Author: AIN Author

ಬೆಂಗಳೂರು: ದೇಶದಲ್ಲಿ ನಂದಿನಿ ತುಪ್ಪಕ್ಕಿರುವ ಮಾರುಕಟ್ಟೆ ಬೆಲೆಗಿಂತ ಅರ್ಧಕ್ಕರ್ಧ ಬೆಲೆಗೆ ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಗೆ ತುಪ್ಪವನ್ನು ಕಳಿಸಲು ಸಾಧ್ಯವಿಲ್ಲ ಎಂದು ಕೆಎಂಎಫ್‌ನಿಂದ ತುಪ್ಪ ಸರಬರಾಜು ಮಾಡಿರಲಿಲ್ಲ. ಆದರೆ, ಕಳೆದ ಎರಡು ಬಾರಿಯಿಂದ ಟಿಟಿಡಿಯ ತುಪ್ಪದ ಟೆಂಡರ್‌ನಲ್ಲಿ ಕೆಎಂಎಫ್‌ ಭಾಗವಹಿಸಿದರೂ ನಂದಿನಿ ತುಪ್ಪದ ದರ ಹೆಚ್ಚಾಗಿದ್ದು, ಖರೀದಿ ಮಾಡಲು ಸಾಧ್ಯವಿಲ್ಲ ಎಂದು ತಿರುಪತಿ ತಿಮ್ಮಪ್ಪ ದೇವಸ್ಥಾನ ಆಡಳಿತ ಮಂಡಳಿ ತಿರಸ್ಕರಿಸಿದೆ. https://ainlivenews.com/the-most-wanted-terrorist-is-poisoned-in-pakistan-jail/ ಈ ಮೂಲಕ ತಿರುಪತಿ ದೇವಸ್ಥಾನದ ಲಡ್ಡು ಪ್ರಸಾದದಿಂದ ನಂದಿನಿ ತುಪ್ಪದ ಘಮ ಕಾಣೆಯಾಗಿದೆ.ಟೆಂಡರ್ ನಲ್ಲಿ ಟಿಟಿಡಿ ಕೇಳ್ತಿರೋ ಕಡಿಮೆ ದರಕ್ಕೆ ತುಪ್ಪ ಸರಬರಾಜು ಮಾಡಲ್ಲ ಎಂದು ಕೆಎಂಎಫ್ ಹೇಳಿತ್ತು. ಆದರೆ, ಈ ಬಾರಿ ಕಳೆದ ಬಾರಿಗಿಂತ ಕಡಿಮೆ ದರಕ್ಕೆ ನಂದಿನಿ ತುಪ್ಪವನ್ನು ಸರಬರಾಜು ಮಾಡುವುದಾಗಿ ಕೆಎಂಎಫ್‌ ಟಿಟಿಡಿ ಟೆಂಡರ್‌ನಲ್ಲಿ ಭಾಗವಹಿಸಿದ್ದರೂ ಅದಕ್ಕಿಂತ ಕಡಿಮೆ ದರದ ತುಪ್ಪವನ್ನು ಟಿಟಿಡಿ ಖರೀದಿ ಮಾಡಲು ಮುಂದಾಗಿದೆ. ಆದ್ದರಿಂದ ಕೆಎಂಎಫ್‌ಗೆ ಮತ್ತೆ ಹಿನ್ನಡೆ ಉಂಟಾಗಿದೆ.

Read More

ರಕ್ಕಸ-ಗಂಧರ್ವರ ನಡುವಿನ ಗುದ್ದಾಟ ತಾರಕಕ್ಕೆ ಏರಿರುವ ಹೊತ್ತಿನಲ್ಲಿಯೇ ನಡುನಡುವೆ ನಗೆಬುಗ್ಗೆಯುಕ್ಕಿಸುವಂಥ ಕಾಮಿಡಿ ಸನ್ನಿವೇಶಗಳಿಗೂ ಬಿಗ್‌ಬಾಸ್ ಸಾಕ್ಷಿಯಾಗುತ್ತಿದೆ. ಇಂಥದ್ದೊಂದು ಕಾಮಿಡಿ ದೃಶ್ಯದ ಝಲಕ್‌ JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಕಾಣಿಸಿಕೊಂಡಿದೆ. “ಆನೆಯನ್ನು ಪಳಗಿಸುವ ಮಾವುತನಾಗುತ್ತೇನೆ’ ಎಂದು ಹೇಳಿಕೊಂಡೇ ಅವಿನಾಶ್‌ ಶೆಟ್ಟಿ ಮನೆಯೊಳಗೆ ಬಂದಿದ್ದರು. ಮನೆಯೊಳಗೂ ಹಲವು ಸದಸ್ಯರು ಅವರನ್ನು ಮಾವುತ ಎಂದೇ ಕರೆಯುತ್ತಿದ್ದಾರೆ. ಆದರೆ ಈ ಗಂಧರ್ವ-ರಕ್ಕಸರ ಗುದ್ದಾಟದಲ್ಲಿ ಈ ಮಾವುತ ಮೇಕೆಯಾಗಿದ್ದಾನೆ. ತುಕಾಲಿ ಸಂತೋಷ್ ಮತ್ತು ವರ್ತೂರು ಅವರು ‘ನೀನು ಮಾವುತನಾ? ಮೇಕೆಯಾ?’ ಎಂದು ಕೇಳಿದಾಗ ಅವಿನಾಶ್‌, ‘ನಾನು ಮೇಕೆಯಾಗುವುದಿಲ್ಲ’ ಎಂದು ಗಂಧರ್ವರ ಶೈಲಿಯಲ್ಲಿಯೇ ಉತ್ತರಿಸಿದ್ದಾರೆ ಅವಿನಾಶ್. ಆದರೆ ಅದರ ಮರುಕ್ಷಣವೇ ಅವರು ಮೇಕೆಯ ಗೆಟಪ್‌ನಲ್ಲಿ ಮ್ಯಾ… ಎಂದು ಕೂಗುತ್ತ ಓಡಾಡುವ ದೃಶ್ಯಗಳೂ ಇವೆ. ವರ್ತೂರು ಸಂತೋಷ್, ಅವಿನಾಶ್ ಒಳಗಡೆ ರೋಷದ ಕಿಚ್ಚನ್ನು ಹೊತ್ತಿಸಲು ಇನ್ನಿಲ್ಲದಂತೆ ಪ್ರಯತ್ನಿಸುತ್ತಿದ್ದಾರೆ. ‘ನೀವು ವೀರನಾಗಬೇಕು’ ಎಂದು ಮೋಟಿವೇಷನಲ್ ಸ್ಪೀಚ್ ಕೂಡ ಕೊಟ್ಟಿದ್ದಾರೆ! ಇದರಿಂದ ಸ್ಫೂರ್ತಿಗೊಂಡ ಅವಿನಾಶ್‌, ‘ವೀರನಾ… ಧೀರನಾ…’ ಎಂದು ಹೇಳುತ್ತ ಎದ್ದುನಿಂತಿದ್ದಾರೆ.ಎದುರಾಳಿ ತಂಡದ ಸದಸ್ಯನನ್ನು…

Read More

ಬೆಂಗಳೂರು: ಆತ ಸ್ನೇಹಿತನ ಜೊತೆ ಎಣ್ಣೆ ಹಾಕಲು ಬಾರ್ಗೆ ಹೋಗಿದ್ದ. ಅದೇ ಬಾರ್ಗೆ ಸ್ನೇಹಿತನಿಗೆ ಹಣ ನೀಡಬೇಕಾದವ್ರು ಸಹ ಬಂದಿದ್ರು. ಈ ವೇಳೆ ಸ್ನೇಹಿತನ ಹಣ ಕೊಡಿಸಲು ಹೋದವನು ಹೆಣವಾಗಿ ಹೋಗಿದ್ದಾನೆ. ಎಣ್ಣೆ ಮತ್ತಲ್ಲಿ ಹಣದ ವಿಚಾರವಾಗಿ ನಡೆದ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ. ಅಷ್ಟಕ್ಕೂ ಈ ಜಗಳ ನಡೆದಿದ್ದು ಎಲ್ಲಿ ಅಂತೀರಾ ಈ ಸ್ಟೋರಿ ನೋಡಿ.. ಹೌದು ಸ್ನೇಹಿತನಿಗೆ ಬರಬೇಕಾದ ಹಣವನ್ನು ಕೊಡಿಸಲು ಮಧ್ಯಸ್ಥಿಕೆ ಮಾಡಲು ಹೋದವನು ಕೊಲೆಯಾಗಿ ಹೋಗಿರುವಂತಹ ಘಟನೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣಾ ವ್ಯಾಪ್ತಿಯ ಸಿಂಗಸಂದ್ರದಲ್ಲಿ ನಡೆದಿದೆ … ಹೀಗೆ ಫೋಟೋದಲ್ಲಿ ಕಾಣ್ತಿದ್ದಾರಲ್ಲ ಗೋಪಾಲ ಅಂತ ಬಾರ್ ನಲ್ಲಿ ಎಣ್ಣೆ ಹಾಕ್ಕೊಂಡು ಆರಾಮಾಗಿ ಮಾತಾಡ್ತಾ ಗೋಪಾಲ್ ಮತ್ತು ಅತನ ಸ್ನೇಹಿತರು ಕೂತಿದ್ರೂ. ಅಗ್ಲೇ ಗಿರೀಶ್ ಕೂಡ ಆತನ ಸ್ನೇಹಿತನ ಜೊತೆ ಅದೇ ಬಾರ್ ಗೆ ಎಂಟ್ರಿಕೊಟ್ಟಿದ್ದ. ಅಗ ಗೋಪಾಲ್ ಸ್ನೇಹಿತ ಕರೇಗೌಡ ಗಿರೀಶ್ ಅನ್ನ ನೋಡಿ ಎಲೆಕ್ಟ್ರಿಷಿಯನ್ ಕೆಲಸದ 1500 ರೂಪಾಯಿ ಕೊಡುವಂತೆ ಕೇಳಿದ್ದ..ಅಗ ಗಿರೀಶ್ ಕೂಡ…

Read More

ನವದೆಹಲಿ: ನಾನು ‘ಮೋದಿ ಜೀ’ ಅಲ್ಲ, ನಾನು ಮೋದಿ (Narendra Modi) ಅಷ್ಟೇ. ಹೀಗಾಗಿ ಮೋದಿ ಜೀ (Modi ji) ಎಂದು ಕರೆಯುವ ಮೂಲಕ ಸಾರ್ವಜನಿಕರಿಂದ ನನ್ನನ್ನು ದೂರ ಮಾಡಬೇಡಿ ಎಂದು ಸಂಸದರಿಗೆ ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿಕೊಂಡಿದ್ದಾರೆ. ಬಿಜೆಪಿ (BJP) ಸಂಸದೀಯ ಪಕ್ಷದ ಸಭೆಯಲ್ಲಿ ಈ ಕುರಿತು ಪ್ರಸ್ತಾಪ ಮಾಡಿದ ಪ್ರಧಾನಿಯವರು ದಯವಿಟ್ಟು ಮೋದಿ ಜೀ ಎಂದು ಕರೆಯಬೇಡಿ ಅಂತ ಸಂಸದರನ್ನು ಕೇಳಿಕೊಂಡರು. ಇದರಿಂದ ದೇಶದ ಜನ ಹಾಗೂ ನನ್ನ ನಡುವೆ ಅಂತರ ಇರುವಂತೆ ನನಗೆ ಕಾಡುತ್ತದೆ. ಹೀಗಾಗಿ ನನ್ನನ್ನು ಮೋದಿ ಎಂದಷ್ಟೇ ಕರೆಯಿರಿ ಅಂದ್ರು. https://ainlivenews.com/the-most-wanted-terrorist-is-poisoned-in-pakistan-jail/ ಪ್ರಧಾನಿ ಮೋದಿ ಅವರು ಪಕ್ಷದ ಸಾಮಾನ್ಯ ಕಾರ್ಯಕರ್ತ ಮತ್ತು ಜನಸಾಮಾನ್ಯರಂತೆ ಇರಲು ಬಯಸುತ್ತಾರೆ. ಹೀಗಾಗಿ ತಮ್ಮ ಕುಟುಂಬದ ಭಾಗವೆಂದು ಪರಿಗಣಿಸುವಂತೆ ಹೇಳುತ್ತಾರೆ. ಇತರೆ ಸಂಸದರಂತೆ ಮೋದಿಯೂ ಕೂಡ ಒಬ್ಬ ಸಂಸದರು ಎಂಬಂತೆ ಭಾವಿಸಬೇಕು ಎಂದು ಅವರು ನಂಬುತ್ತಾರೆ ಎಂದು ಸಭೆಯಲ್ಲಿದ್ದ ಸಂಸದರೊಬ್ಬರು ಮಾಧ್ಯಮಕ್ಕೆ ತಿಳಿಸಿದರು.

Read More

ಲವ್ ಸ್ಟೋರಿ ಕಥೆ ಹೇಳಿ ಗೆದ್ದಿರುವ ನಿರ್ದೇಶಕ ನವೀನ್ ರೆಡ್ಡಿ ಹೊಸ ಕನಸು ‘ಮೂರನೇ ಕೃಷ್ಣಪ್ಪ’..ಅಕಿರ ಹಾಗೂ ರಿಲ್ಯಾಕ್ಸ್ ಸತ್ಯ ಸಿನಿಮಾ ಮೂಲಕ ಕನ್ನಡ ಚಿತ್ರರಂಗದಲ್ಲಿ ಭರವಸೆ ಮೂಡಿಸಿರುವ ಅವರೀಗ ವಿಭಿನ್ನ ಶೀರ್ಷಿಕೆಯೊಂದಿಗೆ ಆನೇಕಲ್ ಭಾಗದ ಕಥೆ ಹೇಳೋದಿಕ್ಕೆ ನಿಮ್ಮ ಮುಂದೆ ಬರ್ತಿದ್ದಾರೆ. ಸದ್ದಿಲ್ಲದೇ ಮೂರನೇ ಕೃಷ್ಣಪ್ಪ ಸಿನಿಮಾದ ಶೂಟಿಂಗ್ ಕಂಪ್ಲೀಟ್ ಆಗಿದ್ದು, ಸದ್ಯ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಚಿತ್ರತಂಡ ಬ್ಯುಸಿಯಾಗಿದೆ. ಮೂರನೇ ಕೃಷ್ಣಪ್ಪ ಬಳಗವೀಗ ಪ್ರಮೋಷನ್ ಪಡಸಾಲೆಗಿಳಿದಿದೆ. ಅದರ ಮೊದಲ ಭಾಗವಾಗಿ ಕಳೆದ ವಾರವಷ್ಟೇ ಟೈಟಲ್ ಟೀಸರ್ ರಿಲೀಸ್ ಮಾಡಿ ಥ್ರಿಲ್ ಹೆಚ್ಚಿಸಿತ್ತು. ಇದೀಗ ಮೂರನೇ ಕೃಷ್ಣಪ್ಪ ಸಿನಿಮಾದ ಮೆಲೋಡಿ ಮಸ್ತಿಯೊಂದು ಅನಾವರಣಗೊಂಡಿದೆ. ಆನಂದ್ ಆಡಿಯೋ ಯೂಟ್ಯೂಬ್ ನಲ್ಲಿ ಬಗೆಹರಿಯದ ಒಗಟುಗಳು ಎಂಬ ಸಾಹಿತ್ಯದ ಹಾಡು ಬಿಡುಗಡೆಯಾಗಿದೆ. ಸುಪ್ರಿತ್ ಶರ್ಮಾ ಎಸ್ ಈ ಹಾಡಿಗೆ ಸಾಹಿತ್ಯ ನೀಡುವುದರ ಜೊತೆಗೆ ಸಂಗೀತ ಕೂಡ ಒದಗಿಸಿದ್ದಾರೆ. ನಿಹಾಲ್ ಟೌರೊ ಬಗೆಹರಿಯದ ಒಗಟುಗಳು ಗೀತೆಗೆ ಧ್ವನಿಯಾಗಿದ್ದಾರೆ. ರೆಡ್ ಡ್ರಾಗ್ಯನ್ ಫಿಲ್ಮಂಸ್ ಪ್ರೊಡಕ್ಷನ್ ಹೌಸ್ ಎರಡನೇ…

Read More

ಕನ್ನಡ ಚಿತ್ರರಂಗದಲ್ಲಿ ಮೊದಲ ಬಾರಿಗೆ ನಂದಿ ಚಲನಚಿತ್ರ ಪ್ರಶಸ್ತಿ ಪ್ರಾರಂಭವಾಗಿದೆ. ಈ ಪ್ರಶಸ್ತಿ ಪ್ರದಾನ ಸಮಾರಂಭ ಬೆಂಗಳೂರಿನ ಒರಿಯನ್ ಮಾಲ್‌ನಲ್ಲಿ ನಿನ್ನೆ ಜರುಗಿದೆ. ಕನ್ನಡದ್ದೇ ಆದ ಸ್ವಂತ ಪ್ರಶಸ್ತಿ ನೀಡುವ ವೇದಿಕೆ, ಆ ಮೂಲಕ ನಮ್ಮ ಪ್ರತಿಭೆಗಳನ್ನು ನಾವೇ ಗುರುತಿಸಿ ಬೆನ್ನು ತಟ್ಟುವ ಪ್ರಯತ್ನ ಮಾಡಬೇಕಿದೆ. ಇದನ್ನೆಲ್ಲಾ ಮನಗಂಡು, ಚರ್ಚಿಸಿ ಮಂಡಳಿ ನಂದಿ ಪ್ರಶಸ್ತಿ ನೀಡಿದೆ. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ನಟ ರವಿಚಂದ್ರನ್, ರಿಷಬ್ ಶೆಟ್ಟಿ, ಧ್ರುವ ಸರ್ಜಾ ಇನ್ನೂ ಹಲವು ತಾರೆಯರು ಭಾಗಿಯಾಗಿದ್ದಾರೆ. ಜೊತೆಗೆ ಹಿರಿಯ ನಟ ಶ್ರೀನಾಥ್, ನಟಿ ಪ್ರೇಮ, ವಿನೋದ್ ರಾಜ್, ಅನುಪ್ರಭಾಕರ್, ಉಮಾಶ್ರೀ ಇನ್ನೂ ಹಲವು ನಟ-ನಟಿಯರು ಸಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ. ಇದು ಮೊದಲ ನಂದಿ ಫಿಲಂ ಅವಾರ್ಡ್ ಆಗಿದ್ದು ಅದ್ಧೂರಿಯಾಗಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗಿಯಾಗಿದ್ದ ನಟ ರವಿಚಂದ್ರನ್ ಮಾತನಾಡಿ, ‘ನಂದಿ ಪ್ರಶಸ್ತಿ ನೀಡುತ್ತಿರುವುದು ಬಹಳ ಖುಷಿಯಾಗಿದೆ. ಪ್ರಶಸ್ತಿ ಬಹಳ ಭಾರವಾಗಿದೆ ಅದು ನನಗೆ ಖುಷಿ ಕೊಟ್ಟಿತು, ನನ್ನಂಥಹಾ ಶಿವ ಭಕ್ತನಿಂದ…

Read More

ಯೂಸ್ ಲೆಸ್ ಫೆಲೋ’ ಸಿನಿಮಾ ಮೂಲಕ ಡೈರೆಕ್ಷರ್ ಕ್ಯಾಪ್ ತೊಟ್ಟಿರುವ ಮನು ತಮ್ಮ ಚೊಚ್ಚಲ ಪ್ರಯತ್ನದ ಮೊದಲ ಝಲಕ್ ನ್ನು ಅನಾವರಣ ಮಾಡಿದ್ದಾರೆ. ಬೆಂಗಳೂರಿನ ರೇಣುಕಾಂಬ ಸ್ಟುಡಿಯೋದಲ್ಲಿ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಯಿತು. ಈ ವೇಳೆ ಇಡೀ ಚಿತ್ರತಂಡ ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಮಾತನಾಡಿದ ನಟ ಕಂ ನಿರ್ದೇಶಕ ಮನು ಯು.ಬಿ ಮಾತನಾಡಿ, ಮೊದಲು ಹೀರೋ ಆದಾಗ ಬಂದು ಕುಳಿತು ಮಾತನಾಡಿಕೊಂಡು ಹೋಗುತ್ತಿದ್ದೆ. ಇವತ್ತು ನಿರ್ದೇಶಕನ ಜವಾಬ್ದಾರಿ ತೆಗೆದುಕೊಂಡು ಇಲ್ಲಿ ಕುಳಿತು ಮಾತನಾಡುತ್ತಿರುವುದು ತುಂಬ ಹೆಮ್ಮೆ ಅನಿಸುತ್ತಿದೆ. ಇಡೀ ತಂಡ ನನಗೆ ಬೆಂಬಲದಿಂದ ಈ ಸಿನಿಮಾ ಅದ್ಭುತವಾಗಿ ಮೂಡಿಬಂದಿದೆ. ನಾಳೆ ಚಿತ್ರೀಕರಣ ಬಗ್ಗೆ ಹಿಂದಿನ ದಿನವೇ ಚರ್ಚೆ ನಡೆಸುತ್ತಿದ್ದೆವು. ಸಿನಿಮಾ ರಿಲೀಸ್ ಗೆ ರೆಡಿಯಾಗಿದೆ. ನಿಮ್ಮ ಸಹಕಾರ ನಮಗೆ ಬೇಕು. ಹಿಂದಿನ ತಪ್ಪುಗಳನ್ನು ತಿದ್ದುಕೊಂಡು ಯೂಸ್ ಲೆಸ್ ಫೆಲೋ ಸಿನಿಮಾ ಮಾಡಿದ್ದೇನೆ ಎಂದರು. ನಟ ವಿಜಯ್ ಸೂರ್ಯ ಮಾತನಾಡಿ, ಮನು ಇಂಡಸ್ಟ್ರೀಗೆ ಬರುವ ಮೊದಲೇ ಪರಿಚಯ. ಮನು ಎರಡು ಸಿನಿಮಾ ನೋಡಿದ್ದೇನೆ.…

