Author: AIN Author

ಹುಬ್ಬಳ್ಳಿ: ಈ ದೇಶದ ಸಂಪತ್ತು ಮುಸ್ಲಿಮರಿಗೂ ಸೇರಬೇಕೆಂಬ ಮುಖ್ಯಮಂತ್ರಿ ಸಿದ್ದರಾಮಯ್ಯಾ ನವರ ಹೇಳಿಕೆ ವಿಚಾರ ಕುರಿತು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಸಹ ಸಮರ್ಥನೆ ಮಾಡಿಕೊಂಡಿದ್ದಾರೆ ನಗರದಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು ಸಿದ್ದರಾಮಯ್ಯ ಅವರು ಯಾವ ಸಮಾಸವೇಶದಲ್ಲಿ ಹೇಳಿದ್ದಾರೆ ಅನ್ನೋದು ಮುಖ್ಯ ಮುಸ್ಲಿಂ ಸಮಾವೇಶದಲ್ಲಿ ಮುಸ್ಲಿಮರಿಗೆ ಏನು ಮಾಡುತ್ತೇವೆ ಅನ್ನೋದು ಹೇಳಬೇಕಾಗುತ್ತದೆ ಬೇರೆ ಸಮಾವೇಶದಲ್ಲಿ ಬೇರೆಯವರಿಗೆ ಏನು ಮಾಡುತ್ತೇವೆ ಅಂತ ಹೇಳುತ್ತಾರೆ, ಆದರೆ ಇದರಲ್ಲಿ ತಪ್ಪು ಹುಡುಕೋ ಕೆಲಸ ಬಿಜೆಪಿ ಮಾಡುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು ಚೀನಾದಲ್ಲಿ ಹೊಸ ವೈರಸ್ ಪತ್ತೆ ವಿಚಾರ ಕುರಿತು ಮಾತನಾಡಿದ ಅವರು ಇದರ ಬಗ್ಗೆ ಆತಂಕ ಪಡುವ ಅಗತ್ಯವಿಲ್ಲ ವಿಶ್ವ ಆರೋಗ್ಯ ಸಂಸ್ಥೆಯಾಗಲಿ ಯಾವುದೇ ಸಂಸ್ಥೆಯಾಗಲಿ ಎಚ್ಚರಿಕೆಗಳನ್ನು ನೀಡಿಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಮೆಡಿಸಿನ್ ಕೊರತೆ ಸಹ ಇದ್ದುಬೇರೆ ಬೇರೆ ಕಾರಣಗಳಿಂದ ಔಷಧ ಕೊರತೆಯಾಗ್ತಿದೆ ಈ ಸಮಸ್ಯೆ ಸರಿಪಡಿಸಲು ಯತ್ನಿಸುತ್ತೇನೆ ಎಂದು ಅವರು ಭರವಸೆ ನೀಡಿದರು

