ಮಂಡ್ಯ: ಮಂಡ್ಯ ಜಿಲ್ಲೆಯ ಜನರ ನೆಮ್ಮದಿ ಹಾಳು ಮಾಡಲು ಜೆಡಿಎಸ್ ನಾಯಕ ಎಚ್ ಡಿ ಕುಮಾರಸ್ವಾಮಿ ಮುಂದಾಗಿರುವುದು ನೋವು ತಂದಿದೆ. ನೀವು ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದವೇ ಕಾರಣ ಎಂಬುದನ್ನು ಮರೆಯಬೇಡಿ ಎಂದು ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಚಲುವರಾಯಸ್ವಾಮಿ ಹೇಳಿದರು. ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮ ಧ್ವಜ ತೆರವು ಪ್ರಕರಣಕ್ಕೆ ಸಂಬಂಧಿಸಿ ಮಂಡ್ಯದ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, “ಜಿಲ್ಲೆಯ ಜನರ ಜೀವನ ಹಾಳುಮಾಡಬೇಡಿ. ಜವಾಬ್ದಾರಿಯುತ ಪ್ರತಿಪಕ್ಷದ ನಾಯಕರಾಗಿ ನೀವು ನಮ್ಮನ್ನು (ಸರ್ಕಾರವನ್ನು) ಸರಿಯಾದ ದಾರಿಯಲ್ಲಿ ಸಾಗುವಂತೆ ನೋಡಿಕೊಳ್ಳಬೇಕೇ ವಿನಃ ಶಾಂತಿ ಕದಡುವ ಕೆಲಸ ಮಾಡಬಾರದು” ಎಂದರು. “ಚುನಾವಣೆ ಗಮನದಲ್ಲಿಟ್ಟುಕೊಂಡು ಕುಮಾರಸ್ವಾಮಿ ಈ ರೀತಿ ಮಾಡುತ್ತಿದ್ದಾರೆ. ಇವರು ಸಿಂಗಾಪುರದಲ್ಲಿ ಕುಳಿತುಕೊಂಡು ಹೇಗೆಲ್ಲಾ ಮಾತನಾಡಿದ್ದರು ಎಂಬುದನ್ನು ಗಮನಿಸಿ. ಕುಮಾರಸ್ವಾಮಿಯವರು ಬಿಜೆಪಿಯನ್ನು ಟೀಕಿಸಿದಷ್ಟು ಬೇರೆ ಯಾರೂ ಟೀಕಿಸಿಲ್ಲ. ನರೇಂದ್ರ ಮೊದಿ ಪ್ರದಾನಿಯಾದರೆ ದೇವೇಗೌಡರೇ ದೇಶ ಬಿಟ್ಟು ಹೋಗುತ್ತೇನೆ ಎಂದಿದ್ದರು. https://ainlivenews.com/if-you-save-%e2%82%b92-per-day-you-will-get-a-pension-of-%e2%82%b936000-every-year-apply-today/ ಜೆಡಿಎಸ್ನವರು ಟೀಕೆ ಮಾಡಿದಷ್ಟು ಕಾಂಗ್ರೆಸ್ ಕೂಡ ಮಾಡಿಲ್ಲ.…
Author: AIN Author
ಬಿಗ್ ಬಾಸ್ ಸೀಸನ್ 10ರಲ್ಲಿ ಡ್ರೋಣ್ ಪ್ರತಾಪ್ ಸೋತಿದ್ದಕ್ಕೆ ಅರ್ಧ ಗಡ್ಡ, ಮೀಸೆ ತೆಗೆದು ಕಡಬದ ಯುವಕನೋರ್ವ ಇದೀಗ ಫುಲ್ ವೈರಲ್ ಆಗುತ್ತಿದೆ. ಕಡಬ ತಾಲೂಕಿನ ಬಂಟ್ರ ಗ್ರಾಮದ ಪಾಲೆತ್ತಡ್ಕ ನಿವಾಸಿ ಝನುಲ್ ಆಬಿದ್ ಬಿಗ್ ಬಾಸ್ನಲ್ಲಿ ಡೋನ್ ಪ್ರತಾಪ್ ಗೆದ್ದುಬರುತ್ತಾರೆ; ಸೋತರೆ ಅರ್ಧ ಗಡ್ಡ, ಮೀಸೆ ತೆಗೆಯುವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಚಾಲೆಂಜ್ ಹಾಕಿದ್ದರು. ಇದೀಗ ಕಾರ್ತಿಕ್ ವಿನ್ನರ್ ಆಗಿದ್ದು, ಪ್ರತಾಪ್ ರನ್ನರ್ ಅಪ್ಗೆ ಸಮಾಧಾನ ಪಟ್ಟುಕೊಂಡಿದ್ದಾರೆ. ಫಲಿತಾಂಶ ಹೊರಬರುತ್ತಲೇ ಆಬಿದ್ ಅರ್ಧ ಗಡ್ಡ ಮೀಸೆ ಬೋಳಿಸಿಕೊಂಡು ಹಸಿ ಮೆಣಸಿನಕಾಯಿ ತಿಂದು ವೀಡಿಯೋ ಮಾಡಿ ಅಪ್ಲೋಡ್ ಮಾಡಿದ್ದಾರೆ.
