ಬೆಳಗಾವಿ:- ಒತ್ತುವರಿಯಾದ ಸರಕಾರಿ ಭೂಮಿ ವಶಕ್ಕೆ ಪಡೆಯಲು ಪ್ರತ್ಯೇಕ ಕೋಶ ರಚನೆಗೆ ಚಿಂತನೆ ನಡೆಸಲಾಗಿದೆ ಎಂದು ಸಚಿವ ಕೃಷ್ಣ ಭೈರೇಗೌಡರು ಹೇಳಿದ್ದಾರೆ. ಪರಿಷತ್ ಪ್ರಶ್ನೋತ್ತರ ಕಲಾಪದಲ್ಲಿ ಒತ್ತುವರಿ ಕುರಿತಂತೆ ಕಾಂಗ್ರೆಸ್ ಸದಸ್ಯ ಯು.ಬಿ.ವೆಂಕಟೇಶ್ ಪ್ರಶ್ನೆಗೆ ಉತ್ತರಿಸಿದ ಅವರು, ಒತ್ತುವರಿಯಾಗಿರುವ ಭೂ ತೆರವಿನ ವಿಚಾರವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಕಳೆದ ಆರು ತಿಂಗಳಲ್ಲಿ ನೂರಾರು ಕೋಟಿ ಮೌಲ್ಯದ ಸರ್ಕಾರ ಭೂ ಒತ್ತುವರಿಯನ್ನು ತೆರವು ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಒತ್ತುವರಿ ತೆರವಿಗೆ ಪ್ರತ್ಯೇಕ ಕೋಶ ರಚಿಸಲಾಗುವುದು, ಅಲ್ಲದೆ, ಸರಕಾರಿ ಆಸ್ತಿಗಳನ್ನು ರಕ್ಷಿಸಲಾಗುವುದು ಎಂದು ಹೇಳಿದ್ದಾರೆ,
Author: AIN Author
ಕಲಬುರಗಿ:- ACC ಸಿಮೆಂಟ್ ಕಂಪೆನಿಯ ಪ್ಯಾಕಿಂಗ್ ವಿಭಾಗದ ಇಂಜಿನಿಯರ್ ಆತ್ಮಹತ್ಯೆಗೆ ಶರಣಾಗಿರೋ ಘಟನೆ ಕಲಬುರಗಿಯಲ್ಲಿ ನಡೆದಿದೆ. ಚಿತ್ತಾಪುರ ತಾಲೂಕಿನ ವಾಡಿಯಲ್ಲಿರುವ ACC ಸಿಮೆಂಟ್ ಕಂಪೆನಿಯ ಇಂಜಿನಿಯರ್ ರಮೇಶ್ ಪವಾರ್ ಆತ್ಮಹತ್ಯೆಗೆ ಶರಣಾಗಿರೋ ದುರ್ದೈವಿ. ಚಿತ್ತಾಪುರ ಮಾಜಿ ಶಾಸಕ ವಾಲ್ಮೀಕಿ ನಾಯಕ್ ಅಳಿಯ ಆಗಿರೋ ರಮೇಶ್ ಕಳೆದ 26 ವರ್ಷಗಳಿಂದ ಕೆಲಸ ಮಾಡುತ್ತಿದ್ರು. ಆದ್ರೆ ಇತ್ತೀಚಿಗೆ ನಿಮ್ಮ ಫರ್ಮಾಮೆನ್ಸ್ ಸರಿಯಿಲ್ಲ ಕೆಲಸದಿಂದ ಟರ್ಮಿನೇಟ್ ಮಾಡ್ತಿದ್ದೇವೆ ಅಂತ ಹೇಳಿ ನನ್ನನ್ನ ವಿನಾಕಾರಣ ಟಾರ್ಗೆಟ್ ಮಾಡಿದ್ರು. ಹೀಗಂತ ಖುದ್ದು ರಮೇಶ್ ಪವಾರ್ ಸಾವಿಗೂ ಮುನ್ನ ಸೆಲ್ಫಿ ವಿಡಿಯೋ ರೆಕಾರ್ಡ್ ಮಾಡಿ ನೇಣಿಗೆ ಕೊರಳೊಡ್ಡಿದ್ದಾರೆ..ಈ ಬಗ್ಗೆ ವಾಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು:- ಸೈಟ್ ಕೊಡಿಸುವ ನೆಪದಲ್ಲಿ ಬೆಂಗಳೂರಿನಲ್ಲಿರುವ ವಿದೇಶಿ ವ್ಯಕ್ತಿಗೆ ಲಕ್ಷಾಂತರ ರೂಪಾಯಿ ಪಡೆದು ವಂಚನೆ ಎಸಗಿರುವ ಪ್ರಕರಣ ಬೆಳಕಿಗೆ ಬಂದಿದೆ. ಈ ಸಂಬಂಧ ಅನಿವಾಸಿ ಭಾರತೀಯ ಟ್ವೀಟ್ ಮೂಲಕ ದೂರು ನೀಡಿದ್ದಾರೆ. ಜಾಹಿರಾತು ಮುಖಾಂತರ ರಾಘವೇಂದ್ರ ಪ್ರಸಾದ್ ಎಂಬವರನ್ನು ಜೆಪಿ ನಗರದ ರಿಯಲ್ ಎಸ್ಟೇಟ್ ಕಂಪನಿ ಪರಿಚಯಿಸಿಕೊಂಡಿದೆ. ನಂತರ ಹೂಡಿಕೆ ಮಾಡಿಸಿಕೊಂಡು ಸೈಟ್ ಬುಕ್ ಮಾಡಿದ್ದಾರೆ. ಈಗಾಗಲೇ ವಿವಿಧ ಹಂತಗಳಲ್ಲಿ 30 ಲಕ್ಷ ಹಣ ಜಮೆ ಮಾಡಿಸಿಕೊಂಡಿದೆ. ಹಣ ಜಮೆಯಾದ ಬಳಿಕ ಬುಕ್ ಮಾಡಿದ್ದ ಸೈಟ್ ಬೇರೆಯವರಿಗೆ ಮಾರಾಟ ಮಾಡಲಾಗಿದೆ. ಈ ವಿಚಾರ ತಿಳಿದ ರಾಘವೇಂದ್ರ ಪ್ರಸಾದ್ ಅವರು ಕಂಪನಿಯನ್ನು ಪ್ರಶ್ನಿಸಿದಾಗ ಬೇರೆ ಸೈಟ್ ನೀಡುವುದಾಗಿ ತಿಳಿಸಿದೆ. ಈ ವೇಳೆ ಹೂಡಿಕೆ ಹಣ ವಾಪಾಸ್ ನೀಡುವಂತೆ ರಾಘವೇಂದ್ರ ಅವರು ಕಂಪನಿಗೆ ಮನವಿ ಮಾಡಿದ್ದಾರೆ.
