Author: AIN Author

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಮಹಾನಗರ ಜಿಲ್ಲಾ ಎಸ್ ಸಿ ಘಟಕದ ವತಿಯಿಂದ ವಿಶ್ವ ರತ್ನ ವಿಶ್ವಮಾನವ ಭಾರತ ರತ್ನ ಬಾಬಾ ಸಾಹೇಬ್ ಡಾಕ್ಟರ್ ಬಿ, ಆರ್, ಅಂಬೇಡ್ಕರ್ ರವರ 67ನೇ ಪರಿನಿರ್ವಾಣ ದಿನದಂದು ಪುತ್ತಳಿಗೆ ಮಾಲಾರ್ಪಣೆ ಮಾಡುವ ಮೂಲಕ ಜಿಲ್ಲಾ ಎಸ್ ಸಿ ಘಟಕದ ವತಿಯಿಂದ ಗೌರವಪೂರ್ವಕ ನಮನಗಳನ್ನು ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ, ಬಸವರಾಜ ಬೆಣಕಲ್, ಬಮ್ಮಾಪುರ ಬ್ಲಾಕ್ ಅಧ್ಯಕ್ಷರಾದ ಪಕ್ಕಣ್ಣ ದೊಡ್ಡಮನಿ, ಇಂದ್ರಾನಗರ ಬ್ಲಾಕ್ ಅಧ್ಯಕ್ಷರಾದ, ಮಹೇಶ್ ಅಂಜಿಗಿ, ವಿದ್ಯಾನಗರ ಬ್ಲಾಕ್, ಉಣಕಲ್ ಬ್ಲಾಕ್ ಅಧ್ಯಕ್ಷರುಗಳು ಸೋಮಣ್ಣ ಅಂಜಿಗಿ ಹಾಗೂ ಪಕ್ಷದ ಪದಾಧಿಕಾರಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

Read More

ಕನ್ನಡ ರಾಜ್ಯೋತ್ಸವ ಹಾಗೂ ಡಾ ಪುನೀತ್ ರಾಜ್‍ಕುಮಾರ್ ರವರ ಸವಿ ನೆನಪಿನಲ್ಲಿ ಕೆಆರ್ ಪುರ ಕ್ಷೇತ್ರದ್ಯಾಂತ ಉಚಿತ ಆರೋಗ್ಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಿ.ಕೆ.ಮೋಹನ್ ಬಾಬು ಅವರು ತಿಳಿಸಿದರು. ಕ್ಷೇತ್ರದ ಹೊರಮಾವು ವಾಡ್೯ನ ಶಾಲೆಯಲ್ಲಿ ಲಯನ್ಸ್ ಕ್ಲಬ್ ಹಾಗೂ ಸರ್.ಸಿ.ವಿ.ರಾಮನ್ ಸಾರ್ವಜನಿಕ ಆಸ್ಪತ್ರೆಯ ಸಹಕಾರದಿಂದ ಏರ್ಪಡಿಸಿದ್ದ ಉಚಿತ ಆರೋಗ್ಯ , ಕಿವಿ, ಮೂಗು ಹಾಗೂ ನೇತ್ರ ತಪಾಸಣಾ ಶಿಭಿರ ನಡೆಸಿ ಔಷಧಿ ಹಾಗೂ ಕನ್ನಡಕಗಳನ್ನು ವಿತರಿಸಿ ಮಾತನಾಡಿದರು. ಪುನೀತ್ ರಾಜ್‌ಕುಮಾರ್ ಅವರ ಸವಿ ನೆನಪಿನಲ್ಲಿ ಕಳೆದ ಎರಡು ವರ್ಷದಿಂದ ಈ ಶಿಬಿರ ಆಯೋಜನೆ ಮಾಡುತ್ತಿದ್ದು, ಕ್ಷೇತ್ರದ 11 ವಾರ್ಡ್ನಲ್ಲಿ 11 ಜಾಗದಲ್ಲಿ ಪ್ರತೀ ವಾರ ಈ ಶಿಬಿರ ಆಯೋಜನೆ ಮಾಡಲಾಗುತ್ತಿದೆ ಎಂದು ಹೇಳಿದರು. ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಗೆ ಪಣತೊಟ್ಟಿದ್ದು,ರಾಜ್ಯ ಸರ್ಕಾರದ ಹಲವು ಮಹತ್ತರ ಯೋಜನೆಗಳಿಂದ ಜನತೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಉತ್ತಮ ಸ್ಪಂದನೆ ನೀಡುತ್ತಿದ್ದಾರೆ ಎಂದು ಹೇಳಿದರು. ಕೆ.ಆರ್.ಪುರ ಕ್ಷೇತ್ರದಲ್ಲಿ ಮುಂದಿನ ಬಾರಿ ಕಾಂಗ್ರೆಸ್…

