ನವದೆಹಲಿ: ಕಡಲ್ಗಳ್ಳರಿಂದ ಅಪಹರಣಕ್ಕೆ ಒಳಗಾಗಿದ್ದ 19 ಪಾಕ್ ನಾವಿಕರನ್ನು (Pak Sailors) ಭಾರತೀಯ ನೌಕಾಪಡೆ (Indian Navy) ರಕ್ಷಿಸಿದೆ. 2 ದಿನಗಳಲ್ಲಿ ನಡೆದ ಎರಡನೇ ಕಾರ್ಯಾಚರಣೆ ಇದಾಗಿದೆ. ಸೊಮಾಲಿಯಾದ ಪೂರ್ವ ಕರಾವಳಿಯಲ್ಲಿ ಕಡಲ್ಗಳ್ಳರು ಮೀನುಗಾರಿಕಾ ಹಡಗನ್ನು ಅಪಹರಿಸಿದ್ದರು. ಭಾರತೀಯ ಯುದ್ಧನೌಕೆ INS ಸುಮಿತ್ರಾ, 19 ಪಾಕಿಸ್ತಾನಿ ನಾವಿಕರನ್ನು ರಕ್ಷಿಸಿದೆ. 36 ಗಂಟೆಗಳಲ್ಲಿ ಯುದ್ಧನೌಕೆ ನಡೆಸಿದ 2ನೇ ಕಡಲ್ಗಳ್ಳತನ ವಿರೋಧಿ ಕಾರ್ಯಾಚರಣೆ ಇದಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ. ಇರಾನ್ ಧ್ವಜದ ಮೀನುಗಾರಿಕೆ ಹಡಗು ಎಫ್ವಿಅಲ್ ನಯೀಮಿಯನ್ನು 11 ಸಶಸ್ತ್ರ ಕಡಲ್ಗಳ್ಳರು ಹತ್ತಿದರು. ಅವರು 19 ಸಿಬ್ಬಂದಿಯನ್ನು (ಎಲ್ಲಾ ಪಾಕಿಸ್ತಾನಿಗಳು) ಒತ್ತೆಯಾಳುಗಳಾಗಿ ತೆಗೆದುಕೊಂಡಿದ್ದರು. ಭಾರತೀಯ ನೌಕಾಪಡೆಯ ಯುದ್ಧನೌಕೆಯು ಮೀನುಗಾರಿಕಾ ಹಡಗನ್ನು ತಡೆಹಿಡಿದು ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಕಡಲ್ಗಳ್ಳರನ್ನು ಒತ್ತಾಯಿಸಿತು. ನಂತರ ಹಡಗನ್ನು ಹತ್ತಿದ ಭಾರತೀಯ ನೌಕಾಪಡೆ, ಅಪಹರಣಕ್ಕೊಳಗಾಗಿದ್ದ ಸಿಬ್ಬಂದಿಯ ಯೋಗಕ್ಷೇಮ ವಿಚಾರಿಸಿದರು. https://twitter.com/indiannavy/status/1752175155705774581?ref_src=twsrc%5Etfw%7Ctwcamp%5Etweetembed%7Ctwterm%5E1752175155705774581%7Ctwgr%5E0e708b55ea4287eb431b6bebb41b06fa88c6c054%7Ctwcon%5Es1_&ref_url=https%3A%2F%2Fpublictv.in%2Fnavy-rescues-19-pak-sailors-kidnapped-by-pirates%2F ಸೊಮಾಲಿಯಾ ಕಡಲ್ಗಳ್ಳರಿಂದ ಅಪಹರಿಸಲ್ಪಟ್ಟ ಮತ್ತೊಂದು ಇರಾನಿನ ಧ್ವಜದ ಮೀನುಗಾರಿಕಾ ನೌಕೆ ಎಫ್ವಿ ಇಮಾನ್ನಿಂದ ಎಸ್ಒಎಸ್ ಕರೆಗೆ ಐಎನ್ಎಸ್ ಸುಮಿತ್ರಾ ಪ್ರತಿಕ್ರಿಯಿಸಿದ…