ಸುವರ್ಣಸೌಧ:- ಬಿಜೆಪಿ ಮುಖಂಡರಾದ ಮಣಿಕಂಠ ರಾಥೋಡ್, ವಿಜಯೇಂದ್ರ ವಿರುದ್ಧ ಮಾನನಷ್ಟ ಕೇಸ್ ಹಾಕುವೆ ಎಂದು ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಬಿಜೆಪಿ ಮುಖಂಡ ಮಣಿಕಂಠ ರಾಥೋಡ್ ಅವರ ಮೇಲೆ ನಾನು ಹಲ್ಲೆ ನಡೆಸಿದ್ದೇನೆ ಎಂದು ಆರೋಪಿಸಿದ ಮಣಿಕಂಠ ರಾಥೋಡ್ ಹಾಗೂ ಬಿಜೆಪಿ ಅಧ್ಯಕ್ಷ ಬಿ.ವೈ ವಿಜಯೇಂದ್ರ ಸೇರಿ ಹಲವು ಬಿಜೆಪಿ ನಾಯಕರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವುದಾಗಿ ಎಂದರು. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದ ಮಣಿಕಂಠ ರಾಥೋಡ್ ಅವರು ಕಳೆದ ನ.19ರಂದು ತಮ್ಮ ಮೇಲೆ ಹಲ್ಲೆಯಾಗಿದೆ, ಅದಕ್ಕೆ ಸರ್ಕಾರದ ಅಧಿಕಾರಗಳು ಹಾಗೂ ರಾಜಕೀಯ ವಿರೋಧಿಗಳು ಕಾರಣ ಎಂದು ಆರೋಪಿಸಿ ದೂರು ನೀಡಿದ್ದರು. ಆದರೆ, ಈಗ ಅದರ ವಿಧಿವಿಜ್ಞಾನ ವರದಿ ಬಂದಿದ್ದು, ಮಣಿಕಂಠ ರಾಥೋಡ್ ಅವರು ಮದ್ಯಪಾನ ಮಾಡಿ ವಾಹನ ಚಲಾಯಿಸಿ ಅಪಘಾತಕ್ಕೀಡಾದಾಗ ಅವರಿಗೆ ಗಾಯಗಳಾಗಿವೆ. ಅವರ ಮೇಲೆ ಯಾರೂ ಹಲ್ಲೆ ಮಾಡಿಲ್ಲ ಎಂದು ತಿಳಿದುಬಂದಿದೆ. ಆದರೆ, ಅವರ ಮೇಲೆ ನಾನು ಹಲ್ಲೆ ಮಾಡಿದ್ದೇನೆ ಎಂದು ಮಣಿಕಂಠ ರಾಥೋಡ್,…
ಆಂಧ್ರ:- ಸೈಕ್ಲೋನ್ ಪ್ರಭಾವ ತಿರುಪತಿ ತಿರುಮಲ ಭಕ್ತರ ಮೇಲೂ ಕೂಡ ಆಗಿದೆ. ಚಂಡಮಾರುತದ ಪ್ರಭಾವದಿಂದ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಗಣನೀಯವಾಗಿ ಕುಸಿದಿದೆ. ಶನಿವಾರದಿಂದ ತಿರುಪತಿಯಲ್ಲಿ ಮಿಚಾಂಗ್ ಚಂಡಮಾರುತದಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಯು ಮಂಗಳವಾರವೇ ಹತೋಟಿಗೆ ಬಂದಿದ್ದು, ತೀವ್ರ ಚಂಡಮಾರುತವು ಬಾಪಟ್ಲಾ ಬಳಿ ಭೂಕುಸಿತವನ್ನು ಮಾಡಿದ ನಂತರ. ತಿರುಪತಿಯು ಚಂಡಮಾರುತದ ಪ್ರಭಾವ ಅನುಭವಿಸುವ ಮುನ್ಸೂಚನೆ ಇದ್ದ ಕಾರಣ ಭಕ್ತರ ಸಂಖ್ಯೆ ಕಡಿಮೆಯಾಗಿದೆ. ದೇಶಾದ್ಯಂತದ ವಿವಿಧ ಸ್ಥಳಗಳಿಂದ ತಿರುಪತಿಗೆ ತೆರಳುವ ಬಸ್ಗಳು, ರೈಲುಗಳು ಮತ್ತು ವಿಮಾನಗಳ ರದ್ದತಿಯು ಕೂಡ ತಿರುಮಲದಲ್ಲಿ ಭಕ್ತರ ಸಂಖ್ಯೆ ಕಡಿಮೆಯಾಗಲು ಕಾರಣವಾಗಿದೆ. ತಿರುಮಲ ತಿರುಪತಿ ದೇವಸ್ಥಾನದ ಅಧಿಕೃತ ದಾಖಲೆಗಳ ಪ್ರಕಾರ, ಮಂಗಳವಾರ ಕೇವಲ 44,547 ಭಕ್ತರು ತಿರುಮಲ ದೇವಸ್ಥಾನ ದರ್ಶನ ಪಡೆದಿದ್ದಾರೆ, ಇದು ದಾಖಲೆಯ ಕಡಿಮೆ ಮತ್ತು ದೈನಂದಿನ ಸರಾಸರಿ ಯಾತ್ರಿಕರ ಪಾದಯಾತ್ರೆಯ ಅರ್ಧದಷ್ಟು ಎಂದು ಹೇಳಲಾಗಿದೆ. ಭಕ್ತರ ಸಂಖ್ಯೆ ಇಳಿಮುಖವಾಗಿದ್ದು, ತಿರುಮಲ ದೇವಸ್ಥಾನದ ಹುಂಡಿ ಸಂಗ್ರಹವೂ ಮಂಗಳವಾರ 3.25 ಕೋಟಿ ರೂ.ಗೆ ಕುಸಿತ ಕಂಡಿದೆ.…
ಸಾಮಾನ್ಯವಾಗಿ ಗೆಣಸು ಎಲ್ಲ ಋತುಗಳಲ್ಲಿಯೂ ದೊರೆಯುತ್ತದೆ. ಆದರೆ ಸಿಹಿ ಗೆಣಸು ಹೆಚ್ಚಾಗಿ ಸಿಗುವುದು ಚಳಿಗಾಲದಲ್ಲಿ ಮಾತ್ರ. ಮಣ್ಣಿನಲ್ಲಿ ಅಡಿಯಲ್ಲಿ ಬೆಳೆಯುವ ಸಿಹಿ ಗೆಣಸು ಆರೋಗ್ಯಕ್ಕೆ ಒಳ್ಳೆಯದು. ಇದು ತುಂಬಾ ಟೇಸ್ಟಿ ಮತ್ತು ಪೌಷ್ಟಿಕಾಂಶವನ್ನು ತುಂಬಿಕೊಂಡಿದೆ. ಸಿಹಿ ಗೆಣಸು ಚಳಿಗಾಲದಲ್ಲಿ ತಿನ್ನಲು ಒಳ್ಳೆಯದು. ಇದರ ಸೇವನೆಯಿಂದ ಆಗುವ ಆರೋಗ್ಯ ಪ್ರಯೋಜನಗಳನ್ನು ನಾವೀಗ ನೋಡೋಣ. ಚರ್ಮದ ಆರೋಗ್ಯಕ್ಕೆ ಒಳ್ಳೆಯದು ಚಳಿಗಾಲದಲ್ಲಿ ನಮ್ಮ ತ್ವಚೆಯನ್ನು ಸುರಕ್ಷಿತವಾಗಿಡುವುದು ಬಹಳ ಮುಖ್ಯ. ಏಕೆಂದರೆ ಚಳಿಗಾಲದಲ್ಲಿ ಚರ್ಮ ಬೇಗ ಒಣಗುತ್ತದೆ. ಈ ರೀತಿ ಆದಾಗ ನಮ್ಮ ಚರ್ಮಕ್ಕೆ ಹಾನಿಯಾಗುತ್ತದೆ. ಹೀಗಾಗಿ ಸಿಹಿ ಗೆಣಸು ತಿನ್ನುವುದು ಚರ್ಮದ ಆರೋಗ್ಯಕ್ಕೆ ತುಂಬಾ ಒಳ್ಳೆಯದು. ನೀವು ಸುಕ್ಕುಗಟ್ಟಿದ, ವಯಸ್ಸಾದ ಚರ್ಮದ ಸಮಸ್ಯೆಯನ್ನು ಎದುರಿಸುತ್ತಿದ್ದರೆ, ಸ್ವತಂತ್ರ ರಾಡಿಕಲ್ ವಿರುದ್ಧ ಹೋರಾಡುವ ಮತ್ತು ಚರ್ಮವನ್ನು ರಕ್ಷಿಸುವ ಸಿಹಿ ಗೆಣಸು ತಿನ್ನಬೇಕು. ಇದು ಚರ್ಮವನ್ನು ಮೃದುಗೊಳಿಸುತ್ತದೆ. ಮೆಗ್ನೀಸಿಯಮ್ ಹೇರಳ ಈ ಚಳಿಗಾಲವು ದೇಹದಲ್ಲಿ ಮಾತ್ರವಲ್ಲದೆ ಮನಸ್ಸಿನಲ್ಲಿಯೂ ಅನೇಕ ಬದಲಾವಣೆಗಳನ್ನು ತರುತ್ತದೆ. ತಣ್ಣನೆಯ ಗಾಳಿ ಬೀಸಿದಾಗ ಮನೆಯಿಂದ ಹೊರಗೆ ಬರದ…
ಬೆಳಗಾವಿ: ಸಂಬಂಧಿಕರ ಮದುವೆ ಮುಗಿಸಿಕೊಂಡು ವಾಪಸ್ ಮನೆಗೆ ಹೋಗುತ್ತಿದ್ದಾಗ ಟಿಪ್ಪರ್ ಮತ್ತು ಕಾರಿನ ಮಧ್ಯೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಇಬ್ಬರ ಸಜೀವ ಧಹನವಾಗಿರುವ ಘಟನೆ ದೇವಗಿರಿ ಬಂಬರಗಾ ಕ್ರಾಸ್ ಬಳಿ ದುರ್ಘಟನೆ ನಡೆದಿದೆ ಬೆಳಗಾವಿ ತಾಲೂಕಿನ ಬಂಬರಗಾ ಗ್ರಾಮದ ಮೋಹನ್ ಮಾರುತಿ ಬೆಳ್ಗಾಂವಕರ್(24), ಮಚ್ಚೆ ಗ್ರಾಮದ ಬಾಲಕಿ ಸಮಿಕ್ಷಾ ಡಿಯೇಕರ್(12) ಮೃತ ದುರ್ದೈವಿಗಳು. ಸಂಬಂಧಿಕರ ಮದುವೆ ಮುಗಿಸಿಕೊಂಡು ರಾತ್ರಿ ಬಂಬರಗಾ ಗ್ರಾಮಕ್ಕೆ ಬರುವಾಗ ಕಾರು ಮತ್ತು ಟಿಪ್ಪರ್ ನಡುವೆ ಅಪಘಾತ ಆಗಿದೆ. ಬಂಬರಗಾ ಕ್ರಾಸ್ ಬಳಿ ಅಡ್ಡ ಬಂದ ಟಿಪ್ಪರ್ಗೆ ಕಾರು ಡಿಕ್ಕಿಯಾಗಿದ್ದು ಅಪಘಾತದ ರಭಸಕ್ಕೆ ಟಿಪ್ಪರ್ ನ ಡಿಸೇಲ್ ಟ್ಯಾಂಕ್ ಒಡೆದು ಹೊತ್ತಿ ಉರಿದಿದ್ದು ಈ ವೇಳೆ ಕಾರಿನಲ್ಲಿದ್ದ ನಾಲ್ವರು ಪೈಕಿ ಇಬ್ಬರು ಸಜೀವ ದಹನ ಆಗಿದ್ದು ಗಂಭೀರ ಗಾಯಗೊಂಡ ಮತ್ತಿಬ್ಬರನ್ನ ಸ್ಥಳೀಯರು ರಕ್ಷಣೆ ಮಾಡಿ ಆಸ್ಪತ್ರೆಗೆ ರವಾನೆ ಮಾಡಿದ್ದಾರೆ. ಮಹೇಶ್ ಬೆಳ್ಗಾಂವಕರ್ ಮತ್ತು ಸ್ನೇಹಾ ಬೆಳ್ಗುಂದ್ಕರ್ ಗಂಭೀರ ಗಾಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ. ಮಾಹಿತಿ ತಿಳಿದು…