Read More

ಶಿಕ್ಷಣ ಕ್ಷೇತ್ರದ ಪ್ರಮುಖ ಸ್ಟಾರ್ಟಪ್ ಕಂಪನಿ ಬೈಜೂಸ್‍  ಭಾರೀ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ವಿವಾದ, ಸಂಕಷ್ಟಕ್ಕೆ ಸಿಲುಕಿರುವ ಈ ಕಂಪನಿ ತನ್ನ ಉದ್ಯೋಗಿಗಳಿಗೆ ವೇತನವನ್ನು ಪಾವತಿ ಮಾಡಿರಲಿಲ್ಲ. ಆದರೆ ಇದೀಗ ತಮ್ಮ ಮನೆಯನ್ನೇ ಅಡವಿಟ್ಟು ಸಂಬಳ ನೀಡುವ ಮೂಲಕ ಭಾರೀ ಸುದ್ದಿಯಾಗಿದೆ. ಹೌದು. ಕಂಪನಿಯ ಸಂಸ್ಥಾಪಕ ಬೈಜು ರವೀಂದ್ರನ್ (Byju’s Founder Byju Raveendran), ತಮ್ಮ ಬೆಂಗಳೂರಿನ ಮನೆಯನ್ನೇ ಅಡವಿಟ್ಟು  ಸೋಮವಾರ ಒಂದು ಸಾವಿರ ಸಿಬ್ಬಂದಿಗೆ ಬಾಕಿ ವೇತನ ಪಾವತಿ ಮಾಡಿದ್ದಾರೆ ಎಂಬ ಸಂಗತಿಯೊಂದು ಇದೀಗ ಬಯಲಾಗಿದೆ. ಬೈಜು ರವೀಂದ್ರನ್ ಅವರ ಕುಟುಂಬವು ಬೆಂಗಳೂರಿನಲ್ಲಿ ಎರಡು ಮನೆಗಳು ಹಾಗೂ ನಿರ್ಮಾಣ ಹಂತದಲ್ಲಿರುವ ವಿಲ್ಲಾ ಒಂದು ಇದೆ. ಇವುಗಳನ್ನು ಅಡವಿಟ್ಟು ಸುಮಾರು 100 ಕೋಟಿ ರೂ. ಸಾಲ ಪಡೆದಿದ್ದಾರೆ. ಈ ಸಾಲದಿಂದ ತಮ್ಮ ಉದ್ಯೋಗಿಗಳಿಗೆ ನವೆಂಬರ್ ತಿಂಗಳ ವೇತನವನ್ನು ನೀಡಿದ್ದಾರೆ ಎಂಬುದಾಗಿ ಮೂಲಗಳು ತಿಳಿಸಿರುವುದಾಗಿ ವರದಿಯಾಗಿದೆ. https://ainlivenews.com/natural-star-in-bangalore-nani-is-busy-with-hi-nanna-promotion/ ಸೋಮವಾರದಂದು ಮಾತೃ ಸಂಸ್ಥೆಯಾದ ಥಿಂಕ್ & ಲರ್ನ್ ಪ್ರೈವೇಟ್‍ನ 15,000 ಉದ್ಯೋಗಿಗಳಿಗೆ ಸಂಬಳ (Employees…

Read More

ಹುಬ್ಬಳ್ಳಿ : ಕುಂದಾನಗರಿ ಬೆಳಗಾವಿಯ ಸುವರ್ಣ ಸೌಧದಲ್ಲಿ ನಡೆದಿರುವ ಚಳಿಗಾಲ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಚರ್ಚೆಗೆ ಎರಡು ದಿನ ಮೀಸಲು ಇಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೂಳಿ ಹೇಳಿದರು ನಗರದಲ್ಲಿಂದು ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಅವರು ಸುದ್ದಿಗಾರರ ಜೊತೆಗೆ ಮಾತನಾಡಿದರು ಅಧಿವೇಶನದಲ್ಲಿ ಒಳ್ಳೆಯ ಚರ್ಚೆಗಳು ನಡೆದಿವೆ. ನಾಳೆಯೂ ಒಂದು ದಿನ ಉತ್ತರ ಕರ್ನಾಟಕ ಚರ್ಚೆಯಾಗಲಿದ್ದು, ಮೊದಲ ಬಾರಿಗೆ ಈ ರೀತಿಯ ಚರ್ಚೆಗಳು ನಡೆದಿವೆ ಉತ್ತರ ಕರ್ನಾಟಕದ ಅಭಿವೃದ್ಧಿ ನಿಟ್ಟಿನಲ್ಲಿ ಚರ್ಚೆಗಳು ನಡೆದಿವೆ ಇದು ಒಳ್ಳೆಯ ವಿಚಾರ ಆಗಿದ್ದು ಏನಾದರೂ ಅಗತ್ಯವಿದ್ದಲ್ಲಿ ಚರ್ಚೆ ವಿಸ್ತರಣೆಯಾಗಲಿದೆ ಎಂದರು. ಇನ್ನೂ ಇದೇ ಸಂದರ್ಭದಲ್ಲಿ ಬಹಳಷ್ಟು ಸಚಿವರು ಅಧಿವೇಶನಕ್ಕೆ ಚಕ್ಕರ್ ವಿಚಾರ ಕುರಿತು ಮಾತನಾಡಿದ ಅವರು ಯಾವ ಸಚಿವರು ಗೈರಾಗಿಲ್ಲ. ಎಲ್ಲ ಸಚಿವರು ಅಧಿವೇಶನಕ್ಕೆ ಬಂದಿದ್ದು ಅವರಿವರನ್ನ ಭೇಟಿಯಾಗೋಕೆ ಎಲ್ಲಾದರೂ ಹೋಗಿರುತ್ತಾರೆ ಸಮಜಾಯಿಷಿದರು‌ಮುಸ್ಲಿಂ ಮುದಾಯಕ್ಕೆ ದೇಶದ ಆಸ್ತಿ ಹಂಚಿಕೆ ವಿಚಾರ ಸಹ ಪ್ರತಿಕ್ರಿಯೆ ಕೊಡಲು ನಿರಾಕರಣೆ ಮಾಡಿದ ಅವರು ಇದು ಮುಗಿದು ಹೋದ ವಿಚಾರ…