Read More

ಬೆಂಗಳೂರು: ಗೂಳಹಟ್ಟಿ ಶೇಖರ್ ಆಡಿಯೋ ವಿಚಾರವನ್ನು ಮುಂದಿಟ್ಟುಕೊಂಡು RSS ವಿರುದ್ದ ಟ್ವೀಟ್ ಮೂಲಕ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ. ಶೂಧ್ರರು, ದಲಿತರಿಗೆ ಆರ್ ಎಸ್ ಎಸ್ ಗರ್ಭಗುಡಿಗೆ ಪ್ರವೇಶ ‌ಇಲ್ಲ. ಅವರೇನಿದ್ದರೂ ಹೊರಬಾಗಿಲಲ್ಲಿ ನಿಂತು ‘ಜೀ..ಜೀ..ಹುಜೂರ್’ ಎಂದಷ್ಟೇ ಹೇಳಬೇಕು. https://ainlivenews.com/the-most-wanted-terrorist-is-poisoned-in-pakistan-jail/ ಇದಕ್ಕೆ ಬಿಜೆಪಿಯ ಮಾಜಿ ಶಾಸಕ ಗೂಳಿಹಟ್ಟಿ ಶೇಖರ್ ಅವರು ಬಿ.ಎಲ್ ಸಂತೋಷ್‌ ಅವರಿಗೆ ಕಳುಹಿಸಿರುವ ವಾಟ್ಸಾಪ್ ವಾಯ್ಸ್ ರೆಕಾರ್ಡ್ ಸಾಕ್ಷಿ. ಬಿಜೆಪಿ ಮತ್ತು ಆರ್.ಎಸ್.ಎಸ್ ಪರಿವಾರ ಬಹಿರಂಗವಾಗಿ ಮುಸ್ಲಿಂಮರ ವಿರುದ್ಧ ಮಾತ್ರ ಹರಿಹಾಯ್ದರೂ ಅಂತರಂಗದಲ್ಲಿ ಅದು ಶೂದ್ರರು ಮತ್ತು ದಲಿತರ ವಿರುದ್ಧವಾಗಿದೆ ಎಂದು ಟೀಕಿಸಿದ್ದಾರೆ.