ಚಿಕ್ಕಬಳ್ಳಾಪುರ: ಕೋಲಾರದಲ್ಲಿ ವಿದ್ಯಾರ್ಥಿಗಳನ್ನ ಮಲಗದ ಗುಂಡಿಗೆ ಇಳಿಸಿ ಸ್ವಚ್ಚಮಾಡಿಸಿದ ಅಮಾನವೀಯ ಘಟನೆ ಮಾಸುವ ಮುನ್ನವೇ ಪಕ್ಕದ ಚಿಕ್ಕಬಳ್ಳಾಪುರ ಜಿಲ್ಲೆ ಶಿಢ್ಲಘಟ್ಟ ತಾಲ್ಲೂಕು ಕುದುಪಕುಂಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮತ್ತೋಂದು ಪ್ರಕರಣ ಬಯಲಾಗಿದೆ. ಹೌದು ಶಾಲೆಯ ಆವರಣದಲ್ಲಿರುವ ಶೌಚಾಲಯವನ್ನ ಶಾಲೆಯ ಶಿಕ್ಷಕಿ ಶಾಲೆಯ ವಿದ್ಯಾರ್ಥಿನಿಯರಿಂದ ಸ್ವಚ್ಚಗೊಳಿಸಿದ್ದಾರಂತೆ.. ಶೌಚಾಲಯವನ್ನು ಮಕ್ಕಳಿಂದ ಸ್ವಚ್ಛಗೊಳಿಸಿರುವ ವಿಡಿಯೋ ಇದೀಗ ವೈರಲ್ ಆಗಿದ್ದು.. ವಿಡಿಯೋ ವೈರಲ್ ಆಗುತ್ತಿದ್ದಂತೆ ಶಾಲೆಗೆ ಶಿಡ್ಲಘಟ್ಟ ಕ್ಷೇತ್ರ ಶಿಕ್ಷಣಾಧಿಕಾರಿ ನರೇಂದ್ರ ಕುಮಾರ್, ತಾಲ್ಲೂಕು ಪಂಚಾಯಿತಿ ಇಓ ಮುನಿರಾಜು, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಜಗದೀಶ್ ಹಾಗೂ ಅಧಿಕಾರಿಗಳ ತಂಡ ಶಾಲೆಗೆ ಭೇಟಿ ನೀಡಿ ವಿದ್ಯಾರ್ಥಿಗಳಿಂದ ಗೌಪ್ಯ ಹೇಳಿಕೆ ಪಡೆದು ಪರಿಶೀಲನೆ ನಡೆಸಿದ್ದಾರೆ.. https://ainlivenews.com/if-you-save-%e2%82%b92-per-day-you-will-get-a-pension-of-%e2%82%b936000-every-year-apply-today/ ಈ ವೇಳೆ ಮಕ್ಕಳ ಪೋಷಕರು ಪ್ರಭಾರಿ ಶಾಲಾ ಮುಖ್ಯ ಶಿಕ್ಷಕಿ ಬಿ. ರೇಣುಕಮ್ಮ ವಿರುದ್ದ ಶಿಸ್ತು ಕ್ರಮಕ್ಕೆ ಒತ್ತಾಯಸಿದ್ದಲ್ಲದೆ, ಮುಖ್ಯ ಶಿಕ್ಷಕಿಯ ವಿರುದ್ದ ಪೋಷಕರು ತಿರುಗಿಬಿದ್ದಿದ್ದಾರೆ.. ಪೋಷಕರ ಒತ್ತಾಯಕ್ಕೆ ಮಣಿದ ಅಧಿಕಾರಿಗಳು ಪ್ರಭಾರಿ ಮುಖ್ಯ ಶಿಕ್ಷಕಿ ಬಿ ರೇಣುಕಮ್ಮ ರನ್ನ…
ಬೆಂಗಳೂರು: ಪ್ರವಾಸಕ್ಕೆಂದು ಕುಟುಂಬಸ್ಥರೊಂದಿಗೆ ಬಂದಿದ್ದ ಮಗುವೊಂದು ಬ್ಯಾಟರಿ ಚಾಲಿತ ವಾಹನಕ್ಕೆ ಸಿಲುಕಿ ಗಂಭೀರ ಗಾಯಗೊಂಡಿರುವ ದಾರುಣ ಘಟನೆ ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ನಡೆದಿದೆ. ಕಳೆದ ಎರಡು ದಿನಗಳ ಹಿಂದೆ ಈ ಅಪಘಾತ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ತ್ರಿಧರ್ ಅಪಘಾತಕ್ಕೊಳಗಾದ ಮಗು. ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಬೆಂಗಳೂರು ಹೊರವಲಯದ ಬನ್ನೇರುಘಟ್ಟ ಜೈವಿಕ ಉದ್ಯಾನವನಕ್ಕೆ ಬಿಜಾಪುರ ಮೂಲದ ಕುಟುಂಬವೊಂದು ಬಂದಿತ್ತು. ಝೂನ ರಸ್ತೆ ಬದಿಯಲ್ಲಿ ತ್ರಿಧರ್ ತನ್ನ ತಾಯಿ ಜತೆ ನಿಂತಿದ್ದ. ಎಂದಿನಂತೆ ಪ್ರವಾಸಿಗರನ್ನು ಕೂರಿಸಿಕೊಂಡು ಬ್ಯಾಟರಿ ಚಾಲಿತ ವಾಹನಗಳು ಸಂಚಾರ ಮಾಡುತ್ತಿದ್ದವು. ಆಟವಾಡುತ್ತಿದ್ದ ತ್ರಿಧರ್ ಬ್ಯಾಟರಿ ಚಾಲಿತ ವಾಹನವು ಬರುವಾಗಲೇ ಏಕಾಏಕಿ ರಸ್ತೆಗೆ ಓಡಿ ಬಂದಿದ್ದಾನೆ. ಈ ವೇಳೆ ಆಕಸ್ಮಿಕವಾಗಿ ಬ್ಯಾಟರಿ ಚಾಲಿತ ವಾಹನಕ್ಕೆ ಸಿಲುಕಿದ್ದ. ಕೂಡಲೇ ಚಕ್ರದಡಿ ಸಿಲುಕಿದ್ದ ಮಗುವನ್ನು ಅಲ್ಲಿದ್ದವರು ಹೊರತೆಗೆದಿದ್ದಾರೆ. ಗಂಭೀರ ಗಾಯಗೊಂಡಿದ್ದ ತ್ರಿಧರ್ನನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಸದ್ಯ ರೈಂಬೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದ್ದು, ನಿಧಾನವಾಗಿ ಚೇತರಿಸಿಕೊಳ್ಳುತ್ತಿದ್ದಾನೆ. ಮಗುವಿನ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಬನ್ನೇರುಘಟ್ಟ…
ಡೆಹ್ರಾಡೂನ್: ಪ್ರಧಾನಿ ನರೇಂದ್ರ ಮೋದಿ ಅವರು ವಿಷ್ಣುವಿನ 11ನೇ ಅವತಾರವಾಗಿ ಬದಲಾಗಲು ಪ್ರಯತ್ನ ಮಾಡ್ತಿದ್ದಾರೆ ಎಂದು ಎಐಸಿಸಿ ಅಧ್ಯಕ್ಷ, ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಟೀಕಿಸಿದ್ದಾರೆ. ಉತ್ತರಾಖಂಡದ ರಾಜಧಾನಿ ಡೆಹ್ರಾಡೂನ್ನ ಬನ್ನು ಮೈದಾನದಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ಮತ್ತೆ ಮೋದಿ ಗೆದ್ರೆ ಮುಂದೆ ದೇಶದಲ್ಲಿ ಚುನಾವಣೆಗಳೇ ಇರಲ್ಲ. ದೇಶದಲ್ಲಿ ಪ್ರಜಾಪ್ರಭುತ್ವ ಉಳಿಸಿಕೊಳ್ಳಲು ಇದು ಕೊನೆಯ ಅವಕಾಶ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಎಚ್ಚರಿಕೆ ನೀಡಿದ್ದಾರೆ. ಈ ಮೂಲಕ ದೇಶದಲ್ಲಿ ಸರ್ವಾಧಿಕಾರ ಬರಲಿದೆ ಅಂತಾ ಭವಿಷ್ಯ ಹೇಳಿದ್ದಾರೆ. https://ainlivenews.com/if-you-save-%e2%82%b92-per-day-you-will-get-a-pension-of-%e2%82%b936000-every-year-apply-today/ ರಾಜಕೀಯವೇ ಬೇರೆ, ಧರ್ಮವೇ ಬೇರೆ. ಆದರೆ ಕೇಂದ್ರ ಸರ್ಕಾರ ಮತಕ್ಕಾಗಿ ಈ ಎರಡನ್ನೂ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಆರ್ಎಸ್ಎಸ್ ಹಾಗೂ ಬಿಜೆಪಿ ವಿಷಕಾರಿ. ಇವೆರಡರಿಂದ ದೇಶದ ಜನ ದೂರವಿರಬೇಕು. ಯಾವಾಗ ಟಿವಿ ಆನ್ ಮಾಡಿದ್ರೂ ಪ್ರಧಾನಿ ಮೋದಿಯೇ ಕಾಣಿಸುತ್ತಾರೆ. ಪ್ರಧಾನಿ ಮೋದಿ ವಿಷ್ಣುವಿನ 11ನೇ ಅವತಾರವಾಗಿ ಬದಲಾಗಲು ಪ್ರಯತ್ನ ಮಾಡ್ತಿದ್ದಾರೆ ಎಂದು ಮಲ್ಲಿಕಾರ್ಜುನ…
ಇತ್ತೀಚಿಗಷ್ಟೇ ಟಗರುಪಲ್ಯದ ಮೂಲಕ ಜನಪ್ರಿಯಗಳಿಸಿದ ನಟ ನಾಗಭೂಷಣ್ ಇದೀಗ ಪ್ರೀತಿಸಿದ ಗೆಳತಿಯ ಜೊತೆ ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಕನ್ನಡ ಚಿತ್ರರಂಗದಲ್ಲಿ ತಮ್ಮ ವಿಭಿನ್ನ ಮ್ಯಾನರಿಸಂ ಮೂಲಕವೇ ಗಮನ ಸೆಳೆದಿರುವ ನಟ ಅಂದ್ರೆ ಅದು ನಾಗಭೂಷಣ್. ಕನ್ನಡದಲ್ಲಿ 10ಕ್ಕೂ ಹೆಚ್ಚು ಸಿನಿಮಾದಲ್ಲಿ ಸಹ ಕಲಾವಿದನಾಗಿ ನಟಿಸಿದ್ದ ನಾಗಭೂಷಣ್ ಟಗರು ಪಲ್ಯ ಸಿನಿಮಾ ಮೂಲಕ ಪೂರ್ಣ ಪ್ರಮಾಣದ ನಟನಾಗಿ ಪರಿಚಯವಾಗಿದ್ದರು. ಈ ಸಿನಿಮಾ ಒಳ್ಳೆ ಸಕ್ಸಸ್ ಕೂಡ ಕೊಟ್ಟಿತ್ತು. ಪೂಜಾ ಪ್ರಕಾಶ್ ಯಾರು..? ಪೂಜಾ ಪ್ರಕಾಶ್ ಕೂಡ ಕಲಾವಿದೆ ಇವರು ಚಿತ್ರಕಲೆ ಹಾಗೂ ಗ್ರಾಫಿಕ್ಸ್ ಡಿಸೈನಿಂಗ್ನಲ್ಲಿ ಪರಿಣಿತಿ ಹೊಂದಿದ್ದಾರೆ. ಇಬ್ಬರಿಗೂ ಕೆಲೆಯ ಬಗ್ಗೆ ಆಸಕ್ತಿಯಿದ್ದು ಹೀಗಾಗಿ ಗೆಳೆಯರಾಗಿದ್ದವರು ಈಗ ಬಾಳಿನ ಪಯಣದಲ್ಲೂ ಸಂಗಾತಿಗಳಾಗಿದ್ದಾರೆ. ವಾಸುಕಿ ವೈಭವ್, ಅಮೃತಾ ಅಯ್ಯಂಗಾರ್, ನವೀನ್ ಶಂಕರ್, ನೀನಾಸಂ ಸತೀಶ್ ಸೇರಿಂದತೆ ಅನೇಕ ತಾರೆಯರು ಮದುವೆಯಲ್ಲಿ ಭಾಗಿಯಾಗಿ ನವಜೋಡಿಗೆ ಶುಭ ಹಾರೈಸಿದ್ದಾರೆ.
ಬಿಗ್ಬಾಸ್ (Bigg Boss Kannada) ಮೂರನೇ ರನ್ನರ್ ಅಪ್ ಈಗಿ ವಿನಯ್ ಗೌಡ (Vinay Gowda) ಹೊರಹೊಮ್ಮಿದ್ದಾರೆ. ನೇರಮಾತು, ಏಟಿಗೆ ಎದುರೇಟು, ನಿಷ್ಠುರ ನಡತೆಯಿಂದಲೇ ಅಭಿಮಾನಿಗಳನ್ನು ಸಂಪಾದಿಸಿರುವ ವಿನಯ್ ಮನೆಯಿಂದ ಹೊರಬಂದ ಕೂಡಲೇ ಜಿಯೊಸಿನಿಮಾಗೆ ಎಕ್ಸ್ಕ್ಲ್ಯೂಸಿವ್ ಸಂದರ್ಶನ ನೀಡಿದ್ದಾರೆ. ‘ಹಾಯ್ ಹಲೊ ನಮಸ್ಕಾರ… ನಾನು ನಿಮ್ಮ ಪ್ರೀತಿಯ ವಿನಯ್ ಗೌಡ. ಬಿಗ್ಬಾಸ್ ಮನೆಯಿಂದ ನೂರನೇ ರನ್ನರ್ ಅಪ್ ಆಗಿ ಹೊರಗೆ ಬಂದಿದ್ದೀನಿ. ಚೆನ್ನಾಗಿ ಅನಿಸುತ್ತಿದೆ ಎಂದು ಖಂಡಿತ ಹೇಳಕ್ಕೆ ಸಾಧ್ಯವಿಲ್ಲ. ಯಾಕೆಂದರೆ ನಾನು ಕನಿಷ್ಠ ಟಾಪ್ 3ನಲ್ಲಿ ಇರುತ್ತೇನೆ ಎಂದುಕೊಂಡಿದ್ದೆ. ಆದರೆ ನಮ್ಮ ಜನರೇ ವೋಟ್ ಮಾಡಿರುವುದು. ಇಲ್ಲಿತನಕ ಇಟ್ಟುಕೊಂಡಿರುವುದಕ್ಕೆ ಅವರಿಗೆ ಥ್ಯಾಂಕ್ಸ್ ಹೇಳುವುದಕ್ಕೆ ಇಷ್ಟಪಡ್ತೀನಿ. ಅಲ್ಲಿ ಗೆಲ್ಲದಿದ್ದರೂ ಪರವಾಗಿಲ್ಲ. ಇಲ್ಲಿದ್ದು ಸಾಕಷ್ಟು ಜನರ ಹೃದಯವನ್ನು ಗೆದ್ದಿದೀನಿ. ಇಲ್ಲಿದ್ದು ಛಾಂಪಿಯನ್ ಷಿಪ್ ತಗೊಳೊಬದ್ಲು. ಪೀಪಲ್ಸ್ ಛಾಂಪಿಯನ್ ಅಂತ ಹೇಳುವುದಕ್ಕೆ ತುಂಬ ತುಂಬ ಖುಷಿಯಾಗುತ್ತದೆ. ಯಾಕೆಂದರೆ ಹೊರಗಡೆ ಜನರು ತುಂಬ ಸಪೋರ್ಟ್ ಮಾಡುತ್ತಿದ್ದಾರೆ ಎಂದು ಕೇಳಿದ್ದೀನಿ. ಹೊರಗೆ ಹೋಗಿ ಜನರ ಸ್ಪಂದನವನ್ನು ಅನುಭವಿಸಲು…
ಬಿಗ್ ಬಾಸ್ (Bigg Boss Kannada) ಮನೆಯಿಂದ ಹೊರ ಬಂದ ನಂತರ ಸಂಗೀತಾ ಕುರಿತಾಗಿಯೂ ಹಲವಾರು ವಿಚಾರಗಳನ್ನು ವಿನಯ್ (Vinay) ಹಂಚಿಕೊಂಡಿದ್ದಾರೆ. ಸಂಗೀತಾ ವಿಷಯ ತಗೊಂಡ್ರೆ ಸಂಗೀತಾ ಪಾರ್ವತಿಯಾಗಿ, ಸತಿಯಾಗಿ ನನ್ನ ಜೊತೆಗೆ ನಟಿಸಿದ್ದಳು. ಇಲ್ಲಿ ಬಂದಾಗ, ಮೊದಲ ವಾರದ ನಾಮಿನೇಷನ್ನಲ್ಲಿ ಅವ್ರು ನನ್ನ ಫ್ರೆಂಡ್ಸು, ಹಾಗಾಗಿ ನಾಮಿನೇಟ್ ಮಾಡ್ಬಾರ್ದು ಅಂತ ಇರ್ಲಿಲ್ಲ. ನಾನು