Read More

ಇಸ್ಲಮಾಬಾದ್: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ ಪೈಕಿ ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‍ಗಢದಲ್ಲಿ ಜಯ ಸಾಧಿಸಿರುವ ಬಿಜೆಪಿ (BJP) ಸಂಭ್ರಮದ ನಡುವೆ ಪಾಕ್ (Pakistan) ಮಾಜಿ ಕ್ರಿಕೆಟಿಗ ದಾನಿಶ್ ಕನೇರಿಯಾ (Danish Kaneria) ರಾಹುಲ್ ಗಾಂಧಿಯವರಿಗೆ (Rahul Gandhi) ಪರೋಕ್ಷವಾಗಿ ಕುಟುಕಿದ್ದಾರೆ. ಮೂರು ರಾಜ್ಯಗಳಲ್ಲಿ ಬಿಜೆಪಿ ಗೆಲುವಿನತ್ತ ಮುನ್ನುಗ್ಗುತ್ತಿದ್ದಂತೆ ಕನೇರಿಯಾ, ಯಾವ ಪಕ್ಷ ಹಾಗೂ ಯಾರ ಹೆಸರನ್ನೂ ತೆಗೆದುಕೊಳ್ಳದೆ ತಮ್ಮ ಎಕ್ಸ್ ಖಾತೆಯಲ್ಲಿ ಪನೌತಿ ಕೌನ್? ಎಂದು ಬರೆದುಕೊಂಡು ನಗುವ ಎಮೋಜಿಯೊಂದಿಗೆ ಟ್ವೀಟ್ ಮಾಡಿದ್ದಾರೆ. ಈ ಮೂಲಕ ಪ್ರಧಾನಿ ಮೋದಿಯವರನ್ನು ಪನೌತಿ ಎಂದಿದ್ದ ರಾಹುಲ್ ಅವರಿಗೆ ಪರೋಕ್ಷವಾಗಿ ಟಾಂಗ್ ಕೊಟ್ಟಿದ್ದಾರೆ.  ನ.19 ರಂದು ಏಕದಿನ ವಿಶ್ವಕಪ್ ಫೈನಲ್ ಪಂದ್ಯವ ವೇಳೆ ನರೇಂದ್ರ ಮೋದಿಯವರು (Narendra Modi) ಕ್ರೀಡಾಂಗಣಕ್ಕೆ ತೆರಳಿ ಪಂದ್ಯ ವೀಕ್ಷಿಸಿದ ಕಾರಣ ಭಾರತ ಸೋಲನ್ನು ಅನುಭವಿಸಿತು ಎಂದು ರಾಹುಲ್ ಗಾಂಧಿ ಟೀಕಿಸಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು. ದಾನಿಶ್ ಕನೇರಿಯಾ ಅವರು ಪಾಕ್ ತಂಡದ ಪ್ರಮುಖ ಸ್ಪಿನ್ನರ್ ಆಗಿದ್ದರು.…