Read More

ಬೆಂಗಳೂರು: ಬಿಜೆಪಿ ಮಾಜಿ ಶಾಸಕ ಗೂಳಹಟ್ಟಿ ಶೇಖರ್ ಕೇಸರಿ ಸಂಘಟನಾ ಚತುರನಿಗೆ ಕಳಿಸಿರೋ ಆಡಿಯೋ ರಾಜ್ಯದಲ್ಲಿ ಭಾರೀ ಸುದ್ದು ಮಾಡ್ತಿದೆ. ನಾಗಪುರದ RSS ಕಛೇರಿಯ ವಸ್ತು ಸಂಗ್ರಹಾಲಯಕ್ಕೆ ದಲಿತ ಎಂಬ ಕಾರಣಕ್ಕೆ ನನ್ನನ್ನು ತಡೆದ್ರು ಎಂದು ಬಾಂಬ್ ಸಿಡಿಸಿದ್ದಾರೆ.  ಈ ವಿಚಾರ ಕಾಂಗ್ರೆಸ್ ಗೆ ಹಿಂದುತ್ವದ ವಿರುದ್ಧದ ಪ್ರಬಲ ಅಸ್ತ್ರವಾಗಿದ್ದು ಬಿಜೆಪಿ ನಾಯಕರಿಗೆ ನುಂಗಲಾರದ ತುತ್ತಾಗಿದೆ.. RSS ರಾಷ್ಟ್ರೀಯ ಸ್ವಯಂ ಸೇವಕ ಸಂಘ ಪ್ರಪಂಚದಲ್ಲೇ ಅತೀ ದೊಡ್ಡ ಸ್ವಯಂ‌ ಸೇವಾ ಸಂಘಟನೆ ಅಂತ ಬಿಜೆಪಿಯವರು ಹೇಳಿಕೊಳ್ತಾರೆ. ಹಿಂದುತ್ವದ ಅಜೆಂಡಾದಡಿಯಲ್ಲಿ ಕೆಲಸ ಮಾಡ್ತಿರುವ ಸಂಘಟನೆ, ಆಗಾಗ ಈ RSS ಮೇಲೆ ಸಾಕಷ್ಟು ವಿವಾದಗಳು ಹುಟ್ಕೊಳ್ತಾನೆ ಇರ್ತಾವೆ. ಜಾತಿ, ಧರ್ಮ, ಅಸಮಾನತೆ ಅನ್ನೋ ಹೇಳಿಕೆಗಳು ಕೇಳಿ ಬರ್ತಿರ್ತಾವೆ ಇದಕ್ಕೆ ಮತ್ತೊಂದು ನಿದರ್ಶನ ಬೆಳಕಿಗೆ ಬಂದಿದೆ ಈಆರೋಪ ಮಾಡಿರೋದು ಬೇರ್ಯಾರು ಅಲ್ಲ ಬಿಜೆಪಿಯ ಮಾಜಿ ಶಾಸಕ ಗೂಳಿ ಹಟ್ಟಿ ಶೇಖರ್.. ಸಂಘ ಪರಿವಾರದಲ್ಲಿ ಅಸ್ಪೃಶ್ಯತೆ ಆಚರಣೆ ಇದೆಯೇ ಇಲ್ಲವೇ ಎಂದು ಪ್ರಶ್ನಿಸಿ, https://ainlivenews.com/the-most-wanted-terrorist-is-poisoned-in-pakistan-jail/ ಈ ಬಗ್ಗೆ…

Read More

ಕಾರವಾರ: ಅರಬ್ಬಿ ಸಮುದ್ರದಲ್ಲಿ (Arabian Sea) ಹವಾಮಾನ ವೈಪರಿತ್ಯದಿಂದ 27 ಜನರಿದ್ದ ಗೋವಾ (Goa) ಮೂಲದ ಮೀನುಗಾರಿಕಾ ಬೋಟ್ ನಾಪತ್ತೆಯಾದ ಘಟನೆ ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಬೆಲೇಕೇರಿಯಲ್ಲಿ (Bilikere) ನಡೆದಿದೆ. ಗೋವಾ ಮೂಲದ Ind- ga -01MM2233 ನೋಂದಣಿಯ ಕ್ರಿಸ್ಟೋರಿ ಹೆಸರಿನ ಬೋಟ್ ಇದಾಗಿದ್ದು , https://ainlivenews.com/the-most-wanted-terrorist-is-poisoned-in-pakistan-jail/ ಹವಾಮಾನ ವೈಪರೀತ್ಯದಿಂದ ಎಂಜಿನ್‌ನಲ್ಲಿ ಸಮಸ್ಯೆಯಾಗಿ ಗಾಳಿ ರಭಸಕ್ಕೆ ಬೇರೆಡೆ ತೇಲಿ ಹೋಗಿದೆ. ಕೋಸ್ಟ್‌ ಗಾರ್ಡ್‌ (Coast Guard) ಸಿಬ್ಬಂದಿ ಬೋಟ್ ಹುಡುಕುವ ಕಾರ್ಯಾಚರಣೆ ಆರಂಭಿಸಿದ್ದಾರೆ. ನೆಟ್ವರ್ಕ್ ಸಂಪರ್ಕ ಕಳೆದುಕೊಂಡಿರುವುದರಿಂದ 27 ಜನ ಮೀನುಗಾರರ ರಕ್ಷಣಾ ಕಾರ್ಯಕ್ಕೆ ತೊಡಕಾಗಿದೆ.

Read More