ಪಾಟ್ನಾ:- ರಾತ್ರಿಯ ಕತ್ತಲಲ್ಲಿ ತನ್ನ ಗೆಳತಿಯನ್ನು ಭೇಟಿಯಾಗಲು ಬಂದ ಪ್ರೇಮಿಯನ್ನು ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು ಇಬ್ಬರಿಗೂ ಮದುವೆ ಮಾಡಿಸಿದ್ದಾರೆ. ಕದ್ದು ಮುಚ್ಚಿ ಪ್ರೇಯಸಿಯನ್ನು ನೋಡಲು ಬಂದಾತನಿಗೆ ಗ್ರಾಮಸ್ಥರು ಒತ್ತಾಯಪೂರ್ವಕವಾಗಿ ಮದುವೆಯನ್ನೇ ಮಾಡಿಸಿದ್ದಾರೆ. ಈ ಮದುವೆಯ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಪ್ರಕರಣವು ಜಮುಯಿ ಜಿಲ್ಲೆಯ ಚರ್ಕಪಥರ್ ಪೊಲೀಸ್ ಠಾಣೆ ವ್ಯಾಪ್ತಿಯ ಪನನ್ಮಾ ಗ್ರಾಮದ್ದಾಗಿದ್ದು, ರಾತ್ರಿಯ ಕತ್ತಲೆಯಲ್ಲಿ ಖೈರಾ ಪೊಲೀಸ್ ಠಾಣೆ ವ್ಯಾಪ್ತಿಯ ಬಿಶನ್ಪುರ ಗ್ರಾಮದ 24 ವರ್ಷದ ಮನೋರಂಜನ್ ಕುಮಾರ್ ತನ್ನ 19 ವರ್ಷದ ಗೆಳತಿ ರಂಜು ಕುಮಾರಿ ಮನೆಗೆ ತಲುಪಿದ್ದ. ಈ ವಿವಾರ ಗ್ರಾಮಸ್ಥೈರಿಗೂ ತಿಳಿದು ಬಂದಿದ್ದು, ಇಬ್ಬರೂ ರೆಡ್ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಕೂಡಲೇ ಮನೆಯ ಅಂಗಳದಲ್ಲಿ ಅವರ ಮನೆಯವರ ಸಮ್ಮುಖದಲ್ಲಿ ಈ ಜೋಡಿಗೆ ಮದುವೆ ಮಾಡಿಸಿದ್ದಾರೆ. ಸುಮಾರು ಒಂದು ವರ್ಷದಿಂದ ಇಬ್ಬರ ನಡುವೆ ಪ್ರೇಮ ನಡೆಯುತ್ತಿತ್ತು ಎನ್ನಲಾಗಿದೆ. ಸೋಮವಾರ ರಾತ್ರಿ ಖೈರಾದ ಬಿಶನ್ಪುರ ನಿವಾಸಿ ಮನೋರಂಜನ್ ತನ್ನ ಗೆಳತಿ ರಂಜು ಅವರನ್ನು…