Read More

ಹುಬ್ಬಳ್ಳಿ: ಮುಸ್ಲೀಮರಿಗೆ ದೇಶದ ಸಂಪತ್ತು ಹಂಚುತ್ತೇವೆ ಎಂದು ಸಿಎಮ್ ಹೇಳಿಕೆ ವಿಚಾರ ಒಳ್ಳೆಯದು ಎಂದು ಅಬಕಾರಿ ಸಚಿವ ಆರ್ . ಬಿ. ತಿಮ್ಮಾಪುರ ಹೇಳಿದರು. ನಗರದಲ್ಲಿ ಮಂಗಳವಾರ ಖಾಸಗಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಗಮಿಸಿದ ಸಂದರ್ಭದಲ್ಲಿ ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಮುಖ್ಯಮಂತ್ರಿಗಾದ ಸಿದ್ದರಾಮಯ್ಯ ಸಾಹೆಬ್ರು ಹೇಳಿದ್ದು ನೂರಕ್ಕೆ ನೂರು ಸತ್ಯವಿದೆ. ಮುಸ್ಲೀಮರು ನಮ್ಮ ನಾಡಿನವರು, ಈ ನೆಲದ‌ ಮೇಲೆ ಅವರಿಗೂ ಹಕ್ಕಿದೆ ಎಂದ ಅವರು ಮುಸ್ಲಿಂ ಸಮುದಾಯದವರಿಗೆ ಹಕ್ಕು ಕೊಡುವುದರಲ್ಲಿ ತಪ್ಪೇನಿದೆ? ಭಾರತೀಯ ಜನತಾ ಪಕ್ಷದ ವರು ಹಿಂದೂ ಓಲೈಕೆ ಮಾಡ್ತಾರೆ, ಮುಸ್ಲೀಮರ ಗಲಾಟೆ ಹಚ್ತಾರೆ ನಾನು, ಸಿದ್ದರಾಮಯ್ಯ ಹಿಂದೂಗಳು ಬಿಜೆಪಿಯವರು ರಾಜಕೀಯಕ್ಕಾಗಿ ಹಿಂದುತ್ವ ಬಳಸುತ್ತಿದ್ದಾರೆ ನಾನು ಜನರ ಕಲ್ಯಾಣಕ್ಕಾಗಿ ಕಾರ್ಯ ಮಾಡತಾ ಇದ್ದೇವೆ ಎಂದರು. ಉತ್ತರ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚೆ ಆಗಲಿ, ಇನ್ನು ಸದನ ಸುಮ್ಮನೆ ಹಾಳಾಗಬಾರದು. ಉತ್ತರ ಕರ್ನಾಟಕದ ಹಲವಾರು ಸಮಸ್ಯೆಗಳಿವೆ ವಿರೋಧ ಪಕ್ಷ ನಾಯಕರಿಗೆ ವಿನಂತಿ ಮಾಡುತ್ತೇವೆ. ಬೇರೆಬೇರೆ ಸಮಸ್ಯೆಗಳ ಬಗ್ಗೆ ಚರ್ಚಿಸಿ, ಗದ್ದಲದಲ್ಲಿ ಅಧಿವೇಶನ…

Read More

ಹುಬ್ಬಳ್ಳಿ: ನಾನು ಮುಖ್ಯಮಂತ್ರಿ ನಾನು ಸಿದ್ದರಾಮಯ್ಯ ವಕ್ತಾರನಲ್ಲ ಎಂದು ಎಐಸಿಸಿ ಸದಸ್ ಹುಬ್ಬಳ್ಳಿಯಲ್ಲಿ ಬಿ.ಕೆ ಹರಿಪ್ರಸಾದ್ ಅಸಮಾಧಾನ ವ್ಯಕ್ತಪಡಿಸಿದರು. ನಗರದಲ್ಲಿಂದು ಪರೋಕ್ಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ಅಸಮಾಧಾನ ಹೊರಹಾಕಿದ ಅವರು, ಮುಸ್ಲಿಂ ಸಮುದಾಯ ಹೇಳಿಕೆ ವಿಚಾರಕ್ಕೆ ಹರಿಪ್ರಸಾದ್ ಪ್ರತಿಕ್ರಿಯೆನ್ನ ಪಡೆಯಲು ಹೋದ ಸುದ್ದಿಗಾರರ ಪ್ರಶ್ನೆ ಮಾಡಿ, ಮುಖ್ಯಮಂತ್ರಿ ಸಿದ್ದರಾಮಯ್ಯಾ ಮೇಲಿನ ಸಿಟ್ಟು ಈ ಮೂಲಕ ಹೊರ ಹಾಕಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬಹಳ ಅನುಭವ ಇದ್ದು, ಅವರಿಗೆ ಬಹಳ ಮಾಹಿತಿ ಇರತ್ತೆ ಆದ್ದರಿಂದ ಅದಕ್ಕೆ ಅವರನ್ನ ಕೇಳೋದ ಒಳ್ಳೆದು ಅದಕ್ಕೆ ನಾನು ಉತ್ತರ ಕೊಡಲ್ಲ. ನಾನೆಲ್ಲಿ ಸಿದ್ದರಾಮಯ್ಯ ವಿರುದ್ದ ಮಾತಾಡ್ತಿಲ್ಲ ಇನ್ನು ನಮ್ಮ ಸಮುದಾಯಕ್ಕೆ ಇವಾಗಿಂದ ಅಲ್ಲ, ಮುಂಚೆ ಇಂದ ಅನ್ಯಾಯ ಆಗಿದೆ ಈ ಬಗ್ಗೆ ಹೆಚ್ಚಿನ ಚರ್ಚೆ ಬೇಡಾ ಪಕ್ಷದಲ್ಲಿ ಎಲ್ಲ ಚೆನ್ನಾಗಿದೆ, ನಾನು ಚೆನ್ನಾಗಿದೀನಿ ಎಂದ ಹರಿಪ್ರಸಾದ್ ಎಲ್ಲೋ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯಾ ಅವರ ಪರವಾಗಿ ಸಾಪ್ಟ್ ಕಾರ್ನರ್ ಇದೆ ಅಂತಾ ತೋರಿಸಿಕೊಳ್ಳಲಿಲ್ಲ ಎಂದರು.