ಇಲ್ಲಿಗೆ ಗೇಮ್ ಆಡೋದಿಕ್ಕೆ ಬಂದಿದ್ದೆ. ಅವರು ಮಾಡಿರುವ ತಪ್ಪುಗಳಿಗೆ ನಾಮಿನೇಟ್ ಮಾಡಿದೆ. ಫ್ರೆಂಡ್ಸ್, ಗೊತ್ತಿರೋರು, ಬಿಟ್ಟುಬಿಡೋಣ ಅಂತ ಅಂದುಕೊಳ್ಳಲಿಲ್ಲ. ಅವರಿಬ್ಬರೂ ತಪ್ಪು ಮಾಡಿದ್ರು, ನಾನು ಹೇಳಿದ ಮೇಲೂ ತಪ್ ಮಾಡಿದ್ರು, ನಾಮಿನೇಟ್ ಮಾಡಿದೆ. ಅದರಿಂದ ಅವರು ನನ್ನ ಬಗ್ಗೆ ನಕಾರಾತ್ಮಕವಾಗಿ ತಿಳಿದುಕೊಂಡರು. ಗೊತ್ತಿರೋರನ್ನೇ ನಾಮಿನೇಟ್ ಮಾಡ್ತಾನೆ. ಫ್ರೆಂಡ್ಸ್ನೇ ನಾಮಿನೇಟ್ ಮಾಡ್ತಾನೆ ಎಂದುಕೊಂಡರು. ಮನೆಯೊಳಗಿನ ಸ್ಪರ್ಧಿಗಳಲ್ಲಿ ಕಾರ್ತೀಕ್ ಒಂದ್ಹತ್ ವರ್ಷಗಳಿಂದ ನನಗೆ ಪರಿಚಯ. ಸಂಗೀತಾ ಏಳು ವರ್ಷಗಳಿಂದ ಪರಿಚಯ, ಯಾಕೆಂದರೆ ಇಬ್ಬರೂ ಒಂದು ಧಾರಾವಾಹಿಯಲ್ಲಿ ಕೆಲಸ ಮಾಡಿದ್ವಿ. ನನಗೆ ಕಾರ್ತಿಕ್ ಗೆ ಅಂಥ ರೈವಲರಿ ಏನಿಲ್ಲ. ಟಾಸ್ಕ್…
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಮಾನಹಾನಿಕರ ಹೇಳಿಕೆ ನೀಡಿದ ಆರೋಪದಲ್ಲಿ ಯುವ ಬ್ರಿಗೇಡ್ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆಗೆ ಬಿಗ್ ರಿಲೀಫ್ ದೊರೆತಿದೆ. ಚಕ್ರವರ್ತಿ ಸೂಲಿಬೆಲೆ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಮಂಗಳವಾರ ಹೈಕೋರ್ಟ್ (High Court) ತಡೆ ನೀಡಿದೆ. ಹೈಕೋರ್ಟ್ನ ಕಲಬುರಗಿ ವಿಭಾಗೀಯ ಪೀಠವು ಎಫ್ಐಆರ್ಗೆ ತಡೆಯಾಜ್ಞೆ ನೀಡಿದೆ. ಅಯೋಗ್ಯ’ ಎನ್ನುವ ಹೇಳಿಕೆ ಯಾವ ಜಾತಿಗೂ ಅನ್ವಯವಾಗುದಿಲ್ಲ. ಅಷ್ಟೇ ಅಲ್ಲದೆ, ಯಾರ ಜಾತಿ ನಿಂದನೆ ಆಗಿದೆಯೋ ಅವರು ದೂರು ನೀಡಿಲ್ಲ. ರಾಜಕೀಯ ಪಕ್ಷದ ಜಿಲ್ಲಾಧ್ಯಕ್ಷರು ದೂರು ನೀಡಿದ್ದಾರೆ. ನೀವು ಯಾವ ಉದ್ದೇಶ ಇಟ್ಟುಕೊಂಡು ದೂರು ನೀಡಿದ್ದಿರಿ ಅನ್ನೋದು ಗೋತ್ತಾಗುತ್ತದೆ ಎಂದು ನ್ಯಾಪೀಠ ದೂರುದಾರರನ್ನೇ ತರಾಟೆಗೆ ತೆಗೆದುಕೊಂಡಿದೆ.