Read More

ಹುಬ್ಬಳ್ಳಿ : ಭಾರತದ ಅತಿ ದೊಡ್ಡ ವಾಣಿಜ್ಯ ವಾಹನಗಳ ತಯಾರಿಕಾ ಸಂಸ್ಥೆಯಾಗಿರುವ ಟಾಟಾ ಮೋಟರ್ಸ್, ಹೊಚ್ಚ ಹೊಸದಾದ ಇಂಟ್ರಾ ವಿ ೭೦ ಇಂಟ್ರಾವಿ ೨೦ ಗೋಲ್ಡ್ ಏಸ್ HT+ ವಾಣಿಜ್ಯ ವಾಹನಗಳನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಮೂಲಕ ಮೊದಲ ಮತ್ತು ಕಟ್ಟ ಕಡೆಯ ಮೈಲಿನ ಸಾರಿಗೆ ವ್ಯವಸ್ಥೆಯನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡುವ ತನ್ನ ಬದ್ಧತೆಯನ್ನು ಪ್ರದರ್ಶಿಸಿದೆ. ಈ ಹೊಸ ವಾಹನಗಳು ಹೆಚ್ಚಿನ ಪೇಲೋಡ್ ಗಳನ್ನು ದೂರದವರೆಗೆ ಕೊಂಡೊಯ್ಯಲು ಸಹಕಾರಿಯಾಗಿವೆ. ಇದರೊಂದಿಗೆ ಅತ್ಯುತ್ತಮ ಆರ್ಥಿಕ ಲಾಭವನ್ನು ತಂದು ಕೊಡುತ್ತವೆ. ಅತ್ಯುತ್ಕೃಷ್ಟವಾದ ದರ್ಜೆಯ ವೈಶಿಷ್ಟ್ಯತೆಗಳನ್ನು ಹೊಂದಿರುವ ಈ ವಾಹನಗಳು ವಿವಿಧ ಬಗೆಯ ಸರಕು ಸಾಗಣೆಗೆ ಬಳಸಬಹುದಾಗಿದೆ. ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ವಾಹನಗಳ ಬಿಡುಗಡೆ ಬಗ್ಗೆ ಮಾತನಾಡಿದ ಟಾಟಾ ಮೋಟರ್ಸ್ ನ ಕಾರ್ಯಕಾರಿ ನಿರ್ದೇಶಕ ಗಿರೀಶ್ ವಾಘ್ ಅವರು, “ವಿವಿಧ ರೀತಿಯ ಅಪ್ಲಿಕೇಶನ್ ಗಳಿಗೆ ಗರಿಷ್ಠ ಮಟ್ಟದ ಪರಿಹಾರಗಳನ್ನು ನೀಡುವುದರ ಜೊತೆಗೆ ನಮ್ಮ ಸಣ್ಣ ವಾಣಿಜ್ಯ ವಾಹನಗಳು ಮತ್ತು ಪಿಕಪ್ ಗಳು ನಮ್ಮ…

