹಲವು ವರದಿಗಳು ಕ್ರಿಕೆಟ್ ಅಭಿಮಾನಿಗಳ ಗಮನ ಸೆಳೆದಿದ್ದವು. ಆದರೆ ಈ ವಿಚಾರದ ಕುರಿತಂತೆ ಸೌರವ್ ಗಂಗೂಲಿ ಮೌನ ಮುರಿದಿದ್ದು, ವಿರಾಟ್ ಕೊಹ್ಲಿ ನಾಯಕತ್ವದಿಂದ ಕೆಳಗಿಳಿಯುವುದರ ಹಿಂದೆ ತಮ್ಮ ಪಾತ್ರವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. “ನಾನು ವಿರಾಟ್ ಕೊಹ್ಲಿಯನ್ನು ನಾಯಕತ್ವದಿಂದ ಕೆಳಗಿಳಿಸಲಿಲ್ಲ. ನಾನು ಈ ವಿಚಾರವನ್ನು ಹಲವಾರು ಬಾರಿ ಹೇಳಿದ್ದೇನೆ. ವಿರಾಟ್ ಕೊಹ್ಲಿ ಟಿ20 ತಂಡವನ್ನು ಮುನ್ನಡೆಸಲು ಆಸಕ್ತರಾಗಿರಲಿಲ್ಲ. ಇದು ಅವರದ್ದೇ ತೀರ್ಮಾನವಾಗಿತ್ತು. ನಾನು ಆಗ, ನೀವು ಒಂದು ವೇಳೆ ಟಿ20 ನಾಯಕತ್ವ ವಹಿಸಲು ಆಸಕ್ತಿ ಇಲ್ಲ ಎಂದಾದರೇ, ಸೀಮಿತ ಓವರ್ಗಳ ನಾಯಕತ್ವದಿಂದ ಕೆಳಗಿಳಿಯುವುದೇ ಒಳಿತು ಎಂದು ಹೇಳಿದ್ದೆ. ವೈಟ್ ಬಾಲ್ ಕ್ರಿಕೆಟ್ಗೆ ಹಾಗೂ ರೆಡ್ ಬಾಲ್ ಕ್ರಿಕೆಟ್ಗೆ ಬೇರೆ ಬೇರೆ ನಾಯಕರಿರಲಿ ಎನ್ನುವ ಉದ್ದೇಶದಿಂದ ನಾನು ಹಾಗೆ ಹೇಳಿದ್ದೆ” ಎಂದು ಸೌರವ್ ಗಂಗೂಲಿ ಹೇಳಿದ್ದಾರೆ. https://ainlivenews.com/revanth-reddy-sworn-in-as-the-2nd-chief-minister-of-telangana/ “ನಾನು ರೋಹಿತ್ ಶರ್ಮಾ ನಾಯಕತ್ವ ವಹಿಸಿಕೊಳ್ಳಲು ಸ್ವಲ್ಪ ಒತ್ತಡ ಹೇರಿದೆ. ಯಾಕೆಂದರೆ ರೋಹಿತ್…
ಬಿಗ್ ಬಾಸ್ ಮನೆಯಿಂದ ಡ್ರೋನ್ ಪ್ರತಾಪ್ (Drone Pratap) ಮತ್ತು ಸಂಗೀತಾ ಶೃಂಗೇರಿ (Sangeetha Sringeri) ಹೊರ ಬಂದಿದ್ದಾರೆ ಎನ್ನುವ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಟಾಸ್ಕ್ ನಲ್ಲಿ ಇಬ್ಬರಿಗೂ ಗಾಯಗಳಾಗಿದ್ದು, ಚಿಕಿತ್ಸೆಗಾಗಿ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ ಎನ್ನುವ ಮಾಹಿತಿ ಇದೆ. ಜಿಯೋ ಸಿನಿಮಾದಲ್ಲಿ 24 ಗಂಟೆ ಲೈವ್ ಟೆಲಿಕಾಸ್ಟ್ ಆಗುತ್ತಿದ್ದು, ಅಲ್ಲಿಯೂ ಇಬ್ಬರೂ ಕಾಣಿಸಿಕೊಳ್ಳುತ್ತಿಲ್ಲ. ಕಳೆದ ಎರಡು ದಿನಗಳಿಂದ ಗಂಧರ್ವರು ಮತ್ತು ರಾಕ್ಷಸರು ಎಂದು ಎರಡು ಗುಂಪುಗಳಾನ್ನಾಗಿ ಮಾಡಿ, ಹಲವು ಟಾಸ್ಕ್ ಗಳನ್ನು ನೀಡಲಾಗಿದೆ. ಈ ಟಾಸ್ಕ್ ನಲ್ಲಿ ಡ್ರೋನ್ ಮತ್ತು ಸಂಗೀತಾ ಗಾಯ ಮಾಡಿಕೊಂಡಿದ್ದಾರೆ ಎನ್ನುವುದು ಲೇಟೆಸ್ಟ್ ಅಪ್ ಡೇಟ್. ಈ ವಿಷಯದ ಕುರಿತಂತೆ ವಾಹಿನಿಯಾಗಲಿ ಅಥವಾ ಸಂಬಂಧಿಸಿದವರಾಗಲಿ ಯಾವುದೇ ಮಾಹಿತಿ ನೀಡಿಲ್ಲ. ಆದರೆ, ಸೋಷಿಯಲ್ ಮೀಡಿಯಾದಲ್ಲಿ ಮಾತ್ರ ನ್ಯೂಸ್ ಭರ್ಜರಿ ಸೇಲ್ ಆಗುತ್ತಿದೆ. https://ainlivenews.com/revanth-reddy-sworn-in-as-the-2nd-chief-minister-of-telangana/ ರಾಕ್ಷಸರು ಮತ್ತು ಗಂಧರ್ವರ ಗುಂಪುಗಳ ನಡುವೆ ಭಾರೀ ಕದನವೇ ನಡೆಯುತ್ತಿದೆ. ಹಲವರು ಟಾರ್ಗೆಟ್ ಮಾಡಿಕೊಂಡು ಆಡುತ್ತಿದ್ದಾರೆ. ಅದರಲ್ಲೂ ಸಂಗೀತಾ ಮತ್ತು ವಿನಯ್…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನಿಮಗೆ ಮುಸ್ಲಿಮರ ಮೇಲೆ ಅಷ್ಟೊಂದು ಕಾಳಜಿ, ಪ್ರೀತಿ ಇದ್ದಿದ್ದೇ ಆದರೆ ನೀವು ನಿಮ್ಮ ಆಸ್ತಿಯನ್ನು ಮಾರಿ ಅವರಿಗೆ ಹಣ ಕೊಡಿ ಎಂದು ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಅಲ್ಪಸಂಖ್ಯಾತರಿಗೆ ಸರ್ಕಾರ 10 ಸಾವಿರ ಕೋಟಿ ಘೋಷಣೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಬಗ್ಗೆ ಬಹಳಷ್ಟು ಗೌರವ ಇದೆ. ಸಿಎಂ ಆದವರು ಎಲ್ಲಾ ಧರ್ಮದವರನ್ನು ಒಟ್ಟಾಗಿ ತೆಗೆದುಕೊಂಡು ಹೋಗಬೇಕು. ಸಿದ್ದರಾಮಯ್ಯ ಅವರು ಅಲ್ಪಸಂಖ್ಯಾತರ ಬಗ್ಗೆ ವಿಶೇಷ ಒಲವು ಹೊಂದಿದ್ದಾರೆ. ನಮಗೆ ಸಂಘರ್ಷದ ಅವಶ್ಯಕತೆ ಇಲ್ಲ. ಆದರೆ ಇಲ್ಲಿ ಸಿದ್ದರಾಮಯ್ಯ ಅವರು ಸಂಘರ್ಷಕ್ಕೆ ದಾರಿ ಮಾಡಿಕೊಡುತ್ತಿದ್ದಾರೆ ಎಂದು ಕಿಡಿಕಾರಿದ್ರು. ಸಿದ್ದರಾಮಯ್ಯ ಅವರು ನಾನು ಕುಂಕುಮ ಹಚ್ಚಲ್ಲ, ಕೇಸರಿ ಪೇಟಾ ಹಾಕಲ್ಲ ಅಂತ ಹೇಳುತ್ತಾರೆ. https://ainlivenews.com/revanth-reddy-sworn-in-as-the-2nd-chief-minister-of-telangana/ ನಿಮ್ಮ ಹೆಸರಲ್ಲಿ ಸಿದ್ದರಾಮ ಎಂದು ಭಗವಂತನ ಹೆಸರಿಟ್ಟಿದ್ದಾರೆ. ಅಷ್ಟೊಂದು ಕಾಳಜಿ ಪ್ರೀತಿ ಇದ್ರೆ ನಿಮ್ಮ ಮನೆಯಿಂದ ಕೊಡಿ. ನೀವೇನ್ ದೇಶದ ಪ್ರಧಾನ ಮಂತ್ರಿನಾ..?, ಸಿದ್ದರಾಮಯ್ಯ ಇದು ನಿಮ್ಮ ಆಸ್ತಿನಾ..?, ಇಲ್ಲೇನ್ ಪಾಕಿಸ್ತಾನ ಆಡಳಿತ…
ಬೆಳಗಾವಿ: ಹುಬ್ಬಳ್ಳಿಯಲ್ಲಿ ನಡೆದ ಮೌಲ್ವಿಗಳ ಸಮಾವೇಶದಲ್ಲಿ ಮುಸ್ಲಿಮರಿಗೆ (Muslims) 10 ಸಾವಿರ ಕೋಟಿ ರೂ. ಅನುದಾನ ಕೊಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಹೇಳಿಕೆ ವಿಚಾರ ಇಂದು ಪರಿಷತ್ನಲ್ಲಿ ಸದ್ದು ಮಾಡಿತು. ಬಿಜೆಪಿ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ (Kota Srinivas Poojary) ಶೂನ್ಯ ವೇಳೆಯಲ್ಲಿ ವಿಷಯ ಪ್ರಸ್ತಾಪ ಮಾಡಿದರು. ಸಿಎಂ ಸಿದ್ದರಾಮಯ್ಯನವರು ಹುಬ್ಬಳ್ಳಿಯಲ್ಲಿ ಮುಸ್ಲಿಂ ಸಮಾವೇಶದಲ್ಲಿ ಮಾತನಾಡುತ್ತಾರೆ. ದೇಶದ ಸಂಪತ್ತನ್ನು ನಿಮಗೆ ಹಂಚುತ್ತೇನೆ ಹಾಗೂ 10 ಕೋಟಿ ರೂ. ನಿಮಗೆ ನೀಡುತ್ತೇನೆ ಎಂದು ಭರವಸೆ ನೀಡಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಯಾವುದೇ ಸಮುದಾಯಕ್ಕೆ ಹಣ ಮೀಸಲಿಟ್ಟರೇ ಯಾರದ್ದೇ ವಿರೋಧವಿಲ್ಲ. ಆದರೆ ಸಿಎಂ ಅವರು ಅಲ್ಪ ಸಂಖ್ಯಾತ ಸಮುದಾಯಕ್ಕೆ 10,000 ಕೋಟಿ ರೂ. ನೀಡುತ್ತೇನೆ ಎಂದಿದ್ದಾರೆ ಇದು ಸರಿಯಲ್ಲ ಎಂದರು. https://ainlivenews.com/revanth-reddy-sworn-in-as-the-2nd-chief-minister-of-telangana/ ಸರ್ಕಾರ ಪರಿಶಿಷ್ಠ ಜಾತಿ- ಪಂಗಡಗಳಿಗೆ ಮೀಸಲಿಟ್ಟ 11,500 ಕೋಟಿ ರೂ. ಅನುದಾನವನ್ನು ಗ್ಯಾರಂಟಿಗಳಿಗೆ ಬಳಸಿ, ಸಮಾಜದ ಕಟ್ಟ ಕಡೆಯ ಬಡ ಜನರಿಗೆ ಅನ್ಯಾಯ ಮಾಡುತ್ತಿದ್ದಾರೆ. ಸರ್ವರನ್ನೊಳಗೊಂಡ ಸಮಾಜ ನಿರ್ಮಾಣ ಮಾಡುವ ಭರವಸೆ…
ಬೆಳಗಾವಿ: ಕಳೆದ ವಿಧಾನಸಭಾ ಚುನಾವಣೆಯಲ್ಲಿ (Assembly Election) ಕಾಂಗ್ರೆಸ್ (Congress) ಪಕ್ಷಕ್ಕೆ ಅಭೂತಪೂರ್ವ ಜಯ ಸಿಕ್ಕಾಗ ನಮಗೆ ಗಾಬರಿ ಆಗಿತ್ತು. ಆದರೆ ಕಳೆದ ಇಪ್ಪತ್ತು ದಿನಗಳಲ್ಲಿಯೇ ಬದಲಾವಣೆ ಆಗುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ (BY Vijayendra) ಹೇಳಿದ್ದಾರೆ. ಬೆಳಗಾವಿ ಖಾಸಗಿ ಹೋಟೆಲ್ನಲ್ಲಿ ನಡೆಯುತ್ತಿರುವ ಪ್ರಶಿಕ್ಷಣ ವರ್ಗ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಶಿಕ್ಷಣ ವರ್ಗ ಯಶಸ್ವಿಯಾಗಿ ನಡೆಯುತ್ತಿದೆ. https://ainlivenews.com/revanth-reddy-sworn-in-as-the-2nd-chief-minister-of-telangana/ ಕೇಂದ್ರದಲ್ಲಿ ನರೇಂದ್ರ ಮೋದಿ ನೇತೃತ್ವದಲ್ಲಿ ಬಿಜೆಪಿ (BJP) ಸರ್ಕಾರ ಜನಪರ ಆಡಳಿತ ನೀಡುತ್ತಿದೆ. ಮತ್ತೊಂದೆಡೆ ನಾವು ನಿರೀಕ್ಷೆ ಮಾಡದ ರೀತಿಯಲ್ಲಿ ಕರ್ನಾಟಕದಲ್ಲಿ ನಮಗೆ ಹಿನ್ನಡೆ ಆಗಿದೆ. ಪಕ್ಷದ ಕಾರ್ಯಕರ್ತರಲ್ಲೂ ನಿರುತ್ಸಾಹ, ಆಕ್ರೋಶ ಇತ್ತು. ಮುಂದಿನ ಲೋಕಸಭಾ ಚುನಾವಣೆ ಯಶಸ್ವಿಯಾಗಿ ನಡೆಸಬೇಕಿದೆ. ಜಿ.ಪಂ, ತಾ.ಪಂ ಚುನಾವಣೆ ಬರುತ್ತದೆ. ಅದನ್ನು ಯಶಸ್ವಿಯಾಗಿ ಮಾಡಬೇಕು ಎಂದರು.