ಬೆಂಗಳೂರು :- ಸಂತರನ್ನು ಉಗ್ರಗಾಮಿ ಎಂದು ಹೇಳುವುದು ಸರಿಯಲ್ಲ ಎಂದು ಸಚಿವ ಹೆಚ್ ಕೆ ಪಾಟೀಲ್ ಹೇಳಿದ್ದಾರೆ. ಈ ಸಂಬಂಧ ಮಾತನಾಡಿದ ಅವರು, ತರನ್ನು ಉಗ್ರಗಾಮಿ ಎಂದು ಹೇಳುವುದು ಸರಿಯಲ್ಲ . ಸಂತ ಸೂಫಿಗಳ ಪ್ರಭಾವಕ್ಕೆ ಒಳಗಾದವರು ಉಗ್ರಗಾಮಿ ಆಗ್ತಾರಾ?, ಭ್ರಾತೃತ್ವ ಭಾವನೆ ಬೆಳೆಸಲು ಪ್ರಯತ್ನ ಮಾಡುವವರು, ಸಂತರನ್ನು ಸಮ ಭಾವನೆಯಿಂದ ನೋಡುವವರು, ಟೆರರಿಸ್ಟ್ ಮ
ಜಾನುವಾರುಗಳಿಗೆ ಉಪಯೋಗಿಸುವ ಪೌಷ್ಟಿಕ ಆಹಾರವಾದ ಅಜೋಲಾ, ರೈತನ ಬದುಕನ್ನೇ ಉಜ್ವಲಗೊಳಿಸುವ ಸಾಧ್ಯತೆಯನ್ನು ತೆರೆದಿಟ್ಟಿದೆ. ಪಶುಪಾಲನೆ ಮಾಡುವವರು ಪ್ರತಿ ವರ್ಷ ಮೇವು ಸಂಗ್ರಹಿಸಿಟ್ಟುಕೊಳ್ಳಲು, ಬೇರೆಡೆಯಿಂದ ತರಿಸಲು ನಡೆಸುತ್ತಿದ್ದ ಕಸರತ್ತಿಗೆ ಅಜೋಲಾ ಮುಕ್ತಿ ನೀಡಲಿದೆ. ನೀರಿನ ಮೇಲೆ ತೇಲಾಡಿಕೊಂಡು ಬೆಳೆಯಬಲ್ಲ ಝರಿ ರೀತಿಯ ಸಸ್ಯವೇ ಅಜೋಲಾ. ಇದರ ಕಾಂಡ ಮತ್ತು ಎಲೆಗಳು ಚಿಕ್ಕದಾಗಿದ್ದು, ಒಂದರ ಮೇಲೊಂದು ಜೋಡಿಸಿದಂತೆ ಇರುತ್ತವೆ. 8 ಸೇ.ಮಿ ಉದ್ದದ ಬೇರುಗಳು ನೀರಿನಲ್ಲಿ ಇಳಿಬಿದ್ದಿರುತ್ತದೆ. ಅನಬೇನಾ ಅಜೋಲಾ ಎಂಬ ನೀಲಿ ಹಸಿರು ಪಾಚಿ ಅಜೋಲಾ ಸಹಜೀವಿಯಾಗಿದೆ. ಅಜೋಲಾ ಸಸ್ಯದ ಎಲೆಯ ಕೆಳಭಾಗದಲ್ಲಿ ಸಣ್ಣ ರಂಧ್ರಗಳಿದ್ದು, (ಅವುಗಳಲ್ಲಿ ಅನಬೀನಾ ಎಂಬ ನೀಲಿ ಹಸಿರು ಪಾಚಿಯು ಅಡಕವಾಗಿದ್ದು, ಇವು ವಾಯುಮಂಡಲದಲ್ಲಿ ಮುಕ್ತವಾಗಿ ಸಿಗುವಂತ ಸಾರಜನಕವನ್ನು ಹೀರಿ ಹಿಡಿದಿಟ್ಟುಕೊಳ್ಳುವ ಶಕ್ತಿ ಪಡೆದಿರುತ್ತದೆ). ಈ ಪಾಚಿಗೆ ವಾಸಿಸಲು ಇದು ಸ್ಥಳ ಒದಗಿಸುತ್ತದೆ. ಇದಕ್ಕೆ ಪ್ರತ್ಯುಪಕರವಾಗಿ ಅನಬೇನಾ ಅಜೋಲಾವು ಗಾಳಿಯಲ್ಲಿರುವ ಮುಕ್ತವಾಗಿ ಸಿಗುವ ಸಾರಜನಕವನ್ನು ಸ್ಥಿರೀಕರಿಸಿ ಬೆಳವಣಿಗೆಗೆ ಚೇತರಿಸುವ ಪದಾರ್ಥಗಳನ್ನು ಕೊಡುತ್ತದೆ. ಇದನ್ನು ಹಸಿರು ಎಲೆ ಗೊಬ್ಬರವಾಗಿ ಉಪಯೋಗಿಸುವುದಕ್ಕಿಂತ…