Author: AIN Author
ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ (PM Kisan Samman Nidhi Yojana) ಆರಂಭವಾಗಿ ಸರಿಯಾಗಿ ಐದು ವರ್ಷ ಆಯಿತು. ಕಳೆದ ಲೋಕಸಭಾ ಚುನಾವಣೆಗೆ ಮುಂಚಿನ ಮಧ್ಯಂತರ ಬಜೆಟ್ನಲ್ಲಿ (2019 Interim Budget) ಈ ಸ್ಕೀಮ್ ಚಾಲನೆಗೊಂಡಿತು. ಪ್ರತೀ ವರ್ಷ ಮೂರು ಕಂತುಗಳಲ್ಲಿ ಒಟ್ಟು 6,000 ರೂ ಹಣವನ್ನು ಫಲಾನುಭವಿ ರೈತರಿಗೆ ಸರ್ಕಾರ ಒದಗಿಸುತ್ತದೆ. ಈವರೆಗೆ 15 ಕಂತುಗಳನ್ನು ರೈತರಿಗೆ ನೀಡಲಾಗಿದೆ. ಪಿಎಂ ಕಿಸಾನ್ ಸ್ಕೀಮ್ನಲ್ಲೂ ಕೆವೈಸಿ ಅಪ್ಡೇಟ್ ಮಾಡುವುದು ಕಡ್ಡಾಯ. ಕಳೆದ ಕೆಲ ತಿಂಗಳುಗಳಿಂದಲೂ ಸರ್ಕಾರ ಎಲ್ಲಾ ಫಲಾನುಭವಿಗಳಿಗೂ ಕೆವೈಸಿ ಸಲ್ಲಿಸುವಂತೆ ನಿರ್ದೇಶನ ನೀಡುತ್ತಿದೆ. ಅಂದಾಜು 10 ಕೋಟಿ ಅರ್ಹ ಫಲಾನುಭವಿಗಳ ಪೈಕಿ ಒಂದು ಕೋಟಿಯಷ್ಟು ಮಂದಿ ಕೆವೈಸಿ ಪರಿಷ್ಕರಿಸಿಲ್ಲ ಎನ್ನಲಾಗಿದೆ. ಆನ್ಲೈನ್ ಮತ್ತು ಆಫ್ಲೈನ್ ಎರಡೂ ವಿಧಾನಗಳಲ್ಲಿ ಕೆವೈಸಿ ಅಪ್ಡೇಟ್ ಮಾಡಬಹುದು. ಇಕೆವೈಸಿ ಮಾಡದಿದ್ದರೆ 16ನೇ ಕಂತಿನ ಹಣವಾದ 2,000 ರೂ ನಿಮ್ಮ ಖಾತೆಗೆ ಬರುವುದಿಲ್ಲ. ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ: ಇಕೆವೈಸಿಗೆ ಜನವರಿ 31ರವರೆಗೆ ಗಡುವು…
ಬೆಂಗಳೂರು: ನಮ್ಮ ಮೆಟ್ರೋದ ಬಹುನಿರೀಕ್ಷಿತ ಹಳದಿ ಮಾರ್ಗದ ವಾಣಿಜ್ಯ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, ಶೀಘ್ರವೇ ಪ್ರಾಯೋಗಿಕ ರೈಲು ಸಂಚಾರ ನಡೆಯಲಿದೆ ಎಂದು BMRCL ಅಧಿಕಾರಿಗಳು ತಿಳಿಸಿದ್ದಾರೆ. ಚೀನಾ ಸಂಸ್ಥೆೆಯು ಪ್ರೋಟೋ ಟೈಪ್ ಬೋಗಿಗಳನ್ನು ಒದಗಿಸುತ್ತಿದೆ. ಈಗಾಗಲೇ ಬೋಗಿಗಳು ಭಾರತಕ್ಕೆೆ ರವಾನೆಯಾಗಿವೆ. ಮುಂದಿನ ತಿಂಗಳ ಫೆಬ್ರುವರಿಯಲ್ಲಿ ಬೆಂಗಳೂರಿಗೆ ಆಗಮಿಸಲಿದ್ದು, ಸಂಬಂಧಿಸಿದ ಅಧಿಕಾರಿಗಳಿಂದ ಅನುಮತಿ ಪಡೆದು ಪ್ರಾಯೋಗಿಕ ಸಂಚಾರ ನಡೆಯಲಿದೆ. ಪ್ರಾಯೋಗಿಕ ಕಾರ್ಯಾಚರಣೆಗೆಂದೇ ಬೋಗಿ ಪೂರೈಸಿದ ಕಂಪನಿಯ ಸುಮಾರು 15 ಅಧಿಕಾರಿಗಳು ಆಗಮಿಸಲಿದ್ದಾರೆ. ಬಳಿಕ ಒಂದಷ್ಟು ತಾಂತ್ರಿಕ ಅನುಮೋದನೆಗಳು ಮತ್ತು ಶಾಸನಬದ್ಧ ಸುರಕ್ಷತಾ ತಪಾಸಣೆ ನಡೆಯಲಿದೆ. ಹಳದಿ ಮಾರ್ಗದಲ್ಲಿ ಸಿವಿಲ್ ಮತ್ತು ಟ್ರ್ಯಾಕ್ ಪರಿಶೀಲನೆ ಕೆಲಸ ಮುಗಿದಿದ್ದು, ಇನ್ನಷ್ಟು ಕೆಲಸಗಳು ನಡೆಯುತ್ತಿವೆ. ಆ ಬಳಿಕ ಹಳದಿ ಮಾರ್ಗ ವಾಣಿಜ್ಯ ಸಂಚಾರಕ್ಕೆೆ ಮುಕ್ತವಾಗಲಿದೆ ಎಂದು ಅವರು ಹೇಳಿದ್ದಾರೆ. ಈ ಹಿಂದೆ ಚೀನಾ ಕಂಪನಿಯು ನಮ್ಮ ಮೆಟ್ರೋಗೆ 216 ಕೋಚ್ಗಳನ್ನು ಪೂರೈಸುವ ಒಪ್ಪಂದಕ್ಕೆ ಸಹಿ ಮಾಡಿತ್ತು. ಈ 216 ಕೋಚ್ಗಳಲ್ಲಿ 90 ಕೋಚ್ಗಳನ್ನು 19.15 ಕಿಮೀ ಹಳದಿ ಮಾರ್ಗದಲ್ಲಿ…
ಬೆಂಗಳೂರು: ಭಾರತದ ಸ್ವಾತಂತ್ರ್ಯಕ್ಕಾಗಿ ಅಹಿಂಸಾ ಪಥದಲ್ಲಿ ಹೋರಾಡಿದ ಮಹಾತ್ಮ ಗಾಂಧೀಜಿಯವರ 76ನೇ ಪುಣ್ಯಸ್ಮರಣೆ. ಬಾಪು 1948 ಜನವರಿ 30ರಂದು ನಾಥುರಾಮ್ ಗೋಡ್ಸೆ ಗುಂಡೇಟಿನಿಂದ ನಿಧನರಾಗಿದ್ದರು. ಸತ್ಯ, ಅಹಿಂಸೆಯಲ್ಲಿ ಅಪಾರ ನಂಬಿಕೆ ಹೊಂದಿದ್ದ ಗಾಂಧಿ ಚಿಂತನೆಗಳು ಜಗತ್ತಿನಾದ್ಯಾಂತ ಪ್ರಶಂಸೆಗೊಳಗಾಗಿವೆ. ಈ ದಿನವನ್ನು ಶಹೀದ್ ದಿವಸ್ (ಹುತಾತ್ಮರ ದಿನ) ಮತ್ತು ಅಹಿಂಸೆ ಮತ್ತು ಶಾಂತಿಯ ದಿನವನ್ನಾಗಿಯೂ ಆಚರಿಸಲಾಗುತ್ತದೆ. ಸರಳತೆ, ಶಾಂತಿ, ಸತ್ಯ, ಅಹಿಂಸೆ ಹಾಗೂ ರಾಮ ರಾಜ್ಯದ ಪ್ರತಿಪಾದಕರು ಗಾಂಧಿ. ಈಗಿನ ಕಾಲಮಾನದಲ್ಲಿ ಗಾಂಧಿ ತತ್ವಗಳನ್ನು ಯುವಕರು ಯಾವ ರೀತಿ ಪಾಲಿಸುತ್ತಿದ್ದಾರೆ ಎಂಬುದು ಎಲ್ಲರನ್ನೂ ಕಾಡುವ ಪ್ರಶ್ನೆ. ಗಾಂಧಿ ಕೇವಲ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ್ದು ಮಾತ್ರವಲ್ಲದೆ ಸ್ವತಂತ್ರ ಭಾರತದ ಸರ್ವಾಂಗೀಣ ಅಭಿವೃದ್ಧಿಗಾಗಿ ವಿವಿಧ ವಿಚಾರಗಳ ಬಗೆಗೂ ತಮ್ಮದೇ ಆದ ದೂರದೃಷ್ಟಿ ಹೊಂದಿದ್ದರು. ರಾಜ್ಘಾಟ್ನಲ್ಲಿ ನಮನ: ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನಮಂತ್ರಿ, ರಕ್ಷಣಾ ಸಚಿವ ಮತ್ತು ಸೇನೆ, ವಾಯುಪಡೆ ಮತ್ತು ನೌಕಾಪಡೆ ಮುಖ್ಯಸ್ಥರು ದೆಹಲಿಯ ರಾಜ್ ಘಾಟ್ನಲ್ಲಿರುವ ಗಾಂಧಿ ಸಮಾಧಿಗೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ಇದಾದ ಬಳಿಕ ದೇಶಾದ್ಯಂತ…
ಬೆಂಗಳೂರು: ಇಷ್ಟು ದಿನ ಹಸಿರು ಶಾಲು ಹಾಕಿಕೊಳ್ಳುವವರು ಕೇಸರಿ ಶಾಲು ಹಾಕಿದ್ದಾರೆ ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ವಿರುದ್ಧ ಸಚಿವ ಚಲುವ ನಾರಾಯಣ ಸ್ವಾಮಿ ಕಿಡಿ ಕಾರಿದ್ದರ ಬಗ್ಗೆ HDK ತಿರುಗೇಟು ಕೊಟ್ಟಿದ್ದಾರೆ. ನಗರದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು, ನಾನು ಕೇಸರಿ ಶಾಲು ಹಾಕಿದ್ದೇ ತಪ್ಪಾ ಎಂದು ಪ್ರಶ್ನೆ ಮಾಡಿದ್ದಾರೆ ಹಾಗೆ ಹಳೆ ಸ್ನೇಹಿತರು ಹೇಳಿದ್ದಾರೆ. ಕೇಸರು ಶಾಲು ಹಾಕಿದ್ದಾರೆ. ಜೆಡಿಎಸ್ ದುಡಿಮೆಯನ್ನ ಅಂತಿಮ ಮಾಡೋಕೆ ಹೊರಟಿದ್ದಾರೆ ಅಂತ ಚೆಲುವರಾಯಸ್ವಾಮಿ ಹೇಳಿದ್ದಾರೆ. ನಾನು ಕೇಸರಿ ಶಾಲು ಹಾಕಿದ್ದು ತಪ್ಪಾ ಎಂದು ಪ್ರಶ್ನೆ ಹಾಕಿದರು. ನಾನು ದಲಿತರ ಕಾರ್ಯಕ್ರಮಕ್ಕೆ ಹೋಗಿದ್ದೆ. ಅವರು ಉಪಯೋಗ ಮಾಡುವ ನೀಲಿ ಬಣ್ಣದ ಶಾಲು ಹಾಕಿದ್ದೇನೆ. ಪಾಪ ಅದು ಚೆಲುವರಾಯಸ್ವಾಮಿ ಕಣ್ಣಿಗೆ ಕಂಡಿಲ್ಲ. ಅವರಿಗೆ ಬೇಕಾದ್ರೆ ಒಂದು ಫೋಟೋ ಕಳಿಸೋಣ. ಕೇಸರಿ ಬಗ್ಗೆ ಕಾಂಗ್ರೆಸ್ ನಾಯಕರಿಗೆ ಸಂಕುಚಿತ ಮನೋಭಾವ. ದೇಶದ ತಿರಂಗದಲ್ಲಿ ಇರೋ ಬಣ್ಣ ಯಾವುದು. ಜನರಿಗೆ ಬಿಡಿಸಿ ಹೇಳಿ. ಅಲ್ಲಿ ಇರೋ 3 ಬಣ್ಣ ಯಾವುದು?…
ಬೆಂಗಳೂರು: ಗೋಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ (Congress) ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ. ಈ ದೇಶದಲ್ಲಿ ಯಾವುದಾದರೂ ಛದ್ಮವೇಷಧಾರಿ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ ಎಂದು ಜೆಡಿಎಸ್ (JDS) ವಾಗ್ದಾಳಿ ನಡೆಸಿದೆ. ಕಾಂಗ್ರೆಸ್ ಟೀಕೆಗಳಿಗೆ ಎಕ್ಸ್ ಪೋಸ್ಟ್ನಲ್ಲಿ ಪ್ರತ್ಯುತ್ತರ ನೀಡಿರುವ ಜೆಡಿಎಸ್, ಗೋಸುಂಬೆ ಉರುಫ್ ಊಸರವಳ್ಳಿ ಕಾಂಗ್ರೆಸ್ ಪಕ್ಷಕ್ಕೆ ಒಳಗೊಂದು ಹೊರಗೊಂದು ವೇಷ. ಈ ದೇಶದಲ್ಲಿ ಯಾವುದಾದರೂ ಛದ್ಮವೇಷದಾರಿ ಪಕ್ಷವಿದ್ದರೆ ಅದು ಕಾಂಗ್ರೆಸ್ ಮಾತ್ರ. ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗಲ್ಲ. ಏನಾದರೂ ಹೇಳಬೇಕೆಂದರೆ; ನೇರ, ದಿಟ್ಟ, ನಿಷ್ಠುರ. ಏನೇ ಬಂದರೂ ಎದುರಿಸುವ ಕೆಚ್ಚು ಅವರದ್ದು, ಪಲಾಯನ ಮಾಡುವ ಪೈಕಿ ಅವರಲ್ಲ. ಎಂದು ತಿಳಿಸಿದೆ. RSS ಬಗ್ಗೆ ಕುಮಾರಸ್ವಾಮಿ ಅವರು ಹಿಂದೆ ಮಾತನಾಡಿದ್ದಾರೆ, ಬರೆದಿದ್ದಾರೆ.. ನಿಜ. ಟೀಕೆ ಮಾಡಿದ್ದಾರೆನ್ನುವುದೂ ಹೌದು. ಹಾಗೆಯೇ, ಕಲ್ಲಡ್ಕ ಪ್ರಭಾಕರ ಭಟ್ಟರು ನಡೆಸುತ್ತಿರುವ ಶ್ರೀರಾಮ ವಿದ್ಯಾಲಯಕ್ಕೆ ಭೇಟಿ ನೀಡಿದಾಗಲೂ ಅವರು ಏನು ಹೇಳಬೇಕೋ ಅದನ್ನೇ ಹೇಳಿದ್ದಾರೆ. ಕಾಮಾಲೆ ಕಣ್ಣಿನ, ಕುತ್ಸಿತ ಕಿವಿಯ ಕಾಂಗ್ರೆಸ್ಗೆ ಅದೆಲ್ಲಾ ಗೊತ್ತಾಗುವುದೇ ಇಲ್ಲ ಎಂದು ಟಾಂಗ್ ಕೊಟ್ಟಿದೆ.