Read More

ಹುಬ್ಬಳ್ಳಿ: 21 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಗಾಂಜಾ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸುವಲ್ಲಿ ವಿದ್ಯಾನಗರ ಪೊಲೀಸ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ಘಟಕದ ಅಂದಿನ ಕಾನೂನು ಮತ್ತು ಸುವ್ಯವಸ್ಥೆಯ ಉಪ ಪೊಲೀಸ್ ಆಯುಕ್ತರಾದ ಬಿ.ಆರ್.ರವಿಕಾಂತೇಗೌಡ ರವರು ದೂರು ಕೊಟ್ಟಿದ್ದರಲ್ಲಿ 09-12-2002 ರಂದು ಆರೋಪಿತರ ವಶದಿಂದ ಮತ್ತು ಮನೆಯಲ್ಲಿಂದ ಒಟ್ಟು 11 ಕ್ವಿಂಟಲ್ ತೂಕದ, ಗಾಂಜಾ ತುಂಬಿದ ಒಟ್ಟು 36 ಚೀಲಗಳನ್ನು ಮತ್ತು ಸಾಗಾಟ ಮಾಡಲು ಬಳಸಿದ ಒಂದು ಸ್ಕೂಟಿ, ಒಂದು ಬುಲೆಟ್ ಮತ್ತು ಒಂದು ಲಾರಿ ಸೇರಿ ಒಟ್ಟು 24 ಲಕ್ಷ 90 ಸಾವಿರ ರೂ. ಮೌಲ್ಯದ ಗಾಂಜಾ ಮತ್ತು ವಾಹನಗಳನ್ನು ಜಪ್ತಿ ಮಾಡಿದ್ದು, ಈ ಬಗ್ಗೆ ಹುಬ್ಬಳ್ಳಿ ವಿದ್ಯಾನಗರ ಪೊಲೀಸ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿ ಕುಮಾರ ಸೂರಪ್ಪ ಶೆಟ್ಟಿ ಎನ್ನುವವನು ಪರಾರಿಯಾಗಿದ್ದನು. ಆರೋಪಿತನು ಪದೇ ಪದೇ ವಿಳಾಸವನ್ನು ಬದಲಾಯಿಸುತ್ತ ತಲೆಮರೆಸಿಕೊಂಡಿದ್ದರಿಂದ ಈ ಪ್ರಕರಣವು ನ್ಯಾಯಾಲಯದಲ್ಲಿ ಎಲ್.ಪಿ.ಸಿ. ಪ್ರಕರಣವಾಗಿತ್ತು. https://ainlivenews.com/the-founder-of-byjus-who-barricaded-his-own-house-to-give-salary-to-the-employees/ ಆರೋಪಿತನ ಪೂರ್ಣ ಹೆಸರು. ವಿಳಾಸ ಮತ್ತು ಭಾವಚಿತ್ರ…

Read More

ಬೆಳಗಾವಿ : ಬೆಳಗಾವಿ ಚಳಿಗಾಲದ ಅಧಿವೇಶನದ ಮೂರನೇ ದಿನವು ಪ್ರತಿಭಟನೆ ಕಾವು ತಟ್ಟಲಿದ್ದು, ಶಕ್ತಿಸೌಧದ ಹೊರಗೆ ಮೂರನೇ ದಿನವು ಸಾಲು ಸಾಲು ಪ್ರತಿಭಟನೆಗಳು ನಡೆಯಲಿದೆ. ಬೆಳಗಾವಿ ಚಳಿಗಾಲದ ಅಧಿವೇಶನ ಮೂರನೇ ದಿನವಾದ ಇಂದು ಬರೊಬ್ಬರಿ 6 ಸಂಘಟನೆಗಳಿಂದ ಪ್ರತಿಭಟನೆ, 2 ಸಂಘಟನೆಗಳಿಂದ ಸರ್ಕಾರಕ್ಕೆ ಮನವಿ ಸಲ್ಲಿಸಲಿದ್ದೇವೆ. ಅಖಿಲ ಕರ್ನಾಟಕ ರೈತ ಸಂಘದಿಂದ ಹೋರಾಟಕ್ಕೆ ಮುಂದಾಗಿದ್ದು, https://ainlivenews.com/the-founder-of-byjus-who-barricaded-his-own-house-to-give-salary-to-the-employees/ ರಾಜ್ಯದ ರೈತರ ಸಾಲ ಮನ್ನಾ ಮಾಡಬೇಕು. ಕರೆಗಳ ಒತ್ತುವರಿ ತೆರುವು ಮಾಡಬೇಕು. ಖಾನಾಪುರ ತಾಲೂಕಿನ ರೈತರಿಗೆ ಮಲಪ್ರಭಾ ನದಿಯಿಂದ ಏತ ನೀರಾವರಿ ಯೋಜನೆ ಕಲ್ಪಿಸಲು ಒತ್ತಾಯಿಸಲಾಗುತ್ತದೆ. ಕರ್ನಾಟಕ ರಾಜ್ಯ ನೇಕಾರರ ಸಂಘದಿಂದ ರಾಜ್ಯದಲ್ಲಿ ಆತ್ಮಹತ್ಯೆ ಮಾಡಿಕೊಂಡ 46 ನೇಕಾರ ಕುಟುಂಬಗಳಿಗೆ 10 ಲಕ್ಷ ಪರಿಹಾರ ಕೊಡಬೇಕು, ನೇಕಾರರಿಗೂ ಕಟ್ಟಡ ಕಾರ್ಮಿಕರ ಮಾದರಿಯಲ್ಲಿ ಕಾರ್ಮಿಕ ಸೌಲಭ್ಯ ಒದಗಿಸಲು ಪ್ರತಿಭಟನೆಗೆ ಮುಂದಾಗಿದ್ದಾರೆ.

Read More

 ‘ಬಿಗ್ ಬಾಸ್‌ ಕನ್ನಡ 10’ ಕಾರ್ಯಕ್ರಮದಲ್ಲಿ ಈ ವಾರ ಕ್ಯಾಪ್ಟನ್‌ ಆಗಿರುವ ಸ್ನೇಹಿತ್‌ಗೆ ವಿಶೇಷ ಅಧಿಕಾರಗಳಿವೆ. ಇದರ ಅನುಸಾರ ಎರಡು ತಂಡಗಳಲ್ಲಿ ಯಾರ್ಯಾರು ಇರಬೇಕು ಅನ್ನೋದನ್ನ ಸ್ನೇಹಿತ್ ಅವರೇ ನಿರ್ಧಾರ ಮಾಡಬೇಕಿತ್ತು. ‘ಸ್ಪರ್ಧಿಗಳ ದೈಹಿಕ ಹಾಗೂ ಮಾನಸಿಕ ಸಾಮರ್ಥ್ಯ ಎರಡೂ ತಂಡಗಳಲ್ಲಿ ಸಮನಾಗಿ ಇರುವಂತೆ ಎರಡು ತಂಡಗಳ ರಚನೆ ಆಗಬೇಕು’ ಎಂದು ‘ಬಿಗ್ ಬಾಸ್‌’ ಸ್ಪಷ್ಟವಾಗಿ ತಿಳಿಸಿದ್ದರು. ಆದರೆ ಅದನ್ನ ಸ್ನೇಹಿತ್‌ ಗಂಭೀರವಾಗಿ ಪರಿಗಣಿಸಲೇ ಇಲ್ಲ! ವಿನಯ್‌, ನಮ್ರತಾ ಹೇಳಿದ್ದನ್ನ ಮಾತ್ರ ಕಿವಿಗೆ ಹಾಕಿಕೊಂಡ ಸ್ನೇಹಿತ್‌.. ಸ್ಪಷ್ಟವಾಗಿ ಅವರಿಬ್ಬರು ಬಯಸಿದ ವರ್ತೂರು ಸಂತೋಷ್ ಅವರ ತಂಡಕ್ಕೆ ಫೇವರ್ ಆಗಿ ತಂಡವನ್ನ ರಚಿಸಿದರು. ‘’ಮೈಕಲ್‌ ನಮ್ಮ ತಂಡಕ್ಕೆ ಬೇಕು’’ ಎಂದು ಸಂಗೀತಾ ಬಾಯ್ಬಿಟ್ಟು ಕೇಳಿದರೂ, ಅದಕ್ಕೆ ಸ್ನೇಹಿತ್ ಒಪ್ಪಲಿಲ್ಲ. ‘’ಇದು ಕ್ಲಿಯರ್‌ ಆಗಿ ಅನ್‌ಫೇರ್‌ ಡಿಸಿಷನ್‌’’ ಎಂದಿದ್ದಾರೆ ಸಂಗೀತಾ. ಕ್ಯಾಪ್ಟನ್ ಆದ್ಮೇಲೆ ಪಕ್ಷಪಾತ ಮಾಡುತ್ತಿರುವ ಸ್ನೇಹಿತ್ ಬಗ್ಗೆ ‘’ಈ ವಾರಾಂತ್ಯದಲ್ಲಿ ಕ್ಲಾಸ್‌ ಪಕ್ಕಾ. ಎಷ್ಟು ಉಗಿಸಿಕೊಂಡರೂ ಬುದ್ಧಿ ಬಂದಿಲ್ಲ’’ ಎಂದು ಮಾತನಾಡಿಕೊಂಡಿದ್ದಾರೆ ಕಾರ್ತಿಕ್,…