ಬೆಂಗಳೂರು: ಮಹಾತ್ಮಾ ಗಾಂಧಿ ಶ್ರೇಷ್ಠ ಹಿಂದೂ. ಕಾಂಗ್ರೆಸ್ ಪಕ್ಷಕ್ಕೆ ಅವರ ತತ್ಪಾದರ್ಶಗಳೇ ದಾರಿದೀಪ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು KPCC ಕಚೇರಿ ಕ್ವೀನ್ಸ್ ರೋಡ್ ಬೆಂಗಳೂರು ಇಲ್ಲಿ ಆಯೋಜಿಸಲಾಗಿದ್ದ ಮಹಾತ್ಮಾ ಗಾಂಧೀಜಿಯವರ ಪುಣ್ಯ ಸ್ಮರಣೆಯ ಅಂಗವಾಗಿ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ದಲ್ಲಿ ಭಾಗವಹಿಸಿ ನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು. ಗೋಡ್ಸೆ ಬಿಜೆಪಿಯವರ ಆರಾಧ್ಯ ದೈವ: ಹಂತಕ ಗೋಡ್ಸೆ, ಗಾಂಧೀಜಿಯವರ ಕಾಲಿಗೆ ನಮಸ್ಕರಿಸುವ ನೆಪದಲ್ಲಿ ಅವರನ್ನು ಹತ್ಯೆಗೈದರು. ಗಾಂಧಿಜೀಯವರನ್ನು ಹತ್ಯೆಗೈದ ಗೋಡ್ಸೆಯವರನ್ನು ಆರ್ ಎಸ್ ಎಸ್ ಸಂಘಟನೆ ಹಾಗೂ ಬಿಜೆಪಿಯವರ ಆರಾಧ್ಯ ದೈವ.. ನಮ್ಮನ್ನು ಹಿಂದೂ ವಿರೋಧಿಗಳು ಎಂದು ಬಿಂಬಿಸುತ್ತಾರೆ. ಮಹಾತ್ಮಾ ಗಾಂಧಿಜೀ ಒಬ್ಬ ಶ್ರೇಷ್ಠ ಹಿಂದೂ. ಅಂತಹ ಹಿಂದೂ ಭಕ್ತನನ್ನೇ ಗುಂಡಿಕ್ಕಿ ಕೊಂದವರೇ ಹಿಂದುತ್ವದ ಬಗ್ಗೆ ಮಾತನಾಡುತ್ತಾರೆ. ಗಾಂಧೀಜಿಯವರನ್ನು ಮಾತ್ರ ಮಹಾತ್ಮಾ ಮತ್ತು ರಾಷ್ಟ್ರಪಿತ ಎಂದು ಕರೆಯಲಾಗುತ್ತದೆ. ಅವರು ತಮ್ಮ ಜೀವನದುದ್ದಕ್ಕೂ ಸತ್ಯ ಮತ್ತು ಅಹಿಂಸೆಯನ್ನು ಪಾಲಿಸಿದರು. ಗಾಂಧಿಜೀಯವರು ನುಡಿದಂತೆ ನಡೆಯುತ್ತಿದ್ದರು. ದೇಶ ವಿಭಜನೆಯಾದಾಗ ಸ್ವಾತಂತ್ರ್ಯವನ್ನು ಸಂಭ್ರಮಿಸದೇ…