ಈ ಬಾರಿ ಬಿಗ್ ಬಾಸ್ (Bigg Boss Kannada) ಟ್ರೋಫಿ ನಟಿ ಸಂಗೀತಾ ಶೃಂಗೇರಿ (Sangeetha Sringeri) ಸಿಗಲಿದೆ ಎಂದೇ ನಂಬಲಾಗಿತ್ತು. ಮೊದಲ ದಿನದಂದು ಕೊನೆಯ ವಾರದವರೆಗೂ ಸಂಗೀತಾ ಉತ್ತಮ ರೀತಿಯಲ್ಲೇ ಸ್ಪರ್ಧೆ ನೀಡಿದ್ದರು. ಲೇಡಿ ರೆಬಲ್ ಅಂತಾನೇ ಫೇಮಸ್ ಆಗಿದ್ದರು. ಜೊತೆಗೆ ಫಿನಾಲೆಗೆ ಆಯ್ಕೆಯಾದ ಮೊದಲ ಕಂಟೆಸ್ಟ್ ಅವರಾಗಿದ್ದರು. ಹಾಗಾಗಿ ಸಂಗೀತಾನೇ ಈ ಬಾರಿಯ ವಿನ್ನರ್ ಎಂದು ಹೇಳಲಾಗಿತ್ತು. ಕೊನೆಯ ಕ್ಷಣದಲ್ಲಿ ಚಿತ್ರವಣೇ ಬದಲಾಗಿದೆ. ಈ ಕುರಿತಂತೆ ಸಂಗೀತಾ ಶೃಂಗೇರಿ ತಮ್ಮ ಸೋಷಿಯಲ್ ಮೀಡಿಯಾ ಖಾತೆಯಲ್ಲಿ ಬರೆದುಕೊಂಡಿದ್ದಾರೆ. ಟ್ರೋಫಿ ಗೆಲ್ಲದೇ ಇರುವ ಕುರಿತಂತೆಯೂ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಬಿಗ್ ಬಾಸ್ ಜರ್ನಿ, ಜನರ ಪ್ರೀತಿ ಹಾಗೂ ತಮ್ಮ ಮೇಲೆ ಇಟ್ಟಂತೆ ನಂಬಿಕೆಯ ಬಗ್ಗೆ ಅವರು ವಿವರವಾಗಿ ಬರೆದುಕೊಂಡಿದ್ದಾರೆ. ನನ್ನ ಪ್ರೀತಿಯ ಅಭಿಮಾನಿಗಳಿಗೆ, ಪ್ರೋತ್ಸಾಹಕರಿಗೆ, ಕನ್ನಡದ ಜನೆತೆಗೆ ನಿಮ್ಮ ಸಂಗೀತಾ ಮಾಡುವ ನಮಸ್ಕಾರಗಳು. ಎಲ್ಲಾ ಹೇಗಿದ್ದೀರಿ? ನಮ್ಮ ಬಿಗ್ ಬಾಸ್ ಹೇಗಿತ್ತು? ನನ್ನ ಬಿಗ್ ಬಾಸ್ ಜರ್ನಿ ಅಂತೂ ನಿಮಗೆ ಗೊತ್ತೇ ಇದೆ.…
ಬೆಂಗಳೂರು: ಕಾನೂನು ವಿರುದ್ಧ ಯಾರೇ ನಡೆದುಕೊಂಡರೂ ಅವರ ವಿರುದ್ಧ ಸರ್ಕಾರ ಕ್ರಮ ತೆಗೆದುಕೊಳ್ಳುತ್ತದೆ ಎಂದು ಗೃಹ ಸಚಿವ ಪರಮೇಶ್ವರ್ (G Parameshwar) ಮಂಡ್ಯ (Mandya) ಕೆರಗೋಡು (Keragodu) ಘಟನೆಗೆ ಪೊಲೀಸರು ತೆಗೆದುಕೊಂಡ ಕ್ರಮವನ್ನು ಸಮರ್ಥಿಸಿಕೊಂಡಿದ್ದಾರೆ. ಕೆರಗೋಡಿನಲ್ಲಿ ಪೊಲೀಸರು ಲಾಠಿ ಚಾರ್ಜ್ ಮಾಡಿದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೆರಗೋಡಿನಲ್ಲಿ ಧ್ವಜ ಹಾರಿಸಲು ಅನುಮತಿ ಕೇಳಿದ್ದರು. ರಾಷ್ಟ್ರಧ್ವಜ, ನಾಡ ಧ್ವಜ ಹಾರಿಸಲು ಅನುಮತಿ ಕೇಳಿದ್ರು. ಅದಕ್ಕೆ ಅನುಮತಿ ಪಂಚಾಯತ್ ಅವರೇ ಕೊಟ್ಟಿದ್ದಾರೆ. ಪಂಚಾಯತ್ ಅವರು ಅನುಮತಿ ಕೊಡುವಾಗ ಕೆಲವು ಕಂಡೀಷನ್ ಹಾಕಿ ಕೊಟ್ಟಿದ್ದಾರೆ. ಬೇರೆ ಧ್ವಜ ಹಾಕಬಾರದು ಎಂದು ಪಂಚಾಯತ್ ಹೇಳಿ, ಮುಚ್ಚಳಿಕೆ ಬರೆಸಿಕೊಂಡು ಅನುಮತಿ ಕೊಟ್ಟಿದ್ದಾರೆ. ಮುಚ್ಚಳಿಕೆಯಲ್ಲಿ ಅವರು ಬೇರೆ ಯಾವುದೇ ಧ್ವಜ ಹಾಕೋದಿಲ್ಲ ಎಂದು ಬರೆದು ಕೊಟ್ಟಿದ್ದಾರೆ. ರಾಷ್ಟ್ರ ಮತ್ತು ನಾಡ ಧ್ವಜ ಬಿಟ್ಟು ಯಾವುದೇ ರಾಜಕೀಯ ಧ್ವಜ ಹಾಕೋದಿಲ್ಲ, ಧರ್ಮದ ಧ್ವಜ ಹಾಕೋದಿಲ್ಲ ಎಂದು ಮುಚ್ಚಳಿಕೆ ಬರೆದುಕೊಟ್ಟಿದ್ದಾರೆ. ಅದಾದ ಮೇಲೂ ಹೋಗಿ ಹನುಮಾನ್ ಧ್ವಜ ಹಾರಿಸಿದ್ದಾರೆ. ಇದು ಸರಿಯಲ್ಲ…
ಸ್ಯಾಂಡಲ್ವುಡ್ ಭರವಸೆಯ ನಟ ಕಂ ನಿರ್ದೇಶಕ ಅನೀಶ್ ತೇಜೇಶ್ವರ್. ಕಮರ್ಶಿಯಲ್ ಸಿನಿಮಾ ಹೀರೋ ಆಗಿ ಮಿಂಚಿರುವ ಅನೀಶ್ ರೋಮ್ಯಾಂಟಿಕ್ ಹೀರೋ ಆಗಿ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ. ಸದ್ಯ ‘ಆರಾಮ್ ಅರವಿಂದ್ ಸ್ವಾಮಿ’ಆಗಿ ತೆರೆ ಮೇಲೆ ನಯಾ ಅವತಾರದಲ್ಲಿ ಬರಲು ರೆಡಿಯಾಗಿರುವ ಅವರು, ಧಿಡೀರನೇ ಟಾಲಿವುಡ್ ಮೆಗಾ ಸ್ಟಾರ್ ಚಿರಜೀವಿ ಜೊತೆ ಪ್ರತ್ಯಕ್ಷರಾಗಿದ್ದಾರೆ. ಭಾರತದ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಪದ್ಮವಿಭೂಷಣ ಪ್ರಶಸ್ತಿಗೆ ಭಜನರಾಗಿರುವ ಮೆಗಾಸ್ಟಾರ್ ಚಿರಂಜೀವಿ ಅವರನ್ನು ನಟ ಅನೀಶ್ ಭೇಟಿಯಾಗಿದ್ದಾರೆ, ಇಂದು ಚಿರು ಹೈದ್ರಾಬಾದ್ ನಿವಾಸದಲ್ಲಿ ಭೇಟಿಯಾಗಿರುವ ಅವರು, ಮೆಗಾಸ್ಟಾರ್ ಗೆ ಶುಭಾಶಯ ತಿಳಿಸಿದ್ದಾರೆ. ಇದೇ ವೇಳೆ ತಮ್ಮ ಬಹುನಿರೀಕ್ಷಿತ ಆರಾಮ್ ಅರವಿಂದ ಸ್ವಾಮಿ ಚಿತ್ರದ ಕಂಟೆಂಟ್ ತೋರಿಸಿದ್ದಾರೆ. ಸಿನಿಮಾದ ಕಂಟೆಂಟ್ ನೋಡಿ ಮೆಚ್ಚಿಕೊಂಡ ಚಿರಂಜೀವಿ ಅನೀಶ್ ಚಿತ್ರಕ್ಕೆ ಬೆಸ್ಟ್ ವಿಷಸ್ ತಿಳಿಸಿದ್ದಾರೆ. ಅನೀಶ್ ಹುಟ್ಟುಹಬ್ಬದ ಅಂಗವಾಗಿ ಬಿಡುಗಡೆಯಾಗಿದ್ದ ಆರಾಮ್ ಅರವಿಂದ ಸ್ವಾಮಿ ಟೈಟಲ್ ಟ್ರ್ಯಾಕ್ ಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದೆ. ಅರ್ಜುನ್ ಜನ್ಯ ಮ್ಯೂಸಿಕ್, ನಾಗಾರ್ಜುನ್ ಶರ್ಮಾ…
ಬೆಂಗಳೂರು: ಕುಮಾರಸ್ವಾಮಿ ತಪ್ಪು ಮಾಡಿದ್ರೆ ನೇಣಿಗೆ ಹಾಕಿ. ನೀವು ತಪ್ಪು ಮಾಡಿದ್ರೆ ಏನು ಮಾಡಬೇಕು ಹೇಳಿ ಎಂದು ಕೆರಗೋಡು ಪ್ರಕರಣದ ತನಿಖೆಗೆ ಆಗ್ರಹಿಸಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಸರ್ಕಾರಕ್ಕೆ ಸವಾಲು ಹಾಕಿದರು. ಜೆಡಿಎಸ್ ಕಚೇರಿಯಲ್ಲಿ ಸರ್ವೋದಯ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಹೆಚ್ಡಿಕೆ, ಕೆರಗೋಡು ಘಟನೆಯಲ್ಲಿ ಸರಿಯಾಗಿ ಕ್ರಮ ತೆಗೆದುಕೊಂಡಿದ್ರೆ ಒಂದು ತನಿಖೆ ಮಾಡಿಸಿ. ಅದರ ಸರ್ಟಿಫಿಕೇಟ್ ತೆಗೆದುಕೊಳ್ಳಿ. ಕೆರಗೋಡು ಘಟನೆ ತನಿಖೆ ಮಾಡಿ. ಕುಮಾರಸ್ವಾಮಿ ತಪ್ಪು ಮಾಡಿದ್ರೆ ನೇಣಿಗೆ ಹಾಕಿ. ನೀವು ತಪ್ಪು ಮಾಡಿದ್ರೆ ಏನ್ ಮಾಡಬೇಕು ಹೇಳಿ ಎಂದು ಪ್ರಶ್ನಿಸಿದರು ರಾಜ್ಯದಲ್ಲಿ ಹಲವಾರು ದಿನಗಳಿಂದ ಅನೇಕ ವಿಷಯ ನಡೆಯುತ್ತಿದೆ. ಇತ್ತೀಚಿನ ದಿನಗಳಲ್ಲಿ ಮಾಧ್ಯಮಗಳ ಮುಂದೆ ಕಡಿಮೆ ಬರ್ತಿದ್ದೇನೆ. ಅನಿವಾರ್ಯವಾಗಿ ಇವತ್ತು ಭಾವನೆ ಹಂಚಿಕೊಳ್ಳೋ ಪರಿಸ್ಥಿತಿ ಈ ಸರ್ಕಾರದ ನಡವಳಿಕೆಯಿಂದ ಬಂದಿದೆ. ಎರಡು ದಿನಗಳಿಂದ ಮಂಡ್ಯದಲ್ಲಿ ಒಂದು ಘಟನೆ ನಡೆಯುತ್ತಿದೆ. ಕೆರಗೋಡಿನಲ್ಲಿ ಧ್ವಜಸ್ತಂಭದ ರಾಜಕೀಯ ನಡೆಯುತ್ತಿದೆ. ದೇವರಾಜ್ ಅರಸ್ ಅವರಿಗಿಂತ ಒಂದು ಹೆಜ್ಜೆ ಮುಂದೆ ಹೋಗಿ ಶೋಷಿತ ವರ್ಗದ ಜನರ…