Read More

ಇಸ್ಲಾಮಾಬಾದ್: ಖಲಿಸ್ತಾನಿ ಭಯೋತ್ಪಾದಕ (Khalistani Terrorist) ಲಖ್ಖೀರ್‌ ಸಿಂಗ್‌ ರೋಡ್‌ ಹೃದಯಾಘಾತದಿಂದ ಪಾಕಿಸ್ತಾನದಲ್ಲಿ ಸಾವನ್ನಪ್ಪಿದ್ದಾನೆ ಎಂದು ಗುಪ್ತಚರ ಸಂಸ್ಥೆಗಳ ಮೂಲಗಳು ತಿಳಿಸಿವೆ. ಜರ್ನೈಲ್ ಸಿಂಗ್ ಭಿಂದ್ರನ್‌ವಾಲೆ ಅವರ ಸೋದರಳಿಯ ಖಲಿಸ್ತಾನಿ ಭಯೋತ್ಪಾದಕ ಲಖ್ಬೀರ್ ಸಿಂಗ್ ರೋಡ್ (72), ಭಿದ್ರಾನ್‌ವಾಲೆ ಸಾವಿನ ನಂತರ ಪಾಕಿಸ್ತಾನಕ್ಕೆ ಪಲಾಯನ ಮಾಡಿದ್ದ. ಡಿ.2 ರಂದು ಲಖ್ಖೀರ್‌ ಕೂಡ ಮೃತಪಟ್ಟಿದ್ದಾನೆ.  ಲಖ್ಖೀರ್‌ ಸಿಂಗ್‌ ರೋಡ್ (Lakhbir Singh Rode) ನಿಷೇಧಿತ ಸಂಘಟನೆ ‘ಖಲಿಸ್ತಾನ್ ಜಿಂದಾಬಾದ್ ಫೋರ್ಸ್’ ಮುಖ್ಯಸ್ಥನಾಗಿದ್ದ. ಭಾರತದ ವಿರುದ್ಧ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದ. ಗುಪ್ತಚರ ಸಂಸ್ಥೆಗಳ ಪ್ರಕಾರ, ಆತ ಲಾಹೋರ್‌ನಲ್ಲಿ ವಾಸಿಸುತ್ತಿದ್ದ. ಪಂಜಾಬ್‌ಗೆ ಡ್ರಗ್ಸ್, ಶಸ್ತ್ರಾಸ್ತ್ರಗಳು, ಸ್ಫೋಟಕಗಳು, ಬಾಂಬ್‌ಗಳನ್ನು ಕಳುಹಿಸುತ್ತಿದ್ದ ಎಂದು ಮೂಲಗಳು ತಿಳಿಸಿವೆ. ಈತ ರಾಜ್ಯದ ಪ್ರಮುಖ ವ್ಯಕ್ತಿಗಳ ಹತ್ಯೆಗೆ ಸಂಚು ರೂಪಿಸಿದ್ದ ಎಂದು ಶಂಕಿಸಲಾಗಿತ್ತು. ಒಮ್ಮೆ ಆತನನ್ನು ನೇಪಾಳದಲ್ಲಿ 20 ಕೆಜಿ ಸ್ಫೋಟಕ ಆರ್‌ಡಿಎಕ್ಸ್‌ನೊಂದಿಗೆ ಬಂಧಿಸಲಾಗಿತ್ತು. ಸ್ಫೋಟಕವನ್ನು ಪಾಕಿಸ್ತಾನದಿಂದ ತಂದಿದ್ದಾಗಿ ಪೊಲೀಸರಿಗೆ ತಿಳಿಸಿದ್ದ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಕ್ಟೋಬರ್‌ನಲ್ಲಿ ದಾಳಿ ನಡೆಸಿ ಪಂಜಾಬ್‌ನ ಮೊಗಾದಲ್ಲಿರುವ…