Read More

ಚೆನ್ನೈನಲ್ಲಿ ಮಿಚಾಂಗ್ ಚಂಡಮಾರುತದಿಂದ ಹಲವಾರು ಮನೆಗಳಿಗೆ ನೀರು ನುಗ್ಗಿದೆ. ಎಡಬಿಡದೆ ಸುರಿದ ಭಾರೀ ಮಳೆಯಿಂದಾಗಿ ಕಾಲಿವುಡ್ ಹೀರೋ ವಿಷ್ಣು ವಿಶಾಲ್ ಮನೆಯಿರುವ ಪ್ರದೇಶ ಜಲಾವೃತ್ತಗೊಂಡಿದೆ. ಈ ಪರಿಣಾಮ, ಮನೆಯಿಂದ ಯಾರೂ ಹೊರಬರಲಾರದ ಸ್ಥಿತಿಯಲ್ಲಿದ್ದಾರೆ. ಇದೇ ವೇಳೆ, ಬಾಲಿವುಡ್ ನಟ ಆಮೀರ್ ಖಾನ್ ಅವರು ನಟ ವಿಷ್ಣು (Vishnu Vishal) ಮನೆಯಲ್ಲೇ ಲಾಕ್ ಆಗಿದ್ದಾರೆ. ಚೆನ್ನೈನ ಕರಪಾಕ್ಕಂ ಪ್ರದೇಶದಲ್ಲಿರುವ ತಮಿಳು ನಟ ವಿಷ್ಣು ವಿಶಾಲ್ ಮನೆಗೆ ಆಮೀರ್ ಖಾನ್ ಭೇಟಿ ನೀಡಿದ್ದರು. ಪ್ರವಾಹ ಪರಿಸ್ಥಿತಿಯಿಂದಾಗಿ ವಿಷ್ಣು ವಿಶಾಲ್ ಅವರ ನಿವಾಸದಲ್ಲೇ ಆಮೀರ್ ಖಾನ್ ಸಿಲುಕಿದ್ದರು. ಈ ಸಂದರ್ಭದಲ್ಲಿ ನೀರಿನ ಮಟ್ಟ ತೀವ್ರವಾಗಿ ಏರುತ್ತಿದ್ದು, ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ನೆಟ್‌ವರ್ಕ್, ವೈಫೈ ಯಾವುದೂ ಇಲ್ಲವಾಗಿದೆ. ಇದೇ ಸಮಯದಲ್ಲಿ ವಿಷ್ಣು ವಿಶಾಲ್ ಮನೆಯೊಳಗೆ ನೀರು ನುಗ್ಗಿದ್ರಿಂದ ಸಹಾಯಕ್ಕಾಗಿ ನಟ ವಿಷ್ಣು ವಿಶಾಲ್ ಅವರು ಸೋಷಿಯಲ್ ಮೀಡಿಯಾದಲ್ಲಿ ಮೂಲಕ ಮನವಿ ಮಾಡಿದ್ದರು. https://twitter.com/TheVishnuVishal/status/1731984247936696675?ref_src=twsrc%5Etfw%7Ctwcamp%5Etweetembed%7Ctwterm%5E1731984247936696675%7Ctwgr%5Ef2cbb5225e100110b54ce6a1452909ed405da08b%7Ctwcon%5Es1_&ref_url=https%3A%2F%2Fpublictv.in%2Factor-aamir-khan-stuck-in-chennai-flood-vishnu-vishal-shares-pictures%2F ಕೂಡಲೆ ಅಗ್ನಿಶಾಮಕ ದಳ ನಟ ವಿಷ್ಣು ವಿಶಾಲ್ ಮತ್ತು ಆಮೀರ್ ಖಾನ್ (Aamir…