ಪುಷ್ಪ (Pushpa) ಸಿನಿಮಾದಲ್ಲಿ ನಾಯಕ ಪುಷ್ಪರಾಜನ ಸ್ನೇಹಿತನಾಗಿ ನಟಿಸಿದ್ದ ಜಗದೀಶ್ ಪ್ರತಾಪ್ ಭಂಡಾರಿಯನ್ನು (Jagadish) ಪೊಲೀಸರು ಬಂಧಿಸಿದ್ದಾರೆ. ನಟಿಯೊಬ್ಬರ ಆತ್ಮಹತ್ಯೆಯ (Suicide) ಪ್ರಕರಣಕ್ಕೆ ಸಂಬಂಧಿಸಿದಂತೆ ಇವರನ್ನು ಅರೆಸ್ಟ್ ಮಾಡಲಾಗಿದೆ ಎಂದು ಪೊಲೀಸರು ಮಾಹಿತಿಯನ್ನು ನೀಡಿದ್ದಾರೆ. ಜ್ಯೂನಿಯರ್ ಆರ್ಟಿಸ್ಟ್ ಆಗಿ ಕೆಲಸ ಮಾಡುತ್ತಿದ್ದ ಯುವತಿಯನ್ನು ಪರಿಚಯ ಮಾಡಿಕೊಂಡಿದ್ದ ಜಗದೀಶ್, ಅವರೊಂದಿಗೆ ಸಲುಗೆಯಿಂದ ಇದ್ದರಂತೆ. ಇದೇ ಸಲುಗೆಯನ್ನು ಬಳಸಿಕೊಂಡು ಆಕೆಯ ಖಾಸಗಿ ವಿಡಿಯೋವನ್ನು ಚಿತ್ರೀಕರಿಸಿದ್ದಾರೆ. ತನ್ನೊಂದಿಗೆ ಸಹಕರಿಸದೇ ಇದ್ದರೆ ಸೋಷಿಯಲ್ ಮೀಡಿಯಾದಲ್ಲಿ ವಿಡಿಯೋ ಹಾಕುವುದಾಗಿ ಬೆದರಿಸಿದ್ದಾರೆ. https://ainlivenews.com/the-most-wanted-terrorist-is-poisoned-in-pakistan-jail/ ಜಗದೀಶ್ ಬೆದರಿಕೆಗೆ ಮನನೊಂದು ನಟಿ (Actress) ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಜಗದೀಶ್ ಅವರನ್ನು ಬಂಧಿಸಿರುವ ಪೊಲೀಸರು, ಈ ಕುರಿತಂತೆ ತನಿಖೆ ನಡೆಸುತ್ತಿದ್ದಾರೆ. ಜಗದೀಶ್ ಅರೆಸ್ಟ್ ಆಗುವಾಗ ಪುಷ್ಪ 2 ಸಿನಿಮಾದ ಚಿತ್ರೀಕರಣದಲ್ಲಿ ಇದ್ದರು ಎಂದು ತಿಳಿದು ಬಂದಿದೆ.
ದಾವಣಗೆರೆ: ವೀರಶೈವ ಲಿಂಗಾಯತ ಸಮಾಜ ಸಂಘಟನೆಯ ಆಶಯ ಹೊತ್ತು ಡಿಸೆಂಬರ್ 23 ಮತ್ತು 24ರಂದು ಎರಡು ದಿನಗಳ ಕಾಲ ದಾವಣಗೆರೆಯಲ್ಲಿ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನ ನಡೆಯಲಿದೆ ಅಂತ ಕಲಬುರಗಿ ಘಟಕದ ಶರಣು ಮೋದಿ ತಿಳಿಸಿದ್ದಾರೆ..