Read More

ಶ್ರೀನಿವಾಸರಾಜು ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ ಚಿತ್ರೀಕರಣ ಮುಕ್ತಾಯವಾಗಿದೆ. ಬೆಂಗಳೂರು, ಇಟಲಿ ಹಾಗೂ ಮಾಲ್ಟಾದಲ್ಲಿ ಚಿತ್ರೀಕರಣ ನಡೆದಿದೆ. ಪ್ರಸ್ತುತ ಡಬ್ಬಿಂಗ್ ನಡೆಯುತ್ತಿದ್ದು, ಡಬ್ಬಿಂಗ್ ಕೂಡ ಮುಕ್ತಾಯ ಹಂತ ತಲುಪಿದೆ. ಸದ್ಯದಲ್ಲೇ ಚಿತ್ರದ ಬಿಡುಗಡೆ ದಿನಾಂಕ ಸಹ ಘೋಷಣೆಯಾಗಲಿದೆ. ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಚಿತ್ರದಲ್ಲಿ ಐದು ಹಾಡುಗಳಿದ್ದು, ಅರ್ಜುನ್ ಜನ್ಯ ಸಂಗೀತ ನೀಡಿದ್ದಾರೆ. ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ.ಎಂ.ಪ್ರಕಾಶ್ ಸಂಕಲನ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕಿದೆ. ಕೌಟುಂಬಿಕ ಕಥಾಹಂದರ ಹೊಂದಿರುವ ಈ ಚಿತ್ರವನ್ನು ತ್ರಿಶೂಲ್ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ನಿರ್ಮಾಣ ಮಾಡುತ್ತಿದ್ದಾರೆ. ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೂರನೇ ಚಿತ್ರವಿದು. “ಕೃಷ್ಣಂ ಪ್ರಣಯ ಸಖಿ” ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ 41 ನೇ ಚಿತ್ರ. ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕ ನಾಯರ್ ನಟಿಸಿದ್ದಾರೆ. ಶರಣ್ಯ ಶೆಟ್ಟಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ,…

Read More

ಬೆಂಗಳೂರು:- ಅರಣ್ಯಭೂಮಿಯಲ್ಲಿ ಸಾಗುವಳಿ ಸಕ್ರಮ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಹೈಕೋರ್ಟ್ ವಜಾ ಮಾಡಿದೆ. ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌. ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಈ ಆದೇಶ ಹೊರಡಿಸಿದೆ. ಅಲ್ಲದೆ, ಪ್ರಕರಣದಲ್ಲಿ ವಿವಾದಿತ ಜಮೀನನ್ನು 1998-99ನೇ ಸಾಲಿನಲ್ಲೇ ಅರಣ್ಯ ಇಲಾಖೆಗೆ ನೀಡಲಾಗಿದೆ. ಈ ಜಾಗದಲ್ಲಿ ಅರಣ್ಯ ಇಲಾಖೆಯು ನಡು ತೋಪು ಬೆಳೆಸಿದೆ. ಹಾಗಾಗಿ, ಈ ಜಾಗವನ್ನು ಖಾಸಗಿ ವ್ಯಕ್ತಿಗಳಿಗೆ ಸಕ್ರಮಗೊಳಿಸುವ ಪ್ರಶ್ನೆಯೇ ಇಲ್ಲ. 200 ಎಕರೆಯನ್ನು ಅರಣ್ಯ ಇಲಾಖೆಗೆ ನೀಡಿರುವಾಗ, ತಮ್ಮ ಕಕ್ಷಿದಾರರು ಸಾಗುವಳಿ ಮಾಡುತ್ತಿರುವ 10 ಎಕರೆಯನ್ನಾದರೂ ಸಕ್ರಮಗೊಳಿಸಬೇಕು ಎಂದು ಮೇಲ್ಮನವಿದಾರರ ಪರ ವಕೀಲರು ಕೋರಿದರು. ವಕೀಲರ ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಪೀಠ, ಇಡೀ ಜಾಗವನ್ನೇ ಅರಣ್ಯ ಇಲಾಖೆಗೆ ನೀಡಲಾಗಿದೆ. ಆ ಕುರಿತು ದಾಖಲೆಗಳು ನೋಂದಣಿಯಾಗಿವೆ. ಇದು ಅರಣ್ಯ ಜಮೀನು ಎಂಬುದಾಗಿ ಸ್ಪಷ್ಟಪಿಸಿ 1998ರ ನ. 3ರಂದು ಜಿಲ್ಲಾಧಿಕಾರಿ ಆದೇಶ ಸಹ ಹೊರಡಿಸಿದ್ದಾರೆ. ಆ ಜಾಗದಲ್ಲಿ ನಡುತೋಪ ಎಂಬುದಾಗಿ ಘೋಷಿಸಿ, ಅರಣ್ಯ…