Read More

ಬೆಳಗಾವಿ: ಬೆಳಗಾವಿ ಅಧಿವೇಶನದಲ್ಲಿ ಸರ್ಕಾರವನ್ನ ಕಟ್ಟಿಹಾಕಲು ವಿಪಕ್ಷ ಬಿಜೆಪಿ ಸಜ್ಜಾಗಿದೆ. ಆದ್ರೆ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸ್ವಪಕ್ಷಕ್ಕೆ ವಿಪಕ್ಷದಂತಾಗಿದ್ದಾರೆ. ರಾಜ್ಯಾಧ್ಯಕ್ಷ ಅಥವಾ ವಿಪಕ್ಷ ನಾಯಕ ಸ್ಥಾನ ಸಿಗದಿದ್ದಕ್ಕೆ ಅಸಮಾಧಾನ ಗೊಂಡಿರುವ ಕೆಲ ಬಿಜೆಪಿ ಶಾಸಕರು ದೆಹಲಿಗೆ ತೆರಳಲು ಸಜ್ಜಾಗಿದ್ದಾರೆ. ಈ ಪಟ್ಟಿಯಲ್ಲಿ ಬಸನಗೌಡ ಪಾಟೀಲ್ ಯತ್ನಾಳ್ ಹೆಸರು ಸಹ ಇದೆ. ಇನ್ನು ಈ ಬಗ್ಗೆ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಯತ್ನಾಳ್, ದೆಹಲಿಗೆ ಹೋಗುವುದು ನಿಶ್ಚಿತ, ಖಚಿತ. ಆದ್ರೆ, ಉಚಿತ ಮಾತ್ರ ಅಲ್ಲ, ಹಣ ಕೊಟ್ಟು ಟಿಕೆಟ್ ಪಡೆದು ಹೋಗಬೇಕು ಎಂದರು. https://ainlivenews.com/the-founder-of-byjus-who-barricaded-his-own-house-to-give-salary-to-the-employees/ ಬೆಳಗಾವಿಯಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಬಸನಗೌಡ ಪಾಟೀಲ್ ಯತ್ನಾಳ್, ನಾನಾಗಿಯೇ ದೆಹಲಿಗೆ ಹೋಗಲ್ಲ, ಕರೆ ಬಂದ ಮೇಲೆ ಹೋಗುತ್ತೇನೆ. ಯಾವಾಗ ಕರೆ ಬರುತ್ತದೆಯೋ ಆಗ ದೆಹಲಿಗೆ ಹೋಗುತ್ತೇನೆ. ಶಾಸಕ ರಮೇಶ್ ಜಾರಕಿಹೊಳಿ‌ ಸೇರಿದಂತೆ ಹಲವರಿಗೆ ಹೇಳಿರಬಹುದು. ಇಬ್ಬರು ಮಹಾನುಭಾವರಿಂದ ಕರ್ನಾಟಕದಲ್ಲಿ ಈ ಪರಿಸ್ಥಿತಿ ಬಂದಿದೆ. ದೆಹಲಿಯ ಒಬ್ಬರು, ಕರ್ನಾಟಕ ಒಬ್ಬರು ಇದ್ದಾರೆ ಎಂದು ಸ್ವಪಕ್ಷದ ನಾಯಕರ ವಿರುದ್ಧವೇ ವಾಗ್ದಾಳಿ…

Read More

ಡಾ.ಬಿ ಆರ್ ಅಂಬೇಡ್ಕರ್ ಅವರ ಪುಣ್ಯ ಸ್ಮರಣೆಯಂದು ಲಿಡ್ಕರ್ ಉತ್ಪನ್ನಗಳಿಗೆ ನಟ ಡಾಲಿ ಧನಂಜಯ್ ರಾಯಭಾರಿ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಇಂದು ಘೋಷಣೆ ಮಾಡಿದರು. ಬೆಂಗಳೂರಿನ ವಿಧಾನಸೌಧದ ಮುಂದೆ ನಡೆದ ಕಾರ್ಯಕ್ರಮದಲ್ಲಿ ಅಧಿಕೃತವಾಗಿ ಲಿಡ್ಕರ್ ಉತ್ಪನ್ನಕ್ಕೆ ಡಾಲಿ ರಾಯಭಾರಿಯಾಗಿದ್ಧಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಸಚಿವರಾದ ಹೆಚ್ ಸಿ ಮಹದೇವಪ್ಪ ಸೇರಿದಂತೆ ಅನೇಕರು ಉಪಸ್ಥಿತರಿದ್ದರು. ಡಾ.ಬಾಬು ಜಗಜೀವನ ರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ (ಲಿಡ್ಕರ್)ಕ್ಕೆ (Lidkar) ಇದೇ ಮೊದಲ ಬಾರಿಗೆ ರಾಯಭಾರಿಯನ್ನ (Ambassador) ಆಯ್ಕೆ ಮಾಡಿದೆ. ನಟ‌ರಾಕ್ಷಸ   ಡಾಲಿ ಧನಂಜಯ್ (Dolly Dhananjay) ಲಿಡ್ಕರ್ ಗೆ  ರಾಯಭಾರಿ ಆಗಿದ್ದಾರೆ. ಸ್ಯಾಂಡಲ್‌ವುಡ್ ನಟ, ನಿರ್ಮಾಪಕನಾಗಿ ಡಾಲಿ ಸಿಕ್ಕಾಪಟ್ಟೆ ಬ್ಯುಸಿ ಇರುವ ಸ್ಟಾರ್. ನಟನೆ, ನಿರ್ಮಾಣದ ಜೊತೆಗೀಗ ಧನಂಜಯ ಜಾಹೀರಾತು ಕ್ಷೇತ್ರಕ್ಕೂ ಕಾಲಿಟ್ಟಿದ್ದಾರೆ. ಮೊದಲ ಬಾರಿಗೆ ಡಾಲಿ ಸರ್ಕಾರದ ಜಾಹೀರಾತಿನಲ್ಲಿ ಮಿಂಚುವ ಮೂಲಕ ಲಿಡ್ಕರ್ ಬ್ರಾಂಡ್ ಪ್ರಮೋಟ್ ಮಾಡಲಿದ್ದಾರೆ. https://ainlivenews.com/the-founder-of-byjus-who-barricaded-his-own-house-to-give-salary-to-the-employees/ ಲಿಡ್ಕರ್ ನಲ್ಲಿ 50 ಸಾವಿರಕ್ಕೂ ಹೆಚ್ಚು ಚರ್ಮ ಕುಶಲಕರ್ಮಿಗಳ ಕುಟುಂಬವಿದೆ.…