ಮಾಧ್ಯಮ ಪ್ರಕಟಣೆ ಮೂಲಕ ಈ ಮಾಹಿತಿ ತಿಳಿಸಿದ ಶರಣು ಮೋದಿ ಈ ಅಧಿವೇಶನವನ್ನು ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಶಾಮನೂರು ಶಿವಶಂಕರಪ್ಪ ಮತ್ತು ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಗಳಾದ ಸಚಿವ ಈಶ್ವರ ಖಂಡ್ರೆ ನೇತೃತ್ವದಲ್ಲಿ ಆಯೋಜಿಸಲಾಗಿದೆ ಅಂತ ಹೇಳಿದ್ದಾರೆ.. ಕರ್ನಾಟಕ ಕೇರಳ ಮಹಾರಾಷ್ಟ್ರ ತಮಿಳುನಾಡು ಆಂಧ್ರಪ್ರದೇಶ ದೆಹಲಿ ತೆಲಂಗಾಣ ಉತ್ತರಪ್ರದೇಶ, ಹರ್ಯಾಣ, ಪಂಜಾಬ್ ಸೇರಿ ದೇಶದ ವಿವಿಧ ಭಾಗಗಳಿಂದ ಮೂರು ಲಕ್ಷಕ್ಕೂ ಅಧಿಕ ಜನ ಆಗಮಿಸಲಿದ್ದು ಅದರಲ್ಲಿ ಕಲಬುರಗಿ ಜಿಲ್ಲೆಯಿಂದ ಸುಮಾರು ಇಪ್ಪತ್ತು ಸಾವಿರ ಜನರು ಪಾಲ್ಗೊಳ್ಳುವರು ಅಂತ ಹೇಳಿದ್ರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದಲ್ಲಿ ಪೂರ್ವಭಾವಿ ಸಭೆ ಮಾಡಿ ಸಮಾಜದ ಅನುಕೂಲಕ್ಕಾಗಿ ಈ ಮಹಾ ಅಧಿವೇಶನ ನಡೆಯಲಿದೆ ಎಲ್ರೂ ಹೆಚ್ಚಿನ…
ದಾವಣಗೆರೆ: ನಗರಗಳಲ್ಲಿ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದರೆ ಪೊಲೀಸರು ದಂಡ ಹಾಕ್ತಾರೆ, ಅಲ್ಲದೇ, ನಿಯಮ ಪಾಲಿಸುವಂತೆ ಎಚ್ಚರಿಕೆಯನ್ನ ಕೊಡುತ್ತಾರೆ. ಆದರೆ, ದಾವಣಗೆರೆಯ ಸಾಮಾಜಿಕ ಕಾರ್ಯಕರ್ತನೊಬ್ಬ ಸಂಚಾರಿ ನಿಯಮಗಳನ್ನ ಉಲ್ಲಂಘಿಸಿದರೆ ಚಾಕ್ಲೇಟ್ ಮತ್ತು ವಡಾಗಳನ್ನ ನೀಡುತ್ತಾರೆ. ಹೌದು, ಇದು ಅಚ್ಚರಿಯಾದ್ರು ಕೂಡ ನಿಜ. ದಾವಣಗೆರೆಯ ಸಾಮಾಜಿಕ ಕಾರ್ಯಕರ್ತ ಎಂ ಜಿ ಶ್ರೀಕಾಂತ್ ಎಂಬಾತ ಇಂತಹದ್ದೊಂದು ಕೆಲಸವನ್ನ ದಾವಣಗೆರೆ ನಗರದಲ್ಲಿ ಮಾಡುತ್ತಿದ್ಧಾನೆ. ದಾವಣಗೆರೆಯ ಪಿಬಿ ರಸ್ತೆ, ಎವಿಕೆ ಕಾಲೇಜು, ಬಾಪೂಜಿ ಡೆಂಟಲ್ ಕಾಲೇಜ್ ಸೇರಿದಂತೆ ಜನನಿಬಿಡ ರಸ್ತೆಗಳಲ್ಲಿ ಎಂ ಜಿ ಶ್ರೀಕಾಂತ್ ಸಂಚಾರಿ ನಿಯಮ ಉಲ್ಲಂಘಿಸುವ ಬೈಕ್, ಕಾರ್ ಚಾಲಕರಿಗೆ ವಡಾ ಹಾಗೂ ಚಾಕ್ಲೇಟ್ ಗಳನ್ನ ನೀಡುತ್ತಿದ್ದಾರೆ. ಇದಕ್ಕೊಂದು ಕಾರಣ ಕೂಡ ಇದ್ದು, ಈ ಮೂಲಕ ಶ್ರೀಕಾಂತ್ ಅರಿವನ್ನ ಮೂಡಿಸುತ್ತಿದ್ದಾರೆ. ಈಗ ದಾವಣಗೆರೆಯ ನಗರದಲ್ಲಿಯೂ ಕೂಡ ವಾಹನಗಳ ಸಂಖ್ಯೆ ಹೆಚ್ಚಾಗಿದ್ದು, ಎಲ್ಲ ಕಡೆಗಳಲ್ಲಿ ಟ್ರಾಫಿಕ್ ಸಿಗ್ನಲ್ ಗಳನ್ನ ಅಳವಡಿಕೆ ಕೂಡ ಮಾಡಲಾಗಿದೆ. ಟ್ರಾಫಿಕ್ ನಿಯಂತ್ರಿಸುವ ಉದ್ದೇಶದಿಂದ ಮತ್ತು ಸಂಚಾರ ದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ಕೆಲವು…
ಬೆಂಗಳೂರು: ಮೈಸೂರು ಜಿಲ್ಲೆಯ ಕೆ.ಆರ್.ನಗರ ತಾಲೂಕಿನ ಸಾಲಿಗ್ರಾಮದ ಹೊರವಲಯದಲ್ಲಿ ರಸ್ತೆಯಲ್ಲಿ ಜೆಡಿಎಸ್ ನಾಯಕಿ ಭವಾನಿ ರೇವಣ್ಣ ಕಾರು ಅಪಘಾತಕ್ಕೀಡಾಗಿತ್ತು. ಬೈಕ್ ಸವಾರನೋರ್ವ ಭವಾನಿ ರೇವಣ್ಣ ಕಾರಿಗೆ ಡಿಕ್ಕಿ ಹೊಡೆದಿದ್ದ. ಈ ವೇಳೆ ಕಾರಿನಿಂದ ಇಳಿದ ಭವಾನಿ ರೇವಣ್ಣ ರೌದ್ರರೂಪ ತಾಳಿದ್ರು. ಡಿಕ್ಕಿ ಹೊಡೆದ ಬೈಕ್ ಸವಾರನ ಪರಿಸ್ಥಿತಿ ಹೇಗಿದೆ ಅಂತ ವಿಚಾರಿಸೋ ವ್ಯವಧಾನವೂ ತೋರದೇ ಕಾರಿಗೆ ಏನಾಗಿದೆ ಅನ್ನೋ ವಿಮರ್ಷೆಗೆ ಇಳಿದಿದ್ರು.. ಕೋಟಿ ರೂಪಾಯಿ ಕಾರು ಅಂತ ಬಾಲ ಸುಟ್ಟ ಬೆಕ್ಕಿನಂತ ಕಾರಿನ ಸುತ್ತ ಓಡಾಡುತ್ತಾ ಬೈಕ್ ಸವಾರನಿಗೆ ಹಿಡಿಶಾಪ ಹಾಕಿದ್ರು.ಸಾಯೋಕೆ ನನ್ನ ಕಾರೇ ಬೇಕಿತ್ತಾ.. ಬಸ್ಸಿಗೆ ಗಿಸ್ಸಿಗೆ ಸಿಕ್ಕಾಂಡೊಂಡ್ ಸಾಯಬೇಕಿತ್ತು.. ಒಂದೂವರೆ ಕೋಟಿ ರೂಪಾಯಿ ಗಾಡಿ ಇದು. ಹೀಗೆ ಭವಾನಿ ರೇವಣ್ಣ ಆಡಿದ ಒಂದೊಂದು ಮಾತುಗಳು ಅವರ ಅಸಲಿ ಮುಖವನ್ನ ಕಳಚಿಟ್ಟಂತಿತ್ತು. ಬೈಕ್ ಸವಾರ ರಕ್ತಸ್ರಾವದಿಂದ ಬಳಲ್ತಾ ಇದ್ರೂ ತನ್ನ ಕಾರನ್ನೇ ನೋಡಿ ಮರುಕ ಪಟ್ಟ ಭವಾನಿ ರೇವಣ್ಣ ನಡೆ ಎಂತವರನ್ನೂ ತಲೆತಗ್ಗಿಸುವಂತಿತ್ತು.ದೊಡ್ಡಗೌಡರ ಕುಟುಂಬದ ಹಿರಿಯ ಸೊಸೆಯೊಬ್ರು ನಡುರಸ್ತೆಯಲ್ಲಿ ಹೀಗೆ…