Read More

ಬೆಂಗಳೂರು: ಗ್ಯಾರಂಟಿ ಸ್ಕೀಂನಿಂದ ಬರಿದಾಗ್ತಿರೊ  ಬೊಕ್ಕಸಕ್ಕೆ ಮಧ್ಯಪ್ರಿಯರು ಸರ್ಕಾರಕ್ಕೆ ಗುಡ್ ನ್ಯೂಸ್ ನೀಡ್ತಿದಾರೆ. ಯಾಕೆಂದ್ರೆ ರಾಜ್ಯದಲ್ಲಿ ಬಿಯರ್ ಗೆ ಎಲ್ಲೆಲ್ಲದ ಡಿಮ್ಯಾಂಡ್ ಶುರುವಾಗಿದೆ. ಇದರ‌‌ ಜೊತೆಗೆ ಲಿಕ್ಕರ್ ಸೇಲ್ ಫುಲ್ ಸಹ ಜೋರಿದೆ. ಇದ್ರಲ್ಲಿ ರಾಜಧಾನಿ ಯದ್ದೇ ಸಿಂಹಪಾಲು. ಈ ಕುರಿತು ರಿಪೋರ್ಟ್ ಇಲ್ಲಿದೆ. ಹೌದು..ರಾಜ್ಯದಲ್ಲಿ ಪಂಚ ಗ್ಯಾರಂಟಿಗಳನ್ನು ನೀಡಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದ ರಾಜ್ಯ ಸರ್ಕಾರಕ್ಕೆ ಬಿಯರ್ ಪ್ರಿಯರು ಫೈನಾನ್ಸಿಯಲ್ ಬೂಸ್ಟರ್ ಡೋಸ್ ನೀಡಿದ್ದಾರೆ.  ಪಂಚ ಗ್ಯಾರಂಟಿಗಳನ್ನು ಘೋಷಣೆ ಮಾಡಿ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ 6 ತಿಂಗಳಲ್ಲಿ 4 ಗ್ಯಾರಂಟಿಗಳನ್ನು ಜಾರಿಗೊಳಿಸಿದೆ. ಆದರೆ, ಇದರಿಂದ ಅಭಿವೃದ್ಧಿ ಕಾಮಗಾರಿಗಳು ಹಾಗೂ ವಿಧಾನಸಭಾ ಕ್ಷೇತ್ರಗಳಿಗೆ ಅನುದಾನ ಹಂಚಿಕೆಗೆ ಆರ್ಥಿಕ ಸಮಸ್ಯೆಯನ್ನು ಎದುರಿಸುತ್ತಿದೆ. ಆದ್ದರಿಂದ ಸರ್ಕಾರ ಪ್ರಮುಖ ಆದಾಯದ ಮೂಲವಾದ ಮದ್ಯದ ದರವನ್ನು ಹೆಚ್ಚಳ ಮಾಡಿ ಮಾರಾಟ ಹೆಚ್ಚಳಕ್ಕೆ ಟಾಸ್ಕ್‌ ನೀಡಿತ್ತು. ಮೊದಲು ಮದ್ಯದ ದರ ಹೆಚ್ಚಳದಿಂದಾಗಿ ದೂರ ಉಳಿದಿದ್ದ ಮದ್ಯಪ್ರಿಯರು ಚಳಿಗಾಲ ಆರಂಭವಾಗುತ್ತಿದ್ದಂತೆ ಹೆಚ್ಚಿನ ಮದ್ಯ ಸೇವನೆಗೆ ಮುಂದಾಗಿದ್ದಾರೆ. https://ainlivenews.com/good-news-for-rakibhai-fans-next-movie-title-announced-on-december-8/ ಈ…

Read More