Read More

ಕೆ.ಆರ್.ಜಿ ಸ್ಟುಡಿಯೋಸ್‍ ಮತ್ತು ಟಿ.ವಿ.ಎಫ್‍ ಮೋಷನ್‍ ಪಿಕ್ಚರ್ಸ್ ನಿರ್ಮಾಣದಲ್ಲಿ ತಯಾರಾಗುತ್ತಿರುವ ‘ಪೌಡರ್’ ಚಿತ್ರದ ಮೊದಲ ಹಂತದ ಚಿತ್ರೀಕರಣ ಮೈಸೂರಿನಲ್ಲಿ ಮುಕ್ತಾಯವಾಗಿದೆ. 30 ದಿನಗಳ ಕಾಲ ನಡೆದ ಈ ಮೊದಲ ಹಂತದ ಚಿತ್ರೀಕರಣದಲ್ಲಿ ದಿಗಂತ್‍, ಧನ್ಯಾ ರಾಮ್‍ಕುಮಾರ್, ಶರ್ಮಿಳಾ ಮಾಂಡ್ರೆ, ರಂಗಾಯಣ ರಘು, ಅಚ್ಯುತ್ ಕುಮಾರ್, ಅನಿರುದ್ಧ್ ಆಚಾರ್ಯ, ರವಿಶಂಕರ್ ಗೌಡ ಮುಂತಾದ ಪ್ರತಿಭಾವಂತ ಕಲಾವಿದರು ಸಂತೋಷದಿಂದ ಚಿತ್ರೀಕರಣ ಮುಗಿಸಿದರೆ. ಮೊದಲ ಹಂತದ ಚಿತ್ರೀಕರಣ ಮುಗಿಸಿರುವ ಚಿತ್ರತಂಡವು ಸದ್ಯದಲ್ಲೇ ಬೆಂಗಳೂರಿನಲ್ಲಿ ಎರಡನೆ ಹಂತದ ಚಿತ್ರೀಕರಣ ಪ್ರಾರಂಭಿಸಲು ಸಜ್ಜಾಗುತ್ತಿದ್ದಾರೆ. ‘ಪೌಡರ್’ ಒಂದು ಹಾಸ್ಯಮಯ ಚಿತ್ರವಾಗಿದ್ದು, ಎಲ್ಲಾ ವರ್ಗದ ಪ್ರೇಕ್ಷಕರಿಗೆ ಮನರಂಜನೆಯ ರಸದೌತಣವಾಗಲಿದೆ. ಈ ಚಿತ್ರಕ್ಕೆ ಜನಾರ್ದನ್‍ ಚಿಕ್ಕಣ್ಣ ಕಥೆ ಬರೆದು ನಿರ್ದೇಶಿಸುತ್ತಿದ್ದು, ಕೆ.ಆರ್.ಜಿ ಸ್ಟುಡಿಯೋಸ್‍ ಮತ್ತು ಟಿ.ವಿ.ಎಫ್‍ ಮೋಷನ್‍ ಪಿಕ್ಚರ್ಸ್ ಜೊತೆಯಾಗಿ ನಿರ್ಮಿಸಿವೆ. 2024ರ ಏಪ್ರಿಲ್‍ನಲ್ಲಿ ‘ಪೌಡರ್’ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ.

Read More